Ganesh Chaturthi
ವಿನಾಯಕ ಚೌತಿ..ಭಾರತದಲ್ಲಿ ಹಿಂದೂಗಳು ಆಚರಿಸುವ ಪ್ರಮುಖ ಹಬ್ಬಗಳಲ್ಲಿ ಇದೂ ಕೂಡ ಒಂದು. ಶಿವ ಪಾರ್ವತಿಯ ಪುತ್ರ ವಿನಾಯಕನ ಜನ್ಮದಿನದಂದು ವಿನಾಯಕ ಚೌತಿಯನ್ನು ಆಚರಿಸಲಾಗುತ್ತದೆ. ಪ್ರತಿ ವರ್ಷ ಭಾದ್ರಪದ ಮಾಸದ ಶುಕ್ಲ ಚತುರ್ಥಿಯಂದು ವಿನಾಯಕ ಚೌತಿಯನ್ನು ಆಚರಿಸಲಾಗುತ್ತದೆ. ಈ ಹಬ್ಬವನ್ನು ವಿನಾಯಕ ಚತುರ್ಥಿ ಮತ್ತು ಗಣೇಶ ಚತುರ್ಥಿ ಎಂದೂ ಕರೆಯುತ್ತಾರೆ. ವಿನಾಯಕ ಚೌತಿ ಆಚರಣೆಯ ಅಂಗವಾಗಿ 11 ದಿನಗಳ ಕಾಲ ಗಣೇಶ ಮೂರ್ತಿಗಳಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ ನಿಮಜ್ಜನಕ್ಕೆ ಮೆರವಣಿಗೆಯಲ್ಲಿ ತೆರಳಲಾಗುತ್ತದೆ. ವಿಗ್ರಹ ನಿಮಜ್ಜನ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ನಡೆಸಲಾಗುತ್ತದೆ.
ಹಳ್ಳಿಗಳು, ಪಟ್ಟಣಗಳು, ಕಾಲೋನಿಗಳು ಮತ್ತು ನಗರಗಳಲ್ಲಿನ ಅಪಾರ್ಟ್ಮೆಂಟ್ಗಳಲ್ಲಿ ವಿನಾಯಕ ಚೌತಿ ಆಚರಣೆಯನ್ನು ಅತ್ಯಂತ ವೈಭವದಿಂದ ಆಚರಿಸಲಾಗುತ್ತದೆ. ವಿನಾಯಕ ಚೌತಿ ಮಹೋತ್ಸವಗಳು ಬ್ರಿಟಿಷ್ ಆಡಳಿತಗಾರರ ವಿರುದ್ಧ ಸ್ವಾತಂತ್ರ್ಯ ಚಳವಳಿಯಲ್ಲಿ ಎಲ್ಲ ಜನರಲ್ಲಿ ರಾಷ್ಟ್ರೀಯ ಮನೋಭಾವವನ್ನು ಬೆಳಗಿಸುವಲ್ಲಿ ಪ್ರಮುಖ ಪಾತ್ರವಹಿಸಿದವು. 1892 ರಲ್ಲಿ ಸ್ವಾತಂತ್ರ್ಯ ಹೋರಾಟಗಾರ ಲೋಕಮಾನ್ಯ ತಿಲಕರು ದೇಶದ ಜನರಲ್ಲಿ ರಾಷ್ಟ್ರೀಯ ಮನೋಭಾವವನ್ನು ಬೆಳಗಿಸಲು ಗಣಪತಿ ಉತ್ಸವಗಳನ್ನು ಪ್ರಾರಂಭಿಸಿದರು.
