Sign In

By signing in or creating an account, you agree with Associated Broadcasting Company's Terms & Conditions and Privacy Policy.

DK Shivakumar

DK Shivakumar

ಕಾಂಗ್ರೆಸ್‌ ‍ಪಕ್ಷದ, ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್‌ ಅವರು ರಾಮನಗರ ಜಿಲ್ಲೆಯ ಕನಕಪುರ ಕ್ಷೇತ್ರದ ಶಾಸಕರು. ಇವರ ಅಭಿಮಾನಿಗಳು ಇವರನ್ನು ಕನಕಪುರ ಬಂಡೆ ಎಂದೇ ಕೊಂಡಾಡುತ್ತಾರೆ. ಸದ್ಯ ಕರ್ನಾಟಕದ ಉಪ ಮುಖ್ಯಮಂತ್ರಿಯಾಗಿ ಬ್ರ್ಯಾಂಡ್‌ ಬೆಂಗಳೂರು ಕನಸು ಹೊತ್ತು ಬೆಂಗಳೂರಿನ ಅಭಿವೃದ್ಧಿಗಾಗಿ ದುಡಿಯುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ 2023ರ ಚುನಾವಣೆಯ ನೇತೃತ್ವ ವಹಿಸಿಕೊಂಡಿದ್ದ ಇವರು ಪಕ್ಷದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಕನಕಪುರ ತಾಲೂಕಿನ ದೊಡ್ಡ ಆಲಹಳ್ಳಿ ಗ್ರಾಮದ ಕೆಂಪೇಗೌಡ ಹಾಗೂ ಗೌರಮ್ಮ ದಂಪತಿಯ ಪ್ರಥಮ ಪುತ್ರರಾಗಿ 15ನೇ ಮೇ, 1962ರಂದು ಡಿಕೆಶಿ ಜನಿಸಿದರು. ಇವರು ಬೆಂಗಳೂರಿನ ಆರ್.ಸಿ. ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾಗಲೇ ಯುವ ಕಾಂಗ್ರೆಸ್‍ಗೆ ಸೇರಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯಾದ್ರು.
ಮೇಕೆದಾಟು ಯೋಜನೆಗಾಗಿ 160 ಕಿ.ಮೀ ಪಾದಯಾತ್ರೆ, 75ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಸ್ವಾತಂತ್ರ್ಯ ನಡಿಗೆ, ರಾಹುಲ್ ಗಾಂಧಿ ಅವರ ಜೊತೆ ಭಾರತ್ ಜೋಡೋ ಯಾತ್ರೆ, ನಾ ನಾಯಕಿ ಕಾರ್ಯಕ್ರಮದ ಮೂಲಕ ಮಹಿಳೆಯರಿಗೆ ಉತ್ತೇಜನ ನೀಡುವಂತಹ ಯಶಸ್ವಿ ಕಾರ್ಯಕ್ರಮಗಳನ್ನು ಮಾಡಿ ಕಾಂಗ್ರೆಸ್‌ ಪಕ್ಷದ ಕಟ್ಟಾಳುವಾಗಿ ರಾಜ್ಯದಲ್ಲಿ 136 ಸ್ಥಾನಗಳನ್ನು ಪಡೆಯುವಲ್ಲಿ ಮಹತ್ವದ ಪಾತ್ರವಹಿಸಿದ್ದಾರೆ.

ಇನ್ನೂ ಹೆಚ್ಚು ಓದಿ

ರಾಜ್ಯಪಾಲರಿಂದ ಡಿಕೆ ಶಿವಕುಮಾರ್​​ಗೆ ಮತ್ತೊಂದು ಶಾಕ್ ಕೊಡಿಸಲು ಬಿಜೆಪಿ ಪ್ಲ್ಯಾನ್..!

ರಾಮನಗರ ಜಿಲ್ಲೆಯನ್ನ ಬೆಂಗಳೂರು ದಕ್ಷಿಣ ಸೇರ್ಪಡೆಗೆ ಕೇಂದ್ರ ಸರ್ಕಾರ ರೆಡ್ ಸಿಗ್ನಲ್ ತೋರಿಸಿದೆ. ಇದರಿಂದ ಸರ್ಕಾರಕ್ಕೆ ಮೊದಲ ಹಂತದಲ್ಲಿ ಹಿನ್ನಡೆಯಾಗಿದೆ. ಅದರಲ್ಲೂ ಈ ವಿಚಾರದಲ್ಲಿ ಮಹತ್ವದ ಆಸಕ್ತಿ ತೋರಿದ್ದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಹಿನ್ನಡೆಯಾಗಿದೆ. ಇದರ ಬೆನ್ನಲ್ಲೇ ಇದೀಗ ಡಿಕೆ ಶಿವಕುಮಾರ್​ಗೆ ಮತ್ತೊಂದು ಶಾಕ್ ಕೊಡಲು ಬಿಜೆಪಿ ನಾಯಕರು ಭರ್ಜರಿ ಪ್ಲ್ಯಾನ್ ಮಾಡಿದ್ದಾರೆ.

