AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Droupadi Murmu

Droupadi Murmu

ದ್ರೌಪದಿ ಮುರ್ಮು

ದ್ರೌಪದಿ ಮುರ್ಮು 2022 ರ ಜುಲೈ 25ರಂದು ಭಾರತದ 15 ನೇ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದಕ್ಕೂ ಮೊದಲು ಅವರು 2015 ರಿಂದ 2021 ರವರೆಗೆ ಜಾರ್ಖಂಡ್ ರಾಜ್ಯಪಾಲರಾಗಿದ್ದರು. 1958 ರ ಜೂನ್ 20 ರಂದು ಒಡಿಶಾದ ಮಯೂರ್‌ಭಂಜ್ ಜಿಲ್ಲೆಯ ಉಪರಬೇಡ ಗ್ರಾಮದ ಸಂತಾಲಿ ಬುಡಕಟ್ಟು ಕುಟುಂಬದಲ್ಲಿ ಜನಿಸಿದ ಮುರ್ಮು ಅವರ ಆರಂಭಿಕ ಜೀವನ ಕಷ್ಟಗಳು ಮತ್ತು ಹೋರಾಟಗಳಿಂದ ಕೂಡಿತ್ತು. ಹಳ್ಳಿಯ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣವನ್ನು ಮುಗಿಸಿದ ನಂತರ ಅವರು ಸ್ವ ಪ್ರಯತ್ನದಿಂದ ತನ್ನ ಹೆಚ್ಚಿನ ಅಧ್ಯಯನಕ್ಕಾಗಿ ಭುವನೇಶ್ವರಕ್ಕೆ ತೆರಳಿದರು. ಭುವನೇಶ್ವರದ ರಮಾದೇವಿ ಮಹಿಳಾ ಮಹಾವಿದ್ಯಾಲಯದಿಂದ ಕಲಾ ಪದವಿಯನ್ನು ಪಡೆದರು. ತಮ್ಮ ಹಳ್ಳಿಯಿಂದ ಕಾಲೇಜಿಗೆ ಹೋದ ಮೊದಲ ಹುಡುಗಿ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾದರು.

1979 ರಿಂದ 1983 ರವರೆಗೆ ಒಡಿಶಾ ಸರ್ಕಾರದ ನೀರಾವರಿ ಮತ್ತು ವಿದ್ಯುತ್ ಇಲಾಖೆಯಲ್ಲಿ ಕಿರಿಯ ಸಹಾಯಕರಾಗಿ ಸೇವೆ ಸಲ್ಲಿಸಿದರು. ನಂತರ, 1994 ರಿಂದ 1997 ರವರೆಗೆ, ಅವರು ರಾಯರಂಗಪುರದ ಶ್ರೀ ಅರಬಿಂದೋ ಸಮಗ್ರ ಶಿಕ್ಷಣ ಕೇಂದ್ರದಲ್ಲಿ ಗೌರವ ಶಿಕ್ಷಕರಾಗಿ ಸೇವೆ ಸಲ್ಲಿಸಿದರು. ಮುರ್ಮು 2000 ರಲ್ಲಿ ರಾಯರಂಗ್‌ಪುರ ಕ್ಷೇತ್ರದಿಂದ ಒಡಿಶಾ ವಿಧಾನಸಭೆಗೆ ಆಯ್ಕೆಯಾದರು ಮತ್ತು 2009 ರವರೆಗೆ ಎರಡು ಅವಧಿಗೆ ಶಾಸಕರಾಗಿದ್ದರು. ಈ ಅವಧಿಯಲ್ಲಿ, ಅವರು 2000 ಮಾರ್ಚ್ 6 ರಿಂದ 2002 ರ ಆಗಸ್ಟ್ 6 ರವರೆಗೆ ಒಡಿಶಾ ಸರ್ಕಾರದ ವಾಣಿಜ್ಯ ಮತ್ತು ಸಾರಿಗೆ ಇಲಾಖೆಯ ರಾಜ್ಯ (ಸ್ವತಂತ್ರ ಉಸ್ತುವಾರಿ) ಸಚಿವರಾಗಿ ಮತ್ತು 2002 ಆಗಸ್ಟ್ 6 ರಿಂದ 2004 ರ ಮೇ 16 ವರೆಗೆ ಮೀನುಗಾರಿಕೆ ಮತ್ತು ಪ್ರಾಣಿ ಸಂಪನ್ಮೂಲಗಳ ಇಲಾಖೆಯಲ್ಲಿ ಸೇವೆ ಸಲ್ಲಿಸಿದರು