ಇನ್ನೂ ಹೆಚ್ಚು ಓದಿಗಣೇಶ ಚತುರ್ಥಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ 312 ಹೆಚ್ಚುವರಿ ವಿಶೇಷ ಬಸ್ ವ್ಯವಸ್ಥೆ
ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ 312 ಹೆಚ್ಚುವರಿ ವಿಶೇಷ ಬಸ್ಗಳ ವ್ಯವಸ್ಥೆ ಮಾಡಿದೆ. ಸೆಪ್ಟೆಂಬರ್ 11ರಿಂದ 13ರವರೆಗೆ ಬೆಂಗಳೂರಿನಿಂದ ವಿವಿಧ ಮಾರ್ಗಗಳಿಗೆ ಬಸ್ಗಳು ಸಂಚರಿಸಲಿದ್ದು, ಹಬ್ಬದ ಬಳಿಕವೂ ಜನದಟ್ಟಣೆಗೆ ಅನುಗುಣವಾಗಿ ಹೆಚ್ಚುವರಿ ಸಾರಿಗೆ ಬಸ್ಗಳ ಸೇವೆ ಇರಲಿದೆ.
- Sanjayya Chikkamath
- Updated on: Sep 5, 2026
- 1:38 pm
10 ದಿನಗಳ ಮೊದಲೇ ಬೆಳಗಾವಿಯಲ್ಲಿ ಗಣೇಶೋತ್ಸವದ ಸಂಭ್ರಮ!
ಬೆಳಗಾವಿಯಲ್ಲಿ ಗಣೇಶ ಚತುರ್ಥಿ ಹಬ್ಬಕ್ಕೆ ಹತ್ತು ದಿನ ಮುಂಚಿತವಾಗಿಯೇ ಸಂಭ್ರಮಾಚರಣೆ ಆರಂಭವಾಗಿದೆ. ರಾಜ ಗಣೇಶ ಮೂರ್ತಿಯನ್ನು ಚವಾಟ್ ಗಲ್ಲಿಗೆ ಅದ್ಧೂರಿಯಾಗಿ ಬರಮಾಡಿಕೊಳ್ಳಲಾಯಿತು. ನಗರದಾದ್ಯಂತ ಭವ್ಯ ಮೆರವಣಿಗೆಯೊಂದಿಗೆ ಹಬ್ಬದ ವಾತಾವರಣ ಮನೆಮಾಡಿದ್ದು, ಭಕ್ತರು ಭಕ್ತಿಭಾವದಿಂದ ಗಣೇಶನನ್ನು ಸ್ವಾಗತಿಸಿದರು. ಈ ಬಾರಿಯ ಗಣೇಶೋತ್ಸವವನ್ನು ಮತ್ತಷ್ಟು ಅದ್ದೂರಿಯಾಗಿ ಆಚರಿಸಲು ಬೆಳಗಾವಿ ನಗರವು ಈಗಾಗಲೇ ಸಜ್ಜಾಗಿದೆ.
- Sahadev Mane
- Updated on: Sep 5, 2026
- 9:42 am
ಗಣೇಶ ಹಬ್ಬದ ವೇಳೆ ಸಕ್ಕರೆ ಲಭ್ಯತೆ, ಬೆಲೆ ಸ್ಥಿರತೆಗೆ ಕೇಂದ್ರ ಕಟ್ಟುನಿಟ್ಟಿನ ಕ್ರಮ, ಜೋಶಿ ತೀವ್ರ ನಿಗಾ
ದೇಶೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಸಕ್ಕರೆ ಬೆಲೆ ತೀವ್ರ ಏರಿಕೆಯಾಗಿದೆ. ಹಬ್ಬಗಳ ಸರಣಿ ಬಂದಾಗಲೇ ಈ ಹಠಾತ್ ಏರಿಕೆ ಆಗಿರುವುದರಿಂದ ಮಧ್ಯಮ ವರ್ಗ ಮತ್ತು ಬಡ ಜನರ ಮೇಲೆ ಪರಿಣಾಮ ಬೀರಿದೆ. ಮಾರುಕಟ್ಟೆಗೆ ಹೋದರೆ ವ್ಯಾಪಾರಿಗಳು “ಬೆಲೆ ಹೆಚ್ಚಾಗಿದೆ, ಇನ್ನೂ ಹೆಚ್ಚಾಗಬಹುದು” ಎಂದು ಹೇಳುತ್ತಿದ್ದು, ಗ್ರಾಹಕರು ಪೇಚುಮೋರೆ ಹಾಕುವಂತಾಗಿದೆ. ಇನ್ನು ಗಣೇಶ ಹಬ್ಬದ ವೇಳೆ ಸಕ್ಕರೆ ಲಭ್ಯತೆ, ಬೆಲೆ ಸ್ಥಿರತೆಗೆ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಕ್ರಮಕೈಗೊಂಡಿದೆ.
