AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Droupadi Murmu

Droupadi Murmu

ದ್ರೌಪದಿ ಮುರ್ಮು

ದ್ರೌಪದಿ ಮುರ್ಮು 2022 ರ ಜುಲೈ 25ರಂದು ಭಾರತದ 15 ನೇ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದಕ್ಕೂ ಮೊದಲು ಅವರು 2015 ರಿಂದ 2021 ರವರೆಗೆ ಜಾರ್ಖಂಡ್ ರಾಜ್ಯಪಾಲರಾಗಿದ್ದರು. 1958 ರ ಜೂನ್ 20 ರಂದು ಒಡಿಶಾದ ಮಯೂರ್‌ಭಂಜ್ ಜಿಲ್ಲೆಯ ಉಪರಬೇಡ ಗ್ರಾಮದ ಸಂತಾಲಿ ಬುಡಕಟ್ಟು ಕುಟುಂಬದಲ್ಲಿ ಜನಿಸಿದ ಮುರ್ಮು ಅವರ ಆರಂಭಿಕ ಜೀವನ ಕಷ್ಟಗಳು ಮತ್ತು ಹೋರಾಟಗಳಿಂದ ಕೂಡಿತ್ತು. ಹಳ್ಳಿಯ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣವನ್ನು ಮುಗಿಸಿದ ನಂತರ ಅವರು ಸ್ವ ಪ್ರಯತ್ನದಿಂದ ತನ್ನ ಹೆಚ್ಚಿನ ಅಧ್ಯಯನಕ್ಕಾಗಿ ಭುವನೇಶ್ವರಕ್ಕೆ ತೆರಳಿದರು. ಭುವನೇಶ್ವರದ ರಮಾದೇವಿ ಮಹಿಳಾ ಮಹಾವಿದ್ಯಾಲಯದಿಂದ ಕಲಾ ಪದವಿಯನ್ನು ಪಡೆದರು. ತಮ್ಮ ಹಳ್ಳಿಯಿಂದ ಕಾಲೇಜಿಗೆ ಹೋದ ಮೊದಲ ಹುಡುಗಿ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾದರು.

1979 ರಿಂದ 1983 ರವರೆಗೆ ಒಡಿಶಾ ಸರ್ಕಾರದ ನೀರಾವರಿ ಮತ್ತು ವಿದ್ಯುತ್ ಇಲಾಖೆಯಲ್ಲಿ ಕಿರಿಯ ಸಹಾಯಕರಾಗಿ ಸೇವೆ ಸಲ್ಲಿಸಿದರು. ನಂತರ, 1994 ರಿಂದ 1997 ರವರೆಗೆ, ಅವರು ರಾಯರಂಗಪುರದ ಶ್ರೀ ಅರಬಿಂದೋ ಸಮಗ್ರ ಶಿಕ್ಷಣ ಕೇಂದ್ರದಲ್ಲಿ ಗೌರವ ಶಿಕ್ಷಕರಾಗಿ ಸೇವೆ ಸಲ್ಲಿಸಿದರು. ಮುರ್ಮು 2000 ರಲ್ಲಿ ರಾಯರಂಗ್‌ಪುರ ಕ್ಷೇತ್ರದಿಂದ ಒಡಿಶಾ ವಿಧಾನಸಭೆಗೆ ಆಯ್ಕೆಯಾದರು ಮತ್ತು 2009 ರವರೆಗೆ ಎರಡು ಅವಧಿಗೆ ಶಾಸಕರಾಗಿದ್ದರು. ಈ ಅವಧಿಯಲ್ಲಿ, ಅವರು 2000 ಮಾರ್ಚ್ 6 ರಿಂದ 2002 ರ ಆಗಸ್ಟ್ 6 ರವರೆಗೆ ಒಡಿಶಾ ಸರ್ಕಾರದ ವಾಣಿಜ್ಯ ಮತ್ತು ಸಾರಿಗೆ ಇಲಾಖೆಯ ರಾಜ್ಯ (ಸ್ವತಂತ್ರ ಉಸ್ತುವಾರಿ) ಸಚಿವರಾಗಿ ಮತ್ತು 2002 ಆಗಸ್ಟ್ 6 ರಿಂದ 2004 ರ ಮೇ 16 ವರೆಗೆ ಮೀನುಗಾರಿಕೆ ಮತ್ತು ಪ್ರಾಣಿ ಸಂಪನ್ಮೂಲಗಳ ಇಲಾಖೆಯಲ್ಲಿ ಸೇವೆ ಸಲ್ಲಿಸಿದರು

