AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gilli Nata

Gilli Nata

ಗಿಲ್ಲಿ ನಟ ಅವರು ಕನ್ನಡ ಚಿತ್ರರಂಗದ ಹಾಸ್ಯ ನಟ. ಹಲವು ರಿಯಾಲಿಟಿ ಶೋಗಳನ್ನು ಅವರು ಮಾಡಿದ್ದಾರೆ. ಈಗ ‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಮೂಲಕ ಅಪಾರ ಜನಪ್ರಿಯತೆಯನ್ನು ಅವರು ಪಡೆದುಕೊಂಡಿದ್ದಾರೆ. ಗಿಲ್ಲಿ ನಟ ಅವರು ಮೂಲತಃ ಮಂಡ್ಯ ಜಿಲ್ಲೆಯ ಮಳವಳ್ಳಿ ಅವರು. ಸೆಟ್ ಬಾಯ್ ಆಗಿದ್ದ ಅವರು ನಂತರ ಬಣ್ಣದ ಲೋಕಕ್ಕೆ ಬಂದು ಮಿಂಚಿದರು. ಅವರು ಯೂಟ್ಯೂಬ್​​ನಲ್ಲಿ ವಿಡಿಯೋಗಳನ್ನು ಮಾಡಿ ಗಮನ ಸೆಳೆದಿದ್ದಾರೆ. ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’, ‘ಕಾಮಿಡಿ ಕಿಲಾಡಿಗಳು’ ರೀತಿಯ ಶೋಗಳಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಎಲ್ಲಾ ಶೋಗಳಲ್ಲಿ ಅವರು ರನ್ನರ್​​ ಅಪ್ ಸ್ಥಾನಕ್ಕೆ ಖುಷಿಪಟ್ಟುಕೊಂಡಿದ್ದಾರೆ. 2025ರ ಡಿಸೆಂಬರ್ 11ರಂದು ರಿಲೀಸ್ ಆದ ‘ಡೆವಿಲ್’ ಸಿನಿಮಾದಲ್ಲಿ ಅವರು ಅತಿಥಿ ಪಾತ್ರ ಮಾಡಿದ್ದರು. ಇನ್​​​ಸ್ಟಾಗ್ರಾಮ್​​​ನಲ್ಲಿ ಮಿಲಿಯನ್​​ಗೂ ಹೆಚ್ಚು ಫಾಲೋವರ್ಸ್ ಹೊಂದುವ ಮೂಲಕ ಹೊಸ ಸಾಧನೆ ಮಾಡಿದ್ದಾರೆ.

ಇನ್ನೂ ಹೆಚ್ಚು ಓದಿ

ಕಾವ್ಯಾನ ಮದುವೆ ಆಗಲ್ಲ: ಎಲ್ಲರ ಎದುರು ನೇರವಾಗಿ ಹೇಳಿದ ಗಿಲ್ಲಿ ನಟ

‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಇದ್ದಾಗ ಕಾವ್ಯಾ ಶೈವ ಮತ್ತು ಗಿಲ್ಲಿ ನಟ ಅವರು ಹೆಚ್ಚು ಕ್ಲೋಸ್ ಆಗಿದ್ದರು. ಮದುವೆ ವಿಷಯದಲ್ಲಿ ಗಿಲ್ಲಿ ಅವರು ಕಾವ್ಯಾನ ಆಗಾಗ ರೇಗಿಸುತ್ತಿದ್ದರು. ಬಿಗ್ ಬಾಸ್ ಶೋ ಮುಗಿದು ಹಲವು ದಿನಗಳು ಕಳೆದಿದ್ದರೂ ಕೂಡ ಜನರ ಕ್ರೇಜ್ ಕಡಿಮೆ ಆಗಿಲ್ಲ.

ಕನ್ನಡದಲ್ಲಿ ಪ್ರಾಪರ್ಟಿ ಕಾಮಿಡಿ ಮೊದಲು ಶುರು ಮಾಡಿದ್ದು ಗಿಲ್ಲಿ ಅಲ್ಲ, ಹಾಗಿದ್ರೆ?

ಬಿಗ್ ಬಾಸ್​​ಗಿಂತ ಮೊದಲು ಗಿಲ್ಲಿ ನಟ ಅವರು ಪ್ರಾಪರ್ಟಿ ಕಾಮಿಡಿ ಮಾಡುತ್ತಿದ್ದರು. ಅವರು ಜೀ ಕನ್ನಡದ ವೇದಿಕೆ ಮೇಲೆ ಅನೇಕ ಬಾರಿ ಪ್ರಾಪರ್ಟಿ ಕಾಮಿಡಿ ಮಾಡಿದ್ದರು. ಪ್ರಾಪರ್ಟಿ ಕಾಮಿಡಿ ಎಂದರೆ ಎರಡು ವಸ್ತುಗಳನ್ನು ಇಟ್ಟುಕೊಂಡು ಅಥವಾ ಎರಡು ಶಬ್ದ ಇಟ್ಟುಕೊಂಡು ಅದಕ್ಕೆ ಹೊಸ ಅರ್ಥವನ್ನು ನೀಡೋದು. ಈ ರೀತಿಯ ಕಾಮಿಡಿಯನ್ನು ಗಿಲ್ಲಿ ಸಾಕಷ್ಟು ಬಾರಿ ಮಾಡಿದ್ದಾರೆ.

Super Hit Review: ಗಿಲ್ಲಿ ‘ಸೂಪರ್ ಹಿಟ್’ ಜರ್ನಿಗೆ ಕಾಮಿಡಿ ಕಲಾವಿದರ ಸಾಥ್

ಯೂಟ್ಯೂಬ್ ಮೂಲಕ ಫೇಮಸ್ ಆದ ಗೌರವ್ ಶೆಟ್ಟಿ, ಗಿಲ್ಲಿ ನಟ ಅವರು ‘ಸೂಪರ್ ಹಿಟ್’ ಚಿತ್ರದಲ್ಲಿ ಅಭಿನಯಿಸಿದ್ದಾರೆ. ನಾಯಕಿಯಾಗಿ ಶ್ವೇತಾ ವಿ. ಕಾಣಿಸಿಕೊಂಡಿದ್ದಾರೆ. ಸಾಧು ಕೋಕಿಲ, ಪ್ರಮೋದ್ ಶೆಟ್ಟಿ ಮುಂತಾದ ಅನುಭವಿ ಕಲಾವಿದರು ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ. ‘ಸೂಪರ್ ಹಿಟ್’ ಸಿನಿಮಾದ ವಿಮರ್ಶೆ ಇಲ್ಲಿದೆ.

ರಘು ಅವಕಾಶವಾದಿನಾ? ಇನ್​​ಸ್ಟಾ ಅನ್​ಫಾಲೋ ಮಾಡಿದ ಹಿಂದಿನ ಕಾರಣ ಹೇಳಿದ ಗಿಲ್ಲಿ ನಟ

ಗಿಲ್ಲಿ ಅವರ ಮನಸ್ಸು ಹೇಗಿದೆ ಎಂಬುದನ್ನು ಮತ್ತೆ ಬಿಡಿಸಿ ಹೇಳಬೇಕಿಲ್ಲ. ಬಿಗ್ ಬಾಸ್ ಮನೆಯ ಒಳಗೆ ಇರಲಿ ಅಥವಾ ಹೊರಗೆ ಇರಲಿ ಅವರು ಎಂದಿಗೂ ಗಿಲ್ಲಿ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದು ಕಾಣಿಸಿಯೇ ಇಲ್ಲ. ಈಗಲೂ ಅವರು ಅದನ್ನು ಮುಂದುವರಿಸಿಕೊಂಡು ಬಂದಿದ್ದಾರೆ ಎಂದೇ ಹೇಳಬಹುದು. ಈಗ ಅನ್​​ಫಾಲೋ ಬಗ್ಗೆಯೂ ಅವರು ಜಾಗರೂಕವಾಗಿಯೇ ಮಾತನ್ನು ಆಡಿದ್ದಾರೆ.

