AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Elections

Elections

ಚುನಾವಣೆ ಎನ್ನುವುದು ಒಂದು ಔಪಚಾರಿಕ ವ್ಯವಸ್ಥೆ, ನಿರ್ಧಾರ ಮಾಡುವ ಪ್ರಕ್ರಿಯೆ. ಇದರಲ್ಲಿ, ಜನಸಮೂಹ ಒಬ್ಬನನ್ನು ಸಾರ್ವಜನಿಕ ಕ್ಷೇತ್ರದ ಅಧಿಕಾರವನ್ನು ಹಿಡಿಯಲು ಮಾಡುವ ಆಯ್ಕೆ. ಚು‌‌ನಾವಣೆಗಳು ಒಂದು ಸಾಧಾರಣ ಯಾಂತ್ರಿಕದಲ್ಲಿ ಆಧುನಿಕ ಪ್ರಾತಿನಿಧಿಕ ಪ್ರಜಾಪ್ರಭುತ್ವವಾಗಿ 17ನೇ ಶತಮಾನದಿಂದ ನಡೆಯುತ್ತಿದೆ. ಚುನಾವಣೆಗಳು-ಶಾಸಕಾಂಗಳಲ್ಲಿ, ಕೆಲವೊಮ್ಮೆ ಕಾರ್ಯಾಂಗ ಮತ್ತು ನ್ಯಾಯಾಂಗಗಳಲ್ಲಿ ಮತ್ತು ಪ್ರಾದೇಶಿಕ ಹಾಗೂ ಸ್ಥಳೀಯ ಸರ್ಕಾರಗಳಿಗೆ ಅಧಿಕಾರಸ್ಥರನ್ನು ತುಂಬುತ್ತದೆ. ಚುನಾವಣೆ ಅಂದರೆ ಕೇವಲ ವಿಧಾನಸಭೆ, ಲೋಕಸಭೆ, ವಿಧಾನಪರಿಷತ್ ಚುನಾವಣೆ ಮಾತ್ರ ಅಲ್ಲ. ಖಾಸಗಿ ಮತ್ತು ವ್ಯಾಪಾರದ ಸಂಘಟನೆಗಳಲ್ಲಿ, ಕ್ಲಬ್‌ಗಳಿಂದ ಹಿಡಿದು ಸ್ವಯಂ ಸೇವಾ ಸಂಘಟನೆ ಮತ್ತು ಪಾಲಿಕೆಗಳಲ್ಲೂ ಸಹ ಈ ಚುನಾವಣೆ ಪ್ರಕ್ರಿಯೆ ನಡೆಯುತ್ತದೆ.

ಪ್ರಾಚೀನ ರೋಮ್‌ನಲ್ಲಿ ಮತ್ತು ಮಧ್ಯಕಾಲೀನ ಯುಗದ ಪೂರ್ತಿ ಹೋಲಿ ರೋಮನ್ ಎಂಪರರ್ ಹಾಗು ದಿ ಪೋಪ್ ಅವರಂಥ ಆಳುವವರನ್ನು ಆಯ್ಕೆ ಮಾಡಲು ಚುನಾವಣೆಗಳನ್ನು ಬಳಸಲಾಗುತ್ತಿತ್ತು. 17ನೇ ಶತಮಾನದ ಆರಂಭದವರೆಗೂ, ಉತ್ತರ ಅಮೇರಿಕಾದಲ್ಲಿ ಮತ್ತು ಯುರೋಪಿ ನಲ್ಲಿ ಪ್ರತಿನಿಧಿ ಸರ್ಕಾರದ ಆಲೋಚನೆ ಆಗುವವರೆಗೂ ಸರಕಾರಿ ಅಧಿಕಾರಿಗಳನ್ನೊಳಗೊಂಡ ಇಂದಿನಂತಹ ಆಧುನಿಕ ಸಾರ್ವಜನಿಕ ಚುನಾವಣೆಗಳ ಆಲೋಚನೆ ಮೂಡಿರಲಿಲ್ಲ. ಅನೇಕ ಪ್ರಜಾಪ್ರಭುತ್ವ ರಾಜಕೀಯ ವ್ಯವಸ್ಥೆಗಳಲ್ಲಿ,ಸಾರ್ವಜನಿಕ ಆಡಳಿತದ ಹಲವು ಹಂತಗಳಿಗೆ ಅಥವಾ ಭೌಗೋಳಿಕ ವ್ಯಾಪ್ತಿಗೆ ತಾಳೆಯಾಗುವಂತೆ ವಿವಿಧ ಶೈಲಿಯ ಚುನಾವಣೆಗಳಿವೆ. ಕೆಲವು ಸಾಮಾನ್ಯ ಶೈಲಿಯ ಚುನಾವಣೆ ಎಂದರೆ ಅಧ್ಯಕ್ಷೀಯ ಚುನಾವಣೆ, ಸಾರ್ವತ್ರಿಕ ಚುನಾವಣೆ, ಪ್ರಾಥಮಿಕ ಚುನಾವಣೆ, ಮರು ಚುನಾವಣೆ, ಸ್ಥಳೀಯ ಚುನಾವಣೆ.

ಇನ್ನೂ ಹೆಚ್ಚು ಓದಿ

‘ಒಂದು ದೇಶ, ಒಂದು ಚುನಾವಣೆ’ಗೆ ಸಾಧು-ಸಂತರ ಬೆಂಬಲ ಕೋರಿದ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್

ಹರಿದ್ವಾರದಲ್ಲಿ ಮಾತನಾಡಿದ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ "ಒಂದು ರಾಷ್ಟ್ರ, ಒಂದು ಚುನಾವಣೆ"ಯನ್ನು ಬೆಂಬಲಿಸುವಂತೆ ಸಂತರಿಗೆ ಮನವಿ ಮಾಡಿದರು. ದೇಶದಲ್ಲಿ ಪದೇ ಪದೇ ಚುನಾವಣೆಗಳು ನಡೆಯುವುದರಿಂದ ಅಭಿವೃದ್ಧಿ ಕಾರ್ಯಗಳಿಗೆ ಪ್ರಮುಖ ಅಡಚಣೆಯಾಗುತ್ತದೆ ಎಂದು ಅವರು ಹೇಳಿದರು. ಪದೇ ಪದೇ ಚುನಾವಣೆಗಳು ಶಿಕ್ಷಕರು, ಸರ್ಕಾರಿ ನೌಕರರು, ಪೊಲೀಸರು ಮತ್ತು ಆಡಳಿತ ಯಂತ್ರೋಪಕರಣಗಳ ಅಮೂಲ್ಯ ಸಮಯವನ್ನು ವ್ಯರ್ಥ ಮಾಡುತ್ತವೆ ಎಂದು ಹೇಳಿದರು.

SIR ಕರಡು ಮತದಾರರ ಪಟ್ಟಿ ಪ್ರಕಟ: 1 ಕೋಟಿಗೂ ಅಧಿಕ ಮತದಾರರ ಹೆಸರು ಡಿಲೀಟ್; ಸೆ.23ರವರೆಗೆ ಆಕ್ಷೇಪಣೆಗೆ ಅವಕಾಶ

SIR process Election Commission: ರಾಜ್ಯದಲ್ಲಿ ಜೂನ್ 30ರಿಂದ ಆಗಸ್ಟ್ 17ರವರೆಗೆ ನಡೆದ ಎಸ್ಐಆರ್ ಪ್ರಕ್ರಿಯೆ ಇದೀಗ ಪೂರ್ಣಗೊಂಡಿದ್ದು, ಮೊದಲ ಕರಡು ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾ ಆಯೋಗ ಇಂದು ಪ್ರಕಟಿಸಿದೆ. ಒಟ್ಟು 4.46 ಕೋಟಿ ಮತದಾರರ ವಿವರ ಲಭ್ಯವಾಗಿದೆ. ಸೆಪ್ಟೆಂಬರ್ 23ರೊಳಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದ್ದು, ಅಕ್ಟೋಬರ್ 27ರಂದು ಅಂತಿಮ ಪಟ್ಟಿ ಪ್ರಕಟವಾಗಲಿದೆ.

