DK Shivakumar
ಕಾಂಗ್ರೆಸ್ ಪಕ್ಷದ, ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ ಅವರು ರಾಮನಗರ ಜಿಲ್ಲೆಯ ಕನಕಪುರ ಕ್ಷೇತ್ರದ ಶಾಸಕರು. ಸಧ್ಯ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳು. ಇವರ ಅಭಿಮಾನಿಗಳು ಇವರನ್ನು ಕನಕಪುರ ಬಂಡೆ ಎಂದೇ ಕೊಂಡಾಡುತ್ತಾರೆ. ಸದ್ಯ ಕರ್ನಾಟಕದ ಮುಖ್ಯಮಂತ್ರಿಯಾಗಿ ಬ್ರ್ಯಾಂಡ್ ಬೆಂಗಳೂರು ಕನಸು ಹೊತ್ತು ಕರ್ನಾಟಕದ ಅಭಿವೃದ್ಧಿಗಾಗಿ ದುಡಿಯುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ 2023ರ ಚುನಾವಣೆಯ ನೇತೃತ್ವ ವಹಿಸಿಕೊಂಡಿದ್ದ ಇವರು ಪಕ್ಷದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.
ಕನಕಪುರ ತಾಲೂಕಿನ ದೊಡ್ಡ ಆಲಹಳ್ಳಿ ಗ್ರಾಮದ ಕೆಂಪೇಗೌಡ ಹಾಗೂ ಗೌರಮ್ಮ ದಂಪತಿಯ ಪ್ರಥಮ ಪುತ್ರರಾಗಿ 15ನೇ ಮೇ, 1962ರಂದು ಡಿಕೆಶಿ ಜನಿಸಿದರು. ಇವರು ಬೆಂಗಳೂರಿನ ಆರ್.ಸಿ. ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾಗಲೇ ಯುವ ಕಾಂಗ್ರೆಸ್ಗೆ ಸೇರಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯಾದ್ರು.
ಮೇಕೆದಾಟು ಯೋಜನೆಗಾಗಿ 160 ಕಿ.ಮೀ ಪಾದಯಾತ್ರೆ, 75ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಸ್ವಾತಂತ್ರ್ಯ ನಡಿಗೆ, ರಾಹುಲ್ ಗಾಂಧಿ ಅವರ ಜೊತೆ ಭಾರತ್ ಜೋಡೋ ಯಾತ್ರೆ, ನಾ ನಾಯಕಿ ಕಾರ್ಯಕ್ರಮದ ಮೂಲಕ ಮಹಿಳೆಯರಿಗೆ ಉತ್ತೇಜನ ನೀಡುವಂತಹ ಯಶಸ್ವಿ ಕಾರ್ಯಕ್ರಮಗಳನ್ನು ಮಾಡಿ ಕಾಂಗ್ರೆಸ್ ಪಕ್ಷದ ಕಟ್ಟಾಳುವಾಗಿ ರಾಜ್ಯದಲ್ಲಿ 136 ಸ್ಥಾನಗಳನ್ನು ಪಡೆಯುವಲ್ಲಿ ಮಹತ್ವದ ಪಾತ್ರವಹಿಸಿದ್ದಾರೆ.
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಈ ಪ್ರತಿಭಟನಾ ಸ್ಥಳಕ್ಕೆ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ಕೇರಳದ ಸಿಎಂ ವಿ.ಡಿ. ಸತೀಶನ್ ಸೇರಿದಂತೆ ಪಕ್ಷದ ಪ್ರಮುಖ ರಾಷ್ಟ್ರೀಯ ಹಾಗೂ ರಾಜ್ಯಮಟ್ಟದ ನಾಯಕರು ಆಗಮಿಸಿ ಧರಣಿಯಲ್ಲಿ ಕುಳಿತಿದ್ದಾರೆ.
