AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Elections

Elections

ಚುನಾವಣೆ ಎನ್ನುವುದು ಒಂದು ಔಪಚಾರಿಕ ವ್ಯವಸ್ಥೆ, ನಿರ್ಧಾರ ಮಾಡುವ ಪ್ರಕ್ರಿಯೆ. ಇದರಲ್ಲಿ, ಜನಸಮೂಹ ಒಬ್ಬನನ್ನು ಸಾರ್ವಜನಿಕ ಕ್ಷೇತ್ರದ ಅಧಿಕಾರವನ್ನು ಹಿಡಿಯಲು ಮಾಡುವ ಆಯ್ಕೆ. ಚು‌‌ನಾವಣೆಗಳು ಒಂದು ಸಾಧಾರಣ ಯಾಂತ್ರಿಕದಲ್ಲಿ ಆಧುನಿಕ ಪ್ರಾತಿನಿಧಿಕ ಪ್ರಜಾಪ್ರಭುತ್ವವಾಗಿ 17ನೇ ಶತಮಾನದಿಂದ ನಡೆಯುತ್ತಿದೆ. ಚುನಾವಣೆಗಳು-ಶಾಸಕಾಂಗಳಲ್ಲಿ, ಕೆಲವೊಮ್ಮೆ ಕಾರ್ಯಾಂಗ ಮತ್ತು ನ್ಯಾಯಾಂಗಗಳಲ್ಲಿ ಮತ್ತು ಪ್ರಾದೇಶಿಕ ಹಾಗೂ ಸ್ಥಳೀಯ ಸರ್ಕಾರಗಳಿಗೆ ಅಧಿಕಾರಸ್ಥರನ್ನು ತುಂಬುತ್ತದೆ. ಚುನಾವಣೆ ಅಂದರೆ ಕೇವಲ ವಿಧಾನಸಭೆ, ಲೋಕಸಭೆ, ವಿಧಾನಪರಿಷತ್ ಚುನಾವಣೆ ಮಾತ್ರ ಅಲ್ಲ. ಖಾಸಗಿ ಮತ್ತು ವ್ಯಾಪಾರದ ಸಂಘಟನೆಗಳಲ್ಲಿ, ಕ್ಲಬ್‌ಗಳಿಂದ ಹಿಡಿದು ಸ್ವಯಂ ಸೇವಾ ಸಂಘಟನೆ ಮತ್ತು ಪಾಲಿಕೆಗಳಲ್ಲೂ ಸಹ ಈ ಚುನಾವಣೆ ಪ್ರಕ್ರಿಯೆ ನಡೆಯುತ್ತದೆ.

ಪ್ರಾಚೀನ ರೋಮ್‌ನಲ್ಲಿ ಮತ್ತು ಮಧ್ಯಕಾಲೀನ ಯುಗದ ಪೂರ್ತಿ ಹೋಲಿ ರೋಮನ್ ಎಂಪರರ್ ಹಾಗು ದಿ ಪೋಪ್ ಅವರಂಥ ಆಳುವವರನ್ನು ಆಯ್ಕೆ ಮಾಡಲು ಚುನಾವಣೆಗಳನ್ನು ಬಳಸಲಾಗುತ್ತಿತ್ತು. 17ನೇ ಶತಮಾನದ ಆರಂಭದವರೆಗೂ, ಉತ್ತರ ಅಮೇರಿಕಾದಲ್ಲಿ ಮತ್ತು ಯುರೋಪಿ ನಲ್ಲಿ ಪ್ರತಿನಿಧಿ ಸರ್ಕಾರದ ಆಲೋಚನೆ ಆಗುವವರೆಗೂ ಸರಕಾರಿ ಅಧಿಕಾರಿಗಳನ್ನೊಳಗೊಂಡ ಇಂದಿನಂತಹ ಆಧುನಿಕ ಸಾರ್ವಜನಿಕ ಚುನಾವಣೆಗಳ ಆಲೋಚನೆ ಮೂಡಿರಲಿಲ್ಲ. ಅನೇಕ ಪ್ರಜಾಪ್ರಭುತ್ವ ರಾಜಕೀಯ ವ್ಯವಸ್ಥೆಗಳಲ್ಲಿ,ಸಾರ್ವಜನಿಕ ಆಡಳಿತದ ಹಲವು ಹಂತಗಳಿಗೆ ಅಥವಾ ಭೌಗೋಳಿಕ ವ್ಯಾಪ್ತಿಗೆ ತಾಳೆಯಾಗುವಂತೆ ವಿವಿಧ ಶೈಲಿಯ ಚುನಾವಣೆಗಳಿವೆ. ಕೆಲವು ಸಾಮಾನ್ಯ ಶೈಲಿಯ ಚುನಾವಣೆ ಎಂದರೆ ಅಧ್ಯಕ್ಷೀಯ ಚುನಾವಣೆ, ಸಾರ್ವತ್ರಿಕ ಚುನಾವಣೆ, ಪ್ರಾಥಮಿಕ ಚುನಾವಣೆ, ಮರು ಚುನಾವಣೆ, ಸ್ಥಳೀಯ ಚುನಾವಣೆ.

ಇನ್ನೂ ಹೆಚ್ಚು ಓದಿ

ಇನ್ನೂ ನಿಗೂಢವಾಗಿಯೇ ಇದೆ ಕೇರಳಂ ಸಿಎಂ ಹೆಸರು; ನಾಳೆ ಕಾಂಗ್ರೆಸ್​​ನಿಂದ ಅಧಿಕೃತ ಘೋಷಣೆ

ಕೇರಳದ ಚುನಾವಣಾ ಫಲಿತಾಂಶ ಹೊರಬಿದ್ದು 9 ದಿನಗಳು ಕಳೆದಿವೆ. ಯುಡಿಎಫ್ ಬಹುಮತ ಪಡೆದಿದ್ದರೂ ಕಾಂಗ್ರೆಸ್ ಇನ್ನೂ ಸಿಎಂ ಅಭ್ಯರ್ಥಿ ಯಾರೆಂಬುದನ್ನು ಘೋಷಿಸಿಲ್ಲ. ವಿಧಾನಸಭಾ ಚುನಾವಣೆ ನಡೆದ ಬೇರೆ ರಾಜ್ಯಗಳಲ್ಲಿ ನೂತನ ಸರ್ಕಾರ ರಚನೆಯಾಗಿದ್ದರೂ ಕೇರಳಂನಲ್ಲಿ ಮಾತ್ರ ಇನ್ನೂ ಮುಖ್ಯಮಂತ್ರಿ ಆಯ್ಕೆಯ ಬಗ್ಗೆ ಒಮ್ಮತದ ಅಭಿಪ್ರಾಯಕ್ಕೆ ಬರಲು ಕಾಂಗ್ರೆಸ್ ನಾಯಕರಿಗೆ ಸಾಧ್ಯವಾಗುತ್ತಿಲ್ಲ. ಇಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜೊತೆ ರಾಹುಲ್ ಗಾಂಧಿ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಸಿಎಂ ಯಾರಾಗಲಿದ್ದಾರೆ ಎಂಬುದು ಅಂತಿಮವಾಗಿದೆ ಎನ್ನಲಾಗುತ್ತಿದೆ. ನಾಳೆ ಕೇರಳಂ ನೂತನ ಸಿಎಂ ಹೆಸರು ಘೋಷಣೆಯಾಗಲಿದೆ.

ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್-ಮಾಜಿ ಮುಖ್ಯಮಂತ್ರಿ ಸ್ಟಾಲಿನ್ ಭೇಟಿ

ವಿಧಾನಸಭೆ ಪ್ರಮಾಣ ವಚನ ಸ್ವೀಕಾರದ ನಂತರ ತಮಿಳುನಾಡು ಸಿಎಂ ವಿಜಯ್ ಅವರು ಎಂ.ಕೆ. ಸ್ಟಾಲಿನ್ ಅವರನ್ನು ಭೇಟಿ ಮಾಡಿದ್ದಾರೆ. ಇದು ಭಾರೀ ಕುತೂಹಲ ಮೂಡಿಸಿದೆ. ಮುಖ್ಯಮಂತ್ರಿಯನ್ನು ಸ್ಟಾಲಿನ್ ಮತ್ತು ಅವರ ಮಗ ಉದಯನಿಧಿ ಸ್ಟಾಲಿನ್ ಅವರು ಆತ್ಮೀಯ ಸ್ವಾಗತದೊಂದಿಗೆ ಸ್ವಾಗತಿಸಿದರು. ಏಪ್ರಿಲ್ 23ರ ಚುನಾವಣೆಗೆ ಮುಂಚಿತವಾಗಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮತ್ತು ಡಿಎಂಕೆ ತೀವ್ರ ಚುನಾವಣಾ ಸ್ಪರ್ಧೆಯಲ್ಲಿ ತೊಡಗಿತ್ತು. ವಿಜಯ್ ಕೂಡ ಡಿಎಂಕೆ ವಿರುದ್ಧ ಸಾಕಷ್ಟು ವಾಗ್ದಾಳಿ ನಡೆಸಿದ್ದರು. 

ರಾಹುಲ್ ಗಾಂಧಿ ಮಾಡಿದ ಸಾಲು ಸಾಲು ತಪ್ಪುಗಳು… ಅಸ್ಸಾಂ, ಆಂಧ್ರದಂತೆ ತಮಿಳುನಾಡನ್ನೂ ಕಾಂಗ್ರೆಸ್ ಕಳೆದುಕೊಂಡಿತಾ?

Vijay's Entry & Rahul Gandhi's Missed Political Opportunities: ರಾಜಕೀಯವು ಒಂದು ರೀತಿಯ ಚದುರಂಗದಾಟದಂತೆ. ಒಂದು ನಡೆಯು ಪಂದ್ಯ ಸೋಲುವಂತೆ ಮಾಡಬಹುದು, ಅಥವಾ ಗೆಲ್ಲಿಸಬಹುದು. ಆಂಧ್ರ, ಅಸ್ಸಾಮ್ ಮತ್ತು ತಮಿಳುನಾಡಿನಲ್ಲಿ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷ ಮಾಡಿದ ಕೆಲ ತಪ್ಪುಗಳು ಆ ರಾಜ್ಯದಲ್ಲಿ ಅಧಿಕಾರ ಮರಳಿ ಬರದಂತೆ ಮಾಡಿವೆ.

Thalapathy Vijay Oath Taking Live: ತಮಿಳುನಾಡಿನ ಸಿಎಂ ಆಗಿ ವಿಜಯ್ ಪ್ರಮಾಣವಚನ ಸ್ವೀಕಾರ ನೇರಪ್ರಸಾರ

ಮಿಳು ನಾಡು ರಾಜಕಾರಣದಲ್ಲಿ ಇಂದು ಹೊಸ ಅಧ್ಯಾಯ ಆರಂಭವಾಗಿದೆ. ತಮಿಳಗ ವೆಟ್ರಿ ಕಳಗಂ (TVK) ನಾಯಕ, ಜನಪ್ರಿಯ ನಟ ವಿಜಯ್ (C. ಜೋಸೆಫ್ ವಿಜಯ್) ಅವರು ಇಂದು ಬೆಳಿಗ್ಗೆ 10 ಗಂಟೆಗೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ.

West Bengal CM: ಬಂಗಾಳದಲ್ಲಿ ಬಿಜೆಪಿ ಯುಗ ಆರಂಭ; ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣವಚನ ಸ್ವೀಕಾರ

Suvendu Adhikari Swearing-In Ceremony: ಪಶ್ಚಿಮ ಬಂಗಾಳ ಇಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದೆ. ಬಂಗಾಳದಲ್ಲಿ ಮೊದಲ ಬಾರಿ ಬಿಜೆಪಿ ಸರ್ಕಾರ ರಚನೆಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳು ಈ ಅದ್ದೂರಿ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ. ಸುವೇಂದು ಅಧಿಕಾರಿ ಇಂದು ಬಂಗಾಳದ 9ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಬಂಗಾಳ ಮುಂದಿನ ಸಿಎಂ ಸುವೇಂದು ಅಧಿಕಾರಿ? ಅಗ್ನಿಮಿತ್ರಾ, ನಿಸಿತ್ ಉಪಮುಖ್ಯಮಂತ್ರಿಗಳು?

West Bengal govt formation, Suvendu Adhikari frontrunner for CM: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದಿರುವ ಬಿಜೆಪಿಯ ಶಾಸಕಾಂಗ ಪಕ್ಷದ ಸಭೆ ಇಂದು ಶುಕ್ರವಾರ ನಡೆಯುತ್ತಿದೆ. ವರದಿಗಳ ಪ್ರಕಾರ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಮುಖ್ಯಮಂತ್ರಿಯಾಗುವ ಸಾಧ್ಯತೆ ಹೆಚ್ಚಿದೆ. ಇಬ್ಬರು ಡಿಸಿಎಂಗಳಿರಬಹುದು ಎನ್ನಲಾಗಿದೆ. ಅಗ್ನಿಮಿತ್ರಾ ಪೌಲ್, ನಿಸಿತ್ ಪ್ರಾಮಾಣಿಕ್ ಮೊದಲಾದವರ ಹೆಸರು ಡಿಸಿಎಂ ಸ್ಥಾನಕ್ಕೆ ಕೇಳಿಬರುತ್ತಿದೆ.

ಬಂಗಾಳ ಚುನಾವಣೆ 2026: ಎಸ್​ಐಆರ್ ಸುತ್ತಲಿನ ಆರೋಪಗಳು ಹಾಗೂ ಸತ್ಯಾಸತ್ಯತೆಗಳು

Debunking Voter List Fraud & SIR Process Reality: ಪಶ್ಚಿಮ ಬಂಗಾಳ ಚುನಾವಣೆಯ ನಂತರ, ವಿರೋಧ ಪಕ್ಷಗಳ ಮತದಾರರ ಪಟ್ಟಿ ವಂಚನೆ ಆರೋಪಗಳು ಆಧಾರರಹಿತವಾಗಿವೆ. ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರತೀಯ ಚುನಾವಣಾ ಆಯೋಗದ ಸಾಮಾನ್ಯ ಸಾಂವಿಧಾನಿಕ ಕಾರ್ಯವಾಗಿದೆ. ಅಂಕಿ-ಅಂಶಗಳು ಯಾವುದೇ ರಾಜಕೀಯ ಪಕ್ಷಪಾತವನ್ನು ನಿರಾಕರಿಸುತ್ತವೆ. ಟಿಎಂಸಿ ಸೋಲಿಗೆ ಮುಖ್ಯವಾಗಿ ಆಡಳಿತ ವಿರೋಧಿ ಅಲೆ ಮತ್ತು ಪ್ರಜಾಪ್ರಭುತ್ವದ ನಿಯಮಗಳೇ ಕಾರಣ, ವಂಚನೆಯಲ್ಲ ಎಂಬುದನ್ನು ಈ ಲೇಖನವು ವಿಶ್ಲೇಷಿಸುತ್ತದೆ.

TV9 Kannada News Live: ಚಾಲಕನಿಗೆ ಹಾರ್ಟ್​ ಅಟ್ಯಾಕ್, ತಪ್ಪಿದ ಬಸ್ ದುರಂತ! ಇಲ್ಲಿದೆ ಈ ಹೊತ್ತಿನ ಪ್ರಮುಖ ಸುದ್ದಿಗಳು

ಕೊಡಗಿನಲ್ಲಿ ಚಾಲಕನಿಗೆ ಹೃದಯಾಘಾತವಾಗಿ ಬಸ್ ಅಪಘಾತ ಸಂಭವಿಸಿದ್ದು, ಯಾವುದೇ ಜೀವ ಹಾನಿಯಾಗಿಲ್ಲ. ತಮಿಳುನಾಡಿನಲ್ಲಿ ಅಧಿಕಾರ ಹಿಡಿಯಲು ನಟ ವಿಜಯ್ ಕಸರತ್ತು ಮಾಡುತ್ತಿದ್ದು, ಮ್ಯಾಜಿಕ್ ನಂಬರ್​ಗಾಗಿ ಪರದಾಡುತ್ತಿದ್ದಾರೆ. ಇನ್ನು ಜಾಗತಿಕ ಯುದ್ಧದ ಪರಿಣಾಮವಾಗಿ ಇಂಧನ ಬೆಲೆ ಏರಿಕೆಯಿಂದ ಪೀಣ್ಯ ಕೈಗಾರಿಕೆಗಳು ಮುಚ್ಚುವ ಭೀತಿ ಎದುರಾದ ಕುರಿತ ಮಾಹಿತಿಯ ಜೊತೆಗೆ ಇಂದಿನ ಪ್ರಮುಖ ಸುದ್ದಿಗಳ ಸಂಪೂರ್ಣ ವಿವರ ಇಲ್ಲಿದೆ

ವಿಧಾನಸಭಾ ಚುನಾವಣೆ ವೇಳೆ 1,400 ಕೋಟಿಗೂ ಹೆಚ್ಚು ಅಕ್ರಮ ಹಣ ವಶಕ್ಕೆ; ಪಶ್ಚಿಮ ಬಂಗಾಳದಲ್ಲೇ ಅಧಿಕ ಮೊತ್ತ ಸೀಜ್

ಪುದುಚೇರಿ, ಅಸ್ಸಾಂ, ಕೇರಳ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳ ಈ 5 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ವಿಧಾನಸಭಾ ಚುನಾವಣೆಯ ಸಮಯದಲ್ಲಿ 1,400 ಕೋಟಿಗೂ ಹೆಚ್ಚು ಮೌಲ್ಯದ ಅಕ್ರಮ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಇಂದು ತಿಳಿಸಿದೆ. ಅಸ್ಸಾಂ, ಕೇರಳ ಮತ್ತು ಪುದುಚೇರಿಯಲ್ಲಿ ವಿಧಾನಸಭಾ ಚುನಾವಣೆಗಳು ಏಪ್ರಿಲ್ 9 ರಂದು ನಡೆದವು. ತಮಿಳುನಾಡಿನಲ್ಲಿ ಏಪ್ರಿಲ್ 23ರಂದು ಮತ್ತು ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್ 23 ಮತ್ತು ಏಪ್ರಿಲ್ 29ರಂದು ಮತದಾನ ನಡೆಯಿತು. ಐದು ವಿಧಾನಸಭಾ ಚುನಾವಣೆಗಳ ಫಲಿತಾಂಶಗಳನ್ನು ಮೇ 4ರಂದು ಘೋಷಿಸಲಾಯಿತು.

ವಿಜಯ್‌ಗೆ ಬಹುಮತ ಸಾಬೀತಿನ ಸವಾಲು ಹಾಕಿದ ರಾಜ್ಯಪಾಲರು, ಕೋರ್ಟ್ ಮೆಟ್ಟಿಲೇರಲು ಟಿವಿಕೆ ಸಿದ್ಧತೆ

ತಮಿಳುನಾಡು ಚುನಾವಣೆಯಲ್ಲಿ ವಿಜಯ್ ಅವರ ಟಿವಿಕೆ ಸರ್ಕಾರ ರಚನೆಗೆ ಹೆಣಗುತ್ತಿದೆ. ರಾಜ್ಯಪಾಲರು ಬಹುಮತ ಸಾಬೀತುಪಡಿಸಲು 118 ಶಾಸಕರ ಅಧಿಕೃತ ಪತ್ರ ಕೇಳಿದ್ದಾರೆ. 113 ಬೆಂಬಲ ಹೊಂದಿರುವ ವಿಜಯ್, ಇತರ ಪಕ್ಷಗಳ ಬೆಂಬಲದ ಭರವಸೆ ನೀಡಿದ್ದಾರೆ. ಮೈತ್ರಿ ಸವಾಲುಗಳು, ಶಾಸಕರ ರೆಸಾರ್ಟ್‌ ಸ್ಥಳಾಂತರ ಮತ್ತು ರಾಷ್ಟ್ರಪತಿ ಆಳ್ವಿಕೆಯ ಭೀತಿ ಎದುರಾಗಿದೆ.

ಸುವೇಂದು ಆಪ್ತ ಸಹಾಯಕ ಚಂದ್ರನಾಥ್ ರಥ್ ಕೊಲೆಯಾಗಿದ್ದು ಹೇಗೆ? ಭೀಕರ ಕೃತ್ಯದ ವಿವರ ಇಲ್ಲಿದೆ

ಪಶ್ಚಿಮ ಬಂಗಾಳದ ಉತ್ತರ 24 ಪರಗಣದಲ್ಲಿ ಸುವೇಂದು ಅಧಿಕಾರಿ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರ ಭೀಕರ ಕೊಲೆಯು ರಾಜ್ಯಾದ್ಯಂತ ಆಘಾತ ಮೂಡಿಸಿದೆ. ಪೂರ್ವ ಯೋಜಿತವಾಗಿ ಎಸ್‍ಯುವಿ ಅಡ್ಡಗಟ್ಟಿ, ಪಾಯಿಂಟ್ ಬ್ಲಾಂಕ್ ರೇಂಜ್‌ನಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಈ ಹತ್ಯೆಯ ಹಿಂದೆ ರಾಜಕೀಯ ಸಂಚು ಇರುವ ಬಗ್ಗೆ ಸುವೇಂದು ಅಧಿಕಾರಿ ಅನುಮಾನ ವ್ಯಕ್ತಪಡಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದು ಬಂಗಾಳ ರಾಜಕೀಯದಲ್ಲಿ ಆತಂಕ ಸೃಷ್ಟಿಸಿದೆ.

ತಮಿಳುನಾಡು ರಾಜಕೀಯದಲ್ಲಿ ಹೈ-ಡ್ರಾಮಾ: ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ವಿಜಯ್, ಸಿಪಿಐ ಅಚ್ಚರಿಯ ಬೆಂಬಲ

ತಮಿಳುನಾಡು ರಾಜಕೀಯದಲ್ಲಿ ಹೈ-ಡ್ರಾಮಾ ಮುಂದುವರಿದಿದೆ. ಟಿವಿಕೆ ಅಧ್ಯಕ್ಷ ವಿಜಯ್ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. ಅವರಿಗೆ ಕಾಂಗ್ರೆಸ್ ಜೊತೆಗೆ ಸಿಪಿಐ ಪಕ್ಷದ ಬೆಂಬಲವೂ ದೊರೆತಿದೆ. ಬಹುಮತಕ್ಕೆ ಕೊಂಚ ಕಡಿಮೆ ಸಂಖ್ಯೆಗಳಿದ್ದರೂ, ವಿಜಯ್ ಆಶಾವಾದಿಯಾಗಿದ್ದಾರೆ. ಆದರೆ ರಾಜ್ಯಪಾಲರು ಬಹುಮತದ ಸ್ಪಷ್ಟತೆ ಕೋರಿದ್ದು, ಪ್ರಮಾಣ ವಚನ ವಿಳಂಬವಾಗುತ್ತಿದೆ. ರಾಜಭವನದ ನಿರ್ಧಾರ ತಮಿಳುನಾಡಿನ ಭವಿಷ್ಯ ನಿರ್ಧರಿಸಲಿದೆ.

ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