DK Shivakumar
ಕಾಂಗ್ರೆಸ್ ಪಕ್ಷದ, ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ ಅವರು ರಾಮನಗರ ಜಿಲ್ಲೆಯ ಕನಕಪುರ ಕ್ಷೇತ್ರದ ಶಾಸಕರು. ಇವರ ಅಭಿಮಾನಿಗಳು ಇವರನ್ನು ಕನಕಪುರ ಬಂಡೆ ಎಂದೇ ಕೊಂಡಾಡುತ್ತಾರೆ. ಸದ್ಯ ಕರ್ನಾಟಕದ ಉಪ ಮುಖ್ಯಮಂತ್ರಿಯಾಗಿ ಬ್ರ್ಯಾಂಡ್ ಬೆಂಗಳೂರು ಕನಸು ಹೊತ್ತು ಬೆಂಗಳೂರಿನ ಅಭಿವೃದ್ಧಿಗಾಗಿ ದುಡಿಯುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ 2023ರ ಚುನಾವಣೆಯ ನೇತೃತ್ವ ವಹಿಸಿಕೊಂಡಿದ್ದ ಇವರು ಪಕ್ಷದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.
ಕನಕಪುರ ತಾಲೂಕಿನ ದೊಡ್ಡ ಆಲಹಳ್ಳಿ ಗ್ರಾಮದ ಕೆಂಪೇಗೌಡ ಹಾಗೂ ಗೌರಮ್ಮ ದಂಪತಿಯ ಪ್ರಥಮ ಪುತ್ರರಾಗಿ 15ನೇ ಮೇ, 1962ರಂದು ಡಿಕೆಶಿ ಜನಿಸಿದರು. ಇವರು ಬೆಂಗಳೂರಿನ ಆರ್.ಸಿ. ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾಗಲೇ ಯುವ ಕಾಂಗ್ರೆಸ್ಗೆ ಸೇರಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯಾದ್ರು.
ಮೇಕೆದಾಟು ಯೋಜನೆಗಾಗಿ 160 ಕಿ.ಮೀ ಪಾದಯಾತ್ರೆ, 75ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಸ್ವಾತಂತ್ರ್ಯ ನಡಿಗೆ, ರಾಹುಲ್ ಗಾಂಧಿ ಅವರ ಜೊತೆ ಭಾರತ್ ಜೋಡೋ ಯಾತ್ರೆ, ನಾ ನಾಯಕಿ ಕಾರ್ಯಕ್ರಮದ ಮೂಲಕ ಮಹಿಳೆಯರಿಗೆ ಉತ್ತೇಜನ ನೀಡುವಂತಹ ಯಶಸ್ವಿ ಕಾರ್ಯಕ್ರಮಗಳನ್ನು ಮಾಡಿ ಕಾಂಗ್ರೆಸ್ ಪಕ್ಷದ ಕಟ್ಟಾಳುವಾಗಿ ರಾಜ್ಯದಲ್ಲಿ 136 ಸ್ಥಾನಗಳನ್ನು ಪಡೆಯುವಲ್ಲಿ ಮಹತ್ವದ ಪಾತ್ರವಹಿಸಿದ್ದಾರೆ.
ಸೀಕ್ರೆಟ್ ಮೀಟಿಂಗ್ನಲ್ಲೂ ಮನಬಿಚ್ಚಿ ಮಾತನಾಡದ ಸಿಎಂ ಸಿದ್ದರಾಮಯ್ಯ! ಆತಂಕಕ್ಕೆ ಒಳಗಾದ್ರಾ ಅಹಿಂದ ಸಚಿವರು?
ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ತೀವ್ರಗೊಂಡಿದ್ದು, ಸಿಎಂ ಸಿದ್ದರಾಮಯ್ಯ ಅವರ ನಿಗೂಢ ಮೌನ ಅಹಿಂದ ಸಚಿವರಿಗೆ ಆತಂಕ ತಂದಿದೆ. ತಮ್ಮ ಸ್ಥಾನಮಾನ ಮತ್ತು ಭವಿಷ್ಯದ ದೃಷ್ಟಿಯಿಂದ ಸತೀಶ್ ಜಾರಕಿಹೊಳಿ ಹಾಗೂ ಮಹದೇವಪ್ಪ ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಸ್ಪಷ್ಟನೆ ಕೋರಿದ್ದಾರೆ.
