DK Shivakumar
ಕಾಂಗ್ರೆಸ್ ಪಕ್ಷದ, ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ ಅವರು ರಾಮನಗರ ಜಿಲ್ಲೆಯ ಕನಕಪುರ ಕ್ಷೇತ್ರದ ಶಾಸಕರು. ಇವರ ಅಭಿಮಾನಿಗಳು ಇವರನ್ನು ಕನಕಪುರ ಬಂಡೆ ಎಂದೇ ಕೊಂಡಾಡುತ್ತಾರೆ. ಸದ್ಯ ಕರ್ನಾಟಕದ ಉಪ ಮುಖ್ಯಮಂತ್ರಿಯಾಗಿ ಬ್ರ್ಯಾಂಡ್ ಬೆಂಗಳೂರು ಕನಸು ಹೊತ್ತು ಬೆಂಗಳೂರಿನ ಅಭಿವೃದ್ಧಿಗಾಗಿ ದುಡಿಯುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ 2023ರ ಚುನಾವಣೆಯ ನೇತೃತ್ವ ವಹಿಸಿಕೊಂಡಿದ್ದ ಇವರು ಪಕ್ಷದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.
ಕನಕಪುರ ತಾಲೂಕಿನ ದೊಡ್ಡ ಆಲಹಳ್ಳಿ ಗ್ರಾಮದ ಕೆಂಪೇಗೌಡ ಹಾಗೂ ಗೌರಮ್ಮ ದಂಪತಿಯ ಪ್ರಥಮ ಪುತ್ರರಾಗಿ 15ನೇ ಮೇ, 1962ರಂದು ಡಿಕೆಶಿ ಜನಿಸಿದರು. ಇವರು ಬೆಂಗಳೂರಿನ ಆರ್.ಸಿ. ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾಗಲೇ ಯುವ ಕಾಂಗ್ರೆಸ್ಗೆ ಸೇರಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯಾದ್ರು.
ಮೇಕೆದಾಟು ಯೋಜನೆಗಾಗಿ 160 ಕಿ.ಮೀ ಪಾದಯಾತ್ರೆ, 75ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಸ್ವಾತಂತ್ರ್ಯ ನಡಿಗೆ, ರಾಹುಲ್ ಗಾಂಧಿ ಅವರ ಜೊತೆ ಭಾರತ್ ಜೋಡೋ ಯಾತ್ರೆ, ನಾ ನಾಯಕಿ ಕಾರ್ಯಕ್ರಮದ ಮೂಲಕ ಮಹಿಳೆಯರಿಗೆ ಉತ್ತೇಜನ ನೀಡುವಂತಹ ಯಶಸ್ವಿ ಕಾರ್ಯಕ್ರಮಗಳನ್ನು ಮಾಡಿ ಕಾಂಗ್ರೆಸ್ ಪಕ್ಷದ ಕಟ್ಟಾಳುವಾಗಿ ರಾಜ್ಯದಲ್ಲಿ 136 ಸ್ಥಾನಗಳನ್ನು ಪಡೆಯುವಲ್ಲಿ ಮಹತ್ವದ ಪಾತ್ರವಹಿಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಭೇಟಿ ಬೆನ್ನಲ್ಲೇ ಡಿಕೆ ಶಿವಕುಮಾರ್ ಬಣದಲ್ಲಿ ಹೆಚ್ಚಾಯ್ತು ಉತ್ಸಾಹ!
ಸಂಕ್ರಾಂತಿ ಹಬ್ಬ ಮುಗಿದಿದೆ. ಕಾಂಗ್ರೆಸ್ನಲ್ಲಿ ಭುಗಿಲೆದ್ದಿರುವ ಕ್ರಾಂತಿ ಮಾತ್ರ ಮುಗಿಯುತ್ತಿಲ್ಲ. ಸಂಕ್ರಾಂತಿ ಕಳೆದು ಶಿವರಾತ್ರಿ ಬಂದರೂ ಕುರ್ಚಿ ಕಾಳಗ ಮುಂದುವರಿಯುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ. ಆದರೆ, ಡಿಸಿಎಂ ಡಿಕೆ ಶಿವಕುಮಾರ್ ಬಣ ಮಾತ್ರ ಕ್ರಾಂತಿಯ ನಿರೀಕ್ಷೆಯಲ್ಲಿದೆ. ದಕ್ಷಿಣಾಯಣದಿಂದ ಉತ್ತರಾಯಣ ಕಡೆಗೆ ಸೂರ್ಯ ಪಥ ಬದಲಿಸಿದಂತೆ ನಮ್ಮ ಪಥವೂ ದೆಹಲಿ ಕಡೆಗೆ ಬದಲಾಗಿದೆ ಎನ್ನುತ್ತಿರುವ ಡಿಕೆಶಿ ಬಣ ಪಟ್ಟ ಸಿಗುವ ನಿರೀಕ್ಷೆಯಲ್ಲಿದೆ.
