Farmer
ರೈತರನ್ನು ಈ ದೇಶದಲ್ಲಿ ಅನ್ನದಾತರೆಂದೇ ಗೌರವಿಸಲಾಗುತ್ತದೆ. ಪ್ರತಿಯೊಬ್ಬರು ಬದುಕಲು ಬೇಕಾದ ಆಹಾರವನ್ನು ಬೆಳೆಯುವುದು ರೈತರೇ. ಭಾರತ ಈಗಲೂ ಕೂಡ ಕೃಷಿ ಆಧಾರಿತ ಆರ್ಥಿಕತೆ ಇರುವ ದೇಶ. ಆದರೆ, ರೈತನಿಗೆ ಆತನ ಶ್ರಮಕ್ಕೆ ತಕ್ಕಷ್ಟು ಆದಾಯ ಸಿಗುತ್ತಿಲ್ಲದಿರುವುದು ವಾಸ್ತವದ ಸಂಗತಿ. ಅಂತೆಯೇ, ಗ್ರಾಮೀಣ ಭಾಗ ಈಗಲೂ ಕೂಡ ಹಿಂದುಳಿದ ಪ್ರದೇಶವಾಗಿಯೇ ಉಳಿದಿದೆ. ನೆರೆ, ಬರ ಇತ್ಯಾದಿ ಪ್ರಕೃತಿ ವಿಕೋಪಗಳಿಂದ ಬೆಳೆ ನಾಶ ಆಗುತ್ತದೆ. ಮಾರುಕಟ್ಟೆಯಲ್ಲಿ ಬೇಡಿಕೆಯಲ್ಲಿನ ಏರುಪೇರಿನಿಂದ ರೈತನ ಬೆಳೆಗೆ ನ್ಯಾಯಯುತ ಬೆಲೆ ಸಿಗುವುದಿಲ್ಲ. ಹೀಗೆ ಹಲವು ಹಿನ್ನಡೆ, ಸಮಸ್ಯೆಗಳ ನಡುವೆ ರೈತನ ಕೈಂಕರ್ಯ ಮುಂದುವರಿಯುತ್ತಿರುತ್ತದೆ.
ಪಿಎಂ ಕೃಷಿ ಸಿಂಚಯಿ ಯೋಜನೆ: ನೀರಾವರಿ ಸಿಸ್ಟಮ್ಸ್ ಅಳವಡಿಸಲು ಭರ್ಜರಿ ರಿಯಾಯಿತಿ; ಇಲ್ಲಿದೆ ಸಬ್ಸಿಡಿ ಮತ್ತಿತರ ಸೌಲಭ್ಯಗಳ ವಿವರ
Pradhan Mantri Krishi Sinchayee Yojana details: ಪ್ರಧಾನ ಮಂತ್ರಿ ಕೃಷಿ ಸಿಂಚಯಿ ಯೋಜನೆ ರೈತರ ಜಮೀನುಗಳಿಗೆ ಡ್ರಿಪ್ ಇರಿಗೇಶನ್ ಇತ್ಯಾದಿ ನೀರಾವರಿ ವ್ಯವಸ್ಥೆ ಅಳವಡಿಸಲು ನೆರವಾಗುತ್ತದೆ. ಹನಿ ನೀರಾವರಿ, ಸ್ಪ್ರಿಂಕ್ಲರ್, ಕೃಷಿ ಹೊಂಡ, ಸೋಲಾರ್ ಪಂಪ್ಸೆಟ್ಗಳಿಗೆ ಸರ್ಕಾರ ಸಾಕಷ್ಟು ಸಬ್ಸಿಡಿ ನೀಡುತ್ತದೆ. ದೊಡ್ಡ ರೈತರಿಗೆ ಶೇ. 45ರಷ್ಟು ಸಬ್ಸಿಡಿ ಸಿಗುತ್ತದೆ. ಹಿಂದುಳಿದ ವರ್ಗದ ರೈತರಿಗೆ ಶೇ. 90ಕ್ಕಿಂತ ಹೆಚ್ಚು ಸಬ್ಸಿಡಿ ಸಿಗುತ್ತದೆ.
