AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Employment

Employment

Employment – ಸರ್ಕಾರಿ ಉದ್ಯೋಗಾವಕಾಶಗಳು, ವಿವಿಧ ಇಂಟರ್ನ್‌ಶಿಪ್‌ಗಳು, ನೇಮಕಾತಿ ಅಧಿಸೂಚನೆಗಳು, ಪರೀಕ್ಷಾ ಮಾಹಿತಿ, ಅರ್ಜಿ ಸಲ್ಲಿಸುವ ವಿಧಾನ, ಪ್ರವೇಶ ಪತ್ರ, ಫಲಿತಾಂಶಗಳು, ಉತ್ತರ ಕೀ, ಅರ್ಹತಾ ಮಾನದಂಡಗಳು ಹಾಗೂ ಉದ್ಯೋಗಕ್ಕೆ ಸಂಬಂಧಿಸಿದ ಎಲ್ಲಾ ಪ್ರಮುಖ ದೈನಂದಿನ ಅಪ್‌ಡೇಟ್‌ಗಳ ಸಂಪೂರ್ಣ ಮಾಹಿತಿಯನ್ನು ನೀವು ಇಲ್ಲಿ ಪಡೆಯಬಹುದು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನೇಮಕಾತಿಗಳು, ಸಾರ್ವಜನಿಕ ವಲಯದ ಸಂಸ್ಥೆಗಳು, ಬ್ಯಾಂಕಿಂಗ್, ರೈಲ್ವೆ, ರಕ್ಷಣಾ ಇಲಾಖೆ ಸೇರಿದಂತೆ ವಿವಿಧ ಕ್ಷೇತ್ರಗಳ ಉದ್ಯೋಗ ಮಾಹಿತಿಯನ್ನು ಸಮಯೋಚಿತವಾಗಿ ಪ್ರಕಟಿಸಲಾಗುತ್ತದೆ. ಉದ್ಯೋಗಾಕಾಂಕ್ಷಿಗಳಿಗೆ ವಿಶ್ವಾಸಾರ್ಹ, ನಿಖರ ಹಾಗೂ ತ್ವರಿತ ಮಾಹಿತಿಯನ್ನು ಒದಗಿಸುವ ಮೂಲಕ, ಸರಿಯಾದ ಸಮಯದಲ್ಲಿ ಅರ್ಜಿ ಸಲ್ಲಿಸಲು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗಲು ಮತ್ತು ತಮ್ಮ ವೃತ್ತಿಜೀವನದ ಗುರಿಗಳನ್ನು ಯಶಸ್ವಿಯಾಗಿ ಸಾಧಿಸಲು ನೆರವಾಗಲಿದೆ.

ಇನ್ನೂ ಹೆಚ್ಚು ಓದಿ

Income Tax Dept Recruitment: ಆದಾಯ ತೆರಿಗೆ ಇಲಾಖೆಯಲ್ಲಿ ಉದ್ಯೋಗಾವಕಾಶ; 10 ನೇ ತರಗತಿ ಪಾಸಾಗಿದ್ರೆ ಸಾಕು!

ಆದಾಯ ತೆರಿಗೆ ಇಲಾಖೆಯು 10ನೇ ತರಗತಿ ಪಾಸಾದವರಿಗೆ ಕ್ಯಾಂಟೀನ್ ಅಟೆಂಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ ಪ್ರದೇಶಗಳಿಗೆ ಏಳು ಹುದ್ದೆಗಳಿದ್ದು, ಆಗಸ್ಟ್ 31 ಕೊನೆಯ ದಿನಾಂಕ. ಅರ್ಜಿ ಶುಲ್ಕವಿಲ್ಲ. 18-25 ವಯೋಮಿತಿ. ಲಿಖಿತ ಪರೀಕ್ಷೆ ಮತ್ತು ಕೌಶಲ್ಯ ಪರೀಕ್ಷೆ ಮೂಲಕ ಆಯ್ಕೆ. ಮಾಸಿಕ 18,000 ರೂ.ನಿಂದ 56,900 ರೂ. ವೇತನ ಪಡೆಯಬಹುದು. ಸರ್ಕಾರಿ ಉದ್ಯೋಗ ಬಯಸುವವರಿಗೆ ಇದೊಂದು ಉತ್ತಮ ಅವಕಾಶ.

Karwar Court Jobs 2026: SSLC ಪಾಸಾದವರಿಗೆ ಉದ್ಯೋಗವಕಾಶ; ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ 78 ಹುದ್ದೆಗಳಿಗೆ ಭರ್ಜರಿ ನೇಮಕಾತಿ!

ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯವು ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ ಜವಾನ (65) ಮತ್ತು ಆದೇಶ ಜಾರಿಕಾರ (13) ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಒಟ್ಟು 78 ಸರ್ಕಾರಿ ಹುದ್ದೆಗಳಿದ್ದು, ಉತ್ತಮ ವೇತನ ದೊರೆಯಲಿದೆ. ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 16ರೊಳಗೆ ಅರ್ಜಿ ಸಲ್ಲಿಸಿ ಕಾರವಾರದಲ್ಲಿ ಸರ್ಕಾರಿ ಕೆಲಸ ಪಡೆಯಬಹುದು. ಅರ್ಜಿ ಸಲ್ಲಿಸಲು ಬಯಸುವವರು ನ್ಯಾಯಾಲಯದ ಅಧಿಕೃತ ವೆಬ್‌ಸೈಟ್​​ಗೆ ಭೇಟಿ ನೀಡಿ.

AAI Recruitment 2026: ಕೇಂದ್ರ ಸರ್ಕಾರಿ ಉದ್ಯೋಗವಕಾಶ; 389 ಹುದ್ದೆಗಳಿಗೆ ಅರ್ಜಿ ಆಹ್ವಾನ, 1.80 ಲಕ್ಷದವರೆಗೆ ವೇತನ

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (AAI) 389 ಮ್ಯಾನೇಜರ್ ಮತ್ತು ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಕೇಂದ್ರ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಉತ್ತಮ ಅವಕಾಶ. ಆಕರ್ಷಕ ವೇತನ ಶ್ರೇಣಿ ಹೊಂದಿರುವ ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 7 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ವಿವರವಾದ ಅರ್ಹತೆ, ವಯೋಮಿತಿ ಮತ್ತು ಆಯ್ಕೆ ಪ್ರಕ್ರಿಯೆಗಾಗಿ ಸಂಪೂರ್ಣ ಅಧಿಸೂಚನೆಯನ್ನು ಓದಿ.

SBI Recruitment 2026: SBIನಲ್ಲಿ 1,538 ಜೂನಿಯರ್ ಅಸೋಸಿಯೇಟ್ ಹುದ್ದೆಗೆ ಅರ್ಜಿ ಆಹ್ವಾನ; ಪೂರ್ಣ ವಿವರ ಇಲ್ಲಿದೆ!

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಜೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ ವಿಶೇಷ ನೇಮಕಾತಿ ಅಧಿಸೂಚನೆ ಹೊರಡಿಸಿದೆ. SC, ST, OBC ಅಭ್ಯರ್ಥಿಗಳಿಗೆ ಮೀಸಲಾದ 1,538 ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಪದವೀಧರರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, 20-28 ವಯಸ್ಸಿನ ಮಿತಿಯಿದೆ. ಆಗಸ್ಟ್ 7 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಗಸ್ಟ್ 27 ಕೊನೆಯ ದಿನಾಂಕ. ಇದು ಬ್ಯಾಂಕಿಂಗ್ ವಲಯದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಉತ್ತಮ ಅವಕಾಶವಾಗಿದೆ.

RITES Recruitment 2026: ಭಾರತೀಯ ರೈಲ್ವೆ ಸಚಿವಾಲಯದಲ್ಲಿ ನೇಮಕಾತಿ; ಸಹಾಯಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೆ ಸಚಿವಾಲಯದ RITES ಸಂಸ್ಥೆಯು 24 ಸಹಾಯಕ ವ್ಯವಸ್ಥಾಪಕ (ಮೆಕ್ಯಾನಿಕಲ್) ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದ, 32 ವರ್ಷಗಳೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಗಸ್ಟ್ 17 ಅಂತಿಮ ದಿನಾಂಕವಾಗಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ, ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ವಿವರಗಳಿಗಾಗಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.

RCF Apprentice 2026: ರೈಲ್ವೆಯಲ್ಲಿ 734 ಅಪ್ರೆಂಟಿಸ್ ಹುದ್ದೆಗಳ ಬಂಪರ್ ನೇಮಕಾತಿ; ಯಾವುದೇ ಲಿಖಿತ ಪರೀಕ್ಷೆಯಿಲ್ಲ!

ರೈಲ್ವೆ ಕೋಚ್ ಫ್ಯಾಕ್ಟರಿ (RCF) ಕಪುರ್ತಲಾ 734 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 10ನೇ ತರಗತಿ ಹಾಗೂ ಐಟಿಐ ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಯಾವುದೇ ಲಿಖಿತ ಪರೀಕ್ಷೆ ಇಲ್ಲ; ಮೆರಿಟ್ ಆಧಾರದ ಮೇಲೆ ಆಯ್ಕೆ ನಡೆಯುತ್ತದೆ. ಸೆಪ್ಟೆಂಬರ್ 5ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಹರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.

