DK Shivakumar
ಕಾಂಗ್ರೆಸ್ ಪಕ್ಷದ, ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ ಅವರು ರಾಮನಗರ ಜಿಲ್ಲೆಯ ಕನಕಪುರ ಕ್ಷೇತ್ರದ ಶಾಸಕರು. ಇವರ ಅಭಿಮಾನಿಗಳು ಇವರನ್ನು ಕನಕಪುರ ಬಂಡೆ ಎಂದೇ ಕೊಂಡಾಡುತ್ತಾರೆ. ಸದ್ಯ ಕರ್ನಾಟಕದ ಉಪ ಮುಖ್ಯಮಂತ್ರಿಯಾಗಿ ಬ್ರ್ಯಾಂಡ್ ಬೆಂಗಳೂರು ಕನಸು ಹೊತ್ತು ಬೆಂಗಳೂರಿನ ಅಭಿವೃದ್ಧಿಗಾಗಿ ದುಡಿಯುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ 2023ರ ಚುನಾವಣೆಯ ನೇತೃತ್ವ ವಹಿಸಿಕೊಂಡಿದ್ದ ಇವರು ಪಕ್ಷದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.
ಕನಕಪುರ ತಾಲೂಕಿನ ದೊಡ್ಡ ಆಲಹಳ್ಳಿ ಗ್ರಾಮದ ಕೆಂಪೇಗೌಡ ಹಾಗೂ ಗೌರಮ್ಮ ದಂಪತಿಯ ಪ್ರಥಮ ಪುತ್ರರಾಗಿ 15ನೇ ಮೇ, 1962ರಂದು ಡಿಕೆಶಿ ಜನಿಸಿದರು. ಇವರು ಬೆಂಗಳೂರಿನ ಆರ್.ಸಿ. ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾಗಲೇ ಯುವ ಕಾಂಗ್ರೆಸ್ಗೆ ಸೇರಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯಾದ್ರು.
ಮೇಕೆದಾಟು ಯೋಜನೆಗಾಗಿ 160 ಕಿ.ಮೀ ಪಾದಯಾತ್ರೆ, 75ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಸ್ವಾತಂತ್ರ್ಯ ನಡಿಗೆ, ರಾಹುಲ್ ಗಾಂಧಿ ಅವರ ಜೊತೆ ಭಾರತ್ ಜೋಡೋ ಯಾತ್ರೆ, ನಾ ನಾಯಕಿ ಕಾರ್ಯಕ್ರಮದ ಮೂಲಕ ಮಹಿಳೆಯರಿಗೆ ಉತ್ತೇಜನ ನೀಡುವಂತಹ ಯಶಸ್ವಿ ಕಾರ್ಯಕ್ರಮಗಳನ್ನು ಮಾಡಿ ಕಾಂಗ್ರೆಸ್ ಪಕ್ಷದ ಕಟ್ಟಾಳುವಾಗಿ ರಾಜ್ಯದಲ್ಲಿ 136 ಸ್ಥಾನಗಳನ್ನು ಪಡೆಯುವಲ್ಲಿ ಮಹತ್ವದ ಪಾತ್ರವಹಿಸಿದ್ದಾರೆ.
ಕುರ್ಚಿ ಕದನದ ಮಧ್ಯೆ ಸಚಿವ ಸಂಪುಟ ಪುನಾರಚನೆಗೆ ಕೂಗು: ಡಿಕೆ ಶಿವಕುಮಾರ್ ದೆಹಲಿ ಟೂರ್, ಇತ್ತ ಹೋಟೆಲ್ನಲ್ಲಿ ಶಾಸಕರಿಂದ ಡಿನ್ನರ್!
ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಬೆಂಬಲಿಗ 45 ಕಾಂಗ್ರೆಸ್ ಶಾಸಕರು ಡಿನ್ನರ್ ಪಾರ್ಟಿ ನಡೆಸಿದ್ದಾರೆ. ಈ ಸಭೆಯಲ್ಲಿ ಮುಖ್ಯಮಂತ್ರಿ ಬದಲಾವಣೆ ಮತ್ತು ಹೊಸ ಶಾಸಕರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ ನಡೆದಿದೆ. ಹೈಕಮಾಂಡ್ ಮಧ್ಯಪ್ರವೇಶಿಸಿ ಈ ಕುರಿತು ನಿರ್ಧಾರ ತೆಗೆದುಕೊಳ್ಳುವಂತೆ ಒತ್ತಡ ಹೇರಲು ನಿರ್ಧರಿಸಲಾಗಿದೆ.