ಇನ್ನೂ ಹೆಚ್ಚು ಓದಿ

ರೋಮ್‌ನ ಚರ್ಚ್​​ನಲ್ಲಿ ಪೋಪ್ ಫ್ರಾನ್ಸಿಸ್ ಅಂತ್ಯಕ್ರಿಯೆ; ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು, ಟ್ರಂಪ್, ಝೆಲೆನ್ಸ್ಕಿ ಭಾಗಿ

ಪೋಪ್ ಫ್ರಾನ್ಸಿಸ್ ಅವರ ಅಂತ್ಯಕ್ರಿಯೆಯ ವೇಳೆ ಭಾಗವಹಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮತ್ತು ಪ್ರಿನ್ಸ್ ವಿಲಿಯಮ್ಸ್ ಅವರು ಪೋಪ್ ಫ್ರಾನ್ಸಿಸ್ ಅವರಿಗೆ ಅಂತಿಮ ನಮನ ಸಲ್ಲಿಸಿ ವಿದಾಯ ಹೇಳಿದರು. ಭಾರತದಿಂದ ರಾಷ್ಟ್ರಪತಿ ದ್ರೌಪದಿ ಮುರ್ಮು ಪೋಪ್​ಗೆ ಅಂತಿಮ ನಮನ ಸಲ್ಲಿಸಿದರು. ಸೇಂಟ್ ಪೀಟರ್ಸ್ ಬೆಸಿಲಿಕಾದ ಮುಂಭಾಗದಲ್ಲಿರುವ ವಿಶಾಲ ಚೌಕದಲ್ಲಿ 2,00,000ಕ್ಕೂ ಹೆಚ್ಚು ಜನರು ಈ ಸಮಾರಂಭದಲ್ಲಿ ಭಾಗವಹಿಸಿದ್ದರು. ಇಲ್ಲಿಯವರೆಗೆ, 10 ಆಳ್ವಿಕೆಯ ರಾಜರು ಸೇರಿದಂತೆ ಸುಮಾರು 50 ರಾಷ್ಟ್ರಗಳ ಮುಖ್ಯಸ್ಥರು ಭಾಗವಹಿಸಿದ್ದಾರೆ ಎಂದು ದೃಢಪಡಿಸಲಾಗಿದೆ.

ಸುಪ್ರೀಂ ಕೋರ್ಟ್ ರಾಷ್ಟ್ರಪತಿಗೆ ನಿರ್ದೇಶನ ನೀಡಲು ಸಾಧ್ಯವಿಲ್ಲ; ಉಪರಾಷ್ಟ್ರಪತಿ ಜಗದೀಪ್ ಧಂಖರ್ ಆಕ್ಷೇಪ

ನ್ಯಾಯಾಲಯಗಳು ರಾಷ್ಟ್ರಪತಿಗೆ ನಿರ್ದೇಶನ ನೀಡಲು ಸಾಧ್ಯವಿಲ್ಲ ಎಂದು ಉಪರಾಷ್ಟ್ರಪತಿ ಜಗದೀಪ್ ಧಂಖರ್ ಇಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಳೆದ ವಾರ, ಸುಪ್ರೀಂ ಕೋರ್ಟ್ ಮೊದಲ ಬಾರಿಗೆ ರಾಜ್ಯಪಾಲರು ಅಥವಾ ರಾಷ್ಟ್ರಪತಿಗಳು ಮಸೂದೆಗಳನ್ನು ಸ್ವೀಕರಿಸಿದ ದಿನಾಂಕದಿಂದ 3 ತಿಂಗಳೊಳಗೆ ಅವುಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕು ಎಂಬ ಮಹತ್ವದ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಉಪರಾಷ್ಟ್ರಪತಿ ಧಂಖರ್ ಪ್ರತಿಕ್ರಿಯಿಸಿದ್ದಾರೆ.