ಮತ್ತೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಗಿಲ್ಲಿ ನಟ, ಅಶ್ವಿನಿ ಗೌಡ

‘ಬಿಗ್ ಬಾಸ್ ಕನ್ನಡ 12’ ರಿಯಾಲಿಟಿ ಶೋ ಮುಗಿದು ತಿಂಗಳು ಕಳೆದಿದ್ದರೂ ಸ್ಪರ್ಧಿಗಳ ಹವಾ ಕಮ್ಮಿಯಾಗಿಲ್ಲ. ಅನೇಕ ಕಾರ್ಯಕ್ರಮಗಳಿಗೆ ಅವರು ಅತಿಥಿಗಳಾಗಿ ತೆರಳುತ್ತಿದ್ದಾರೆ. ‘ಹಯಗ್ರೀವ’ ಚಿತ್ರದ ಟ್ರೇಲರ್ ಲಾಂಚ್ ಕಾರ್ಯಕ್ರಮ ಮಂಡ್ಯದಲ್ಲಿ ನಡೆದಿದೆ. ಆ ವೇದಿಕೆಯಲ್ಲಿ ಅಶ್ವಿನಿ ಗೌಡ, ಗಿಲ್ಲಿ ನಟ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ.

ಬಿಗ್ ಬಾಸ್ ಬಳಿಕ ಮುಂದಿನ ಪ್ರಾಜೆಕ್ಟ್ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಗಿಲ್ಲಿ ನಟ

ಬಿಗ್ ಬಾಸ್ ಕನ್ನಡ 12 ವಿನ್ನರ್ ಗಿಲ್ಲಿ ನಟ ಹವಾ ಮುಂದುವರಿದಿದೆ. ವಿವಿಧ ಉತ್ಸವಗಳಲ್ಲಿ ಕಾಣಿಸಿಕೊಂಡು ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಈಗ ಅವರ ಕಡೆಯಿಂದ ದೊಡ್ಡ ಅಪ್‌ಡೇಟ್: ಗಿಲ್ಲಿ ನಟ ಚೊಚ್ಚಲ ಸಿನಿಮಾ ನಿರ್ದೇಶನಕ್ಕೆ ಸಿದ್ಧರಾಗಿದ್ದಾರೆ! ಕಿರುಚಿತ್ರ ನಿರ್ದೇಶನದ ಅನುಭವ ಹೊಂದಿರುವ ಅವರು, ಕಥೆಯನ್ನು ಸಿದ್ಧಪಡಿಸಿದ್ದಾರೆ ಮತ್ತು ಶೀಘ್ರದಲ್ಲೇ ಸ್ಕ್ರಿಪ್ಟ್ ಬರೆಯಲಿದ್ದಾರೆ.

ಪುಟ್ಟ ಅಭಿಮಾನಿ ಕೊಟ್ಟ ಗಿಫ್ಟ್ ಸ್ವೀಕರಿಸಿದ ಗಿಲ್ಲಿ ನಟ

‘ಬಿಗ್ ಬಾಸ್’ ಪೂರ್ಣಗೊಳ್ಳುತ್ತಿದ್ದಂತೆ ಗಿಲ್ಲಿ ನಟ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಆಗುತ್ತಿದ್ದಾರೆ. ಈಗ ಅವರು ಹೊಸ ಕಾರ್ಯಕ್ರಮ ಒಂದರಲ್ಲಿ ಭಾಗಿ ಆಗಿದ್ದಾರೆ. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪುಟ್ಟ ಅಭಿಮಾನಿ ಕೊಟ್ಟ ಗಿಫ್ಟ್ ಸ್ವೀಕರಿಸಿದ್ದಾರೆ. ಈ ಗಿಫ್ಟ್​​ ನೋಡಿ ಅವರು ತುಂಬಾನೇ ಖುಷಿಪಟ್ಟರು ಎಂಬುದು ವಿಶೇಷ.

