AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Droupadi Murmu

Droupadi Murmu

ದ್ರೌಪದಿ ಮುರ್ಮು

ದ್ರೌಪದಿ ಮುರ್ಮು 2022 ರ ಜುಲೈ 25ರಂದು ಭಾರತದ 15 ನೇ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದಕ್ಕೂ ಮೊದಲು ಅವರು 2015 ರಿಂದ 2021 ರವರೆಗೆ ಜಾರ್ಖಂಡ್ ರಾಜ್ಯಪಾಲರಾಗಿದ್ದರು. 1958 ರ ಜೂನ್ 20 ರಂದು ಒಡಿಶಾದ ಮಯೂರ್‌ಭಂಜ್ ಜಿಲ್ಲೆಯ ಉಪರಬೇಡ ಗ್ರಾಮದ ಸಂತಾಲಿ ಬುಡಕಟ್ಟು ಕುಟುಂಬದಲ್ಲಿ ಜನಿಸಿದ ಮುರ್ಮು ಅವರ ಆರಂಭಿಕ ಜೀವನ ಕಷ್ಟಗಳು ಮತ್ತು ಹೋರಾಟಗಳಿಂದ ಕೂಡಿತ್ತು. ಹಳ್ಳಿಯ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣವನ್ನು ಮುಗಿಸಿದ ನಂತರ ಅವರು ಸ್ವ ಪ್ರಯತ್ನದಿಂದ ತನ್ನ ಹೆಚ್ಚಿನ ಅಧ್ಯಯನಕ್ಕಾಗಿ ಭುವನೇಶ್ವರಕ್ಕೆ ತೆರಳಿದರು. ಭುವನೇಶ್ವರದ ರಮಾದೇವಿ ಮಹಿಳಾ ಮಹಾವಿದ್ಯಾಲಯದಿಂದ ಕಲಾ ಪದವಿಯನ್ನು ಪಡೆದರು. ತಮ್ಮ ಹಳ್ಳಿಯಿಂದ ಕಾಲೇಜಿಗೆ ಹೋದ ಮೊದಲ ಹುಡುಗಿ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾದರು.

1979 ರಿಂದ 1983 ರವರೆಗೆ ಒಡಿಶಾ ಸರ್ಕಾರದ ನೀರಾವರಿ ಮತ್ತು ವಿದ್ಯುತ್ ಇಲಾಖೆಯಲ್ಲಿ ಕಿರಿಯ ಸಹಾಯಕರಾಗಿ ಸೇವೆ ಸಲ್ಲಿಸಿದರು. ನಂತರ, 1994 ರಿಂದ 1997 ರವರೆಗೆ, ಅವರು ರಾಯರಂಗಪುರದ ಶ್ರೀ ಅರಬಿಂದೋ ಸಮಗ್ರ ಶಿಕ್ಷಣ ಕೇಂದ್ರದಲ್ಲಿ ಗೌರವ ಶಿಕ್ಷಕರಾಗಿ ಸೇವೆ ಸಲ್ಲಿಸಿದರು. ಮುರ್ಮು 2000 ರಲ್ಲಿ ರಾಯರಂಗ್‌ಪುರ ಕ್ಷೇತ್ರದಿಂದ ಒಡಿಶಾ ವಿಧಾನಸಭೆಗೆ ಆಯ್ಕೆಯಾದರು ಮತ್ತು 2009 ರವರೆಗೆ ಎರಡು ಅವಧಿಗೆ ಶಾಸಕರಾಗಿದ್ದರು. ಈ ಅವಧಿಯಲ್ಲಿ, ಅವರು 2000 ಮಾರ್ಚ್ 6 ರಿಂದ 2002 ರ ಆಗಸ್ಟ್ 6 ರವರೆಗೆ ಒಡಿಶಾ ಸರ್ಕಾರದ ವಾಣಿಜ್ಯ ಮತ್ತು ಸಾರಿಗೆ ಇಲಾಖೆಯ ರಾಜ್ಯ (ಸ್ವತಂತ್ರ ಉಸ್ತುವಾರಿ) ಸಚಿವರಾಗಿ ಮತ್ತು 2002 ಆಗಸ್ಟ್ 6 ರಿಂದ 2004 ರ ಮೇ 16 ವರೆಗೆ ಮೀನುಗಾರಿಕೆ ಮತ್ತು ಪ್ರಾಣಿ ಸಂಪನ್ಮೂಲಗಳ ಇಲಾಖೆಯಲ್ಲಿ ಸೇವೆ ಸಲ್ಲಿಸಿದರು

