Elections
ಚುನಾವಣೆ ಎನ್ನುವುದು ಒಂದು ಔಪಚಾರಿಕ ವ್ಯವಸ್ಥೆ, ನಿರ್ಧಾರ ಮಾಡುವ ಪ್ರಕ್ರಿಯೆ. ಇದರಲ್ಲಿ, ಜನಸಮೂಹ ಒಬ್ಬನನ್ನು ಸಾರ್ವಜನಿಕ ಕ್ಷೇತ್ರದ ಅಧಿಕಾರವನ್ನು ಹಿಡಿಯಲು ಮಾಡುವ ಆಯ್ಕೆ. ಚುನಾವಣೆಗಳು ಒಂದು ಸಾಧಾರಣ ಯಾಂತ್ರಿಕದಲ್ಲಿ ಆಧುನಿಕ ಪ್ರಾತಿನಿಧಿಕ ಪ್ರಜಾಪ್ರಭುತ್ವವಾಗಿ 17ನೇ ಶತಮಾನದಿಂದ ನಡೆಯುತ್ತಿದೆ. ಚುನಾವಣೆಗಳು-ಶಾಸಕಾಂಗಳಲ್ಲಿ, ಕೆಲವೊಮ್ಮೆ ಕಾರ್ಯಾಂಗ ಮತ್ತು ನ್ಯಾಯಾಂಗಗಳಲ್ಲಿ ಮತ್ತು ಪ್ರಾದೇಶಿಕ ಹಾಗೂ ಸ್ಥಳೀಯ ಸರ್ಕಾರಗಳಿಗೆ ಅಧಿಕಾರಸ್ಥರನ್ನು ತುಂಬುತ್ತದೆ. ಚುನಾವಣೆ ಅಂದರೆ ಕೇವಲ ವಿಧಾನಸಭೆ, ಲೋಕಸಭೆ, ವಿಧಾನಪರಿಷತ್ ಚುನಾವಣೆ ಮಾತ್ರ ಅಲ್ಲ. ಖಾಸಗಿ ಮತ್ತು ವ್ಯಾಪಾರದ ಸಂಘಟನೆಗಳಲ್ಲಿ, ಕ್ಲಬ್ಗಳಿಂದ ಹಿಡಿದು ಸ್ವಯಂ ಸೇವಾ ಸಂಘಟನೆ ಮತ್ತು ಪಾಲಿಕೆಗಳಲ್ಲೂ ಸಹ ಈ ಚುನಾವಣೆ ಪ್ರಕ್ರಿಯೆ ನಡೆಯುತ್ತದೆ.
ಪ್ರಾಚೀನ ರೋಮ್ನಲ್ಲಿ ಮತ್ತು ಮಧ್ಯಕಾಲೀನ ಯುಗದ ಪೂರ್ತಿ ಹೋಲಿ ರೋಮನ್ ಎಂಪರರ್ ಹಾಗು ದಿ ಪೋಪ್ ಅವರಂಥ ಆಳುವವರನ್ನು ಆಯ್ಕೆ ಮಾಡಲು ಚುನಾವಣೆಗಳನ್ನು ಬಳಸಲಾಗುತ್ತಿತ್ತು. 17ನೇ ಶತಮಾನದ ಆರಂಭದವರೆಗೂ, ಉತ್ತರ ಅಮೇರಿಕಾದಲ್ಲಿ ಮತ್ತು ಯುರೋಪಿ ನಲ್ಲಿ ಪ್ರತಿನಿಧಿ ಸರ್ಕಾರದ ಆಲೋಚನೆ ಆಗುವವರೆಗೂ ಸರಕಾರಿ ಅಧಿಕಾರಿಗಳನ್ನೊಳಗೊಂಡ ಇಂದಿನಂತಹ ಆಧುನಿಕ ಸಾರ್ವಜನಿಕ ಚುನಾವಣೆಗಳ ಆಲೋಚನೆ ಮೂಡಿರಲಿಲ್ಲ. ಅನೇಕ ಪ್ರಜಾಪ್ರಭುತ್ವ ರಾಜಕೀಯ ವ್ಯವಸ್ಥೆಗಳಲ್ಲಿ,ಸಾರ್ವಜನಿಕ ಆಡಳಿತದ ಹಲವು ಹಂತಗಳಿಗೆ ಅಥವಾ ಭೌಗೋಳಿಕ ವ್ಯಾಪ್ತಿಗೆ ತಾಳೆಯಾಗುವಂತೆ ವಿವಿಧ ಶೈಲಿಯ ಚುನಾವಣೆಗಳಿವೆ. ಕೆಲವು ಸಾಮಾನ್ಯ ಶೈಲಿಯ ಚುನಾವಣೆ ಎಂದರೆ ಅಧ್ಯಕ್ಷೀಯ ಚುನಾವಣೆ, ಸಾರ್ವತ್ರಿಕ ಚುನಾವಣೆ, ಪ್ರಾಥಮಿಕ ಚುನಾವಣೆ, ಮರು ಚುನಾವಣೆ, ಸ್ಥಳೀಯ ಚುನಾವಣೆ.
