AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Droupadi Murmu

Droupadi Murmu

ದ್ರೌಪದಿ ಮುರ್ಮು

ದ್ರೌಪದಿ ಮುರ್ಮು 2022 ರ ಜುಲೈ 25ರಂದು ಭಾರತದ 15 ನೇ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದಕ್ಕೂ ಮೊದಲು ಅವರು 2015 ರಿಂದ 2021 ರವರೆಗೆ ಜಾರ್ಖಂಡ್ ರಾಜ್ಯಪಾಲರಾಗಿದ್ದರು. 1958 ರ ಜೂನ್ 20 ರಂದು ಒಡಿಶಾದ ಮಯೂರ್‌ಭಂಜ್ ಜಿಲ್ಲೆಯ ಉಪರಬೇಡ ಗ್ರಾಮದ ಸಂತಾಲಿ ಬುಡಕಟ್ಟು ಕುಟುಂಬದಲ್ಲಿ ಜನಿಸಿದ ಮುರ್ಮು ಅವರ ಆರಂಭಿಕ ಜೀವನ ಕಷ್ಟಗಳು ಮತ್ತು ಹೋರಾಟಗಳಿಂದ ಕೂಡಿತ್ತು. ಹಳ್ಳಿಯ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣವನ್ನು ಮುಗಿಸಿದ ನಂತರ ಅವರು ಸ್ವ ಪ್ರಯತ್ನದಿಂದ ತನ್ನ ಹೆಚ್ಚಿನ ಅಧ್ಯಯನಕ್ಕಾಗಿ ಭುವನೇಶ್ವರಕ್ಕೆ ತೆರಳಿದರು. ಭುವನೇಶ್ವರದ ರಮಾದೇವಿ ಮಹಿಳಾ ಮಹಾವಿದ್ಯಾಲಯದಿಂದ ಕಲಾ ಪದವಿಯನ್ನು ಪಡೆದರು. ತಮ್ಮ ಹಳ್ಳಿಯಿಂದ ಕಾಲೇಜಿಗೆ ಹೋದ ಮೊದಲ ಹುಡುಗಿ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾದರು.

1979 ರಿಂದ 1983 ರವರೆಗೆ ಒಡಿಶಾ ಸರ್ಕಾರದ ನೀರಾವರಿ ಮತ್ತು ವಿದ್ಯುತ್ ಇಲಾಖೆಯಲ್ಲಿ ಕಿರಿಯ ಸಹಾಯಕರಾಗಿ ಸೇವೆ ಸಲ್ಲಿಸಿದರು. ನಂತರ, 1994 ರಿಂದ 1997 ರವರೆಗೆ, ಅವರು ರಾಯರಂಗಪುರದ ಶ್ರೀ ಅರಬಿಂದೋ ಸಮಗ್ರ ಶಿಕ್ಷಣ ಕೇಂದ್ರದಲ್ಲಿ ಗೌರವ ಶಿಕ್ಷಕರಾಗಿ ಸೇವೆ ಸಲ್ಲಿಸಿದರು. ಮುರ್ಮು 2000 ರಲ್ಲಿ ರಾಯರಂಗ್‌ಪುರ ಕ್ಷೇತ್ರದಿಂದ ಒಡಿಶಾ ವಿಧಾನಸಭೆಗೆ ಆಯ್ಕೆಯಾದರು ಮತ್ತು 2009 ರವರೆಗೆ ಎರಡು ಅವಧಿಗೆ ಶಾಸಕರಾಗಿದ್ದರು. ಈ ಅವಧಿಯಲ್ಲಿ, ಅವರು 2000 ಮಾರ್ಚ್ 6 ರಿಂದ 2002 ರ ಆಗಸ್ಟ್ 6 ರವರೆಗೆ ಒಡಿಶಾ ಸರ್ಕಾರದ ವಾಣಿಜ್ಯ ಮತ್ತು ಸಾರಿಗೆ ಇಲಾಖೆಯ ರಾಜ್ಯ (ಸ್ವತಂತ್ರ ಉಸ್ತುವಾರಿ) ಸಚಿವರಾಗಿ ಮತ್ತು 2002 ಆಗಸ್ಟ್ 6 ರಿಂದ 2004 ರ ಮೇ 16 ವರೆಗೆ ಮೀನುಗಾರಿಕೆ ಮತ್ತು ಪ್ರಾಣಿ ಸಂಪನ್ಮೂಲಗಳ ಇಲಾಖೆಯಲ್ಲಿ ಸೇವೆ ಸಲ್ಲಿಸಿದರು

ಇನ್ನೂ ಹೆಚ್ಚು ಓದಿ

ಸ್ವಾತಂತ್ರ್ಯ ದಿನಾಚರಣೆಯ ಶೌರ್ಯ ಪ್ರಶಸ್ತಿ ಪ್ರಕಟ; 9 ಯೋಧರಿಗೆ ಕೀರ್ತಿ ಚಕ್ರ ಘೋಷಣೆ

80ನೇ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನದಂದು ಶುಕ್ರವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಕ್ಷಣಾ ಪಡೆಗಳು ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಸಿಬ್ಬಂದಿಗೆ 78 ಶೌರ್ಯ ಪ್ರಶಸ್ತಿಗಳನ್ನು ಅನುಮೋದಿಸಿದರು, ಇದರಲ್ಲಿ 13 ಮರಣೋತ್ತರವೂ ಸೇರಿದೆ. ಈ ಪ್ರಶಸ್ತಿಗಳಲ್ಲಿ 9 ಕೀರ್ತಿ ಚಕ್ರಗಳು, 19 ಶೌರ್ಯ ಚಕ್ರಗಳು, 5 ಬಾರ್ ಟು ಸೇನಾ ಪದಕಗಳು (ಶೌರ್ಯ) ಮತ್ತು 36 ಸೇನಾ ಪದಕಗಳು (ಶೌರ್ಯ) ಸೇರಿವೆ. ಕೀರ್ತಿ ಚಕ್ರವು ಅಶೋಕ ಚಕ್ರದ ನಂತರ ಭಾರತದ ಎರಡನೇ ಅತ್ಯುನ್ನತ ಶಾಂತಿಕಾಲದ ಶೌರ್ಯ ಪ್ರಶಸ್ತಿಯಾಗಿದೆ. ಶೌರ್ಯ ಚಕ್ರವು ಶಾಂತಿಕಾಲದ ಮೂರನೇ ಅತ್ಯುನ್ನತ ಶೌರ್ಯ ಪ್ರಶಸ್ತಿಯಾಗಿದೆ.

ಭಯೋತ್ಪಾದಕರಿಗೆ ಆಪರೇಷನ್ ಸಿಂಧೂರ್ ಪ್ರಬಲ ಸಂದೇಶ ರವಾನಿಸಿದೆ; ರಾಷ್ಟ್ರಪತಿ ದ್ರೌಪದಿ ಮುರ್ಮು

"ಮೂರೂ ಸಶಸ್ತ್ರ ಪಡೆಗಳು, ಎಲ್ಲಾ ಸಶಸ್ತ್ರ ಪೊಲೀಸ್ ಪಡೆಗಳು ಮತ್ತು ಪೊಲೀಸ್ ಸಿಬ್ಬಂದಿಯ ಕರ್ತವ್ಯ ನಿಷ್ಠೆಯನ್ನು ನಾನು ಶ್ಲಾಘಿಸುತ್ತೇನೆ. ಜಾಗತಿಕ ಮಟ್ಟದಲ್ಲಿ ದೇಶದ ಗೌರವ ಹೆಚ್ಚಿಸುತ್ತಿರುವ ಭಾರತೀಯರನ್ನು ಹಾಗೂ ವಿದೇಶಗಳಲ್ಲಿರುವ ಭಾರತೀಯ ರಾಯಭಾರ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನಾಗರಿಕರನ್ನು ನಾನು ಅಭಿನಂದಿಸುತ್ತೇನೆ" ಎಂದು ಹೇಳಿದರು.

President Speech: ’25 ಕೋಟಿಗೂ ಹೆಚ್ಚು ಜನ ಬಡತನದಿಂದ ಹೊರಬಂದಿದ್ದಾರೆ’; ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ದೇಶವನ್ನು ಉದ್ದೇಶಿಸಿ ರಾಷ್ಟ್ರಪತಿ ಭಾಷಣ

80ನೇ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನದಂದು ರಾಷ್ಟ್ರಪತಿ ದ್ರೌಪದಿ ಮುರ್ಮು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದರು. "ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನದಂದು, ನಾನು ಎಲ್ಲರಿಗೂ ಅಭಿನಂದನೆ ಸಲ್ಲಿಸಲು ಬಯಸುತ್ತೇನೆ. ಕೆಲವೇ ಗಂಟೆಗಳಲ್ಲಿ, ನಮ್ಮ ಸ್ವಾತಂತ್ರ್ಯದ 80ನೇ ವರ್ಷವು ಶುಭವಾಗಿ ಪ್ರಾರಂಭವಾಗಲಿದೆ. ದೇಶಕ್ಕೆ ಸ್ವಾತಂತ್ರ್ಯ ಬಂದಾಗ, ಏಕೀಕರಣದ ಸವಾಲು ಇತ್ತು. ಸರ್ದಾರ್ ಪಟೇಲ್ ಏಕತೆಯ ಶಿಲ್ಪಿ. ಇಂದು ನಾವು ಆಧುನಿಕ ಭಾರತವಾಗುವತ್ತ ಸಾಗುತ್ತಿದ್ದೇವೆ" ಎಂದು ಅವರು ಹೇಳಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣದ ಹೈಲೈಟ್ಸ್ ಇಲ್ಲಿವೆ.

ಇಂದು ಸಂಜೆ ದೇಶವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ; ನೇರಪ್ರಸಾರ ವೀಕ್ಷಿಸುವುದು ಹೇಗೆ?

ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನವಾದ ಇಂದು (ಆಗಸ್ಟ್ 14) ರಾಷ್ಟ್ರಪತಿ ದ್ರೌಪದಿ ಮುರ್ಮು ದೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ರಾಷ್ಟ್ರಪತಿಗಳ ಭಾಷಣ ಇಂದು ಸಂಜೆ 7 ಗಂಟೆಗೆ ಆರಂಭವಾಗಲಿದ್ದು, ಆಕಾಶವಾಣಿಯಲ್ಲಿ (ಆಲ್ ಇಂಡಿಯಾ ರೇಡಿಯೋ) ಪ್ರಸಾರವಾಗಲಿದೆ. ಇದರೊಂದಿಗೆ ದೂರದರ್ಶನದ ಎಲ್ಲಾ ಚಾನೆಲ್‌ಗಳಲ್ಲಿಯೂ ನೇರಪ್ರಸಾರವಾಗಲಿದ್ದು, ದೇಶಾದ್ಯಂತ ಇರುವ ಜನರು ಈ ಭಾಷಣವನ್ನು ವೀಕ್ಷಿಸಬಹುದು. ಹಾಗೇ, ಟಿವಿ9 ಕನ್ನಡದಲ್ಲಿ ಕೂಡ ನೀವು ಈ ಭಾಷಣವನ್ನು ವೀಕ್ಷಿಸಬಹುದು.

