AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Farmer

Farmer

ರೈತರನ್ನು ಈ ದೇಶದಲ್ಲಿ ಅನ್ನದಾತರೆಂದೇ ಗೌರವಿಸಲಾಗುತ್ತದೆ. ಪ್ರತಿಯೊಬ್ಬರು ಬದುಕಲು ಬೇಕಾದ ಆಹಾರವನ್ನು ಬೆಳೆಯುವುದು ರೈತರೇ. ಭಾರತ ಈಗಲೂ ಕೂಡ ಕೃಷಿ ಆಧಾರಿತ ಆರ್ಥಿಕತೆ ಇರುವ ದೇಶ. ಆದರೆ, ರೈತನಿಗೆ ಆತನ ಶ್ರಮಕ್ಕೆ ತಕ್ಕಷ್ಟು ಆದಾಯ ಸಿಗುತ್ತಿಲ್ಲದಿರುವುದು ವಾಸ್ತವದ ಸಂಗತಿ. ಅಂತೆಯೇ, ಗ್ರಾಮೀಣ ಭಾಗ ಈಗಲೂ ಕೂಡ ಹಿಂದುಳಿದ ಪ್ರದೇಶವಾಗಿಯೇ ಉಳಿದಿದೆ. ನೆರೆ, ಬರ ಇತ್ಯಾದಿ ಪ್ರಕೃತಿ ವಿಕೋಪಗಳಿಂದ ಬೆಳೆ ನಾಶ ಆಗುತ್ತದೆ. ಮಾರುಕಟ್ಟೆಯಲ್ಲಿ ಬೇಡಿಕೆಯಲ್ಲಿನ ಏರುಪೇರಿನಿಂದ ರೈತನ ಬೆಳೆಗೆ ನ್ಯಾಯಯುತ ಬೆಲೆ ಸಿಗುವುದಿಲ್ಲ. ಹೀಗೆ ಹಲವು ಹಿನ್ನಡೆ, ಸಮಸ್ಯೆಗಳ ನಡುವೆ ರೈತನ ಕೈಂಕರ್ಯ ಮುಂದುವರಿಯುತ್ತಿರುತ್ತದೆ.

ಇನ್ನೂ ಹೆಚ್ಚು ಓದಿ

ಪಿಎಂ ಕೃಷಿ ಸಿಂಚಯಿ ಯೋಜನೆ: ನೀರಾವರಿ ಸಿಸ್ಟಮ್ಸ್ ಅಳವಡಿಸಲು ಭರ್ಜರಿ ರಿಯಾಯಿತಿ; ಇಲ್ಲಿದೆ ಸಬ್ಸಿಡಿ ಮತ್ತಿತರ ಸೌಲಭ್ಯಗಳ ವಿವರ

Pradhan Mantri Krishi Sinchayee Yojana details: ಪ್ರಧಾನ ಮಂತ್ರಿ ಕೃಷಿ ಸಿಂಚಯಿ ಯೋಜನೆ ರೈತರ ಜಮೀನುಗಳಿಗೆ ಡ್ರಿಪ್ ಇರಿಗೇಶನ್ ಇತ್ಯಾದಿ ನೀರಾವರಿ ವ್ಯವಸ್ಥೆ ಅಳವಡಿಸಲು ನೆರವಾಗುತ್ತದೆ. ಹನಿ ನೀರಾವರಿ, ಸ್ಪ್ರಿಂಕ್ಲರ್, ಕೃಷಿ ಹೊಂಡ, ಸೋಲಾರ್ ಪಂಪ್​ಸೆಟ್​ಗಳಿಗೆ ಸರ್ಕಾರ ಸಾಕಷ್ಟು ಸಬ್ಸಿಡಿ ನೀಡುತ್ತದೆ. ದೊಡ್ಡ ರೈತರಿಗೆ ಶೇ. 45ರಷ್ಟು ಸಬ್ಸಿಡಿ ಸಿಗುತ್ತದೆ. ಹಿಂದುಳಿದ ವರ್ಗದ ರೈತರಿಗೆ ಶೇ. 90ಕ್ಕಿಂತ ಹೆಚ್ಚು ಸಬ್ಸಿಡಿ ಸಿಗುತ್ತದೆ.