‘ಕನ್ನಡದಲ್ಲಿ ನಾಯಕ ನಟನ ಕೊರತೆಯನ್ನು ಕಡಿಮೆ ಮಾಡಿ’; ಗಿಲ್ಲಿಗೆ ಹಾರೈಸಿದ ಮುನಿರತ್ನ

ಕನ್ನಡ ಚಿತ್ರರಂಗದಲ್ಲಿ ನಾಯಕರ ಕೊರತೆ ಎದ್ದು ಕಾಣುತ್ತಿದೆ. ಕೆಲವರು ಪ್ಯಾನ್ ಇಂಡಿಯಾ ಸಿನಿಮಾಗಳತ್ತ ಹೊರಳಿದರೆ, ಇನ್ನು ಕೆಲವರು ಪ್ರಾಮಾಣಿಕ ಶ್ರಮ ಹಾಕುತ್ತಿದ್ದಾರೆ. ಈ ಮಧ್ಯೆ, ಯುವ ಪ್ರತಿಭೆ ಗಿಲ್ಲಿ ನಟ ದೊಡ್ಡ ಸ್ಟಾರ್ ಆಗಿ ಬೆಳೆಯಬೇಕು ಎಂದು ಶಾಸಕ ಮುನಿರತ್ನ ಆಶಿಸಿದ್ದಾರೆ. ಗಿಲ್ಲಿ ಅವರ ಪ್ರತಿಭೆಗೆ ಅವಕಾಶ ಸಿಗಬೇಕು, ಕನ್ನಡಕ್ಕೆ ಹೊಸ ಹೀರೋ ಸಿಗಬೇಕು ಎಂಬುದು ಅವರ ಕಳಕಳಿ.

ಅಶ್ವಿನಿ ಗೌಡ ವಿಷಯದಲ್ಲಿ ಗಿಲ್ಲಿ ಹೇಳಿದ್ದ ಆ ಮಾತು ನಿಜವೇ ಆಯ್ತು

ಬಿಗ್ ಬಾಸ್ ಕನ್ನಡ 12ರ ನಂತರವೂ ಅಶ್ವಿನಿ ಗೌಡ ಮತ್ತು ಚೈತ್ರಾ ಕುಂದಾಪುರ ಕಿತ್ತಾಟ ಮುಂದುವರಿದಿದೆ. ದೊಡ್ಮನೆಯಲ್ಲಿ ಆದ ಪರಚು ಗಾಯಗಳ ಬಗ್ಗೆ ಅಶ್ವಿನಿ ಈಗ ಚೈತ್ರಾ ಮೇಲೆ ಉದ್ದೇಶಪೂರ್ವಕ ಆರೋಪ ಮಾಡಿದ್ದಾರೆ. ಇದಕ್ಕೆ ಚೈತ್ರಾ ಆಟವನ್ನು ಆಟವಾಗಿಯೇ ನೋಡುತ್ತೇನೆ ಎಂದಿದ್ದಾರೆ. ಹೆಣ್ಣು ಮಕ್ಕಳು ಜಗಳ ಆರಂಭಿಸಿದರೆ ಮುಗಿಯದು ಎಂಬ ಗಿಲ್ಲಿ ಮಾತು ನಿಜವಾಗಿದೆ ಎಂದು ನೆಟ್ಟಿಗರು ಹೇಳುತ್ತಿದ್ದಾರೆ.