- Prasanna Gaonkar
- Updated on: Apr 28, 2026
- 11:25 am
ಡಿಕೆ ಶಿವಕುಮಾರ್ ವಾಪಸಾಗ್ತಿದ್ದಂತೆಯೇ ಸಿಎಂ ಸಿದ್ದರಾಮಯ್ಯ ಬಣ ದೆಹಲಿಗೆ! ಕಾಂಗ್ರೆಸ್ನಲ್ಲಿ ಜೋರಾಯ್ತು ಡೆಲ್ಲಿ ಟೂರ್ ಪಾಲಿಟಿಕ್ಸ್
ಕರ್ನಾಟಕ ಕಾಂಗ್ರೆಸ್ನಲ್ಲಿ ಅಧಿಕಾರ ಹಸ್ತಾಂತರ ಚರ್ಚೆ ಒಳಗಿಂದೊಳಗೆಯೇ ಮತ್ತೆ ತಾರಕಕ್ಕೇರಿದೆ. ಡಿಸಿಎಂ ಡಿಕೆ ಶಿವಕುಮಾರ್ ದೆಹಲಿ ಭೇಟಿ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಆಪ್ತ ಸಚಿವರು ಹೈಕಮಾಂಡ್ ಕದ ತಟ್ಟಿದ್ದಾರೆ. ಮೇ 4ರ ಪಂಚ ರಾಜ್ಯಗಳ ಫಲಿತಾಂಶದ ನಂತರ ರಾಜ್ಯ ರಾಜಕಾರಣದಲ್ಲಿ ಮಹತ್ತರ ಬದಲಾವಣೆಯ ಗಾಳಿ ಬೀಸುವ ಲಕ್ಷಣಗಳು ದಟ್ಟವಾಗಿವೆ.
- Prasanna Gaonkar
- Updated on: Apr 28, 2026
- 6:55 am
ಕೆಎಎಸ್ ಕಟ್ಟಡ ಉದ್ಘಾಟಿಸಿದ ಸಿಎಂ, ಡಿಸಿಎಂ: ಆದಷ್ಟು ಬೇಗ ಪ್ರಮೋಷನ್ ಎಂದ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಇನ್ಫೆಂಟ್ರಿ ರಸ್ತೆಯಲ್ಲಿರುವ ಕೆಎಎಸ್ ಅಧಿಕಾರಿಗಳ ಸಂಘದ ನವೀಕೃತ ಕಟ್ಟಡವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಸನ್ಮಾನ ಪತ್ರ ಬಿಡುಗಡೆ ಮಾಡಲಾಯಿತು. 28 ವರ್ಷಗಳ ನಂತರ ನವೀಕರಣಗೊಂಡ ಈ ಕಟ್ಟಡ ಕೆಎಎಸ್ ಅಧಿಕಾರಿಗಳ ಸೇವೆಯನ್ನು ಸ್ಮರಿಸುತ್ತದೆ.
- Gangadhar Saboji
- Updated on: Apr 27, 2026
- 10:06 pm
ಮೇ 15ಕ್ಕೆ ಗುಡ್ ನ್ಯೂಸ್ ಸಿಗತ್ತಾ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆ ಶಿವಕುಮಾರ್!
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮೇ 15 ರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ರಾಜಕೀಯ ವಲಯದಲ್ಲಿ ಗುಡ್ ನ್ಯೂಸ್ನ ನಿರೀಕ್ಷೆಗಳು ಗರಿಗೆದರಿವೆ. ಆದರೆ, ಈ ಕುರಿತು ಮಾತನಾಡಿದ ಡಿ.ಕೆ. ಶಿವಕುಮಾರ್, ತಮ್ಮ ಹುಟ್ಟುಹಬ್ಬದಂದು ಯಾವುದೇ ಕಾರ್ಯಕರ್ತರು ಅಥವಾ ಅಭಿಮಾನಿಗಳು ಫ್ಲೆಕ್ಸ್, ಬ್ಯಾನರ್ಗಳನ್ನು ಹಾಕದಂತೆ ಸ್ಪಷ್ಟ ಸೂಚನೆ ನೀಡಿದ್ದಾರೆ.ನಜಾಹೀರಾತು ಬೇಕಿದ್ದರೆ ಹಣ ಕಟ್ಟಿ ಮಾಡಿಕೊಳ್ಳಿ, ಆದರೆ ರಸ್ತೆಯಲ್ಲಿ ಹಾಕಬಾರದು ಎಂದು ಮನವಿ ಮಾಡಿದ್ದಾರೆ.