- Sushma Chakre
- Updated on: Jul 21, 2026
- 7:01 pm
‘ಅಂತಹ ಮಟ್ಟಕ್ಕೆ ನಾನು ಹೋಗೋದಿಲ್ಲ’: ತಾಯಿ ಅಂತ್ಯಕ್ರಿಯೆ ವೇಳೆ ಡಿಕೆಶಿ ಹೆಸರೇಳದ ಬಗ್ಗೆ ಕುಮಾರಸ್ವಾಮಿ ಸ್ಪಷ್ಟನೆ!
ಮಾಜಿ ಪ್ರಧಾನಿ HD ದೇವೇಗೌಡರ ಪತ್ನಿ ಚೆನ್ನಮ್ಮ ಅಂತ್ಯಸಂಸ್ಕಾರ ಹಾಸನದ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ಬೆಟ್ಟದ ತಪ್ಪಲಿನ ಜಮೀನಿನಲ್ಲಿ ಸೋಮವಾರ ನಡೆದಿದೆ. ಇಂದು (ಜುಲೈ 21) ಸಮಾಧಿ ಸ್ಥಳಕ್ಕೆ ಚೆನ್ನಮ್ಮ ಪುತ್ರ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹಾಗೂ ಕುಟುಂಬಸ್ಥರು ಭೇಟಿ ನೀಡಿದ್ರು. ಸಮಾಧಿ ಮುಂದೆ ವಾಗ್ದಾನ ಮಾಡಿದ ಕುಮಾರಸ್ವಾಮಿ ಅವರು, ಡಿಕೆ ಶಿವಕುಮಾರ್ ಕುರಿತ ಈ ಒಂದು ವಿಚಾರಕ್ಕೂ ಸ್ಪಷ್ಟನೆ ನೀಡಿದ್ದಾರೆ.
- Manjunath KB
- Updated on: Jul 21, 2026
- 4:25 pm
ಸಿಎಂ ಡಿ.ಕೆ.ಶಿವಕುಮಾರ್ ಬೆಳಗಾವಿ ಪ್ರವಾಸದ ವೇಳೆ ಕರ್ತವ್ಯಲೋಪ: ಡಿಹೆಚ್ಒಗೆ ಶೋಕಾಸ್ ನೋಟಿಸ್
Belagavi News: ಸಿಎಂ ಡಿ.ಕೆ. ಶಿವಕುಮಾರ್ ಅವರ ಬೆಳಗಾವಿ ಪ್ರವಾಸದ ವೇಳೆ ಸುಸಜ್ಜಿತ ಆ್ಯಂಬುಲೆನ್ಸ್ ಹಾಗೂ ತಜ್ಞ ವೈದ್ಯರನ್ನು ನಿಯೋಜಿಸದೆ ಶಿಷ್ಟಾಚಾರ ಉಲ್ಲಂಘಿಸಿದ ಜಿಲ್ಲಾ ಆರೋಗ್ಯ ಅಧಿಕಾರಿ (DHO) ಈಶ್ವರ ಗಡಾದಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ. ನಿಮ್ಮ ವಿರುದ್ಧ ಯಾಕೆ ಶಿಸ್ತು ಕ್ರಮ ಕೈಗೊಳ್ಳಬಾರದು ಎಂಬುದರ ಕುರಿತು ಈ ನೋಟಿಸ್ ಸ್ವೀಕರಿಸಿದ ದಿನಾಂಕದಿಂದ ಏಳು ದಿನಗಳ ಒಳಗಾಗಿ ಲಿಖಿತ ಸಮಜಾಯಿಷಿಯನ್ನು ಸಲ್ಲಿಸುವಂತೆಯೂ ಸೂಚಿಸಲಾಗಿದೆ.