ಗಲ್ಫ್ ದೇಶಗಳೊಂದಿಗಿನ ಭಾರತದ ಸಂಬಂಧ ಹಾಳು ಮಾಡುವುದೇ ಕಾಂಗ್ರೆಸ್ ಉದ್ದೇಶ; ಪ್ರಧಾನಿ ಮೋದಿ ವಾಗ್ದಾಳಿ
ಕೇರಳದ ಪತನಾಂತಿಟ್ಟದ ತಿರುವಲ್ಲಾದಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ. ವಿಧಾನಸಭಾ ಚುನಾವಣೆಗೆ ಮುನ್ನ ಮೋದಿ ಕೇರಳದಲ್ಲಿ ಚುನಾವಣಾ ಪ್ರಚಾರ ನಡೆಸಿದ್ದಾರೆ. ಈ ವೇಳೆ ಕಾಂಗ್ರೆಸ್ ಹಾಗೂ ಎಡಪಕ್ಷಗಳ ವಿರುದ್ಧ ಅವರು ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ನೀಡುತ್ತಿರುವ ಹೇಳಿಕೆಗಳು ಭಾರತೀಯರ ಜೀವಗಳನ್ನು ಅದರಲ್ಲೂ ವಿಶೇಷವಾಗಿ ಈ ಪ್ರದೇಶದಲ್ಲಿ ಕೆಲಸ ಮಾಡುತ್ತಿರುವ ಕೇರಳದವರ ಜೀವಗಳನ್ನು ಅಪಾಯಕ್ಕೆ ಸಿಲುಕಿಸುತ್ತಿದೆ ಎಂದು ಮೋದಿ ಆರೋಪಿಸಿದ್ದಾರೆ.
- Sushma Chakre
- Updated on: Apr 4, 2026
- 8:25 pm
ಮುಸ್ಲಿಮರನ್ನೆಲ್ಲಾ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಸಿದ್ದರಾಮಯ್ಯ ಹೀಗೆಂದಿದ್ಯಾಕೆ ನೋಡಿ!
ಬಾಗಲಕೋಟೆ ಉಪಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಯತ್ನಾಳ್ ಅವರ ಆಕ್ಷೇಪಾರ್ಹ ಹೇಳಿಕೆಗಳಾದ ಮಸೀದಿ ಕೆಡವುವಿಕೆ ಮತ್ತು 3000 ರೂ. ಘೋಷಣೆಗಳನ್ನು ಖಂಡಿಸಿದ್ದಾರೆ. ದ್ವೇಷದ ರಾಜಕಾರಣದ ಬದಲು ಅಭಿವೃದ್ಧಿ ಬಗ್ಗೆ ಮಾತನಾಡಬೇಕು ಎಂದು ಸಿಎಂ ಪ್ರತಿಪಾದಿಸಿದರು. ಪ್ರತಾಪ್ ಸಿಂಹ ಅಶ್ಲೀಲ ಹೇಳಿಕೆ ಬಗ್ಗೆಯೂ ಖಂಡಿಸಿದ್ದಾರೆ.
