DK Shivakumar
ಕಾಂಗ್ರೆಸ್ ಪಕ್ಷದ, ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ ಅವರು ರಾಮನಗರ ಜಿಲ್ಲೆಯ ಕನಕಪುರ ಕ್ಷೇತ್ರದ ಶಾಸಕರು. ಇವರ ಅಭಿಮಾನಿಗಳು ಇವರನ್ನು ಕನಕಪುರ ಬಂಡೆ ಎಂದೇ ಕೊಂಡಾಡುತ್ತಾರೆ. ಸದ್ಯ ಕರ್ನಾಟಕದ ಉಪ ಮುಖ್ಯಮಂತ್ರಿಯಾಗಿ ಬ್ರ್ಯಾಂಡ್ ಬೆಂಗಳೂರು ಕನಸು ಹೊತ್ತು ಬೆಂಗಳೂರಿನ ಅಭಿವೃದ್ಧಿಗಾಗಿ ದುಡಿಯುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ 2023ರ ಚುನಾವಣೆಯ ನೇತೃತ್ವ ವಹಿಸಿಕೊಂಡಿದ್ದ ಇವರು ಪಕ್ಷದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.
ಕನಕಪುರ ತಾಲೂಕಿನ ದೊಡ್ಡ ಆಲಹಳ್ಳಿ ಗ್ರಾಮದ ಕೆಂಪೇಗೌಡ ಹಾಗೂ ಗೌರಮ್ಮ ದಂಪತಿಯ ಪ್ರಥಮ ಪುತ್ರರಾಗಿ 15ನೇ ಮೇ, 1962ರಂದು ಡಿಕೆಶಿ ಜನಿಸಿದರು. ಇವರು ಬೆಂಗಳೂರಿನ ಆರ್.ಸಿ. ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾಗಲೇ ಯುವ ಕಾಂಗ್ರೆಸ್ಗೆ ಸೇರಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯಾದ್ರು.
ಮೇಕೆದಾಟು ಯೋಜನೆಗಾಗಿ 160 ಕಿ.ಮೀ ಪಾದಯಾತ್ರೆ, 75ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಸ್ವಾತಂತ್ರ್ಯ ನಡಿಗೆ, ರಾಹುಲ್ ಗಾಂಧಿ ಅವರ ಜೊತೆ ಭಾರತ್ ಜೋಡೋ ಯಾತ್ರೆ, ನಾ ನಾಯಕಿ ಕಾರ್ಯಕ್ರಮದ ಮೂಲಕ ಮಹಿಳೆಯರಿಗೆ ಉತ್ತೇಜನ ನೀಡುವಂತಹ ಯಶಸ್ವಿ ಕಾರ್ಯಕ್ರಮಗಳನ್ನು ಮಾಡಿ ಕಾಂಗ್ರೆಸ್ ಪಕ್ಷದ ಕಟ್ಟಾಳುವಾಗಿ ರಾಜ್ಯದಲ್ಲಿ 136 ಸ್ಥಾನಗಳನ್ನು ಪಡೆಯುವಲ್ಲಿ ಮಹತ್ವದ ಪಾತ್ರವಹಿಸಿದ್ದಾರೆ.
ಯತೀಂದ್ರ ಕಾಂಗ್ರೆಸ್ ಪಕ್ಷದ ಹೈಕಮಾಂಡ್: ಡಿಕೆ ಶಿವಕುಮಾರ್ ಮಾತಿನ ಮರ್ಮಾವೇನು?
