
Elections
ಚುನಾವಣೆ ಎನ್ನುವುದು ಒಂದು ಔಪಚಾರಿಕ ವ್ಯವಸ್ಥೆ, ನಿರ್ಧಾರ ಮಾಡುವ ಪ್ರಕ್ರಿಯೆ. ಇದರಲ್ಲಿ, ಜನಸಮೂಹ ಒಬ್ಬನನ್ನು ಸಾರ್ವಜನಿಕ ಕ್ಷೇತ್ರದ ಅಧಿಕಾರವನ್ನು ಹಿಡಿಯಲು ಮಾಡುವ ಆಯ್ಕೆ. ಚುನಾವಣೆಗಳು ಒಂದು ಸಾಧಾರಣ ಯಾಂತ್ರಿಕದಲ್ಲಿ ಆಧುನಿಕ ಪ್ರಾತಿನಿಧಿಕ ಪ್ರಜಾಪ್ರಭುತ್ವವಾಗಿ 17ನೇ ಶತಮಾನದಿಂದ ನಡೆಯುತ್ತಿದೆ. ಚುನಾವಣೆಗಳು-ಶಾಸಕಾಂಗಳಲ್ಲಿ, ಕೆಲವೊಮ್ಮೆ ಕಾರ್ಯಾಂಗ ಮತ್ತು ನ್ಯಾಯಾಂಗಗಳಲ್ಲಿ ಮತ್ತು ಪ್ರಾದೇಶಿಕ ಹಾಗೂ ಸ್ಥಳೀಯ ಸರ್ಕಾರಗಳಿಗೆ ಅಧಿಕಾರಸ್ಥರನ್ನು ತುಂಬುತ್ತದೆ. ಚುನಾವಣೆ ಅಂದರೆ ಕೇವಲ ವಿಧಾನಸಭೆ, ಲೋಕಸಭೆ, ವಿಧಾನಪರಿಷತ್ ಚುನಾವಣೆ ಮಾತ್ರ ಅಲ್ಲ. ಖಾಸಗಿ ಮತ್ತು ವ್ಯಾಪಾರದ ಸಂಘಟನೆಗಳಲ್ಲಿ, ಕ್ಲಬ್ಗಳಿಂದ ಹಿಡಿದು ಸ್ವಯಂ ಸೇವಾ ಸಂಘಟನೆ ಮತ್ತು ಪಾಲಿಕೆಗಳಲ್ಲೂ ಸಹ ಈ ಚುನಾವಣೆ ಪ್ರಕ್ರಿಯೆ ನಡೆಯುತ್ತದೆ.
ಪ್ರಾಚೀನ ರೋಮ್ನಲ್ಲಿ ಮತ್ತು ಮಧ್ಯಕಾಲೀನ ಯುಗದ ಪೂರ್ತಿ ಹೋಲಿ ರೋಮನ್ ಎಂಪರರ್ ಹಾಗು ದಿ ಪೋಪ್ ಅವರಂಥ ಆಳುವವರನ್ನು ಆಯ್ಕೆ ಮಾಡಲು ಚುನಾವಣೆಗಳನ್ನು ಬಳಸಲಾಗುತ್ತಿತ್ತು. 17ನೇ ಶತಮಾನದ ಆರಂಭದವರೆಗೂ, ಉತ್ತರ ಅಮೇರಿಕಾದಲ್ಲಿ ಮತ್ತು ಯುರೋಪಿ ನಲ್ಲಿ ಪ್ರತಿನಿಧಿ ಸರ್ಕಾರದ ಆಲೋಚನೆ ಆಗುವವರೆಗೂ ಸರಕಾರಿ ಅಧಿಕಾರಿಗಳನ್ನೊಳಗೊಂಡ ಇಂದಿನಂತಹ ಆಧುನಿಕ ಸಾರ್ವಜನಿಕ ಚುನಾವಣೆಗಳ ಆಲೋಚನೆ ಮೂಡಿರಲಿಲ್ಲ. ಅನೇಕ ಪ್ರಜಾಪ್ರಭುತ್ವ ರಾಜಕೀಯ ವ್ಯವಸ್ಥೆಗಳಲ್ಲಿ,ಸಾರ್ವಜನಿಕ ಆಡಳಿತದ ಹಲವು ಹಂತಗಳಿಗೆ ಅಥವಾ ಭೌಗೋಳಿಕ ವ್ಯಾಪ್ತಿಗೆ ತಾಳೆಯಾಗುವಂತೆ ವಿವಿಧ ಶೈಲಿಯ ಚುನಾವಣೆಗಳಿವೆ. ಕೆಲವು ಸಾಮಾನ್ಯ ಶೈಲಿಯ ಚುನಾವಣೆ ಎಂದರೆ ಅಧ್ಯಕ್ಷೀಯ ಚುನಾವಣೆ, ಸಾರ್ವತ್ರಿಕ ಚುನಾವಣೆ, ಪ್ರಾಥಮಿಕ ಚುನಾವಣೆ, ಮರು ಚುನಾವಣೆ, ಸ್ಥಳೀಯ ಚುನಾವಣೆ.