Anbukumar Press Meet Live: ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ; ಕರಡು ಮತದಾರರ ಪಟ್ಟಿ ಬಿಡುಗಡೆ

ಕರ್ನಾಟಕ ಚುನಾವಣಾಧಿಕಾರಿ ವಿ ಅನ್ಬುಕುಮಾರ್ ಸುದ್ದಿಗೊಷ್ಠಿ ನೇರ ಪ್ರಸಾರ: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯ ಭಾಗವಾಗಿ, ಮುಖ್ಯ ಚುನಾವಣಾ ಆಯುಕ್ತ ವಿ. ಅನ್ಬುಕುಮಾರ್ ಅವರು ಮೊದಲ ಕರಡು ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಈ ಪಟ್ಟಿಯು ರಾಜ್ಯದ ಮತದಾರರ ಪಟ್ಟಿಯಲ್ಲಿ ಯಾರು ಉಳಿಯುತ್ತಾರೆ ಮತ್ತು ಯಾರು ಹೊರಗುಳಿಯುತ್ತಾರೆ ಎಂಬುದನ್ನು ಸ್ಪಷ್ಟಪಡಿಸುತ್ತದೆ. ಅನ್ಬುಕುಮಾರ್ ಸದ್ಯ ಸುದ್ದಿಗೋಷ್ಠಿ ನಡೆಸಿ ಪ್ರಮುಖ ಮಾಹಿತಿಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: ಮತದಾರರಿಗೆ ನೋಟಿಸ್ ಸಾಧ್ಯತೆ

ರಾಜ್ಯದಲ್ಲಿ ಇಂದು ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿಯನ್ನು ಮುಖ್ಯ ಚುನಾವಣಾ ಆಯುಕ್ತ ವಿ. ಅನ್ಬುಕುಮಾರ್ ನೇತೃತ್ವದಲ್ಲಿ ಪ್ರಕಟಿಸಲಾಗುತ್ತಿದೆ. ಪಟ್ಟಿಯಿಂದ ಹೆಸರು ಕಾಣೆಯಾದ ಅಥವಾ ಸೇರಿರುವ ಬಗ್ಗೆ ಸ್ಪಷ್ಟತೆ ಸಿಗಲಿದ್ದು, ಲಕ್ಷಾಂತರ ಮತದಾರರಿಗೆ ಚುನಾವಣಾ ನೋಂದಣಿ ಅಧಿಕಾರಿಗಳು (ERO) ನೋಟಿಸ್ ನೀಡಲಿದ್ದಾರೆ. ಆಗಸ್ಟ್ 27 ರಿಂದ ನೋಟಿಸ್ ನೀಡಲು ಸಿದ್ಧತೆ ನಡೆದಿದ್ದು, ಆಕ್ಷೇಪಣೆ ಮತ್ತು ತಿದ್ದುಪಡಿಗೆ ಅವಕಾಶವಿದೆ.

ಭಾರತದ ಮತದಾರರ ಗುರುತಿನ ಚೀಟಿ ವ್ಯವಸ್ಥೆಗೆ ಟ್ರಂಪ್ ಫಿದಾ! ಇಂಡಿಯನ್ ಮಾಡೆಲ್ ಉಲ್ಲೇಖಿಸಿ ‘ಸೇವ್ ಅಮೆರಿಕಾ ಆ್ಯಕ್ಟ್’ಗೆ ಒತ್ತಾಯ

ಅಮೆರಿಕದ ಮತದಾನ ವ್ಯವಸ್ಥೆಯಲ್ಲಿ ಕಡ್ಡಾಯ ಫೋಟೋ ಐಡಿ ಮತ್ತು ಪೌರತ್ವದ ದಾಖಲೆಗಳನ್ನು ಜಾರಿಗೊಳಿಸುವಂತೆ ಒತ್ತಾಯಿಸಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತದ ಚುನಾವಣಾ ವ್ಯವಸ್ಥೆಯನ್ನು ಉದಾಹರಣೆಯಾಗಿ ನೀಡಿದ್ದಾರೆ. 2024ರ ಲೋಕಸಭಾ ಚುನಾವಣೆಯಲ್ಲಿ 64.6 ಕೋಟಿ ಮತದಾರರು ಮತ ಚಲಾಯಿಸಿದ್ದು, ಬಹುತೇಕ ಎಲ್ಲರೂ ಮಾನ್ಯ ಫೋಟೋ ಗುರುತಿನ ದಾಖಲೆ ಬಳಸಿದ್ದರು ಎಂದು ಟ್ರಂಪ್ ಹೇಳಿದ್ದಾರೆ.

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಹುತೇಕ ಪೂರ್ಣ: 1 ಕೋಟಿಗೂ ಅಧಿಕ ಮತದಾರರ ಹೆಸರು ಡಿಲೀಟ್ ಸಾಧ್ಯತೆ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಬಹುತೇಕ ಪೂರ್ಣಗೊಂಡಿದ್ದು, 1 ಕೋಟಿಗೂ ಅಧಿಕ ಮತದಾರರ ಹೆಸರು ಕರಡು ಪಟ್ಟಿಯಿಂದ ಹೊರಗುಳಿಯುವ ಸಾಧ್ಯತೆ ಇದೆ. ASDDO ಪಟ್ಟಿಯಲ್ಲಿರುವ ಮತದಾರರಿಗೆ ಹೆಸರು ಸೇರ್ಪಡೆ ಹಾಗೂ ವಿಳಾಸ ಬದಲಾವಣೆಗೆ ಅವಕಾಶ ನೀಡಲಾಗಿದೆ.

ಕರ್ನಾಟಕ SIR: ರಾಜ್ಯದ ASDDO ಮತದಾರರ ಪೈಕಿ ಅರ್ಧದಷ್ಟು ಬೆಂಗಳೂರಿನಲ್ಲೇ!

ಕರ್ನಾಟಕದ SIR ಪ್ರಕ್ರಿಯೆಯಲ್ಲಿ ಬೆಂಗಳೂರಿನ 36.75 ಲಕ್ಷ ಮತದಾರರು ASDDO ಪಟ್ಟಿಗೆ ಸೇರಿದ್ದಾರೆ. ರಾಜ್ಯದ ಒಟ್ಟು 84 ಲಕ್ಷ ಎಸ್​​ಡಿಡಿಒ ಮತದಾರರಲ್ಲಿ ಬೆಂಗಳೂರಿನ ಪಾಲು ಶೇ 46.7ರಷ್ಟಿದ್ದು, ಆಗಸ್ಟ್ 8ರೊಳಗೆ ತಪ್ಪಾಗಿ ಗುರುತಿಸಲ್ಪಟ್ಟ ಮತದಾರರು ಅಗತ್ಯ ಕ್ರಮ ಕೈಗೊಳ್ಳಬೇಕಿದೆ. ಈ ಹಿನ್ನೆಲೆಯಲ್ಲಿ ಎಸ್​​ಡಿಡಿಒ ಮತದಾರರು ಎಂದರೆ ಯಾರು? ಬೆಂಗಳೂರಿನಲ್ಲೇ ಹೆಚ್ಚಿರುವುದು ಯಾಕೆ? ಇಲ್ಲಿದೆ ಮಾಹಿತಿ.

ಬಿಹಾರದ ಬಂಕಿಪುರ ಉಪಚುನಾವಣೆ; ಅಭಿಷೇಕ್ ಸಿನ್ಹಾ ಬದಲು ಬಿಜೆಪಿಯಿಂದ ನೀರಜ್ ಕುಮಾರ್ ಸಿನ್ಹಾ ಕಣಕ್ಕೆ

ಬಂಕಿಪುರ ವಿಧಾನಸಭಾ ಉಪಚುನಾವಣೆಯಿಂದ ಬಿಜೆಪಿ ಅಭ್ಯರ್ಥಿ ಅಭಿಷೇಕ್ ಸಿನ್ಹಾ ತಮ್ಮ ನಾಮಪತ್ರವನ್ನು ಹಿಂತೆಗೆದುಕೊಂಡಿದ್ದಾರೆ. ಅವರು ತಮ್ಮ ನಾಮಪತ್ರವನ್ನು ಹಿಂತೆಗೆದುಕೊಂಡಿರುವುದಾಗಿ ರಾಜ್ಯಾಧ್ಯಕ್ಷ ಸಂಜಯ್ ಸರವಾಗಿ ಅವರಿಗೆ ಪತ್ರವೊಂದನ್ನು ಸಲ್ಲಿಸಿದ್ದಾರೆ. ಅವರು ತಮ್ಮ ನಾಮಪತ್ರ ಹಿಂತೆಗೆದುಕೊಳ್ಳುವಿಕೆಗೆ ಕೌಟುಂಬಿಕ ಕಾರಣಗಳನ್ನು ಉಲ್ಲೇಖಿಸಿದ್ದಾರೆ. ಹೀಗಾಗಿ, ಅಭಿಷೇಕ್ ಬದಲಾಗಿ ಬಿಜೆಪಿಯಿಂದ ನೀರಜ್ ಕುಮಾರ್ ಸಿನ್ಹಾ ಅವರನ್ನು ತನ್ನ ಅಭ್ಯರ್ಥಿಯಾಗಿ ಘೋಷಿಸಲಾಗಿದೆ. ಪ್ರಶಾಂತ್ ಕಿಶೋರ್ ಈ ಸ್ಥಾನದಿಂದ ಮೊದಲ ಬಾರಿಗೆ ಜನಸುರಾಜ್ ಪಕ್ಷದಿಂದ ಸ್ಪರ್ಧಿಸುತ್ತಿದ್ದಾರೆ. ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಜುಲೈ 13.

ದೇಶಾದ್ಯಂತ ‘SIR’ ಮತದಾರರ ಪಟ್ಟಿ ಪರಿಷ್ಕರಣೆ: 12 ರಾಜ್ಯಗಳಲ್ಲಿ ಬರೋಬ್ಬರಿ 5.18 ಕೋಟಿ ಮತದಾರರ ಹೆಸರು ಡಿಲೀಟ್

ಭಾರತೀಯ ಚುನಾವಣಾ ಆಯೋಗದ (ECI) ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಡಿ 12 ರಾಜ್ಯಗಳಲ್ಲಿ 5.18 ಕೋಟಿಗೂ ಹೆಚ್ಚು ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಈ ಪ್ರಕ್ರಿಯೆ ರಾಜಕೀಯ ವಿವಾದಕ್ಕೆ ಕಾರಣವಾಗಿದ್ದರೂ, ಸುಪ್ರೀಂ ಕೋರ್ಟ್ ಇದನ್ನು ಎತ್ತಿಹಿಡಿದಿದೆ. ಇದೀಗ ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಆದವರನ್ನು ಸಾಮಾಜಿಕ ಕಲ್ಯಾಣ ಯೋಜನೆಗಳಿಂದಲೂ ಹೊರಗಿಡಲಾಗುತ್ತಿದೆ.

ಮೀನಾಕ್ಷಿ ನಟರಾಜನ್ ನಾಮಪತ್ರ ರದ್ದು; ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ, ನಾಳೆ ಉಪವಾಸ ಸತ್ಯಾಗ್ರಹ

ರಾಜ್ಯಸಭಾ ಚುನಾವಣೆಯ ಮಧ್ಯೆ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ರದ್ದಾದ ನಂತರ ಮಧ್ಯಪ್ರದೇಶದ ಕಾಂಗ್ರೆಸ್ ಪಕ್ಷವು ಆಕ್ರೋಶಗೊಂಡಿದೆ. ಸಂಸದ ಕಾಂಗ್ರೆಸ್ ರಾಜ್ಯ ಅಧ್ಯಕ್ಷ ಜಿತು ಪಟ್ವಾರಿ ಬಿಜೆಪಿ ಸೀಟು ಕಳ್ಳತನ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಪಟ್ವಾರಿ, ಕೆಲವೇ ದಿನಗಳ ಹಿಂದೆ ಬಿಜೆಪಿ ಮಹಿಳಾ ಮೀಸಲಾತಿದಾರನಂತೆ ನಟಿಸಿತ್ತು. ಈಗ ಮಹಿಳಾ ಅಭ್ಯರ್ಥಿಯನ್ನು ತುಳಿಯಲು ನಾಟಕವನ್ನಾಡುತ್ತಿದೆ ಎಂದು ಹೇಳಿದ್ದಾರೆ. ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ತಿರಸ್ಕೃತಗೊಂಡಿದ್ದನ್ನು ವಿರೋಧಿಸಿ ಕಾಂಗ್ರೆಸ್ ಚುನಾವಣಾ ಆಯೋಗದ ಕಚೇರಿಯೆದುರು ಪ್ರತಿಭಟನೆ ನಡೆಸಿದೆ.

ಕಾಂಗ್ರೆಸ್​ಗೆ ಭಾರೀ ಮುಖಭಂಗ; ರಾಜ್ಯಸಭೆ ಚುನಾವಣೆಗೆ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕೃತ

ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾಧಿಕಾರಿ ತಿರಸ್ಕರಿಸಿದ್ದಾರೆ. ಇದರಿಂದ ಚುನಾವಣೆಗೂ ಮೊದಲೇ ಕಾಂಗ್ರೆಸ್​ಗೆ ಭಾರೀ ಹಿನ್ನಡೆಯಾಗಿದೆ. ಮಧ್ಯಪ್ರದೇಶದಿಂದ ರಾಜ್ಯಸಭೆಗೆ ಆಯ್ಕೆ ಬಯಸಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ಮಧ್ಯಪ್ರದೇಶದ ಭೋಪಾಲ್​ ಚುನಾವಣಾಧಿಕಾರಿಯಿಂದ ತಿರಸ್ಕೃತಗೊಂಡಿದೆ. ಮೀನಾಕ್ಷಿ ಅವರ ನಾಮಪತ್ರಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿತ್ತು.

ರಾಜ್ಯಸಭೆ ಚುನಾವಣೆ ನಾಮಪತ್ರಕ್ಕೆ ನಾಳೆ ಕೊನೆ ದಿನ: ಅಭ್ಯರ್ಥಿಯನ್ನ ಅಂತಿಮಗೊಳಿಸದ ಬಿಜೆಪಿ, ಜೆಡಿಎಸ್; ಇಂದು ಘೋಷಣೆ ಸಾಧ್ಯತೆ

ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿದೆ. ಹೆಚ್.ಡಿ. ದೇವೇಗೌಡ ಸ್ಪರ್ಧೆ ಮೇಲೆ ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿ ನಿಲ್ಲಿಸಬೇಕೇ ಎಂಬುದು ನಿರ್ಧಾರವಾಗಲಿದೆ. ಸದ್ಯ ಸದಾನಂದ ಗೌಡ, ಸುಮಲತಾ, ಶ್ರುತಿ, ಮಂಜುಳಾ ಸೇರಿದಂತೆ ಹಲವು ನಾಯಕರ ಹೆಸರು ರೇಸ್‌ನಲ್ಲಿವೆ. ಇಂದು ಮಧ್ಯಾಹ್ನದ ಬಳಿಕ ಬಿಜೆಪಿಯಿಂದ ಅಭ್ಯರ್ಥಿ ಘೋಷಣೆ ಸಾಧ್ಯತೆ ಇದೆ.

ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
ಕೆಪಿಎಸ್‌ಸಿ ಕಚೇರಿ ಮೇಲೆ ಮತ್ತೆ ಸಿಐಡಿ ದಾಳಿ
ಕೆಪಿಎಸ್‌ಸಿ ಕಚೇರಿ ಮೇಲೆ ಮತ್ತೆ ಸಿಐಡಿ ದಾಳಿ
ಪುತ್ತೂರು ಬಂದ್ ಹಿನ್ನೆಲೆ ಪರಿಸ್ಥಿತಿ ಶಾಂತ: ಬಿಗಿ ಪೊಲೀಸ್ ಬಂದೋಬಸ್ತ್
ಪುತ್ತೂರು ಬಂದ್ ಹಿನ್ನೆಲೆ ಪರಿಸ್ಥಿತಿ ಶಾಂತ: ಬಿಗಿ ಪೊಲೀಸ್ ಬಂದೋಬಸ್ತ್