ಶಿವಕುಮಾರ್ ಮತ್ತು ಸುರೇಶ್ ಅವರಿಗೆ ಹೆಚ್​ಐವಿ ಸೋಂಕಿನ ಸೂಜಿ ಚುಚ್ಚುವ ಪ್ರಯತ್ನ ನಡೆದಿತ್ತು: ಡಾ ಹೆಚ್​ಡಿ ರಂಗನಾಥ್, ಶಾಸಕ

ತಾನು ಯಾರ ವಿರುದ್ಧವೂ ವೃಥಾ ದೋಷಾರೋಪಣೆ ಮಾಡಲ್ಲ, ಎಲ್ಲ ಶಾಸಕರಿಗೆ ಗೌರವ ನೀಡಿ ಮಾತಾಡುವ ಸಂಸ್ಕೃತಿ ತನ್ನದು ಎಂದು ಡಾ ರಂಗನಾಥ್ ಹೇಳುತ್ತಾರೆ. ಆದರೆ, ಮುನಿರತ್ನ ಮೊದಲಿಂದ ತಮ್ಮ ಕ್ಷೇತ್ರದ ಜನರ ಜೊತೆ ಹೇಗೆ ನಡೆದುಕೊಂಡು ಬಂದಿದ್ದಾರೆ, ಅವರ ವರ್ತನೆ, ನಡಾವಳಿ ಬಗ್ಗೆ ಯಾರಿಗೆ ಗೊತ್ತಿಲ್ಲ? ಅವರ ವಿರುದ್ಧ ಮಾಡಿದ ಅರೋಪಗಳ ಎಫ್​ಎಸ್​ಎಲ್ ವರದಿ ಕೂಡ ಪಾಸಿಟಿವ್ ಬಂದಿದೆ ಎಂದು ಶಾಸಕ ಹೇಳಿದರು.

ಸರ್ಕಾರೀ ಜಮೀನು ಒತ್ತುವರಿ ಆಗಿದ್ದರೆ ತೆರವು ಮಾಡಿಸಲು ಕೋರ್ಟ್ ಆದೇಶ ಬೇಕಿಲ್ಲ: ಎ ಮಂಜು, ಶಾಸಕ

ಕುಮಾರಸ್ವಾಮಿಯವರು ಬಿಡದಿಯ ಕೇತಗಾನಹಳ್ಳಿಯಲ್ಲಿ ಜಮೀನನ್ನು ಒತ್ತುವರಿ ಮಾಡಿಕೊಂಡಿಲ್ಲ ಮತ್ತು ಅಕ್ರಮವಾಗಿ ವಶಪಡಿಸಿಕೊಂಡಿರುವ ಜಮೀನಲ್ಲಿ ಸಾಗುವಳಿ ಮಾಡುತ್ತಿಲ್ಲ ಅಂತಾದರೆ ಭಯ ಯಾಕೆ ಎಂದು ಡಿಕೆ ಶಿವಕುಮಾರ್ ಕೇಳಿರುವುದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಎ ಮಂಜು ಯಾರು ಭಯಪಟ್ಟಿದ್ದಾರೆ, ಏನಾದರೂ ತಪ್ಪು ಮಾಡಿದ್ದರೆ ತಾನೇ ಭಯಪಡೋದು ಎಂದು ಹೇಳಿದರು.

