Farmer
ರೈತರನ್ನು ಈ ದೇಶದಲ್ಲಿ ಅನ್ನದಾತರೆಂದೇ ಗೌರವಿಸಲಾಗುತ್ತದೆ. ಪ್ರತಿಯೊಬ್ಬರು ಬದುಕಲು ಬೇಕಾದ ಆಹಾರವನ್ನು ಬೆಳೆಯುವುದು ರೈತರೇ. ಭಾರತ ಈಗಲೂ ಕೂಡ ಕೃಷಿ ಆಧಾರಿತ ಆರ್ಥಿಕತೆ ಇರುವ ದೇಶ. ಆದರೆ, ರೈತನಿಗೆ ಆತನ ಶ್ರಮಕ್ಕೆ ತಕ್ಕಷ್ಟು ಆದಾಯ ಸಿಗುತ್ತಿಲ್ಲದಿರುವುದು ವಾಸ್ತವದ ಸಂಗತಿ. ಅಂತೆಯೇ, ಗ್ರಾಮೀಣ ಭಾಗ ಈಗಲೂ ಕೂಡ ಹಿಂದುಳಿದ ಪ್ರದೇಶವಾಗಿಯೇ ಉಳಿದಿದೆ. ನೆರೆ, ಬರ ಇತ್ಯಾದಿ ಪ್ರಕೃತಿ ವಿಕೋಪಗಳಿಂದ ಬೆಳೆ ನಾಶ ಆಗುತ್ತದೆ. ಮಾರುಕಟ್ಟೆಯಲ್ಲಿ ಬೇಡಿಕೆಯಲ್ಲಿನ ಏರುಪೇರಿನಿಂದ ರೈತನ ಬೆಳೆಗೆ ನ್ಯಾಯಯುತ ಬೆಲೆ ಸಿಗುವುದಿಲ್ಲ. ಹೀಗೆ ಹಲವು ಹಿನ್ನಡೆ, ಸಮಸ್ಯೆಗಳ ನಡುವೆ ರೈತನ ಕೈಂಕರ್ಯ ಮುಂದುವರಿಯುತ್ತಿರುತ್ತದೆ.
ಬಜೆಟ್ 2026: ಬ್ಯಾಂಕಿಂಗ್ನಿಂದ ಹಿಡಿದು ರೈತರವರೆಗೆ ವಿವಿಧ ಕ್ಷೇತ್ರಗಳ ನಿರೀಕ್ಷೆಗಳಿವು
ನವದೆಹಲಿ, ಜನವರಿ 30: ಫೆಬ್ರುವರಿ 1ರಂದು ನಿರ್ಮಲಾ ಸೀತಾರಾಮನ್ ಅವರು 2026-27ರ ಸಾಲಿನ ವರ್ಷಕ್ಕೆ ಬಜೆಟ್ ಮಂಡಿಸುತ್ತಿದ್ದಾರೆ. ಹಲವು ಕ್ಷೇತ್ರಗಳಿಂದ ಈ ಬಜೆಟ್ ಬಗ್ಗೆ ನಿರೀಕ್ಷೆಗಳು ಹಲವಿವೆ. ತೆರಿಗೆ ಪಾವತಿದಾರರು, ಉದ್ಯಮ ವಲಯ, ಹಣಕಾಸು ಮಾರುಕಟ್ಟೆ, ಬ್ಯಾಂಕ್, ಕೃಷಿ, ಎಂಎಸ್ಎಂಇ ಕ್ಷೇತ್ರದವರು ಈ ಬಜೆಟ್ನಿಂದ ಏನೇನು ಅಪೇಕ್ಷಿಸುತ್ತಿದ್ದಾರೆ ಎನ್ನುವ ಒಂದು ಸಂಕ್ಷಿಪ್ತ ನೋಟ ಇಲ್ಲಿದೆ.
- Vijaya Sarathy SN
- Updated on: Jan 30, 2026
- 12:34 pm
ಕೇಂದ್ರ ಬಜೆಟ್ 2026: ಪಿಎಂ ಕಿಸಾನ್ ಹಣ ಎರಡು ಪಟ್ಟು ಹೆಚ್ಚಾಗುತ್ತಾ? ರೈತರ ನಿರೀಕ್ಷೆ ಈ ಬಜೆಟ್ನಲ್ಲಿ ಈಡೇರುತ್ತಾ?