ಇನ್ನೂ ಹೆಚ್ಚು ಓದಿ

ಹೊಲಸು ರಾಜಕೀಯ, ದುರಹಂಕಾರ ತೃಣಮೂಲ ಕಾಂಗ್ರೆಸ್​ ಅನ್ನು ನಾಶಪಡಿಸುತ್ತೆ: ಪ್ರಧಾನಿ ಮೋದಿ

ಹೊಲಸು ರಾಜಕೀಯ, ದುರಹಂಕಾರ ತೃಣಮೂಲ ಕಾಂಗ್ರೆಸ್​ ಅನ್ನು ನಾಶಪಡಿಸುತ್ತೆ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ. ಡಾರ್ಜಿಲಿಂಗ್​ ಅಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗಾದ ಅವಮಾನದ ಬಗ್ಗೆ ಅವರು ಮಾತನಾಡಿದ್ದಾರೆ. ದ್ರೌಪದಿ ಮುರ್ಮು ಭಾಗವಹಿಸಿದ್ದ 9 ನೇ ಅಂತರರಾಷ್ಟ್ರೀಯ ಸಂತಾಲ್ ಸಮ್ಮೇಳನದಲ್ಲಿ ನಡೆದ ದುರಾಡಳಿತವನ್ನು ಉಲ್ಲೇಖಿಸಿದ ಮೋದಿ, ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಅನ್ನು ದುರಹಂಕಾರಿ ಎಂದು ಕರೆದರು.

ಡಾರ್ಜಿಲಿಂಗ್​​ನಲ್ಲಿ ರಾಷ್ಟ್ರಪತಿ ಮುರ್ಮು ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ, ವರದಿ ಕೇಳಿದ ಗೃಹ ಕಾರ್ಯದರ್ಶಿ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಾರ್ಜಿಲಿಂಗ್‌ನಲ್ಲಿ ನಡೆದ ಸಂತಾಲ್ ಸಮ್ಮೇಳನದಲ್ಲಿ ಶಿಷ್ಟಾಚಾರ ಉಲ್ಲಂಘನೆ ಮತ್ತು ಸ್ಥಳ ಬದಲಾವಣೆಯಿಂದ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಮತ್ತು ಸಚಿವರ ಗೈರುಹಾಜರಿ ಬಗ್ಗೆ ಪ್ರಶ್ನಿಸಿದ್ದಾರೆ. ಈ ಘಟನೆಯ ಕುರಿತು ಕೇಂದ್ರ ಗೃಹ ಕಾರ್ಯದರ್ಶಿಯವರು ಪಶ್ಚಿಮ ಬಂಗಾಳ ಸರ್ಕಾರದಿಂದ ವಿವರವಾದ ವರದಿ ಕೋರಿದ್ದಾರೆ. ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಕೂಡ ಟಿಎಂಸಿ ಸರ್ಕಾರವನ್ನು ತೀವ್ರವಾಗಿ ಟೀಕಿಸಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ನಾಚಿಕೆಗೇಡು ಎಂದಿದ್ದಾರೆ.

Video: ಮಮತಾ ನನ್ನ ಮೇಲೆ ಕೋಪಗೊಂಡಿದ್ದಾರೋ ಏನೋ..ಕಾರ್ಯಕ್ರಮಕ್ಕೆ ಬಾರದ ಬ್ಯಾನರ್ಜಿ ಬಗ್ಗೆ ದ್ರೌಪದಿ ಮುರ್ಮು ಬೇಸರ

ರಾಷ್ಟ್ರಪತಿ ದ್ರೌಪದಿ ಮುರ್ಮು ಉತ್ತರ ಬಂಗಾಳಕ್ಕೆ ಭೇಟಿ ನೀಡಿದ್ದರು. ಅಲ್ಲಿ ಅಂತಾರಾಷ್ಟ್ರೀಯ ಸಂತಾಲಿ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಆದರೆ ರಾಷ್ಟ್ರಪತಿಯವರನ್ನು ಬರಮಾಡಿಕೊಳ್ಳುವುದು ಹಾಗಿರಲಿ ಕಾರ್ಯಕ್ರಮಕ್ಕೂ ಆಗಮಿಸದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಬೇಸರ ವ್ಯಕ್ತಪಡಿಸಿದ್ದಾರೆ. ಅವರು ನನ್ನ ತಂಗಿಯಂತೆ, ನನ್ನ ಮೇಲೆ ಕೋಪಗೊಂಡಿದ್ದಾರೋ ಏನೋ ಎಂದು ಬೇಸರದ ಮಾತುಗಳನ್ನಾಡಿದ್ದಾರೆ.

ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ

ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಔಪಚಾರಿಕ ಸ್ವಾಗತ ನೀಡಲಾಯಿತು. ರಾಷ್ಟ್ರಪತಿ ಭವನದಲ್ಲಿ ಅಧ್ಯಕ್ಷ ಲೂಲಾ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಗಾರ್ಡ್ ಆಫ್ ಹಾನರ್ ನೀಡಲಾಯಿತು. ಬ್ರೆಜಿಲ್ ಅಧ್ಯಕ್ಷರನ್ನು ಪ್ರಧಾನಿ ಮೋದಿ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ರಾಷ್ಟ್ರಪತಿ ಭವನದಲ್ಲಿ ಬರಮಾಡಿಕೊಂಡರು.

ಡಿಜಿಟಲ್ ಸಾಕ್ಷರತೆ ಅತ್ಯಗತ್ಯ; ಬ್ಲ್ಯಾಕ್ ಸ್ವಾನ್ ಶೃಂಗಸಭೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ

ಒಡಿಶಾದ ಭುವನೇಶ್ವರದಲ್ಲಿ ಒಡಿಶಾ ಸರ್ಕಾರವು ಗ್ಲೋಬಲ್ ಫೈನಾನ್ಸ್ ಮತ್ತು ಟೆಕ್ನಾಲಜಿ ನೆಟ್‌ವರ್ಕ್ ಸಹಯೋಗದೊಂದಿಗೆ ಆಯೋಜಿಸಿದ್ದ ಬ್ಲ್ಯಾಕ್ ಸ್ವಾನ್ ಶೃಂಗಸಭೆಯಲ್ಲಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗವಹಿಸಿದ್ದರು. ತಂತ್ರಜ್ಞಾನದ ಹೊಸ ಆವಿಷ್ಕಾರಗಳು ಸೈಬರ್ ಭದ್ರತಾ ಬೆದರಿಕೆಗಳು, ಡೀಪ್‌ಫೇಕ್‌ಗಳು, ತಪ್ಪು ಮಾಹಿತಿ ಮತ್ತು ತಂತ್ರಜ್ಞಾನದ ಮೇಲೆ ಹೆಚ್ಚುತ್ತಿರುವ ಅವಲಂಬನೆ ಸೇರಿದಂತೆ ಗಂಭೀರ ಸವಾಲುಗಳನ್ನು ತರಬಹುದು. ಆದರೂ ತಾಂತ್ರಿಕ ಬದಲಾವಣೆಗಳು ನಾವೀನ್ಯತೆ ಮತ್ತು ಬೆಳವಣಿಗೆಯ ಮೇಲೆ ಭಾರಿ ಸಕಾರಾತ್ಮಕ ಪರಿಣಾಮ ಬೀರುತ್ತವೆ ಎಂದಿದ್ದಾರೆ.