- Vijaya Sarathy SN
- Updated on: Jul 6, 2026
- 4:36 pm
ವಿಕಸಿತ ಭಾರತ ಉದ್ಯೋಗ ಖಾತ್ರಿ ಯೋಜನೆ ವಿಬಿ-ಜಿ-ರಾಮ್-ಜಿಗೆ ನೊಂದಣಿ ಹೇಗೆ? ಕೆಲಸ ಸಿಗದಿದ್ದರೆ ಎಷ್ಟು ಭತ್ಯೆ?
VB G-RAM-G rural employment guarantee scheme full details: ಜುಲೈ 1ರಿಂದ ವಿಕಸಿತ ಭಾರತ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಾದ ವಿಬಿ-ಜಿ-ರಾಮ್-ಜಿ ಜಾರಿಗೆ ಬಂದಿದೆ. ಗ್ರಾಮೀಣ ಭಾಗದ ಒಂದು ಕುಟುಂಬಕ್ಕೆ ಒಂದು ವರ್ಷದಲ್ಲಿ ಕನಿಷ್ಠ 125 ದಿನಗಳ ಕೌಶಲ್ಯರಹಿತ ಕೂಲಿ ಕೆಲಸಗಳನ್ನು ಇದು ಖಾತ್ರಿಪಡಿಸುತ್ತದೆ. ಒಂದು ಕುಟುಂಬವು ಕೃಷಿಗಾರಿಕೆಯ ಜೊತೆ ಜೊತೆಗೆ ಒಂದು ವರ್ಷದಲ್ಲಿ 45,000 ರೂನಿಂದ 60,000 ರೂವರೆಗೆ ಹೆಚ್ಚುವರಿ ಸಂಪಾದಿಸಬಹುದು.
- Vijaya Sarathy SN
- Updated on: Jul 3, 2026
- 3:44 pm
ಹೊಸ ಉದ್ಯೋಗ ಖಾತ್ರಿ ಸ್ಕೀಮ್; ಮನ್ರೇಗಾ ಬದಲು ವಿ ಬಿ ಜಿ ರಾಮ್ ಜಿ ಇಂದಿನಿಂದ ಅಧಿಕೃತ ಜಾರಿ
VB G RAM G Replaces MGNREGA Scheme: ವಿಕಸಿತ ಭಾರತ ಉದ್ಯೋಗ ಖಾತ್ರಿ ಯೋಜನೆಯಾದ ವಿಬಿ ಜಿ ರಾಮ್ ಜಿ ಇಂದಿನಿಂದ (ಜುಲೈ 1) ಜಾರಿಗೆ ಬಂದಿದೆ. ಇದರೊಂದಿಗೆ 20 ವರ್ಷಗಳಿಂದ ಅಸ್ತಿತ್ವದಲ್ಲಿದ್ದ ಮನ್ರೇಗಾ ಯೋಜನೆ ಮುಕ್ತಾಯಗೊಂಡಿದೆ. ಅದರ ಸುಧಾರಿತ ರೂಪವಾದ ಜಿ ರಾಮ್ ಜಿ ಯೋಜನೆಯಲ್ಲಿ ಕೆಲ ಪ್ರಮುಖ ಬದಲಾವಣೆಗಳಿವೆ.
- Vijaya Sarathy SN
- Updated on: Jul 1, 2026
- 1:43 pm
ಪಿಎಂ ಕಿಸಾನ್ ಯೋಜನೆ, ನೊಂದಾಯಿಸಿದ್ದರೂ 23ನೇ ಕಂತಿನ ಬಂದಿಲ್ಲವಾ? ಇವಿರಬಹುದು ಕಾರಣಗಳು
PM Kisan Samman Nidhi Yojana 23rd installment: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ 23ನೇ ಕಂತಿನ ಹಣವನ್ನು ಕೇಂದ್ರ ಸರ್ಕಾರ ಜೂನ್ 20ರಂದು ಬಿಡುಗಡೆ ಮಾಡಿದೆ. 9.44 ಕೋಟಿ ರೈತರಿಗೆ ತಲಾ 2,000 ರೂ ಹಣ ಕ್ರೆಡಿಟ್ ಆಗಿದೆ. ಈ ಯೋಜನೆಯಲ್ಲಿ ವರ್ಷಕ್ಕೆ ಮೂರು ಕಂತುಗಳಿಂದ ಒಟ್ಟು 6,000 ರೂ ಹಣವು ರೈತರಿಗೆ ಸಿಗುತ್ತದೆ. ಯೋಜನೆಗೆ ನೊಂದಾಯಿಸಿಯೂ ಕೆಲವರಿಗೆ ಬೇರೆ ಬೇರೆ ಕಾರಣಕ್ಕೆ ಹಣ ಬಂದಿಲ್ಲದೇ ಇರಬಹುದು.