- Prasanna Gaonkar
- Updated on: Jan 17, 2026
- 7:57 am
ಕೊನೆಗೂ ಕೂಡಿಬಂತು ಟೈಮ್: ರಾಹುಲ್ ಗಾಂಧಿ ಭೇಟಿ ಮಾಡಿದ್ದಕ್ಕೆ ಡಿಕೆಶಿ ಫುಲ್ ಖುಷ್
ಸಂಕ್ರಾಂತಿಗೆ ಸೂರ್ಯ ಪಥ ಬದಲಾಗಿದೆ. ಹಾಗೆಯೇ ಕರ್ನಾಟಕ ಕಾಂಗ್ರೆಸ್ನೊಳಗೂ ನಾಯಕತ್ವ ಬದಲಾವಣೆಯ ಚರ್ಚೆ ಗರಿಗೆದರಿದೆ. ಸಂಕ್ರಾಂತಿ ಕಳೆದು ಶಿವರಾತ್ರಿ ಬಂದರೂ ಕುರ್ಚಿ ಕಾಳಗ ಮುಂದುವರೆಯೋ ಎಲ್ಲ ಲಕ್ಷಣಗಳು ಗೋಚರಿಸ್ತಿವೆ. ಯಾಕಂದ್ರೆ ಅಸ್ಸಾಂ ಚುನಾವಣೆ ನೆಪದಲ್ಲಿ ದೆಹಲಿಗೆ ತೆರಳಿರುವ ಡಿಕೆ ಶಿವಕುಮಾರ್ ಅವರಿಗೆ ರಾಹುಲ್ ಗಾಂಧಿ ಭೇಟಿಗೆ ಅವಕಾಶ ಸಿಕ್ಕಿದೆ. ಹೌದು....ಕಳೆದ ಹಲವು ದಿನಗಳಿಂದ ರಾಹುಲ್ ಭೇಟಿಗೆ ಡಿಕೆ ಶಿವಕುಮಾರ್ ಕಸರತ್ತು ನಡೆಸಿದ್ದರು. ಆದ್ರೆ, ಅದು ಸಾಧ್ಯವಾಗದಕ್ಕೆ ದೆಹಲಿಯಿಂದ ಬರಿಗೈನಲ್ಲಿ ವಾಪಸ್ ಆಗುತ್ತಿದ್ದರು. ಆದ್ರೆ, ಇಂದು(ಜನವರಿ 16) ರಾಹುಲ್ ಗಾಂಧಿ ಭೇಟಿಗೆ ಸಮಯ ಕೂಡಿಬಂದಿದೆ. ಅಸ್ಸಾಂ ಚುನಾವಣೆ ಸಭೆ ಬಳಿಕ ಡಿಕೆ ಶಿವಕುಮಾರ್ ಅವರು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದ್ದು, ಖುಷಿ ಖುಷಿಯಲ್ಲೇ ರಾಹುಲ್ ನಿವಾಸದಿಂದ ವಾಪಸ್ ಆಗಿದ್ದಾರೆ.
