DK Shivakumar
ಕಾಂಗ್ರೆಸ್ ಪಕ್ಷದ, ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ ಅವರು ರಾಮನಗರ ಜಿಲ್ಲೆಯ ಕನಕಪುರ ಕ್ಷೇತ್ರದ ಶಾಸಕರು. ಸಧ್ಯ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳು. ಇವರ ಅಭಿಮಾನಿಗಳು ಇವರನ್ನು ಕನಕಪುರ ಬಂಡೆ ಎಂದೇ ಕೊಂಡಾಡುತ್ತಾರೆ. ಸದ್ಯ ಕರ್ನಾಟಕದ ಮುಖ್ಯಮಂತ್ರಿಯಾಗಿ ಬ್ರ್ಯಾಂಡ್ ಬೆಂಗಳೂರು ಕನಸು ಹೊತ್ತು ಕರ್ನಾಟಕದ ಅಭಿವೃದ್ಧಿಗಾಗಿ ದುಡಿಯುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ 2023ರ ಚುನಾವಣೆಯ ನೇತೃತ್ವ ವಹಿಸಿಕೊಂಡಿದ್ದ ಇವರು ಪಕ್ಷದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.
ಕನಕಪುರ ತಾಲೂಕಿನ ದೊಡ್ಡ ಆಲಹಳ್ಳಿ ಗ್ರಾಮದ ಕೆಂಪೇಗೌಡ ಹಾಗೂ ಗೌರಮ್ಮ ದಂಪತಿಯ ಪ್ರಥಮ ಪುತ್ರರಾಗಿ 15ನೇ ಮೇ, 1962ರಂದು ಡಿಕೆಶಿ ಜನಿಸಿದರು. ಇವರು ಬೆಂಗಳೂರಿನ ಆರ್.ಸಿ. ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾಗಲೇ ಯುವ ಕಾಂಗ್ರೆಸ್ಗೆ ಸೇರಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯಾದ್ರು.
ಮೇಕೆದಾಟು ಯೋಜನೆಗಾಗಿ 160 ಕಿ.ಮೀ ಪಾದಯಾತ್ರೆ, 75ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಸ್ವಾತಂತ್ರ್ಯ ನಡಿಗೆ, ರಾಹುಲ್ ಗಾಂಧಿ ಅವರ ಜೊತೆ ಭಾರತ್ ಜೋಡೋ ಯಾತ್ರೆ, ನಾ ನಾಯಕಿ ಕಾರ್ಯಕ್ರಮದ ಮೂಲಕ ಮಹಿಳೆಯರಿಗೆ ಉತ್ತೇಜನ ನೀಡುವಂತಹ ಯಶಸ್ವಿ ಕಾರ್ಯಕ್ರಮಗಳನ್ನು ಮಾಡಿ ಕಾಂಗ್ರೆಸ್ ಪಕ್ಷದ ಕಟ್ಟಾಳುವಾಗಿ ರಾಜ್ಯದಲ್ಲಿ 136 ಸ್ಥಾನಗಳನ್ನು ಪಡೆಯುವಲ್ಲಿ ಮಹತ್ವದ ಪಾತ್ರವಹಿಸಿದ್ದಾರೆ.
ಹಾಲಿನ ದರ ಹೆಚ್ಚಳಕ್ಕೆ ಸಿಎಂ ತವರು ಜಿಲ್ಲೆಯಲ್ಲೇ ರಣಕಹಳೆ: ಹಸುಗಳೊಂದಿಗೆ ಡಿಸಿ ಕಚೇರಿ ಮುಂದೆ ರೈತರ ವಿನೂತನ ಪ್ರತಿಭಟನೆ!
ಹಾಲಿನ ಉತ್ಪಾದನಾ ವೆಚ್ಚ ಹೆಚ್ಚಳ ಹಾಗೂ ಬರಗಾಲದ ಹಿನ್ನೆಲೆಯಲ್ಲಿ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ರೂ. ಏರಿಸುವಂತೆ ಆಗ್ರಹಿಸಿ ರಾಮನಗರದಲ್ಲಿ ಹಾಲು ಉತ್ಪಾದಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಹಸುಗಳನ್ನು ತಂದು, ಹಾಲು ಕರೆಯುವ ಮೂಲಕ ವಿನೂತನವಾಗಿ ಆಕ್ರೋಶ ಹೊರಹಾಕಿದ ರೈತರು, ಸರ್ಕಾರ ನೀಡುವ ಪ್ರೋತ್ಸಾಹಧನವನ್ನು 10 ರೂಪಾಯಿಗೆ ಹೆಚ್ಚಿಸುವಂತೆ ಹಾಗೂ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸುವಂತೆ ಸಿಎಂ ಡಿ.ಕೆ ಶಿವಕುಮಾರ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.
- Prashantha B
- Updated on: Jul 7, 2026
- 3:00 pm
ವಿಶ್ವಬ್ಯಾಂಕ್ನ ಮೇಲ್ಮಧ್ಯಮ ಆದಾಯದ ಮಿತಿ ದಾಟಿದ ಕರ್ನಾಟಕ: ಗ್ಯಾರಂಟಿ ಯೋಜನೆಗಳೇ ಆರ್ಥಿಕ ಪ್ರಗತಿಯ ಬುನಾದಿ ಎಂದ ಸಿಎಂ
ವಿಶ್ವಬ್ಯಾಂಕ್ನ ಮೇಲ್ಮಧ್ಯಮ ಆದಾಯದ (Upper Middle-Income threshold) ಮಿತಿಯನ್ನು (ಕಟ್ ಆಫ್) ಕರ್ನಾಟಕ ದಾಟಿದ್ದು, ದೇಶದ ಮುಂಚೂಣಿ ರಾಜ್ಯಗಳ ಪಟ್ಟಿಯಲ್ಲಿ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಈ ಐತಿಹಾಸಿಕ ಸಾಧನೆಗೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಮತ್ತು ಒಳಗೊಳ್ಳುವಿಕೆಯ ಅಭಿವೃದ್ಧಿಯೇ ಪ್ರಮುಖ ಕಾರಣ ಎಂದು ಸಿಎಂ ಸಿದ್ದರಾಮಯ್ಯ ಶ್ಲಾಘಿಸಿದ್ದಾರೆ.
- Ganapathi Sharma
- Updated on: Jul 7, 2026
- 12:38 pm
ಕಲಬುರಗಿಯ ಶರಣಬಸವೇಶ್ವರ ದೇವಸ್ಥಾನಕ್ಕೆ ಸಿಎಂ ಡಿಕೆ ಶಿವಕುಮಾರ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ
ಕಲಬುರಗಿ ಜನರ ಆರಾಧ್ಯ ದೈವ ಶರಣಬಸವೇಶ್ವರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ನೀಡಿ ದರ್ಶನ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಶರಣ ಸಂಸ್ಥಾನ ಮಠದ 9ನೇ ಪೀಠಾಧಿಪತಿ ಚಿರಂಜೀವಿ ದೊಡ್ಡಪ್ಪ ಅಪ್ಪ ಅವರನ್ನು ಸಹ ಸಿಎಂ ಭೇಟಿಯಾಗಿದ್ದಾರೆ. ಈ ವೇಳೆ ಉಪಮುಖ್ಯಮಂತ್ರಿ ಪರಮೇಶ್ವರ್, ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಅಜಯ್ ಸಿಂಗ್ ಸೇರಿದಂತೆ ಹಲವು ಗಣ್ಯರು ಸಿಎಂಗೆ ಸಾಥ್ ನೀಡಿದ್ದಾರೆ.
- Dattatraya Patil
- Updated on: Jul 7, 2026
- 12:10 pm
ಹುಷಾರ್! ಮಹಿಳೆಯರ ಸುರಕ್ಷತೆಗೆ ಟೊಂಕ ಕಟ್ಟಿದ ‘ಅಕ್ಕ ಪಡೆ’: ಏನಿದು ಯೋಜನೆ?
ಬೀದರ್ನ ಬಸವಕಲ್ಯಾಣದಲ್ಲಿ ಸಿಎಂ ಡಿಕೆ ಶಿವಕುಮಾರ್ ಅಕ್ಕ ಪಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಕ್ಕ ಪಡೆ ಪ್ರತಿ ಪಂಚಾಯಿತಿಗೆ ವಿಸ್ತರಿಸುವಂತೆ ಕರೆ ನೀಡಿದರು. ಹಾಗಾದರೆ ಏನಿದು ಅಕ್ಕ ಪಡೆ, ಹೇಗೆ ಕಾರ್ಯನಿರ್ವಹಿಸುತ್ತದೆ ಮತ್ತು ಈ ಯೋಜನೆಯ ಉದ್ದೇಶವೇನು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
- Dattatraya Patil
- Updated on: Jul 6, 2026
- 8:26 pm
ಮುಡಾ ಸೈಟ್ ಹಂಚಿಕೆ ಕೇಸ್ ಹಿನ್ನೆಲೆ ಯತೀಂದ್ರ ಖಾತೆ ಬದಲಾವಣೆಗೆ ಆಗ್ರಹ: ನೈಜ ಹೋರಾಟಗಾರರ ವೇದಿಕೆಯಿಂದ ಸಿಎಂಗೆ ಪತ್ರ
ಮೈಸೂರಿನ ಮುಡಾ (MUDA) ಸೈಟ್ ಹಂಚಿಕೆ ಹಗರಣದಲ್ಲಿ ಸಚಿವ ಡಾ. ಯತೀಂದ್ರ ಅವರ ತಂದೆ ಮತ್ತು ತಾಯಿ ಪ್ರಮುಖ ಆರೋಪಿಗಳಾಗಿರುವುದರಿಂದ, ಹಿತಾಸಕ್ತಿ ಸಂಘರ್ಷವನ್ನು ತಡೆಯಲು ತಕ್ಷಣವೇ ಅವರ ನಗರಾಭಿವೃದ್ಧಿ ಖಾತೆಯನ್ನು ಬದಲಾಯಿಸುವಂತೆ ಆಗ್ರಹಿಸಿ ‘ನೈಜ ಹೋರಾಟಗಾರರ ವೇದಿಕೆ’ಯು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಪತ್ರ ಬರೆದಿದೆ.