ಇನ್ನೂ ಹೆಚ್ಚು ಓದಿ

ಪ್ರಭಾಕರ್ ಕೋರೆ ಸೇರಿ ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ

Padma Awards 2026: ನವದೆಹಲಿಯ ರಾಷ್ಟ್ರಪತಿ ಭವನದಲ್ಲಿಂದು ರಾಷ್ಟ್ರಪತಿ ದ್ರೌಪದಿ ಮುರ್ಮು (droupadi murmu) ಅವರು ದೇಶದ ವಿವಿಧ ರಂಗಗಳ ಸಾಧಕರಿಗೆ ಪ್ರತಿಷ್ಠಿತ 'ಪದ್ಮ ಪ್ರಶಸ್ತಿ 2026'  (padma award 2026 ) ಪ್ರದಾನ ಮಾಡಿದರು. ಇನ್ನು ಕರ್ನಾಟಕದ ಐವರು ಸಾಧಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪದ್ಮ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಕೆ

ಸಂಪುಟ ಪುನಾರಚನೆ ವದಂತಿ; ರಾಷ್ಟ್ರಪತಿಯನ್ನು ಭೇಟಿ ಮಾಡಿದ ಪ್ರಧಾನಿ ಮೋದಿ

ಕೇಂದ್ರ ಸಚಿವ ಜಾರ್ಜ್ ಕುರಿಯನ್ ಅವರ ರಾಜ್ಯಸಭಾ ಅವಧಿ ಮುಗಿದು ಅವರು ರಾಜೀನಾಮೆ ನೀಡಿದ ಮರುದಿನವೇ ಪ್ರಧಾನಿ ನರೇಂದ್ರ ಮೋದಿ ಇಂದು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದ್ದಾರೆ. ಇದು ದೆಹಲಿ ರಾಜಕೀಯ ವಲಯದಲ್ಲಿ ಶೀಘ್ರದಲ್ಲೇ ಕೇಂದ್ರ ಸಚಿವ ಸಂಪುಟ ಪುನಾರಚನೆ ಆಗಲಿದೆ ಎಂಬ ವದಂತಿಗಳಿಗೆ ಪುಷ್ಟಿ ನೀಡಿದೆ. ಕೇಂದ್ರ ಅಲ್ಪಸಂಖ್ಯಾತರ ವ್ಯವಹಾರಗಳು ಹಾಗೂ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆಯ ರಾಜ್ಯ ಸಚಿವರಾಗಿದ್ದ ಜಾರ್ಜ್ ಕುರಿಯನ್ ಅವರಿಗೆ ಜೂನ್ 18ರಂದು ನಡೆದ ರಾಜ್ಯಸಭಾ ಚುನಾವಣೆಗೆ ಬಿಜೆಪಿ ಮತ್ತೆ ಟಿಕೆಟ್ ನೀಡಿರಲಿಲ್ಲ. ಅವರ ರಾಜ್ಯಸಭಾ ಅವಧಿಯು ಜೂನ್ 21ಕ್ಕೆ ಕೊನೆಗೊಂಡಿತ್ತು.

Padma Awards 2026 ನಟ ಮಮ್ಮುಟ್ಟಿ, ಗಾಯಕಿ ಅಲಕಾ ಯಾಗ್ನಿಕ್​ಗೆ ಪದ್ಮಭೂಷಣ; ಮಾಧವನ್, ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ವಿವಿಧ ರಂಗಗಳ ಸಾಧಕರಿಗೆ ಪ್ರತಿಷ್ಠಿತ 'ಪದ್ಮ ಪ್ರಶಸ್ತಿ 2026' ಅನ್ನು ಪ್ರದಾನ ಮಾಡಿದ್ದಾರೆ. ರಾಷ್ಟ್ರಪತಿ ಭವನದ ಗಣತಂತ್ರ ಮಂಟಪದಲ್ಲಿ ನಡೆದ ಈ ಭವ್ಯ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಪದ್ಮ ಪ್ರಶಸ್ತಿಯ ಎರಡನೇ ಹಂತದ ಸಮಾರಂಭದಲ್ಲಿ ಒಟ್ಟು 65 ಸಾಧಕರಿಗೆ (2 ಪದ್ಮವಿಭೂಷಣ, 7 ಪದ್ಮಭೂಷಣ ಹಾಗೂ 56 ಪದ್ಮಶ್ರೀ) ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇದಕ್ಕೂ ಮುನ್ನ ಮೇ 25ರಂದು ಮೊದಲ ಹಂತದ ಪ್ರಶಸ್ತಿ ಪ್ರದಾನ ಮಾಡಲಾಗಿತ್ತು.