Union Budget 2026, PM Kisan Samman Nidhi Yojana: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿ ನೀಡಲಾಗುತ್ತಿರುವ ಕಂತಿನ ಹಣ ಎರಡು ಪಟ್ಟು ಹೆಚ್ಚಿಸಬಹುದು ಎಂದು ರೈತರು ನಿರೀಕ್ಷೆಯಲ್ಲಿದ್ದಾರೆ. ಸದ್ಯ ಈ ಸ್ಕೀಮ್ ಅಡಿ ವರ್ಷಕ್ಕೆ ಮೂರು ಕಂತುಗಳಲ್ಲಿ ಒಟ್ಟು 6,000 ರೂ ನೀಡಲಾಗುತ್ತಿದೆ. ಒಂದು ಕಂತಿನಲ್ಲಿ ನೀಡಲಾಗುವ 2,000 ರೂ ಅನ್ನು 4,000 ರೂಗೆ ಹೆಚ್ಚಿಸಬಹುದಾ?
- Vijaya Sarathy SN
- Updated on: Jan 29, 2026
- 11:33 am
G-RAM-G: ಜಿ ರಾಮ್ ಜಿ ಕಾಯ್ದೆ- ಮತ್ತಷ್ಟು ಉದ್ಯೋಗ, ಮತ್ತಷ್ಟು ಭದ್ರತೆ
Highlights of G RAM G: ಯುಪಿಎ ಸರ್ಕಾರದ ಅವಧಿಯಲ್ಲಿ ಜಾರಿ ಮಾಡಲಾಗಿದ್ದ ಮಹಾತ್ಮ ಗಾಂಧಿ ನರೇಗಾ ಯೋಜನೆಗೆ ಸರ್ಕಾರ ಹೊಸ ಸ್ವರೂಪ ಕೊಟ್ಟಿದೆ. ಉದ್ಯೋಗ ಖಾತ್ರಿ ದಿನಗಳ ಸಂಖ್ಯೆಯನ್ನು 100ರಿಂದ 125ಕ್ಕೆ ಏರಿಸಿದೆ. ಕೃಷಿ ಸೀಸನ್ಗೆ ಕೆಲಸಗಾರರ ಲಭ್ಯತೆ ಖಚಿತಪಡಿಸಲು 60 ದಿನಗಳ ಕಡ್ಡಾಯ ವಿರಾಮ ಅವಧಿ ಕೊಡಲಾಗಿದೆ. ಜಿ ರಾಮ್ ಜಿ ಯೋಜನೆಯಲ್ಲಿ ಇನ್ನೇನೇನು ಬದಲಾವಣೆಗಳಿವೆ ಎನ್ನುವ ಮಾಹಿತಿ ಇಲ್ಲಿದೆ.
- Vijaya Sarathy SN
- Updated on: Jan 9, 2026
- 5:27 pm
PM Kisan eKYC: ಪಿಎಂ ಕಿಸಾನ್ ಸ್ಕೀಮ್- ರೈತರು ಇಕೆವೈಸಿ ಮಾಡಲು 3 ವಿಧಾನಗಳು
PM Kisan scheme, 3 methods of updating e-KYC: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಲ್ಲಿ 10 ಕೋಟಿಗೂ ಅಧಿಕ ರೈತರು ನೊಂದಾಯಿಸಿಕೊಂಡಿದ್ದಾರೆ. ಪ್ರತಿಯೊಬ್ಬರಿಗೂ ವರ್ಷಕ್ಕೆ 6,000 ರೂ ಸಿಗುತ್ತದೆ. ಆದರೆ, ಫಲಾನುಭವಿ ರೈತರು ಕೆವೈಸಿ ಅಪ್ಡೇಟ್ ಮಾಡದಿದ್ದರೆ ಹಣ ಸಿಗುವುದಿಲ್ಲ. ಇಕೆವೈಸಿ ಅಪ್ಡೇಟ್ ಮಾಡಲು ಮೂರು ದಾರಿ ಅಥವಾ ವಿಧಾನಗಳಿವೆ. ಅದರ ವಿವರ ಈ ಲೇಖನದಲ್ಲಿದೆ...