- Prasanna Gaonkar
- Updated on: Jul 6, 2026
- 11:16 am
ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಪ್ರವಾಸೋದ್ಯಮ ನೀತಿ ಬಗ್ಗೆ ಸಮಾಲೋಚನೆ
ಪ್ಯಾನ್ ಇಂಡಿಯಾ ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ ಅವರು ಇಂದು (ಜುಲೈ 5) ಬೆಂಗಳೂರಿನ ಸದಾಶಿವನಗರದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಮಹತ್ವದ ಸಮಾಲೋಚನೆ ನಡೆಸಿದರು. ಇತ್ತೀಚೆಗಷ್ಟೇ ರಾಜ್ಯ ಸರ್ಕಾರದ ಕರಾವಳಿ ಹಾಗೂ ಮಲೆನಾಡು ಪ್ರವಾಸೋದ್ಯಮದ ಅಧಿಕೃತ ಪ್ರಚಾರ ರಾಯಭಾರಿಯಾಗಿ ಅವರು ನೇಮಕಗೊಂಡಿದ್ದರು.
- Madan Kumar
- Updated on: Jul 5, 2026
- 3:21 pm
ಹೀರೋ ಆದ ಸಿಪಿ ಯೋಗೇಶ್ವರ್ ಪುತ್ರ ಧ್ಯಾನ್; ಕ್ಲ್ಯಾಪ್ ಮಾಡಿದ ಮುಖ್ಯಮಂತ್ರಿ ಡಿಕೆಶಿ
ಸಿಪಿ ಯೋಗೇಶ್ವರ್ ಅವರ ಮಗ ಧ್ಯಾನ್ ಯೋಗೇಶ್ವರ್ ಅವರು ಹೀರೋ ಆಗಿ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಅವರು ನಟಿಸುತ್ತಿರುವ ಎರಡು ಸಿನಿಮಾಗಳ ಮುಹೂರ್ತ ನಡೆದಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕ್ಲ್ಯಾಪ್ ಮಾಡುವ ಮೂಲಕ ಚಾಲನೆ ನೀಡಿದರು. ಆ ಸಂದರ್ಭದ ಫೋಟೋಗಳು ಇಲ್ಲಿವೆ ನೋಡಿ..
- Madan Kumar
- Updated on: Jul 5, 2026
- 12:27 pm
ಕರ್ನಾಟಕ ಬರ: ವಿದ್ಯುತ್ ಕೊರತೆ ತಪ್ಪಿಸಲು ಸಿಎಂ ಡಿಕೆ ಶಿವಕುಮಾರ್ ತುರ್ತು ಸಭೆ, ಅಧಿಕಾರಿಗಳಿಗೆ ಸೂಚನೆ
ಮಳೆ ಕೊರತೆ ಹಾಗೂ ಎಲ್ ನಿನೋ ಪರಿಸ್ಥಿತಿ ಹಿನ್ನೆಲೆಯಲ್ಲಿ ವಿದ್ಯುತ್ ಉತ್ಪಾದನೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಗಳಿದ್ದು, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂಧನ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ತುರ್ತು ಕಾರ್ಯಯೋಜನೆ ರೂಪಿಸಿ, ಪರ್ಯಾಯ ಮೂಲಗಳಿಂದ ವಿದ್ಯುತ್ ಉತ್ಪಾದನೆಗೆ ಗಮನ ಹರಿಸಲು ಅವರು ನಿರ್ದೇಶಿಸಿದ್ದಾರೆ.
