
Government School Reality Check
Government School Reality Check
ದನದ ಕೊಟ್ಟಿಗೆಯಂತಾಗಿದೆ ಚಟ್ನಳ್ಳಿ ಸರ್ಕಾರಿ ಶಾಲೆ, ಕಿಡಿಗೇಡಿಗಳು ರಾತ್ರಿ ಎಣ್ಣೆ ಪಾರ್ಟಿ ಮಾಡೋದು ಇಲ್ಲೇ
ಚಟ್ನಳ್ಳಿ ಗ್ರಾಮದಲ್ಲಿ ಸರ್ಕಾರಿ ಶಾಲೆಯ ಅವಧಿ ಮುಗಿದ ಮೇಲೂ ಸಹ ಕೋಣೆಗಳು ಓಪನ್ ಇರುತ್ತವೆ. ಹೀಗಾಗಿ ರಾತ್ರಿ ವೇಳೆ ಕುಡುಕರು ಎಣ್ಣೆ ಬಾಟಲ್ ಹಿಡಿದು ಎಂಟ್ರಿ ಕೊಡ್ತಾರಂತೆ. ಶಾಲಾ ಕೋಣೆಗಳಲ್ಲಿ ಕುಳಿತು ಎಣ್ಣೆ ಪಾರ್ಟಿ ಮಾಡಿ ಹೋಗುತ್ತಾರಂತೆ. ಕೆಲವೊಂದು ಬಾರಿ ಕುಡಿದ ನಶೆಯಲ್ಲಿ ಮಲ ಮೂತ್ರ ವಿಸರ್ಜನೆ ಮಾಡಿ ಹೋಗ್ತಾರಂತೆ. ಇನ್ನು ಶಾಲೆಯಲ್ಲಿ ಮಕ್ಕಳು ಬಿಸಿಯೂಟ ಸೇವನೆ ಮಾಡುವಾಗ ಹಂದಿಗಳು ನೇರ ಪ್ರವೇಶ ಮಾಡುತ್ತವೆ.
- Ameen Sab
- Updated on: Feb 6, 2024
- 6:41 pm
ದೇವನಹಳ್ಳಿ ಏರ್ಪೋರ್ಟ್ ಮಂಡಳಿಯಿಂದ ದತ್ತು: ಮುಗಿಲೆತ್ತರಕ್ಕೆ ಚಿಮ್ಮಿದ ಸರ್ಕಾರಿ ಶಾಲೆಯ ಸವಲತ್ತು
ಹೈಟೆಕ್ಕಾಗಿ ನಿರ್ಮಾಣಗೊಂಡಿರೋ ಸರ್ಕಾರಿ ಶಾಲಾ ಕಟ್ಟಡ. ಹೈಟೆಕ್ ಶಾಲೆಯಲ್ಲಿ ಟ್ಯಾಬ್ಗಳನ್ನು ಹಿಡಿದು ಕಲಿಕೆಯಲ್ಲಿ ನಿರತರಾಗಿರೋ ಬಡ ಮಕ್ಕಳು.. ಅಂದಹಾಗೆ ಇಂತಹ ಹೈಟೆಕ್ ಸರ್ಕಾರಿ ಶಾಲೆಯಿರೋದು ನಮ್ಮದೆ ಸಿಲಿಕಾನ್ ಸಿಟಿ ಹೊರವಲಯದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಅರದೇಶನಹಳ್ಳಿಯಲ್ಲಿ. ಕೆಂಪೇಗೌಡ ಏರ್ಪೋಟ್ ಆಡಳಿತ ಮಂಡಳಿ ಕೃಪಾಶೀರ್ವಾದದಿಂದ ಇದು ಕೈಗೂಡಿದೆ.
- Naveen Kumar
- Updated on: Feb 6, 2024
- 11:50 am
ಚಾಮರಾಜನಗರ: ಅಳಿವಿನಂಚಿನಲ್ಲಿರುವ ಶತಮಾನದ ಶಾಲೆಗೆ ಬೇಕಿದೆ ಸಹಾಯ ಹಸ್ತ
ಚಾಮರಾಜನಗರದಲ್ಲಿರುವ ಶತಮಾನ ಕಳೆದ ಶಾಲೆ ಅಳಿವಿನಂಚಿನಲ್ಲಿದೆ. ಸಾವಿರಾರು ಮಂದಿ ವಿದ್ಯಾರ್ಥಿಗಳು ಇದೆ ಶಾಲೆಯಲ್ಲಿ ವ್ಯಾಸಾಂಗ ಮಾಡಿ ಜೀವನ ಕಟ್ಟಿ ಕೊಂಡಿದ್ದಾರೆ. ಸಮಾಜದ ಉನ್ನತ ಸ್ಥಾನಕ್ಕೆರಿದ್ದಾರೆ. ಆದರೆ ಅಂತ ಶಾಲೆ ಪರಿಸ್ಥಿತಿ ಈಗ ಹೇಳ ತೀರದಂತಾಗಿದೆ. ಅಳವಿನಂಚಿನಲ್ಲಿರುವ ಈ ಸರ್ಕಾರಿ ಶತಮಾನದ ಶಾಲೆಗೆ ಈಗ ಸಹಾಯ ಹಸ್ತ ಬೇಕಿದೆ. ನಿದ್ದೆಯಲ್ಲಿ ಮುಳುಗಿರುವ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾಡಳಿತ ಎಚ್ಚೆತ್ತುಕೊಳ್ಳಬೇಕಿದೆ.
- Suraj Prasad SN
- Updated on: Jan 4, 2024
- 12:47 pm
ಯಾದಗಿರಿ ಸಮುದಾಯ ಭವನದಲ್ಲಿ ನಡೆಯುತ್ತಿದೆ ಶಾಲೆ, ಅಲ್ಲಿ ಕಾರ್ಯಕ್ರಮ ಇದ್ರೆ ಶಾಲೆಗೆ ರಜೆ! ಯಾಕೀ ದುರವಸ್ಥೆ?
ಯಾದಗಿರಿ ಸಮುದಾಯ ಭವನದಲ್ಲಿ ಕಾರ್ಯಕ್ರಮಗಳು ಇದ್ರೆ ಶಾಲೆಗೆ ರಜೆ ನೀಡಲಾಗುತ್ತೆ. ಶಾಲೆ ನಡೆದರೂ 1ನೇ ತರಗತಿ ಮಕ್ಕಳಿಗೆ ಪಾಠ ಹೇಳಿದ್ರು 5ನೇ ತರಗತಿ ಮಕ್ಕಳು ಪಾಠ ಕೇಳಬೇಕು. 3ನೇ ತರಗತಿ ಮಕ್ಕಳಿಗೆ ಪಾಠ ಮಾಡಿದ್ರೆ 2ನೇ ತರಗತಿ ಮಕ್ಕಳು ಪಾಠ ಕೇಳುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಒಬ್ಬರ ಮೇಲೆ ಒಬ್ಬರಂತೆ ಕುಳಿತುಕೊಂಡು ಸಂಬಂಧವಿಲ್ಲ ಪಾಠ ಕೇಳಬೇಕಾಗಿದೆ.
- Ameen Sab
- Updated on: Dec 23, 2023
- 1:20 pm
Tv9 Impact: ಟಿವಿ9 ವರದಿ ಬಳಿಕ ಚಿತ್ರಮಂದಿರದಲ್ಲಿ ನಡೆಯುತ್ತಿದ್ದ ವಸತಿ ಶಾಲೆಗೆ ಅಧಿಕಾರಿಗಳ ಭೇಟಿ
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ್ ಕೋಸಂಬೆ (Shashidhar Kosambe) ಅವರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಬಳ್ಳಾರಿಯ ಕುರುಗೋಡು ಪಟ್ಟಣದ ಸಿನಿಮಾ ಟಾಕೀಸ್'ನಲ್ಲಿ ನಡೆಯುತ್ತಿರುವ ಗಾಂಧಿತತ್ವ ಆಧಾರಿತ ವಸತಿ ಶಾಲೆಗೆ ಭೇಟಿ ನೀಡಿ ಸಮಸ್ಯೆ ಪರಿಶೀಲಿಸಿದರು. ಈ ವೇಳೆ ವಸತಿ ಶಾಲೆಯ ಮೂಲಭೂತ ಸಮಸ್ಯೆ ಕಂಡು ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು.