- Vijaya Sarathy SN
- Updated on: Jun 21, 2026
- 12:30 pm
ಪಿಎಂ ಕಿಸಾನ್ 23ನೇ ಕಂತು ಬಿಡುಗಡೆ ದಿನಾಂಕ ಪ್ರಕಟ; ಇನ್ನೆರಡು ದಿನದಲ್ಲಿ ರೈತರ ಖಾತೆಗೆ ಬರಲಿದೆ 2,000 ರೂ
PM Kisan scheme 23rd installmentrelease date announced: ಪ್ರಧಾನಮಂತ್ರಿ ಕಿಸಾನ್ ಸ್ಕೀಮ್ನಲ್ಲಿ 23ನೇ ಕಂತಿನ ಹಣ ಜೂನ್ 20, ಶನಿವಾರದಂದು ಬಿಡುಗಡೆ ಆಗಲಿದೆ. ಯೋಜನೆಯ ಅಧಿಕೃತ ಸೋಷಿಯಲ್ ಮಿಡಿಯಾ ಅಕೌಂಟ್ನಿಂದ ಈ ಮಾಹಿತಿ ಪ್ರಕಟವಾಗಿದೆ. ಮಾರ್ಚ್ ತಿಂಗಳಲ್ಲಿ 22ನೇ ಕಂತಿನ ಹಣ ಬಿಡುಗಡೆ ಆಗಿತ್ತು. ಇಲ್ಲಿಯವರೆಗೆ ಈ ಯೋಜನೆಯಲ್ಲಿ ಸರ್ಕಾರವು ರೈತರಿಗೆ 4.25 ಲಕ್ಷ ಕೋಟಿ ರೂಗೂ ಅಧಿಕ ಹಣ ಬಿಡುಗಡೆ ಮಾಡಿದೆ.
- Vijaya Sarathy SN
- Updated on: Jun 18, 2026
- 1:31 pm
ಮುಂಗಾರು ಬಿತ್ತನೆಗೆ ಮುನ್ನ ರೈತರಿಗೆ ಖುಷಿ ಸುದ್ದಿ, ಯೂರಿಯಾ ಬೆಲೆ ಅರ್ಧಕರ್ಧ ಕುಸಿತ
Urea Import Prices Crash: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಯೂರಿಯಾ ಆಮದು ಬೆಲೆ ಗಣನೀಯವಾಗಿ ಕುಸಿದಿದೆ. ಇದು ಭಾರತದ ರೈತರಿಗೆ ಮತ್ತು ಕೇಂದ್ರ ಸರ್ಕಾರಕ್ಕೆ ದೊಡ್ಡ ನಿರಾಳತೆಯನ್ನು ತಂದಿದೆ. ಚೀನಾ ರಫ್ತು ನಿರ್ಬಂಧಗಳನ್ನು ಸಡಿಲಗೊಳಿಸಿರುವುದು ಬೆಲೆ ಇಳಿಕೆಗೆ ಕಾರಣ. ಮುಂಗಾರು ಹಂಗಾಮಿಗೆ ಅಗ್ಗದ ಯೂರಿಯಾ ಲಭ್ಯವಾಗಲಿದ್ದು, ರೈತರಿಗೆ ನೆರವಾಗಲಿದೆ. ಜೊತೆಗೆ, ಸರ್ಕಾರದ ರಸಗೊಬ್ಬರ ಸಬ್ಸಿಡಿ ಹೊರೆಯೂ ಕಡಿಮೆಯಾಗಲಿದೆ. ಇದು ಕೃಷಿ ಕ್ಷೇತ್ರಕ್ಕೆ ಸಮಾಧಾನಕರ ಬೆಳವಣಿಗೆ.