Career Horoscope: ನಿಮ್ಮ ರಾಶಿಗನುಗುಣವಾಗಿ ವಾರದ ಉದ್ಯೋಗ ಭವಿಷ್ಯ ಇಲ್ಲಿ ತಿಳಿಯಿರಿ

ಆಗಸ್ಟ್ ಎರಡನೇ ವಾರದಲ್ಲಿ ಸೂರ್ಯ ಉಚ್ಚಸ್ಥಾನಕ್ಕೆ ಬರುವುದರಿಂದ ಆತ್ಮಸೈರ್ಯ ಹೆಚ್ಚುತ್ತದೆ. ಈ ವಾರ ಕಲೆ, ಜವಾಬ್ದಾರಿ, ಸ್ಪರ್ಧಾತ್ಮಕತೆ ಮತ್ತು ತಂಡದ ಕಾರ್ಯಕ್ಕೆ ವಿಶೇಷ ಒತ್ತು. ಗ್ರಹಗಳ ಪ್ರಭಾವದಿಂದ ಪ್ರತಿಯೊಂದು ರಾಶಿಗೂ ಉದ್ಯೋಗದಲ್ಲಿ ಹೊಸ ಅವಕಾಶಗಳು, ಪ್ರಗತಿ ಅಥವಾ ಸವಾಲುಗಳು ಎದುರಾಗಬಹುದು. ತರಾತುರಿ ನಿರ್ಧಾರಗಳನ್ನು ತಪ್ಪಿಸಿ, ತಾಳ್ಮೆಯಿಂದ ಕೆಲಸ ನಿರ್ವಹಿಸಿ ಯಶಸ್ಸು ಗಳಿಸಿ. ನಿಮ್ಮ ವೃತ್ತಿ ಭವಿಷ್ಯವನ್ನು ಇಲ್ಲಿ ತಿಳಿದುಕೊಳ್ಳಿ.

IOB Recruitment 2026: ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನಲ್ಲಿ 250 ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ!

ಬ್ಯಾಂಕಿಂಗ್ ವಲಯದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಇಂಡಿಯನ್ ಓವರ್‌ಸೀಸ್ ಬ್ಯಾಂಕ್ (IOB) 250 ಸ್ಥಳೀಯ ಬ್ಯಾಂಕ್ ಅಧಿಕಾರಿ (LBO) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ವಿವರ, ವಯೋಮಿತಿ, ಪರೀಕ್ಷಾ ವಿಧಾನ ಮತ್ತು ವೇತನ ಶ್ರೇಣಿಯ ಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿದುಕೊಳ್ಳಿ.

UPSC Recruitment 2026: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ 34 ಹುದ್ದೆಗಳಿಗೆ ಅರ್ಜಿ ಆಹ್ವಾನ!

ಕೇಂದ್ರ ಲೋಕಸೇವಾ ಆಯೋಗವು (UPSC) ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್, ಸಂಶೋಧನಾ ಅಧಿಕಾರಿ, ತೋಟಗಾರಿಕೆ ಅಭಿವೃದ್ಧಿ ಅಧಿಕಾರಿ ಸೇರಿದಂತೆ ಒಟ್ಟು 34 ಪ್ರಮುಖ ಹುದ್ದೆಗಳ ಭರ್ತಿಗೆ ಅಧಿಕೃತ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಅರ್ಹತೆ ಹೊಂದಿರುವ ಅಭ್ಯರ್ಥಿಗಳು ವಯೋಮಿತಿ, ಶೈಕ್ಷಣಿಕ ಅರ್ಹತೆ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಶುಲ್ಕದ ವಿವರಗಳನ್ನು ತಿಳಿದುಕೊಂಡು ಆಗಸ್ಟ್ 28 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಪೂರ್ಣ ಮಾಹಿತಿ ಇಲ್ಲಿದೆ.

Mana Jampal: 9ನೇ ವಯಸ್ಸಿನಲ್ಲೇ Python ಕಲಿತು, 12ನೇ ವಯಸ್ಸಿನಲ್ಲಿ AI ಕಂಪನಿ ಸ್ಥಾಪಿಸಿದ ಬಾಲಕಿ

ಸಾಮಾನ್ಯವಾಗಿ 12ನೇ ವಯಸ್ಸಿನಲ್ಲಿ ಮಕ್ಕಳು ಶಾಲೆ ಮತ್ತು ಆಟದಲ್ಲಿ ತೊಡಗಿರುತ್ತಾರೆ. ಆದರೆ ದೆಹಲಿನ ಮನ ಜಂಪಲ್(Mana Jampal) ಎಂಬ ಬಾಲಕಿ​​ ಈ ವಯಸ್ಸಿನಲ್ಲೇ Voxa ಎಂಬ AI ಸ್ಟಾರ್ಟ್ಅಪ್ ಸ್ಥಾಪಿಸಿ ತಂತ್ರಜ್ಞಾನ ಕ್ಷೇತ್ರದಲ್ಲಿ ಗಮನ ಸೆಳೆದಿದ್ದಾಳೆ. ಚಿಕ್ಕ ವಯಸ್ಸಿನಲ್ಲೇ ಹೊಸ ಆಲೋಚನೆಯೊಂದಿಗೆ ಮುನ್ನಡೆದು AI ಕ್ಷೇತ್ರದಲ್ಲಿ ಹೆಜ್ಜೆ ಗುರುತು ಮೂಡಿಸಿರುವ ಈಕೆಯ ಕಥೆ, ತಂತ್ರಜ್ಞಾನ ಕಲಿಯಲು ಬಯಸುವ ಯುವಜನರಿಗೆ ಸ್ಫೂರ್ತಿಯಾಗಿದೆ.

KEA Recruitment 2026: 750 ಭೂಮಾಪಕ ಹುದ್ದೆಗಳಿಗೆ ಅರ್ಜಿ; ಆಗಸ್ಟ್ 20ರವರೆಗೆ ಅವಕಾಶ, 76,100 ರೂ. ವರೆಗೆ ವೇತನ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಭೂ ದಾಖಲೆಗಳ ಇಲಾಖೆಯಲ್ಲಿ 750 ಭೂಮಾಪಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆ ಗಡುವನ್ನು ಆಗಸ್ಟ್ 20 ರವರೆಗೆ ವಿಸ್ತರಿಸಲಾಗಿದ್ದು, ಆಯ್ಕೆಯಾದವರಿಗೆ 76,100 ರೂ.ವರೆಗೆ ವೇತನ ದೊರೆಯಲಿದೆ. ಹೀಗಾಗಿ ಅರ್ಹ ಅಭ್ಯರ್ಥಿಗಳು ಕೊನೆಯ ದಿನದವರೆಗೆ ಕಾಯದೆ ಸಾಧ್ಯವಾದಷ್ಟು ಬೇಗ ಅರ್ಜಿ ಸಲ್ಲಿಸುವುದು ಉತ್ತಮ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್​ಸೈಟ್​ ಗೆ ಭೇಟಿ ನೀಡಿ.

KEA Recruitment 2026: 233 ಫಾರ್ಮಸಿ, ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ; 99,400ರೂ. ವರೆಗೆ ವೇತನ

ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗ ಪಡೆಯಲು ಕಾಯುತ್ತಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸಿಹಿಸುದ್ದಿ ನೀಡಿದೆ. ಫಾರ್ಮಸಿ ಆಫೀಸರ್ ಮತ್ತು ನರ್ಸಿಂಗ್ ಆಫೀಸರ್ ಸೇರಿದಂತೆ 233 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಆಗಸ್ಟ್ 30ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನೇಮಕಾತಿಗೆ ಸಂಬಂಧಿಸಿದ ಅಂತಿಮ ಮತ್ತು ಅಧಿಕೃತ ಮಾಹಿತಿಗಾಗಿ KEA ವೆಬ್‌ಸೈಟ್‌ನಲ್ಲಿರುವ ಅಧಿಸೂಚನೆಯನ್ನೇ ಪರಿಗಣಿಸುವುದು ಸೂಕ್ತ.

ಶ್ರೀನಗರ-ಲೇಹ್ ಹೈವೇಯಲ್ಲಿ ಭಾರಿ ಮೇಘಸ್ಫೋಟ; ಭೂಕುಸಿತದ ಭೀಕರತೆ ಹೀಗಿತ್ತು
ಶ್ರೀನಗರ-ಲೇಹ್ ಹೈವೇಯಲ್ಲಿ ಭಾರಿ ಮೇಘಸ್ಫೋಟ; ಭೂಕುಸಿತದ ಭೀಕರತೆ ಹೀಗಿತ್ತು
ಸಾರ್ವಜನಿಕ ಸ್ಥಳದಲ್ಲಿ ಅನುಮತಿ ಪಡೆದೇ ಕಾರ್ಯಕ್ರಮ ಮಾಡ್ಬೇಕು: ಸಿಎಂ
ಸಾರ್ವಜನಿಕ ಸ್ಥಳದಲ್ಲಿ ಅನುಮತಿ ಪಡೆದೇ ಕಾರ್ಯಕ್ರಮ ಮಾಡ್ಬೇಕು: ಸಿಎಂ
ಕರ್ನಾಟಕದಲ್ಲಿ ಗುಟ್ಕಾ ಬ್ಯಾನ್ ಬಗ್ಗೆ ಸಚಿವ ಯುಟಿ ಖಾದರ್ ಹೇಳಿದ್ದಿಷ್ಟು
ಕರ್ನಾಟಕದಲ್ಲಿ ಗುಟ್ಕಾ ಬ್ಯಾನ್ ಬಗ್ಗೆ ಸಚಿವ ಯುಟಿ ಖಾದರ್ ಹೇಳಿದ್ದಿಷ್ಟು
ಉತ್ತರಾಖಂಡದ ಚಮೋಲಿಯಲ್ಲಿ ಟನಲ್ ಕುಸಿತ; 16 ಕಾರ್ಮಿಕರ ರಕ್ಷಣೆ
ಉತ್ತರಾಖಂಡದ ಚಮೋಲಿಯಲ್ಲಿ ಟನಲ್ ಕುಸಿತ; 16 ಕಾರ್ಮಿಕರ ರಕ್ಷಣೆ
‘ಲವ್ ಯೂ ಗಿಲ್ಲಿ’ ಚಿತ್ರ ಸೆಟ್ಟೇರುವುದು ತಡ ಆಗಿದ್ದು ಏಕೆ? ಇಲ್ಲಿದೆ ಉತ್ತರ
‘ಲವ್ ಯೂ ಗಿಲ್ಲಿ’ ಚಿತ್ರ ಸೆಟ್ಟೇರುವುದು ತಡ ಆಗಿದ್ದು ಏಕೆ? ಇಲ್ಲಿದೆ ಉತ್ತರ
‘ಅಯೋಗ್ಯ 2’ ಸಿನಿಮಾ ನೋಡಿ ಮೆಚ್ಚಿ ಮಾತನಾಡಿದ ನಟ ಶರಣ್
‘ಅಯೋಗ್ಯ 2’ ಸಿನಿಮಾ ನೋಡಿ ಮೆಚ್ಚಿ ಮಾತನಾಡಿದ ನಟ ಶರಣ್
ಕರ್ನಾಟಕದಲ್ಲಿ ಗುಟ್ಕಾ-ತಂಬಾಕು ಬ್ಯಾನ್ ಗೆ ವಿರೋಧ: ಕಾರಣವೇನು?
ಕರ್ನಾಟಕದಲ್ಲಿ ಗುಟ್ಕಾ-ತಂಬಾಕು ಬ್ಯಾನ್ ಗೆ ವಿರೋಧ: ಕಾರಣವೇನು?
ವಿಕಾಸಸೌಧದ ಕ್ಯಾಂಟೀನ್ ಮೇಲೆ ಆಹಾರ ಇಲಾಖೆ ದಾಳಿ: ಜಿರಳೆ-ಫಂಗಸ್ ಪತ್ತೆ
ವಿಕಾಸಸೌಧದ ಕ್ಯಾಂಟೀನ್ ಮೇಲೆ ಆಹಾರ ಇಲಾಖೆ ದಾಳಿ: ಜಿರಳೆ-ಫಂಗಸ್ ಪತ್ತೆ
ಬೀದಿಗಿಳಿದು ರೈತರ ಹೋರಾಟಕ್ಕೆ ಕೈಜೋಡಿಸಿದ ವಿದ್ಯಾರ್ಥಿ ಪಡೆ
ಬೀದಿಗಿಳಿದು ರೈತರ ಹೋರಾಟಕ್ಕೆ ಕೈಜೋಡಿಸಿದ ವಿದ್ಯಾರ್ಥಿ ಪಡೆ
‘ಬಿಗ್ ಬಾಸ್ ಅಗ್ನಿಪರೀಕ್ಷೆ’; 72 ವರ್ಷದ ರತ್ನ ಹಾಗೂ 20 ವರ್ಷ ಕುಮಾರಿ ಪಾಸ್
‘ಬಿಗ್ ಬಾಸ್ ಅಗ್ನಿಪರೀಕ್ಷೆ’; 72 ವರ್ಷದ ರತ್ನ ಹಾಗೂ 20 ವರ್ಷ ಕುಮಾರಿ ಪಾಸ್