- Vinayak Badiger
- Updated on: Dec 21, 2023
- 10:23 am
ಮಧುಗಿರಿಯಲ್ಲಿ ನೂರಕ್ಕೂ ಹೆಚ್ಚು ಶಾಲೆಗಳು ದುಸ್ಥಿತಿಗೆ! ಸಚಿವ ರಾಜಣ್ಣ ಕ್ಷೇತ್ರದ ಗುರುವಡೇರಹಳ್ಳಿಯ ಶಾಲೆಗೆ ಹೋಗಲು ಮಕ್ಕಳು ಹಿಂದೇಟು
ತುಮಕೂರು ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಅಭಿಯಾನ ಮುಂದುವರೆದಿದ್ದು, ಬಹುತೇಕ ಹಲವು ಕಡೆ ಸರ್ಕಾರಿ ಶಾಲೆಗಳು ಸಂಪೂರ್ಣ ಅವ್ಯವಸ್ಥೆ ಶೀಥಲಾವ್ಯವಸ್ಥೆಗೊಂಡಿವೆ. ಈ ಪೈಕಿ ಸಹಕಾರಿ ಸಚಿವ ಕೆಎನ್ ರಾಜಣ್ಣ ಸ್ವಕ್ಷೇತ್ರದಲ್ಲಿರುವ ಮಧುಗಿರಿ ಪಟ್ಟಣದ ಗುರುವಡೇರಹಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯೂ ಒಂದು. ಈ ಶಾಲೆಯಲ್ಲಿ ಶಿಕ್ಷಕರು, ಮಕ್ಕಳು ಭಯದಲ್ಲೇ ದಿನಗಳನ್ನು ಕಳೆಯುತ್ತಿದ್ದಾರೆ. ಒಂದಷ್ಟು ಮಕ್ಕಳು ಶಾಲೆಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ.
- Mahesha E
- Updated on: Dec 21, 2023
- 9:28 am
ವಿದ್ಯಾರ್ಥಿಗಳ ಭವಿಷ್ಯದ ಜೊತೆ ಸರ್ಕಾರ ಚೆಲ್ಲಾಟ: ಆನೇಕಲ್ ಕಿತ್ತೂರು ರಾಣಿ ವಸತಿ ಶಾಲೆಯಲ್ಲಿ ಹೇಳೋರಿಲ್ಲ ಕೇಳೋರಿಲ್ಲ
ಆನೇಕಲ್ ಸಮೀಪದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಶಿಕ್ಷಕರ ಕೊರತೆ, ಮೂಲಭೂತ ಸೌಕರ್ಯಗಳ ಅವ್ಯವಸ್ಥೆ ಬಗ್ಗೆ 2 ವರ್ಷಗಳಿಂದ ವಿದ್ಯಾರ್ಥಿಗಳು ಮತ್ತು ಪೋಷಕರು ಶಾಲಾ ಪ್ರಾಂಶುಪಾಲರ ಗಮನಕ್ಕೆ ತಂದಿದ್ದರೂ ಯಾವುದೇ ಕ್ರಮವಹಿಸಿಲ್ಲ. ಹಾಗಾಗಿ ಇನ್ನಾದರೂ ವಿದ್ಯಾರ್ಥಿಗಳು, ಪೋಷಕರ ಆಗ್ರಹಕ್ಕೆ ಮನ್ನಣೆ ದೊರೆಯುತ್ತಾ ಎಂಬುದನ್ನು ಕಾದುನೋಡಬೇಕಿದೆ.