- Vijaya Sarathy SN
- Updated on: Jun 11, 2026
- 6:09 pm
PM Kisan Scheme: ಪಿಎಂ ಕಿಸಾನ್ 23ನೇ ಕಂತಿನ ಹಣ ಜೂನ್ನಲ್ಲಿ ಬರುತ್ತಾ? ಈ ಕಾರ್ಯ ಮಾಡದವರಿಗೆ ಸಿಕ್ಕೋದಿಲ್ಲಾ ಹಣ
PM Kisan Scheme, 23rd installment release date: ಪ್ರಧಾನಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ 9 ಕೋಟಿಗೂ ಅಧಿಕ ರೈತರು 23ನೇ ಕಂತಿನ ಹಣದ ಬಿಡುಗಡೆಯ ನಿರೀಕ್ಷೆಯಲ್ಲಿದ್ದಾರೆ. ಮಾರ್ಚ್ ತಿಂಗಳಲ್ಲಿ 22ನೇ ಕಂತಿನ ಹಣ ಬಿಡುಗಡೆ ಆಗಿತ್ತು. 23ನೆಯದು ಜೂನ್ನಲ್ಲಿ ಆಗುವ ಸಂಭವ ಇದೆ ಎನ್ನಲಾಗುತ್ತಿದೆ. ಇಕೆವೈಸಿ ಅಪ್ಡೇಟ್ ಮಾಡದ ಫಲಾನುಭವಿಗಳಿಗೆ 23ನೇ ಕಂತಿನ ಹಣ ಸಿಕ್ಕದೇ ಹೋಗಬಹುದು.
- Vijaya Sarathy SN
- Updated on: May 29, 2026
- 4:21 pm
ಪಿಎಂ ಕಿಸಾನ್ ಯೋಜನೆ; ನೊಂದಣಿ, ಆದಾಯ, ಫಲಾನುಭವಿಗಳ ಸಂಖ್ಯೆ ಇತ್ಯಾದಿ ಮಾಹಿತಿ
PM Kisan Samman Nidhi Yojana details: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ಇಲ್ಲಿಯವರೆಗೆ 22 ಕಂತಿನ ಹಣ ಬಿಡುಗಡೆ ಆಗಿದೆ. 23ನೇ ಕಂತಿಗಾಗಿ ರೈತರು ಕಾಯುತ್ತಿದ್ದಾರೆ. ಮುಂದಿನ ತಿಂಗಳು ಕಂತಿನ ಹಣ ಬಿಡುಗಡೆ ಆಗುವ ನಿರೀಕ್ಷೆ ಇದೆ. 2018-19ರಲ್ಲಿ ಶುರುವಾದ ಈ ಯೋಜನೆಯಲ್ಲಿ ಸದ್ಯ ಒಂಬತ್ತೂವರೆ ಕೋಟಿ ಸಂಖ್ಯೆಯಲ್ಲಿ ಫಲಾನುಭವಿಗಳಿದ್ದಾರೆ.
- Vijaya Sarathy SN
- Updated on: May 24, 2026
- 11:35 am
ಪಿಎಂ ಕಿಸಾನ್ ಯೋಜನೆಗೆ ನೊಂದಾಯಿಸಿಕೊಳ್ಳುವುದು ಹೇಗೆ? ಇಲ್ಲಿದೆ ಸ್ಕೀಮ್ನ ಪ್ರಮುಖ ಮಾಹಿತಿ
PM Kisan Samman Nidhi Yojana: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ರೈತರಿಗೆ ವರ್ಷಕ್ಕೆ ಮೂರು ಕಂತುಗಳಲ್ಲಿ 6,000 ರೂಗಳನ್ನು ಕೇಂದ್ರ ಸರ್ಕಾರ ನೀಡುತ್ತದೆ. ಸ್ವಂತ ಕೃಷಿಭೂಮಿ ಹೊಂದಿರುವ ರೈತರು ಈ ಯೋಜನೆಗೆ ಅರ್ಹರು. ತೆರಿಗೆ ಪಾವತಿದಾರರು, ವೃತ್ತಿಪರರು, ಸರ್ಕಾರಿ ನೌಕರರು ಮೊದಲಾದ ಇತರ ವೃತ್ತಿಯವರು ಕೃಷಿಭೂಮಿ ಇದ್ದರೂ ಕೂಡ ಯೋಜನೆಗೆ ಅರ್ಹರಿರುವುದಿಲ್ಲ.