ಕರ್ನಾಟಕದ ಶೇ. 4 ಮುಸ್ಲಿಂ ಮೀಸಲಾತಿ ಮಸೂದೆಯನ್ನು ರಾಷ್ಟ್ರಪತಿಗೆ ಕಳುಹಿಸಿದ ರಾಜ್ಯಪಾಲ ಗೆಹ್ಲೋಟ್

ಕರ್ನಾಟಕದ ಮುಸ್ಲಿಂಮರಿಗೆ 4% ಮೀಸಲಾತಿ ನೀಡುವ ವಿಧೇಯಕ ಇದೀಗ ರಾಷ್ಟ್ರಪತಿ ಅಂಗಳ ತಲುಪಿದೆ. ಸರ್ಕಾರಿ ಕಾಮಗಾರಿಗಳಲ್ಲಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ವಿಧೇಯಕವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಾಷ್ಟ್ರಪತಿಗಳ ಅಂಕಿತಕ್ಕೆ ಕಳುಹಿಸಿದ್ದಾರೆ. ಈ ವಿಧೇಯಕ ವಿಧಾನಮಂಡಲದಲ್ಲಿ ಅಂಗೀಕಾರಗೊಂಡಿತ್ತು. ನಂತರ ರಾಜ್ಯಪಾಲರ ಬಳಿ ಹೋಗಿತ್ತು. ಇದೀಗ ಈ ವಿಧೇಯಕವನ್ನು ರಾಜ್ಯಪಾಲರು ರಾಷ್ಟ್ರಪತಿ ಒಪ್ಪಿಗೆಗೆ ಕಳುಹಿಸಿದ್ದಾರೆ.

ಇದೇ ಮೊದಲ ಬಾರಿ ರಾಜ್ಯಪಾಲರು ಕಾಯ್ದಿರಿಸಿದ ಮಸೂದೆಗಳ ಬಗ್ಗೆ ನಿರ್ಧರಿಸಲು ಸುಪ್ರೀಂ ಕೋರ್ಟ್​​ನಿಂದ ರಾಷ್ಟ್ರಪತಿಗೆ 3 ತಿಂಗಳ ಗಡುವು

ತಮಿಳುನಾಡು ರಾಜ್ಯಪಾಲ ಆರ್.ಎನ್ ರವಿ ಅವರು ರಾಷ್ಟ್ರಪತಿಗಳ ಒಪ್ಪಿಗೆಗಾಗಿ ಕಾಯ್ದಿರಿಸಿದ್ದ ತಮಿಳುನಾಡಿನ 10 ಮಸೂದೆಗಳನ್ನು ಸುಪ್ರೀಂ ಕೋರ್ಟ್ ತೆರವುಗೊಳಿಸಿದ ಕೇವಲ 4 ದಿನಗಳ ನಂತರ ಈ ತೀರ್ಪು ಬಂದಿದೆ. 415 ಪುಟಗಳ ಪೂರ್ತಿ ತೀರ್ಪನ್ನು ಶುಕ್ರವಾರ ರಾತ್ರಿ 10.54ಕ್ಕೆ ಸುಪ್ರೀಂ ಕೋರ್ಟ್‌ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ. ಸುಪ್ರೀಂ ಕೋರ್ಟ್ ರಾಷ್ಟ್ರಪತಿಗಳಿಗೆ ಗಡುವು ನೀಡುತ್ತಿರುವುದು ಇದೇ ಮೊದಲು.

Waqf Bill: ಭಾರತದಲ್ಲಿ ಹೊಸ ವಕ್ಫ್​ ಕಾನೂನು ಜಾರಿಗೆ, ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಕ್ಫ್​ ತಿದ್ದುಪಡಿ ಮಸೂದೆಗೆ ಅನುಮೋದನೆ ನೀಡಿದ್ದಾರೆ. ಈ ಮಸೂದೆಯನ್ನು ಇತ್ತೀಚೆಗೆ ಲೋಕಸಭೆ ಮತ್ತು ರಾಜ್ಯಸಭೆ ಅಂಗೀಕರಿಸಿವೆ. ಶನಿವಾರ ರಾಷ್ಟ್ರಪತಿ ಅಂಕಿತದ ನಂತರ ವಕ್ಫ್​ ತಿದ್ದುಪಡಿ ಮಸೂದೆ ಅಧಿಕೃತವಾಗಿ ಕಾನೂನಾನಿ ಮಾರ್ಪಟ್ಟಿದೆ. ಈ ಹೊಸ ಕಾನೂನನ್ನು ವಕ್ಫ್​ ತಿದ್ದುಪಡಿ ಕಾಯ್ದೆ 2025 ಎಂದು ಕರೆಯಲಾಗುತ್ತದೆ. ಇದು ವಕ್ಫ್​ ಆಸ್ತಿಗಳ ನಿರ್ವಹಣೆ, ನೋಂದಣಿ ಮತ್ತು ಸರ್ಕಾರಿ ಭೂಮಿಯ ಮೇಲಿನ ಹಕ್ಕುಗಳ ಬಗ್ಗೆ ಕಠಿಣ ನಿಯಮಗಳನ್ನು ವಿಧಿಸುತ್ತದೆ.