- Vijaya Sarathy SN
- Updated on: Jan 7, 2026
- 3:30 pm
ಬದಲಾಗುತ್ತಿದೆ ಭಾರತ; 2025ರಲ್ಲಿ ಮಹಾಪರಿವರ್ತನೆ; ಜಿಎಸ್ಟಿಯಿಂದ ಹಿಡಿದು ಜಿ ರಾಮ್ ಜಿವರೆಗೆ ಹಲವು ಆರ್ಥಿಕ ಸುಧಾರಣೆಗಳು
India's 2025 Economic Reforms: 2025ರಲ್ಲಿ ಭಾರತದಲ್ಲಿ ಮೋದಿ ಸರ್ಕಾರ ಹಲವು ಮಹತ್ವದ ಆರ್ಥಿಕ ಸುಧಾರಣೆಗಳನ್ನು ಜಾರಿಗೆ ತಂದಿದೆ. ಜಿಎಸ್ಟಿ 2.0 ಮೂಲಕ ತೆರಿಗೆ ಸ್ಲ್ಯಾಬ್ಗಳ ಕಡಿತ, 12 ಲಕ್ಷ ರೂ. ಆದಾಯ ತೆರಿಗೆ ವಿನಾಯಿತಿ, ಆಧುನಿಕ ಕಾರ್ಮಿಕ ಕಾನೂನುಗಳು, ಮತ್ತು ಪರಮಾಣು-ವಿಮಾ ವಲಯಗಳಲ್ಲಿ ಖಾಸಗಿ/ವಿದೇಶಿ ಹೂಡಿಕೆಗೆ ಅವಕಾಶ ನೀಡಲಾಗಿದೆ. ಈ ಸುಧಾರಣೆಗಳು ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸಿ, ನಿಯಮಗಳನ್ನು ಸರಳೀಕರಿಸಿ, ನಾಗರಿಕರ ಆರ್ಥಿಕ ಸ್ಥಿತಿಯನ್ನು ಸುಧಾರಿಸುವ ಗುರಿ ಹೊಂದಿವೆ.
- Vijaya Sarathy SN
- Updated on: Dec 29, 2025
- 10:12 pm
ಅಮೆರಿಕದೊಂದಿಗೆ ಟ್ರೇಡ್ ಡೀಲ್; ಅಂತಿಮ ಪ್ರಸ್ತಾಪ ಸಲ್ಲಿಸಿದ ಭಾರತ; ಕೃಷಿ ತಂಟೆ ಬೇಡ, ಟ್ಯಾರಿಫ್ ನಿಲ್ಲಿಸಿ ಎಂಬುದು ಭಾರತದ ಬೇಡಿಕೆ
India tables final trade proposal to US: ಭಾರತ ಮತ್ತು ಅಮೆರಿಕ ನಡುವೆ ವ್ಯಾಪಾರ ಒಪ್ಪಂದ ತಾರ್ಕಿಕ ಅಂತ್ಯ ಕಾಣಬಹುದು. ಭಾರತ ತನ್ನ ಅಂತಿಮ ಪ್ರಸ್ತಾಪವನ್ನು ಮುಂದಿಟ್ಟಿದೆ. ಟ್ಯಾರಿಫ್ ಅನ್ನು ಶೇ. 15ಕ್ಕೆ ಇಳಿಸಬೇಕು, ಕೃಷಿ ಕ್ಷೇತ್ರವನ್ನು ಒಪ್ಪಂದದಿಂದ ಹೊರಗಿಡಬೇಕು ಎಂಬುದು ಭಾರತ ಮಾಡಿರುವ ಎರಡು ಪ್ರಮುಖ ಬೇಡಿಕೆಗಳು. ಅಮೆರಿಕವೇನಾದರೂ ಸಕಾರಾತ್ಮಕವಾಗಿ ಸ್ಪಂದಿಸಿದರೆ ಮುಂದಿನ ವರ್ಷವೇ ಒಪ್ಪಂದಕ್ಕೆ ಸಹಿಬೀಳುವ ನಿರೀಕ್ಷೆ ಇದೆ.
- Vijaya Sarathy SN
- Updated on: Dec 26, 2025
- 6:18 pm
ಸಿಮ್ ವೆರಿಫಿಕೇಶನ್ನಿಂದ ಹಿಡಿದು ಕ್ರೆಡಿಟ್ ಸ್ಕೋರ್ವರೆಗೆ ಜನವರಿ 1ರಿಂದ ಆಗಲಿರುವ ಪ್ರಮುಖ ಹಣಕಾಸು ನಿಯಮ ಬದಲಾವಣೆಗಳು
Financial rules change from 2026 January: ಡಿಸೆಂಬರ್ ಮುಗಿದು ಜನವರಿ ಬರುತ್ತಿದೆ. 2025 ಮುಗಿದು 2026 ಬರುತ್ತಿದೆ. ಕೆಲ ಹೊಸ ಹಣಕಾಸು ನಿಯಮಗಳು ಜಾರಿಗೆ ಬರಲಿವೆ. ಬ್ಯಾಂಕುಗಳ ಬಡ್ಡಿದರ ಕಡಿಮೆ ಆಗಲಿದೆ. ಕ್ರೆಡಿಟ್ ಸ್ಕೋರ್ ಬೇಗ ಅಪ್ಡೇಟ್ ಆಗಲಿದೆ. ವಾಟ್ಸಾಪ್ನಂತಹ ಮೆಸೇಜಿಂಗ್ ಆ್ಯಪ್ಗಳಿಗೆ ಸರ್ಕಾರ ಬಿಗಿ ನಿಯಮ ಹಾಕಿದೆ. ಮಕ್ಕಳ ಸೋಷಿಯಲ್ ಮೀಡಿಯಾ ಬಳಕೆ ಮೇಲೆ ನಿರ್ಬಂಧ ಹಾಗೂ ಇನ್ನೂ ಕೆಲ ಪ್ರಮುಖ ಬದಲಾವಣೆಗಳನ್ನು ನಿರೀಕ್ಷಿಸಬಹುದು.
- Vijaya Sarathy SN
- Updated on: Dec 23, 2025
- 12:18 pm
ನೈಸರ್ಗಿಕ ಕೃಷಿಗಾರಿಕೆ ಭಾರತದ ಕೃಷಿ ಕ್ಷೇತ್ರದ ಭವಿಷ್ಯದ ಹಾದಿ: ನರೇಂದ್ರ ಮೋದಿ
PM Narendra Modi's blog post on natural farming: ಭಾರತೀಯ ರೈತರು ನೈಸರ್ಗಿಕ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ತಮ್ಮ ಲಿಂಕ್ಡ್ನ್ ಪೋಸ್ಟ್ನಲ್ಲಿ ಬ್ಲಾಗ್ ಬರೆದಿರುವ ಮೋದಿ, ರಾಸಾಯನಿಕ ಬಳಕೆ ನಿಲ್ಲಿಸಿ, ಸಂಪೂರ್ಣ ದೇಸೀಯವಾದ ಕೃಷಿ ವಿಧಾನಗಳನ್ನು ಅನುಸರಿಸಬೇಕೆಂದು ಸಲಹೆ ನೀಡಿದ್ದಾರೆ. ಪಂಚಗವ್ಯ, ಜೀವಾಮೃತ, ಬೀಜಾಮೃತ, ಮಲ್ಚಿಂಗ್ ಮೂಲಕ ಮಣ್ಣಿನ ಫಲವತ್ತತೆ ಹೆಚ್ಚಿಸಬಹುದು ಎಂದಿದ್ದಾರೆ.
- Vijaya Sarathy SN
- Updated on: Dec 3, 2025
- 4:21 pm
PM Kisan: ಪಿಎಂ ಕಿಸಾನ್ ಹಣ ಸಿಕ್ಕಿಲ್ಲವಾ? ಈ ಕಾರಣಗಳಿದ್ದೀತು ಗಮನಿಸಿ
Possible reasons for many farmers not getting PM Kisan money: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ 21ನೇ ಕಂತಿನ ಹಣ ನ. 19ರಂದು ಬಿಡುಗಡೆ ಆಗಿದೆ. ಯೋಜನೆಗೆ ನೊಂದಾಯಿಸಿದ್ದರೂ ಹಲವರಿಗೆ ಕಂತಿನ ಹಣ ಬಂದಿಲ್ಲ. ಇಕೆವೈಸಿ ಅಪ್ಡೇಟ್ ಆಗದೇ ಇರುವುದೂ ಸೇರಿ ಹಲವು ಕಾರಣಗಳಿಗೆ ಹಣ ಬಿಡುಗಡೆ ಆಗದೇ ಇರಬಹುದು.
- Vijaya Sarathy SN
- Updated on: Nov 21, 2025
- 8:26 pm
PM Fasal Bima Yojana: ಬೆಳೆ ವಿಮೆ ವ್ಯಾಪ್ತಿ ಹೆಚ್ಚಳ; ಅಪಾಯ ಮೂಲಗಳ ಪಟ್ಟಿಗೆ ಕಾಡುಪ್ರಾಣಿಗಳೂ ಸೇರ್ಪಡೆ
New modalities for PM Fasal Bima Yojana: ಮುಂಬರುವ ಬೇಸಿಗೆ ಹಂಗಾಮಿನಿಂದ ಪಿಎಂ ಫಸಲ್ ಬಿಮಾ ಯೋಜನೆಯ ನಿಯಮಗಳಲ್ಲಿ ಕೆಲ ಬದಲಾವಣೆಗಳನ್ನು ತರಲಾಗುತ್ತಿದೆ. ಬೆಳೆ ಹಾನಿಗೆ ಕಾರಣವಾಗುವ ಸ್ಥಳೀಕೃತ ಅಪಾಯಗಳ ಪಟ್ಟಿಗೆ ಕಾಡುಪ್ರಾಣಿಗಳ ದಾಳಿಯನ್ನೂ ಸೇರಿಸಲಾಗಿದೆ. ಬೇಸಿಗೆ ಬೆಳೆಗಳಿಗೆ ಇನ್ಷೂರೆನ್ಸ್ ಪ್ರೀಮಿಯಮ್ ಶೇ. 2, ಹಿಂಗಾರು ಬೆಳೆಗಳಿಗೆ ಶೇ. 1.5 ಪ್ರೀಮಿಯಮ್ ಇದೆ.
- Vijaya Sarathy SN
- Updated on: Nov 19, 2025
- 8:25 pm
PM Kisan 21st Installment: ಪಿಎಂ ಕಿಸಾನ್ ಯೋಜನೆ; 9 ಕೋಟಿ ರೈತರಿಗೆ 2,000 ರೂಗಳ 21ನೇ ಕಂತಿನ ಹಣ ಇಂದು ಬಿಡುಗಡೆ
ಪಿಎಂ ಕಿಸಾನ್ ಯೋಜನೆ: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ 21ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಅವರು ನ. 19, ಬುಧವಾರ ಬಿಡುಗಡೆ ಮಾಡುತ್ತಿದ್ದಾರೆ. ಆಂಧ್ರ ಮತ್ತು ತಮಿಳುನಾಡು ರಾಜ್ಯಗಳಿಗೆ ಭೇಟಿ ನೀಡುತ್ತಿರುವ ನರೇಂದ್ರ ಮೋದಿ ಮಧ್ಯಾಹ್ನ ಕೊಯಮತ್ತೂರಿಗೆ ತೆರಳುತ್ತಿದ್ದಾರೆ. ಕೊಯಮತ್ತೂರಿನಲ್ಲಿ ನೈಸರ್ಗಿಕ ಕೃಷಿ ಶೃಂಗಸಭೆಗೆ ಚಾಲನೆ ನೀಡಿದ ಬಳಿಕ ಪಿಎಂ ಕಿಸಾನ್ನ ಹೊಸ ಕಂತಿನ ಹಣದ ಬಿಡುಗಡೆ ಮಾಡುತ್ತಾರೆ.
- Vijaya Sarathy SN
- Updated on: Nov 19, 2025
- 7:43 am
PM Kisan 21st Installment: ಪಿಎಂ ಕಿಸಾನ್ ಹೊಸ ಕಂತಿನ ಹಣ ಬಿಡುಗಡೆ ಸದ್ಯದಲ್ಲೇ
PM Kisan scheme 21st Installment Date and Time: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 21ನೇ ಕಂತಿನ ಹಣ ನ. 19, ಬುಧವಾರ ಬಿಡುಗಡೆ ಆಗಲಿದೆ. ಇದಕ್ಕೆ ಮುನ್ನ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಅಪ್ಡೇಟ್ ಆಗಿರುವುದನ್ನು ಖಚಿತಪಡಿಸಿಕೊಳ್ಳಿ. ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ಪರಿಶೀಲಿಸಿ.
- Vijaya Sarathy SN
- Updated on: Nov 18, 2025
- 3:46 pm