ಸಿಎಂ ಸಿದ್ದರಾಮಯ್ಯ ಐದು ವರ್ಷ ಪೂರ್ಣಾವಧಿ ಸಿಎಂ ಆಗಿರುತ್ತಾರೆಂಬ ಯತೀಂದ್ರ ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಟಾಂಗ್ ನೀಡಿದ್ದಾರೆ. ಯತೀಂದ್ರರೇ ಹೈಕಮಾಂಡ್ ಎಂದು ವ್ಯಂಗ್ಯವಾಡಿದ ಡಿ.ಕೆ. ಶಿವಕುಮಾರ್, ಅವರ ಹೇಳಿಕೆಯನ್ನು ಗೌರವದಿಂದ ಸ್ವೀಕರಿಸೋಣ. ನಾನು ಈ ಬಗ್ಗೆ ಯಾರಿಗೂ ಪ್ರತಿಕ್ರಿಯೆ ಕೊಡಲ್ಲ ಎಂದಿದ್ದಾರೆ.
- Pruthviraj
- Updated on: Feb 6, 2026
- 3:36 pm
ಸಿದ್ದರಾಮಯ್ಯ Vs ಡಿ.ಕೆ. ಶಿವಕುಮಾರ್: ಎಐಸಿಸಿ ನಾಯಕರ ಮೌನದ ಬಗ್ಗೆ ‘ಕೈ ‘ ಶಾಸಕರಲ್ಲೇ ಬೇಸರ!
ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಗೊಂದಲ ಮತ್ತೆ ಭುಗಿಲೇಳುವ ಸಾಧ್ಯತೆ ಇದೆ. ಹೈಕಮಾಂಡ್ ಮೌನದಿಂದ ಶಾಸಕರು ಸಿಎಂ ಮತ್ತು ಡಿಸಿಎಂ ನಡುವೆ ಸಿಲುಕಿ ಅಡಕತ್ತರಿ ಸ್ಥಿತಿ ಎದುರಿಸುತ್ತಿದ್ದಾರೆ. ಸ್ಥಳೀಯ ಸಂಸ್ಥೆ ಚುನಾವಣೆ ಸಮೀಪಿಸುತ್ತಿದ್ದರೂ ನಾಯಕತ್ವ ಬದಲಾವಣೆ ಕುರಿತ ಗೊಂದಲಕ್ಕೆ ಉತ್ತರ ಸಿಗದ ಕಾರಣ, ಮಲ್ಲಿಕಾರ್ಜುನ ಖರ್ಗೆ ಮತ್ತು ಕೆ.ಸಿ. ವೇಣುಗೋಪಾಲ್ ಅವರ ಮೌನದ ಬಗ್ಗೆ ಸ್ವಪಕ್ಷದ ಶಾಸಕರೇ ಬೇಸರ ವ್ಯಕ್ತಪಡಿಸಿದ್ದಾರೆ. ಈ ಆಂತರಿಕ ಕಚ್ಚಾಟ ಪಕ್ಷಕ್ಕೆ ಹಾನಿಕರವಾಗಬಹುದು ಎಂಬ ಆತಂಕ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
- Prasanna Gaonkar
- Updated on: Feb 5, 2026
- 11:49 am
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಧಾನಸಭೆ ಅಧಿವೇಶನದಲ್ಲಿ (Karnataka Assembly Session) ಇಂದು (ಫೆಬ್ರವರಿ 02) ಕಾಂಗ್ರೆಸ್ ಅಧಿಕಾರ ಹಂಚಿಕೆ ಬಗ್ಗೆಯೂ ಸಹ ಪ್ರಸ್ತಾಪವಾಗಿದ್ದು, ಈ ಬಗ್ಗೆ ಆಸಕ್ತಿಕರ ಚರ್ಚೆ ನಡೆದಿದೆ. ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಹಾಗೂ ವಿರೋಧ ಪಕ್ಷದ ಸದಸ್ಯರ ನಡುವೆ ಭಾರೀ ಚರ್ಚೆಯಾಗಿದೆ. ಇನ್ನೂ ಇದೇ ವೇಲೆ ವಿರೋಧ ಪಕ್ಷದ ನಾಯಕ ಅಶೋಕ್ ಅವರು ಮಾತನಾಡಿ ರಾಜ್ಯದಲ್ಲಿ ಕಾನುನು ಸುವ್ಯವಸ್ಥೆ ಹದಗೆಟ್ಟಿದೆ. ಸಿಎಂ ಸಹ ಅಸಹಾಯಕರಾಗಿದ್ದಾರೆ ಎಂದರು.