- Ramesh B Jawalagera
- Updated on: Jan 16, 2026
- 10:54 pm
ಕಾಂಗ್ರೆಸ್ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೂ ಮೊದಲೇ ರಾಹುಲ್ ಗಾಂಧಿ ಭೇಟಿಯಾದ ಕೆಜೆ ಜಾರ್ಜ್
ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವಕ್ಕಾಗಿ ನಡೆಯುತ್ತಿರುವ ಮುಸುಕಿನ ಗುದ್ದಾಟ (Karnataka Power Tussle) ಮುಂದುವರೆದಿದೆ. ಸಿಎಂ ಆಗಬೇಕೆಂದು ಹಠಕ್ಕೆ ಬಿದ್ದಿರುವ ಡಿಸಿಎಂ ಡಿಕೆ ಶಿವಕುಮಾರ್ (DK Shivakumar), ರಾಹುಲ್ ಗಾಂಧಿ ಮನವೊಲಿಕೆಗೆ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಸದ್ಯ ದೆಹಲಿಯಲ್ಲಿರುವ ಡಿಕೆ ಶಿವಕುಮಾರ್, ರಾಹುಲ್ ಗಾಂಧಿ(Rahul Gandhi) ಭೇಟಿ ಮಾಡಿ ನಾಯಕತ್ವ ಬದಲಾವಣೆ ಬಗ್ಗೆ ಮಾತುಕತೆ ನಡೆಸಲು ಪ್ರಯತ್ನಿಸುತ್ತಿದ್ದಾರೆ. ಆದ್ರೆ, ಇದರ ನಡುವೆ ಸಚಿವ ಕೆಜೆ ಜಾರ್ಜ್ (KJ George) ಸದ್ದಿಲ್ಲದೇ ಇಂದು (ಜನವರಿ 16)ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ್ದು, ಸಂಚಲನ ಮೂಡಿಸಿದೆ.
- Ramesh B Jawalagera
- Updated on: Jan 16, 2026
- 7:09 pm
ಡಿಕೆ ಶಿವಕುಮಾರ್ ದೆಹಲಿ ಪ್ರವಾಸ: ರಾಹುಲ್ ಗಾಂಧಿ ಭೇಟಿ ಬಗ್ಗೆ ಸ್ಫೋಟಕ ಹೇಳಿಕೆ
ಸಂಕ್ರಮಣದ ದಿನ ಸೂರ್ಯ ತನ್ನ ಪಥ ಬದಲಿಸಿದ್ದಾನೆ. ಆದ್ರೆ ಸಂಕ್ರಾಂತಿಗೆ (Sankranthi) ಕರ್ನಾಟಕ ಕಾಂಗ್ರೆಸ್ನಲ್ಲಿ (Karnataka Congress) ಪಥಬದಲಾಗಿ ಕ್ರಾಂತಿಯಾಗುತ್ತೆ ಎನ್ನುವ ಗೊಂದಲಕ್ಕೆ ತೆರೆಬಿದ್ದಿಲ್ಲ. ಅಧಿಕಾರ ಹಂಚಿಕೆಗೆ . ಮೊನ್ನೆ ಮೈಸೂರಿಗೆ (Mysuru) ಬಂದಿದ್ದ ರಾಹುಲ್ ಗಾಂಧಿಯನ್ನು (Rahul Gandhi) ವಿಮಾನ ನಿಲ್ದಾಣದಲ್ಲೇ ಸಿಎಂ, ಡಿಸಿಎಂ ಭೇಟಿ ಮಾಡಿದ್ರು. ಅದರಲ್ಲೂ ಡಿಕೆಶಿ ಪ್ರತ್ಯೇಕವಾಗಿ ನಿಂತು ಅಧಿಕಾರ ಹಂಚಿಕೆ ಗೊಂದಲವನ್ನು ಬಗೆಹರಿಸುವಂತೆ ಒತ್ತಾಯಿಸಿದ್ದರು. ಏರ್ಪೋರ್ಟ್ ರನ್ವೇನಲ್ಲಿ ಇಂತಹ ಚರ್ಚೆ ಬೇಡ. ದೆಹಲಿಗೆ ಬನ್ನಿ ಎಂದು ರಾಹುಲ್ ಗಾಂಧಿ ಹೇಳಿದ್ದರು. ಅದರಂತೆ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ.
- Ramesh B Jawalagera
- Updated on: Jan 16, 2026
- 3:03 pm
ಇಂದಿನಿಂದ 2 ದಿನಗಳ ಕಾಲ ಡಿಕೆ ಶಿವಕುಮಾರ್ ದೆಹಲಿ ಪ್ರವಾಸ: ರಾಹುಲ್ ಗಾಂಧಿ ಭೇಟಿಯಾಗ್ತಾರಾ, ಸಿಗುತ್ತಾ ಕುರ್ಚಿ ಅಭಯ?
