AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Elections

Elections

ಚುನಾವಣೆ ಎನ್ನುವುದು ಒಂದು ಔಪಚಾರಿಕ ವ್ಯವಸ್ಥೆ, ನಿರ್ಧಾರ ಮಾಡುವ ಪ್ರಕ್ರಿಯೆ. ಇದರಲ್ಲಿ, ಜನಸಮೂಹ ಒಬ್ಬನನ್ನು ಸಾರ್ವಜನಿಕ ಕ್ಷೇತ್ರದ ಅಧಿಕಾರವನ್ನು ಹಿಡಿಯಲು ಮಾಡುವ ಆಯ್ಕೆ. ಚು‌‌ನಾವಣೆಗಳು ಒಂದು ಸಾಧಾರಣ ಯಾಂತ್ರಿಕದಲ್ಲಿ ಆಧುನಿಕ ಪ್ರಾತಿನಿಧಿಕ ಪ್ರಜಾಪ್ರಭುತ್ವವಾಗಿ 17ನೇ ಶತಮಾನದಿಂದ ನಡೆಯುತ್ತಿದೆ. ಚುನಾವಣೆಗಳು-ಶಾಸಕಾಂಗಳಲ್ಲಿ, ಕೆಲವೊಮ್ಮೆ ಕಾರ್ಯಾಂಗ ಮತ್ತು ನ್ಯಾಯಾಂಗಗಳಲ್ಲಿ ಮತ್ತು ಪ್ರಾದೇಶಿಕ ಹಾಗೂ ಸ್ಥಳೀಯ ಸರ್ಕಾರಗಳಿಗೆ ಅಧಿಕಾರಸ್ಥರನ್ನು ತುಂಬುತ್ತದೆ. ಚುನಾವಣೆ ಅಂದರೆ ಕೇವಲ ವಿಧಾನಸಭೆ, ಲೋಕಸಭೆ, ವಿಧಾನಪರಿಷತ್ ಚುನಾವಣೆ ಮಾತ್ರ ಅಲ್ಲ. ಖಾಸಗಿ ಮತ್ತು ವ್ಯಾಪಾರದ ಸಂಘಟನೆಗಳಲ್ಲಿ, ಕ್ಲಬ್‌ಗಳಿಂದ ಹಿಡಿದು ಸ್ವಯಂ ಸೇವಾ ಸಂಘಟನೆ ಮತ್ತು ಪಾಲಿಕೆಗಳಲ್ಲೂ ಸಹ ಈ ಚುನಾವಣೆ ಪ್ರಕ್ರಿಯೆ ನಡೆಯುತ್ತದೆ.

ಪ್ರಾಚೀನ ರೋಮ್‌ನಲ್ಲಿ ಮತ್ತು ಮಧ್ಯಕಾಲೀನ ಯುಗದ ಪೂರ್ತಿ ಹೋಲಿ ರೋಮನ್ ಎಂಪರರ್ ಹಾಗು ದಿ ಪೋಪ್ ಅವರಂಥ ಆಳುವವರನ್ನು ಆಯ್ಕೆ ಮಾಡಲು ಚುನಾವಣೆಗಳನ್ನು ಬಳಸಲಾಗುತ್ತಿತ್ತು. 17ನೇ ಶತಮಾನದ ಆರಂಭದವರೆಗೂ, ಉತ್ತರ ಅಮೇರಿಕಾದಲ್ಲಿ ಮತ್ತು ಯುರೋಪಿ ನಲ್ಲಿ ಪ್ರತಿನಿಧಿ ಸರ್ಕಾರದ ಆಲೋಚನೆ ಆಗುವವರೆಗೂ ಸರಕಾರಿ ಅಧಿಕಾರಿಗಳನ್ನೊಳಗೊಂಡ ಇಂದಿನಂತಹ ಆಧುನಿಕ ಸಾರ್ವಜನಿಕ ಚುನಾವಣೆಗಳ ಆಲೋಚನೆ ಮೂಡಿರಲಿಲ್ಲ. ಅನೇಕ ಪ್ರಜಾಪ್ರಭುತ್ವ ರಾಜಕೀಯ ವ್ಯವಸ್ಥೆಗಳಲ್ಲಿ,ಸಾರ್ವಜನಿಕ ಆಡಳಿತದ ಹಲವು ಹಂತಗಳಿಗೆ ಅಥವಾ ಭೌಗೋಳಿಕ ವ್ಯಾಪ್ತಿಗೆ ತಾಳೆಯಾಗುವಂತೆ ವಿವಿಧ ಶೈಲಿಯ ಚುನಾವಣೆಗಳಿವೆ. ಕೆಲವು ಸಾಮಾನ್ಯ ಶೈಲಿಯ ಚುನಾವಣೆ ಎಂದರೆ ಅಧ್ಯಕ್ಷೀಯ ಚುನಾವಣೆ, ಸಾರ್ವತ್ರಿಕ ಚುನಾವಣೆ, ಪ್ರಾಥಮಿಕ ಚುನಾವಣೆ, ಮರು ಚುನಾವಣೆ, ಸ್ಥಳೀಯ ಚುನಾವಣೆ.