- Ramesh B Jawalagera
- Updated on: Feb 2, 2026
- 7:21 pm
ಜಿದ್ದಿಗೆ ಬಿದ್ದ ಸಿದ್ದರಾಮಯ್ಯ-ಡಿಕೆಶಿ: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಚುನಾವಣೆ ಮುಂದೂಡಿಕೆ
ರಾಜ್ಯ ರಾಜಕಾರಣದ ಕೇಂದ್ರಬಿಂದುವಾಗಿರುವ ಸಹಕಾರ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನದ ಚುನಾವಣೆ ಈಗ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ಗೆ ಪ್ರತಿಷ್ಠೆಯಾಗಿದೆ. ಸಿದ್ದರಾಮಯ್ಯ ಬಣದಿಂದ ಕೆ.ಎನ್. ರಾಜಣ್ಣ ಮತ್ತೊಮ್ಮೆ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಬೇಕೆಂದು ಪಟ್ಟು ಹಿಡಿದಿದ್ದಾರೆ. ಇನ್ನೊಂದೆಡೆ ಡಿಕೆ ಶಿವಕುಮಾರ್ ಬಣದ ನಾಯಕರು ತಾವು ಆಗುತ್ತೇವೆಂದು ಹಠಕ್ಕೆ ಬಿದ್ದಿದ್ದಾರೆ. ಹೀಗಾಗಿ ಸಿಎಂ ಡಿಸಿಎಂ ಬಣ ರಾಜಕೀಯ ತೀವ್ರ ಸ್ವರೂಪ ಪಡೆದುಕೊಂಡಿದ್ದರಿಂದ ಇಂದು (ಜನವರಿ 29) ನಡೆಯಬೇಕಿದ್ದ ಅಪೆಕ್ಸ್ ಬ್ಯಾಂಗ್ ಅಧ್ಯಕ್ಷ ಚುನಾವಣೆ ಮುಂದೂಡಲಾಗಿದೆ.
- Ramesh B Jawalagera
- Updated on: Jan 29, 2026
- 3:43 pm
ರಾಜ್ಯದ ಎಲ್ಲ ಗ್ರಾ.ಪಂ.ಗಳಿಗೆ ಮಹಾತ್ಮ ಗಾಂಧಿ ಎಂದು ಹೆಸರು ಇಡುತ್ತೇವೆ: ಡಿಕೆಶಿ ಘೋಷಣೆ
ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಾ ಗಾಂಧಿ ಹೆಸರು ಇಡುವುದಾಗಿ ಡಿಕೆಶಿ ಘೋಷಿಸಿದ್ದಾರೆ. ಕೇಂದ್ರ ಸರ್ಕಾರ ಗ್ರಾಮ ಪಂಚಾಯಿತಿಗಳನ್ನು ದುರ್ಬಲಗೊಳಿಸುತ್ತಿದೆ ಎಂದು ಡಿಕೆಶಿ ಆರೋಪಿಸಿದ್ದು, ಸಿಎಂ ಸಿದ್ದರಾಮಯ್ಯ ಸಹ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅದರೊಂದಿಗೆ ಮನ್ರೇಗಾ ಯೋಜನೆ ಮರುಸ್ಥಾಪನೆಗೆ ಆಗ್ರಹಿಸಿ ಸಿಎಂ ಜೊತೆ ಸೇರಿ ಕೈ ನಾಯಕರು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ.
- Bhavana Hegde
- Updated on: Jan 27, 2026
- 2:42 pm
ನರೇಗಾ ಹೆಸರು ಬದಲಾವಣೆ ವಿರೋಧಿಸಿ ಕಾಂಗ್ರೆಸ್ ಹೋರಾಟಕ್ಕೂ ಮುನ್ನ ರಣದೀಪ್ ಸುರ್ಜೇವಾಲ ಬೆಂಗಳೂರಿಗೆ ದಿಢೀರ್ ಎಂಟ್ರಿ!
ಕೇಂದ್ರ ಸರ್ಕಾರ ನರೇಗಾ ಯೋಜನೆಯ ಹೆಸರು ಬದಲಾವಣೆ ಮಾಡಿರುವುದನ್ನು ವಿರೋಧಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ನೇತೃತ್ವದಲ್ಲಿ ಫ್ರೀಡಂ ಪಾರ್ಕ್ನಿಂದ ಲೋಕಭವನದತ್ತ ಮೆರವಣಿಗೆ ನಡೆಯಲಿದೆ. ಇದೇ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಬೆಂಗಳೂರಿಗೆ ದಿಢೀರ್ ಎಂಟ್ರಿ ಕೊಟ್ಟಿರುವುದು ಕುತೂಹಲಕ್ಕೆ ಕಾರಣವಾಗಿದೆ.
- Ganapathi Sharma
- Updated on: Jan 27, 2026
- 6:31 am
ಕಾಂಗ್ರೆಸ್ ಲೋಕಭವನ ಚಲೋಗೆ ಆಕ್ಷೇಪ: ಶಾಸಕ ಸುರೇಶ್ ಕುಮಾರ್ರಿಂದ ಸಾಲು ಸಾಲು ಪ್ರಶ್ನೆ
ಮನ್ರೇಗಾ ಯೋಜನೆ ಹೆಸರು ಬದಲಾವಣೆಗೆ ಆಕ್ಷೇಪಿಸಿ ಕಾಂಗ್ರೆಸ್ 'ಲೋಕಭವನ ಚಲೋ' ಪ್ರತಿಭಟನೆಗೆ ಕರೆ ನೀಡಿದೆ. ಆದರೆ, ವಿಧಾನಸಭೆ ಅಧಿವೇಶನದ ಸಮಯದಲ್ಲಿ ಆಡಳಿತ ಪಕ್ಷವೇ ಪ್ರತಿಭಟನೆ ನಡೆಸುವುದಕ್ಕೆ ಬಿಜೆಪಿ ಶಾಸಕ ಸುರೇಶ್ ಕುಮಾರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹೈಕೋರ್ಟ್ ಆದೇಶ ಉಲ್ಲಂಘಿಸಿ ರಸ್ತೆ ಪ್ರತಿಭಟನೆ ನಡೆಸುವುದು ಸರಿಯೇ? ಉಳಿದವರಿಗೂ ಈ ರೀತಿ ಪ್ರತಿಭಟನೆಗೆ ಅವಕಾಶ ಸಿಗಲಿದೆಯೇ ಎಂದು ಪ್ರಶ್ನಿಸಿದ್ದಾರೆ.
- Kiran Haniyadka
- Updated on: Jan 26, 2026
- 7:57 pm
ನರೇಗಾ ಹೆಸರು ಬದಲಾವಣೆ ವಿರೋಧಿಸಿ ನಾಳೆ ಕಾಂಗ್ರೆಸ್ನಿಂದ ರಾಜಭವನ ಚಲೋ: ಡಿಕೆ ಶಿವಕುಮಾರ್ ಹೇಳಿದ್ದೇನು ನೋಡಿ
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಫ್ರೀಡಂಪಾರ್ಕ್ನಿಂದ ರಾಜಭವನ ಚಲೋ ಕಾರ್ಯಕ್ರಮ ಘೋಷಿಸಿದ್ದಾರೆ. ನರೇಗಾ ಯೋಜನೆಯನ್ನು ದುರ್ಬಲಗೊಳಿಸುವ ಜನವಿರೋಧಿ ಕಾನೂನನ್ನು ಖಂಡಿಸಿ ಕಾಂಗ್ರೆಸ್ ಈ ಹೋರಾಟ ಆಯೋಜಿಸಿದೆ. ಪಕ್ಷದ ಶಾಸಕರು, ಕಾರ್ಯಕರ್ತರು ರಾಜ್ಯಾದ್ಯಂತ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮಹಾತ್ಮ ಗಾಂಧೀಜಿ ರೂಪಿಸಿದ ಉದ್ಯೋಗ ಖಾತ್ರಿ ಯೋಜನೆಯನ್ನು ಮರು ಜಾರಿಗೊಳಿಸಲು ಇದು ಕರೆ ನೀಡುತ್ತದೆ.