- Bhavana Hegde
- Updated on: Apr 26, 2026
- 11:26 am
ಮಲ್ಲಿಕಾರ್ಜುನ ಖರ್ಗೆ ಭೇಟಿ ಬಳಿಕ ಅಚ್ಚರಿಯ ಹೇಳಿಕೆ ಕೊಟ್ಟ ಡಿಸಿಎಂ ಡಿ.ಕೆ. ಶಿವಕುಮಾರ್
ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ ಡಿ.ಕೆ. ಶಿವಕುಮಾರ್, ಇದು ಸಾಮಾನ್ಯ ಭೇಟಿ ಎಂದು ಸ್ಪಷ್ಟಪಡಿಸಿದ್ದಾರೆ. ವಿವಿಧ ರಾಜ್ಯಗಳ ಚುನಾವಣಾ ವರದಿ ಸಲ್ಲಿಸುವುದು ತಮ್ಮ ಕರ್ತವ್ಯ ಎಂದಿದ್ದಾರೆ. ಮತ್ತೊಂದೆಡೆ ಶಾಸಕ ಹೆಚ್.ಡಿ. ರಂಗನಾಥ್ ಡಿ.ಕೆ. ಶಿವಕುಮಾರ್ಗೆ ಮುಖ್ಯಮಂತ್ರಿ ಸ್ಥಾನದ ಒಡಂಬಡಿಕೆ ಪೂರ್ಣಗೊಳ್ಳುವ ಕುರಿತು ಮಾತನಾಡಿದ್ದು, ಹೈಕಮಾಂಡ್ನಿಂದ ದೊಡ್ಡ ಉಡುಗೊರೆ ನಿರೀಕ್ಷೆಯಿದೆ ಎಂದಿದ್ದಾರೆ.
- Harish GR
- Updated on: Apr 26, 2026
- 6:21 am
ದೆಹಲಿಯಲ್ಲಿ ಡಿಕೆ ಸಹೋದರರ ಬಿಗಿ ಪಟ್ಟು: ಮೇ ಮೊದಲ ವಾರವೇ ದೊಡ್ಡ ಬೆಳವಣಿಗೆ ಸಾಧ್ಯತೆ?
ಕರ್ನಾಟಕ ರಾಜಕಾರಣದಲ್ಲಿ ಮೇ ಮೊದಲ ವಾರದಲ್ಲಿ ದೊಡ್ಡ ಹೈಡ್ರಾಮಾ ನಡೆಯುವ ಸಾಧ್ಯತೆ ಇದೆ. ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್ ದೆಹಲಿಗೆ ಭೇಟಿ ನೀಡಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಿರಿಯ ನಾಯಕರೊಂದಿಗೆ ಒಂದುವರೆ ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದಾರೆ. ಮುಖ್ಯಮಂತ್ರಿ ಬಣ ಕೂಡ ಸಕ್ರಿಯವಾಗಿದ್ದು, ಮುಂದಿನ ನಡೆ ಕುರಿತು ಚರ್ಚೆ ನಡೆಯುತ್ತಿದೆ.
- Pramod Shastri G
- Updated on: Apr 25, 2026
- 11:34 am
ಅವಳಿ ಸುರಂಗ ಮಾರ್ಗ, ಮೇಲ್ಸೇತುವೆಗಳಿಗೆ ಬೇಕಿದೆ ಡಿಫೆನ್ಸ್ ಜಾಗ; ಸಚಿವ ರಾಜನಾಥ್ ಸಿಂಗ್ಗೆ ಡಿ ಕೆ ಶಿವಕುಮಾರ್ ಮನವಿ
ಡಿಸಿಎಂ ಡಿ.ಕೆ. ಶಿವಕುಮಾರ್ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ, ಬೆಂಗಳೂರಿನ ಪ್ರಗತಿಗೆ ರಕ್ಷಣಾ ಇಲಾಖೆಯ ಭೂಮಿ ಹಾಗೂ ಕಟ್ಟಡ ನಿರ್ಮಾಣ ನಿಯಮಗಳ ಸಡಿಲಿಕೆಗೆ ಮನವಿ ಮಾಡಿದ್ದಾರೆ. ಅವಳಿ ಸುರಂಗ, ಮೇಲ್ಸೇತುವೆ, ರಸ್ತೆ ಯೋಜನೆಗಳಿಗೆ ಭೂಮಿ ಅಗತ್ಯವಿದ್ದು, ಹೆಚ್ಎಎಲ್ ಮತ್ತು ಯಲಹಂಕ ಸುತ್ತಮುತ್ತ ಕಟ್ಟಡ ಎತ್ತರದ ನಿರ್ಬಂಧ ಸಡಿಲಿಸಲು ಕೋರಿದ್ದಾರೆ. ಇದು ಬೆಂಗಳೂರಿನ ವೇಗದ ಅಭಿವೃದ್ಧಿಗೆ ಅಡ್ಡಿಯಾಗಿದೆ ಎಂದು ವಿವರಿಸಿದ್ದಾರೆ.