- Ganapathi Sharma
- Updated on: Apr 4, 2026
- 1:01 pm
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ವಿಧಾನಸಭೆ ಚುನಾವಣೆಗೂ ಮುನ್ನ ಪುದುಚೇರಿಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇಂದು ಪುದುಚೇರಿಯಲ್ಲಿ ರೋಡ್ ಶೋ ನಡೆಸಿದರು. ಏಪ್ರಿಲ್ 9ರಂದು ನಡೆಯಲಿರುವ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಎಐಎನ್ಆರ್ಸಿ-ಬಿಜೆಪಿ ಮೈತ್ರಿಕೂಟವನ್ನು ಬೆಂಬಲಿಸುವಂತೆ ಮತದಾರರಿಗೆ ಮನವಿ ಮಾಡಿದರು. ಈ ಕಾರ್ಯಕ್ರಮವು ಸುಮಾರು 1 ಗಂಟೆ ಕಾಲ ನಡೆಯಿತು, ಏಕೆಂದರೆ ಮಾರ್ಗದುದ್ದಕ್ಕೂ ದೊಡ್ಡ ಜನಸಮೂಹ ಸೇರಿತ್ತು. ಅಖಿಲ ಭಾರತ ಎನ್ಆರ್ ಕಾಂಗ್ರೆಸ್ ಸಂಸ್ಥಾಪಕ ಮುಖ್ಯಮಂತ್ರಿ ಎನ್ ರಂಗಸಾಮಿ ಮತ್ತು ಬಿಜೆಪಿ ನಾಯಕ ಮತ್ತು ಗೃಹ ಸಚಿವ ಎ. ನಮಶ್ಶಿವಾಯಂ ಅವರೊಂದಿಗೆ ಸೇರಿಕೊಂಡರು.
- Sushma Chakre
- Updated on: Apr 3, 2026
- 9:07 pm
Tamil Nadu Assembly elections 2026: ತಮಿಳುನಾಡು ಚುನಾವಣೆಗೆ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ, ಅಣ್ಣಾಮಲೈ ಹೆಸರಿಲ್ಲ
ತಮಿಳುನಾಡು ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.ಕೇಂದ್ರ ಚುನಾವಣಾ ಸಮಿತಿಯು 27 ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಈ ಪಟ್ಟಿಯಲ್ಲಿ ಹಲವಾರು ಅನುಭವಿ ನಾಯಕರು ಮತ್ತು ಸ್ಥಳೀಯ ಪ್ರಭಾವ ಹೊಂದಿರುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ. ಪಟ್ಟಿಯಲ್ಲಿ ಕೇಂದ್ರ ಸಚಿವರಿಂದ ಹಿಡಿದು ಮಾಜಿ ರಾಜ್ಯಪಾಲರವರೆಗೆ ಪ್ರಮುಖ ನಾಯಕರು ಸೇರಿದ್ದಾರೆ. ಆದಾಗ್ಯೂ, ಈ ಪಟ್ಟಿಯು ಪಕ್ಷದ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರನ್ನು ನಿರಾಸೆಗೊಳಿಸಿದೆ.
- Nayana Rajeev
- Updated on: Apr 3, 2026
- 2:50 pm
ನಿಮಗೆ ಸಾಬರಷ್ಟೇ ಓಟ್ ಹಾಕಿದ್ದಾರಾ ಸಿದ್ದರಾಮಯ್ಯ? ಬಾಗಲಕೋಟೆಯಲ್ಲಿ ಗುಡುಗಿದ ಯತ್ನಾಳ್
Karnataka By-Election 2026: ಬಾಗಲಕೋಟೆ ಉಪಚುನಾವಣೆಯ ಪ್ರಚಾರದಲ್ಲಿ ಶಾಸಕ ಯತ್ನಾಳ್ ಅಬ್ಬರಿಸಿದ್ದಾರೆ. ಶಿವಾಜಿ ಮಹಾರಾಜರ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿದವರ ವಿರುದ್ಧ ಜೆಸಿಬಿ ಕ್ರಮಕ್ಕೆ ಆಗ್ರಹಿಸಿದ ಅವರು, ಸಿದ್ದರಾಮಯ್ಯ ಸರ್ಕಾರವನ್ನು ‘ಒಂದು ಸಮುದಾಯದ ಪರ’ ಎಂದು ಟೀಕಿಸಿ, ಹಿಂದೂಗಳ ಮತ ಕ್ರೂಡೀಕರಣಕ್ಕೆ ಕರೆ ನೀಡಿದರು. ಯತ್ನಾಳ್ ಬೆಂಕಿ ಭಾಷಣದ ವಿಡಿಯೋ ಇಲ್ಲಿದೆ.