- Prasanna Gaonkar
- Updated on: Mar 18, 2026
- 6:37 am
5 ಕೋಟಿ ಆಫರ್ ನೀಡಿ ಕಾಂಗ್ರೆಸ್ ಶಾಸಕರ ಖರೀದಿಗೆ ಬಿಜೆಪಿ ಯತ್ನ: ಡಿಕೆಶಿ ಸ್ಫೋಟಕ ಆರೋಪ
ಒಡಿಶಾ ಕಾಂಗ್ರೆಸ್ ಶಾಸಕರ ಖರೀದಿಗೆ ಯತ್ನಿಸಿದ ಆರೋಪದ ಮೇಲೆ ಇಬ್ಬರನ್ನು ಬೆಂಗಳೂರಿನಲ್ಲಿ ಹಿಡಿಯಲಾಗಿದೆ. ಅಪರಿಚಿತ ವ್ಯಕ್ತಿಗಳು ಶಾಸಕರೊಬ್ಬರಿಗೆ ಐದು ಕೋಟಿ ರೂಪಾಯಿ ಮತ್ತು ಖಾಲಿ ಚೆಕ್ಗಳ ಆಮಿಷ ಒಡ್ಡಿದ್ದರು. ಡಿಕೆ ಶಿವಕುಮಾರ್ ಈ ಘಟನೆಯನ್ನು ಆಪರೇಷನ್ ಕಮಲ ಎಂದು ಬಣ್ಣಿಸಿದ್ದು, ಕಾನೂನು ಕ್ರಮ ಜರುಗಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
- Prasanna Gaonkar
- Updated on: Mar 15, 2026
- 2:12 pm
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಬಿಡದಿ ಸಮೀಪದ ವಂಡರ್ ಲಾ ರೆಸಾರ್ಟ್ನಲ್ಲಿ ಅಸ್ಸಾಂನ 10 ಕಾಂಗ್ರೆಸ್ ಶಾಸಕರ ವಾಸ್ತವ್ಯ ಏರ್ಪಡಿಸಲಾಗಿದೆ. ಶಾಸಕರು ರೆಸಾರ್ಟ್ಗೆ ಆಗಮಿಸಿದಾಗ ಕಾಂಗ್ರೆಸ್ ಮುಖಂಡರು ಸ್ವಾಗತಿಸಿದ್ದು, ಅವರ ಭದ್ರತೆಗಾಗಿ ರೆಸಾರ್ಟ್ ಸುತ್ತಲೂ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಬಿಜೆಪಿಯ ‘ಆಪರೇಷನ್ ಕಮಲ’ ಪ್ರಯತ್ನವನ್ನು ತಡೆಯಲು ಶಾಸಕರನ್ನು ಒಟ್ಟಿಗೆ ಇರಿಸಲಾಗಿದೆ ಎಂದು ಹೇಳಲಾಗುತ್ತಿದೆ.