- Ganapathi Sharma
- Updated on: Jan 26, 2026
- 1:02 pm
DK Shivakumar on Davos Tour: ವಿಶ್ವ ಆರ್ಥಿಕ ಸಮ್ಮೇಳನ ಮುಗಿಸಿ ದಾವೋಸ್ನಿಂದ ಬಂದ ಡಿಕೆಶಿ ಹೇಳಿದ್ದೇನು?
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ದಾವೋಸ್ ವರ್ಲ್ಡ್ ಎಕನಾಮಿಕ್ ಫೋರಂ ಅನುಭವ ಹಂಚಿಕೊಳ್ಳುತ್ತಾ ಕರ್ನಾಟಕದಲ್ಲಿ ಹೂಡಿಕೆಗೆ 45 ಕಂಪನಿಗಳು ಆಸಕ್ತಿ ತೋರಿಸಿವೆ ಎಂದಿದ್ದಾರೆ. ರಾಜ್ಯದಾದ್ಯಂತ ಸಮಗ್ರ ಮೊಬಿಲಿಟಿ ವ್ಯವಸ್ಥೆ, ಬೆಂಗಳೂರು ಅಭಿವೃದ್ಧಿ, ಟ್ರಾಫಿಕ್ ನಿರ್ವಹಣೆಗೆ ಯೋಜನೆ ರೂಪಿಸಲಾಗಿದೆ ಎಂಬ ಮಾಹಿತಿ ಹಂಚಿಕೊಂಡ ಡಿಸಿಎಂ, ಬಿಡದಿ ಬಳಿ ಐಟಿ ಸಿಟಿ ನಿರ್ಮಾಣಕ್ಕೆ ರೈತರಿಂದ ಉತ್ತಮ ಸ್ಪಂದನೆ ಸಿಕ್ಕಿದೆ ಎಂದೂ ತಿಳಿಸಿದ್ದಾರೆ.
- Bhavana Hegde
- Updated on: Jan 25, 2026
- 1:14 pm
ದಾವೋಸ್ನಲ್ಲಿ ಭಾರತ ಹೊಗಳಿದ ಡಿ.ಕೆ. ಶಿವಕುಮಾರ್: ರಾಹುಲ್ ಕಾಲೆಳೆದ ಕರ್ನಾಟಕ ಬಿಜೆಪಿ
ದಾವೋಸ್ನಲ್ಲಿ ಡಿ.ಕೆ. ಶಿವಕುಮಾರ್ ಅವರು ಭಾರತದ ಆರ್ಥಿಕತೆ ಪ್ರಗತಿಯನ್ನು ಶ್ಲಾಘಿಸಿರೋದು ಹಲವರ ಹುಬ್ಬೇರಿಸಿದೆ. ಇದೇ ವಿಚಾರವನ್ನು ಇಟ್ಟುಕೊಂಡು ಕರ್ನಾಟಕ ಬಿಜೆಪಿ ರಾಹುಲ್ ಗಾಂಧಿ ಕಾಲೆಳಿದಿದೆ. ಸತ್ತಿರೋದು ಭಾರತದ ಆರ್ಥಿಕತೆಯಲ್ಲ, ನಿಮ್ಮ ಹೈಕಮಾಂಡ್ನ ವಾಸ್ತವದ ಜ್ಞಾನ ಎಂಬುದನ್ನು ದೃಢಪಡಿಸಿದ್ದಕ್ಕೆ ಡಿಕೆಶಿಗೆ ಧನ್ಯವಾದ ಎಂದಿದೆ. ಭಾರತದದ್ದು ‘ಸತ್ತ ಆರ್ಥಿಕತೆ’ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಗೆ ಈ ಹಿಂದೆ ರಾಹುಲ್ ಗಾಂಧಿ ಕೂಡ ಸಹಮತ ವ್ಯಕ್ತಪಡಿಸಿದ್ದಿದ್ದು ಭಾರಿ ಚರ್ಚೆಗೆ ಗ್ರಾಸವಾಗಿತ್ತು.