Video: ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ

ಗೌರವಾನ್ವಿತ ರಾಷ್ಟ್ರಪತಿಯವರಿಂದ ಗಣ್ಯ ಅತಿಥಿಗಳಿಗೆ ಕಳುಹಿಸಲಾಗಿರುವ ಸ್ವಾತಂತ್ರ್ಯ ದಿನಾಚರಣೆಯ ಆಹ್ವಾನ ಪತ್ರಿಕೆಯು ಭಾರತದ ಶ್ರೀಮಂತ ಸಾಂಸ್ಕೃತಿಕ ವೈವಿಧ್ಯತೆಯನ್ನು ಅನಾವರಣಗೊಳಿಸಿದೆ. ಛತ್ತೀಸ್‌ಗಢ, ಗೋವಾ, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರ ರಾಜ್ಯಗಳ ಜಾನಪದ ಕಲಾ ಪರಂಪರೆಗಳಿಂದ ಸ್ಫೂರ್ತಿ ಪಡೆದ ವಿನ್ಯಾಸವು ಸಮುದಾಯ, ಸೃಜನಶೀಲತೆ ಮತ್ತು ಸಂರಕ್ಷಣೆಯ ಮಹತ್ವವನ್ನು ಪ್ರತಿಬಿಂಬಿಸುತ್ತದೆ. ಈ ಆಹ್ವಾನ ಪತ್ರವು ಸ್ವಾತಂತ್ರ್ಯ ದಿನದ ಸಂಭ್ರಮದೊಂದಿಗೆ ಭಾರತದ ಪರಂಪರೆ ಮತ್ತು ಕಲಾತ್ಮಕ ಶ್ರೀಮಂತಿಕೆಯನ್ನು ಎತ್ತಿಹಿಡಿಯುವ ಪ್ರಯತ್ನವಾಗಿದೆ.

ಪ್ರಭಾಕರ್ ಕೋರೆ ಸೇರಿ ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ

Padma Awards 2026: ನವದೆಹಲಿಯ ರಾಷ್ಟ್ರಪತಿ ಭವನದಲ್ಲಿಂದು ರಾಷ್ಟ್ರಪತಿ ದ್ರೌಪದಿ ಮುರ್ಮು (droupadi murmu) ಅವರು ದೇಶದ ವಿವಿಧ ರಂಗಗಳ ಸಾಧಕರಿಗೆ ಪ್ರತಿಷ್ಠಿತ 'ಪದ್ಮ ಪ್ರಶಸ್ತಿ 2026'  (padma award 2026 ) ಪ್ರದಾನ ಮಾಡಿದರು. ಇನ್ನು ಕರ್ನಾಟಕದ ಐವರು ಸಾಧಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪದ್ಮ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಕೆ

ಸಂಪುಟ ಪುನಾರಚನೆ ವದಂತಿ; ರಾಷ್ಟ್ರಪತಿಯನ್ನು ಭೇಟಿ ಮಾಡಿದ ಪ್ರಧಾನಿ ಮೋದಿ

ಕೇಂದ್ರ ಸಚಿವ ಜಾರ್ಜ್ ಕುರಿಯನ್ ಅವರ ರಾಜ್ಯಸಭಾ ಅವಧಿ ಮುಗಿದು ಅವರು ರಾಜೀನಾಮೆ ನೀಡಿದ ಮರುದಿನವೇ ಪ್ರಧಾನಿ ನರೇಂದ್ರ ಮೋದಿ ಇಂದು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದ್ದಾರೆ. ಇದು ದೆಹಲಿ ರಾಜಕೀಯ ವಲಯದಲ್ಲಿ ಶೀಘ್ರದಲ್ಲೇ ಕೇಂದ್ರ ಸಚಿವ ಸಂಪುಟ ಪುನಾರಚನೆ ಆಗಲಿದೆ ಎಂಬ ವದಂತಿಗಳಿಗೆ ಪುಷ್ಟಿ ನೀಡಿದೆ. ಕೇಂದ್ರ ಅಲ್ಪಸಂಖ್ಯಾತರ ವ್ಯವಹಾರಗಳು ಹಾಗೂ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆಯ ರಾಜ್ಯ ಸಚಿವರಾಗಿದ್ದ ಜಾರ್ಜ್ ಕುರಿಯನ್ ಅವರಿಗೆ ಜೂನ್ 18ರಂದು ನಡೆದ ರಾಜ್ಯಸಭಾ ಚುನಾವಣೆಗೆ ಬಿಜೆಪಿ ಮತ್ತೆ ಟಿಕೆಟ್ ನೀಡಿರಲಿಲ್ಲ. ಅವರ ರಾಜ್ಯಸಭಾ ಅವಧಿಯು ಜೂನ್ 21ಕ್ಕೆ ಕೊನೆಗೊಂಡಿತ್ತು.

Padma Awards 2026 ನಟ ಮಮ್ಮುಟ್ಟಿ, ಗಾಯಕಿ ಅಲಕಾ ಯಾಗ್ನಿಕ್​ಗೆ ಪದ್ಮಭೂಷಣ; ಮಾಧವನ್, ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ವಿವಿಧ ರಂಗಗಳ ಸಾಧಕರಿಗೆ ಪ್ರತಿಷ್ಠಿತ 'ಪದ್ಮ ಪ್ರಶಸ್ತಿ 2026' ಅನ್ನು ಪ್ರದಾನ ಮಾಡಿದ್ದಾರೆ. ರಾಷ್ಟ್ರಪತಿ ಭವನದ ಗಣತಂತ್ರ ಮಂಟಪದಲ್ಲಿ ನಡೆದ ಈ ಭವ್ಯ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಪದ್ಮ ಪ್ರಶಸ್ತಿಯ ಎರಡನೇ ಹಂತದ ಸಮಾರಂಭದಲ್ಲಿ ಒಟ್ಟು 65 ಸಾಧಕರಿಗೆ (2 ಪದ್ಮವಿಭೂಷಣ, 7 ಪದ್ಮಭೂಷಣ ಹಾಗೂ 56 ಪದ್ಮಶ್ರೀ) ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇದಕ್ಕೂ ಮುನ್ನ ಮೇ 25ರಂದು ಮೊದಲ ಹಂತದ ಪ್ರಶಸ್ತಿ ಪ್ರದಾನ ಮಾಡಲಾಗಿತ್ತು.

ಇತಿಹಾಸ ಸೃಷ್ಟಿಸಿದ ಡೆಹ್ರಾಡೂನ್ ಐಎಂಎ: ಮೊದಲ ಬಾರಿಗೆ ಭಾರತೀಯ ಸೇನೆಗೆ ಅಧಿಕಾರಿಗಳಾಗಿ 9 ಮಹಿಳಾ ಕೆಡೆಟ್​ಗಳ ಸೇರ್ಪಡೆ

ಡೆಹ್ರಾಡೂನ್‌ನ ಪ್ರತಿಷ್ಠಿತ ಭಾರತೀಯ ಮಿಲಿಟರಿ ಅಕಾಡೆಮಿ (IMA) ಇತಿಹಾಸದಲ್ಲೇ ಮೊದಲ ಬಾರಿಗೆ 9 ಮಹಿಳಾ ಕೆಡೆಟ್‌ಗಳನ್ನು ಭಾರತೀಯ ಸೇನೆಗೆ ಸೇರ್ಪಡೆಗೊಳಿಸಿ ಐತಿಹಾಸಿಕ ಮೈಲಿಗಲ್ಲು ಸಾಧಿಸಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಸಮ್ಮುಖದಲ್ಲಿ ಈ ಕಾರ್ಯಕ್ರಮ ನಡೆದಿದ್ದು, ಇದು ಭಾರತದ ರಕ್ಷಣಾ ವಲಯದಲ್ಲಿ ಮಹಿಳಾ ಸಬಲೀಕರಣದ ಮಹತ್ವದ ಹೆಜ್ಜೆಯಾಗಿದೆ. ಲಕ್ಷಾಂತರ ಹೆಣ್ಣುಮಕ್ಕಳಿಗೆ ಇದೊಂದು ಪ್ರೇರಣೆಯಾಗಿದೆ.

ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿಯ ಹೆಗಲಿಗೊರಗಿ ಕಣ್ಣೀರಿಟ್ಟ ತಾಯಿ; ಮನಕಲಕುವ ವಿಡಿಯೋ ಇಲ್ಲಿದೆ

ಹುತಾತ್ಮ ಸಿಪಾಯಿ ಜಂಜಾಲ್ ಪ್ರವೀಣ್ ಪ್ರಭಾಕರ್ ಅವರಿಗೆ ಅವರ ಅಸಾಧಾರಣ ಶೌರ್ಯ, ಅದಮ್ಯ ಧೈರ್ಯ ಮತ್ತು ರಾಷ್ಟ್ರ ಸೇವೆಯಲ್ಲಿ ಅತ್ಯುನ್ನತ ತ್ಯಾಗಕ್ಕಾಗಿ ಮರಣೋತ್ತರವಾಗಿ ಕೀರ್ತಿ ಚಕ್ರವನ್ನು ನೀಡಲಾಯಿತು. ಈ ಪ್ರಶಸ್ತಿಯನ್ನು ಸ್ವೀಕರಿಸುವಾಗ ಅವರ ತಾಯಿ ದೂಖ ತಡೆಯಲಾರದೆ ಕಣ್ಣೀರಿಟ್ಟಿದ್ದಾರೆ. ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಸಿಪಾಯಿ ಜಂಜಾಲ್ ಪ್ರವೀಣ್ ಪ್ರಭಾಕರ್ ಅವರಿಗೆ ಮರಣೋತ್ತರ 'ಕೀರ್ತಿ ಚಕ್ರ' ಗೌರವ ನೀಡುವಾಗ ತಾಯಿಯ ಭಾವುಕ ಕ್ಷಣಗಳ ವಿಡಿಯೋ ವೈರಲ್ ಆಗಿದೆ.

ವೀರ ಯೋಧರಿಗೆ ರಾಷ್ಟ್ರಪತಿಯಿಂದ ಕೀರ್ತಿ ಚಕ್ರ, ವೀರ ಚಕ್ರ, ಶೌರ್ಯ ಚಕ್ರ ಪ್ರಶಸ್ತಿ ಪ್ರದಾನ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ರಕ್ಷಣಾ ವಲಯದಲ್ಲಿ ಅಪ್ರತಿಮ ಸಾಹಸ ಮತ್ತು ಶೌರ್ಯ ಪ್ರದರ್ಶಿಸಿದ ವೀರ ಯೋಧರಿಗೆ ಕೀರ್ತಿ ಚಕ್ರ, ವೀರ ಚಕ್ರ ಮತ್ತು ಶೌರ್ಯ ಚಕ್ರ ಪ್ರಶಸ್ತಿಗಳನ್ನು ಪ್ರದಾನ ಮಾಡಿದ್ದಾರೆ. ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಈ ಪ್ರಶಸ್ತಿಗಳನ್ನು ವಿತರಿಸಲಾಯಿತು. ಸಶಸ್ತ್ರ ಪಡೆಗಳ ಸರ್ವೋಚ್ಚ ಕಮಾಂಡರ್ ಆಗಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಈ ಪ್ರಶಸ್ತಿಗಳನ್ನು ನೀಡಿದರು. ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಮೂರೂ ಸಶಸ್ತ್ರ ಪಡೆಗಳ ಮುಖ್ಯಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಧರ್ಮೇಂದ್ರ, ಮಮ್ಮುಟ್ಟಿ, ಮಾಧವನ್, ಅಲ್ಕಾ ಯಾಗ್ನಿಕ್‌ ಸೇರಿ ಹಲವರಿಗೆ ಇಂದು (ಮೇ 25) ಪದ್ಮ ಪ್ರಶಸ್ತಿ ಪ್ರದಾನ

2026ನೇ ಸಾಲಿನ ಪದ್ಮ ಪ್ರಶಸ್ತಿಗಳನ್ನು ಇಂದು (ಮೇ 25) ಪ್ರದಾನ ಮಾಡಲಾಗುತ್ತದೆ. ಮಮ್ಮುಟ್ಟಿ, ಧರ್ಮೇಂದ್ರ, ಅಲ್ಕಾ ಯಾಗ್ನಿಕ್, ಆರ್. ಮಾಧವನ್ ಮುಂತಾದವರಿಗೆ ಪ್ರಶಸ್ತಿ ನೀಡಲಾಗುತ್ತದೆ. ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಗೌರವಿಸಲಾಗುತ್ತಿದೆ. ಮನರಂಜನಾ ಕ್ಷೇತ್ರದಲ್ಲಿ ಈ ಬಾರಿ ಪದ್ಮ ಪ್ರಶಸ್ತಿಗೆ ಭಾಜನರಾದ ಪ್ರಮುಖರ ವಿವರ ಇಲ್ಲಿದೆ.

ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?