ಡಿಕೆ ಶಿವಕುಮಾರ್​ಗೆ ಹಿನ್ನಡೆ: ರಾಮನಗರ ಜಿಲ್ಲೆಯ ಹೆಸರು ಬದಲಾವಣೆಗೆ ಕೇಂದ್ರ ನಕಾರ

ಕರ್ನಾಟಕ ಸರ್ಕಾರದಿಂದ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಪ್ರಸ್ತಾವವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಈ ಪ್ರಸ್ತಾವಕ್ಕೆ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಒತ್ತಾಯಿಸಿದ್ದರು. ಕೇಂದ್ರದ ನಿರ್ಧಾರದಿಂದ ಅವರಿಗೆ ಹಿನ್ನಡೆಯಾಗಿದೆ. ಈ ಬೆಳವಣಿಗೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ಬಂದಾಗ ಅತಿಹೆಚ್ಚು ಫಲಾನುಭವಿ ಕುಮಾರಸ್ವಾಮಿ ಆಗಲಿದ್ದಾರೆ: ಶಿವಕುಮಾರ್

ಕುಮಾರಸ್ವಾಮಿ ಅವರ ಬಿಡದಿ ಬಳಿಯ ಜಮೀನಲ್ಲಿ ಕೋರ್ಟ್ ಆದೇಶದ ಮೇರೆಗೆ ತೆರವು ಕಾರ್ಯಾಚರಣೆ ಬಗ್ಗೆ ಕೇಂದ್ರ ಸಚಿವ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಶಿವಕುಮಾರ್, ಅವರು ರಾಜಕೀಯದ ಹೇಳಿಕೆಗಳನ್ನು ನೀಡುತ್ತಿರುತ್ತಾರೆ, ಕುಮಾರಸ್ವಾಮಿ ನನ್ನನ್ನು ಬಯ್ಯದೆ ಮತ್ಯಾರನ್ನು ಬಯ್ಯುತ್ತಾರೆ, ಅವರ ಜಮೀನು ಪಕ್ಕದಲ್ಲಿ ನನ್ನ ಜಮೀನು ಇಟ್ಕೊಂಡು ಚೇಷ್ಟೆ ಮಾಡಲು ಸಾಧ್ಯವಾಗುತ್ತಾ ಎಂದು ಪ್ರಶ್ನಿಸಿದರು.

ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ ಕೆಲಸ ಅಪೂರ್ಣ, ಪ್ರತ್ಯೇಕ ಮೀಟಿಂಗ್ ಬೇಕೆಂದ ತಮಿಳುನಾಡು

ದಕ್ಷಿಣ ರಾಜ್ಯಗಳ ಪ್ರತಿನಿಧಿಗಳೊಂದಿಗೆ ಇವತ್ತು ನಡೆಯಬೇಕಿದ್ದ ಮೀಟಿಂಗ್ ಬಗ್ಗೆ ಡಿಕೆ ಶಿವಕುಮಾರ್ ಸಂಪುಟ ಸಭೆಯಲ್ಲಿ ಚರ್ಚಿಸಿದ್ದಾರಂತೆ. ಅದರೆ ನೀರಾವರಿ ಯೋಜನೆಗಳ ವಿಷಯ ಪ್ರಸ್ತಾಪವಾದಾಗೆಲ್ಲ ತಮಿಳುನಾಡು ಸರ್ಕಾರದಿಂದ ಕರ್ನಾಟಕಕ್ಕೆ ಹಿನ್ನಡೆಯಾಗುತ್ತಿದೆ. ಅಲ್ಲಿ ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ರಾಜ್ಯದ ಹಿತಾಸಕ್ತಿಯನ್ನು ಯಾವತ್ತೂ ಬಿಟ್ಟುಕೊಡಲ್ಲ, ಅದರಲ್ಲೂ ವಿಶೇಷವಾಗಿ ನೀರಾವರಿ ಸಮಸ್ಯೆಗಳ ವಿಚಾರದಲ್ಲಿ.

ಶಿವಕುಮಾರ್ ಪಕ್ಷದ ಕಾರ್ಯ ನಿಮಿತ್ತ ದೆಹಲಿಗೆ ಹೋಗಿರಬಹುದು, ನಮ್ಮ ಸಭೆಗೆ ಅದು ಸಂಬಂಧವಿಲ್ಲ: ಸತೀಶ್ ಜಾರಕಿಹೊಳಿ