ಇನ್ನೂ ಹೆಚ್ಚು ಓದಿ

ಬಂಗಾಳ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಮಮತಾ ಬ್ಯಾನರ್ಜಿ ವಿರುದ್ಧ ಸುವೇಂದು ಅಧಿಕಾರಿ ಕಣಕ್ಕೆ

West Bengal Assembly Elections: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಗೆ ಬಿಜೆಪಿ 144 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಂಗಾಳದ ಭವಾನಿಪುರದಲ್ಲಿ ಟಿಎಂಸಿ ನಾಯಕಿ ಹಾಗೂ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಸುವೇಂದು ಅಧಿಕಾರಿ ಕಣಕ್ಕಿಳಿದಿದ್ದಾರೆ. ಏಪ್ರಿಲ್ 23 ಮತ್ತು 29 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ.

ಇಂದು 37 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ; 26 ಸ್ಥಾನಗಳಿಗೆ ಅವಿರೋಧ ಆಯ್ಕೆ; ಮತ್ತಷ್ಟು ಭದ್ರವಾಗಲಿದೆ ಬಿಜೆಪಿ ಸ್ಥಾನ

Rajya Sabha polls for 37 seats: ಮಹಾರಾಷ್ಟ್ರ, ತಮಿಳುನಾಡು ಸೇರಿದಂತೆ 10 ರಾಜ್ಯಗಳಲ್ಲಿನ 37 ರಾಜ್ಯಸಭಾ ಸ್ಥಾನಗಳಿಗೆ ಇಂದು ಚುನಾವಣೆ ನಡೆಯುತ್ತಿದೆ. ಈ ಪೈಕಿ ಏಳು ರಾಜ್ಯಗಳ 26 ಸ್ಥಾನಗಳಿಗೆ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ. ಬಿಹಾರ, ಹರ್ಯಾಣ ಮತ್ತು ಒಡಿಶಾದ 11 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಮತದಾನವಾಗಬಹುದು.

ಕರ್ನಾಟಕ ಸೇರಿ ಆರು ರಾಜ್ಯಗಳಲ್ಲಿ ಏ. 9, 23ರಂದು ಉಪಚುನಾವಣೆ; ಮೇ 4ರಂದು ಫಲಿತಾಂಶ

Bypolls for 8 assembly constituencies: ಆರು ರಾಜ್ಯಗಳಲ್ಲಿನ ಎಂಟು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣಾ ದಿನಾಂಕ ಪ್ರಕಟವಾಗಿದೆ. ಏಪ್ರಿಲ್ 9 ಮತ್ತು 29ರಂದು ಉಪಚುನಾವಣೆಗಳು ನಡೆಯಲಿವೆ. ಮೇ 4ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಇದನ್ನು ಪ್ರಕಟಿಸಿದ್ದಾರೆ.

ಐದು ರಾಜ್ಯಗಳ ಚುನಾವಣೆ: ಏಪ್ರಿಲ್ 9ರಿಂದ 29ರವರೆಗೂ ಮತದಾನ; ಚುನಾವಣಾ ಆಯುಕ್ತ ಘೋಷಣೆ

2026, April 9-29th polling in five states and union territory: ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ, ಅಸ್ಸಾಮ್ ರಾಜ್ಯಗಳು ಹಾಗೂ ಪುದುಚೆರಿ ಕೇಂದ್ರಾಡಳಿತ ಪ್ರದೇಶದಲ್ಲಿ ಚುನಾವಣಾ ದಿನಾಂಕಗಳನ್ನು ಪ್ರಕಟಿಸಲಾಗಿದೆ. ಅಸ್ಸಾಮ್, ಕೇರಳ, ಪುದುಚೆರಿಯಲ್ಲಿ ಏಪ್ರಿಲ್ 9ರಂದು ಮತದಾನ ನಡೆಯಲಿದೆ. ತಮಿಳುನಾಡಿನಲ್ಲಿ ಏಪ್ರಿಲ್ 23ರಂದು ನಡೆಯಲಿದೆ. ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್ 23 ಮತ್ತು 29ರಂದು ಎರಡು ಹಂತದಲ್ಲಿ ನಡೆಯಲಿದೆ. ಮೇ 4ರಂದು ಮತ ಎಣಿಕೆ ನಡೆಯಲಿದೆ.