- Sahadev Mane
- Updated on: Jul 21, 2026
- 2:58 pm
TV9 Kannada News Live:ನೂತನ ಸಚಿವರಿಗೆ ಪ್ರತಿಜ್ಞಾವಿಧಿ ಬೋಧಿಸಲು ರಾಜ್ಯಪಾಲರಿಗೆ ಮನವಿ ಮಾಡಿದ್ದೇನೆ ಎಂದ ಸಿಎಂ
Karnataka News Today Live Updates: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ಸಿಜೆಪಿ ಹೋರಾಟ ಜೋರಾಗಿದ್ದು, ಮತ್ತೊಂದೆಡೆ ಸಂಸತ್ ಮುಂಗಾರು ಅಧಿವೇಶನ ಕೂಡ ನಡೆಯುತ್ತಿದೆ. ಇತ್ತ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಸಂಬಂಧ ಸಿಎಂ ಡಿಕೆ ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಜತೆ ಮಾತುಕತೆ ನಡೆಸಿದ್ದಾರೆ. ಇಂದಿನ ಪ್ರಮುಖ ಸುದ್ದಿ ವಿದ್ಯಮಾನಗಳ ಕ್ಷಣದ ಅಪ್ಡೇಟ್ ಇಲ್ಲಿದೆ.
- Ganapathi Sharma
- Updated on: Jul 21, 2026
- 10:38 pm
ಗಣಿ ಇಲಾಖೆ ಇತಿಹಾಸದಲ್ಲೇ ಅತಿದೊಡ್ಡ ವರ್ಗಾವಣೆ: ಬರೋಬ್ಬರಿ 160 ಅಧಿಕಾರಿಗಳಿಗೆ ಟ್ರಾನ್ಸ್ಫರ್ ಭಾಗ್ಯ
ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕಲು ಮತ್ತು ಪಾರದರ್ಶಕತೆ ತರಲು ಸಿಎಂ ಡಿ.ಕೆ. ಶಿವಕುಮಾರ್ ಗಣಿ ಇಲಾಖೆಯ 160 ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು, ಇಲಾಖೆಯ ಇತಿಹಾಸದಲ್ಲೇ ಇದು ಅತಿದೊಡ್ಡ ಮೇಜರ್ ಸರ್ಜರಿಯಾಗಿದೆ. ದಶಕಗಳ ಕಾಲ ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮತ್ತು ಸ್ವಂತ ಹಾಗೂ ನೆರೆಯ ಜಿಲ್ಲೆಗಳಲ್ಲಿ ಬೀಡು ಬಿಟ್ಟಿದ್ದ ಅಧಿಕಾರಿಗಳಿಗೆ ಟ್ರಾನ್ಸ್ಫರ್ ನೀಡಲಾಗಿದೆ.
- Prasanna Gaonkar
- Updated on: Jul 20, 2026
- 4:04 pm
ಮನೆ ಮನೆಗೆ ಶಾಶ್ವತ ನಿವಾಸ ಪ್ರಮಾಣ ಪತ್ರ ವಿತರಣೆಗೆ ಚಾಲನೆ: SIR ವೇಳೆ ಇದನ್ನು ಮಾನ್ಯ ದಾಖಲೆಯಾಗಿ ಪರಿಣಗಣಿಸಲಾಗುತ್ತದೆಯೇ?
Permanent Residence Certificate: ರಾಜ್ಯದಲ್ಲಿ ಮನೆ ಮನೆಗೆ ಶಾಶ್ವತ ನಿವಾಸ ಮತ್ತು ಜಾತಿ ಪ್ರಮಾಣ ಪತ್ರ ವಿತರಣೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಡಿಸಿಎಂ ಡಾ.ಜಿ. ಪರಮೇಶ್ವರ್ ಚಾಲನೆ ನೀಡಿದ್ದಾರೆ. ಅಷ್ಟಕ್ಕೂ ಈ ಪ್ರಮಾಣ ಪತ್ರದ ಪ್ರಯೋಜನ ಏನು? ಎಸ್ಐಆರ್ ಪ್ರಕ್ರಿಯೆ ವೇಳೆ ಇದನ್ನು ಮಾನ್ಯ ದಾಖಲೆ ಎಂದು ಪರಿಗಣಿಸಲಾಗುತ್ತದೆಯೇ? ಎಂಬಿತ್ಯಾದಿ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ.