ವಿಕಸಿತ ಭಾರತ ಉದ್ಯೋಗ ಖಾತ್ರಿ ಯೋಜನೆ ವಿಬಿ-ಜಿ-ರಾಮ್-ಜಿಗೆ ನೊಂದಣಿ ಹೇಗೆ? ಕೆಲಸ ಸಿಗದಿದ್ದರೆ ಎಷ್ಟು ಭತ್ಯೆ?

VB G-RAM-G rural employment guarantee scheme full details: ಜುಲೈ 1ರಿಂದ ವಿಕಸಿತ ಭಾರತ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಾದ ವಿಬಿ-ಜಿ-ರಾಮ್-ಜಿ ಜಾರಿಗೆ ಬಂದಿದೆ. ಗ್ರಾಮೀಣ ಭಾಗದ ಒಂದು ಕುಟುಂಬಕ್ಕೆ ಒಂದು ವರ್ಷದಲ್ಲಿ ಕನಿಷ್ಠ 125 ದಿನಗಳ ಕೌಶಲ್ಯರಹಿತ ಕೂಲಿ ಕೆಲಸಗಳನ್ನು ಇದು ಖಾತ್ರಿಪಡಿಸುತ್ತದೆ. ಒಂದು ಕುಟುಂಬವು ಕೃಷಿಗಾರಿಕೆಯ ಜೊತೆ ಜೊತೆಗೆ ಒಂದು ವರ್ಷದಲ್ಲಿ 45,000 ರೂನಿಂದ 60,000 ರೂವರೆಗೆ ಹೆಚ್ಚುವರಿ ಸಂಪಾದಿಸಬಹುದು.

ಹೊಸ ಉದ್ಯೋಗ ಖಾತ್ರಿ ಸ್ಕೀಮ್; ಮನ್ರೇಗಾ ಬದಲು ವಿ ಬಿ ಜಿ ರಾಮ್ ಜಿ ಇಂದಿನಿಂದ ಅಧಿಕೃತ ಜಾರಿ

VB G RAM G Replaces MGNREGA Scheme: ವಿಕಸಿತ ಭಾರತ ಉದ್ಯೋಗ ಖಾತ್ರಿ ಯೋಜನೆಯಾದ ವಿಬಿ ಜಿ ರಾಮ್ ಜಿ ಇಂದಿನಿಂದ (ಜುಲೈ 1) ಜಾರಿಗೆ ಬಂದಿದೆ. ಇದರೊಂದಿಗೆ 20 ವರ್ಷಗಳಿಂದ ಅಸ್ತಿತ್ವದಲ್ಲಿದ್ದ ಮನ್ರೇಗಾ ಯೋಜನೆ ಮುಕ್ತಾಯಗೊಂಡಿದೆ. ಅದರ ಸುಧಾರಿತ ರೂಪವಾದ ಜಿ ರಾಮ್ ಜಿ ಯೋಜನೆಯಲ್ಲಿ ಕೆಲ ಪ್ರಮುಖ ಬದಲಾವಣೆಗಳಿವೆ.

ಪಿಎಂ ಕಿಸಾನ್ ಯೋಜನೆ, ನೊಂದಾಯಿಸಿದ್ದರೂ 23ನೇ ಕಂತಿನ ಬಂದಿಲ್ಲವಾ? ಇವಿರಬಹುದು ಕಾರಣಗಳು

PM Kisan Samman Nidhi Yojana 23rd installment: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ 23ನೇ ಕಂತಿನ ಹಣವನ್ನು ಕೇಂದ್ರ ಸರ್ಕಾರ ಜೂನ್ 20ರಂದು ಬಿಡುಗಡೆ ಮಾಡಿದೆ. 9.44 ಕೋಟಿ ರೈತರಿಗೆ ತಲಾ 2,000 ರೂ ಹಣ ಕ್ರೆಡಿಟ್ ಆಗಿದೆ. ಈ ಯೋಜನೆಯಲ್ಲಿ ವರ್ಷಕ್ಕೆ ಮೂರು ಕಂತುಗಳಿಂದ ಒಟ್ಟು 6,000 ರೂ ಹಣವು ರೈತರಿಗೆ ಸಿಗುತ್ತದೆ. ಯೋಜನೆಗೆ ನೊಂದಾಯಿಸಿಯೂ ಕೆಲವರಿಗೆ ಬೇರೆ ಬೇರೆ ಕಾರಣಕ್ಕೆ ಹಣ ಬಂದಿಲ್ಲದೇ ಇರಬಹುದು.