ಸಿಎಂ ಹೆಸರು ಹೇಳ್ಕೊಂಡು ದಂಪತಿಗೆ ಕಾಂಗ್ರೆಸ್ ಮುಖಂಡನ ಧಮ್ಕಿ, ಹಲ್ಲೆ: ಪ್ರಧಾನಿ ಮೋದಿ, ರಾಷ್ಟ್ರಪತಿಗೆ ದೂರು

ವರುಣಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ರಾಜು ವಿರುದ್ಧ ಕೇಳಿಬಂದಿದ್ದ ಹಲ್ಲೆ ಹಾಗೂ ಬೆದರಿಕೆ ಆರೋಪ ಇದೀಗ ಪ್ರಧಾನಿ, ರಾಷ್ಟ್ರಪತಿಗಳಿಗೆ ದೂರು ಕೊಡುವ ಮಟ್ಟಕ್ಕೆ ತಲುಪಿದೆ. ಭೂ ವಿವಾದಕ್ಕೆ ಸಂಬಂಧಿಸಿದಂತೆ ಅಮಿತಾಬ್-ಸುಷ್ಮಾ ದಂಪತಿಯ ಮೇಲೆ ಹಲ್ಲೆ ನಡೆಸಿ, ಸಿದ್ದರಾಮಯ್ಯ ಹೆಸರಲ್ಲಿ ಬೆದರಿಕೆ ಹಾಕಿದ ಆರೋಪ ರಾಜು ಮೇಲಿದೆ. ಪೊಲೀಸರಿಗೆ ದೂರು ನೀಡಿದ ನಂತರವೂ ಬೆದರಿಕೆ, ಧಮ್ಕಿ ಮುಂದುವರಿದೆ ಎಂದು ಸಂತ್ರಸ್ತ ದಂಪತಿ ಆರೋಪಿಸಿದ್ದಾರೆ.

  • Ram
  • Updated on: Jan 27, 2026
  • 12:16 pm

ಅಧಿವೇಶನ ಭಾಷಣ, ಗದ್ದಲ ಬಗ್ಗೆ ರಾಷ್ಟ್ರಪತಿಗೆ ರಾಜ್ಯಪಾಲ ವರದಿ: ಏನೆಲ್ಲಾ ಅಂಶಗಳಿವೆ?

ಕರ್ನಾಟಕ ವಿಧಾನಮಂಡಲ ಅಧಿವೇಶನದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಸರ್ಕಾರ ಸಿದ್ಧಪಡಿಸಿದ ಭಾಷಣ ಓದಲು ನಿರಾಕರಿಸಿ ತಾವೇ ಬರೆದುಕೊಂಡು ಬಂದಿದ್ದ ಎರಡು ವಾಕ್ಯವನ್ನು ಓದಿ ತೆರಳಿದ್ದು, ಇದು ಕಾಂಗ್ರೆಸ್​ ಸದಸ್ಯರ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನೇನು ರಾಜ್ಯಪಾಲರು ಸದನದಿಂದ ಆಚೆ ಹೋಗಬೇಕಿರುವಾಗ ದೊಡ್ಡ ಹೈಡ್ರಾಮವೇ ನಡೆದಿದ್ದು, ರಾಜ್ಯಪಾಲರನ್ನು ಅಡ್ಡಿಗಟ್ಟಿ ತಡೆಯುವ ಯತ್ನ ಸಹ ನಡೆದಿದೆ. ಇನ್ನು ಈ ಎಲ್ಲಾ ಬೆಳವಣಿಗೆಗಳ ಕುರಿತು ಲೋಕಭವನ, ರಾಷ್ಟ್ರಪತಿ ಅವರಿಗೆ ವರದಿ ಕಳುಹಿಸಿದೆ. ಹಾಗಾದ್ರೆ, ರಾಜ್ಯಪಾಲರ ವರದಿಯಲ್ಲಿ ಏನೆಲ್ಲಾ ಅಂಶಗಳು ಇವೆ ಎನ್ನುವ ಡಿಟೇಲ್ಸ್ ಇಲ್ಲಿದೆ.

ನಮ್ಮ ಭವಿಷ್ಯಕ್ಕೆ ನಾವೇ ನಿರ್ಮಾತೃಗಳು: ರಾಷ್ಟ್ರಪತಿ ದ್ರೌಪದಿ ಮುರ್ಮು ಗಣರಾಜ್ಯೋತ್ಸವ ಸಂದೇಶ

President Draupadi Murmu speech on eve of 77th Republic Day: ಗಣರಾಜ್ಯೋತ್ಸವದ ಭಾಗವಾಗಿ ರಾಷ್ಟ್ರವನ್ನುದ್ದೇಶಿಸಿ ಭಾನುವಾರ ಭಾಷಣ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಬಲಿದಾನ ಮಾಡಿದ ವೀರರಿಗೆ ಗೌರವಾರ್ಪಣೆ ಸಲ್ಲಿಸಿದರು. ವಂದೇ ಮಾತರಂ ಗೀತೆ ಭಾರತೀಯರಲ್ಲಿ ರಾಷ್ಟ್ರಪ್ರೇಮ ಹೇಗೆ ಮೂಡಿಸುತ್ತದೆ ಎಂಬುದನ್ನು ತಿಳಿಸಿದರು. ಸಂವಿಧಾನವು ದೇಶದ ಆಧಾರ ಸ್ತಂಭವಾಗಿರುವುದನ್ನು ವಿವರಿಸಿದರು.

ಕಾರವಾರದಲ್ಲಿ ಐಎನ್ಎಸ್ ವಾಗ್ಶೀರ್​​ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಜಲಾಂತರ್ಗಾಮಿ ಯಾನ

ರಾಷ್ಟ್ರಪತಿ ದ್ರೌಪದಿ ಮುರ್ಮು ಭಾರತದ ಪಶ್ಚಿಮ ಸಮುದ್ರ ತೀರದಲ್ಲಿರುವ ಕಾರವಾರ ನೌಕಾ ನೆಲೆಯಿಂದ ಭಾರತೀಯ ನೌಕಾಪಡೆಯ ಸ್ಥಳೀಯ ಕಲ್ವರಿ-ವರ್ಗದ ಜಲಾಂತರ್ಗಾಮಿ ಐಎನ್‌ಎಸ್ ವಾಗ್​​ಶೀರ್​​ನಲ್ಲಿ ಐತಿಹಾಸಿಕ ಜಲಾಂತರ್ಗಾಮಿ ಹಾರಾಟವನ್ನು ಕೈಗೊಂಡರು. ಈ ಕಾರ್ಯಾಚರಣೆಯು ರಾಷ್ಟ್ರಪತಿಗಳಿಗೆ ಭಾರತದ ನೀರೊಳಗಿನ ಯುದ್ಧ ಸಾಮರ್ಥ್ಯಗಳ ಅಪರೂಪದ, ನೇರ ಅನುಭವವನ್ನು ನೀಡಿತು.

ಡಿ 16ರಂದು ಸುತ್ತೂರು ಜಯಂತೋತ್ಸವಕ್ಕೆ ರಾಷ್ಟ್ರಪತಿ ದ್ರೌಪತಿ ಮುರ್ಮು: ಮಳವಳ್ಳಿಯಲ್ಲಿ ಬಿಗಿ ಭದ್ರತೆ

ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ನಡೆಯುವ ಸುತ್ತೂರು ಮಠದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾಗವಹಿಸಲಿದ್ದಾರೆ. ಹಾಗಾಗಿ ಡಿಸೆಂಬರ್​ 16ರಂದು ಅವರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಸದ್ಯ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಳವಳ್ಳಿಗೆ ದ್ರೌಪದಿ ಮುರ್ಮು ಭೇಟಿಯ ಸಂಪೂರ್ಣ ಮಾಹಿತಿ ಇಲ್ಲಿದೆ.