ಕೆಪಿಸಿಸಿ ಅಧ್ಯಕ್ಷನಾಗಿ 5ವರ್ಷಗಳ ಅವಧಿ ಪೂರೈಸಿದ ಹಿನ್ನೆಲೆಯಲ್ಲಿ ಶಿವಕುಮಾರ್ ಮೊನ್ನೆಯಷ್ಟೇ ಔತಣಕೂಟವೊಂದನ್ನು ಏರ್ಪಡಿಸಿದ್ದರು. ಆ ಕೂಟದಲ್ಲಿ ಪರಮೇಶ್ವರ್ ಅವರನ್ನು ಹೊರತುಪಡಿಸಿ ಕಾಂಗ್ರೆಸ್ ಪಕ್ಷದ ಎಲ್ಲ ಶಾಸಕರು ಭಾಗಿಯಾಗಿದ್ದರು. ನಿನ್ನೆ ಸಚಿವ ಹೆಚ್​ ಸಿ ಮಹದೇವಪ್ಪ ಮನೆಯಲ್ಲಿ ಎಸ್ಸಿ ಮತ್ತು ಎಸ್ಟಿ ಸಮುದಾಯಕ್ಕೆ ಸೇರಿದ ಶಾಸಕರು ಸಭೆ ನಡೆಸಿ ಹಲವು ವಿಷಯಗಳ ಮೇಲೆ ಚರ್ಚೆ ನಡೆಸಿದ್ದಾರೆ.

ಇಬ್ಬರು ಶಾಸಕರು ಮತ್ತವರ ಗನ್ ಮ್ಯಾನ್​ಗಳನ್ನು ಶಿವಕುಮಾರ್ ವೇದಿಕೆಯ ಮೇಲಿಂದ ಕೆಳಗಿಳಿಸಿದ್ದು ಯಾಕೆ ಗೊತ್ತಾ?

ವೇದಿಕೆಯ ಪಾವಿತ್ರ್ಯತೆ ಮತ್ತು ಶಿಸ್ತನ್ನು ಶಾಸಕರಾದ ನೀವು ಮೊದಲು ಕಾಪಾಡಬೇಕು, ಪಕ್ಷದ ರಾಜ್ಯಾಧ್ಯಕ್ಷ ವೇದಿಕೆ ಮೇಲೆ ನಿಂತು ಮಾತಾಡುವಾಗ ಅದರ ಗಾಭೀರ್ಯತೆಯನ್ನು ಅರ್ಥಮಾಡಿಕೊಳ್ಳಬೇಕು ಎಂದು ಪ್ರಸಾದ್ ಕಡೆ ನೋಡುತ್ತ ಶಿವಕುಮಾರ್ ಹೇಳುತ್ತಾರೆ. ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ನಡೆದ ಘಟನೆ ಇದು.

ಪಕ್ಷದ ಸಂಘಟನೆ ಕೆಲಸಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

ಕಾರ್ಯಕ್ರಮದ ಉದ್ಘಾಟನೆ ನಂತರ ಮಾತಾಡಿದ ಶಿವಕುಮಾರ್ ಅವರ ಭಾಷಣದ ತಿರುಳು ಸಹ ಯುವಕರು ಮತ್ತು ಮಹಿಳೆಯರು ಆಗಿತ್ತು. ಕೆಪಿಸಿಸಿ ಅಧ್ಯಕ್ಷನಾದಾಗ ಯುವಕರು ಮತ್ತು ಮಹಿಳೆಯರ ಸಬಲೀಕರಣದ ಬಗ್ಗೆ ಮಾತಾಡಿದ್ದೆ, ಅದರಂತೆ ಯುವಕರಿಗೆ ಮತ್ತು ಮಹಿಳಿಯರಿಗೆ ಗ್ಯಾರಂಟಿ ಯೋಜನೆಗಳನ್ನು ನೀಡಿದ್ದೇವೆ ಎಂದ ಅವರು ಪಕ್ಷದ ಯುವ ಅಧ್ಯಕ್ಷ ಮತ್ತು ಎಲ್ಲ ಪದಾಧಿಕಾರಿಗಳಿಗೆ ಶಿಸ್ತು ಬಹಳ ಮುಖ್ಯ ಅಂತ ಹೇಳಿದರು.

ಮಲ್ಲಿಕಾರ್ಜುನ ಖರ್ಗೆ ಜತೆ ಡಿಕೆ ಶಿವಕುಮಾರ್ ದಿಢೀರ್ ಪಯಣ!

ಕರ್ನಾಟಕ ರಾಜಕೀಯದಲ್ಲಿ, ಅದರಲ್ಲಿಯೂ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಸಂಘರ್ಷ, ಸಿಎಂ ಬದಲಾವಣೆ ಚರ್ಚೆ ಜೋರಾಗಿರುವ ಸಂದರ್ಭದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜೊತೆ ಪ್ರಯಾಣ ಬೆಳೆಸಿದ್ದಾರೆ. ಸರ್ಕಾರಿ ಹಾಗೂ ಖಾಸಗಿ ಕಾರ್ಯಕ್ರಮ ನಿಮಿತ್ತ ಉಭಯ ನಾಯಕರು ಪ್ರಯಾಣಿಸಿದ್ದರೂ ಹಲವು ಅನುಮಾನಗಳಿಗೆ ಇದು ಕಾರಣವಾಗಿದೆ.