- Ganapathi Sharma
- Updated on: Apr 3, 2026
- 9:21 am
ಉಪಚುನಾವಣೆ ಪ್ರಚಾರ ಅಬ್ಬರ: ದಾವಣಗೆರೆಯಲ್ಲಿ ಮಳೆಯಲ್ಲೇ ‘ಕೈ’ ನಾಯಕರ ಘರ್ಜನೆ; ಬಾಗಲಕೋಟೆಯಲ್ಲಿ ಚರಂತಿಮಠ ಪರ ಯತ್ನಾಳ್ ಮತಬೇಟೆ!
Karnataka By-Election 2026; ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆ ಪ್ರಚಾರ ಕೊನೆಯ ಹಂತದಲ್ಲಿದೆ. ದಾವಣಗೆರೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಕಾಂಗ್ರೆಸ್ ಪರ ಅಬ್ಬರಿಸಿದರೆ, ಬಾಗಲಕೋಟೆಯಲ್ಲಿ ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ಕೇಸರಿ ಅಭ್ಯರ್ಥಿ ಪರ ಪ್ರಚಾರ ಮಾಡಿ ಅಚ್ಚರಿ ಮೂಡಿಸಿದ್ದಾರೆ. ಮಳೆ, ಅಲ್ಪಸಂಖ್ಯಾತ ಮತಗಳ ಧ್ರುವೀಕರಣ, ಹಾಗೂ ಯತ್ನಾಳ್ ನಡೆ ಈ ಚುನಾವಣೆಗಳನ್ನು ಇನ್ನಷ್ಟು ಕುತೂಹಲಕಾರಿಯನ್ನಾಗಿಸಿವೆ.
- Ganapathi Sharma
- Updated on: Apr 3, 2026
- 6:54 am
15 ದಿನ ಪಶ್ಚಿಮ ಬಂಗಾಳದಲ್ಲೇ ಇರ್ತೀನಿ, ಮಮತಾಗೆ ಬೈ-ಬೈ ಹೇಳಿಯೇ ಬರ್ತೀನಿ: ಅಮಿತ್ ಶಾ
ಪಶ್ಚಿಮ ಬಂಗಾಳದಲ್ಲಿ 2026ರ ಚುನಾವಣೆಗೂ ಮುನ್ನ ರಾಜಕೀಯ ವಾತಾವರಣ ಬಿಸಿಯಾಗುತ್ತಿದೆ. ಈ ಚುನಾವಣೆಯಲ್ಲಿ ಆಡಳಿತಾರೂಢ ಟಿಎಂಸಿ ಹಾಗೂ ಪ್ರಮುಖ ವಿರೋಧಪಕ್ಷ ಬಿಜೆಪಿ ನಡುವೆ ನೇರ ಹೋರಾಟ ಕಂಡುಬರುತ್ತಿದೆ. ಶುಭೇಂದು ಅಧಿಕಾರಿಯ ನಾಮಪತ್ರ ಸಲ್ಲಿಕೆ ಇದ್ದ ಕಾರಣ ನಂದಿಗ್ರಾಮಕ್ಕೆ ಹೋಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಇನ್ನು 15 ದಿನ ಇಲ್ಲೇ ಇರುತ್ತೇನೆ, ಪಶ್ಚಿಮ ಬಂಗಾಳದಲ್ಲಿಯೇ ಉಳಿದು ಚುನಾವಣಾ ಉಸ್ತುವಾರಿವಹಿಸಿಕೊಳ್ಳುವುದಾಗಿ ಘೋಷಿಸಿದರು. ತಾನು ಇಡೀ ಬಂಗಾಳವನ್ನು ಪ್ರವಾಸ ಮಾಡಿರುವುದಾಗಿ ಹೇಳಿದ್ದು, ಎಲ್ಲ ಕಡೆಯೂ ಮಮತಾ ಬ್ಯಾನರ್ಜಿ ಸರ್ಕಾರವನ್ನು ಕೊನೆಗೊಳಿಸುವ ಬಗ್ಗೆಯೇ ಬೇಡಿಕೆಗಳು ಕೇಳಿಬಂದಿವೆ.
- Nayana Rajeev
- Updated on: Apr 2, 2026
- 3:05 pm
ಅಭಿವೃದ್ಧಿ ಹೊಂದಿದ ಭಾರತ, ಅಭಿವೃದ್ಧಿ ಹೊಂದಿದ ಅಸ್ಸಾಂ ನಿರ್ಮಿಸಲು ಈ ಚುನಾವಣೆ: ಪ್ರಧಾನಿ ಮೋದಿ
ಕಳೆದ ಹತ್ತು ವರ್ಷಗಳಲ್ಲಿ ಅಸ್ಸಾಂನಲ್ಲಿ ಸಾಕಷ್ಟು ಅಭಿವೃದ್ಧಿಗಳನ್ನು ಮಾಡಲಾಗಿದೆ. ಮೊದಲು ಸರ್ಬಾನಂದ ಸೋನೋವಾಲ್ ನಂತರ ಹಿಮಂತ ಬಿಸ್ವಾ ಶರ್ಮಾ ನೇತೃತ್ವದಲ್ಲಿ, ಅಸ್ಸಾಂ ಕಳೆದ 10 ವರ್ಷಗಳಲ್ಲಿ ಸೇವೆ ಮತ್ತು ಉತ್ತಮ ಆಡಳಿತದ ಹೊಸ ಯುಗಕ್ಕೆ ಸಾಕ್ಷಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಅಭಿವೃದ್ಧಿ ಹೊಂದಿದ ಅಸ್ಸಾಂ ನಿರ್ಮಿಸುವ ಚುನಾವಣೆ ಇದಾಗಿದೆ. ಈ ಬಾರಿ ಅಸ್ಸಾಂನಲ್ಲಿ ಎನ್ಡಿಎ ಹ್ಯಾಟ್ರಿಕ್ಗೆ ಸಜ್ಜಾಗಿದೆ ಎಂದರು.
- Nayana Rajeev
- Updated on: Apr 1, 2026
- 12:44 pm
ಭಾರತದ ಟೆನಿಸ್ ಲೆಜೆಂಡ್ ಲಿಯಾಂಡರ್ ಪೇಸ್ ಬಿಜೆಪಿ ಸೇರ್ಪಡೆ; ಬಂಗಾಳದಲ್ಲಿ ಮತ್ತಷ್ಟು ಸ್ಟಾರ್ಗಳ ಮೆರಗು
Tennis Legend Leander Paes Joins BJP: ಭಾರತದ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಏಪ್ರಿಲ್ 23 ಮತ್ತು 29ರಂದು ಎರಡು ಹಂತದಲ್ಲಿ ಚುನಾವಣೆ ನಡೆಯುತ್ತಿರುವ ಬಂಗಾಳದಲ್ಲಿ ಪೇಸ್ ಅವರ ಸೇರ್ಪಡೆಯು ಬಿಜೆಪಿಗೆ ಬಲ ತುಂಬವ ನಿರೀಕ್ಷೆ ಇದೆ. ಭಾರತದ ಟೆನಿಸ್ ಕ್ಷೇತ್ರದ ದೈತ್ಯ ಲಿಯಾಂಡರ್ ಪೇಸ್ ಅವರು 18 ಗ್ರ್ಯಾನ್ ಸ್ಲಾಂ ಪ್ರಶಸ್ತಿ ಗೆದ್ದಿರುವ ಲೆಜೆಂಡ್.
- Vijaya Sarathy SN
- Updated on: Mar 31, 2026
- 6:36 pm
ಕೇರಳ ಚುನಾವಣಾ ಪ್ರಚಾರಕ್ಕೆ ಟ್ರಂಪ್, ಷಿ ಜಿನ್ಪಿಂಗ್, ಪುಟಿನ್!
ಕೇರಳ ವಿಧಾನಸಭಾ ಚುನಾವಣೆ ಪ್ರಚಾರಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಷಿ ಜಿನ್ಪಿಂಗ್, ಪುಟಿನ್ ಬಂದಿದ್ದಾರೆ ನೋಡಿ. ಇದೇನಿದು ವಿಶ್ವ ನಾಯಕರು ಒಂದು ರಾಜ್ಯದ ಪ್ರಚಾರಕ್ಕೆ ಬಂದ್ಬಿಟ್ರಾ ಎಂದು ಆಲೋಚಿಸುತ್ತಿದ್ದೀರಾ, ಇಲ್ಲ ನಿಜವಾಗಿಗೂ ಬಂದಿಲ್ಲ ಆದರೆ ಎಐ ಅವರೆಲ್ಲರನ್ನೂ ವಿಶಿಷ್ಟ ಕೇರಳದ ಉಡುಗೆಯಲ್ಲಿ ಕರೆತಂದಿದೆ. ಡೊನಾಲ್ಡ್ ಟ್ರಂಪ್, ಷಿ ಜಿನ್ಪಿಂಗ್, ಪುಟಿನ್, ವೊಲೊಡಿಮಿರ್ ಝೆಲೆನ್ಸ್ಕಿ ಒಬ್ಬೊಬ್ಬರು ಒಂದೊಂದು ಪಕ್ಷಕ್ಕೆ ಬೆಂಬಲ ನೀಡಿ ಪ್ರಚಾರ ಮಾಡುತ್ತಿರುವಂತೆ ವಿಡಿಯೋವನ್ನು ರಚಿಸಲಾಗಿದೆ. ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿಯವರನ್ನು ಕೂಡ ನೀವು ಕಾಣಬಹುದು. ನಿಜವಾಗಿಯೂ ಈ ನಾಯಕರು ಪ್ರಚಾರಕ್ಕೆ ಬಂದರೆ ಹೇಗಿರುತ್ತೆ ಎಂಬಂತೆ ಎಐ ವಿಡಿಯೋ ರಚಿಸಲಾಗಿದೆ.
- Nayana Rajeev
- Updated on: Mar 31, 2026
- 12:26 pm
ಚುನಾವಣಾ ಪ್ರಚಾರಕ್ಕೆ ಬಸನಗೌಡ ಯತ್ನಾಳ್ಗೆ ಸ್ವಾಗತ ಎಂದರೇ ಬಿಎಸ್ ಯಡಿಯೂರಪ್ಪ!
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬಾಗಲಕೋಟೆ ಉಪಚುನಾವಣೆಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಪ್ರಚಾರಕ್ಕೆ ಬಂದರೆ ಸ್ವಾಗತಿಸುವುದಾಗಿ ತಿಳಿಸಿದ್ದಾರೆ. ದಾವಣಗೆರೆ ಮತ್ತು ಬಾಗಲಕೋಟೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಜನಹಿತ ಮರೆತಿದೆ ಎಂದು ಆರೋಪಿಸಿ ಕಾಂಗ್ರೆಸ್ಗೆ ತಕ್ಕ ಪಾಠ ಕಲಿಸಲು ಮತದಾರರಲ್ಲಿ ಮನವಿ ಮಾಡಿದ್ದಾರೆ.
- Kiran Haniyadka
- Updated on: Mar 31, 2026
- 11:11 am
ರಾತ್ರೋರಾತ್ರಿ ಸಿಎಂ ಸಿದ್ದರಾಮಯ್ಯ ಭೇಟಿಯಾದ ಮುಸ್ಲಿಂ ಮುಖಂಡರು! ದಿಢೀರ್ ಬೆಳವಣಿಗೆಗೆ ಕಾರಣ ಏನು ಗೊತ್ತೇ?
ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣ ರಂಗೇರುತ್ತಿದ್ದು, ಮುಸ್ಲಿಂ ಮುಖಂಡರು ಆಲಮಟ್ಟಿ ಬಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದ್ದಾರೆ. ಕ್ಷೇತ್ರದ ಚುನಾವಣಾ ಪ್ರಚಾರಕ್ಕಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಕರೆಸುವಂತೆ ಈ ವೇಳೆ ಒತ್ತಾಯಿಸಲಾಗಿದೆ. ಸದ್ಯ ಕೇರಳದಲ್ಲಿ ಪ್ರಚಾರದಲ್ಲಿರುವ ಜಮೀರ್, ಏಪ್ರಿಲ್ 6 ಮತ್ತು 7 ರಂದು ಬಾಗಲಕೋಟೆಯಲ್ಲಿ ಅಬ್ಬರದ ಪ್ರಚಾರ ನಡೆಸುವ ಸಾಧ್ಯತೆ ಇದೆ.
- Ravi H Mooki
- Updated on: Mar 31, 2026
- 8:46 am