AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Farmer

Farmer

ರೈತರನ್ನು ಈ ದೇಶದಲ್ಲಿ ಅನ್ನದಾತರೆಂದೇ ಗೌರವಿಸಲಾಗುತ್ತದೆ. ಪ್ರತಿಯೊಬ್ಬರು ಬದುಕಲು ಬೇಕಾದ ಆಹಾರವನ್ನು ಬೆಳೆಯುವುದು ರೈತರೇ. ಭಾರತ ಈಗಲೂ ಕೂಡ ಕೃಷಿ ಆಧಾರಿತ ಆರ್ಥಿಕತೆ ಇರುವ ದೇಶ. ಆದರೆ, ರೈತನಿಗೆ ಆತನ ಶ್ರಮಕ್ಕೆ ತಕ್ಕಷ್ಟು ಆದಾಯ ಸಿಗುತ್ತಿಲ್ಲದಿರುವುದು ವಾಸ್ತವದ ಸಂಗತಿ. ಅಂತೆಯೇ, ಗ್ರಾಮೀಣ ಭಾಗ ಈಗಲೂ ಕೂಡ ಹಿಂದುಳಿದ ಪ್ರದೇಶವಾಗಿಯೇ ಉಳಿದಿದೆ. ನೆರೆ, ಬರ ಇತ್ಯಾದಿ ಪ್ರಕೃತಿ ವಿಕೋಪಗಳಿಂದ ಬೆಳೆ ನಾಶ ಆಗುತ್ತದೆ. ಮಾರುಕಟ್ಟೆಯಲ್ಲಿ ಬೇಡಿಕೆಯಲ್ಲಿನ ಏರುಪೇರಿನಿಂದ ರೈತನ ಬೆಳೆಗೆ ನ್ಯಾಯಯುತ ಬೆಲೆ ಸಿಗುವುದಿಲ್ಲ. ಹೀಗೆ ಹಲವು ಹಿನ್ನಡೆ, ಸಮಸ್ಯೆಗಳ ನಡುವೆ ರೈತನ ಕೈಂಕರ್ಯ ಮುಂದುವರಿಯುತ್ತಿರುತ್ತದೆ.

ಇನ್ನೂ ಹೆಚ್ಚು ಓದಿ

PM Kisan Scheme: ಪಿಎಂ ಕಿಸಾನ್ 23ನೇ ಕಂತಿನ ಹಣ ಜೂನ್​ನಲ್ಲಿ ಬರುತ್ತಾ? ಈ ಕಾರ್ಯ ಮಾಡದವರಿಗೆ ಸಿಕ್ಕೋದಿಲ್ಲಾ ಹಣ

PM Kisan Scheme, 23rd installment release date: ಪ್ರಧಾನಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ 9 ಕೋಟಿಗೂ ಅಧಿಕ ರೈತರು 23ನೇ ಕಂತಿನ ಹಣದ ಬಿಡುಗಡೆಯ ನಿರೀಕ್ಷೆಯಲ್ಲಿದ್ದಾರೆ. ಮಾರ್ಚ್ ತಿಂಗಳಲ್ಲಿ 22ನೇ ಕಂತಿನ ಹಣ ಬಿಡುಗಡೆ ಆಗಿತ್ತು. 23ನೆಯದು ಜೂನ್​ನಲ್ಲಿ ಆಗುವ ಸಂಭವ ಇದೆ ಎನ್ನಲಾಗುತ್ತಿದೆ. ಇಕೆವೈಸಿ ಅಪ್​ಡೇಟ್ ಮಾಡದ ಫಲಾನುಭವಿಗಳಿಗೆ 23ನೇ ಕಂತಿನ ಹಣ ಸಿಕ್ಕದೇ ಹೋಗಬಹುದು.

ಪಿಎಂ ಕಿಸಾನ್ ಯೋಜನೆ; ನೊಂದಣಿ, ಆದಾಯ, ಫಲಾನುಭವಿಗಳ ಸಂಖ್ಯೆ ಇತ್ಯಾದಿ ಮಾಹಿತಿ

PM Kisan Samman Nidhi Yojana details: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ಇಲ್ಲಿಯವರೆಗೆ 22 ಕಂತಿನ ಹಣ ಬಿಡುಗಡೆ ಆಗಿದೆ. 23ನೇ ಕಂತಿಗಾಗಿ ರೈತರು ಕಾಯುತ್ತಿದ್ದಾರೆ. ಮುಂದಿನ ತಿಂಗಳು ಕಂತಿನ ಹಣ ಬಿಡುಗಡೆ ಆಗುವ ನಿರೀಕ್ಷೆ ಇದೆ. 2018-19ರಲ್ಲಿ ಶುರುವಾದ ಈ ಯೋಜನೆಯಲ್ಲಿ ಸದ್ಯ ಒಂಬತ್ತೂವರೆ ಕೋಟಿ ಸಂಖ್ಯೆಯಲ್ಲಿ ಫಲಾನುಭವಿಗಳಿದ್ದಾರೆ.

ಪಿಎಂ ಕಿಸಾನ್ ಯೋಜನೆಗೆ ನೊಂದಾಯಿಸಿಕೊಳ್ಳುವುದು ಹೇಗೆ? ಇಲ್ಲಿದೆ ಸ್ಕೀಮ್​ನ ಪ್ರಮುಖ ಮಾಹಿತಿ

PM Kisan Samman Nidhi Yojana: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ರೈತರಿಗೆ ವರ್ಷಕ್ಕೆ ಮೂರು ಕಂತುಗಳಲ್ಲಿ 6,000 ರೂಗಳನ್ನು ಕೇಂದ್ರ ಸರ್ಕಾರ ನೀಡುತ್ತದೆ. ಸ್ವಂತ ಕೃಷಿಭೂಮಿ ಹೊಂದಿರುವ ರೈತರು ಈ ಯೋಜನೆಗೆ ಅರ್ಹರು. ತೆರಿಗೆ ಪಾವತಿದಾರರು, ವೃತ್ತಿಪರರು, ಸರ್ಕಾರಿ ನೌಕರರು ಮೊದಲಾದ ಇತರ ವೃತ್ತಿಯವರು ಕೃಷಿಭೂಮಿ ಇದ್ದರೂ ಕೂಡ ಯೋಜನೆಗೆ ಅರ್ಹರಿರುವುದಿಲ್ಲ.

ಗಲ್ಫ್ ಬಿಕ್ಕಟ್ಟಿನಲ್ಲೂ ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯ ಆಗಲು ಬಿಡುತ್ತಿಲ್ಲ: ಸರ್ಕಾರದಿಂದ ಸ್ಪಷ್ಟನೆ

Taking measures to ensure availability of fertilizers, says govt: ಗಲ್ಫ್ ರಾಷ್ಟ್ರಗಳಿಂದ ಯೂರಿಯಾ ಪೂರೈಕೆಯಾಗುವುದು ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಭಾರತದಲ್ಲಿ ರಸಗೊಬ್ಬರ ಲಭ್ಯತೆಗೆ ಧಕ್ಕೆಯಾಗಬಹುದು ಎಂದು ಕೃಷಿ ಕ್ಷೇತ್ರದಲ್ಲಿ ಆತಂಕದ ಸ್ಥಿತಿ ಏರ್ಪಟ್ಟಿದೆ. ಆದರೆ, ಯೂರಿಯಾ ದಾಸ್ತಾನು ಸಾಕಷ್ಟಿದೆ. ಯೂರಿಯಾ ಉತ್ಪಾದನೆ ಹೆಚ್ಚಿಸಲು ಮತ್ತು ಬೇರೆ ಬೇರೆ ಪ್ರದೇಶಗಳಲ್ಲಿ ಯೂರಿಯಾ ಆಮದು ಮಾಡಿಕೊಳ್ಳಲು ಪ್ರಯತ್ನಿಸುತ್ತಿರುವುದಾಗಿ ಸರ್ಕಾರ ಹೇಳಿದೆ.

ಪಿಎಂ ಕಿಸಾನ್ ಸ್ಕೀಮ್; ಫಲಾನುಭವಿಗಳ ಸಂಖ್ಯೆ 4 ಲಕ್ಷದಷ್ಟು ಕಡಿಮೆ; ನಿಮಗೆ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?

PM Kisan scheme, 22nd installment released: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ 22ನೇ ಕಂತಿನ ಹಣ ಬಿಡುಗಡೆ ಆಗಿದೆ. 9.32 ಕೋಟಿ ರೈತರಿಗೆ ಒಟ್ಟು 18,640 ಕೋಟಿ ರೂ ಹಣ ಸಿಕ್ಕಿದೆ. ಕಳೆದ ಬಾರಿಗಿಂತ ಈ ಸಲ ಫಲಾನುಭವಿಗಳ ಸಂಖ್ಯೆಯಲ್ಲಿ 3.8 ಲಕ್ಷದಷ್ಟು ಕಡಿಮೆ ಆಗಿದೆ. ನೀವು ಯೋಜನೆಗೆ ನೊಂದಾಯಿಸಿದ್ದೂ ಹಣ ಬಂದಿಲ್ಲವೆಂದರೆ, ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ಪರಿಶೀಲಿಸಿ.

ಪಿಎಂ ಕಿಸಾನ್ 22ನೇ ಕಂತಿನ ಹಣ ಇಂದು ಬಿಡುಗಡೆ; ಈ ರೀತಿಯ ಫಲಾನುಭವಿಗಳಿಗಿರೋದಿಲ್ಲ ಯೋಜನೆ ಭಾಗ್ಯ

PM Kisan scheme 22nd installment amount release on 2026 March 13th: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 22ನೇ ಕಂತಿನ ಹಣವನ್ನು ಪಿಎಂ ಮೋದಿ ಇಂದು ಮಾ. 13ರಂದು ಗುವಾಹಟಿಯಲ್ಲಿ ಬಿಡಗಡೆ ಮಾಡುತ್ತಾರೆ. ಸ್ವಂತ ಕೃಷಿ ಜಮೀನು ಹೊಂದಿರುವ ರೈತರಿಗೆ ವ್ಯವಸಾಯಕ್ಕೆ ನೆರವಾಗಲು ಸರ್ಕಾರ ವರ್ಷಕ್ಕೆ ಮೂರು ಕಂತುಗಳಲ್ಲಿ 6,000 ರೂ ನೀಡುವ ಯೋಜನೆ ಇದು. ಇಲ್ಲಿಯವರೆಗೆ 21 ಕಂತುಗಳನ್ನು ನೀಡಲಾಗಿದೆ. ಈಗ 22ನೇ ಕಂತಿನ ಹಣ ಸಿಗುತ್ತಿದೆ.

ಪಿಎಂ ಕಿಸಾನ್ ಯೋಜನೆ; ಮಾ. 13ಕ್ಕೆ ಸಿಗುತ್ತಾ 22ನೇ ಕಂತಿನ ಹಣ? ಇಲ್ಲಿದೆ ಈ ಸ್ಕೀಮ್​ನ ವಿವರ

PM Kisan Scheme, 22nd installment to be released on this date: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 22ನೇ ಕಂತಿನ ಹಣಕ್ಕಾಗಿ ಕೋಟ್ಯಂತರ ರೈತರು ಕಾಯುತ್ತಿದ್ದಾರೆ. ಫೆಬ್ರುವರಿಯಲ್ಲೇ ಹಣ ಬಿಡುಗಡೆಯಾಗುವ ನಿರೀಕ್ಷೆ ಇತ್ತು. ಈ ವಾರ ಕಂತಿನ ಹಣವಾದ 2,000 ರೂ ಅನ್ನು ಸರ್ಕಾರ ಬಿಡುಗಡೆ ಮಾಡಬಹುದು ಎನ್ನಲಾಗುತ್ತಿದೆ. ಸ್ವಂತ ಕೃಷಿ ಭೂಮಿ ಹೊಂದಿರುವ ರೈತರು ಈ ಯೋಜನೆಗೆ ಅರ್ಹರಾಗಿರುತ್ತಾರೆ.

ಪಿಎಂ ಕಿಸಾನ್ ಯೋಜನೆಗೆ 7 ವರ್ಷ; 22ನೇ ಕಂತಿನ ಹಣ ಸದ್ಯದಲ್ಲೇ

PM Kisan scheme 22nd installment date and other details: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ 22ನೇ ಕಂತಿನ 2,000 ರೂ ಹಣಕ್ಕಾಗಿ 10 ಕೋಟಿ ರೈತರು ಕಾಯುತ್ತಿದ್ದಾರೆ. 2025ರ ನವೆಂಬರ್ 19ರಂದು 21ನೇ ಕಂತಿನ ಹಣ ಬಿಡುಗಡೆ ಆಗಿತ್ತು. ಈಗ ಶೀಘ್ರದಲ್ಲೇ 22ನೇ ಕಂತಿನ ಹಣ ಬಿಡುಗಡೆ ಆಗುವ ಸಾಧ್ಯತೆ ಇದೆ.

ಟ್ರೇಡ್ ಡೀಲ್; ಫ್ಯಾಕ್ಟ್ ಶೀಟ್​ನಲ್ಲಿ ಬದಲಾವಣೆ; ಭಾರತದ ಒತ್ತಡಕ್ಕೆ ಬಗ್ಗಿತಾ ಅಮೆರಿಕ?

India US trade deal, US makes changes in its fact sheet: ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ ಸಂಬಂಧ ಅಮೆರಿಕ ಈ ಹಿಂದೆ ಬಿಡುಗಡೆ ಮಾಡಿದ್ದ ಫ್ಯಾಕ್ಟ್ ಶೀಟ್ ಅನ್ನು ಪರಿಷ್ಕರಿಸಿದೆ. ಭಾರತದಿಂದ ಟ್ಯಾರಿಫ್ ತೆಗೆದುಹಾಕಲಾಗುವ ಸರಕುಗಳಲ್ಲಿ ಬೇಳೆಕಾಳುಗಳನ್ನು ಸೇರಿಸಲಾಗಿತ್ತು. ಅದನ್ನು ಕೈಬಿಡಲಾಗಿದೆ. 500 ಬಿಲಿಯನ್ ಡಾಲರ್ ಮೌಲ್ಯದ ಅಮೆರಿಕದ ಸರಕುಗಳನ್ನು ಆಮದು ಮಾಡಿಕೊಳ್ಳಲು ಭಾರತ ಬದ್ಧವಾಗಿದೆ ಎಂದಿದ್ದನ್ನು ಉದ್ದೇಶಿಸಿದೆ ಎಂದು ತಿದ್ದಲಾಗಿದೆ.

ಅಮೆರಿಕದೊಂದಿಗೆ ಟ್ರೇಡ್ ಡೀಲ್; ಭಾರತದ ಕೃಷಿ ಮಾರುಕಟ್ಟೆ ರಕ್ಷಣೆಯಲ್ಲಿ ರಾಜಿ ಇರೋದಿಲ್ಲವಾ?

Will India keep agriculture and dairy sector out of trade deal with US: ಭಾರತ ಮತ್ತು ಅಮೆರಿಕ ನಡುವೆ ಟ್ರೇಡ್ ಡೀಲ್ ನಡೆದಿದೆ ಎನ್ನುವ ಸುದ್ದಿ ಬೆನ್ನಲ್ಲೇ ಕೃಷಿ ಮತ್ತು ಡೈರಿ ಸೆಕ್ಟರ್ ವಿಚಾರ ಚರ್ಚೆಗೆ ಬಂದಿದೆ. ಅಮೆರಿಕದ ಕೃಷಿ ಉತ್ಪನ್ನಗಳಿಗೆ ಭಾರತದ ಮಾರುಕಟ್ಟೆ ಸಿಗುತ್ತದೆ ಎಂಬರ್ಥದಲ್ಲಿ ಡೊನಾಲ್ಡ್ ಟ್ರಂಪ್ ಹೇಳಿರುವುದು ವದಂತಿಗೆ ಎಡೆ ಮಾಡಿಕೊಟ್ಟಿದೆ. ಆದರೆ, ಭಾರತದ ಕೃಷಿ ಮತ್ತು ಡೈರಿ ಸೆಕ್ಟರ್​ಗಳ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಸರ್ಕಾರಿ ಮೂಲಗಳು ಹೇಳಿವೆ ಎನ್ನಲಾಗಿದೆ.

ಬಜೆಟ್ 2026: ಬ್ಯಾಂಕಿಂಗ್​ನಿಂದ ಹಿಡಿದು ರೈತರವರೆಗೆ ವಿವಿಧ ಕ್ಷೇತ್ರಗಳ ನಿರೀಕ್ಷೆಗಳಿವು

ನವದೆಹಲಿ, ಜನವರಿ 30: ಫೆಬ್ರುವರಿ 1ರಂದು ನಿರ್ಮಲಾ ಸೀತಾರಾಮನ್ ಅವರು 2026-27ರ ಸಾಲಿನ ವರ್ಷಕ್ಕೆ ಬಜೆಟ್ ಮಂಡಿಸುತ್ತಿದ್ದಾರೆ. ಹಲವು ಕ್ಷೇತ್ರಗಳಿಂದ ಈ ಬಜೆಟ್ ಬಗ್ಗೆ ನಿರೀಕ್ಷೆಗಳು ಹಲವಿವೆ. ತೆರಿಗೆ ಪಾವತಿದಾರರು, ಉದ್ಯಮ ವಲಯ, ಹಣಕಾಸು ಮಾರುಕಟ್ಟೆ, ಬ್ಯಾಂಕ್, ಕೃಷಿ, ಎಂಎಸ್​ಎಂಇ ಕ್ಷೇತ್ರದವರು ಈ ಬಜೆಟ್​ನಿಂದ ಏನೇನು ಅಪೇಕ್ಷಿಸುತ್ತಿದ್ದಾರೆ ಎನ್ನುವ ಒಂದು ಸಂಕ್ಷಿಪ್ತ ನೋಟ ಇಲ್ಲಿದೆ.

ಕೇಂದ್ರ ಬಜೆಟ್ 2026: ಪಿಎಂ ಕಿಸಾನ್ ಹಣ ಎರಡು ಪಟ್ಟು ಹೆಚ್ಚಾಗುತ್ತಾ? ರೈತರ ನಿರೀಕ್ಷೆ ಈ ಬಜೆಟ್​ನಲ್ಲಿ ಈಡೇರುತ್ತಾ?

Union Budget 2026, PM Kisan Samman Nidhi Yojana: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿ ನೀಡಲಾಗುತ್ತಿರುವ ಕಂತಿನ ಹಣ ಎರಡು ಪಟ್ಟು ಹೆಚ್ಚಿಸಬಹುದು ಎಂದು ರೈತರು ನಿರೀಕ್ಷೆಯಲ್ಲಿದ್ದಾರೆ. ಸದ್ಯ ಈ ಸ್ಕೀಮ್ ಅಡಿ ವರ್ಷಕ್ಕೆ ಮೂರು ಕಂತುಗಳಲ್ಲಿ ಒಟ್ಟು 6,000 ರೂ ನೀಡಲಾಗುತ್ತಿದೆ. ಒಂದು ಕಂತಿನಲ್ಲಿ ನೀಡಲಾಗುವ 2,000 ರೂ ಅನ್ನು 4,000 ರೂಗೆ ಹೆಚ್ಚಿಸಬಹುದಾ?

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