Employment
Employment – ಸರ್ಕಾರಿ ಉದ್ಯೋಗಾವಕಾಶಗಳು, ವಿವಿಧ ಇಂಟರ್ನ್ಶಿಪ್ಗಳು, ನೇಮಕಾತಿ ಅಧಿಸೂಚನೆಗಳು, ಪರೀಕ್ಷಾ ಮಾಹಿತಿ, ಅರ್ಜಿ ಸಲ್ಲಿಸುವ ವಿಧಾನ, ಪ್ರವೇಶ ಪತ್ರ, ಫಲಿತಾಂಶಗಳು, ಉತ್ತರ ಕೀ, ಅರ್ಹತಾ ಮಾನದಂಡಗಳು ಹಾಗೂ ಉದ್ಯೋಗಕ್ಕೆ ಸಂಬಂಧಿಸಿದ ಎಲ್ಲಾ ಪ್ರಮುಖ ದೈನಂದಿನ ಅಪ್ಡೇಟ್ಗಳ ಸಂಪೂರ್ಣ ಮಾಹಿತಿಯನ್ನು ನೀವು ಇಲ್ಲಿ ಪಡೆಯಬಹುದು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನೇಮಕಾತಿಗಳು, ಸಾರ್ವಜನಿಕ ವಲಯದ ಸಂಸ್ಥೆಗಳು, ಬ್ಯಾಂಕಿಂಗ್, ರೈಲ್ವೆ, ರಕ್ಷಣಾ ಇಲಾಖೆ ಸೇರಿದಂತೆ ವಿವಿಧ ಕ್ಷೇತ್ರಗಳ ಉದ್ಯೋಗ ಮಾಹಿತಿಯನ್ನು ಸಮಯೋಚಿತವಾಗಿ ಪ್ರಕಟಿಸಲಾಗುತ್ತದೆ. ಉದ್ಯೋಗಾಕಾಂಕ್ಷಿಗಳಿಗೆ ವಿಶ್ವಾಸಾರ್ಹ, ನಿಖರ ಹಾಗೂ ತ್ವರಿತ ಮಾಹಿತಿಯನ್ನು ಒದಗಿಸುವ ಮೂಲಕ, ಸರಿಯಾದ ಸಮಯದಲ್ಲಿ ಅರ್ಜಿ ಸಲ್ಲಿಸಲು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗಲು ಮತ್ತು ತಮ್ಮ ವೃತ್ತಿಜೀವನದ ಗುರಿಗಳನ್ನು ಯಶಸ್ವಿಯಾಗಿ ಸಾಧಿಸಲು ನೆರವಾಗಲಿದೆ.
Apply Now: ಕೊಡಗು ಜಿಲ್ಲಾ ಪಂಚಾಯತ್ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ; ಸಂಪೂರ್ಣ ಮಾಹಿತಿ ಇಲ್ಲಿದೆ
ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ 13 ಗುತ್ತಿಗೆ ಆಧಾರಿತ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 20 ರೊಳಗೆ ಮಡಿಕೇರಿಯಲ್ಲಿರುವ ಕಚೇರಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಬಹುದು. ನೇರ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಆಸಕ್ತರು ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಗಾಗಿ ಅಧಿಕೃತ ಪ್ರಕಟಣೆ ಪರಿಶೀಲಿಸಬೇಕೆಂದು ಸೂಚಿಸಲಾಗಿದೆ.
- Akshatha Vorkady
- Updated on: Jul 8, 2026
- 9:43 am
Agniveervayu Recruitment 2026: ಭಾರತೀಯ ವಾಯುಪಡೆಯಲ್ಲಿ ನೇಮಕಾತಿ; 12ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ!
ಭಾರತೀಯ ವಾಯುಪಡೆ ಅಗ್ನಿವೀರವಾಯು ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ದೇಶಸೇವೆ ಮಾಡಲು ಬಯಸುವ ಅವಿವಾಹಿತ ಯುವಕ-ಯುವತಿಯರು ಜುಲೈ 6 ರಿಂದ ಜುಲೈ 26 ರವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸೆಪ್ಟೆಂಬರ್ 22 ಮತ್ತು 23 ರಂದು ಪರೀಕ್ಷೆ ನಡೆಯಲಿದೆ. ಅರ್ಹತೆ, ವಯಸ್ಸಿನ ಮಿತಿ, ಶುಲ್ಕ ಮತ್ತು ಇತರೆ ವಿವರಗಳಿಗಾಗಿ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ. ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
- Akshatha Vorkady
- Updated on: Jul 8, 2026
- 9:44 am
Bank Jobs 2026: ಚಿಕ್ಕಮಗಳೂರು ಪಟ್ಟಣ ಸಹಕಾರ ಬ್ಯಾಂಕ್ನಲ್ಲಿ ಉದ್ಯೋಗವಕಾಶ; ನೇರ ನೇಮಕಾತಿ ಪ್ರಕಟಣೆ!
ಚಿಕ್ಕಮಗಳೂರು ಪಟ್ಟಣ ಸಹಕಾರಿ ಬ್ಯಾಂಕ್ ಲಿಮಿಟೆಡ್ನಲ್ಲಿ 5 ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಅರಸುವವರಿಗೆ ಇದೊಂದು ಸುವರ್ಣಾವಕಾಶ. ಜೂನ್ 25 ರಿಂದ ಅರ್ಜಿ ವಿತರಣೆ ಆರಂಭವಾಗಿದ್ದು, ಜುಲೈ 24 ಕೊನೆಯ ದಿನಾಂಕವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಚಿಕ್ಕಮಗಳೂರು ಮುಖ್ಯ ಕಚೇರಿಯಲ್ಲಿ ಶುಲ್ಕ ಪಾವತಿಸಿ ಅರ್ಜಿ ಪಡೆದು ಸಲ್ಲಿಸಬಹುದು.
- Akshatha Vorkady
- Updated on: Jul 8, 2026
- 9:45 am
PMFME, Mudra ಮತ್ತು ಇನ್ನುಳಿದ ಕೇಂದ್ರ ಸರ್ಕಾರಿ ಯೋಜನೆಗಳ ಸಾರ್ವಜನಿಕ ಸಂಪರ್ಕಾಧಿಕಾರಿಯಾಗುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ!
ಕೇಂದ್ರ ಸರ್ಕಾರದ PMFME, ಮುದ್ರಾ, ಸ್ಟಾರ್ಟ್ಅಪ್ ಇಂಡಿಯಾ ಯೋಜನೆಗಳ ಪ್ರಚಾರಕ್ಕೆ ಸಾರ್ವಜನಿಕ ಸಂಪರ್ಕಾಧಿಕಾರಿ (PRO) ಹುದ್ದೆಗಳಿಗೆ ಬೇಡಿಕೆಯಿದೆ. ಪತ್ರಿಕೋದ್ಯಮ ಪದವಿ, ಭಾಷಾ ಜ್ಞಾನ, ಡಿಜಿಟಲ್ ಕೌಶಲ್ಯಗಳು ಅಗತ್ಯ. UPSC, ಗುತ್ತಿಗೆ ಅಥವಾ ಔಟ್ಸೋರ್ಸಿಂಗ್ ಮೂಲಕ ನೇಮಕಾತಿ ನಡೆಯುತ್ತದೆ. ಈ ಪ್ರತಿಷ್ಠಿತ ಹುದ್ದೆ ಪಡೆಯಲು ಅಗತ್ಯ ಅರ್ಹತೆಗಳು ಮತ್ತು ಪ್ರಕ್ರಿಯೆಗಳನ್ನು ಇಲ್ಲಿ ತಿಳಿಯಿರಿ.
- Akshatha Vorkady
- Updated on: Jul 8, 2026
- 10:00 am