ಮನೀಷ್ ಸಿಸೋಡಿಯಾ, ಸತ್ಯೇಂದರ್ ಜೈನ್ ವಿರುದ್ಧ ತನಿಖೆಗೆ ರಾಷ್ಟ್ರಪತಿ ಅನುಮತಿ

ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಮತ್ತು ಸತ್ಯೇಂದರ್ ಜೈನ್ ವಿರುದ್ಧ ಔಪಚಾರಿಕ ತನಿಖೆ ಆರಂಭಿಸಲು ದೆಹಲಿಯ ಭ್ರಷ್ಟಾಚಾರ ನಿಗ್ರಹ ದಳಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅನುಮತಿ ನೀಡಿದ್ದಾರೆ. ಮನೀಶ್ ಸಿಸೋಡಿಯಾ ಮತ್ತು ಸಚಿವ ಸತ್ಯೇಂದರ್ ಜೈನ್ ವಿರುದ್ಧ ತನಿಖೆಗೆ ಗೃಹ ಸಚಿವಾಲಯವೂ ಅನುಮೋದನೆ ನೀಡಿದೆ. ಭ್ರಷ್ಟಾಚಾರ ಪ್ರಕರಣದಲ್ಲಿ ಇಬ್ಬರ ವಿರುದ್ಧದ ತನಿಖೆಗೆ ಅನುಮೋದನೆ ನೀಡಲಾಗಿದೆ ಎಂದು ಗೃಹ ಸಚಿವಾಲಯ ಇಂದು ಲೆಫ್ಟಿನೆಂಟ್ ಗವರ್ನರ್ ಸಚಿವಾಲಯಕ್ಕೆ ತಿಳಿಸಿದೆ.

ದೆಹಲಿ ವಿಧಾನಸಭಾ ಚುನಾವಣೆ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಮತದಾನ

ದೆಹಲಿ ವಿಧಾನಸಭೆಯ 70 ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದೆ. ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಪ್, ಜೆಪಿ ನಡ್ಡಾ ನೇತೃತ್ವದ ಬಿಜೆಪಿ ಮತ್ತು ಮಲ್ಲಿಕಾರ್ಜುನ ಖರ್ಗೆ ನೇತೃತ್ವದ ಕಾಂಗ್ರೆಸ್ ಪಕ್ಷಗಳ ನಡುವೆ ತ್ರಿಕೋನೀಯ ಸ್ಪರ್ಧೆ ದೆಹಲಿ ವಿಧಾನಸಭೆಗೆ ನಡೆಯುತ್ತಿದೆ. ದೆಹಲಿಯ ಮುಖ್ಯಮಂತ್ರಿ ಅತಿಶಿ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಸಹ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು.

ರಾಷ್ಟ್ರಪತಿಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಸೋನಿಯಾ ಗಾಂಧಿ ವಿರುದ್ಧ ಉತ್ತರ ಪ್ರದೇಶದಲ್ಲಿ ಪ್ರಕರಣ ದಾಖಲು

ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಸಂಕಷ್ಟಎದುರಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ‘ಪೂವರ್ ಲೇಡಿ’ ಎಂದು ಕರೆದಿದ್ದಕ್ಕಾಗಿ ಬಿಹಾರದ ಮುಜಾಫರ್‌ಪುರದಲ್ಲಿ ಪ್ರಕರಣ ದಾಖಲಿಸಲಾಗಿದೆ. ಫೆಬ್ರವರಿ 10 ರಂದು ಈ ಪ್ರಕರಣದ ವಿಚಾರಣೆ ನಡೆಯಲಿದೆ. ಬಜೆಟ್ ಅಧಿವೇಶನದಲ್ಲಿ ರಾಷ್ಟ್ರಪತಿಗಳ ಭಾಷಣದ ಬಳಿಕ ಪ್ರತಿಕ್ರಿಯೆ ನೀಡಿದ ಸೋನಿಯಾ ಗಾಂಧಿ ಈ ಹೇಳಿಕೆ ನೀಡಿದ್ದರು.

