Ekadashi

Ekadashi

ಏಕಾದಶಿ – ಹಿಂದೂ ಪಂಚಾಂಗದ 12 ಮಾಸಗಳ ಶುಕ್ಲ ಪಕ್ಷದ ಮತ್ತು ಕೃಷ್ಣ ಪಕ್ಷದ ಹನ್ನೊಂದನೆಯ ದಿನವನ್ನು ಏಕಾದಶಿ ಎನ್ನಲಾಗುತ್ತದೆ. ಒಂದು ವರ್ಷದಲ್ಲಿ 24 ಏಕಾದಶಿಗಳಿವೆ, ಅಂದರೆ ಪ್ರತಿ ತಿಂಗಳು ಎರಡು ಏಕಾದಶಿ ಉಪವಾಸಗಳನ್ನು ಆಚರಿಸಲಾಗುತ್ತದೆ.ಈ ದಿನದಂದು ಶ್ರದ್ಧಾ ಭಕ್ತಿಯಿಂದ ದೇವರನ್ನು ಪೂಜಿಸುವುದು ಮತ್ತುಉಪವಾಸ ಮಾಡುವ ಸಂಪ್ರದಾಯವಿದೆ. ಉಪವಾಸದಲ್ಲಿ ಕೆಲವರು ಅನ್ನವನ್ನು ಮಾತ್ರ ತ್ಯಜಿಸಿ ಉಪವಾಸ ಆಚರಿಸಿದರೆ, ಮತ್ತೆ ಕೆಲವರು ಹನಿ ನೀರನ್ನೂ ಕುಡಿಯದೆ, ನಿರಾಹಾರ ವ್ರತವನ್ನು ಆಚರಿಸುತ್ತಾರೆ. ಈ ಏಕಾದಶಿ ವ್ರತವನ್ನು ಆಚರಿಸುವುದರಿಂದ ಈ ಜನ್ಮದಲ್ಲಿನ ಪಾಪಗಳಿಂದ ಮಾತ್ರವಲ್ಲದೆ ಕಳೆದ ಏಳು ಜನ್ಮಗಳ ಪಾಪಗಳಿಂದಲೂ ಮುಕ್ತಿ ಪಡೆಯಬಹುದು ಎಂದು ನಂಬಲಾಗಿದೆ

ಇನ್ನೂ ಹೆಚ್ಚು ಓದಿ

Ekadashi 2025: ಈ ವರ್ಷದ ಏಕಾದಶಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ

ಹಿಂದೂ ಪಂಚಾಂಗದ 12 ಮಾಸಗಳ ಶುಕ್ಲ ಪಕ್ಷದ ಮತ್ತು ಕೃಷ್ಣ ಪಕ್ಷದ ಹನ್ನೊಂದನೆಯ ದಿನವನ್ನು ಏಕಾದಶಿ ಎನ್ನಲಾಗುತ್ತದೆ. ಒಂದು ವರ್ಷದಲ್ಲಿ 24 ಏಕಾದಶಿಗಳಿವೆ, ಅಂದರೆ ಪ್ರತಿ ತಿಂಗಳು ಎರಡು ಏಕಾದಶಿ ಉಪವಾಸಗಳನ್ನು ಆಚರಿಸಲಾಗುತ್ತದೆ. 2025ರಲ್ಲಿ ಯಾವ ದಿನಾಂಕಗಳಲ್ಲಿ ಏಕಾದಶಿ ಆಚರಿಸಲಾಗುತ್ತದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

Vaikuntha Ekadashi: ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ

ಕರ್ನಾಟಕದಾದ್ಯಂತ ವೈಕುಂಠ ಏಕಾದಶಿ ಸಂಭ್ರಮ ಮುಗಿಲುಮುಟ್ಟಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ನಾಡಿನ ವಿವಿಧ ವೆಂಕಟರಮಣಸ್ವಾಮಿ ದೇವಸ್ಥಾನಗಳಲ್ಲಿ ವಿಶೇಷ ಅಲಂಕಾರ ಮಾಡಲಾಗಿದ್ದು, ವಿಶೇಷ ಪೂಜೆಗಳು ನೆರವೇರುತ್ತಿವೆ. ಮುಂಜಾನೆಯಿಂದಲೇ ದೇಗುಗಳಿಗೆ ಭಕ್ತರ ದಂಡೇ ಹರಿದುಬರುತ್ತಿದೆ. ಕೋಲಾರದ ಚಿಕ್ಕತಿರುಪತಿಯಲ್ಲೂ ವೈಕುಂಠ ಏಕಾದಶಿ ಆಚರಣೆ ಜೋರಾಗಿದೆ. ವಿಡಿಯೋ ಇಲ್ಲಿದೆ.