ರವಿಚಂದ್ರನ್ ಲುಕ್​ನಲ್ಲಿ ಮಂಜು ಪಾವಗಡ; ನಾಗವಲ್ಲಿ ಆದ ಚೈತ್ರಾ ಕುಂದಾಪುರ
ರವಿಚಂದ್ರನ್ ಲುಕ್​ನಲ್ಲಿ ಮಂಜು ಪಾವಗಡ; ನಾಗವಲ್ಲಿ ಆದ ಚೈತ್ರಾ ಕುಂದಾಪುರ
IPL 2025: RCB ಅಭ್ಯಾಸ ಪಂದ್ಯದಲ್ಲಿ ಅಬ್ಬರಿಸಿದ ದೇವದತ್ತ್ ಪಡಿಕ್ಕಲ್
IPL 2025: RCB ಅಭ್ಯಾಸ ಪಂದ್ಯದಲ್ಲಿ ಅಬ್ಬರಿಸಿದ ದೇವದತ್ತ್ ಪಡಿಕ್ಕಲ್
ಪ್ರಿಯಕರನ ಜತೆ ಸೇರಿ ಪತಿಯ ಕೊಲೆ ಪ್ರಕರಣ, ಆರೋಪಿಗಳ ಮೇಲೆ ವಕೀಲರಿಂದ ಹಲ್ಲೆ
ಪ್ರಿಯಕರನ ಜತೆ ಸೇರಿ ಪತಿಯ ಕೊಲೆ ಪ್ರಕರಣ, ಆರೋಪಿಗಳ ಮೇಲೆ ವಕೀಲರಿಂದ ಹಲ್ಲೆ
ಮಂತ್ರಗಳನ್ನು ಪಠಿಸುವುದರಿಂದ ರೋಗಗಳು ಗುಣವಾಗುತ್ತವೆಯೇ? ಇಲ್ಲಿದೆ ವಿವರ
ಮಂತ್ರಗಳನ್ನು ಪಠಿಸುವುದರಿಂದ ರೋಗಗಳು ಗುಣವಾಗುತ್ತವೆಯೇ? ಇಲ್ಲಿದೆ ವಿವರ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ; ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ
ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ; ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ
ಶಾಸಕರ ಪರವಾಗಿ ಕ್ಷಮೆ ಕೇಳಿದ ಅಜಯ್ ರಾವ್, ಕಾರಣ?
ಶಾಸಕರ ಪರವಾಗಿ ಕ್ಷಮೆ ಕೇಳಿದ ಅಜಯ್ ರಾವ್, ಕಾರಣ?
ಬಿಜ್ನೋರ್ ವ್ಯಸನ ಮುಕ್ತಿ ಕೇಂದ್ರದಲ್ಲಿ ಯುವಕನ ಕತ್ತು ಹಿಸುಕಿ ಕೊಲೆ
ಬಿಜ್ನೋರ್ ವ್ಯಸನ ಮುಕ್ತಿ ಕೇಂದ್ರದಲ್ಲಿ ಯುವಕನ ಕತ್ತು ಹಿಸುಕಿ ಕೊಲೆ
ಅಪ್ಪುನ್ ಜಾತ್ರಿಯಲ್ಲಿ ಕಬ್ಬಿನ ಜ್ಯೂಸ್, ಐಸ್ ಕ್ಯಾಂಡಿಗೆ ಭರ್ಜರಿ ಬೇಡಿಕೆ
ಅಪ್ಪುನ್ ಜಾತ್ರಿಯಲ್ಲಿ ಕಬ್ಬಿನ ಜ್ಯೂಸ್, ಐಸ್ ಕ್ಯಾಂಡಿಗೆ ಭರ್ಜರಿ ಬೇಡಿಕೆ
ಶಾಸಕರನ್ನೂ ಬಿಡದ ಕಳ್ಳರು: ಬಿಜೆಪಿ ಎಂಎಲ್​ಎ ಕಚೇರಿಗೆ ನುಗ್ಗಿ ಕಳ್ಳತನ
ಶಾಸಕರನ್ನೂ ಬಿಡದ ಕಳ್ಳರು: ಬಿಜೆಪಿ ಎಂಎಲ್​ಎ ಕಚೇರಿಗೆ ನುಗ್ಗಿ ಕಳ್ಳತನ