ರಾಷ್ಟ್ರಪತಿ ಭವನದಲ್ಲಿ ರಷ್ಯಾ ಅಧ್ಯಕ್ಷ ಪುಟಿನ್​ಗೆ ಸೇನಾಪಡೆಯಿಂದ ಸ್ವಾಗತ

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಿನ್ನೆ ರಾತ್ರಿ ಪ್ರಧಾನಿ ಮೋದಿಯವರ ಜೊತೆ ಔತಣಕೂಟದಲ್ಲಿ ಪಾಲ್ಗೊಂಡಿದ್ದರು. ಇಂದು ಅವರಿಗೆ ರಾಷ್ಟ್ರಪತಿ ಭವನದಲ್ಲಿ ಸಾಂಪ್ರದಾಯಿಕ ಸ್ವಾಗತ ಮತ್ತು ಮೂರು ಸೇನಾಪಡೆಗಳ ಗೌರವ ವಂದನೆ ನೀಡಲಾಯಿತು. ಇಂದು ಬೆಳಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ರಷ್ಯಾದ ಅಧ್ಯಕ್ಷರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಇದಾದ ನಂತರ, ಪುಟಿನ್ ರಾಜ್ ಘಾಟ್‌ಗೆ ಭೇಟಿ ನೀಡಿ ಮಹಾತ್ಮ ಗಾಂಧಿಯವರ ಸ್ಮಾರಕಕ್ಕೆ ಗೌರವ ಸಲ್ಲಿಸಿದರು.

ತಿರುಪತಿ ದೇವಸ್ಥಾನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಇಲ್ಲಿಗೆ ಸಮೀಪದ ತಿರುಮಲ ಬೆಟ್ಟದ ಮೇಲಿರುವ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ರಾಷ್ಟ್ರಪತಿಗಳು ಗುರುವಾರ ತಿರುಪತಿ ತಲುಪಿದ್ದರು. ತಿರುಚನೂರಿನ ಶ್ರೀ ಪದ್ಮಾವತಿ ಅಮ್ಮವಾರಿ ದೇವಸ್ಥಾನದಲ್ಲಿ ಅವರು ಪ್ರಾರ್ಥನೆ ಸಲ್ಲಿಸಿದರು. ಅವರು ಇಂದು ಬೆಳಿಗ್ಗೆ ಪದ್ಮಾವತಿ ಅತಿಥಿ ಗೃಹದಿಂದ ಹೊರಟು ಶ್ರೀ ಭೂ ವರಾಹಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಅಲ್ಲಿಂದ ಅವರು ತಿರುಮಲ ತಿರುಪತಿ ದೇವಸ್ಥಾನವನ್ನು ತಲುಪಿದರು. ಅಲ್ಲಿ ಅವರನ್ನು ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಅಧ್ಯಕ್ಷ ಬಿ.ಆರ್. ನಾಯ್ಡು, ಕಾರ್ಯನಿರ್ವಾಹಕ ಅಧಿಕಾರಿ ಅನಿಲ್ ಕುಮಾರ್ ಸಿಂಘಾಲ್ ಮತ್ತು ಇತರ ಅಧಿಕಾರಿಗಳು ಆತ್ಮೀಯವಾಗಿ ಸ್ವಾಗತಿಸಿದರು. ತಿರುಪತಿಯ ದೇವಾಲಯದಲ್ಲಿರುವ 'ಧ್ವಜಸ್ಥಂಭ'ದಲ್ಲಿ ಪ್ರಾರ್ಥನೆ ಸಲ್ಲಿಸಿದ ನಂತರ, ರಾಷ್ಟ್ರಪತಿ ದ್ರೌಪದಿ ಮುರ್ಮು ದೇವರ ದರ್ಶನ ಪಡೆದರು.

ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು