Elections

Elections

ಚುನಾವಣೆ ಎನ್ನುವುದು ಒಂದು ಔಪಚಾರಿಕ ವ್ಯವಸ್ಥೆ, ನಿರ್ಧಾರ ಮಾಡುವ ಪ್ರಕ್ರಿಯೆ. ಇದರಲ್ಲಿ, ಜನಸಮೂಹ ಒಬ್ಬನನ್ನು ಸಾರ್ವಜನಿಕ ಕ್ಷೇತ್ರದ ಅಧಿಕಾರವನ್ನು ಹಿಡಿಯಲು ಮಾಡುವ ಆಯ್ಕೆ. ಚು‌‌ನಾವಣೆಗಳು ಒಂದು ಸಾಧಾರಣ ಯಾಂತ್ರಿಕದಲ್ಲಿ ಆಧುನಿಕ ಪ್ರಾತಿನಿಧಿಕ ಪ್ರಜಾಪ್ರಭುತ್ವವಾಗಿ 17ನೇ ಶತಮಾನದಿಂದ ನಡೆಯುತ್ತಿದೆ. ಚುನಾವಣೆಗಳು-ಶಾಸಕಾಂಗಳಲ್ಲಿ, ಕೆಲವೊಮ್ಮೆ ಕಾರ್ಯಾಂಗ ಮತ್ತು ನ್ಯಾಯಾಂಗಗಳಲ್ಲಿ ಮತ್ತು ಪ್ರಾದೇಶಿಕ ಹಾಗೂ ಸ್ಥಳೀಯ ಸರ್ಕಾರಗಳಿಗೆ ಅಧಿಕಾರಸ್ಥರನ್ನು ತುಂಬುತ್ತದೆ. ಚುನಾವಣೆ ಅಂದರೆ ಕೇವಲ ವಿಧಾನಸಭೆ, ಲೋಕಸಭೆ, ವಿಧಾನಪರಿಷತ್ ಚುನಾವಣೆ ಮಾತ್ರ ಅಲ್ಲ. ಖಾಸಗಿ ಮತ್ತು ವ್ಯಾಪಾರದ ಸಂಘಟನೆಗಳಲ್ಲಿ, ಕ್ಲಬ್‌ಗಳಿಂದ ಹಿಡಿದು ಸ್ವಯಂ ಸೇವಾ ಸಂಘಟನೆ ಮತ್ತು ಪಾಲಿಕೆಗಳಲ್ಲೂ ಸಹ ಈ ಚುನಾವಣೆ ಪ್ರಕ್ರಿಯೆ ನಡೆಯುತ್ತದೆ.

ಪ್ರಾಚೀನ ರೋಮ್‌ನಲ್ಲಿ ಮತ್ತು ಮಧ್ಯಕಾಲೀನ ಯುಗದ ಪೂರ್ತಿ ಹೋಲಿ ರೋಮನ್ ಎಂಪರರ್ ಹಾಗು ದಿ ಪೋಪ್ ಅವರಂಥ ಆಳುವವರನ್ನು ಆಯ್ಕೆ ಮಾಡಲು ಚುನಾವಣೆಗಳನ್ನು ಬಳಸಲಾಗುತ್ತಿತ್ತು. 17ನೇ ಶತಮಾನದ ಆರಂಭದವರೆಗೂ, ಉತ್ತರ ಅಮೇರಿಕಾದಲ್ಲಿ ಮತ್ತು ಯುರೋಪಿ ನಲ್ಲಿ ಪ್ರತಿನಿಧಿ ಸರ್ಕಾರದ ಆಲೋಚನೆ ಆಗುವವರೆಗೂ ಸರಕಾರಿ ಅಧಿಕಾರಿಗಳನ್ನೊಳಗೊಂಡ ಇಂದಿನಂತಹ ಆಧುನಿಕ ಸಾರ್ವಜನಿಕ ಚುನಾವಣೆಗಳ ಆಲೋಚನೆ ಮೂಡಿರಲಿಲ್ಲ. ಅನೇಕ ಪ್ರಜಾಪ್ರಭುತ್ವ ರಾಜಕೀಯ ವ್ಯವಸ್ಥೆಗಳಲ್ಲಿ,ಸಾರ್ವಜನಿಕ ಆಡಳಿತದ ಹಲವು ಹಂತಗಳಿಗೆ ಅಥವಾ ಭೌಗೋಳಿಕ ವ್ಯಾಪ್ತಿಗೆ ತಾಳೆಯಾಗುವಂತೆ ವಿವಿಧ ಶೈಲಿಯ ಚುನಾವಣೆಗಳಿವೆ. ಕೆಲವು ಸಾಮಾನ್ಯ ಶೈಲಿಯ ಚುನಾವಣೆ ಎಂದರೆ ಅಧ್ಯಕ್ಷೀಯ ಚುನಾವಣೆ, ಸಾರ್ವತ್ರಿಕ ಚುನಾವಣೆ, ಪ್ರಾಥಮಿಕ ಚುನಾವಣೆ, ಮರು ಚುನಾವಣೆ, ಸ್ಥಳೀಯ ಚುನಾವಣೆ.

ಇನ್ನೂ ಹೆಚ್ಚು ಓದಿ

ಸಂಡೂರು ಕ್ಷೇತ್ರದ ಟಿಕೆಟ್​ ಸಂಸದ ಇ ತುಕಾರಾಂ ಪತ್ನಿಗೆ: ಸಿದ್ದರಾಮಯ್ಯ

Karnataka By-Election 2024: ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ವ್ಯಕ್ತಿ ಪ್ರತಿಷ್ಠೆಯಿಂದ ಕೂಡಿದೆ. ಎರಡೂ ರಾಷ್ಟ್ರೀಯ ಪಕ್ಷಗಳು ತಂತ್ರ-ಪ್ರತಿತಂತ್ರ ಹೆಣೆಯುತ್ತಿವೆ. ಸಂಡೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬ ಗೊಂದಲಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೆರೆ ಎಳೆದಿದ್ದಾರೆ.​

  • Ram
  • Updated on: Oct 22, 2024
  • 11:07 am

ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್​​​ನಿಂದ ಟಿಕೆಟ್ ಆಫರ್ ಬಗ್ಗೆ ಯೋಗೇಶ್ವರ್ ಸ್ಫೋಟಕ ಹೇಳಿಕೆ

ಚನ್ನಪಟ್ಟಣ ಉಪಚುನಾವಣೆ ಅಖಾಡ ರಂಗೇರುತ್ತಿದೆ. ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಈಗಾಗಲೇ ರಾಜೀನಾಮೆ ನೀಡಿರುವ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದೇ ಹೇಳುತ್ತಿದ್ದಾರೆ. ಈ ಮಧ್ಯೆ, ಕಾಂಗ್ರೆಸ್ ಸೇರ್ಪಡೆ ವದಂತಿಗಳ ಬಗ್ಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.

Wayanad Bypolls: ವಯನಾಡಿ​​ನಲ್ಲಿ ಮಹಿಳಾ ಸಮರ; ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿಯಿಂದ ನವ್ಯಾ ಹರಿದಾಸ್ ಸ್ಪರ್ಧೆ

ಮುಂಬರುವ ಲೋಕಸಭಾ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ತೀವ್ರ ಕುತೂಹಲ ಸೃಷ್ಟಿಸಿರುವ ಕೇರಳದ ವಯನಾಡಿನಲ್ಲಿ ಈ ಬಾರಿ ಮಹಿಳಾ ಅಭ್ಯರ್ಥಿಗಳಿಬ್ಬರು ಮುಖಾಮುಖಿಯಾಗಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿಯಿಂದ ನವ್ಯಾ ಹರಿದಾಸ್ ಸ್ಪರ್ಧಿಸಲಿದ್ದಾರೆ.

ಹರಿಯಾಣ ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ ನಾಳೆ ಪ್ರಮಾಣವಚನ ಸ್ವೀಕಾರ

ಹರಿಯಾಣದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ನಯಾಬ್ ಸಿಂಗ್ ಸೈನಿ ಆಯ್ಕೆಯಾಗಿದ್ದು, ಮುಖ್ಯಮಂತ್ರಿಯಾಗಿ ನಾಳೆ (ಗುರುವಾರ) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ವರ್ಷದ ಮಾರ್ಚ್‌ನಲ್ಲಿ ಮನೋಹರ್ ಲಾಲ್ ಖಟ್ಟರ್ ಅವರ ಬದಲು ನಯಾಬ್ ಸಿಂಗ್ ಸೈನಿ ಮುಖ್ಯಮಂತ್ರಿಯಾದರು. ಇತ್ತೀಚೆಗೆ ನಡೆದ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ನಯಾಬ್ ಸಿಂಗ್ ಬಿಜೆಪಿಯನ್ನು ಅಭೂತಪೂರ್ವ ಮೂರನೇ ಅವಧಿಗೆ ಗೆಲುವಿನತ್ತ ಮುನ್ನಡೆಸಿದರು.

ಉತ್ತರ ಪ್ರದೇಶ ಉಪಚುನಾವಣೆ; ನವೆಂಬರ್ 13ರಂದು 9 ಸ್ಥಾನಗಳಿಗೆ ಮತದಾನ, ನವೆಂಬರ್ 23ರಂದು ಫಲಿತಾಂಶ

ಚುನಾವಣಾ ಆಯೋಗವು 9 ಉತ್ತರ ಪ್ರದೇಶ ವಿಧಾನಸಭಾ ಸ್ಥಾನಗಳಲ್ಲಿ ನಿರ್ಣಾಯಕ ಉಪಚುನಾವಣೆಯ ದಿನಾಂಕಗಳನ್ನು ಪ್ರಕಟಿಸಿದೆ. ಮುಂಬರುವ ಉಪಚುನಾವಣೆಗಳು ಇಂಡಿಯಾ ಬಣದ ಏಕತೆಗೆ ಅಗ್ನಿಪರೀಕ್ಷೆಯಾಗಲಿದೆ. ಇಂಡಿಯಾ ಬಣ ಆಮ್ ಆದ್ಮಿ ಪಾರ್ಟಿ (ಎಎಪಿ)ಯೊಂದಿಗೆ ಮೈತ್ರಿ ಮಾಡಿಕೊಳ್ಳಲು ವಿಫಲರಾಗಿದ್ದಾರೆ.

ಹರ್ಯಾಣದಲ್ಲಿ ಕಾಂಗ್ರೆಸ್ ಪರ ಅಲೆ ಸೃಷ್ಟಿಸಿದ್ದರು ರೈತರು; ಮೂರ್ಖ ಹೂಡಾರಿಂದ ಕಾಂಗ್ರೆಸ್ ಸೋತಿತು: ಗುರ್ನಾಮ್ ಚರುನಿ

Haryana election results, blame game: ಹರ್ಯಾಣ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋಲಲು ಭೂಪಿಂದರ್ ಸಿಂಗ್ ಕಾರಣ ಎಂದು ಭಾರತೀಯ ಕಿಸಾನ್ ಯೂನಿಯನ್ ಅಧ್ಯಕ್ಷ ಗುರ್ನಾಮ್ ಸಿಂಗ್ ಚರುನಿ ಆಪಾದಿಸಿದ್ದಾರೆ. ರೈತರ ಪ್ರತಿಭಟನೆಗಳ ಮೂಲಕ ಹರ್ಯಾಣದಲ್ಲಿ ಕಾಂಗ್ರೆಸ್ ಪರವಾದ ವಾತಾವರಣ ನಿರ್ಮಿಸಿದ್ದು ತಾವು. ಆದರೆ, ಹೂಡಾ ಮೂರ್ಖತನದಿಂದಾಗಿ ಕಾಂಗ್ರೆಸ್ ಸೋಲನುಭವಿಸಿತು ಎಂದು ಗುರ್ನಾಮ್ ಹೇಳಿದ್ದಾರೆ.

‘ಹರಿಯಾಣದ ಗೆಲುವು ದೇಶಾದ್ಯಂತ ಪ್ರತಿಧ್ವನಿಸಲಿದೆ’; ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತು

ಹರಿಯಾಣ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಹರಿಯಾಣದಲ್ಲಿ ಬಿಜೆಪಿಯ ಗೆಲುವು ಪಕ್ಷದ ಕಾರ್ಯಕರ್ತರ ಪರಿಶ್ರಮದ ಫಲಿತಾಂಶವಾಗಿದೆ ಎಂದು ಹೇಳಿದರು.

PM Modi Speech Live: ಹರಿಯಾಣ ಗೆದ್ದ ಸಂಭ್ರಮಾಚರಣೆಯಲ್ಲಿ ಮೋದಿ ಭಾಗಿ, ನಮೋ ಭಾಷಣದ ನೇರಪ್ರಸಾರ

ಹರಿಯಾಣದಲ್ಲಿ ಮೂರನೇ ಬಾರಿಗೆ ಬಿಜೆಪಿ ಅಧಿಕಾರಕ್ಕೇರಿದ್ದು, ಇದೇ ಖುಷಿಯಲ್ಲಿ ದಿಲ್ಲಿಯ ಬಿಜೆಪಿ ಕೇಂದ್ರ ಕಚೇರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿ ಸಂಭ್ರಮಾಚರಣೆಯಲ್ಲಿ ಭಾಗವಹಿಸಿದರು, ಇನ್ನು ಇದೇ ವೇಳೆ ಮೋದಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡುತ್ತಿದ್ದು, ಅದರ ನೇರಪ್ರಸಾರ ಇಲ್ಲಿದೆ ನೋಡಿ.

ಸ್ಪಷ್ಟ ಬಹುಮತ ನೀಡಿದ ಜನರಿಗೆ ಸೆಲ್ಯೂಟ್; ಹರಿಯಾಣದಲ್ಲಿ ಬಿಜೆಪಿ ಭರ್ಜರಿ ಗೆಲುವಿಗೆ ಪ್ರಧಾನಿ ಮೋದಿ ಸಂತಸ

ಚುನಾವಣಾ ಆಯೋಗವು ಹರಿಯಾಣ ರಾಜ್ಯದಲ್ಲಿ ಬಿಜೆಪಿ 47 ಸ್ಥಾನಗಳನ್ನು ಗೆದ್ದಿದೆ ಎಂದು ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹರಿಯಾಣದ ಜನತೆಗೆ ಅಭಿನಂದನೆ ಸಲ್ಲಿಸಿದ್ದಾರೆ. ಎಕ್ಸಿಟ್ ಪೋಲ್ ಲೆಕ್ಕಾಚಾರವನ್ನು ಉಲ್ಪಾ ಮಾಡಿ, ಬಿಜೆಪಿ ಅಭೂತಪೂರ್ವ ಸತತ ಮೂರನೇ ಬಾರಿಗೆ ಹರಿಯಾಣದಲ್ಲಿ ತನ್ನ ಸರ್ಕಾರವನ್ನು ರಚಿಸಲು ಸಿದ್ಧವಾಗಿದೆ.

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್, ಎನ್‌ಸಿಪಿ ಮುಖ್ಯಮಂತ್ರಿ ಅಭ್ಯರ್ಥಿ ಘೋಷಿಸಲಿ, ನಾವು ಬೆಂಬಲಿಸುತ್ತೇವೆ; ಉದ್ಧವ್ ಠಾಕ್ರೆ

ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜಕೀಯ ಲೆಕ್ಕಾಚಾರಗಳು ಭರದಿಂದ ಸಾಗುತ್ತಿವೆ. ಏಕನಾಥ್ ಶಿಂಧೆ ನೇತೃತ್ವದ ಸರ್ಕಾರದ ವಿರುದ್ಧ ಪಣ ತೊಟ್ಟಿರುವ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ ಬಣ, ಕಾಂಗ್ರೆಸ್, ಎನ್​ಸಿಪಿ ಒಗ್ಗಟ್ಟಿನಿಂದ ಈ ಬಾರಿಯ ಚುನಾವಣೆಯನ್ನು ಎದುರಿಸಲು ನಿರ್ಧರಿಸಿವೆ.

ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