- Sanjayya Chikkamath
- Updated on: Sep 1, 2026
- 9:36 pm
ಮನೆಯಲ್ಲೇ ಪರಿಸರ ಸ್ನೇಹಿ ಮಣ್ಣಿನ ಗಣಪತಿ ತಯಾರಿಸುವುದು ಹೇಗೆ? ಧಾರವಾಡದಲ್ಲೊಂದು ಮಾದರಿ ಕಾರ್ಯಾಗಾರ
Eco-Friendly Ganesha: ಪಿಒಪಿ ಗಣೇಶ ವಿಗ್ರಹಗಳಿಂದ ಪರಿಸರ ಮಾಲಿನ್ಯ ಹೆಚ್ಚಾಗುತ್ತಿರುವ ಕಾರಣ, ಕೆಲವ ಸಂಸ್ಥೆಗಳಿಂದ ಮನೆಗಳಲ್ಲಿಯೇ ಪರಿಸರ ಸ್ನೇಹಿ ಮಣ್ಣಿನ ಗಣೇಶ ವಿಗ್ರಹಗಳನ್ನು ಹೇಗೆ ತಯಾರಿಸಬೇಕು ಎಂಬ ಕಾರ್ಯಾಗಾರವನ್ನು ಧಾರವಾಡದಲ್ಲಿ ಹಮ್ಮಿಕೊಳ್ಳಲಾಗಿದೆ. ಜನರು ಕೂಡ ಅಷ್ಟೇ ಆಸಕ್ತಿಯಿಂದ ಭಾಗಿಯಾಗಿದ್ದರು. ಇಲ್ಲಿವೆ ನೋಡಿ ಫೋಟೋಸ್.
- Narasimha Murti Pyati
- Updated on: Aug 22, 2026
- 6:38 pm
ಪಿಓಪಿ ಗಣೇಶ ಮೂರ್ತಿ ನಿಷೇಧ, ಶಬ್ಧ ಮಾಲೀನ್ಯಕ್ಕೂ ಅವಕಾಶವಿಲ್ಲ: ಈಶ್ವರ್ ಖಂಡ್ರೆ ಸೂಚನೆ
ಇದೇ ಸೆಪ್ಟೆಂಬರ್ 14ರಂದು ಗಣೇಶ ಚತುರ್ಥಿ ಹಬ್ಬವಿದ್ದು, ಹಿಂದೂ ಧರ್ಮದಲ್ಲಿ ಜನಪ್ರಿಯ ಹಬ್ಬವಾಗಿದೆ. ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸುತ್ತಾರೆ. ಆದ್ರೆ, ಸಾರ್ವಜನಿಕ ಗಣೇಶ ಮೂರ್ತಿ ಸ್ಥಾಪನೆಗೆ ರಾಜ್ಯ ಸರ್ಕಾರ ಕೆಲವೊಂದಿಷ್ಟು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಈ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ್ ಖಂಡ್ರೆ ಖಡಕ್ ಸೂಚನೆಗಳನ್ನು ನೀಡಿದ್ದಾರೆ.