- Bhavana Hegde
- Updated on: Mar 13, 2026
- 10:20 am
ಕಾಂಗ್ರೆಸ್ನಲ್ಲಿ ಜೋರಾದ ಡಿನ್ನರ್ ಪಾಲಿಟಿಕ್ಸ್: ಮಾರ್ಚ್ 16 ರಂದು ಸಚಿವರಿಗೆ ಔತಣಕೂಟ ಆಯೋಜಿಸಿದ ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 16ರಂದು ಸಚಿವರಿಗೆ ಔತಣಕೂಟ ಆಯೋಜಿಸಿದ್ದು, ಕಾಂಗ್ರೆಸ್ನಲ್ಲಿ ‘ಡಿನ್ನರ್ ಪಾಲಿಟಿಕ್ಸ್’ ಮತ್ತೆ ಸದ್ದು ಮಾಡುತ್ತಿದೆ. ಡಿಸಿಎಂ ಡಿಕೆ ಶಿವಕುಮಾರ್ ಔತಣಕೂಟದ ಬೆನ್ನಲ್ಲೇ ಈ ಬೆಳವಣಿಗೆ ರಾಜಕೀಯ ಕುತೂಹಲ ಕೆರಳಿಸಿದೆ. ಅಧಿಕಾರ ಹಂಚಿಕೆ ಜಟಾಪಟಿಯ ಸಂದರ್ಭದಲ್ಲೇ ನಡೆಯುವ ಈ ಔತಣಕೂಟ ಪಕ್ಷದ ಆಂತರಿಕ ರಾಜಕೀಯದ ಮೇಲೆ ಮಹತ್ವದ ಪರಿಣಾಮ ಬೀರಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
- Prasanna Gaonkar
- Updated on: Mar 13, 2026
- 9:53 am
ಕಾಂಗ್ರೆಸ್ನಲ್ಲಿ ಮತ್ತೊಂದು ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
2026ನೇ ಸಾಲಿನ ಕರ್ನಾಟಕ ಬಜೆಟ್ ಮುಗಿಯುತ್ತಿದ್ದಂತೆಯೇ ರಾಜ್ಯ ಕಾಂಗ್ರೆಸ್ನ್ಲಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಸಿಎಂ ಪಟ್ಟಕ್ಕಾಗಿ ಹಠಕ್ಕೆ ಬಿದ್ದಿರುವ ಡಿಕೆ ಶಿವಕುಮಾರ್ ಈಗಾಗಲೇ ದೆಹಲಿ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಬಂದಿದ್ದಾರೆ. ಅಲ್ಲದೆ ಇತ್ತ ಅವರ ಬೆಂಬಲಿಗರು ಗೌಪ್ಯ ಸಭೆ ನಡೆಸುತ್ತಿದ್ದಾರೆ. ಈ ಅಧಿಕಾರ ಹಂಚಿಕೆ ಬಿಕ್ಕಟ್ಟಿನ ನಡುವೆ ಸಂಪುಟ ಪುನಾರಚನೆಯ ಒತ್ತಡ ಮತ್ತಷ್ಟು ಹೆಚ್ಚಾಗಿದೆ. ಇದಕ್ಕೆ ಪೂರಕವೆಂಬಂತೆ ಸಚಿವಾಕಾಂಕ್ಷಿಗಳು ಇಂದು (ಮಾರ್ಚ್ 12) ಪ್ರತ್ಯೇಕ ಸಭೆ ನಡೆಸಿರುವ ಭಾರೀ ಸಂಚನ ಮೂಡಿಸಿದೆ. ಹೌದು...ಬೆಂಗಳೂರಿನ ಬೌರಿಂಗ್ ಕ್ಲಬ್ನಲ್ಲಿ ಸಿಎಂ ಹಾಗೂ ಡಿಸಿಎಂ ಬಣಗಳ ಶಾಸಕರು ಒಟ್ಟಾಗಿ ಪ್ರತ್ಯೇಕ ಸಭೆ ನಡೆಸಿದ್ದಾರೆ. ಇನ್ನು ಈ ಸಭೆ ಬಗ್ಗೆ ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿದ್ದು, ಏನೆಲ್ಲಾ ಹೇಳಿದ್ದಾರೆ ಕೇಳಿ.
- Ramesh B Jawalagera
- Updated on: Mar 12, 2026
- 11:05 pm
ಕುರ್ಚಿ ಕಾದಾಟದ ನಡುವೆಯೂ ಡಿಕೆಶಿ ಗುಣಗಾನ ಮಾಡಿದ ಸಿದ್ದರಾಮಯ್ಯ: ಕಾರಣ ಇಲ್ಲಿದೆ
ಮುಖ್ಯಮಂತ್ರಿ ಕುರ್ಚಿ ಕಾದಾಟದ ನಡುವೆಯೂ ಸಿದ್ದರಾಮಯ್ಯನವರು ಡಿಕೆ ಶಿವಕುಮಾರ್ ಅವರನ್ನು ಗುಣಗಾನ ಮಾಡಿದ್ದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ 6 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಅವರ ಸಂಘಟನಾ ಚಾತುರ್ಯ, ಪಕ್ಷ ನಿಷ್ಠೆ ಮತ್ತು ಉಜ್ವಲ ರಾಜಕೀಯ ಭವಿಷ್ಯದ ಬಗ್ಗೆ ಎಕ್ಸ್ ಪೋಸ್ಟ್ ಮಾಡಿ ಮುಖ್ಯಮಂತ್ರಿಗಳು ಅಭಿನಂದಿಸಿದ್ದಾರೆ.