- Prasanna Hegde
- Updated on: Jul 21, 2026
- 11:02 am
ಗೃಹಲಕ್ಷ್ಮಿ ಯೋಜನೆ ಬಗ್ಗೆ ಡಿಕೆಶಿ ಬಿಗ್ ಅಪ್ಡೇಟ್: 2000 ರೂ.ಬೇಕು ಅಂದ್ರೆ ಈ ನಿಯಮಗಳನ್ನ ಪಾಲಿಸಲೇಬೇಕು
ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮೀ ಹಣ ಅನರ್ಹರ ಪಾಲಾಗುತ್ತಿದ್ದು, ಇದೀಗ ಇದಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. ಅರ್ಹ ಫಲಾನುಭವಿಗಳಿಗೆ ಈ ಯೋಜನೆ ಲಾಭವಾಗಲು ಪರಿಷ್ಕರಣೆ ಮಾಡಲು ತೀರ್ಮಾನಿಸಲಾಗಿದ್ದು, ಈ ಸಂಬಂಧ ಇಂದಿನ ಸಚಿವ ಸಂಪುಟದಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಹಾಗಾದ್ರೆ, ಗೃಹಲಕ್ಷ್ಮೀ ಯೋಜನೆ ಲಾಭ ಪಡೆಯಲು ಏನೇನು ಮಾಡಬೇಕು ಎನ್ನುವ ವಿವರ ಇಲ್ಲಿದೆ.
- Prasanna Gaonkar
- Updated on: Jul 19, 2026
- 8:26 pm
ಬರ ನಿರ್ವಹಣೆ ಕುರಿತಂತೆ ಸಿಎಂ ಡಿಕೆಶಿ, ಡಿಸಿಎಂ ವಿಡಿಯೋ ಕಾನ್ಫರೆನ್ಸ್: ಅಧಿಕಾರಿಗಳಿಗೆ ಏನೆಲ್ಲ ಸೂಚನೆ?
Karnataka Drought Review Meeting: ವಿಧಾನಸೌಧದಲ್ಲಿ ನಡೆದ ಜಿಲ್ಲಾಧಿಕಾರಿಗಳ ವೀಡಿಯೊ ಕಾನ್ಫರೆನ್ಸ್ನಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಮತ್ತು ಡಿಸಿಎಂ ಪರಮೇಶ್ವರ್ ಅವರು ಬರ ಪರಿಹಾರ ಕಾಮಗಾರಿಗಳು, ಕುಡಿಯುವ ನೀರು ಹಾಗೂ ವಲಸೆ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಸಭೆ ವೇಳೆ ಕೆಲ ಅಧಿಕಾರಿಗಳು ಮೊಬೈಲ್ ಫೋನ್ ಬಳಕೆ ಮಾಡುತ್ತಿದ್ದ ಕಾರಣ ಸಿಎಂ ಡಿಕೆಶಿ ಗರಂ ಆದ ಪ್ರಸಂಗವೂ ನಡೆದಿದೆ.
- Prasanna Hegde
- Updated on: Jul 19, 2026
- 2:27 pm
ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದಕ್ಕೆ? ಮುಂದಿನ ವಾರ ದೆಹಲಿಯಲ್ಲಿ ನಿರ್ಣಾಯಕ ಸಭೆ ಸಾಧ್ಯತೆ
Karnataka cabinet expansion: ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ನಡೆದ ಸಭೆಗಳಲ್ಲಿ ಯಾವುದೇ ಅಂತಿಮ ನಿರ್ಧಾರವಾಗಿಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಗೆ ಮರಳಿದ ಬಳಿಕ ಮುಂದಿನ ವಾರ ಮತ್ತೊಮ್ಮೆ ಸಭೆ ನಡೆಸಿ ಸಚಿವರ ಪಟ್ಟಿಗೆ ಅಂತಿಮ ರೂಪ ನೀಡುವ ಸಾಧ್ಯತೆ ಇದೆ.