- Ramesh B Jawalagera
- Updated on: Aug 6, 2026
- 6:12 pm
ಬೆಂಗಳೂರಿಗೆ ಪಿಒಪಿ ಗಣೇಶ ಮೂರ್ತಿಗಳ ಎಂಟ್ರಿ: ಪ್ರಧಾನಿ ಮೋದಿ ಕರೆಗೂ ಇಲ್ಲ ಬೆಲೆ!
POP Ganesha Idols: ಸದ್ಯ ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದೆ. ಪ್ರಧಾನಿ ಮೋದಿ ಅವರು ಪರಿಸರ ಸ್ನೇಹಿ ಗಣೇಶ ಬಳಕೆಗೆ ಕರೆ ನೀಡಿದ್ದರು. ಇನ್ನು ಇತ್ತೀಚೆಗೆ ಮಾಜಿ ಸಚಿವ ಸುರೇಶ್ ಕುಮಾರ್ ಪಿಒಪಿ ಮೂರ್ತಿಗಳಿಗೆ ಕಡಿವಾಣ ಹಾಕುವಂತೆ ಒತ್ತಾಯಿಸಿದ್ದರು. ಇದೆಲ್ಲದರ ಮಧ್ಯೆ ಇದೀಗ ಬೆಂಗಳೂರು ಮಾರುಕಟ್ಟೆಗೆ POP ಗಣೇಶ ಮೂರ್ತಿಗಳು ಲಗ್ಗೆ ಇಟ್ಟಿವೆ.
- Vinay Kashappanavar
- Updated on: Jul 22, 2026
- 7:12 pm
ಬೆಂಗಳೂರು: ಗಣೇಶೋತ್ಸವ ಮೆರವಣಿಗೆ ವೇಳೆ ಹೂಹಾರ ಹಾಕಿ ಭಾವೈಕ್ಯತೆ ಮೆರೆದ ಮುಸ್ಲಿಮರು!
ಕೆಆರ್ ಪುರಂನ ದೇವಸಂದ್ರದ ಗಣೇಶ ವಿಸರ್ಜನೆಯ ವೇಳೆ ಸ್ಥಳೀಯ ಮುಸಲ್ಮಾನರು ಹೂ ಹಾರ ಹಾಕಿ ಸಂಭ್ರಮಿಸಿದ್ದಾರೆ. ಅಷ್ಟೇ ಅಲ್ಲದೇ ಶ್ರೀ ವಿನಾಯಕ ಗೆಳೆಯರ ಬಳಗದಿಂದ ನಡೆದ ಗಣಪತಿ ಉತ್ಸವದ ಮೆರವಣಿಗೆಯಲ್ಲಿ ಭಾಗವಹಿಸಿದ ಜನರಿಗೆ ತಂಪು ಪಾನೀಯ ವಿತರಿಸುವ ಮೂಲಕ ಹಿಂದೂ-ಮುಸ್ಲಿಮ್ ಬಾಂಧವ್ಯವನ್ನು ತೋರಿಸಿಕೊಟ್ಟಿದ್ದಾರೆ.
- Bhavana Hegde
- Updated on: Sep 16, 2025
- 5:43 pm
ಅಬ್ಬಬ್ಬಾ..! ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಏನ್ ಜನ ಗುರು
ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದ ಬೈಪಾಸ್ ವಿದ್ಯಾಗಣಪತಿ ಗೆಳೆಯರು ಬಳಗ ಪ್ರತಿಷ್ಠಪನೆ ಮಾಡಿದ್ದ 22 ಅಡಿ ವಿಶೇಷ ಗಣೇಶ ವಿಸರ್ಜನೆ ಮೆರವಣಿಗೆ ನಡೆಯುತ್ತಿದ್ದು, ಮೆರವಣಿಗೆಯಲ್ಲಿ ಭಾರೀ ಜನ ಸಮೂಹ ಸೇರಿದೆ. ನಗರದ ನಗರ ಪೊಲೀಸ್ ಠಾಣೆ, ಗೌರಿಬಿದನೂರು ನಗರದ ಎಂಜಿ ವೃತ್ತ, ಅಂಬೇಡರ್ ಸರ್ಕಲ್,. ನಾಗಯ್ಯರೆಡ್ಡಿ ಸರ್ಕಲ್, ನ್ಯಾಷನಲ್ ಕಾಲೇಜು ರಸ್ತೆ ಮೂಲಕ ಗಣೇಶನ ಮೆರವಣಿಗೆ ಸಾಗಿದ್ದು, ಸಾವಿರರಾರು ಯುವಕ ಯುವತಿಯರು ಡಿ.ಜೆ ಹಾಡಿಗೆ ಭರ್ಜರಿ ಡ್ಯಾನ್ಸ್ ಮಾಡಿದರು.