ಫೆಬ್ರವರಿ 14ರಂದು ‘ಕಲರ್ಸ್‌ ದೊಡ್ಮನೆ ಹಬ್ಬ’: ಸತತ 3 ಗಂಟೆಗಳ ಮನರಂಜನೆ

‘ಬಿಗ್ ಬಾಸ್‌ ಕನ್ನಡ ಸೀಸನ್‌ 12’ ಸ್ಪರ್ಧಿಗಳು ವೇದಿಕೆಯಲ್ಲಿ ತಮ್ಮಿಷ್ಟದ ಹಾಡಿಗೆ ನೃತ್ಯ ಮಾಡಿ ಸಂಭ್ರಮಿಸಿದ್ದಾರೆ. ಬಿಗ್‌ ಬಾಸ್‌ ದಿನಗಳನ್ನು ಮೆಲುಕು ಹಾಕಿದ್ದಾರೆ. ಹೊರ ಬಂದ ಮೇಲೆ ಸಿಕ್ಕ ಪ್ರತಿಕ್ರಿಯೆ ಹೇಗಿತ್ತು ಎಂಬುದನ್ನು ಹೇಳಿಕೊಂಡಿದ್ದಾರೆ. ಈ ಎಲ್ಲ ಮನರಂಜನೆಯ ರಸದೌತಣವನ್ನು ಸವಿಯಲು ‘ಕಲರ್ಸ್‌ ದೊಡ್ಮನೆ ಹಬ್ಬ’ ಕಾರ್ಯಕ್ರಮವನ್ನು ನೋಡಬೇಕು.

ಫೆ.27ಕ್ಕೆ ಗಿಲ್ಲಿ ಸಿನಿಮಾ ‘ಸೂಪರ್ ಹಿಟ್’ ರಿಲೀಸ್; ಈಗಲೇ ಬಂದಿದೆ ಒಟಿಟಿ ಡಿಮ್ಯಾಂಡ್

ಗಿಲ್ಲಿ ನಟ ಅವರು ಬಿಗ್ ಬಾಸ್ ಶೋಗೆ ಹೋಗುವುದಕ್ಕೂ ಮುನ್ನ ‘ಸೂಪರ್ ಹಿಟ್’ ಚಿತ್ರದಲ್ಲಿ ನಟಿಸಿದ್ದರು. ಈಗ ಅವರಿಗೆ ಅಪಾರ ಜನಪ್ರಿಯತೆ ಬಂದಿದ್ದು, ಈ ಸಿನಿಮಾ ಫೆಬ್ರವರಿ 27ರಂದು ರಿಲೀಸ್ ಆಗುತ್ತಿದೆ. ಇತ್ತೀಚೆಗೆ ‘ಸೂಪರ್ ಹಿಟ್’ ಸಿನಿಮಾದ ಸುದ್ದಿಗೋಷ್ಠಿ ನಡೆಯಿತು. ಚಿತ್ರತಂಡದವರು ಮಾಹಿತಿ ಹಂಚಿಕೊಂಡರು.

ದೊಡ್ಮನೆ ಹಬ್ಬದಲ್ಲಿ ಅಶ್ವಿನಿ ಗೌಡ ಸಿಕ್ಕಿದ್ರಾ? ಗಿಲ್ಲಿ ಉತ್ತರ ಏನು?

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಅಶ್ವಿನಿ ಗೌಡ ಹಾಗೂ ಗಿಲ್ಲಿ ಮಧ್ಯೆ ಸಾಕಷ್ಟು ಕಿರಿಕ್ ಆಗಿತ್ತು. ಈ ಕಿರಿಕ್​​ಗಳು ಮನೆಯಿಂದ ಹೊರ ಬಂದ ಬಳಿಕವೂ ಮುಂದುವರಿದವು. ಗಿಲ್ಲಿ ಹಾಗೂ ಅಶ್ವಿನಿ ಪರಸ್ಪರ ಕಿತ್ತಾಡಿಕೊಂಡಿದ್ದಾರೆ. ಈಗ ಸೋಶೀಯಲ್ ಮೀಡಿಯಾದಲ್ಲಿ ಆ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ.

ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್: JDS ಕಟ್ಟರ್ ಕಾರ್ಯಕರ್ತರೇ ಆರೋಪಿಗಳು!
ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್: JDS ಕಟ್ಟರ್ ಕಾರ್ಯಕರ್ತರೇ ಆರೋಪಿಗಳು!
'ಕೈ' ಟಿಕೆಟ್​​ ಸಿಗದಿದ್ರೆ BJPಯಿಂದ ಶಾಮನೂರು ಮೊಮ್ಮಗ ಸ್ಪರ್ಧೆ!: ಯತ್ನಾಳ್​
'ಕೈ' ಟಿಕೆಟ್​​ ಸಿಗದಿದ್ರೆ BJPಯಿಂದ ಶಾಮನೂರು ಮೊಮ್ಮಗ ಸ್ಪರ್ಧೆ!: ಯತ್ನಾಳ್​
ಇರಾನ್ ದಾಳಿಗೆ ಹೊತ್ತಿ ಉರಿದ ಕತಾರ್​ನ ಅತಿದೊಡ್ಡ ಎಲ್​ಎನ್​ಜಿ ಸ್ಥಾವರ
ಇರಾನ್ ದಾಳಿಗೆ ಹೊತ್ತಿ ಉರಿದ ಕತಾರ್​ನ ಅತಿದೊಡ್ಡ ಎಲ್​ಎನ್​ಜಿ ಸ್ಥಾವರ
ಸಿಎಂ ಹುದ್ದೆ ಖಾಲಿ ಇಲ್ಲ ಎಂಬ ವೇಣುಗೋಪಾಲ್​​ ಹೇಳಿಕೆಗೆ ಡಿಕೆಶಿ ಉತ್ತರ ನೋಡಿ
ಸಿಎಂ ಹುದ್ದೆ ಖಾಲಿ ಇಲ್ಲ ಎಂಬ ವೇಣುಗೋಪಾಲ್​​ ಹೇಳಿಕೆಗೆ ಡಿಕೆಶಿ ಉತ್ತರ ನೋಡಿ
ಸೊಸೆ ಕೈ ಮುರಿದಿದೆ ಕಷ್ಟವಾಗುತ್ತೆಂದು ರೊಟ್ಟಿ ಲಟ್ಟಿಸಿಕೊಟ್ಟ ಮಾವ
ಸೊಸೆ ಕೈ ಮುರಿದಿದೆ ಕಷ್ಟವಾಗುತ್ತೆಂದು ರೊಟ್ಟಿ ಲಟ್ಟಿಸಿಕೊಟ್ಟ ಮಾವ
ಯುಗಾದಿ ವರ್ಷ ಭವಿಷ್ಯ; ಈ ವರ್ಷ ಮೀನ ರಾಶಿಯವರಿಗೆ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ವರ್ಷ ಮೀನ ರಾಶಿಯವರಿಗೆ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ವರ್ಷ ಕುಂಭ ರಾಶಿಯವರಿಗೆ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ವರ್ಷ ಕುಂಭ ರಾಶಿಯವರಿಗೆ ಹೇಗಿರಲಿದೆ?
ರಂಜಾನ್ ಉಪವಾಸದ ಲಾಂಗ್ ಡ್ರೈವ್ ಹೆಸರಲ್ಲಿ ಬಂದು ಅಪಾಯಕಾರಿ ವ್ಹೀಲಿಂಗ್
ರಂಜಾನ್ ಉಪವಾಸದ ಲಾಂಗ್ ಡ್ರೈವ್ ಹೆಸರಲ್ಲಿ ಬಂದು ಅಪಾಯಕಾರಿ ವ್ಹೀಲಿಂಗ್
ಸೌದೆ ಒಲೆಯಲ್ಲಿ ಸಿದ್ಧವಾಗುತ್ತಿದೆ ಬಿಸಿ ಬಿಸಿ ಹೋಳಿಗೆ!
ಸೌದೆ ಒಲೆಯಲ್ಲಿ ಸಿದ್ಧವಾಗುತ್ತಿದೆ ಬಿಸಿ ಬಿಸಿ ಹೋಳಿಗೆ!
ಹರಿತವಾದ ಆಯುಧಗಳೊಂದಿಗೆ ಬಂದು ಪೊಲೀಸರನ್ನೇ ಹೆದರಿಸಿ ಓಡಿಸಿದ ಗೂಂಡಾಗಳು
ಹರಿತವಾದ ಆಯುಧಗಳೊಂದಿಗೆ ಬಂದು ಪೊಲೀಸರನ್ನೇ ಹೆದರಿಸಿ ಓಡಿಸಿದ ಗೂಂಡಾಗಳು