- Prasanna Hegde
- Updated on: Mar 10, 2026
- 6:02 pm
ಬೆಂಗಳೂರಿಗರಿಗೆ ಜಿಬಿಎಯಿಂದ ಭರ್ಜರಿ ಶಾಕ್: ಹೆಚ್ಚುವರಿ ತೆರಿಗೆಗೆ ಬಿಜೆಪಿಗರು ಕೆಂಡ; ವಿಧಾನ ಸಭೆಯಲ್ಲೂ ಬಿಸಿ ಬಿಸಿ ಚರ್ಚೆ
ಬೆಂಗಳೂರಿನಲ್ಲಿ ಜಿಬಿಎ (ಗ್ರೇಟರ್ ಬೆಂಗಳೂರು ಪ್ರಾಧಿಕಾರ) ನಡೆಸಿದ ಡ್ರೋನ್ ಸರ್ವೆ ಬಳಿಕ ಹೊಸ ಹೆಚ್ಚುವರಿ ಆಸ್ತಿ ತೆರಿಗೆ ವಿಧಿಸಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಬಾಲ್ಕನಿ, ಟ್ಯಾಂಕ್ ಸೇರಿ ಮನೆಗಳ ಪೂರಕ ಕಟ್ಟಡಗಳಿಗೂ ತೆರಿಗೆ ವಿಧಿಸಿ ನೋಟಿಸ್ ನೀಡಲಾಗಿದೆ. ಬಿಜೆಪಿ ಶಾಸಕರು ಇದನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ ಡಿಸಿಎಂ ಡಿಕೆ ಶಿವಕುಮಾರ್, ಸಮಸ್ಯೆಯಿರುವವರಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿರುವುದಾಗಿ ಹೇಳಿದ್ದಾರೆ.
- Pramod Shastri G
- Updated on: Mar 10, 2026
- 12:56 pm
ದೆಹಲಿ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಶಾಕಿಂಗ್ ಮಾತು: ಮತ್ತೆ ಜೋರಾದ ಅಧಿಕಾರ ಹಂಚಿಕೆ ಬಿಕ್ಕಟ್ಟು
ಕರ್ನಾಟಕದಲ್ಲಿ (Karnataka) ಅಧಿಕಾರ ಹಂಚಿಕೆ ಬಿಕ್ಕಟ್ಟು ಮತ್ತಷ್ಟು ಜೋರಾಗಿದೆ. ಹೈಕಮಾಂಡ್ ಅವಕಾಶ ಕೊಟ್ಟರೆ ಮುಂದಿನ ಎರಡು ವರ್ಷವೂ ನಾನೇ ಆಯವ್ಯಯ ಮಂಡಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಅವರು ದೆಹಲಿಗೆ ತೆರಳಿದ್ದು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದಾರೆ. ಬಜೆಟ್ ಮುಗಿತುತ್ತಿದ್ದಂಯೆಯೇ ಡಿಕೆಶಿ ಮತ್ತಷ್ಟು ಆ್ಯಕ್ಟೀವ್ ಆಗಿರುವುದು ಕುತೂಲಹಕ್ಕೆ ಕಾರಣವಾಗಿದೆ.
- Ramesh B Jawalagera
- Updated on: Mar 9, 2026
- 5:27 pm
ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ
ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ಸಿದ್ಧತೆ ನಡೆಸಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಎರಡೂ ಕ್ಷೇತ್ರಗಳಿಗೆ 16-16 ನಾಯಕರನ್ನೊಳಗೊಂಡ ಉಸ್ತುವಾರಿ ಸಮಿತಿಗಳನ್ನು ರಚಿಸಿದ್ದಾರೆ. ಬಾಗಲಕೋಟೆಗೆ ವಸಂತ್ ಕುಮಾರ್ ಮತ್ತು ದಾವಣಗೆರೆಗೆ ಮಂಜುನಾಥ್ ಭಂಡಾರಿ ಅವರನ್ನು ಸಂಚಾಲಕರನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದಾರೆ.
- Prasanna Gaonkar
- Updated on: Mar 8, 2026
- 10:43 pm
ಪ್ರಿಯಾಂಕ್ ಖರ್ಗೆ ತವರು ಜಿಲ್ಲೆಯಲ್ಲಿ ಕೋಟ್ಯಂತರ ರೂ ಕಾಮಗಾರಿಗೆ ಚಾಲನೆ: ಬಿಜೆಪಿಗರ ಆರೋಪಗಳಿಗೆ ತಿರುಗೇಟು
ಕಲಬುರಗಿ ಜಿಲ್ಲೆ ಚಿತ್ತಾಪುರ ಕ್ಷೇತ್ರದಲ್ಲಿ 1069 ಕೋಟಿ ರೂ ವೆಚ್ಚದ ಕಾಮಗಾರಿಗಳಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ ನೀಡಿದ್ದಾರೆ. ಆ ಮೂಲಕ ರಾಜ್ಯ ಸರ್ಕಾರ ಗ್ಯಾರಂಟಿಗಳಿಂದ ಅಭಿವೃದ್ಧಿ ಮರೆತಿದೆ ಎಂಬ ಬಿಜೆಪಿಗರ ಆರೋಪಕ್ಕೆ ತಿರುಗೇಟು ನೀಡಲಾಗಿದೆ.
- Dattatraya Patil
- Updated on: Mar 8, 2026
- 8:10 pm
ವಿವಿ, ಕಾಲೇಜುಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ರಾಜ್ಯ ಸರ್ಕಾರ ನಿರ್ಧಾ
Karnataka government decides to revive student union elections: ವಿದ್ಯಾರ್ಥಿಗಳಲ್ಲಿ ನಾಯಕತ್ವ ಹೊಣೆಗಾರಿಕೆ ಪ್ರಜಾಪ್ರಭುತ್ವ ಮೌಲ್ಯಗಳನ್ನು ಬೆಳೆಸಲು ಕಾಲೇಜು ಮತ್ತು ವಿವಿಗಳಲ್ಲಿ ಕಾಲೇಜು ಸಂಘಗಳ ಚುನಾವಣೆ ನಡೆಸಲು ಸರ್ಕಾರ ನಿರ್ಧರಿಸಿದೆ. ಸ್ವತಃ ವಿದ್ಯಾರ್ಥಿ ಮುಖಂಡರಾಗಿ ಬೆಳೆದು ರಾಜಕೀಯ ಬಂದಿರುವ ಡಿ.ಕೆ. ಶಿವಕುಮಾರ್ ಅವರು ಈ ನಿರ್ಧಾರದ ಹಿಂದಿನ ಬ್ರೇನ್. ಕೆಲ ತಿಂಗಳ ಹಿಂದೆ ಅವರು ವಿದ್ಯಾರ್ಥಿ ಸಂಘಕ್ಕೆ ಚುನಾವಣೆ ನಡೆಸಬೇಕೋ ಬೇಡವೋ ನಿರ್ಧರಿಸಲು 9 ಸದಸ್ಯರ ಸಮಿತಿ ರಚಿಸಿದ್ದರು.
- Vijaya Sarathy SN
- Updated on: Mar 6, 2026
- 1:12 pm
ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಕೇಸ್: ಡಿಕೆಶಿಗೆ ಕೋರ್ಟ್ ಬಿಗ್ ರಿಲೀಫ್
ಬಿಜೆಪಿಯ ನಾನು ಕರಸೇವಕ, ನನ್ನನ್ನೂ ಬಂಧಿಸಿ ಅಭಿಯಾನದ ಪೋಸ್ಟರ್ ತಿರುಚಿ ಅವಹೇಳನಕಾರಿ ಪೋಸ್ಟ್ ಹಾಕಿದ ಪ್ರಕರಣದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧದ ಎಫ್ಐಆರ್ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ಈ ಬಗ್ಗೆ ಬಿಜೆಪಿ ಕಾನೂನು ಪ್ರಕೋಷ್ಠ ಮಾಜಿ ಸಂಚಾಲಕ ಯೋಗೇಂದ್ರ ಹೊಡಘಟ್ಟ ದೂರು ನೀಡಿದ್ದರು.
- Ramesha M
- Updated on: Mar 5, 2026
- 3:11 pm