ಡಿಸಿಎಂ ಡಿಕೆ ಶಿವಕುಮಾರ್ ಇಂದಿನಿಂದ 2 ದಿನಗಳ ಕಾಲ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ. ರಾಹುಲ್ ಗಾಂಧಿ ಮೈಸೂರಿಗೆ ಬಂದು ಹೋದ ಬೆನ್ನಲ್ಲೇ ಡಿಕೆಶಿ ದೆಹಲಿ ಯಾತ್ರೆ ಕುತೂಹಲ ಕೆರಳಿಸಿದೆ. ಅಸ್ಸಾಂ ಚುನಾವಣೆ ನೆಪವಾದರೂ ಕುರ್ಚಿ ಆಟದ್ದೇ ಜಪ ರಾಜ್ಯ ಕಾಂಗ್ರೆಸ್ನಲ್ಲಿ ಜೋರಾಗಿದೆ. ಇದೀಗ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಚಟುವಟಿಕೆಗಳು ಮತ್ತೆ ಗರಿಗೆದರಿವೆ.
- Prasanna Gaonkar
- Updated on: Jan 16, 2026
- 6:41 am
ಡಿಕೆಶಿ ಬಳಿ ದೆಹಲಿಗೆ ಬನ್ನಿ ಎಂದಿದ್ದರೂ ರಾಹುಲ್ ಗಾಂಧಿ ಸಿಗೋದು ಅನುಮಾನ: ಕಾಂಗ್ರೆಸ್ನಲ್ಲಿ ಸದ್ಯಕ್ಕಿಲ್ಲ ಕ್ರಾಂತಿ!
ರಾಹುಲ್ ಗಾಂಧಿ ‘ಕಮ್ ಟು ದೆಹಲಿ’ ಎಂದರೂ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಭೇಟಿ ಕಷ್ಟಕರವಾಗಿದೆ. ಮುಖ್ಯಮಂತ್ರಿಗಳು ವಿಶೇಷ ಅಧಿವೇಶನ ಕರೆದಿರುವುದು ಅವರ ದೆಹಲಿ ಭೇಟಿಗೆ ಅಡ್ಡಿಯಾಗಿದೆ. ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಲಿದ್ದು, ಸಮಸ್ಯೆ ಪರಿಹಾರ ಅನಿಶ್ಚಿತವಾಗಿದೆ.
- Pramod Shastri G
- Updated on: Jan 15, 2026
- 11:03 am
ರಾಹುಲ್ ಗಾಂಧಿ ಭೇಟಿ ಬೆನ್ನಲ್ಲೇ ಡಿಕೆ ಶಿವಕುಮಾರ್ ಮಾರ್ಮಿಕ ಸಂದೇಶ! ಬಿಗ್ ಹಿಂಟ್ ಕೊಟ್ರಾ ಡಿಸಿಎಂ?
ಹೈಕಮಾಂಡ್ ನಾಯಕ ರಾಹುಲ್ ಗಾಂಧಿ ಭೇಟಿ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಮಾರ್ಮಿಕ ಸಂದೇಶ ಪ್ರಕಟಿಸಿದ್ದು, ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದೆ. ಸಿಎಂ ಸ್ಥಾನದ ಚರ್ಚೆಗಳ ಬೆನ್ನಲ್ಲೇ ಡಿಕೆ ಶಿವಕುಮಾರ್ ಬಿಗ್ ಹಿಂಟ್ ಕೊಟ್ಟರಾ ಎಂಬ ಪ್ರಶ್ನೆ ಮೂಡಿಸಿದೆ.
- Ganapathi Sharma
- Updated on: Jan 14, 2026
- 9:19 am
ಕಾಂಗ್ರೆಸ್ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಗಾಂಧಿ ಮಹತ್ವದ ಸಂದೇಶ
ಸಿಎಂ ಹುದ್ದೆ ಬೇಕೆಂದು ಪಟ್ಟು ಹಿಡಿದಿರುವ ಡಿಸಿಎಂ ಡಿಕೆ ಶಿವಕುಮಾರ್, ಈ ಹಿಂದಿನಿಂದಲೂ ದೆಹಲಿಗೆ ಹೋಗಿ ರಾಹುಲ್ ಭೇಟಿಗೆ ಯತ್ನಿಸಿದ್ದರೂ ಅದು ಸಾಧ್ಯವಾಗಿರಲಿಲ್ಲ. ಆದ್ರೆ, ಇಂದು(ಜನವರಿ 13) ಕೊನೆಗೂ ಮೈಸೂರಿನಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುವ ಅವಕಾಶ ಸಿಕ್ಕಿದೆ. ಹೌದು...ತಮಿಳುನಾಡಿಗೆ ತೆರಳು ದೆಹಲಿಯಿಂದ ವಿಮಾನದ ಮೂಲಕ ಮೈಸೂರಿಗೆ ಬಂದಿದ್ದ ರಾಹುಲ್ ಗಾಂಧಿಯವರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಸ್ವಾಗತಿಸಿದರು. ಆದ್ರೆ, ಈ ವೇಳೆ ಡಿಕೆ ಶಿವಕುಮಾರ್ ಅವರು ಸಿಕ್ಕಿದ್ದೇ ಚಾನ್ಸ್ ಎಂದು ರಾಹುಲ್ ಗಾಂಧಿಯವರನ್ನು ಸೈಡಿಗೆ ಕರೆದುಕೊಂಡು ಹೋಗಿ ಮಾತುಕತೆ ನಡೆಸಿದ್ದಾರೆ. ಇದು ಸಿಎಂ ಕುರ್ಚಿಯ ಚರ್ಚೆಯೇ ಎಂಬ ಕುತೂಹಲಕ್ಕೆ ಕಾರಣವಾಗಿದೆ.
- Ramesh B Jawalagera
- Updated on: Jan 13, 2026
- 7:27 pm
ಮೈಸೂರಿನಲ್ಲಿ ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗಿ ರಾಹುಲ್ ರಹಸ್ಯ ಮಾತು!
ತಮಿಳುನಾಡಿಗೆ ತೆರಳಲು ದೆಹಲಿಯಿಂದ ವಿಮಾನದ ಮೂಲಕ ಮೈಸೂರಿಗೆ ಬಂದ ರಾಹುಲ್ ಗಾಂಧಿಯನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸ್ವಾಗತಿಸಿದರು. ಆದ್ರೆ, ಇದೇ ವೇಳೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಪ್ರತ್ಯೇಕವಾಗಿ ರಾಹುಲ್ ಗಾಂಧಿ ಜತೆ ಮಾತುಕತೆ ನಡೆಸಿದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಡಿಕೆ ಶಿವಕುಮಾರ್ ರಾಹುಲ್ ಗಾಂಧಿಯನ್ನು ಸೈಡಿಗೆ ಕರೆದುಕೊಂಡು ಹೋಗಿ ಮಾತನಾಡಿದ್ದಾರೆ. ಬಳಿಕ ರಾಹುಲ್ ಗಾಂಧಿ ಡಿಕೆಶಿಯನ್ನು ಬಿಟ್ಟು ಸಿದ್ದರಾಮಯ್ಯನವರನ್ನು ಪಕ್ಕಕ್ಕೆ ಕರೆದುಕೊಂಡು ಚರ್ಚಿಸಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
- Ramesh B Jawalagera
- Updated on: Jan 13, 2026
- 6:59 pm
ಸಿಎಂ, ಡಿಸಿಎಂಗೆ ಮಾತಲ್ಲೇ ತಿವಿದ ವಿಪಕ್ಷ ನಾಯಕ: ಎಕ್ಸ್ ಪೋಸ್ಟ್ ಮಾಡಿ ಅಶೋಕ್ ಹೇಳಿದ್ದೇನು?
ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ನಡೆಯನ್ನು ವಿಪಕ್ಷ ನಾಯಕ ಆರ್. ಅಶೋಕ್ ಅವರು ಕಟುವಾಗಿ ಟೀಕಿಸಿದ್ದಾರೆ. ಜರ್ಮನ್ ಫೆಡರಲ್ ಚಾನ್ಸಲರ್ ಕರ್ನಾಟಕಕ್ಕೆ ಭೇಟಿ ನೀಡಿದ್ದಾಗ, ರಾಜ್ಯದ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು ರಾಹುಲ್ ಗಾಂಧಿ ಭೇಟಿಯಾಗಲು ಮೈಸೂರಿಗೆ ತೆರಳಿದ್ದನ್ನು ಅವರು ಪ್ರಶ್ನಿಸಿದ್ದಾರೆ. ಇದು ರಾಜ್ಯದ ಹಿತಾಸಕ್ತಿಗಳನ್ನು ನಿರ್ಲಕ್ಷ್ಯವಾಗಿದ್ದು, ಇದರಿಂದ ರಾಜ್ಯಕ್ಕೆ ಹೂಡಿಕೆ ಅವಕಾಶಗಳು ಕೈತಪ್ಪಿವೆ ಎಂದವರು ಆರೋಪಿಸಿದ್ದಾರೆ.