- Ramu Ram
- Updated on: Dec 20, 2023
- 2:28 pm
ಶಿಥಿಲಾವಸ್ಥೆಯಲ್ಲಿ ನರಳುತ್ತಿದೆ ಸರ್ಕಾರಿ ಶಾಲೆ; ಮೇಲ್ಛಾವಣಿ ಬೀಳುವ ಆತಂಕ, ಮೈದಾನದಲ್ಲಿ ಪಾಠ
ಬಳ್ಳಾರಿ ಜಿಲ್ಲೆ ಸಿರಗುಪ್ಪ ತಾಲೂಕಿನ ಹೆರಕಲ್ಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಕುಸಿದು ಅಲ್ಲಲ್ಲಿ ಸಿಮೆಂಟ್ ನೆಲಕ್ಕೆ ಬಿದ್ದಿದೆ. ಕಬ್ಬಿಣದ ರಾಡುಗಳು ಮೇಲ್ಛಾವಣಿಯಿಂದ ಕೆಳಗೆ ಜೋತು ಬಿದ್ದಿವೆ. ಇಂದೋ, ನಾಳೆಯೋ ಈ ಕಟ್ಟಡ ಬೀಳುವಂತಿದೆ. ಅವ್ಯವಸ್ಥೆಯ ಆಗರವಾಗಿರುವ ಹೆರಕಲ್ಲು ಗ್ರಾಮದ ಶಾಲೆಯ ಶಿಥಿಲಾವ್ಯವಸ್ಥೆ ಕಟ್ಟಡದಲ್ಲಿ 1 ರಿಂದ 8ನೇ ತರಗತಿ ವರಗೆ ಮಕ್ಕಳು ಓದುತ್ತಿದ್ದಾರೆ. ಸುಮಾರು 420ಕ್ಕೂ ಹೆಚ್ಚು ಮಕ್ಕಳಿದ್ದಾರೆ.
- Vinayak Badiger
- Updated on: Dec 20, 2023
- 11:30 am
ಬಳ್ಳಾರಿ: 27 ಕೋಟಿ ವೆಚ್ಚದ ಕಟ್ಟಡ ಇದ್ದರೂ ಎಪಿಎಂಸಿ ಗೋದಾಮಿನಲ್ಲಿ ವಸತಿ ಶಾಲೆ!
ಬಳ್ಳಾರಿಯ ಸಿರಗುಪ್ಪ ತಾಲೂಕಿನ ಕರೂರು ಗ್ರಾಮದಲ್ಲಿ ಒಟ್ಟು 230 ವಿದ್ಯಾರ್ಥಿಗಳನ್ನು ಹೊಂದಿರುವ ಅಂಬೇಡ್ಕರ್ ವಸತಿ ಶಾಲೆಯ ಮಕ್ಕಳು ಎಪಿಎಂಸಿ ಗೋದಾಮಿನಲ್ಲಿ ಪಾಠ ಕೇಳುವಂತಾಗಿದೆ. ಅಲ್ಲದೆ ಈ ಎಪಿಎಂಸಿ ಗೋದಾಮುಗಳು ಬೆಳಿಗ್ಗೆ ಪಾಠ ಕೇಳುವ ಶಾಲೆಗಳಾದ್ರೇ ಸಂಜೆ, ರಾತ್ರಿ ಮಕ್ಕಳ ವಸತಿ ಕೋಣೆಗಳಾಗುತ್ತವೆ. ಭತ್ತದ ರಾಶಿಯ ನಡುವೆಯೇ ಇಲ್ಲಿಯ ವಿದ್ಯಾರ್ಥಿಗಳು ವಿಧ್ಯಾಭ್ಯಾಸ ಮಾಡುತ್ತಿದ್ಧಾರೆ. ಭತ್ತದ ರಾಶಿಗಳಿಂದ ಬರುವ ಧೂಳು, ಕಸ, ಜನ ಜಂಗುಳಿಯ ನಡುವೆ ಊಟ, ಆಟ, ಪಾಠ, ಕಲಿಕೆ ನಡೆಯುತ್ತಿದೆ.
- Vinayak Badiger
- Updated on: Dec 20, 2023
- 12:10 pm