ಚುನಾವಣಾ ಆಯೋಗದಿಂದ ಆಧಾರ್ನೊಂದಿಗೆ ವೋಟರ್ ಐಡಿ ಲಿಂಕ್ಗೆ ಶೀಘ್ರ ಕ್ರಮ; ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್
ಭಾರತದ ಚುನಾವಣಾ ಆಯೋಗವು ಆಧಾರ್ ಸಂಖ್ಯೆಗಳನ್ನು ಮತದಾರರ ಫೋಟೋ ಗುರುತಿನ ಚೀಟಿಗಳೊಂದಿಗೆ ಲಿಂಕ್ ಮಾಡುವ ಪ್ರಕ್ರಿಯೆಯನ್ನು ಕಾನೂನಿಗೆ ಮತ್ತು ಸುಪ್ರೀಂ ಕೋರ್ಟ್ನ ನಿರ್ದೇಶನಗಳಿಗೆ ಅನುಗುಣವಾಗಿ ಕಟ್ಟುನಿಟ್ಟಾಗಿ ನಡೆಸಲಾಗುವುದು ಎಂದು ಹೇಳಿದೆ. ಈ ಪ್ರಕ್ರಿಯೆಯು ಸಂಪೂರ್ಣವಾಗಿ ಸ್ವಯಂಪ್ರೇರಿತವಾಗಿರುತ್ತದೆ ಮತ್ತು ಸಾಂವಿಧಾನಿಕ ನಿಬಂಧನೆಗಳಿಂದ ಮಾರ್ಗದರ್ಶಿಸಲ್ಪಡುತ್ತದೆ ಎಂದು ಚುನಾವಣಾ ಆಯೋಗ ಇಂದು ನಡೆದ ಸಭೆಯ ಬಳಿಯ ಸ್ಪಷ್ಟಪಡಿಸಿದೆ.
- Sushma Chakre
- Updated on: Mar 18, 2025
- 7:26 pm
ಆಧಾರ್, ವೋಟರ್ ಐಡಿ ಲಿಂಕ್ ಬಗ್ಗೆ ಚರ್ಚಿಸಲು ಸಭೆ ಕರೆದ ಚುನಾವಣಾ ಆಯೋಗ
ಮತದಾರರ ಗುರುತಿನ ಚೀಟಿಗಳೊಂದಿಗೆ ಆಧಾರ್ ಅನ್ನು ಲಿಂಕ್ ಮಾಡುವ ಕುರಿತು ಚುನಾವಣಾ ಆಯೋಗ ಮುಂದಿನ ವಾರ ಕೇಂದ್ರ ಗೃಹ ಸಚಿವಾಲಯ, ಕಾನೂನು ಸಚಿವಾಲಯ ಮತ್ತು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದ (UIDAI) ಉನ್ನತ ಅಧಿಕಾರಿಗಳ ಸಭೆ ಕರೆಯಲು ನಿರ್ಧರಿಸಿದೆ ಎಂದು ಚುನಾವಣಾ ಆಯೋಗದ ಮೂಲಗಳು ಇದು ತಿಳಿಸಿವೆ. 2021ರಲ್ಲಿ ಜನತಾ ಪ್ರಾತಿನಿಧ್ಯ ಕಾಯ್ದೆ, 1951ಕ್ಕೆ ತಿದ್ದುಪಡಿ ತಂದು ಮತದಾರರ ಫೋಟೋ ಗುರುತಿನ ಚೀಟಿಯೊಂದಿಗೆ ಆಧಾರ್ ಲಿಂಕ್ ಮಾಡುವುದನ್ನು ಸಕ್ರಿಯಗೊಳಿಸಿದ ನಂತರ, ಚುನಾವಣಾ ಆಯೋಗ ಸ್ವಯಂಪ್ರೇರಿತವಾಗಿ ಮತದಾರರಿಂದ ಆಧಾರ್ ಸಂಖ್ಯೆಗಳನ್ನು ಸಂಗ್ರಹಿಸಲು ಪ್ರಾರಂಭಿಸಿತು. ಆದರೆ ಇಲ್ಲಿಯವರೆಗೆ, ಆಯೋಗ ಇನ್ನೂ ಎರಡು ಡೇಟಾಬೇಸ್ಗಳನ್ನು ಲಿಂಕ್ ಮಾಡಿಲ್ಲ.
- Sushma Chakre
- Updated on: Mar 15, 2025
- 10:56 pm
ತೀವ್ರ ಕಳವಳಕಾರಿ; ಟ್ರಂಪ್ ಅವರ 21 ಮಿಲಿಯನ್ ಅಮೆರಿಕನ್ ಡಾಲರ್ ನಿಧಿಯ ಹೇಳಿಕೆಗೆ ಭಾರತ ಪ್ರತಿಕ್ರಿಯೆ
ಭಾರತದಲ್ಲಿ ಮತದಾನದ ಪ್ರಮಾಣ ಹೆಚ್ಚಿಸಲು ಯುಎಸ್ಎಐಡಿಯಿಂದ ಈ ಮೊದಲು ನೀಡಲಾಗುತ್ತಿದ್ದ 21 ಮಿಲಿಯನ್ ಅಮೆರಿಕನ್ ಡಾಲರ್ ರದ್ಧತಿಯ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿರುವ ಹೇಳಿಕೆಗಳಿಗೆ ಇಂದು (ಫೆಬ್ರವರಿ 21) ಭಾರತದ ವಿದೇಶಾಂಗ ಸಚಿವಾಲಯ ಪ್ರತಿಕ್ರಿಯಿಸಿದೆ. ಅಮೆರಿಕದ ಅಧ್ಯಕ್ಷರ ಹೇಳಿಕೆ ತೀವ್ರ ಆತಂಕಕಾರಿಯಾಗಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.
- Sushma Chakre
- Updated on: Feb 21, 2025
- 7:14 pm
ಇವಿಎಂ ಡೇಟಾ ಡಿಲೀಟ್ ಮಾಡಬೇಡಿ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಆದೇಶ
ಚುನಾವಣಾ ಮತಯಂತ್ರಗಳ ಡೇಟಾವನ್ನು ಅಳಿಸಬೇಡಿ ಅಥವಾ ಮರುಲೋಡ್ ಮಾಡಬೇಡಿ ಎಂದು ಇವಿಎಂ ಪರಿಶೀಲನೆಗಾಗಿ ಸಲ್ಲಿಸಲಾದ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ. ಮೈಕ್ರೋ-ಕಂಟ್ರೋಲರ್ಗಳು ಮತ್ತು ಎಲೆಕ್ಟ್ರಾನಿಕ್ ಮತ ಯಂತ್ರಗಳ (ಇವಿಎಂ) ಎಸ್ಎಲ್ಯು ಅನ್ನು ಪರಿಶೀಲಿಸಲು ಚುನಾವಣಾ ಸಮಿತಿಗೆ ನಿರ್ದೇಶನ ನೀಡುವಂತೆ ಅರ್ಜಿಗಳು ಕೋರಿತ್ತು.
- Sushma Chakre
- Updated on: Feb 11, 2025
- 9:11 pm
Parvesh Verma: ಅರವಿಂದ್ ಕೇಜ್ರಿವಾಲ್ ಎದುರು ಗೆದ್ದು ದೆಹಲಿ ಸಿಎಂ ರೇಸ್ನಲ್ಲಿ ಮೊದಲ ಸ್ಥಾನದಲ್ಲಿರುವ ಪರ್ವೇಶ್ ವರ್ಮಾ ಯಾರು?
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ಗೆದ್ದು ಬೀಗಿದ ಬಿಜೆಪಿ ಅಭ್ಯರ್ಥಿ ಪರ್ವೇಶ್ ವರ್ಮಾ ಇದೀಗ ಕೇಂದ್ರಬಿಂದುವಾಗಿದ್ದಾರೆ. ಈ ವರ್ಷ ದೆಹಲಿ ಚುನಾವಣೆಯ ಮ್ಯಾನ್ ಆಫ್ ದಿ ಮ್ಯಾಚ್ ಎಂದೇ ಕರೆಸಿಕೊಳ್ಳುತ್ತಿರುವ ಪರ್ವೇಶ್ ವರ್ಮಾ ದೆಹಲಿಯ ಮುಂದಿನ ಮುಖ್ಯಮಂತ್ರಿಗಳ ರೇಸ್ನಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಹಾಗಾದರೆ, ಈ ಪರ್ವೇಶ್ ವರ್ಮಾ ಯಾರು? ಎಂಬ ಬಗ್ಗೆ ಮಾಹಿತಿ ಇಲ್ಲಿದೆ.
- Sushma Chakre
- Updated on: Feb 8, 2025
- 6:58 pm
Delhi Results: ದೆಹಲಿಯಲ್ಲಿ 40 ಸ್ಥಾನಗಳನ್ನು ಪಡೆದು ಬಹುಮತ ದಾಟಿದ ಬಿಜೆಪಿ; ಡೊಳ್ಳು ಬಾರಿಸಿ ಕಾರ್ಯಕರ್ತರ ಸಂಭ್ರಮಾಚರಣೆ
ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಸರ್ಕಾರ ರಚಿಸಲು ಅಗತ್ಯವಿದ್ದ ಬಹುಮತವಾದ 36 ಸ್ಥಾನಗಳ ಗಡಿಯನ್ನು ಬಿಜೆಪಿ ದಾಟುವ ಮೂಲಕ ಈ ಬಾರಿಯ ಸರ್ಕಾರ ರಚಿಸಲು ಸಜ್ಜಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು 27 ವರ್ಷಗಳಿಂದ ಪ್ರಯತ್ನಿಸುತ್ತಿದ್ದ ಬಿಜೆಪಿಯ ಪ್ರಯತ್ನಕ್ಕೀಗ ಫಲ ಸಿಕ್ಕಿದೆ. ಭರ್ಜರಿ ಗೆಲುವಿನ ಮೂಲಕ ಬಿಜೆಪಿ ದೆಹಲಿಯಲ್ಲಿ ಪುನರಾಗಮನ ಮಾಡಿದೆ. ಸದ್ಯದ ಅಂಕಿ-ಅಂಶಗಳ ಪ್ರಕಾರ ಬಿಜೆಪಿ 40 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಇನ್ನೂ ಕೆಲವು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
- Sushma Chakre
- Updated on: Feb 8, 2025
- 5:49 pm
ನಮ್ಮ ಗ್ಯಾರಂಟಿಗಳಿಂದ ವಿಕಸಿತ ಭಾರತದಲ್ಲಿ ಮುಖ್ಯ ಪಾತ್ರ ವಹಿಸಲಿದೆ ದೆಹಲಿ: ಗೆಲುವಿನ ಬಳಿಕ ಪ್ರಧಾನಿ ಮೋದಿ ಮಾತು
ಪ್ರಧಾನಿ ನರೇಂದ್ರ ಮೋದಿ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಅಭೂತಪೂರ್ವ ಗೆಲುವಿಗೆ ದೆಹಲಿ ಜನತೆಗೆ ಧನ್ಯವಾದ ಹೇಳಿದ್ದಾರೆ. ಬಿಜೆಪಿ ಕಾರ್ಯಕರ್ತರಿಗೂ ಅಭಿನಂದನೆ ಸಲ್ಲಿಸಿದ್ದಾರೆ. ಸಂಜೆ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಜನಶಕ್ತಿಯೇ ಸರ್ವಶ್ರೇಷ್ಠ ಎಂದು ಮೋದಿ ಹೇಳಿದ್ದು, ದೆಹಲಿಯ ಅಭಿವೃದ್ಧಿಗೆ ಬಿಜೆಪಿ ಬದ್ಧವಾಗಿದೆ ಎಂದು ಭರವಸೆ ನೀಡಿದ್ದಾರೆ.
- Ganapathi Sharma
- Updated on: Feb 8, 2025
- 3:40 pm
ದೆಹಲಿ ಚುನಾವಣೆ ಫಲಿತಾಂಶ: ಎಎಪಿ ಸೋಲಿನ ಬಗ್ಗೆ ಅರವಿಂದ ಕೇಜ್ರಿವಾಲ್ ಮೊದಲ ಪ್ರತಿಕ್ರಿಯೆ ಹೀಗಿದೆ ನೋಡಿ
Delhi election result Arvind Kejriwal First reaction: ದೆಹಲಿ ಚುನಾವಣೆ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಅರವಿಂದ ಕೇಜ್ರಿವಾಲ್ ಹೇಳಿದ್ದೇನು? ಚುನಾವಣೆ ಸೋಲಿನ ಬಗ್ಗೆ ಅವರ ಮಾತುಗಳೇನು ಎಂಬುದನ್ನು ವಿಡಿಯೋದಲ್ಲಿ ನೋಡಿ.
- Ganapathi Sharma
- Updated on: Feb 8, 2025
- 3:11 pm
ದೆಹಲಿ ಫಲಿತಾಂಶ: ‘ಆಪ್ದಾ ಸೇ ಮುಕ್ತಿ’, ಅಶ್ವಿನಿ ವೈಷ್ಣವ್ ಮಾರ್ಮಿಕ ಟ್ವೀಟ್
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸುವ ಸುಳಿವು ದೊರೆಯುತ್ತಿದ್ದಂತೆಯೇ ಆಮ್ ಆದ್ಮಿ ಪಕ್ಷದ ವಿರುದ್ಧ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ವಾಗ್ದಾಳಿ ನಡೆಸಿದ್ದಾರೆ. ಮೈಕ್ರೋಬ್ ಬ್ಲಾಗಿಂಗ್ ತಾಣ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿರುವವರು, ದೆಹಲಿಗೆ ವಿಪತ್ತಿನಿಂದ ಮುಕ್ತಿ ದೊರೆತಿದೆ ಎಂದು ಉಲ್ಲೇಖಿಸಿದ್ದಾರೆ.
- Ganapathi Sharma
- Updated on: Feb 8, 2025
- 2:47 pm
ಹಣ, ಅಧಿಕಾರ ಅರವಿಂದ ಕೇಜ್ರಿವಾಲ್ರನ್ನು ಬದಲಿಸಿತೇ? ಅಣ್ಣಾ ಹಜಾರೆ ಹೇಳಿದ್ದೇನು ನೋಡಿ
Delhi election Result 2025: ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶದ ಬಗ್ಗೆ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಮಾತನಾಡಿದ್ದಾರೆ. ದೆಹಲಿಯ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ಬಗ್ಗೆಯೂ ಅವರು ತಮ್ಮ ಮನದಾಳವನ್ನು ಬಿಚ್ಚಿಟ್ಟಿದ್ದಾರೆ. ಅಣ್ಣಾ ಹಜಾರೆ ಹೇಳಿದ್ದೇನು ಎಂಬುದನ್ನು ಇಲ್ಲಿರುವ ವಿಡಿಯೋದಲ್ಲಿ ನೋಡಿ.
- Ganapathi Sharma
- Updated on: Feb 8, 2025
- 1:18 pm