ವೈಕುಂಠ ಏಕಾದಶಿ: ನಾಡಿನ ತಿಮ್ಮಪ್ಪನ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಫೋಟೋಸ್​​ ನೋಡಿ

ವೈಕುಂಠ ಏಕಾದಶಿ, ಹಿಂದೂ ಧರ್ಮದ ಪವಿತ್ರ ದಿನ, ಮಾರ್ಗಶಿರ ಮಾಸದ ಶುಕ್ಲ ಪಕ್ಷದಲ್ಲಿ ಆಚರಿಸಲಾಗುತ್ತದೆ. ಈ ದಿನ ಶ್ರೀ ವಿಷ್ಣುವಿಗೆ ಸಮರ್ಪಿತವಾಗಿದೆ. ರಾಜ್ಯದ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳು, ಹವನಗಳು ನಡೆಯುತ್ತವೆ. ಲಕ್ಷಾಂತರ ಭಕ್ತರು ದೇವರ ದರ್ಶನ ಪಡೆಯಲು ಸಾಲುಗಟ್ಟಿ ನಿಂತಿದ್ದಾರೆ. ವೈಕುಂಠ ದ್ವಾರದ ಮೂಲಕ ದೇವರ ದರ್ಶನ ಪಡೆಯುವುದು ವಿಶೇಷವಾಗಿದೆ.

ವೈಕುಂಠ ಏಕಾದಶಿ: ದೇವಸ್ಥಾನಗಳಿಗೆ ಭಕ್ತರ ದಂಡು, ಬೆಂಗಳೂರಿನ ಈ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧ 

ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಬೆಂಗಳೂರಿನ ಕೋಟೆ ವೆಂಕಟರಮಣಸ್ವಾಮಿ ದೇವಸ್ಥಾನ, ತಿರುಮಲಗಿರಿ ಲಕ್ಷ್ಮಿ ವೆಂಕಟೇಶ್ವರಸ್ವಾಮಿ ದೇವಸ್ಥಾನ ಮತ್ತು ಇಸ್ಕಾನ್ ದೇವಸ್ಥಾನಕ್ಕೆ ಸಹಸ್ರಾರು ಭಕ್ತರು ನಸುಕಿನ ಜಾವದಿಂದಲೇ ತೆರಳುತ್ತಿದ್ದಾರೆ. ಇದರಿಂದ, ದೇವಸ್ಥಾನದ ಅಕ್ಕ-ಪಕ್ಕದ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗದಂತೆ ಮುಂಜಾಗ್ರತಾ ಕ್ರಮವಾಗಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.

Vaikuntha Ekadashi 2025: ವೈಕುಂಠ ಏಕದಾಶಿಯಂದು ಯಾವ ಬಣ್ಣದ ಬಟ್ಟೆ ಹಾಗೂ ಆಭರಣ ಧರಿಸಬೇಕು?

ವೈಕುಂಠ ಏಕಾದಶಿಯು ಹಿಂದೂ ಸಂಪ್ರದಾಯದಲ್ಲಿ ಮಹತ್ವದ ಸ್ಥಾನವನ್ನು ನೀಡಲಾಗಿದ್ದು, ಇದು ವಿ‍ಷ್ಣುವಿನ ಆರಾಧನೆ ಹಾಗೂ ಉಪವಾಸಕ್ಕೆ ಪ್ರಸಿದ್ಧಿಯಾಗಿದೆ. ಈ ಬಾರಿಯ ವೈಕುಂಠ ಏಕಾದಶಿಯು ಹೊಸ ವರ್ಷದ ಮೊದಲ ತಿಂಗಳಿನಲ್ಲಿ ಬಂದಿದ್ದು, ಜನವರಿ 10 ರಂದು ವೈಕುಂಠ ಏಕಾದಶಿ ಆಚರಿಸಲಾಗುತ್ತದೆ. ಈ ವಿಶೇಷ ದಿನದಂದು ವಿಷ್ಣುವನ್ನು ಬಹಳ ಶ್ರದ್ಧೆ ಹಾಗೂ ಭಕ್ತಿಯಿಂದ ಪೂಜಿಸಿದರೆ ಇಷ್ಟಾರ್ಥಗಳು ಈಡೇರುತ್ತದೆ. ಹಾಗಾದ್ರೆ ಈ ವೈಕುಂಠ ಏಕಾದಶಿ ಯಾವ ಬಣ್ಣದ ಬಟ್ಟೆ ಹಾಗೂ ಯಾವ ವಿಧದ ಆಭರಣವನ್ನು ಧರಿಸಿದರೆ ವಿಷ್ಣುವಿನ ಕೃಪೆಗೆ ಪಾತ್ರರಾಗಲು ಸಾಧ್ಯ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.