- Prasanna Gaonkar
- Updated on: Jul 18, 2026
- 7:34 am
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಶೇ.60ರಷ್ಟು ಹೊಸ ಮುಖಗಳಿಗೆ ಮಣೆಹಾಕಲು ಹೈಕಮಾಂಡ್ ನಿರ್ಧಾರ
Karnataka Politics: ಮುಂದಿನ ಚುನಾವಣೆಯನ್ನು ಗುರಿಯಾಗಿಟ್ಟುಕೊಂಡು ಕರ್ನಾಟಕ ಸಂಪುಟ ವಿಸ್ತರಣೆಯಲ್ಲಿ ಶೇ.60ರಷ್ಟು ಹೊಸ ಮುಖಗಳಿಗೆ ಅವಕಾಶ ನೀಡಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ. ಜಾತಿ, ಸಮಾಜದ ಸ್ಥಿತಿಗತಿಗಳು, ಶಿಕ್ಷಣ ಮತ್ತು ಹಿನ್ನಲೆಯನ್ನು ಆಧರಿಸಿ ಆಯ್ಕೆ ನಡೆಯಲಿದ್ದು, ಹೊಸ ನಾಯಕತ್ವವು ಪಕ್ಷಕ್ಕೆ ಆಸ್ತಿಯಾಗಲಿದೆ ಎಂಬ ಅಭಿಪ್ರಾಯ ವರಿಷ್ಠರದ್ದು ಎನ್ನಲಾಗಿದೆ.
- Prasanna Hegde
- Updated on: Jul 17, 2026
- 3:18 pm
ಡಿಕೆ ಶಿವಕುಮಾರ್ ಸಂಪುಟದ ಸಚಿವರ ಪಟ್ಟಿ ಫೈನಲ್: ಅಳೆದು ತೂಗಿ ಲಿಸ್ಟ್ ಅಂತಿಮಗೊಳಿಸಿದ ರಾಹುಲ್ ಗಾಂಧಿ
ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಅಂತಿಮ ಹಂತ ತಲುಪಿರುವ ಲಕ್ಷಣಗಳು ಕಂಡುಬಂದಿವೆ. ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಡಿಕೆಶಿ, ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರೊಂದಿಗೆ ಪ್ರತ್ಯೇಕ ಸಭೆ ನಡೆಸಿ ಸಚಿವರ ಪಟ್ಟಿ ಅಂತಿಮಗೊಳಿಸಿದ್ದಾರೆ ಎಂಬುದು ತಿಳಿದುಬಂದಿದೆ.
- Prasanna Gaonkar
- Updated on: Jul 17, 2026
- 7:42 am
ಕರ್ನಾಟಕದ ಕಿಂಗ್ಮೇಕರ್: ರಶೀದ್ ಪುಸ್ತಕದಲ್ಲಿ ಡಿಕೆ ಶಿವಕುಮಾರ್ ರಾಜಕೀಯ ಪಯಣ,ಬೈಕ್ ಪ್ರೇಮ ಅನಾವರಣ
ಪತ್ರಕರ್ತ ರಶೀದ್ ಕಿದ್ವಾಯಿ ಅವರು 'ಡಿ.ಕೆ. ಶಿವಕುಮಾರ್ – ಕಾಂಗ್ರೆಸ್ ಕ್ರೈಸಿಸ್ ಮ್ಯಾನೇಜರ್, ಕರ್ನಾಟಕದ ಕಿಂಗ್ಮೇಕರ್'ಎನ್ನುವ ಪುಸ್ತಕ ಬರೆದಿದ್ದು, ಇಂದು (ಜುಲೈ 16) ರಶೀದ್ ಕಿದ್ವಾಯಿ ಬರೆದ ಪುಸ್ತಕವನ್ನು ಡಿಕೆ ಶಿವಕುಮಾರ್ ಅವರಿಗೆ ಹಸ್ತಾಂತರಿಸಿದ್ದು, ಯೆಜ್ಡಿ ರೋಡ್ಕಿಂಗ್ ಬೈಕ್ ಜತೆಗಿನ ಅವರ ಒಡನಾಟದ ಬಗ್ಗೆ ಪುಸ್ತಕದಲ್ಲಿ ಬರೆಯಲಾಗಿದೆ.
- Ramesh B Jawalagera
- Updated on: Jul 16, 2026
- 10:51 pm