- Prasanna Hegde
- Updated on: Jan 23, 2026
- 12:08 pm
ದಾವೋಸ್ನಲ್ಲೂ ಕರ್ನಾಟಕ ರಾಜಕಾರಣದ್ದೇ ಚರ್ಚೆ: ಸಿಎಂ ಕುರ್ಚಿ ಫೈಟ್ನದ್ದೇ ಸದ್ದು
ದಾವೋಸ್ನಲ್ಲಿ ನಡೆಯುತ್ತಿರುವ ವರ್ಡ್ ಎಕನಾಮಿಕ್ ಫೋರಂನಲ್ಲಿ ಭಾಗಿಯಾಗಿರುವ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕ ಸಿಎಂ ಗಾದಿ ವಿಚಾರವಾಗಿ ಮಾತನಾಡಿ, ಹೈಕಮಾಂಡ್ ತನ್ನನ್ನು ನಿರಾಶೆಗೊಳಿಸುವುದಿಲ್ಲ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 140 ಶಾಸಕರ ಬೆಂಬಲ ತನಗಿದೆ ಎಂದು ಹೇಳಿದ ಅವರು, ಇದು ಮಾಧ್ಯಮದಲ್ಲಿ ಚರ್ಚಿಸುವ ವಿಷಯವಲ್ಲ. ಪಕ್ಷದ ವರಿಷ್ಠರ ನಿರ್ಧಾರವೇ ಅಂತಿಮ ಎಂದಿದ್ದಾರೆ.
- Prasanna Hegde
- Updated on: Jan 22, 2026
- 2:43 pm
ಮೂರು ದಿನಗಳಿಂದ ದೆಹಲೀಲಿದ್ದರೂ ಡಿಕೆ ಶಿವಕುಮಾರ್ಗೆ ಸಿಗುತ್ತಿಲ್ಲ ರಾಹುಲ್ ಗಾಂಧಿ ಭೇಟಿ ಅವಕಾಶ!
ಮೈಸೂರಿನಲ್ಲಿ ರಾಹುಲ್ ಗಾಂಧಿ ದೆಹಲಿಗೆ ಕರೆಸಿ ಮಾತನಾಡುವ ಭರವಸೆ ನೀಡಿದ್ದರೂ, ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ದೆಹಲಿಯಲ್ಲಿ ರಾಹುಲ್ ಗಾಂಧಿ ಭೇಟಿಗೆ ಮತ್ತೆ ಅವಕಾಶ ಸಿಗುತ್ತಿಲ್ಲ. ಶುಕ್ರವಾರ ಒಮ್ಮೆ ಮಾತನಾಡಲು ಸಿಕ್ಕಿದ್ದುಬಿಟ್ಟರೆ ಆ ಬಳಿಕ ರಾಹುಲ್ ಇತರ ಕಾರ್ಯಗಳಲ್ಲಿ ವ್ಯಸ್ತರಾಗಿದ್ದಾರೆ. ದಾವೋಸ್ ಪ್ರವಾಸ ರದ್ದುಗೊಳಿಸಿ ದೆಹಲಿಯಲ್ಲಿ ರಾಹುಲ್ ಭೇಟಿಗಾಗಿ ಕಾದಿದ್ದ ಡಿಕೆಶಿ ಇಂದು ಸಂಜೆ ಬೆಂಗಳೂರಿಗೆ ಮರಳಲಿದ್ದಾರೆ.
- Ganapathi Sharma
- Updated on: Jan 19, 2026
- 1:09 pm