Vaikuntha Ekadashi 2025: ವೈಕುಂಠ ಏಕದಾಶಿಯಂದು ಅಪ್ಪಿತಪ್ಪಿಯೂ ಈ ಆಹಾರಗಳನ್ನು ಸೇವನೆ ಮಾಡಬೇಡಿ

ವೈಕುಂಠ ಏಕಾದಶಿಯ ದಿನ ವಿಷ್ಣುವನ್ನು ಪೂಜಿಸಿ, ಉಪವಾಸ ಮಾಡುವುದು ಮತ್ತು ದಾನ ಮಾಡುವುದು ಬಹಳ ಪುಣ್ಯದ ಕೆಲಸವೆಂದು ಪರಿಗಣಿಸಲಾಗಿದೆ. ಆದರೆ ಈ ಉಪವಾಸದಂದು ಜನರು ತಿಳಿದೋ, ತಿಳಿಯದೆಯೋ ಕೆಲವು ಆಹಾರಗಳನ್ನು ಸೇವನೆ ಮಾಡುತ್ತಾರೆ. ಇದು ಆರೋಗ್ಯದ ದೃಷ್ಟಿಯಿಂದಲೂ ಒಳ್ಳೆಯದಲ್ಲ, ಜೊತೆಗೆ ಶಾಸ್ತ್ರವು ಇದನ್ನು ನಿಷೇಧಿಸುತ್ತದೆ. ಹಾಗಾದರೆ ವೈಕುಂಠ ಏಕಾದಶಿಯ ದಿನ ಯಾವ ರೀತಿಯ ಆಹಾರಗಳನ್ನು ಸೇವನೆ ಮಾಡಬಾರದು ಎಂಬುದನ್ನು ತಿಳಿದುಕೊಳ್ಳಿ.

Vaikuntha Ekadashi 2025: ವೈಕುಂಠ ಏಕಾದಶಿಯಂದು ಈ ತಪ್ಪುಗಳನ್ನು ಮಾಡಬೇಡಿ

ಈ ವರ್ಷದ ವೈಕುಂಠ ಏಕಾದಶಿ ಜನವರಿ 10 ರಂದು ಆಚರಿಸಲಾಗುತ್ತದೆ. ಈ ಪವಿತ್ರ ದಿನದಂದು ಶ್ರೀ ವಿಷ್ಣುವಿನ ಪೂಜೆ, ಉಪವಾಸ, ಮತ್ತು ದಾನ ಮಾಡುವುದು ಬಹಳ ಮುಖ್ಯ. ಅನ್ನ, ವಸ್ತ್ರ, ಧನ, ತುಳಸಿ ಗಿಡ, ಕಂಬಳಿ, ಧಾನ್ಯಗಳ ದಾನ ಪುಣ್ಯಕರ. ಋಣಾತ್ಮಕ ಆಲೋಚನೆಗಳು, ಸುಳ್ಳು, ಕೋಪ, ಮಾಂಸಾಹಾರ ಮತ್ತು ಈರುಳ್ಳಿ-ಬೆಳ್ಳುಳ್ಳಿ ಸೇವನೆಯನ್ನು ತಪ್ಪಿಸಬೇಕು. ಈ ದಿನದ ಆಚರಣೆಯಿಂದ ಮೋಕ್ಷ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಇದೆ.

Vaikuntha Ekadashi 2025: ವೈಕುಂಠ ಏಕಾದಶಿಗೆ ಉಪವಾಸ ಮಾಡುವುದೇಕೆ? ಅದರ ಹಿಂದಿನ ಧಾರ್ಮಿಕ ಮಹತ್ವ ತಿಳಿಯಿರಿ