- Vijaya Sarathy SN
- Updated on: Apr 20, 2026
- 4:21 pm
ಗಲ್ಫ್ ಬಿಕ್ಕಟ್ಟಿನಲ್ಲೂ ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯ ಆಗಲು ಬಿಡುತ್ತಿಲ್ಲ: ಸರ್ಕಾರದಿಂದ ಸ್ಪಷ್ಟನೆ
Taking measures to ensure availability of fertilizers, says govt: ಗಲ್ಫ್ ರಾಷ್ಟ್ರಗಳಿಂದ ಯೂರಿಯಾ ಪೂರೈಕೆಯಾಗುವುದು ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಭಾರತದಲ್ಲಿ ರಸಗೊಬ್ಬರ ಲಭ್ಯತೆಗೆ ಧಕ್ಕೆಯಾಗಬಹುದು ಎಂದು ಕೃಷಿ ಕ್ಷೇತ್ರದಲ್ಲಿ ಆತಂಕದ ಸ್ಥಿತಿ ಏರ್ಪಟ್ಟಿದೆ. ಆದರೆ, ಯೂರಿಯಾ ದಾಸ್ತಾನು ಸಾಕಷ್ಟಿದೆ. ಯೂರಿಯಾ ಉತ್ಪಾದನೆ ಹೆಚ್ಚಿಸಲು ಮತ್ತು ಬೇರೆ ಬೇರೆ ಪ್ರದೇಶಗಳಲ್ಲಿ ಯೂರಿಯಾ ಆಮದು ಮಾಡಿಕೊಳ್ಳಲು ಪ್ರಯತ್ನಿಸುತ್ತಿರುವುದಾಗಿ ಸರ್ಕಾರ ಹೇಳಿದೆ.
- Vijaya Sarathy SN
- Updated on: Mar 30, 2026
- 8:11 pm
ಪಿಎಂ ಕಿಸಾನ್ ಸ್ಕೀಮ್; ಫಲಾನುಭವಿಗಳ ಸಂಖ್ಯೆ 4 ಲಕ್ಷದಷ್ಟು ಕಡಿಮೆ; ನಿಮಗೆ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?
PM Kisan scheme, 22nd installment released: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ 22ನೇ ಕಂತಿನ ಹಣ ಬಿಡುಗಡೆ ಆಗಿದೆ. 9.32 ಕೋಟಿ ರೈತರಿಗೆ ಒಟ್ಟು 18,640 ಕೋಟಿ ರೂ ಹಣ ಸಿಕ್ಕಿದೆ. ಕಳೆದ ಬಾರಿಗಿಂತ ಈ ಸಲ ಫಲಾನುಭವಿಗಳ ಸಂಖ್ಯೆಯಲ್ಲಿ 3.8 ಲಕ್ಷದಷ್ಟು ಕಡಿಮೆ ಆಗಿದೆ. ನೀವು ಯೋಜನೆಗೆ ನೊಂದಾಯಿಸಿದ್ದೂ ಹಣ ಬಂದಿಲ್ಲವೆಂದರೆ, ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ಪರಿಶೀಲಿಸಿ.
- Vijaya Sarathy SN
- Updated on: Mar 13, 2026
- 8:40 pm
ಪಿಎಂ ಕಿಸಾನ್ 22ನೇ ಕಂತಿನ ಹಣ ಇಂದು ಬಿಡುಗಡೆ; ಈ ರೀತಿಯ ಫಲಾನುಭವಿಗಳಿಗಿರೋದಿಲ್ಲ ಯೋಜನೆ ಭಾಗ್ಯ
PM Kisan scheme 22nd installment amount release on 2026 March 13th: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 22ನೇ ಕಂತಿನ ಹಣವನ್ನು ಪಿಎಂ ಮೋದಿ ಇಂದು ಮಾ. 13ರಂದು ಗುವಾಹಟಿಯಲ್ಲಿ ಬಿಡಗಡೆ ಮಾಡುತ್ತಾರೆ. ಸ್ವಂತ ಕೃಷಿ ಜಮೀನು ಹೊಂದಿರುವ ರೈತರಿಗೆ ವ್ಯವಸಾಯಕ್ಕೆ ನೆರವಾಗಲು ಸರ್ಕಾರ ವರ್ಷಕ್ಕೆ ಮೂರು ಕಂತುಗಳಲ್ಲಿ 6,000 ರೂ ನೀಡುವ ಯೋಜನೆ ಇದು. ಇಲ್ಲಿಯವರೆಗೆ 21 ಕಂತುಗಳನ್ನು ನೀಡಲಾಗಿದೆ. ಈಗ 22ನೇ ಕಂತಿನ ಹಣ ಸಿಗುತ್ತಿದೆ.
- Vijaya Sarathy SN
- Updated on: Mar 13, 2026
- 12:41 pm