- Bhavana Hegde
- Updated on: Apr 25, 2026
- 10:15 am
ಸಿದ್ದರಾಮಯ್ಯ ಆಪ್ತರಿಂದ ಸಭೆ, ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ: ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ದಾವಣಗೆರೆ ದಂಗಲ್ ಬಳಿಕ ಕರ್ನಾಟಕ ಕಾಂಗ್ರೆಸ್ನಲ್ಲಿ ಆಂತರಿಕ ಅಸಮಾಧಾನ ಭುಗಿಲೆದ್ದಿದೆ. ಏಕಪಕ್ಷೀಯ ನಿರ್ಧಾರಗಳು ಮತ್ತು ಮುಖ್ಯಮಂತ್ರಿಗಳ ಮೌನದ ಬಗ್ಗೆ ಸಿಎಂ ಆಪ್ತ ಸಚಿವರು ಸಭೆ ನಡೆಸಿ ಚರ್ಚಿಸಿದ್ದಾರೆ. ಈ ನಡುವೆ ಡಿಕೆ ಸಹೋದರರು ದೆಹಲಿಗೆ ತೆರಳಿದ್ದು ತೀವ್ರ ಕುತೂಹಲ ಮೂಡಿಸಿದೆ. ಡಿಸಿಎಂ ಡಿ.ಕೆ. ಶಿವಕುಮಾರ್ ಸಿಎಂ ಆಪ್ತರ ಸಭೆ ಬಗ್ಗೆ ಮಾಹಿತಿ ಇಲ್ಲ ಎಂದಿದ್ದಾರೆ.
- Prasanna Gaonkar
- Updated on: Apr 24, 2026
- 11:38 am
ಖಂಡಿತ ಪಕ್ಷದ ಕೆಲವರನ್ನ ಭೇಟಿ ಮಾಡಿ ಚರ್ಚಿಸಿದ್ದೇನೆ: ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಡಿಕೆಶಿ ಹೇಳಿಕೆ
ಕರ್ನಾಟಕ ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ಕೆಲ ರಾಜಕೀಯ ವಿದ್ಯಮಾನಗಳ ಮಧ್ಯೆ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದು, ಅಲ್ಲಿ ಗೌಪ್ಯವಾಗಿ ವರಿಷ್ಠರನ್ನ ಭೇಟಿಯಾಗಿ ಮಹತ್ವದ ಚರ್ಚೆ ಮಾಡಿದ್ದಾರೆ. ಬಳಿಕ ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಡಿಕೆಶಿ, ದೆಹಲಿಗೆ ನಾನೇನು ಗಾಳಿ ಕುಡಿಯುವುದಕ್ಕೆ ಬಂದಿಲ್ಲ. ಖಂಡಿತ ಪಕ್ಷದ ಕೆಲವರನ್ನ ಭೇಟಿ ಮಾಡಿ ಚರ್ಚಿಸಿದ್ದೇನೆ ಎಂದಿದ್ದಾರೆ.
- Mahesha E
- Updated on: Apr 24, 2026
- 11:42 am
ದೆಹಲಿಗೆ ಹೋಗುವ ಮುನ್ನ ಡಿಕೆಶಿ ವಿಶೇಷ ಪೂಜೆ: ಪ್ರಾರ್ಥನೆಯ ರಹಸ್ಯ ಬಹಿರಂಗಪಡಿಸಿದ ಸ್ವಾಮೀಜಿ
ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆ ಮುಗಿಯುತ್ತಿದ್ದಂತೆಯೆ ಕರ್ನಾಟಕ ಕಾಂಗ್ರೆಸ್ನಲ್ಲಿ (karnataka Congress) ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಒಂದೆಡೆ ಮುಸ್ಲಿಂ ನಾಯಕರ ಅಸಮಾಧಾನ, ಇನ್ನೊಂದೆಡೆ ಸಂಪುಟ ಪುನಾರಚನೆ ಕೂಗು, ಮತ್ತೊಂದೆಡೆ ಇದೀಗ ನಾಯಕತ್ವ ಬದಲಾವಣೆ ಮತ್ತೆ ಮುನ್ನಲೆಗೆ ಬಂದಿದೆ.
- Sanjeev Pandre
- Updated on: Apr 19, 2026
- 5:27 pm
ಸಿದ್ದರಾಮಯ್ಯ ಇಲಿಗಳನ್ನು ಹೊಡೆದರೆ ಡಿಕೆಶಿ ಹುಲಿಗಳನ್ನೇ ಹುಡುಕಿ ಹುಡುಕಿ ಹೊಡೆಯುತ್ತಿದ್ದಾರೆ: ಅಶೋಕ್ ಹೀಗಂದಿದ್ಯಾಕೆ ನೋಡಿ!
ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಸಿದ್ದರಾಮಯ್ಯ ಬೆಂಬಲಿಗರನ್ನು ವ್ಯವಸ್ಥಿತವಾಗಿ ಟಾರ್ಗೆಟ್ ಮಾಡಿ ಹೊರಹಾಕಲಾಗುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಟೀಕಿಸಿದ್ದಾರೆ. ಸಿದ್ದರಾಮಯ್ಯ ಸಣ್ಣ ಇಲಿಗಳನ್ನು ಗುರಿಯಾಗಿಸಿಕೊಂಡರೆ, ಡಿಸಿಎಂ ಡಿಕೆಶಿ ದೊಡ್ಡ ಹುಲಿಗಳನ್ನು ಗುರಿಯಾಗಿಸುತ್ತಿದ್ದಾರೆ ಎಂದು ಅಶೋಕ್ ಹೇಳಿದ್ದಾರೆ. ಇದರ ಜೊತೆಗೆ, ವಿದ್ಯುತ್ ದರ ಏರಿಕೆ ಕುರಿತು ಆಡಳಿತದ ಕುತಂತ್ರದ ಬಗ್ಗೆಯೂ ಧ್ವನಿ ಎತ್ತಿದ್ದಾರೆ.
- Ganapathi Sharma
- Updated on: Apr 18, 2026
- 12:37 pm
ಮುಸ್ಲಿಂ ನಾಯಕರ ಬೆನ್ನಿಗೆ ನಿಂತ ಸತೀಶ್ ಜಾರಕಿಹೊಳಿ, ಡಿಕೆಶಿ ಭೇಟಿಯ ಗುಟ್ಟು ರಟ್ಟು
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಬಳಿಕ ಕಾಂಗ್ರೆಸ್, ಮುಸ್ಲಿಂ ನಾಯಕರ ಬಂಡಾಯ ಎದುರಿಸುತ್ತಿದೆ. ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ವಿಧಾನಪರಿಷತ್ ಸದಸ್ಯರಾದ ಅಬ್ದುಲ್ ಜಬ್ಬಾರ್ ಹಾಗೂ ನಾಸೀರ್ ಅಹ್ಮದ್ ವಿರುದ್ಧ ಕ್ರಮ ಕೈಗೊಂಡಿದ್ದು, ಇದೀಗ ಜಮೀರ್ ಅಹ್ಮದ್ ಸರದಿ ಬಂದಿದೆ. ಆದ್ರೆ, ಜಮೀರ್ ವಿರುದ್ಧ ಕ್ರಮ ಕೈಗೊಳ್ಳುವ ಮೊದಲೇ ಸಚಿವ ಸತೀಶ್ ಜಾರಕಿಹೊಳಿ ರಂಗಪ್ರವೇಶ ಮಾಡಿದ್ದು, ಮುಸ್ಲಿಂ ನಾಯಕರ ಬೆನ್ನಿಗೆ ನಿಂತಿದ್ದಾರೆ.
- Ramesh B Jawalagera
- Updated on: Apr 17, 2026
- 3:37 pm