ವೈಕುಂಠ ಏಕಾದಶಿ, ಹಿಂದೂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದು. ಈ ದಿನ ಶ್ರೀವಿಷ್ಣುವಿಗೆ ಸಮರ್ಪಿತವಾಗಿದೆ. ಈ ಪವಿತ್ರ ದಿನ ಉಪವಾಸ ಮತ್ತು ಪೂಜೆಯ ಮಾಡುವುದರಿಂದ ಪಾಪಗಳಿಂದ ಮುಕ್ತಿಪಡೆಯಬಹುದು ಮತ್ತು ವಿಷ್ಣುವಿನ ಅನುಗ್ರಹ ನಿಮ್ಮ ಮೇಲೆ ಸದಾ ಇರುತ್ತದೆ ಎಂದು ನಂಬಲಾಗಿದೆ. 2024ರ ವೈಕುಂಠ ಏಕಾದಶಿ ಜನವರಿ 10 ರಂದು ಆಚರಿಸಲಾಗುತ್ತದೆ. ಈ ಲೇಖನವು ದಿನಾಂಕ, ಮಹತ್ವ ಮತ್ತು ಪೂಜಾ ವಿಧಾನಗಳನ್ನು ವಿವರಿಸುತ್ತದೆ.

Putrada Ekadashi 2025: ಪುತ್ರದಾ ಏಕಾದಶಿಯಂದು ಈ ಮಂತ್ರ ಪಠಿಸಿದರೆ ಸಂತಾನ ಭಾಗ್ಯ ಖಚಿತ

ಹಿಂದೂ ಧರ್ಮದಲ್ಲಿ ಪುಷ್ಯ ಪುತ್ರದಾ ಏಕಾದಶಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಸಂತಾನ ಭಾಗ್ಯವಿಲ್ಲದೆ ನೋವು ಅನುಭವಿಸುತ್ತಿರುವ ದಂಪತಿಗಳು ಈ ದಿನ ಶುದ್ಧ ಮನಸ್ಸಿನಿಂದ ವಿಷ್ಣುವನ್ನು ಪೂಜಿಸುವುದರಿಂದ ಸಂತಾನ ಪ್ರಾಪ್ತಿಯಾಗುತ್ತದೆ. ಪುತ್ರಾದ ಏಕಾದಶಿಯ ದಿನದಂದು ಕೈಗೊಳ್ಳಬೇಕಾದ ಕೆಲವು ವಿಶೇಷ ಕ್ರಮಗಳ ಬಗ್ಗೆ ಇಲ್ಲಿ ತಿಳಿದುಕೊಳ್ಳಿ.

Vaikunta Ekadasi 2025: ವೈಕುಂಠ ಏಕಾದಶಿಗೆ ತಿರುಪತಿಗೆ ಹೋಗುತ್ತಿದ್ದೀರಾ? ಹಾಗಿದ್ರೆ ಈ ಮಾಹಿತಿ ನಿಮಗಾಗಿ

ತಿರುಮಲದಲ್ಲಿ ಜನವರಿ 10 ರಿಂದ 19 ರವರೆಗೆ ವೈಕುಂಠ ಏಕಾದಶಿ ಉತ್ಸವ ನಡೆಯಲಿದೆ. ವೈಕುಂಡ ದ್ವಾರ ದರ್ಶನಕ್ಕಾಗಿ ಆನ್‌ಲೈನ್‌ನಲ್ಲಿ ಟಿಕೆಟ್‌ಗಳು ಬಿಡುಗಡೆಯಾಗಿವೆ. ಉಚಿತ ದರ್ಶನಕ್ಕೆ ಟೋಕನ್‌ಗಳನ್ನು ವಿವಿಧ ಕೌಂಟರ್‌ಗಳಲ್ಲಿ ವಿತರಿಸಲಾಗುತ್ತಿದೆ. ಟೋಕನ್ ಹೊಂದಿರುವ ಭಕ್ತರಿಗೆ ಮಾತ್ರ ದರ್ಶನ ಪಡೆಯುವ ಅವಕಾಶ ನೀಡಲಾಗಿದೆ. ಜೊತೆಗೆ ಈ ಅವಧಿಯಲ್ಲಿ ವಿಐಪಿ ದರ್ಶನ ರದ್ದು ಮಾಡಲಾಗಿದೆ.

