AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Elections

Elections

ಚುನಾವಣೆ ಎನ್ನುವುದು ಒಂದು ಔಪಚಾರಿಕ ವ್ಯವಸ್ಥೆ, ನಿರ್ಧಾರ ಮಾಡುವ ಪ್ರಕ್ರಿಯೆ. ಇದರಲ್ಲಿ, ಜನಸಮೂಹ ಒಬ್ಬನನ್ನು ಸಾರ್ವಜನಿಕ ಕ್ಷೇತ್ರದ ಅಧಿಕಾರವನ್ನು ಹಿಡಿಯಲು ಮಾಡುವ ಆಯ್ಕೆ. ಚು‌‌ನಾವಣೆಗಳು ಒಂದು ಸಾಧಾರಣ ಯಾಂತ್ರಿಕದಲ್ಲಿ ಆಧುನಿಕ ಪ್ರಾತಿನಿಧಿಕ ಪ್ರಜಾಪ್ರಭುತ್ವವಾಗಿ 17ನೇ ಶತಮಾನದಿಂದ ನಡೆಯುತ್ತಿದೆ. ಚುನಾವಣೆಗಳು-ಶಾಸಕಾಂಗಳಲ್ಲಿ, ಕೆಲವೊಮ್ಮೆ ಕಾರ್ಯಾಂಗ ಮತ್ತು ನ್ಯಾಯಾಂಗಗಳಲ್ಲಿ ಮತ್ತು ಪ್ರಾದೇಶಿಕ ಹಾಗೂ ಸ್ಥಳೀಯ ಸರ್ಕಾರಗಳಿಗೆ ಅಧಿಕಾರಸ್ಥರನ್ನು ತುಂಬುತ್ತದೆ. ಚುನಾವಣೆ ಅಂದರೆ ಕೇವಲ ವಿಧಾನಸಭೆ, ಲೋಕಸಭೆ, ವಿಧಾನಪರಿಷತ್ ಚುನಾವಣೆ ಮಾತ್ರ ಅಲ್ಲ. ಖಾಸಗಿ ಮತ್ತು ವ್ಯಾಪಾರದ ಸಂಘಟನೆಗಳಲ್ಲಿ, ಕ್ಲಬ್‌ಗಳಿಂದ ಹಿಡಿದು ಸ್ವಯಂ ಸೇವಾ ಸಂಘಟನೆ ಮತ್ತು ಪಾಲಿಕೆಗಳಲ್ಲೂ ಸಹ ಈ ಚುನಾವಣೆ ಪ್ರಕ್ರಿಯೆ ನಡೆಯುತ್ತದೆ.

ಪ್ರಾಚೀನ ರೋಮ್‌ನಲ್ಲಿ ಮತ್ತು ಮಧ್ಯಕಾಲೀನ ಯುಗದ ಪೂರ್ತಿ ಹೋಲಿ ರೋಮನ್ ಎಂಪರರ್ ಹಾಗು ದಿ ಪೋಪ್ ಅವರಂಥ ಆಳುವವರನ್ನು ಆಯ್ಕೆ ಮಾಡಲು ಚುನಾವಣೆಗಳನ್ನು ಬಳಸಲಾಗುತ್ತಿತ್ತು. 17ನೇ ಶತಮಾನದ ಆರಂಭದವರೆಗೂ, ಉತ್ತರ ಅಮೇರಿಕಾದಲ್ಲಿ ಮತ್ತು ಯುರೋಪಿ ನಲ್ಲಿ ಪ್ರತಿನಿಧಿ ಸರ್ಕಾರದ ಆಲೋಚನೆ ಆಗುವವರೆಗೂ ಸರಕಾರಿ ಅಧಿಕಾರಿಗಳನ್ನೊಳಗೊಂಡ ಇಂದಿನಂತಹ ಆಧುನಿಕ ಸಾರ್ವಜನಿಕ ಚುನಾವಣೆಗಳ ಆಲೋಚನೆ ಮೂಡಿರಲಿಲ್ಲ. ಅನೇಕ ಪ್ರಜಾಪ್ರಭುತ್ವ ರಾಜಕೀಯ ವ್ಯವಸ್ಥೆಗಳಲ್ಲಿ,ಸಾರ್ವಜನಿಕ ಆಡಳಿತದ ಹಲವು ಹಂತಗಳಿಗೆ ಅಥವಾ ಭೌಗೋಳಿಕ ವ್ಯಾಪ್ತಿಗೆ ತಾಳೆಯಾಗುವಂತೆ ವಿವಿಧ ಶೈಲಿಯ ಚುನಾವಣೆಗಳಿವೆ. ಕೆಲವು ಸಾಮಾನ್ಯ ಶೈಲಿಯ ಚುನಾವಣೆ ಎಂದರೆ ಅಧ್ಯಕ್ಷೀಯ ಚುನಾವಣೆ, ಸಾರ್ವತ್ರಿಕ ಚುನಾವಣೆ, ಪ್ರಾಥಮಿಕ ಚುನಾವಣೆ, ಮರು ಚುನಾವಣೆ, ಸ್ಥಳೀಯ ಚುನಾವಣೆ.

ಇನ್ನೂ ಹೆಚ್ಚು ಓದಿ

ಕರ್ನಾಟಕ SIR: ರಾಜ್ಯದ ASDDO ಮತದಾರರ ಪೈಕಿ ಅರ್ಧದಷ್ಟು ಬೆಂಗಳೂರಿನಲ್ಲೇ!

ಕರ್ನಾಟಕದ SIR ಪ್ರಕ್ರಿಯೆಯಲ್ಲಿ ಬೆಂಗಳೂರಿನ 36.75 ಲಕ್ಷ ಮತದಾರರು ASDDO ಪಟ್ಟಿಗೆ ಸೇರಿದ್ದಾರೆ. ರಾಜ್ಯದ ಒಟ್ಟು 84 ಲಕ್ಷ ಎಸ್​​ಡಿಡಿಒ ಮತದಾರರಲ್ಲಿ ಬೆಂಗಳೂರಿನ ಪಾಲು ಶೇ 46.7ರಷ್ಟಿದ್ದು, ಆಗಸ್ಟ್ 8ರೊಳಗೆ ತಪ್ಪಾಗಿ ಗುರುತಿಸಲ್ಪಟ್ಟ ಮತದಾರರು ಅಗತ್ಯ ಕ್ರಮ ಕೈಗೊಳ್ಳಬೇಕಿದೆ. ಈ ಹಿನ್ನೆಲೆಯಲ್ಲಿ ಎಸ್​​ಡಿಡಿಒ ಮತದಾರರು ಎಂದರೆ ಯಾರು? ಬೆಂಗಳೂರಿನಲ್ಲೇ ಹೆಚ್ಚಿರುವುದು ಯಾಕೆ? ಇಲ್ಲಿದೆ ಮಾಹಿತಿ.

ಬಿಹಾರದ ಬಂಕಿಪುರ ಉಪಚುನಾವಣೆ; ಅಭಿಷೇಕ್ ಸಿನ್ಹಾ ಬದಲು ಬಿಜೆಪಿಯಿಂದ ನೀರಜ್ ಕುಮಾರ್ ಸಿನ್ಹಾ ಕಣಕ್ಕೆ

ಬಂಕಿಪುರ ವಿಧಾನಸಭಾ ಉಪಚುನಾವಣೆಯಿಂದ ಬಿಜೆಪಿ ಅಭ್ಯರ್ಥಿ ಅಭಿಷೇಕ್ ಸಿನ್ಹಾ ತಮ್ಮ ನಾಮಪತ್ರವನ್ನು ಹಿಂತೆಗೆದುಕೊಂಡಿದ್ದಾರೆ. ಅವರು ತಮ್ಮ ನಾಮಪತ್ರವನ್ನು ಹಿಂತೆಗೆದುಕೊಂಡಿರುವುದಾಗಿ ರಾಜ್ಯಾಧ್ಯಕ್ಷ ಸಂಜಯ್ ಸರವಾಗಿ ಅವರಿಗೆ ಪತ್ರವೊಂದನ್ನು ಸಲ್ಲಿಸಿದ್ದಾರೆ. ಅವರು ತಮ್ಮ ನಾಮಪತ್ರ ಹಿಂತೆಗೆದುಕೊಳ್ಳುವಿಕೆಗೆ ಕೌಟುಂಬಿಕ ಕಾರಣಗಳನ್ನು ಉಲ್ಲೇಖಿಸಿದ್ದಾರೆ. ಹೀಗಾಗಿ, ಅಭಿಷೇಕ್ ಬದಲಾಗಿ ಬಿಜೆಪಿಯಿಂದ ನೀರಜ್ ಕುಮಾರ್ ಸಿನ್ಹಾ ಅವರನ್ನು ತನ್ನ ಅಭ್ಯರ್ಥಿಯಾಗಿ ಘೋಷಿಸಲಾಗಿದೆ. ಪ್ರಶಾಂತ್ ಕಿಶೋರ್ ಈ ಸ್ಥಾನದಿಂದ ಮೊದಲ ಬಾರಿಗೆ ಜನಸುರಾಜ್ ಪಕ್ಷದಿಂದ ಸ್ಪರ್ಧಿಸುತ್ತಿದ್ದಾರೆ. ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಜುಲೈ 13.

ದೇಶಾದ್ಯಂತ ‘SIR’ ಮತದಾರರ ಪಟ್ಟಿ ಪರಿಷ್ಕರಣೆ: 12 ರಾಜ್ಯಗಳಲ್ಲಿ ಬರೋಬ್ಬರಿ 5.18 ಕೋಟಿ ಮತದಾರರ ಹೆಸರು ಡಿಲೀಟ್

ಭಾರತೀಯ ಚುನಾವಣಾ ಆಯೋಗದ (ECI) ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಡಿ 12 ರಾಜ್ಯಗಳಲ್ಲಿ 5.18 ಕೋಟಿಗೂ ಹೆಚ್ಚು ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಈ ಪ್ರಕ್ರಿಯೆ ರಾಜಕೀಯ ವಿವಾದಕ್ಕೆ ಕಾರಣವಾಗಿದ್ದರೂ, ಸುಪ್ರೀಂ ಕೋರ್ಟ್ ಇದನ್ನು ಎತ್ತಿಹಿಡಿದಿದೆ. ಇದೀಗ ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಆದವರನ್ನು ಸಾಮಾಜಿಕ ಕಲ್ಯಾಣ ಯೋಜನೆಗಳಿಂದಲೂ ಹೊರಗಿಡಲಾಗುತ್ತಿದೆ.

ಮೀನಾಕ್ಷಿ ನಟರಾಜನ್ ನಾಮಪತ್ರ ರದ್ದು; ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ, ನಾಳೆ ಉಪವಾಸ ಸತ್ಯಾಗ್ರಹ

ರಾಜ್ಯಸಭಾ ಚುನಾವಣೆಯ ಮಧ್ಯೆ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ರದ್ದಾದ ನಂತರ ಮಧ್ಯಪ್ರದೇಶದ ಕಾಂಗ್ರೆಸ್ ಪಕ್ಷವು ಆಕ್ರೋಶಗೊಂಡಿದೆ. ಸಂಸದ ಕಾಂಗ್ರೆಸ್ ರಾಜ್ಯ ಅಧ್ಯಕ್ಷ ಜಿತು ಪಟ್ವಾರಿ ಬಿಜೆಪಿ ಸೀಟು ಕಳ್ಳತನ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಪಟ್ವಾರಿ, ಕೆಲವೇ ದಿನಗಳ ಹಿಂದೆ ಬಿಜೆಪಿ ಮಹಿಳಾ ಮೀಸಲಾತಿದಾರನಂತೆ ನಟಿಸಿತ್ತು. ಈಗ ಮಹಿಳಾ ಅಭ್ಯರ್ಥಿಯನ್ನು ತುಳಿಯಲು ನಾಟಕವನ್ನಾಡುತ್ತಿದೆ ಎಂದು ಹೇಳಿದ್ದಾರೆ. ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ತಿರಸ್ಕೃತಗೊಂಡಿದ್ದನ್ನು ವಿರೋಧಿಸಿ ಕಾಂಗ್ರೆಸ್ ಚುನಾವಣಾ ಆಯೋಗದ ಕಚೇರಿಯೆದುರು ಪ್ರತಿಭಟನೆ ನಡೆಸಿದೆ.

ಕಾಂಗ್ರೆಸ್​ಗೆ ಭಾರೀ ಮುಖಭಂಗ; ರಾಜ್ಯಸಭೆ ಚುನಾವಣೆಗೆ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕೃತ

ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾಧಿಕಾರಿ ತಿರಸ್ಕರಿಸಿದ್ದಾರೆ. ಇದರಿಂದ ಚುನಾವಣೆಗೂ ಮೊದಲೇ ಕಾಂಗ್ರೆಸ್​ಗೆ ಭಾರೀ ಹಿನ್ನಡೆಯಾಗಿದೆ. ಮಧ್ಯಪ್ರದೇಶದಿಂದ ರಾಜ್ಯಸಭೆಗೆ ಆಯ್ಕೆ ಬಯಸಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ಮಧ್ಯಪ್ರದೇಶದ ಭೋಪಾಲ್​ ಚುನಾವಣಾಧಿಕಾರಿಯಿಂದ ತಿರಸ್ಕೃತಗೊಂಡಿದೆ. ಮೀನಾಕ್ಷಿ ಅವರ ನಾಮಪತ್ರಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿತ್ತು.

ರಾಜ್ಯಸಭೆ ಚುನಾವಣೆ ನಾಮಪತ್ರಕ್ಕೆ ನಾಳೆ ಕೊನೆ ದಿನ: ಅಭ್ಯರ್ಥಿಯನ್ನ ಅಂತಿಮಗೊಳಿಸದ ಬಿಜೆಪಿ, ಜೆಡಿಎಸ್; ಇಂದು ಘೋಷಣೆ ಸಾಧ್ಯತೆ

ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿದೆ. ಹೆಚ್.ಡಿ. ದೇವೇಗೌಡ ಸ್ಪರ್ಧೆ ಮೇಲೆ ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿ ನಿಲ್ಲಿಸಬೇಕೇ ಎಂಬುದು ನಿರ್ಧಾರವಾಗಲಿದೆ. ಸದ್ಯ ಸದಾನಂದ ಗೌಡ, ಸುಮಲತಾ, ಶ್ರುತಿ, ಮಂಜುಳಾ ಸೇರಿದಂತೆ ಹಲವು ನಾಯಕರ ಹೆಸರು ರೇಸ್‌ನಲ್ಲಿವೆ. ಇಂದು ಮಧ್ಯಾಹ್ನದ ಬಳಿಕ ಬಿಜೆಪಿಯಿಂದ ಅಭ್ಯರ್ಥಿ ಘೋಷಣೆ ಸಾಧ್ಯತೆ ಇದೆ.

ಹಿಮಾಚಲ ಸ್ಥಳೀಯ ಸಂಸ್ಥೆ ಚುನಾವಣೆ; ಆಡಳಿತಾರೂಢ ಕಾಂಗ್ರೆಸ್​ಗೆ ಆಘಾತ; ಬಿಜೆಪಿ ಗೆಲುವಿನ ಕೇಕೆ

BJP victory in Himachal Local Body elections: ಹಿಮಾಚಲ ಪ್ರದೇಶದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಹಿನ್ನಡೆಯಾಗಿದೆ. ಪ್ರಮುಖ ಮೂರು ಮಹಾನಗರ ಪಾಲಿಕೆಗಳ (Municipal Corporations) ಚುನಾವಣೆಯಲ್ಲಿ ವಿರೋಧ ಪಕ್ಷವಾದ ಬಿಜೆಪಿ ಭರ್ಜರಿ ಜಯ ಸಾಧಿಸುವ ಮೂಲಕ ಗದ್ದುಗೆ ಹಿಡಿದಿದೆ. ಮೇ 31, 2026 ರಂದು ಹೊರಬಿದ್ದಿರುವ ಈ ಮಹತ್ವದ ಚುನಾವಣಾ ಫಲಿತಾಂಶದ ವಿವರ ಇಲ್ಲಿದೆ.

Tamil Nadu Cabinet Expansion: ತಮಿಳುನಾಡು ಸರ್ಕಾರದ ಸಂಪುಟ ವಿಸ್ತರಣೆ, ವಿಜಯ್ ಸಂಪುಟ ಸೇರಿದ 23 ಶಾಸಕರು, ಕಾಂಗ್ರೆಸ್ ಶಾಸಕರಿಗೂ ಸಚಿವ ಸ್ಥಾನ

ತಮಿಳುನಾಡು ರಾಜಕೀಯದಲ್ಲಿ ಇಂದು ಅತ್ಯಂತ ಐತಿಹಾಸಿಕ ಹಾಗೂ ಮಹತ್ವದ ತಿರುವು ಸಿಕ್ಕಿದೆ. ಸಿನಿಮಾ ರಂಗದಿಂದ ರಾಜಕೀಯಕ್ಕೆ ಬಂದು ಧೂಳೆಬ್ಬಿಸಿರುವ ಮುಖ್ಯಮಂತ್ರಿ ವಿಜಯ್ (TVK ಪಕ್ಷ) ತಮ್ಮ ಮೊದಲ ಪ್ರಮುಖ ಸಚಿವ ಸಂಪುಟ ವಿಸ್ತರಣೆ ಮಾಡಿದ್ದಾರೆ. ಮೈತ್ರಿ ಸರ್ಕಾರದ ಈ ನೂತನ ರಾಜಕೀಯ ಬೆಳವಣಿಗೆಯ ವಿವರ ಇಲ್ಲಿದೆ.

ಒಂದು ರಾಷ್ಟ್ರ, ಒಂದು ಚುನಾವಣೆಯಿಂದ 7 ಲಕ್ಷ ಕೋಟಿ ರೂ ಉಳಿತಾಯ, ಜಿಡಿಪಿ ಶೇ. 1.6 ವೃದ್ಧಿ: ಜೆಪಿಸಿ ಅನಿಸಿಕೆ

JPC on One Nation One Election: ಒಂದು ರಾಷ್ಟ್ರ ಒಂದು ಚುನಾವಣೆ ವ್ಯವಸ್ಥೆಯಿಂದ ದೇಶಕ್ಕೆ 7 ಲಕ್ಷ ಕೋಟಿ ರೂ. ಉಳಿತಾಯವಾಗಲಿದ್ದು, ಜಿಡಿಪಿ ಶೇ. 1.6ರಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ಜಂಟಿ ಸಂಸದೀಯ ಸಮಿತಿ (JPC) ಅನಿಸಿಕೆ ವ್ಯಕ್ತಪಡಿಸಿದೆ. ಈ ಸುಧಾರಣೆಯಿಂದ ಆಡಳಿತದ ಕ್ಷಮತೆ ಸುಧಾರಿಸಿ, ಸರ್ಕಾರದ ಯೋಜನೆಗಳು ಜನರನ್ನು ಪರಿಣಾಮಕಾರಿಯಾಗಿ ತಲುಪುತ್ತವೆ. ಸಮಿತಿಯ ವರದಿ ಪ್ರಕಾರ, ಲೋಕಸಭೆ, ವಿಧಾನಸಭೆ ಚುನಾವಣೆಗಳು ಏಕಕಾಲದಲ್ಲಿ ನಡೆದು ಆರ್ಥಿಕತೆಗೂ ಉತ್ತೇಜನ ಸಿಗಲಿದೆ.

ಇನ್ನೂ ನಿಗೂಢವಾಗಿಯೇ ಇದೆ ಕೇರಳಂ ಸಿಎಂ ಹೆಸರು; ನಾಳೆ ಕಾಂಗ್ರೆಸ್​​ನಿಂದ ಅಧಿಕೃತ ಘೋಷಣೆ

ಕೇರಳದ ಚುನಾವಣಾ ಫಲಿತಾಂಶ ಹೊರಬಿದ್ದು 9 ದಿನಗಳು ಕಳೆದಿವೆ. ಯುಡಿಎಫ್ ಬಹುಮತ ಪಡೆದಿದ್ದರೂ ಕಾಂಗ್ರೆಸ್ ಇನ್ನೂ ಸಿಎಂ ಅಭ್ಯರ್ಥಿ ಯಾರೆಂಬುದನ್ನು ಘೋಷಿಸಿಲ್ಲ. ವಿಧಾನಸಭಾ ಚುನಾವಣೆ ನಡೆದ ಬೇರೆ ರಾಜ್ಯಗಳಲ್ಲಿ ನೂತನ ಸರ್ಕಾರ ರಚನೆಯಾಗಿದ್ದರೂ ಕೇರಳಂನಲ್ಲಿ ಮಾತ್ರ ಇನ್ನೂ ಮುಖ್ಯಮಂತ್ರಿ ಆಯ್ಕೆಯ ಬಗ್ಗೆ ಒಮ್ಮತದ ಅಭಿಪ್ರಾಯಕ್ಕೆ ಬರಲು ಕಾಂಗ್ರೆಸ್ ನಾಯಕರಿಗೆ ಸಾಧ್ಯವಾಗುತ್ತಿಲ್ಲ. ಇಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜೊತೆ ರಾಹುಲ್ ಗಾಂಧಿ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಸಿಎಂ ಯಾರಾಗಲಿದ್ದಾರೆ ಎಂಬುದು ಅಂತಿಮವಾಗಿದೆ ಎನ್ನಲಾಗುತ್ತಿದೆ. ನಾಳೆ ಕೇರಳಂ ನೂತನ ಸಿಎಂ ಹೆಸರು ಘೋಷಣೆಯಾಗಲಿದೆ.

ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್-ಮಾಜಿ ಮುಖ್ಯಮಂತ್ರಿ ಸ್ಟಾಲಿನ್ ಭೇಟಿ

ವಿಧಾನಸಭೆ ಪ್ರಮಾಣ ವಚನ ಸ್ವೀಕಾರದ ನಂತರ ತಮಿಳುನಾಡು ಸಿಎಂ ವಿಜಯ್ ಅವರು ಎಂ.ಕೆ. ಸ್ಟಾಲಿನ್ ಅವರನ್ನು ಭೇಟಿ ಮಾಡಿದ್ದಾರೆ. ಇದು ಭಾರೀ ಕುತೂಹಲ ಮೂಡಿಸಿದೆ. ಮುಖ್ಯಮಂತ್ರಿಯನ್ನು ಸ್ಟಾಲಿನ್ ಮತ್ತು ಅವರ ಮಗ ಉದಯನಿಧಿ ಸ್ಟಾಲಿನ್ ಅವರು ಆತ್ಮೀಯ ಸ್ವಾಗತದೊಂದಿಗೆ ಸ್ವಾಗತಿಸಿದರು. ಏಪ್ರಿಲ್ 23ರ ಚುನಾವಣೆಗೆ ಮುಂಚಿತವಾಗಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮತ್ತು ಡಿಎಂಕೆ ತೀವ್ರ ಚುನಾವಣಾ ಸ್ಪರ್ಧೆಯಲ್ಲಿ ತೊಡಗಿತ್ತು. ವಿಜಯ್ ಕೂಡ ಡಿಎಂಕೆ ವಿರುದ್ಧ ಸಾಕಷ್ಟು ವಾಗ್ದಾಳಿ ನಡೆಸಿದ್ದರು. 

ರಾಹುಲ್ ಗಾಂಧಿ ಮಾಡಿದ ಸಾಲು ಸಾಲು ತಪ್ಪುಗಳು… ಅಸ್ಸಾಂ, ಆಂಧ್ರದಂತೆ ತಮಿಳುನಾಡನ್ನೂ ಕಾಂಗ್ರೆಸ್ ಕಳೆದುಕೊಂಡಿತಾ?

Vijay's Entry & Rahul Gandhi's Missed Political Opportunities: ರಾಜಕೀಯವು ಒಂದು ರೀತಿಯ ಚದುರಂಗದಾಟದಂತೆ. ಒಂದು ನಡೆಯು ಪಂದ್ಯ ಸೋಲುವಂತೆ ಮಾಡಬಹುದು, ಅಥವಾ ಗೆಲ್ಲಿಸಬಹುದು. ಆಂಧ್ರ, ಅಸ್ಸಾಮ್ ಮತ್ತು ತಮಿಳುನಾಡಿನಲ್ಲಿ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷ ಮಾಡಿದ ಕೆಲ ತಪ್ಪುಗಳು ಆ ರಾಜ್ಯದಲ್ಲಿ ಅಧಿಕಾರ ಮರಳಿ ಬರದಂತೆ ಮಾಡಿವೆ.

ಸುಬ್ಬಾರೆಡ್ಡಿ ಬೆಂಬಲಿಸಿ ಬಾಗೇಪಲ್ಲಿ, ಗುಡಿಬಂಡೆ, ಚೇಳೂರು ಸ್ತಬ್ಧ
ಸುಬ್ಬಾರೆಡ್ಡಿ ಬೆಂಬಲಿಸಿ ಬಾಗೇಪಲ್ಲಿ, ಗುಡಿಬಂಡೆ, ಚೇಳೂರು ಸ್ತಬ್ಧ
ಕೊಪ್ಪಳ ಜಿಲ್ಲಾ ಮಹಿಳಾ ಅಧ್ಯಕ್ಷೆ ಜ್ಯೋತಿ ಗೊಂಡಬಾಳ್ ರಾಜೀನಾಮೆ!
ಕೊಪ್ಪಳ ಜಿಲ್ಲಾ ಮಹಿಳಾ ಅಧ್ಯಕ್ಷೆ ಜ್ಯೋತಿ ಗೊಂಡಬಾಳ್ ರಾಜೀನಾಮೆ!
ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್