- Prasanna Hegde
- Updated on: Jan 13, 2026
- 6:24 pm
ಏಯ್ ನೋಡ್ರಪ್ಪ ಅದೇ ಫೈನಲ್: ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ಕರ್ನಾಟಕ ಕಾಂಗ್ರೆಸ್ನಲ್ಲಿ (Congress) ನವೆಂಬರನಿಂದಲೇ ಕುರ್ಚಿ ಕಾಳಗ ಜೋರಾಗಿಯೇ ನಡೆದಿದೆ. ಒಂದು ಕಡೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಕೊಟ್ಟ ಮಾತು ನೆನಪಿಸುತ್ತಿದ್ದರೆ ಮತ್ತೊಂದು ಕಡೆ ಸಿಎಂ ಸಿದ್ದರಾಮಯ್ಯ (Siddaramaiah) ಹೈಕಮಾಂಡ್ ನಾಯಕರ ಮಾತೇ ನನಗೆ ಶಾಸನ ಎನ್ನುತ್ತಿದ್ದಾರೆ. ಈ ಕಾಳಗದ ನಡುವೆಯೇ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ರಾಹುಲ್ ಗಾಂಧಿಯನ್ನ (Rahul Gandhi) ಭೇಟಿ ಮಾಡಿದ್ದು ಕುತೂಹಲಕ್ಕೆ ಕಾರಣವಾಗಿದೆ. ತಮಿಳುನಾಡಿಗೆ ತೆರಳಳು ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಮೈಸೂರಿಗೆ ಬಂದಿಳಿದ ರಾಹುಲ್ ಗಾಂಧಿ ಅವರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆಶಿ ಸ್ವಾಗತಿಸಿದರು. ಈ ವೇಳೆ ಕೆಲ ನಿಮಿಷಗಳ ಕಾಲ ರಾಹುಲ್ ಗಾಂಧಿ ಜತೆ ಮಹತ್ವದ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
- Ram
- Updated on: Jan 13, 2026
- 4:13 pm
ನಾಯಕತ್ವ ಬದಲಾವಣೆ ಜಟಾಪಟಿ ಸಂಕ್ರಾಂತಿ ಬಳಿಕ ಮತ್ತಷ್ಟು ಚುರುಕು? ಸಿಕ್ತು ಮಹತ್ವದ ಸುಳಿವು
ಇನ್ನೊಂದು ದಿನ ಕಳೆದರೆ ಸಂಕ್ರಾಂತಿ. ಸೂರ್ಯ ಪಥ ಬದಲಿಸುವ ದಿನ. ಸೂರ್ಯನ ಪಥದಂತೆ ರಾಜ್ಯ ರಾಜಕಾರಣದ, ಅದರಲ್ಲೂ ಕಾಂಗ್ರೆಸ್ನ ಪಥವೂ ಬದಲಾಗುತ್ತಾ ಎಂಬ ಪ್ರಶ್ನೆ ಹುಟ್ಟಿದೆ. ನಾಯಕತ್ವ ಬದಲಾವಣೆ ವಿಚಾರವಾಗಿ ನಡೀತಿದ್ದ ಜಟಾಪಟಿಗೆ ಸಂಕ್ರಾಂತಿ ಬಳಿಕ ಮತ್ತಷ್ಟು ವೇಗ ಸಿಗುವ ಮುನ್ಸೂಚನೆಗಳಂತೂ ಸೋಮವಾರ ಸಿಕ್ಕಿವೆ! ಹೌದು, ಅದು ಏನೇನು ಎಂಬ ಮಾಹಿತಿ ಇಲ್ಲಿದೆ.
- Prasanna Gaonkar
- Updated on: Jan 13, 2026
- 7:20 am