ಇತಿಹಾಸ ಸೃಷ್ಟಿಸಿದ ಡೆಹ್ರಾಡೂನ್ ಐಎಂಎ: ಮೊದಲ ಬಾರಿಗೆ ಭಾರತೀಯ ಸೇನೆಗೆ ಅಧಿಕಾರಿಗಳಾಗಿ 9 ಮಹಿಳಾ ಕೆಡೆಟ್​ಗಳ ಸೇರ್ಪಡೆ

ಡೆಹ್ರಾಡೂನ್‌ನ ಪ್ರತಿಷ್ಠಿತ ಭಾರತೀಯ ಮಿಲಿಟರಿ ಅಕಾಡೆಮಿ (IMA) ಇತಿಹಾಸದಲ್ಲೇ ಮೊದಲ ಬಾರಿಗೆ 9 ಮಹಿಳಾ ಕೆಡೆಟ್‌ಗಳನ್ನು ಭಾರತೀಯ ಸೇನೆಗೆ ಸೇರ್ಪಡೆಗೊಳಿಸಿ ಐತಿಹಾಸಿಕ ಮೈಲಿಗಲ್ಲು ಸಾಧಿಸಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಸಮ್ಮುಖದಲ್ಲಿ ಈ ಕಾರ್ಯಕ್ರಮ ನಡೆದಿದ್ದು, ಇದು ಭಾರತದ ರಕ್ಷಣಾ ವಲಯದಲ್ಲಿ ಮಹಿಳಾ ಸಬಲೀಕರಣದ ಮಹತ್ವದ ಹೆಜ್ಜೆಯಾಗಿದೆ. ಲಕ್ಷಾಂತರ ಹೆಣ್ಣುಮಕ್ಕಳಿಗೆ ಇದೊಂದು ಪ್ರೇರಣೆಯಾಗಿದೆ.

ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿಯ ಹೆಗಲಿಗೊರಗಿ ಕಣ್ಣೀರಿಟ್ಟ ತಾಯಿ; ಮನಕಲಕುವ ವಿಡಿಯೋ ಇಲ್ಲಿದೆ

ಹುತಾತ್ಮ ಸಿಪಾಯಿ ಜಂಜಾಲ್ ಪ್ರವೀಣ್ ಪ್ರಭಾಕರ್ ಅವರಿಗೆ ಅವರ ಅಸಾಧಾರಣ ಶೌರ್ಯ, ಅದಮ್ಯ ಧೈರ್ಯ ಮತ್ತು ರಾಷ್ಟ್ರ ಸೇವೆಯಲ್ಲಿ ಅತ್ಯುನ್ನತ ತ್ಯಾಗಕ್ಕಾಗಿ ಮರಣೋತ್ತರವಾಗಿ ಕೀರ್ತಿ ಚಕ್ರವನ್ನು ನೀಡಲಾಯಿತು. ಈ ಪ್ರಶಸ್ತಿಯನ್ನು ಸ್ವೀಕರಿಸುವಾಗ ಅವರ ತಾಯಿ ದೂಖ ತಡೆಯಲಾರದೆ ಕಣ್ಣೀರಿಟ್ಟಿದ್ದಾರೆ. ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಸಿಪಾಯಿ ಜಂಜಾಲ್ ಪ್ರವೀಣ್ ಪ್ರಭಾಕರ್ ಅವರಿಗೆ ಮರಣೋತ್ತರ 'ಕೀರ್ತಿ ಚಕ್ರ' ಗೌರವ ನೀಡುವಾಗ ತಾಯಿಯ ಭಾವುಕ ಕ್ಷಣಗಳ ವಿಡಿಯೋ ವೈರಲ್ ಆಗಿದೆ.