ಬಜೆಟ್​ ಮಂಡನೆಗೂ ಮುನ್ನ ನಿರ್ಮಲಾ ಸೀತಾರಾಮನ್​ಗೆ ಮೊಸರು-ಸಕ್ಕರೆ ತಿನ್ನಿಸಿದ ರಾಷ್ಟ್ರಪತಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಸಂಸತ್ತಿನಲ್ಲಿ ಕೇಂದ್ರ ಬಜೆಟ್ ಮಂಡಿಸಲು ಸಜ್ಜಾಗಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಕೇಂದ್ರ ಬಜೆಟ್ 2025 ಅನ್ನು ಮಂಡಿಸುವ ಮೊದಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾದರು. ಸಾಂಪ್ರದಾಯಿಕ ಸೂಚನೆಯ ಭಾಗವಾಗಿ, ರಾಷ್ಟ್ರಪತಿ ಮುರ್ಮು ನಿರ್ಮಲಾ ಸೀತಾರಾಮನ್‌ ಅವರಿಗೆ 'ದಹಿ-ಚೀನಿ' (ಮೊಸರು ಮತ್ತು ಸಕ್ಕರೆ) ನೀಡಿದರು. ಇದು ಯಶಸ್ವಿ ಬಜೆಟ್ ಪ್ರಸ್ತುತಿಗಾಗಿ ಅದೃಷ್ಟ ಮತ್ತು ಆಶೀರ್ವಾದವನ್ನು ಸಂಕೇತಿಸುತ್ತದೆ.

ನನ್ನ ಅಮ್ಮನಿಗೂ ವಯಸ್ಸಾಗಿದೆ; ರಾಷ್ಟ್ರಪತಿ ಕುರಿತ ಸೋನಿಯಾ ಗಾಂಧಿ ಹೇಳಿಕೆಗೆ ಪ್ರಿಯಾಂಕಾ ಗಾಂಧಿ ಸಮರ್ಥನೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಕುರಿತು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಇಂದು ನೀಡಿದ್ದ ಹೇಳಿಕೆ ಭಾರೀ ಚರ್ಚೆಗೆ ಒಳಗಾಗಿದೆ. ಸೋನಿಯಾ ಗಾಂಧಿ ರಾಷ್ಟ್ರಪತಿಗಳಿಗೆ ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ ಒತ್ತಾಯಿಸಿದೆ. ರಾಷ್ಟ್ರಪತಿ ಭವನ ಕೂಡ ಸೋನಿಯಾ ಗಾಂಧಿ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ, ಪ್ರಕಟಣೆ ಬಿಡುಗಡೆ ಮಾಡಿದೆ. ಇದೀಗ ಪ್ರಿಯಾಂಕಾ ಗಾಂಧಿ ವಾದ್ರಾ ತಮ್ಮ ತಾಯಿಯ ಹೇಳಿಕೆಯನ್ನು ಸಮರ್ಥನೆ ಮಾಡಿಕೊಂಡಿದ್ದಾರೆ.

ನಾನು-ರಾಗಿಣಿ ಜೋಡಿ ಅಲ್ಲ: ಎಲ್ಲರ ಎದುರು ಸ್ಪಷ್ಟಪಡಿಸಿದ ಧರ್ಮ ಕೀರ್ತಿರಾಜ್
ನಾನು-ರಾಗಿಣಿ ಜೋಡಿ ಅಲ್ಲ: ಎಲ್ಲರ ಎದುರು ಸ್ಪಷ್ಟಪಡಿಸಿದ ಧರ್ಮ ಕೀರ್ತಿರಾಜ್
ಯುದ್ಧದ ಭೀತಿ; ಎಲ್​ಒಸಿಗೆ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭೇಟಿ?
ಯುದ್ಧದ ಭೀತಿ; ಎಲ್​ಒಸಿಗೆ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭೇಟಿ?
ಧೋನಿ ಸೇರಿದಂತೆ ಒಂದೇ ಓವರ್​ನಲ್ಲಿ 4 ವಿಕೆಟ್ ಉರುಳಿಸಿದ ಚಾಹಲ್
ಧೋನಿ ಸೇರಿದಂತೆ ಒಂದೇ ಓವರ್​ನಲ್ಲಿ 4 ವಿಕೆಟ್ ಉರುಳಿಸಿದ ಚಾಹಲ್
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’