- Ganapathi Sharma
- Updated on: Jul 4, 2026
- 8:26 am
CM ಆರ್ಥಿಕ ಸಲಹೆಗಾರ ಹುದ್ದೆಯಿಂದ ನನ್ನ ತಗೆದು ಹಾಕಿಲ್ಲ: ಡಿಕೆಶಿ ಬಗ್ಗೆ ರಾಯರೆಡ್ಡಿ ಸ್ಪೋಟಕ ಹೇಳಿಕೆ
ಶಾಸಕ ಬಸವರಾಜ ರಾಯರೆಡ್ಡಿಯವರು ಸಿದ್ದರಾಮಯ್ಯನವರ ಆಪ್ತರಾಗಿದ್ದರೂ ಸಹ ಅವರಿಗೆ ಮಂತ್ರಿ ಸ್ಥಾನ ಸಿಕ್ಕಿರಲಿಲ್ಲ. ಇದರಿಂದ ಅವರನ್ನು ಸಿಎಂ ಆರ್ಥಿಕ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿತ್ತು. ಆದ್ರೆ, ಇದೀಗ ಡಿಕೆ ಶಿವಕುಮಾರ್, ಎಲ್.ಕೆ.ಅತೀಕ್ ಅವರನ್ನು ಆರ್ಥಿಕ ಸಲಹೆಗಾರರನ್ನಾಗಿ ನೇಮಿಸಿದ್ದಾರೆ. ಇನ್ನು ಈ ಬಗ್ಗೆ ಕೊಪ್ಪಳದಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ರಾಯರೆಡ್ಡಿ, ಸಿಎಂ ಆರ್ಥಿಕ ಸಲಹೆಗಾರ ಹುದ್ದೆಯಿಂದ ನನ್ನನ್ನು ತೆಗೆದು ಹಾಕಿಲ್ಲ. ಸಿಎಂ ಬದಲಾವಣೆ ನಂತರ ಡಿಕೆಶಿ ಮತ್ತೊಬ್ಬರನ್ನು ನೇಮಿಸಿದ್ದಾರೆ. ಅದರಲ್ಲಿ ತಪ್ಪೇನಿದೆ? ಆರ್ಡರ್ ಮಾಡಲೇಬೇಕು, ಹಾಗಾಗಿ ಆರ್ಡರ್ ಮಾಡಿದ್ದಾರೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನನ್ನ ವಿರುದ್ಧವಾಗಿ ಇಲ್ಲ ಎಂದಿದ್ದಾರೆ.
- Shivakumar Pattar
- Updated on: Jul 3, 2026
- 9:46 pm
ಕೇವಲ 1 ತಿಂಗಳಲ್ಲಿ ಡಿಕೆಶಿ ಸಾಕಷ್ಟು ಕನಸಿನ ಯೋಜನೆ, ಹತ್ತಾರು ಸವಾಲುಗಳನ್ನ ಮೆಟ್ಟಿ ಆಡಳಿತಕ್ಕೆ ಚುರುಕು
ನೂರಾರು ಸವಾಲು.. ಸಾಕಷ್ಟು ಸಮಸ್ಯೆಗಳು.. ಹಿರಿಯರು, ಕಿರಿಯರು ಒತ್ತಡ.. ತಮ್ಮ ಆಡಳಿತದಲ್ಲಿ ಸಾಕ್ಷಿ ಗುಡ್ಡೆ ಬಿಟ್ಟು ಹೋಗಬೇಕೆಂಬ ಆಸೆ. ಇಷ್ಟೆಲ್ಲಾ ಮನದಲ್ಲಿಟ್ಟುಕೊಂಡ ಡಿಕೆ ಶಿವಕುಮಾರ್ (DK Shivakumar), ತಾವು ಮುಖ್ಯಮಂತ್ರಿ ಯಾಗಿ ಅಧಿಕಾರ ಸ್ವೀಕರಿಸಿಕೊಂಡು ಇಂದಿಗೆ ಬರೋಬ್ಬರಿ ಒಂದು ತಿಂಗಳು ಕಳೆದಿದೆ. ಇದೊಂದು ತಿಂಗಳಲ್ಲಿ ಸಿಎಂ ಡಿಕೆ, ತೆಗೆದುಕೊಂಡ ನಿರ್ಧಾರ, ಎದುರಿಸಿದ ಸಮಸ್ಯೆ, ಸವಾಲುಗಳು ಸಾಕಷ್ಟಿದ್ದರೂ ಆಡಳತಕ್ಕೆ ಹಾಕಿದ ಅಡಿಪಾಯ ರಾಜ್ಯದ ಜನರ ಗಮನ ಸೆಳೆದಿದೆ.