ದರೋಡೆಕೋರನಿಂದ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನ
ದರೋಡೆಕೋರನಿಂದ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನ
ರಾಜ್ಯಾಧ್ಯಕ್ಷನ ಚುನಾವಣೆಯನ್ನು ಶಿವರಾಜ್ ಚೌಹಾನ್ ನೋಡಿಕೊಳ್ಳುತ್ತಾರೆ: ಅಶೋಕ
ರಾಜ್ಯಾಧ್ಯಕ್ಷನ ಚುನಾವಣೆಯನ್ನು ಶಿವರಾಜ್ ಚೌಹಾನ್ ನೋಡಿಕೊಳ್ಳುತ್ತಾರೆ: ಅಶೋಕ
ವರಿಷ್ಠರು ದೆಹಲಿಗೆ ತೆರಳಬೇಕಿದ್ದರಿಂದ ಬೇಗ ಭಾಷಣ ಮುಗಿಸಿದ ಸಿದ್ದರಾಮಯ್ಯ
ವರಿಷ್ಠರು ದೆಹಲಿಗೆ ತೆರಳಬೇಕಿದ್ದರಿಂದ ಬೇಗ ಭಾಷಣ ಮುಗಿಸಿದ ಸಿದ್ದರಾಮಯ್ಯ
ಅಮೆರಿಕದಲ್ಲಿನ ಅಭಿಮಾನಿಗಳ ಎದುರು ಹಾಡು ಹೇಳಿ ರಂಜಿಸಿದ ಶಿವರಾಜ್​ಕುಮಾರ್
ಅಮೆರಿಕದಲ್ಲಿನ ಅಭಿಮಾನಿಗಳ ಎದುರು ಹಾಡು ಹೇಳಿ ರಂಜಿಸಿದ ಶಿವರಾಜ್​ಕುಮಾರ್
ಪ್ರಧಾನ ಮಂತ್ರಿ ಹುದ್ದೆಯನ್ನೇ ಸೋನಿಯಾ ಗಾಂಧಿ ತ್ಯಾಗ ಮಾಡಿದ್ದರು: ಖರ್ಗೆ
ಪ್ರಧಾನ ಮಂತ್ರಿ ಹುದ್ದೆಯನ್ನೇ ಸೋನಿಯಾ ಗಾಂಧಿ ತ್ಯಾಗ ಮಾಡಿದ್ದರು: ಖರ್ಗೆ
ಎಐಸಿಸಿ ಕಟ್ಟಡಕ್ಕೆ ಗಾಂಧಿ ಭವನ ಅಂತ ಯಾಕೆ ಹೆಸರಿಟ್ಟಿಲ್ಲ? ಆರ್ ಅಶೋಕ
ಎಐಸಿಸಿ ಕಟ್ಟಡಕ್ಕೆ ಗಾಂಧಿ ಭವನ ಅಂತ ಯಾಕೆ ಹೆಸರಿಟ್ಟಿಲ್ಲ? ಆರ್ ಅಶೋಕ
ಪಕ್ಷದ ವಿದ್ಯಮಾನಗಳಿಂದ ತಳಮಟ್ಟದ ಕಾರ್ಯಕರ್ತ ನೊಂದಿದ್ದಾನೆ: ಸುನೀಲ ಕುಮಾರ್
ಪಕ್ಷದ ವಿದ್ಯಮಾನಗಳಿಂದ ತಳಮಟ್ಟದ ಕಾರ್ಯಕರ್ತ ನೊಂದಿದ್ದಾನೆ: ಸುನೀಲ ಕುಮಾರ್
ಬಿಗ್​ಬಾಸ್ ಮನೆಯಲ್ಲಿ ‘ಯಜಮಾನ’, ಝಾನ್ಸಿ ಆವಾಜ್​ಗೆ ತಲೆತಗ್ಗಿಸಿದ ರಜತ್
ಬಿಗ್​ಬಾಸ್ ಮನೆಯಲ್ಲಿ ‘ಯಜಮಾನ’, ಝಾನ್ಸಿ ಆವಾಜ್​ಗೆ ತಲೆತಗ್ಗಿಸಿದ ರಜತ್
ಭೈರತಿ ಸುರೇಶ್ ಕಾರಿಗೆ ಎಸ್ಕಾರ್ಟ್ ವಾಹನ ಟಚ್: ಪೊಲೀಸರಿಗೆ ಬೈಯ್ದ ಸಚಿವ
ಭೈರತಿ ಸುರೇಶ್ ಕಾರಿಗೆ ಎಸ್ಕಾರ್ಟ್ ವಾಹನ ಟಚ್: ಪೊಲೀಸರಿಗೆ ಬೈಯ್ದ ಸಚಿವ
Video: ರಿಯಲ್ ಎಸ್ಟೇಟ್ ಬ್ರೋಕರ್​ ಕೆನ್ನೆಗೆ ಬಾರಿಸಿದ ಬಿಜೆಪಿ ಸಂಸದ
Video: ರಿಯಲ್ ಎಸ್ಟೇಟ್ ಬ್ರೋಕರ್​ ಕೆನ್ನೆಗೆ ಬಾರಿಸಿದ ಬಿಜೆಪಿ ಸಂಸದ