- Ramesh B Jawalagera
- Updated on: Sep 14, 2025
- 6:43 pm
ಸಾವಿರಾರು ಜನರಿದ್ದ ಗಣೇಶ ಮೆರವಣಿಗೆಗೆ ಯಮನಂತೆ ನುಗ್ಗಿದ ಟ್ರಕ್: ಭಯಾನಕ ವಿಡಿಯೋ ಇಲ್ಲಿದೆ
ಹಾಸನ ತಾಲ್ಲೂಕಿನ ಮೊಸಳೆಹೊಸಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 373ರಲ್ಲಿ ಭೀಕರ ದುರಂತ ಸಂಭವಿಸಿದೆ. ಮೊಸಳೆಹೊಸಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 373ರಲ್ಲಿ ಒಂದು ಬದಿಯಲ್ಲಿ ಗಣೇಶ ಮೆರವಣಿಗೆ ಹೋಗುತ್ತಿದ್ದು, ಈ ವೇಳೆ ಟ್ರಂಕ್ ವೊಂದು ಯಮನಂತೆ ಬಂದು ಸಾವಿರಾರರು ಜನರಿದ್ದ ಮೆರಣಿಗೆಗೆ ನುಗ್ಗಿದೆ. ಪರಿಣಾಮ ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದ್ದು, ಗಾಯಗೊಂಡರಿಗೆ ಚಿಕಿತ್ಸೆ ಮುಂದುರೆದಿದೆ.
- Ramesh B Jawalagera
- Updated on: Sep 12, 2025
- 10:31 pm
ಹಾಸನದಲ್ಲಿ ಘೋರ ದುರಂತ: ಗಣಪತಿ ಮೆರವಣಿಗೆ ವೇಳೆ ಜನರ ಮೇಲೆ ಹರಿದ ಟ್ರಕ್, ಸಾವಿನ ಸಂಖ್ಯೆ 8ಕ್ಕೆ ಏರಿಕೆ
ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಯುವಕರು ಸೇರಿಕೊಂಡು ಗಣೇಶ ಪ್ರತಿಷ್ಠಾಪನೆ ಮಾಡಿದ್ದು, ಇಂದು ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಅದ್ಧೂರಿಯಾಗಿ ನಡೆದಿತ್ತು. ಆದ್ರೆ, ಈ ವೇಳೆ ಘೋರ ದುರಂತವೊಂದು ಸಂಭವಿಸಿದ್ದು, ಮೆರವಣಿಗೆ ವೇಳೆ ಜನರ ಮೇಲೆ ಏಕಾಏಕಿ ಟ್ರಕ್ ಹರಿದಿದೆ. ಪರಿಣಾಮ ಸಾವಿನ ಸಂಖ್ಯೆ 8ಕ್ಕೆ ಏರಿಯಾಗಿದೆ.
- Manjunath KB
- Updated on: Sep 12, 2025
- 11:07 pm
ಚಿತ್ರದುರ್ಗ ಹಿಂದೂ ಮಹಾಗಣಪತಿಯ ಡಿಜೆ ಜಪ್ತಿ, ಡೀಸೆಲ್ ಟ್ಯಾಂಕಿಗೆ ನೀರು ಸುರಿದ್ರಾ ಪೊಲೀಸ್ರು?