ಪಿಎಂ ಕಿಸಾನ್ 23ನೇ ಕಂತು ಬಿಡುಗಡೆ ದಿನಾಂಕ ಪ್ರಕಟ; ಇನ್ನೆರಡು ದಿನದಲ್ಲಿ ರೈತರ ಖಾತೆಗೆ ಬರಲಿದೆ 2,000 ರೂ

PM Kisan scheme 23rd installmentrelease date announced: ಪ್ರಧಾನಮಂತ್ರಿ ಕಿಸಾನ್ ಸ್ಕೀಮ್​ನಲ್ಲಿ 23ನೇ ಕಂತಿನ ಹಣ ಜೂನ್ 20, ಶನಿವಾರದಂದು ಬಿಡುಗಡೆ ಆಗಲಿದೆ. ಯೋಜನೆಯ ಅಧಿಕೃತ ಸೋಷಿಯಲ್ ಮಿಡಿಯಾ ಅಕೌಂಟ್​ನಿಂದ ಈ ಮಾಹಿತಿ ಪ್ರಕಟವಾಗಿದೆ. ಮಾರ್ಚ್ ತಿಂಗಳಲ್ಲಿ 22ನೇ ಕಂತಿನ ಹಣ ಬಿಡುಗಡೆ ಆಗಿತ್ತು. ಇಲ್ಲಿಯವರೆಗೆ ಈ ಯೋಜನೆಯಲ್ಲಿ ಸರ್ಕಾರವು ರೈತರಿಗೆ 4.25 ಲಕ್ಷ ಕೋಟಿ ರೂಗೂ ಅಧಿಕ ಹಣ ಬಿಡುಗಡೆ ಮಾಡಿದೆ.

ಮುಂಗಾರು ಬಿತ್ತನೆಗೆ ಮುನ್ನ ರೈತರಿಗೆ ಖುಷಿ ಸುದ್ದಿ, ಯೂರಿಯಾ ಬೆಲೆ ಅರ್ಧಕರ್ಧ ಕುಸಿತ

Urea Import Prices Crash: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಯೂರಿಯಾ ಆಮದು ಬೆಲೆ ಗಣನೀಯವಾಗಿ ಕುಸಿದಿದೆ. ಇದು ಭಾರತದ ರೈತರಿಗೆ ಮತ್ತು ಕೇಂದ್ರ ಸರ್ಕಾರಕ್ಕೆ ದೊಡ್ಡ ನಿರಾಳತೆಯನ್ನು ತಂದಿದೆ. ಚೀನಾ ರಫ್ತು ನಿರ್ಬಂಧಗಳನ್ನು ಸಡಿಲಗೊಳಿಸಿರುವುದು ಬೆಲೆ ಇಳಿಕೆಗೆ ಕಾರಣ. ಮುಂಗಾರು ಹಂಗಾಮಿಗೆ ಅಗ್ಗದ ಯೂರಿಯಾ ಲಭ್ಯವಾಗಲಿದ್ದು, ರೈತರಿಗೆ ನೆರವಾಗಲಿದೆ. ಜೊತೆಗೆ, ಸರ್ಕಾರದ ರಸಗೊಬ್ಬರ ಸಬ್ಸಿಡಿ ಹೊರೆಯೂ ಕಡಿಮೆಯಾಗಲಿದೆ. ಇದು ಕೃಷಿ ಕ್ಷೇತ್ರಕ್ಕೆ ಸಮಾಧಾನಕರ ಬೆಳವಣಿಗೆ.

PM Kisan Scheme: ಪಿಎಂ ಕಿಸಾನ್ 23ನೇ ಕಂತಿನ ಹಣ ಜೂನ್​ನಲ್ಲಿ ಬರುತ್ತಾ? ಈ ಕಾರ್ಯ ಮಾಡದವರಿಗೆ ಸಿಕ್ಕೋದಿಲ್ಲಾ ಹಣ

PM Kisan Scheme, 23rd installment release date: ಪ್ರಧಾನಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ 9 ಕೋಟಿಗೂ ಅಧಿಕ ರೈತರು 23ನೇ ಕಂತಿನ ಹಣದ ಬಿಡುಗಡೆಯ ನಿರೀಕ್ಷೆಯಲ್ಲಿದ್ದಾರೆ. ಮಾರ್ಚ್ ತಿಂಗಳಲ್ಲಿ 22ನೇ ಕಂತಿನ ಹಣ ಬಿಡುಗಡೆ ಆಗಿತ್ತು. 23ನೆಯದು ಜೂನ್​ನಲ್ಲಿ ಆಗುವ ಸಂಭವ ಇದೆ ಎನ್ನಲಾಗುತ್ತಿದೆ. ಇಕೆವೈಸಿ ಅಪ್​ಡೇಟ್ ಮಾಡದ ಫಲಾನುಭವಿಗಳಿಗೆ 23ನೇ ಕಂತಿನ ಹಣ ಸಿಕ್ಕದೇ ಹೋಗಬಹುದು.

ಪಿಎಂ ಕಿಸಾನ್ ಯೋಜನೆ; ನೊಂದಣಿ, ಆದಾಯ, ಫಲಾನುಭವಿಗಳ ಸಂಖ್ಯೆ ಇತ್ಯಾದಿ ಮಾಹಿತಿ

PM Kisan Samman Nidhi Yojana details: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ಇಲ್ಲಿಯವರೆಗೆ 22 ಕಂತಿನ ಹಣ ಬಿಡುಗಡೆ ಆಗಿದೆ. 23ನೇ ಕಂತಿಗಾಗಿ ರೈತರು ಕಾಯುತ್ತಿದ್ದಾರೆ. ಮುಂದಿನ ತಿಂಗಳು ಕಂತಿನ ಹಣ ಬಿಡುಗಡೆ ಆಗುವ ನಿರೀಕ್ಷೆ ಇದೆ. 2018-19ರಲ್ಲಿ ಶುರುವಾದ ಈ ಯೋಜನೆಯಲ್ಲಿ ಸದ್ಯ ಒಂಬತ್ತೂವರೆ ಕೋಟಿ ಸಂಖ್ಯೆಯಲ್ಲಿ ಫಲಾನುಭವಿಗಳಿದ್ದಾರೆ.

ಪಿಎಂ ಕಿಸಾನ್ ಯೋಜನೆಗೆ ನೊಂದಾಯಿಸಿಕೊಳ್ಳುವುದು ಹೇಗೆ? ಇಲ್ಲಿದೆ ಸ್ಕೀಮ್​ನ ಪ್ರಮುಖ ಮಾಹಿತಿ

PM Kisan Samman Nidhi Yojana: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ರೈತರಿಗೆ ವರ್ಷಕ್ಕೆ ಮೂರು ಕಂತುಗಳಲ್ಲಿ 6,000 ರೂಗಳನ್ನು ಕೇಂದ್ರ ಸರ್ಕಾರ ನೀಡುತ್ತದೆ. ಸ್ವಂತ ಕೃಷಿಭೂಮಿ ಹೊಂದಿರುವ ರೈತರು ಈ ಯೋಜನೆಗೆ ಅರ್ಹರು. ತೆರಿಗೆ ಪಾವತಿದಾರರು, ವೃತ್ತಿಪರರು, ಸರ್ಕಾರಿ ನೌಕರರು ಮೊದಲಾದ ಇತರ ವೃತ್ತಿಯವರು ಕೃಷಿಭೂಮಿ ಇದ್ದರೂ ಕೂಡ ಯೋಜನೆಗೆ ಅರ್ಹರಿರುವುದಿಲ್ಲ.

ಗಲ್ಫ್ ಬಿಕ್ಕಟ್ಟಿನಲ್ಲೂ ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯ ಆಗಲು ಬಿಡುತ್ತಿಲ್ಲ: ಸರ್ಕಾರದಿಂದ ಸ್ಪಷ್ಟನೆ

Taking measures to ensure availability of fertilizers, says govt: ಗಲ್ಫ್ ರಾಷ್ಟ್ರಗಳಿಂದ ಯೂರಿಯಾ ಪೂರೈಕೆಯಾಗುವುದು ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಭಾರತದಲ್ಲಿ ರಸಗೊಬ್ಬರ ಲಭ್ಯತೆಗೆ ಧಕ್ಕೆಯಾಗಬಹುದು ಎಂದು ಕೃಷಿ ಕ್ಷೇತ್ರದಲ್ಲಿ ಆತಂಕದ ಸ್ಥಿತಿ ಏರ್ಪಟ್ಟಿದೆ. ಆದರೆ, ಯೂರಿಯಾ ದಾಸ್ತಾನು ಸಾಕಷ್ಟಿದೆ. ಯೂರಿಯಾ ಉತ್ಪಾದನೆ ಹೆಚ್ಚಿಸಲು ಮತ್ತು ಬೇರೆ ಬೇರೆ ಪ್ರದೇಶಗಳಲ್ಲಿ ಯೂರಿಯಾ ಆಮದು ಮಾಡಿಕೊಳ್ಳಲು ಪ್ರಯತ್ನಿಸುತ್ತಿರುವುದಾಗಿ ಸರ್ಕಾರ ಹೇಳಿದೆ.

ಪಿಎಂ ಕಿಸಾನ್ ಸ್ಕೀಮ್; ಫಲಾನುಭವಿಗಳ ಸಂಖ್ಯೆ 4 ಲಕ್ಷದಷ್ಟು ಕಡಿಮೆ; ನಿಮಗೆ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?

PM Kisan scheme, 22nd installment released: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ 22ನೇ ಕಂತಿನ ಹಣ ಬಿಡುಗಡೆ ಆಗಿದೆ. 9.32 ಕೋಟಿ ರೈತರಿಗೆ ಒಟ್ಟು 18,640 ಕೋಟಿ ರೂ ಹಣ ಸಿಕ್ಕಿದೆ. ಕಳೆದ ಬಾರಿಗಿಂತ ಈ ಸಲ ಫಲಾನುಭವಿಗಳ ಸಂಖ್ಯೆಯಲ್ಲಿ 3.8 ಲಕ್ಷದಷ್ಟು ಕಡಿಮೆ ಆಗಿದೆ. ನೀವು ಯೋಜನೆಗೆ ನೊಂದಾಯಿಸಿದ್ದೂ ಹಣ ಬಂದಿಲ್ಲವೆಂದರೆ, ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ಪರಿಶೀಲಿಸಿ.

ಪಿಎಂ ಕಿಸಾನ್ 22ನೇ ಕಂತಿನ ಹಣ ಇಂದು ಬಿಡುಗಡೆ; ಈ ರೀತಿಯ ಫಲಾನುಭವಿಗಳಿಗಿರೋದಿಲ್ಲ ಯೋಜನೆ ಭಾಗ್ಯ

PM Kisan scheme 22nd installment amount release on 2026 March 13th: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 22ನೇ ಕಂತಿನ ಹಣವನ್ನು ಪಿಎಂ ಮೋದಿ ಇಂದು ಮಾ. 13ರಂದು ಗುವಾಹಟಿಯಲ್ಲಿ ಬಿಡಗಡೆ ಮಾಡುತ್ತಾರೆ. ಸ್ವಂತ ಕೃಷಿ ಜಮೀನು ಹೊಂದಿರುವ ರೈತರಿಗೆ ವ್ಯವಸಾಯಕ್ಕೆ ನೆರವಾಗಲು ಸರ್ಕಾರ ವರ್ಷಕ್ಕೆ ಮೂರು ಕಂತುಗಳಲ್ಲಿ 6,000 ರೂ ನೀಡುವ ಯೋಜನೆ ಇದು. ಇಲ್ಲಿಯವರೆಗೆ 21 ಕಂತುಗಳನ್ನು ನೀಡಲಾಗಿದೆ. ಈಗ 22ನೇ ಕಂತಿನ ಹಣ ಸಿಗುತ್ತಿದೆ.

ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು