AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Farmer

Farmer

ರೈತರನ್ನು ಈ ದೇಶದಲ್ಲಿ ಅನ್ನದಾತರೆಂದೇ ಗೌರವಿಸಲಾಗುತ್ತದೆ. ಪ್ರತಿಯೊಬ್ಬರು ಬದುಕಲು ಬೇಕಾದ ಆಹಾರವನ್ನು ಬೆಳೆಯುವುದು ರೈತರೇ. ಭಾರತ ಈಗಲೂ ಕೂಡ ಕೃಷಿ ಆಧಾರಿತ ಆರ್ಥಿಕತೆ ಇರುವ ದೇಶ. ಆದರೆ, ರೈತನಿಗೆ ಆತನ ಶ್ರಮಕ್ಕೆ ತಕ್ಕಷ್ಟು ಆದಾಯ ಸಿಗುತ್ತಿಲ್ಲದಿರುವುದು ವಾಸ್ತವದ ಸಂಗತಿ. ಅಂತೆಯೇ, ಗ್ರಾಮೀಣ ಭಾಗ ಈಗಲೂ ಕೂಡ ಹಿಂದುಳಿದ ಪ್ರದೇಶವಾಗಿಯೇ ಉಳಿದಿದೆ. ನೆರೆ, ಬರ ಇತ್ಯಾದಿ ಪ್ರಕೃತಿ ವಿಕೋಪಗಳಿಂದ ಬೆಳೆ ನಾಶ ಆಗುತ್ತದೆ. ಮಾರುಕಟ್ಟೆಯಲ್ಲಿ ಬೇಡಿಕೆಯಲ್ಲಿನ ಏರುಪೇರಿನಿಂದ ರೈತನ ಬೆಳೆಗೆ ನ್ಯಾಯಯುತ ಬೆಲೆ ಸಿಗುವುದಿಲ್ಲ. ಹೀಗೆ ಹಲವು ಹಿನ್ನಡೆ, ಸಮಸ್ಯೆಗಳ ನಡುವೆ ರೈತನ ಕೈಂಕರ್ಯ ಮುಂದುವರಿಯುತ್ತಿರುತ್ತದೆ.

ಇನ್ನೂ ಹೆಚ್ಚು ಓದಿ

G-RAM-G: ಜಿ ರಾಮ್‌ ಜಿ ಕಾಯ್ದೆ- ಮತ್ತಷ್ಟು ಉದ್ಯೋಗ, ಮತ್ತಷ್ಟು ಭದ್ರತೆ

Highlights of G RAM G: ಯುಪಿಎ ಸರ್ಕಾರದ ಅವಧಿಯಲ್ಲಿ ಜಾರಿ ಮಾಡಲಾಗಿದ್ದ ಮಹಾತ್ಮ ಗಾಂಧಿ ನರೇಗಾ ಯೋಜನೆಗೆ ಸರ್ಕಾರ ಹೊಸ ಸ್ವರೂಪ ಕೊಟ್ಟಿದೆ. ಉದ್ಯೋಗ ಖಾತ್ರಿ ದಿನಗಳ ಸಂಖ್ಯೆಯನ್ನು 100ರಿಂದ 125ಕ್ಕೆ ಏರಿಸಿದೆ. ಕೃಷಿ ಸೀಸನ್​ಗೆ ಕೆಲಸಗಾರರ ಲಭ್ಯತೆ ಖಚಿತಪಡಿಸಲು 60 ದಿನಗಳ ಕಡ್ಡಾಯ ವಿರಾಮ ಅವಧಿ ಕೊಡಲಾಗಿದೆ. ಜಿ ರಾಮ್ ಜಿ ಯೋಜನೆಯಲ್ಲಿ ಇನ್ನೇನೇನು ಬದಲಾವಣೆಗಳಿವೆ ಎನ್ನುವ ಮಾಹಿತಿ ಇಲ್ಲಿದೆ.

PM Kisan eKYC: ಪಿಎಂ ಕಿಸಾನ್ ಸ್ಕೀಮ್- ರೈತರು ಇಕೆವೈಸಿ ಮಾಡಲು 3 ವಿಧಾನಗಳು

PM Kisan scheme, 3 methods of updating e-KYC: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಲ್ಲಿ 10 ಕೋಟಿಗೂ ಅಧಿಕ ರೈತರು ನೊಂದಾಯಿಸಿಕೊಂಡಿದ್ದಾರೆ. ಪ್ರತಿಯೊಬ್ಬರಿಗೂ ವರ್ಷಕ್ಕೆ 6,000 ರೂ ಸಿಗುತ್ತದೆ. ಆದರೆ, ಫಲಾನುಭವಿ ರೈತರು ಕೆವೈಸಿ ಅಪ್​ಡೇಟ್ ಮಾಡದಿದ್ದರೆ ಹಣ ಸಿಗುವುದಿಲ್ಲ. ಇಕೆವೈಸಿ ಅಪ್​ಡೇಟ್ ಮಾಡಲು ಮೂರು ದಾರಿ ಅಥವಾ ವಿಧಾನಗಳಿವೆ. ಅದರ ವಿವರ ಈ ಲೇಖನದಲ್ಲಿದೆ...

ಬದಲಾಗುತ್ತಿದೆ ಭಾರತ; 2025ರಲ್ಲಿ ಮಹಾಪರಿವರ್ತನೆ; ಜಿಎಸ್​ಟಿಯಿಂದ ಹಿಡಿದು ಜಿ ರಾಮ್ ಜಿವರೆಗೆ ಹಲವು ಆರ್ಥಿಕ ಸುಧಾರಣೆಗಳು

India's 2025 Economic Reforms: 2025ರಲ್ಲಿ ಭಾರತದಲ್ಲಿ ಮೋದಿ ಸರ್ಕಾರ ಹಲವು ಮಹತ್ವದ ಆರ್ಥಿಕ ಸುಧಾರಣೆಗಳನ್ನು ಜಾರಿಗೆ ತಂದಿದೆ. ಜಿಎಸ್‌ಟಿ 2.0 ಮೂಲಕ ತೆರಿಗೆ ಸ್ಲ್ಯಾಬ್‌ಗಳ ಕಡಿತ, 12 ಲಕ್ಷ ರೂ. ಆದಾಯ ತೆರಿಗೆ ವಿನಾಯಿತಿ, ಆಧುನಿಕ ಕಾರ್ಮಿಕ ಕಾನೂನುಗಳು, ಮತ್ತು ಪರಮಾಣು-ವಿಮಾ ವಲಯಗಳಲ್ಲಿ ಖಾಸಗಿ/ವಿದೇಶಿ ಹೂಡಿಕೆಗೆ ಅವಕಾಶ ನೀಡಲಾಗಿದೆ. ಈ ಸುಧಾರಣೆಗಳು ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸಿ, ನಿಯಮಗಳನ್ನು ಸರಳೀಕರಿಸಿ, ನಾಗರಿಕರ ಆರ್ಥಿಕ ಸ್ಥಿತಿಯನ್ನು ಸುಧಾರಿಸುವ ಗುರಿ ಹೊಂದಿವೆ.

ಅಮೆರಿಕದೊಂದಿಗೆ ಟ್ರೇಡ್ ಡೀಲ್; ಅಂತಿಮ ಪ್ರಸ್ತಾಪ ಸಲ್ಲಿಸಿದ ಭಾರತ; ಕೃಷಿ ತಂಟೆ ಬೇಡ, ಟ್ಯಾರಿಫ್ ನಿಲ್ಲಿಸಿ ಎಂಬುದು ಭಾರತದ ಬೇಡಿಕೆ

India tables final trade proposal to US: ಭಾರತ ಮತ್ತು ಅಮೆರಿಕ ನಡುವೆ ವ್ಯಾಪಾರ ಒಪ್ಪಂದ ತಾರ್ಕಿಕ ಅಂತ್ಯ ಕಾಣಬಹುದು. ಭಾರತ ತನ್ನ ಅಂತಿಮ ಪ್ರಸ್ತಾಪವನ್ನು ಮುಂದಿಟ್ಟಿದೆ. ಟ್ಯಾರಿಫ್ ಅನ್ನು ಶೇ. 15ಕ್ಕೆ ಇಳಿಸಬೇಕು, ಕೃಷಿ ಕ್ಷೇತ್ರವನ್ನು ಒಪ್ಪಂದದಿಂದ ಹೊರಗಿಡಬೇಕು ಎಂಬುದು ಭಾರತ ಮಾಡಿರುವ ಎರಡು ಪ್ರಮುಖ ಬೇಡಿಕೆಗಳು. ಅಮೆರಿಕವೇನಾದರೂ ಸಕಾರಾತ್ಮಕವಾಗಿ ಸ್ಪಂದಿಸಿದರೆ ಮುಂದಿನ ವರ್ಷವೇ ಒಪ್ಪಂದಕ್ಕೆ ಸಹಿಬೀಳುವ ನಿರೀಕ್ಷೆ ಇದೆ.

ಸಿಮ್ ವೆರಿಫಿಕೇಶನ್​ನಿಂದ ಹಿಡಿದು ಕ್ರೆಡಿಟ್ ಸ್ಕೋರ್​ವರೆಗೆ ಜನವರಿ 1ರಿಂದ ಆಗಲಿರುವ ಪ್ರಮುಖ ಹಣಕಾಸು ನಿಯಮ ಬದಲಾವಣೆಗಳು

Financial rules change from 2026 January: ಡಿಸೆಂಬರ್ ಮುಗಿದು ಜನವರಿ ಬರುತ್ತಿದೆ. 2025 ಮುಗಿದು 2026 ಬರುತ್ತಿದೆ. ಕೆಲ ಹೊಸ ಹಣಕಾಸು ನಿಯಮಗಳು ಜಾರಿಗೆ ಬರಲಿವೆ. ಬ್ಯಾಂಕುಗಳ ಬಡ್ಡಿದರ ಕಡಿಮೆ ಆಗಲಿದೆ. ಕ್ರೆಡಿಟ್ ಸ್ಕೋರ್ ಬೇಗ ಅಪ್​ಡೇಟ್ ಆಗಲಿದೆ. ವಾಟ್ಸಾಪ್​ನಂತಹ ಮೆಸೇಜಿಂಗ್ ಆ್ಯಪ್​ಗಳಿಗೆ ಸರ್ಕಾರ ಬಿಗಿ ನಿಯಮ ಹಾಕಿದೆ. ಮಕ್ಕಳ ಸೋಷಿಯಲ್ ಮೀಡಿಯಾ ಬಳಕೆ ಮೇಲೆ ನಿರ್ಬಂಧ ಹಾಗೂ ಇನ್ನೂ ಕೆಲ ಪ್ರಮುಖ ಬದಲಾವಣೆಗಳನ್ನು ನಿರೀಕ್ಷಿಸಬಹುದು.

ನೈಸರ್ಗಿಕ ಕೃಷಿಗಾರಿಕೆ ಭಾರತದ ಕೃಷಿ ಕ್ಷೇತ್ರದ ಭವಿಷ್ಯದ ಹಾದಿ: ನರೇಂದ್ರ ಮೋದಿ

PM Narendra Modi's blog post on natural farming: ಭಾರತೀಯ ರೈತರು ನೈಸರ್ಗಿಕ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ತಮ್ಮ ಲಿಂಕ್ಡ್​ನ್ ಪೋಸ್ಟ್​ನಲ್ಲಿ ಬ್ಲಾಗ್ ಬರೆದಿರುವ ಮೋದಿ, ರಾಸಾಯನಿಕ ಬಳಕೆ ನಿಲ್ಲಿಸಿ, ಸಂಪೂರ್ಣ ದೇಸೀಯವಾದ ಕೃಷಿ ವಿಧಾನಗಳನ್ನು ಅನುಸರಿಸಬೇಕೆಂದು ಸಲಹೆ ನೀಡಿದ್ದಾರೆ. ಪಂಚಗವ್ಯ, ಜೀವಾಮೃತ, ಬೀಜಾಮೃತ, ಮಲ್ಚಿಂಗ್ ಮೂಲಕ ಮಣ್ಣಿನ ಫಲವತ್ತತೆ ಹೆಚ್ಚಿಸಬಹುದು ಎಂದಿದ್ದಾರೆ.

PM Kisan: ಪಿಎಂ ಕಿಸಾನ್ ಹಣ ಸಿಕ್ಕಿಲ್ಲವಾ? ಈ ಕಾರಣಗಳಿದ್ದೀತು ಗಮನಿಸಿ

Possible reasons for many farmers not getting PM Kisan money: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ 21ನೇ ಕಂತಿನ ಹಣ ನ. 19ರಂದು ಬಿಡುಗಡೆ ಆಗಿದೆ. ಯೋಜನೆಗೆ ನೊಂದಾಯಿಸಿದ್ದರೂ ಹಲವರಿಗೆ ಕಂತಿನ ಹಣ ಬಂದಿಲ್ಲ. ಇಕೆವೈಸಿ ಅಪ್​ಡೇಟ್ ಆಗದೇ ಇರುವುದೂ ಸೇರಿ ಹಲವು ಕಾರಣಗಳಿಗೆ ಹಣ ಬಿಡುಗಡೆ ಆಗದೇ ಇರಬಹುದು.

PM Fasal Bima Yojana: ಬೆಳೆ ವಿಮೆ ವ್ಯಾಪ್ತಿ ಹೆಚ್ಚಳ; ಅಪಾಯ ಮೂಲಗಳ ಪಟ್ಟಿಗೆ ಕಾಡುಪ್ರಾಣಿಗಳೂ ಸೇರ್ಪಡೆ

New modalities for PM Fasal Bima Yojana: ಮುಂಬರುವ ಬೇಸಿಗೆ ಹಂಗಾಮಿನಿಂದ ಪಿಎಂ ಫಸಲ್ ಬಿಮಾ ಯೋಜನೆಯ ನಿಯಮಗಳಲ್ಲಿ ಕೆಲ ಬದಲಾವಣೆಗಳನ್ನು ತರಲಾಗುತ್ತಿದೆ. ಬೆಳೆ ಹಾನಿಗೆ ಕಾರಣವಾಗುವ ಸ್ಥಳೀಕೃತ ಅಪಾಯಗಳ ಪಟ್ಟಿಗೆ ಕಾಡುಪ್ರಾಣಿಗಳ ದಾಳಿಯನ್ನೂ ಸೇರಿಸಲಾಗಿದೆ. ಬೇಸಿಗೆ ಬೆಳೆಗಳಿಗೆ ಇನ್ಷೂರೆನ್ಸ್ ಪ್ರೀಮಿಯಮ್ ಶೇ. 2, ಹಿಂಗಾರು ಬೆಳೆಗಳಿಗೆ ಶೇ. 1.5 ಪ್ರೀಮಿಯಮ್ ಇದೆ.

PM Kisan 21st Installment: ಪಿಎಂ ಕಿಸಾನ್ ಯೋಜನೆ; 9 ಕೋಟಿ ರೈತರಿಗೆ 2,000 ರೂಗಳ 21ನೇ ಕಂತಿನ ಹಣ ಇಂದು ಬಿಡುಗಡೆ

ಪಿಎಂ ಕಿಸಾನ್ ಯೋಜನೆ: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ 21ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಅವರು ನ. 19, ಬುಧವಾರ ಬಿಡುಗಡೆ ಮಾಡುತ್ತಿದ್ದಾರೆ. ಆಂಧ್ರ ಮತ್ತು ತಮಿಳುನಾಡು ರಾಜ್ಯಗಳಿಗೆ ಭೇಟಿ ನೀಡುತ್ತಿರುವ ನರೇಂದ್ರ ಮೋದಿ ಮಧ್ಯಾಹ್ನ ಕೊಯಮತ್ತೂರಿಗೆ ತೆರಳುತ್ತಿದ್ದಾರೆ. ಕೊಯಮತ್ತೂರಿನಲ್ಲಿ ನೈಸರ್ಗಿಕ ಕೃಷಿ ಶೃಂಗಸಭೆಗೆ ಚಾಲನೆ ನೀಡಿದ ಬಳಿಕ ಪಿಎಂ ಕಿಸಾನ್​ನ ಹೊಸ ಕಂತಿನ ಹಣದ ಬಿಡುಗಡೆ ಮಾಡುತ್ತಾರೆ.

PM Kisan 21st Installment: ಪಿಎಂ ಕಿಸಾನ್ ಹೊಸ ಕಂತಿನ ಹಣ ಬಿಡುಗಡೆ ಸದ್ಯದಲ್ಲೇ

PM Kisan scheme 21st Installment Date and Time: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 21ನೇ ಕಂತಿನ ಹಣ ನ. 19, ಬುಧವಾರ ಬಿಡುಗಡೆ ಆಗಲಿದೆ. ಇದಕ್ಕೆ ಮುನ್ನ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಅಪ್​ಡೇಟ್ ಆಗಿರುವುದನ್ನು ಖಚಿತಪಡಿಸಿಕೊಳ್ಳಿ. ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ಪರಿಶೀಲಿಸಿ.

ಪಿಎಂ ಕಿಸಾನ್: ಈ ಬಾರಿ ಕೆಲ ರೈತರಿಗೆ 2,000 ಬದಲು 4,000 ರೂ ಸಿಗುತ್ತಾ? ಇಲ್ಲಿದೆ ಕಾರಣ

PM Kisan Samman Nidhi Yojana: ಪಿಎಂ ಕಿಸಾನ್ ಯೋಜನೆಯಲ್ಲಿ ಈ ಬಾರಿ 21ನೇ ಕಂತಿನ ಹಣ ಈ ತಿಂಗಳೇ ಬಿಡುಗಡೆ ಆಗುವ ನಿರೀಕ್ಷೆಯಲ್ಲಿ ರೈತರಿದ್ದಾರೆ. ಕಳೆದ ಬಾರಿ ಹಲವು ರೈತರಿಗೆ 20ನೇ ಕಂತಿನ ಹಣ ಸಿಕ್ಕಿರಲಿಲ್ಲ. ಕೆವೈಸಿ ದಾಖಲೆಗಳು ಸರಿ ಇಲ್ಲದೇ ಇರುವುದು ಮತ್ತಿತರ ಕಾರಣಕ್ಕೆ ಕಂತಿನ ಹಣ ಕೆಲವರಿಗೆ ಸಿಕ್ಕಿರಲಿಲ್ಲ. ಅನರ್ಹರನ್ನು ಫಿಲ್ಟರ್ ಮಾಡಲಾಗುತ್ತಿದೆ. ಅರ್ಹರಿದ್ದೂ 20ನೇ ಕಂತಿನ ಸಿಕ್ಕಿಲ್ಲದೇ ಇದ್ದವರಿಗೆ ಈ ಬಾರಿ ಎರಡು ಕಂತುಗಳ ಹಣ ಒಟ್ಟಿಗೆ ಸಿಗಬಹುದು.

ಸಕ್ಕರೆ ಉತ್ಪಾದನೆ ಶೇ. 16ರಷ್ಟು ಏರಿಕೆ ಸಾಧ್ಯತೆ; ಮಹಾರಾಷ್ಟ್ರ, ಕರ್ನಾಟಕದಲ್ಲಿ ಹೆಚ್ಚು ಹೆಚ್ಚಳ ನಿರೀಕ್ಷೆ

Sugar production is estimated to increase by 16pc: 2024-25ರಲ್ಲಿ 296.1 ಲಕ್ಷ ಟನ್​ಗಳಷ್ಟು ಇದ್ದ ಸಕ್ಕರೆ ಉತ್ಪಾದನೆ 2025-26ರಲ್ಲಿ 343.5 ಲಕ್ಷ ಟನ್​ಗೆ ಏರುವ ನಿರೀಕ್ಷೆ ಇದೆ. ಉತ್ತಮ ಮಳೆ, ನೀರಿನ ವ್ಯವಸ್ಥೆ, ಸರ್ಕಾರದ ಉತ್ತೇಜಕಾರಿ ಕ್ರಮದಿಂದ ಸಕ್ಕರೆ ಉತ್ಪಾದನೆ ಹೆಚ್ಚಾಗಿದೆ. ಭಾರತದ ಅತಿಹೆಚ್ಚು ಕಬ್ಬು ಬೆಳೆಗಾರ ರಾಜ್ಯವಾದ ಮಹಾರಾಷ್ಟ್ರದಲ್ಲಿ ಈ ಬಾರಿ ಸಕ್ಕರೆ ಉತ್ಪಾದನೆ ಗಣನೀಯವಾಗಿ ಹೆಚ್ಚುತ್ತಿದೆ.

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?