ವೀರ ಯೋಧರಿಗೆ ರಾಷ್ಟ್ರಪತಿಯಿಂದ ಕೀರ್ತಿ ಚಕ್ರ, ವೀರ ಚಕ್ರ, ಶೌರ್ಯ ಚಕ್ರ ಪ್ರಶಸ್ತಿ ಪ್ರದಾನ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ರಕ್ಷಣಾ ವಲಯದಲ್ಲಿ ಅಪ್ರತಿಮ ಸಾಹಸ ಮತ್ತು ಶೌರ್ಯ ಪ್ರದರ್ಶಿಸಿದ ವೀರ ಯೋಧರಿಗೆ ಕೀರ್ತಿ ಚಕ್ರ, ವೀರ ಚಕ್ರ ಮತ್ತು ಶೌರ್ಯ ಚಕ್ರ ಪ್ರಶಸ್ತಿಗಳನ್ನು ಪ್ರದಾನ ಮಾಡಿದ್ದಾರೆ. ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಈ ಪ್ರಶಸ್ತಿಗಳನ್ನು ವಿತರಿಸಲಾಯಿತು. ಸಶಸ್ತ್ರ ಪಡೆಗಳ ಸರ್ವೋಚ್ಚ ಕಮಾಂಡರ್ ಆಗಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಈ ಪ್ರಶಸ್ತಿಗಳನ್ನು ನೀಡಿದರು. ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಮೂರೂ ಸಶಸ್ತ್ರ ಪಡೆಗಳ ಮುಖ್ಯಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಧರ್ಮೇಂದ್ರ, ಮಮ್ಮುಟ್ಟಿ, ಮಾಧವನ್, ಅಲ್ಕಾ ಯಾಗ್ನಿಕ್‌ ಸೇರಿ ಹಲವರಿಗೆ ಇಂದು (ಮೇ 25) ಪದ್ಮ ಪ್ರಶಸ್ತಿ ಪ್ರದಾನ

2026ನೇ ಸಾಲಿನ ಪದ್ಮ ಪ್ರಶಸ್ತಿಗಳನ್ನು ಇಂದು (ಮೇ 25) ಪ್ರದಾನ ಮಾಡಲಾಗುತ್ತದೆ. ಮಮ್ಮುಟ್ಟಿ, ಧರ್ಮೇಂದ್ರ, ಅಲ್ಕಾ ಯಾಗ್ನಿಕ್, ಆರ್. ಮಾಧವನ್ ಮುಂತಾದವರಿಗೆ ಪ್ರಶಸ್ತಿ ನೀಡಲಾಗುತ್ತದೆ. ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಗೌರವಿಸಲಾಗುತ್ತಿದೆ. ಮನರಂಜನಾ ಕ್ಷೇತ್ರದಲ್ಲಿ ಈ ಬಾರಿ ಪದ್ಮ ಪ್ರಶಸ್ತಿಗೆ ಭಾಜನರಾದ ಪ್ರಮುಖರ ವಿವರ ಇಲ್ಲಿದೆ.

ಗುಜರಾತ್‌ನ ಅಪಘಾತದಲ್ಲಿ 7 ಜನ ಸಾವು; ರಾಷ್ಟ್ರಪತಿ, ಪ್ರಧಾನಿ ಮೋದಿ ಸಂತಾಪ

ಗುಜರಾತ್​​ನ ಸುರೇಂದ್ರನಗರ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಉಂಟಾದ ಪ್ರಾಣಹಾನಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಗುಜರಾತ್‌ನಲ್ಲಿ ಇಂದು ಬೆಳಗ್ಗೆ ಟ್ರಕ್ ಹರಿದು 7 ಮಂದಿ ಸಾವನ್ನಪ್ಪಿ, 4 ಜನರಿಗೆ ಗಾಯಗಳಾಗಿತ್ತು. ವೇಗವಾಗಿ ಬಂದ ಟ್ರಕ್ ಯಾತ್ರಿಕರ ಗುಂಪಿನ ಮೇಲೆ ಡಿಕ್ಕಿ ಹೊಡೆದಿತ್ತು. ಬದುಕುಳಿದ ನಾಲ್ವರಲ್ಲಿ ಮೂವರು ಸಣ್ಣಪುಟ್ಟ ಗಾಯಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶಿವಕುಮಾರ ಸ್ವಾಮೀಜಿ ಜನ್ಮದಿನೋತ್ಸವ: ಸಿದ್ಧಗಂಗಾ ಮಠದ ಗುಣಗಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶಿವಕುಮಾರ ಸ್ವಾಮೀಜಿಗಳ 119ನೇ ಜನ್ಮದಿನೋತ್ಸವ ಕಾರ್ಯಕ್ರಮ ಹಿನ್ನೆಲೆ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದಾರೆ. ಮಠದ ತ್ರಿವಿಧ ದಾಸೋಹ, ಶಿಕ್ಷಣ ಮತ್ತು ರಾಷ್ಟ್ರ ವಿಕಾಸಕ್ಕೆ ನೀಡಿದ ಕೊಡುಗೆಯನ್ನು ಶ್ಲಾಘಿಸಿದ ಅವರು, ದಯವೇ ಧರ್ಮದ ಮೂಲವಯ್ಯ ಎಂಬಂತೆ ಶ್ರೀಮಠ ನಡೆಯುತ್ತಿದೆ ಎಂದು ಕೊಂಡಾಡಿದ್ದಾರೆ. ವಿವಿಧ ಇಲಾಖೆಗಳ ಕೇಂದ್ರ ಸಚಿವರು, ರಾಜ್ಯ ಸರ್ಕಾರದ ಮಂತ್ರಿಗಳು ಸೇರಿ ಹಲವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ತುಮಕೂರು: ಏ 1ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಏ.1ರಂದು ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ. ಶ್ರೀ ಶಿವಕುಮಾರ ಸ್ವಾಮೀಜಿಗಳ 119ನೇ ಜನ್ಮದಿನಾಚರಣೆ ಮತ್ತು ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅವರು ಸ್ವಾಮೀಜಿಗಳ ಗದ್ದುಗೆ ದರ್ಶನ ಪಡೆಯಲಿದ್ದು, ಜೊತೆಗೆ 10 ಸಾವಿರ ಮಕ್ಕಳೊಂದಿಗೆ ಸಂವಾದ ನಡೆಸಲಿದ್ದಾರೆ.