- Ramesh B Jawalagera
- Updated on: Jul 3, 2026
- 8:09 pm
ಎಲ್ಲರೂ ಧರ್ಮದಲ್ಲಿ ಇರಬೇಕು, ರಾಜಕೀಯದಲ್ಲೂ ಧರ್ಮ ಇಟ್ಟುಕೊಂಡು ಕೆಲಸ ಮಾಡಬೇಕು: ಡಿಕೆಶಿ
ಎಲ್ಲರೂ ಧರ್ಮದಲ್ಲಿ ಇರಬೇಕು. ರಾಜಕೀಯದಲ್ಲೂ ಧರ್ಮ ಇಟ್ಟುಕೊಂಡು ಕೆಲಸ ಮಾಡಬೇಕು. ಶಿವಾಲ ಮೂರ್ತಿ ಬೆಟ್ಟದಲ್ಲಿ ನನ್ನ ತಂದೆ-ತಾಯಿ ಹರೆಕೆ ಹೊತ್ತಿದ್ದರು. ಬಳಿಕ ನಾನು ಹುಟ್ಟಿದವನು. ಹೀಗಾಗಿ ನಾನು ನನ್ನ ಸೇವೆಯನ್ನು ಮಾಡುತ್ತಿದ್ದೇನೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ. ಕನಕಪುರದ ಶ್ರೀ ದೇಗುಲ ಮಠದ ಲಿಂಗೈಕ್ಯ ಪರಮಪೂಜ್ಯ ನಿ.ಪ್ರ.ಸ್ವ ಶ್ರೀ ಶ್ರೀ ಶ್ರೀ ಡಾ. ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಸಿಎಂ ಡಿಕೆ ಶಿವಕುಮಾರ್ ಅವರು ಭಾಗವಹಿಸಿ, ತ್ರಿವಿಧ ದಾಸೋಹಿ ಮಹಾಸ್ವಾಮಿಗಳ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದರು.
- Prashantha B
- Updated on: Jul 3, 2026
- 4:47 pm
ಅಕ್ಕಪಕ್ಕ ಕುಳಿತರೂ ಬಿಎಸ್ವೈ-ಸೋಮಣ್ಣ ಸೈಲೆಂಟ್: ಡಿಕೆಶಿ ಬರ್ತಿದ್ದಂತೆಯೇ ಎದ್ದು ನಿಂತು ಸ್ವಾಗತಿಸಿದ ನಾಯಕರು
ಕನಕಪುರದ ಶ್ರೀ ದೇಗುಲ ಮಠದ ಲಿಂಗೈಕ್ಯ ಪರಮಪೂಜ್ಯ ನಿ.ಪ್ರ.ಸ್ವ ಶ್ರೀ ಶ್ರೀ ಶ್ರೀ ಡಾ. ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಸಿಎಂ ಡಿಕೆ ಶಿವಕುಮಾರ್ ಅವರು ಭಾಗವಹಿಸಿ, ತ್ರಿವಿಧ ದಾಸೋಹಿ ಮಹಾಸ್ವಾಮಿಗಳ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದರು. ಇದಕ್ಕೂ ಮುನ್ನ ಡಿಕೆ ಶಿವಕುಮಾರ್ ಅವರು ವೇದಿಕೆ ಮೇಲೆ ಆಗಮಿಸುತ್ತಿದ್ದಂತೆಯೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಕೇಂದ್ರ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಅವರು ಎದ್ದು ನಿಂತು ಸ್ವಾಗತ ಮಾಡಿದರು. ಇನ್ನು ಇದೇ ವೇಳೆ ಸೋಮಣ್ಣ ಅವರು ಡಿಕೆ ಶಿವಕುಮಾರ್ ಅವರಿಗೆ ಹೂಗುಚ್ಚ ನೀಡಿದರು. ಬಳಿಕ ಡಿಕೆಶಿ, ವೇದಿಕೆ ಮೇಲಿದ್ದ ಎಲ್ಲಾ ಸ್ವಾಮೀಜಿಗಳಿಗೆ ನಮಸ್ಕರಿಸಿದರು.ಇನ್ನೊಂದಡೆ ಯಡಿಯೂರಪ್ಪ ಹಾಗೂ ವಿ ಸೋಮಣ್ಣ ಅವರು ವೇದಿಕೆಯಲ್ಲಿ ಅಕ್ಕಪಕ್ಕದಲ್ಲಿ ಕುಳಿತರೂ ಸಹ ಮಾತನಾಡದೆ ಸೈಲೆಂಟ್ ಆಗಿದ್ದರು.
- Prashantha B
- Updated on: Jul 3, 2026
- 3:31 pm