ಮಾರ್ಚ್ 11ರಂದು ತಮಿಳುನಾಡಿಗೆ ಪ್ರಧಾನಿ ಮೋದಿ ಭೇಟಿ; ಬಿಜೆಪಿಯ ಅದ್ಧೂರಿ ಸಾರ್ವಜನಿಕ ಸಭೆಯಲ್ಲಿ ಭಾಗಿ

ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 11ರಂದು ಮತ್ತೆ ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ. ಮಾರ್ಚ್ 1ರಂದು ತಮಿಳುನಾಡು ಮತ್ತು ಪುದುಚೆರಿಗೆ ತೆರಳಿದ್ದ ಮೋದಿ 7,100 ಕೋಟಿ ರೂ.ಗಳಿಗೂ ಹೆಚ್ಚಿನ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ್ದರು. ಇದೀಗ ಮತ್ತೆ ಅವರು ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ. ಮಾರ್ಚ್ 11ರಂದು ತಿರುಚ್ಚಿಯಲ್ಲಿ ನಡೆಯಲಿರುವ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮೋದಿ ಮಾತನಾಡಲಿದ್ದಾರೆ. ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ ಮೋದಿ ಪದೇಪದೇ ಈ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ.

ಮುಂಬೈನಲ್ಲಿ ರೆಸಾರ್ಟ್ ರಾಜಕೀಯ ಶುರು; ಶಿಂಧೆ ಬಣದ ಶಿವಸೇನೆ ಕಾರ್ಪೋರೇಟರ್​​ಗಳು ಫೈವ್ ಸ್ಟಾರ್​​ ಹೋಟೆಲ್‌ಗೆ ಶಿಫ್ಟ್

ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಚುನಾವಣೆಯಲ್ಲಿ ಮಹಾಯುತಿಯ ಭರ್ಜರಿ ಗೆಲುವಿನ ನಂತರ ಮಹಾರಾಷ್ಟ್ರದಲ್ಲಿ ರೆಸಾರ್ಟ್ ರಾಜಕೀಯ ಆರಂಭವಾಗಿದೆ. ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯಿಂದ ಗೆದ್ದ ಎಲ್ಲಾ ಕಾರ್ಪೊರೇಟರ್‌ಗಳನ್ನು 5 ಸ್ಟಾರ್ ಹೋಟೆಲ್‌ಗೆ ಸ್ಥಳಾಂತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಬಿಎಂಸಿ ಚುನಾವಣೆಯಲ್ಲಿ ಶಿವಸೇನೆ ಕಿಂಗ್‌ಮೇಕರ್ ಆಗಿ ಹೊರಹೊಮ್ಮಿರುವುದರಿಂದ ಬೇರೆ ಪಕ್ಷದವರು ಆ ಪಕ್ಷದ ಕಾರ್ಪೋರೇಟರ್​​ಗಳನ್ನು ಸಂಪರ್ಕಿಸುವ ಭಯದ ಕಾರಣದಿಂದಾಗಿ ಈ ಕ್ರಮ ಕೈಗೊಳ್ಳಲಾಗಿದೆ.

ಬಿಎಂಸಿ ಚುನಾವಣಾ ಫಲಿತಾಂಶದ ಲೆಕ್ಕಾಚಾರ ಉಲ್ಟಾ; ಕಿಂಗ್ ಮೇಕರ್ ಆಗುತ್ತಾ ಕಾಂಗ್ರೆಸ್?

ಎಲ್ಲರ ಕುತೂಹಲ ಕೆರಳಿಸಿದ್ದ ಮುಂಬೈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಉದ್ಧವ್ ಠಾಕ್ರೆ 25 ವರ್ಷಗಳ ತಮ್ಮ ಅಧಿಪತ್ಯವನ್ನು ಕಳೆದುಕೊಂಡಿದ್ದಾರೆ. ಈ ಬಾರಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿಗೆ ಮೇಯರ್ ಸ್ಥಾನ ಸಿಗಲಿದೆ ಎನ್ನಲಾಗಿತ್ತು. ಆದರೆ, ಇದೀಗ ಕೊನೆಯ ಹಂತದ ಮತ ಎಣಿಕೆಯಲ್ಲಿ ಬಿಜೆಪಿ ಹಾಗೂ ಏಕನಾಥ್ ಶಿಂಧೆಯ ಶಿವಸೇನಾ ಮೈತ್ರಿಕೂಟ ಮ್ಯಾಜಿಕ್ ನಂಬರ್ ಪಡೆದು ಬಹುಮತ ಪಡೆಯಲು ವಿಫಲವಾಗಿದೆ ಎನ್ನಲಾಗಿದೆ. ಸದ್ಯಕ್ಕೆ ಬಿಜೆಪಿ ಮೈತ್ರಿ 110 ಸ್ಥಾನಗಳನ್ನು ಮಾತ್ರ ಪಡೆದಿದೆ.

ಮುಂಬೈ ಕಿರೀಟವನ್ನು ಮುಡಿಗೇರಿಸಿಕೊಂಡ ಬಿಜೆಪಿ ನೇತೃತ್ವದ ಮಹಾಯುತಿ; 25 ವರ್ಷಗಳ ಬಳಿಕ ಠಾಕ್ರೆ ಭದ್ರಕೋಟೆ ಪತನ

BMC Election Results: ಈ ಬಾರಿ ಎಲ್ಲರೂ ನಿರೀಕ್ಷೆ ಮಾಡಿದ್ದಂತೆ ಮಹಾರಾಷ್ಟ್ರದ ಬಿಎಂಸಿ (ಬೃಹನ್​ಮುಂಬೈ ಮುನ್ಸಿಪಲ್ ಕಾರ್ಪೋರೇಷನ್) ಚುನಾವಣೆಯಲ್ಲಿ ಠಾಕ್ರೆ ಸೋದರರಿಗೆ ಭಾರೀ ಮುಖಭಂಗವಾಗಿದೆ. ಬಿಜೆಪಿ-ಶಿವಸೇನೆ ಮೈತ್ರಿಯ ಮಹಾಯುತಿ ಭಾರೀ ಗೆಲುವು ಕಾಣುವ ಮೂಲಕ ಇತಿಹಾಸ ಸೃಷ್ಟಿಸಿದೆ. 25 ವರ್ಷಗಳ ಕಾಲ ಉದ್ಧವ್ ಠಾಕ್ರೆಯ ಭದ್ರಕೋಟೆಯಾಗಿದ್ದ ಬಿಎಂಸಿ ಈ ಬಾರಿ ಅವರ ಕೈತಪ್ಪಿದೆ. ಮುಂಬೈಯನ್ನು ಭಾರತದ ಅತ್ಯಂತ ಶ್ರೀಮಂತ ಮತ್ತು ಪ್ರಭಾವಿ ಮುನ್ಸಿಪಲ್ ಕಾರ್ಪೋರೇಷನ್ ಎಂದು ಪರಿಗಣಿಸಲಾಗುತ್ತದೆ. ಇದೇ ಕಾರಣದಿಂದಾಗಿ ಈ ಚುನಾವಣೆ ಎಲ್ಲ ಪಕ್ಷಗಳಿಗೂ ಪ್ರತಿಷ್ಠೆಯ ವಿಷಯವಾಗಿದೆ.

ಬಿಎಂಸಿ ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ; ಭರ್ಜರಿ ಗೆಲುವಿನತ್ತ ಬಿಜೆಪಿ ಮೈತ್ರಿಕೂಟ; ಠಾಕ್ರೆ ಸಹೋದರರಿಗೆ ಹಿನ್ನಡೆ

ಮುಂಬೈನಲ್ಲಿ 9 ವರ್ಷಗಳ ನಂತರ ನಿನ್ನೆ (ಗುರುವಾರ) ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಗಳು ನಡೆದವು. ಇಂದು ಈ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಮುಂಬೈ ಕಾರ್ಪೋರೇಷನ್ ಗೆಲ್ಲುವುದು ಎಲ್ಲಾ ಪಕ್ಷಗಳಿಗೂ ಪ್ರತಿಷ್ಠೆಯ ವಿಷಯವಾಗಿದೆ. ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಪ್ರದೇಶದಲ್ಲಿ ಒಟ್ಟು 227 ವಾರ್ಡ್‌ಗಳಿವೆ. ಈ ಚುನಾವಣೆಯಲ್ಲಿ 1,700 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.

Pune Elections: ಮುಂಬೈ ಜೊತೆ ಪುಣೆಯಲ್ಲೂ ಬಿಜೆಪಿಯದ್ದೇ ದರ್ಬಾರ್; ಎಕ್ಸಿಟ್ ಪೋಲ್​ನಲ್ಲಿ ಏನಿದೆ?

Pune Exit Polls: ಮಹಾರಾಷ್ಟ್ರ ಮಹಾನಗರ ಪಾಲಿಕೆ ಚುನಾವಣೆಯ ಮತದಾನ ಮುಕ್ತಾಯಗೊಂಡಿದೆ. ಅಭ್ಯರ್ಥಿಗಳ ಭವಿಷ್ಯ ಶುಕ್ರವಾರ ನಿರ್ಧರಿಸಲಾಗುವುದು. ಮತದಾನದ ಸಮಯದಲ್ಲಿ ಬೆರಳುಗಳಿಗೆ ಶಾಯಿ ಹಚ್ಚಿದ ವಿಷಯವು ಬಿಜೆಪಿ, ಶಿವಸೇನೆ, ಠಾಕ್ರೆ ಬಣ ಮತ್ತು ಎಂಎನ್‌ಎಸ್ ನಡುವೆ ತೀವ್ರ ಘರ್ಷಣೆಗೆ ಕಾರಣವಾಯಿತು. ಚುನಾವಣಾ ಆಯೋಗದ ಸ್ಪಷ್ಟೀಕರಣದ ಹೊರತಾಗಿಯೂ, ಉದ್ಧವ್ ಠಾಕ್ರೆ ಚುನಾವಣಾ ಆಯೋಗದ ವಿರುದ್ಧ ಗಂಭೀರ ಆರೋಪಗಳನ್ನು ಹೊರಿಸಿದರು. ಬಿಎಂಸಿ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತದ ಭವಿಷ್ಯ ನುಡಿದ ಮತಗಟ್ಟೆ ಸಮೀಕ್ಷೆಗಳು ಪುಣೆ ಮುನ್ಸಿಪಲ್ ಕಾರ್ಪೋರೇಷನ್ ಚುನಾವಣೆಯ ಬಗ್ಗೆ ಏನು ಹೇಳಿದೆ? ಎಂಬ ಮಾಹಿತಿ ಇಲ್ಲಿದೆ.

ಇವಿಎಂ ಬಗ್ಗೆ ಕರ್ನಾಟಕದ ಬಹುಪಾಲು ಜನರಿಗಿದೆ ವಿಶ್ವಾಸ: ಸಿಂ ಸಿದ್ದರಾಮಯ್ಯ, ಖರ್ಗೆ ತವರಲ್ಲೇ ಹೆಚ್ಚು!

ಶೇ 83.61 ರಷ್ಟು ಕರ್ನಾಟಕದ ಮತದಾರರು EVM ಬಗ್ಗೆ ವಿಶ್ವಾಸ ಹೊಂದಿದ್ದಾರೆಂದು ಸಮೀಕ್ಷೆಯೊಂದು ಬಹಿರಂಗಪಡಿಸಿದೆ. ಕಲಬುರಗಿಯಲ್ಲಿ ಅತಿ ಹೆಚ್ಚು ಮಂದಿ ಇವಿಎಂ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಈ ವರದಿಯನ್ನು ಕಾಂಗ್ರೆಸ್‌ನ ಇವಿಎಂ ಕುರಿತಾದ ಆರೋಪಗಳಿಗೆ ತಿರುಗೇಟು ನೀಡಲು ಬಳಸಿಕೊಂಡಿದೆ. ಈ ಬಗ್ಗೆ ಪ್ರಿಯಾಂಕ್ ಖರ್ಗೆ ಏನಂತಾರೆ? ತಿಳಿಯಲು ಮುಂದೆ ಓದಿ.

ಮಹಾರಾಷ್ಟ್ರ ಸ್ಥಳೀಯ ನಗರ ಸಂಸ್ಥೆಗಳ ಚುನಾವಣೆ: ಬಿಜೆಪಿ ನೇತೃತ್ವದ ಮಹಾಯುತಿಗೆ ಅಮೋಘ ಮುನ್ನಡೆ

Maharashtra urban local bodies election results 2025: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಜಯಭೇರಿ ಭಾರಿಸಿದ್ದ ಬಿಜೆಪಿ ನೇತೃತ್ವದ ಮಹಾಯುತಿ ಈಗ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಗೆಲುವು ಪಡೆಯುತ್ತಿದೆ. ಒಟ್ಟು 288 ಸ್ಥಳೀಯ ಸಂಸ್ಥೆಗಳಲ್ಲಿ 214ಯಲ್ಲಿ ಮಹಾಯುತಿ ಮುನ್ನಡೆ ಪಡೆದಿದೆ. 6,859 ಕ್ಷೇತ್ರಗಳಲ್ಲಿ ಮಹಾಯುತಿಗೆ ಹತ್ತಿರಹತ್ತಿರ 4,000 ಕ್ಷೇತ್ರಗಳಲ್ಲಿ ಮುನ್ನಡೆ ಸಿಕ್ಕಿದೆ.

‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