ಹೊಲಸು ರಾಜಕೀಯ, ದುರಹಂಕಾರ ತೃಣಮೂಲ ಕಾಂಗ್ರೆಸ್​ ಅನ್ನು ನಾಶಪಡಿಸುತ್ತೆ: ಪ್ರಧಾನಿ ಮೋದಿ

ಹೊಲಸು ರಾಜಕೀಯ, ದುರಹಂಕಾರ ತೃಣಮೂಲ ಕಾಂಗ್ರೆಸ್​ ಅನ್ನು ನಾಶಪಡಿಸುತ್ತೆ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ. ಡಾರ್ಜಿಲಿಂಗ್​ ಅಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗಾದ ಅವಮಾನದ ಬಗ್ಗೆ ಅವರು ಮಾತನಾಡಿದ್ದಾರೆ. ದ್ರೌಪದಿ ಮುರ್ಮು ಭಾಗವಹಿಸಿದ್ದ 9 ನೇ ಅಂತರರಾಷ್ಟ್ರೀಯ ಸಂತಾಲ್ ಸಮ್ಮೇಳನದಲ್ಲಿ ನಡೆದ ದುರಾಡಳಿತವನ್ನು ಉಲ್ಲೇಖಿಸಿದ ಮೋದಿ, ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಅನ್ನು ದುರಹಂಕಾರಿ ಎಂದು ಕರೆದರು.

ಡಾರ್ಜಿಲಿಂಗ್​​ನಲ್ಲಿ ರಾಷ್ಟ್ರಪತಿ ಮುರ್ಮು ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ, ವರದಿ ಕೇಳಿದ ಗೃಹ ಕಾರ್ಯದರ್ಶಿ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಾರ್ಜಿಲಿಂಗ್‌ನಲ್ಲಿ ನಡೆದ ಸಂತಾಲ್ ಸಮ್ಮೇಳನದಲ್ಲಿ ಶಿಷ್ಟಾಚಾರ ಉಲ್ಲಂಘನೆ ಮತ್ತು ಸ್ಥಳ ಬದಲಾವಣೆಯಿಂದ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಮತ್ತು ಸಚಿವರ ಗೈರುಹಾಜರಿ ಬಗ್ಗೆ ಪ್ರಶ್ನಿಸಿದ್ದಾರೆ. ಈ ಘಟನೆಯ ಕುರಿತು ಕೇಂದ್ರ ಗೃಹ ಕಾರ್ಯದರ್ಶಿಯವರು ಪಶ್ಚಿಮ ಬಂಗಾಳ ಸರ್ಕಾರದಿಂದ ವಿವರವಾದ ವರದಿ ಕೋರಿದ್ದಾರೆ. ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಕೂಡ ಟಿಎಂಸಿ ಸರ್ಕಾರವನ್ನು ತೀವ್ರವಾಗಿ ಟೀಕಿಸಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ನಾಚಿಕೆಗೇಡು ಎಂದಿದ್ದಾರೆ.