ಕೋಟೆನಾಡು ಚಿತ್ರದುರ್ಗದ ಹಿಂದೂ ಮಹಾಗಣತಿಯ ಶೋಭಾಯಾತ್ರೆ ನಾಳೆ(ಸೆ.13) ನಡೆಯಲಿದೆ.ಹೀಗಾಗಿ ನಗರ ಮದುವಣಗಿತ್ತಿಯಂತೆ ಸಿಂಗಾರಗೊಂಡಿದ್ದು, ಫುಲ್ ಕೇಸರಿಮಯವಾಗಿದೆ. ಹಾಗೇ ಬೀದಿ ಬೀದಿಯಲ್ಲಿ ದೀಪಾಲಂಕಾರ ಕಂಗೊಳಿಸುತ್ತಿದೆ. ಆದ್ರೆ, ಗಣೇಶ ವಿಸರ್ಜನೆಗೆ ಮೆರಗು ನೀಡುವ ಡಿಜೆಯನ್ನೇ ಪೊಲೀಸರು ಜಪ್ತಿ ಮಾಡಿದ್ದಾರೆ. ಹೌದು...ಗಣೇಶ ಶೋಭಾಯಾತ್ರೆಗೆಂದು ತರಲಾಗಿದ್ದ ಡಿಜೆಯನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಸೀಜ್ ಮಾಡಿದ್ದಾರೆ. ಅಲ್ಲದೇ ಡಿಜೆ ವಾಹನದ ಡೀಸೆಲ್ ಟ್ಯಾಂಕ್ ಗೆ ನೀರು ಸುರಿದು ಆನ್ ಆಗದಂತೆ ಮಾಡಿದ್ದಾರ ಎಂದು ಮ್ಯಾನೇಜರ್ ಹಾಗೂ ಚಾಲಕ ಆರೋಪ ಮಾಡಿದ್ದಾರೆ.
- Ramesh B Jawalagera
- Updated on: Sep 12, 2025
- 6:13 pm
ಮದ್ದೂರು ಗಲಭೆ: ಕಲ್ಲು ತೂರಿದ ಸ್ಥಳದಲ್ಲೇ ಹಿಂದೂ ಕಾರ್ಯಕರ್ತರ ಅಬ್ಬರ ಹೇಗಿದೆ ನೋಡಿ
ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದ ಬಳಿಕ ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಬೂದಿ ಮುಚ್ಚಿದ ಕೆಂಡಂತಿದ್ದು, ಇದಕ್ಕೆ ಪ್ರತಿಯಾಗಿ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರು ಸಾಮೂಹಿಕ ಗಣೇಶ ವಿಸರ್ಜನೆ ಮೆರವಣಿಗೆ ನಡೆಸಿದ್ದಾರೆ. ಸದ್ಯ ಮೆರವಣಿಗೆ ಮೊನ್ನೆ ಕಲ್ಲು ತೂರಿದ್ದ ಮದ್ದೂರಿನ ಕೆಮ್ಮಣ್ಣು ನಾಲೆ ಸರ್ಕಲ್ ನಲ್ಲಿರುವ ಜಾಮಿಯಾ ಮಸೀದಿ ಬಳಿ ಬಂದಿದ್ದು, ಹಿಂದೂ ಕಾರ್ಯಕರ್ತರು ಕೈಯಲ್ಲಿ ಕೇಸರಿ ಹಾಗೂ ಕನ್ನಡದ ಧ್ವಜ ಹಿಡಿದ ಡಿಜೆ ಸಾಂಗ್ ಗೆ ಕುಣಿದು ಕುಪ್ಪಳಿಸಿದರು.
- Ramesh B Jawalagera
- Updated on: Sep 10, 2025
- 4:44 pm