GBA
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಇದರ ಆಡಳಿತವನ್ನು ಪುನರ್ ರಚಿಸಿ ಕರ್ನಾಟಕ ಸರ್ಕಾರ 2025ರ ಸೆಪ್ಟೆಂಬರ್ 2 ರಿಂದ ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ಆಡಳಿತ ಜಾರಿಗೊಳಿಸಿದೆ. ಗ್ರೇಟರ್ ಬೆಂಗಳೂರು ಅಥಾರಿಟಿ ಅಡಿ ಐದು ಹೊಸ ಪಾಲಿಕೆಗಳನ್ನು ರಚನೆ ಮಾಡಲಾಗಿದ್ದು, ಬಿಬಿಎಂಪಿಯ ಮುಖ್ಯ ಕಚೇರಿ ಗ್ರೇಟರ್ ಬೆಂಗಳೂರು ಅಥಾರಿಟಿ ಪ್ರಧಾನ ಕಚೇರಿಯಾಗಿ ಬದಲಾಗಿದೆ. ಉಳಿದಂತೆ ಐದು ಭಾಗಗಳಾಗಿ ಗುರುತಿಸಲಾಗಿದ್ದು ಕೇಂದ್ರ, ಬೆಂಗಳೂರು ಪೂರ್ವ, ಬೆಂಗಳೂರು ಪಶ್ಚಿಮ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ನಗರಗಳಾಗಿ ವಿಭಜಿಸಲಾಗಿದೆ. ಐಎಎಸ್, ಐಪಿಎಸ್ ಹುದ್ದೆಗಳನ್ನು ಗ್ರೇಟರ್ ಬೆಂಗಳೂರು ಅಥಾರಿಟಿಯ ಸ್ವರೂಪಕ್ಕೆ ತಕ್ಕಂತೆ ಹಂಚಿಕೆ ಮಾಡಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ರಚನೆ ಮಾಡಲಾಗಿದ್ದು ಇದಕ್ಕೆ ಮುಖ್ಯಮಂತ್ರಿಗಳು ಅಧ್ಯಕ್ಷರಾಗಿ, ಬೆಂಗಳೂರು ನಗರಾಭಿವೃದ್ಧಿ ಸಚಿವರು ಉಪಾಧ್ಯಕ್ಷರಾಗಿರುತ್ತಾರೆ. ಕೇಂದ್ರ ಹಣಕಾಸು ಸಚಿವರು ಸೇರಿ 73 ಮಂದಿಯನ್ನು ಪದನಿಮಿತ್ತ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಜಿಬಿಎ ಸದಸ್ಯರಾಗಿ ಬೆಂಗಳೂರಿನ ಮೂವರು ಸಂಸದರು, ಬೆಂಗಳೂರು ವ್ಯಾಪ್ತಿಯ ಶಾಸಕರನ್ನು ನೇಮಿಸಲಾಗಿದೆ.
ಮರ ಬಿದ್ದು ಸಾವು-ನೋವಿಗೆ ಬ್ರೇಕ್: ದುರ್ಬಲ ಮರಗಳ ಪತ್ತೆಗೆ ಮಾನವ ದೇಹದ ಸ್ಕ್ಯಾನಿಂಗ್ ಮಾದರಿ ತಂತ್ರಜ್ಞಾನಕ್ಕೆ ಜಿಬಿಎ ಮುಂದು!
ಬೆಂಗಳೂರಿನಲ್ಲಿ ಮಳೆ-ಗಾಳಿಗೆ ಮರಗಳು ಬಿದ್ದು ಸಂಭವಿಸುವ ಪ್ರಾಣಹಾನಿ ತಡೆಯಲು ಗ್ರೇಟರ್ ಬೆಂಗಳೂರು ಪ್ರಾಧಿಕಾರವು (GBA) ಮರ ವಿಜ್ಞಾನ ಸಂಸ್ಥೆಯೊಂದಿಗೆ ಸೇರಿ 4 ಕೋಟಿ ರೂ. ವೆಚ್ಚದಲ್ಲಿ 1,500 ಮರಗಳ ಒಳರಚನೆಯನ್ನು ಸ್ಕ್ಯಾನ್ ಮಾಡುವ ವಿಶೇಷ ಜಂಟಿ ಯೋಜನೆಗೆ ಸಿದ್ಧತೆ ಮಾಡಿದೆ. ಏನಿದು ಹೊಸ ಯೋಜನೆ? ಇದರಿಂದ ಜನರಿಗೆ ಏನು ಪ್ರಯೋಜನ ಎಂಬ ಮಾಹಿತಿ ಇಲ್ಲಿದೆ.
- Ganapathi Sharma
- Updated on: Jun 5, 2026
- 7:27 am
1ಕಿ.ಮೀ ಚಾಲೆಂಜ್ ಹಾಕಿ ಸಾರ್ವಜನಿಕರಿಂದ ಛೀಮಾರಿ ಹಾಕಿಸಿಕೊಂಡ ಜಿಬಿಎ!
ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ನಾಗರಿಕರಿಗೆ ಹೊಸ ಚಾಲೆಂಜ್ವೊಂದನ್ನ ನೀಡಿತ್ತು. 1 ಕಿಲೋ ಮೀಟರ್ ಚಾಲೆಂಜ್ ನೀಡಿ ಪಾದಾಚಾರಿ ಮಾರ್ಗಗಳನ್ನ ಬಳಸುವಂತೆ ಕರೆ ನೀಡಿತ್ತು. ಆದರೆ ಜಿಬಿಎ ಕೊಟ್ಟ ಈ ಬಿಟ್ಟಿ ಸಂದೇಶದ ಮೂಲಕ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ಹಾಗೂ ಟೀಕೆ ವ್ಯಕ್ತವಾಗಿದೆ. ಹಾಗಾದ್ರೆ, ಏನಿದು 1 ಕಿಲೋ ಮೀಟರ್ ಚಾಲೆಂಜ್? ನಾಗರಿಕರಿಂದ ಅಪಹಾಸ್ಯಕ್ಕೀಡಾಗಿದ್ಯಾಕೆ ಎನ್ನುವ ವಿವರ ಇಲ್ಲಿದೆ.
- Ramesh B Jawalagera
- Updated on: Jun 2, 2026
- 8:53 pm
GBA 1KmChallenge: ಬೆಂಗಳೂರಲ್ಲಿ ಮಾಲಿನ್ಯ ತಡೆಯಲು ಜಿಬಿಎ ಮಾಸ್ಟರ್ ಪ್ಲಾನ್; ಮೊದಲು ಫುಟ್ಪಾತ್ ಸರಿ ಮಾಡಿ ಎಂದ ಜನ!
ಸಿಲಿಕಾನ್ ಸಿಟಿಯಲ್ಲಿ ವಾಹನ ದಟ್ಟಣೆ ಹಾಗೂ ಮಾಲಿನ್ಯ ನಿಯಂತ್ರಿಸಲು ‘ಗ್ರೇಟರ್ ಬೆಂಗಳೂರು ಅಥಾರಿಟಿ’ (GBA) ಜೂನ್ ತಿಂಗಳಲ್ಲಿ '#1KmChallenge' ಅಭಿಯಾನ ಆರಂಭಿಸಿದೆ. ೧ ಕಿಲೋಮೀಟರ್ ದೂರದ ಸಂಚಾರಕ್ಕೆ ವಾಹನ ಬಿಟ್ಟು ನಡೆಯುವಂತೆ ಜನರಲ್ಲಿ ಮನವಿ ಮಾಡಲಾಗಿದೆ. ಆದರೆ, ನಗರದಲ್ಲಿ ಸರಿಯಾದ ಫುಟ್ಪಾತ್ ಹಾಗೂ ರಸ್ತೆಗಳಿಲ್ಲದ್ದಕ್ಕೆ ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
- Bhavana Hegde
- Updated on: Jun 2, 2026
- 8:58 am
ರೇಸ್ ಕೋರ್ಸ್ ರಸ್ತೆ ಕಾಮಗಾರಿ: 8 ತಿಂಗಳಾದರೂ ಮುಗಿಯದ ಕೆಲಸಕ್ಕೆ ಸಾರ್ವಜನಿಕರ ಹಿಡಿಶಾಪ!
ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿ ಜಿಬಿಎ ಮತ್ತು ಬಿಡಬ್ಲ್ಯೂಎಸ್ಎಸ್ಬಿ ನಡೆಸುತ್ತಿರುವ ರಸ್ತೆ ಕಾಮಗಾರಿ 8 ತಿಂಗಳಾದರೂ ಮುಗಿದಿಲ್ಲ. ಯಾವುದೇ ಸುರಕ್ಷತಾ ಬ್ಯಾರಿಕೇಡ್ ಅಥವಾ ಸೂಚನಾ ಫಲಕ ಇಲ್ಲದ ಕಾರಣ ನಿತ್ಯ ಅಪಘಾತಗಳು ಸಂಭವಿಸುತ್ತಿದ್ದು, ಸವಾರರು ನರಕಯಾತನೆ ಅನುಭವಿಸುತ್ತಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರ ಆಕ್ರೋಶ ಹೊರಹಾಕಿದ್ದಾರೆ.
- Bhavana Hegde
- Updated on: May 29, 2026
- 12:32 pm
ಬೆಂಗಳೂರಿನ ಟ್ರಾಫಿಕ್ ಕಿರಿಕಿರಿಗೆ ಮುಕ್ತಿ: 5 ಬೃಹತ್ ಫ್ಲೈಓವರ್ಗಳ ನಿರ್ಮಾಣಕ್ಕೆ ಜಿಬಿಎ ಅಧಿಕೃತ ಟೆಂಡರ್ ಆಹ್ವಾನ
ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಮುಕ್ತಿ ನೀಡಲು ಗ್ರೇಟರ್ ಬೆಂಗಳೂರು ಪ್ರಾಧಿಕಾರವು (GBA) ಮಿನರ್ವಾ ಸರ್ಕಲ್, ಯಲಹಂಕ ಮತ್ತು ಓಲ್ಡ್ ಮದ್ರಾಸ್ ರಸ್ತೆ ಸೇರಿದಂತೆ ನಗರದ 5 ಪ್ರಮುಖ ಜಂಕ್ಷನ್ಗಳಲ್ಲಿ ಹೊಸ ಫ್ಲೈಓವರ್ಗಳ ನಿರ್ಮಾಣಕ್ಕಾಗಿ ಅಧಿಕೃತ ಟೆಂಡರ್ ಆಹ್ವಾನಿಸಿದೆ. ಟೆಂಡರ್ ಪ್ರಕ್ರಿಯೆ ಬೆನ್ನಲ್ಲೇ ಹಂತ ಹಂತವಾಗಿ ಕಾಮಗಾರಿ ಆರಂಭವಾಗಲಿದೆ.
- Ganapathi Sharma
- Updated on: May 28, 2026
- 8:01 am
ಜಿಬಿಎ ಚುನಾವಣೆಗೆ ಸುಪ್ರೀಂಕೋರ್ಟ್ನಿಂದ ಹೊಸ ಡೆಡ್ಲೈನ್: ಈ ಹಿಂದೆ ನೀಡಿದ್ದ ಅವಧಿ ವಿಸ್ತರಣೆ
ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆಗೆ ಸುಪ್ರೀಂ ಕೋರ್ಟ್ ಆಗಸ್ಟ್ 31, 2026ರವರೆಗೆ ಹೊಸ ಗಡುವು ನೀಡಿದ್ದು, ರಾಜ್ಯ ಸರ್ಕಾರ ಮತ್ತು ಚುನಾವಣಾ ಆಯೋಗದ ಮನವಿ ಹಿನ್ನೆಲೆ ಈ ನಿರ್ಧಾರ ಕೈಗೊಂಡಿದೆ. ವಿಶೇಷ ಮತದಾರರ ಪರಿಶೀಲನೆ (SIR) ಕಾರ್ಯದ ಹಿನ್ನೆಲೆಯಲ್ಲಿ ಕಾಲಾವಕಾಶ ವಿಸ್ತರಣೆಗೆ ಸರ್ವೋಚ್ಚ ನ್ಯಾಯಾಲಯಕ್ಕೆ ಮನವಿ ಮಾಡಲಾಗಿತ್ತು.
- Prasanna Hegde
- Updated on: May 20, 2026
- 1:04 pm
ಮನೆ ಮೇಲೆ ಬಿದ್ದ ಬೃಹತ್ ಮರದ ಕೊಂಬೆ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆಯ ಮೇಲೆ ಬೃಹತ್ ಮರದ ಕೊಂಬೆ ಬಿದ್ದಿದ್ದು, ಆಚೆ ಬರಲಾಗದೇ ಮೂವರು ಮನೆಯೊಳಗೆ ಸಿಲುಕಿಕೊಂಡಿರುವ ಘಟನೆ ಬೆಂಗಳೂರಿನ ಪುಲಕೇಶಿ ನಗರ ಬಳಿಯ ಫ್ರೆಜರ್ಟೌನ್ನಲ್ಲಿ ನಡೆದಿದೆ. ಬೃಹತ್ ಮರದ ಕೊಂಬೆಯೊಂದು ಇಂದು (ಮೇ 19) ಬೆಳಗ್ಗೆ ಮನೆ ಮೇಲೆ ಬಿದ್ದಿದ್ದು, ಕೊಂಬೆ ಪೂರ್ತಿ ಮನೆಯನ್ನು ಆವರಿಸಿಕೊಂಡಿದೆ. ಇದರಿಂದ ಮನೆಯಿಂದ ಹೊರಗೆ ಬರಲು ಆಗದೆ ನಿವಾಸಿಗಳು ಹೆಣಗಾಡಿದ್ದಾರೆ. ಇದನ್ನು ಸ್ಥಳೀಯರು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಗಮನಕ್ಕೂ ತಂದರೂ ಸಹ ಅಧಿಕಾರಿಗಳು ಕ್ಯಾರೇ ಎನ್ನುತ್ತಿಲ್ಲ. GBA ಅರಣ್ಯ ವಿಭಾಗದ ಸಿಬ್ಬಂದಿ ಮರದ ಕೊಂಬೆ ತೆರವು ಮಾಡದೆ ಮೀನಾಮೇಷ ಎಣಿಸುತ್ತಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
- Ramesh B Jawalagera
- Updated on: May 19, 2026
- 5:14 pm
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು, ಎದುರಾದ ಆತಂಕವೇನು?
ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ಮಹಾನಗರ ಪಾಲಿಕೆಗಳ ಚುನಾವಣೆಗೆ ಮತ್ತಷ್ಟು ವಿಳಂಬ ಆಗುವ ಸಾಧ್ಯತೆ ದಟ್ಟವಾಗಿದೆ. ಚುನಾವಣೆ ಮುಂದೂಡಿಕೆಗೆ ಸಕಾರಣಗಳೊಂದಿಗೆ ಸುಪ್ರೀಂ ಕೋರ್ಟ್ ಮೊರೆ ಹೋಗಲು ರಾಜ್ಯ ಸರ್ಕಾರ ತಯಾರಿ ಮಾಡಿಕೊಂಡಿದೆ. ಇದರ ನಡುವೆ ಇದೀಗ ಕರ್ನಾಟಕದಲ್ಲೂ ಸಹ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆಗೆ ದಿನಾಂಕ ನಿಗದಿಯಾಗಿದೆ. ಹೀಗಾಗಿ ಜಿಬಿಎ ಚುನಾವಣೆಗೆ ಎಸ್ಐಆರ್ ಅಡ್ಡಿಯಾಗುವ ಆತಂಕ ಎದುರಾಗಿದೆ.
- Prasanna Gaonkar
- Updated on: May 14, 2026
- 7:04 pm
6ನೇ ಗ್ಯಾರಂಟಿ ಘೋಷಿಸಿದ ಡಿಕೆ ಶಿವಕುಮಾರ್, ಬೆಂಗಳೂರಿಗರಿಗೆ ಬಂಪರ್ ಗಿಫ್ಟ್!
ಇ-ಖಾತಾ, ನಂಬಿಕೆ ನಕ್ಷೆ ಸೇರಿ ಬೆಂಗಳೂರಿನ ಜನರಿಗಾಗಿ ಈಗಾಗಲೇ ಹಲವು ಯೋಜನೆಗಳನ್ನು ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿದೆ. ಅದರ ಜತೆಗೆ ಇದೀಗ ಬೆಂಗಳೂರಿಗೆ ಸೀಮಿತವಾಗಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು (ಇಂದು 13) 6ನೇ ಗ್ಯಾರಂಟಿ ಘೋಷಣೆ ಮಾಡಿದ್ದಾರೆ. ಏನದು 6ನೇ ಗ್ಯಾರಂಟಿ ಎನ್ನುವ ಡಿಟೇಲ್ಸ್ ಇಲ್ಲಿದೆ.
- Anil Kalkere
- Updated on: May 13, 2026
- 3:16 pm
ಬೆಂಗಳೂರಲ್ಲಿ ಬಲಿಗಾಗಿ ಕಾದಿವೆ ಅಪಾಯಕಾರಿ ಗೋಡೆಗಳು? ಜೋರು ಮಳೆ ಬಂದ್ರೆ ಕುಸಿಯುವುದು ಗ್ಯಾರಂಟಿ
ಬೆಂಗಳೂರಿನಲ್ಲಿ ಇತ್ತೀಚೆಗೆ ಭಾರೀ ಮಳೆಗೆ ಬೋರಿಂಗ್ ಆಸ್ಪತ್ರೆಯ ಗೋಡೆ ಕುಸಿದು ಎಂಟು ಜನರು ಸಾವನ್ನಪ್ಪಿದ್ದರು. ಈ ಬೆನ್ನಲ್ಲೇ ಅಲರ್ಟ್ ಆಗಿದ್ದ ಸರ್ಕಾರ ನಗರದಲ್ಲಿರುವ ಅಪಾಯಕಾರಿ ಗೋಡೆಗಳ ಪತ್ತೆಗೆ ಸೂಚಿಸಿತ್ತು. ಆದರೆ, ಈ ಸಮೀಕ್ಷೆಯೂ ಕಾಟಾಚಾರಕ್ಕೆ ಸೀಮಿತವಾಗಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಏಕೆಂದ್ರೆ ಗೋಡೆಗಳು ಕುಸಿಯುವ ಹಂತದಲ್ಲಿದ್ದರೂ ಅಧಿಕಾರಿಗಳು ಗಮನಹರಿಸುತ್ತಿಲ್ಲ ಎನ್ನಲಾಗುತ್ತಿದೆ.
- Gangadhar Saboji
- Updated on: May 9, 2026
- 10:27 pm
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್ ಯಾವಾಗ ಗೊತ್ತಾ?
ಬಹು ನಿರೀಕ್ಷಿತ ಗ್ರೇಟರ್ ಬೆಂಗಲೂರು ಪ್ರಾಧಿಕಾರದ ಪಾಲಿಕೆಗಳ ಚುನಾವಣೆಗೆ ಕೊನೆಗೂ ಮುಹೂರ್ತ ನಿಗದಿಯಾಗುವ ಲಕ್ಷಣಗಳು ಗೋಚರಿಸಿವೆ. ಈ ಸಂಬಂಧ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಸಂಗ್ರೇಶಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದ್ದು, ಚುನಾವಣೆ ಸಂಬಂಧ ದಿನಾಂಕ ನಿಗದಿ ಮಾತ್ರ ಬಾಕಿ ಉಳಿದಿದೆ. ಉಳಿದೆಲ್ಲಾ ಪ್ರಕ್ರಿಯೆ ಮುಗಿಸಿದ್ದೇವೆ ಎಂದು ಆಯುಕ್ತರು ಸಭೆ ಬಳಿಕ ತಿಳಿಸಿದ್ದಾರೆ. ಜೂನ್ 14 ರಿಂದ ಜೂನ್ 24ರ ಒಳಗಾಗಿ ಚುನಾವಣೆ ನಡೆಯಲಿದೆ ಎನ್ನಲಾಗಿದೆ.
- Prasanna Hegde
- Updated on: May 8, 2026
- 2:00 pm
ಬಿಡಿಎಗೆ ಸೇರಿದ 160 ಕೋಟಿ ರೂ. ಮೌಲ್ಯದ ಜಾಗ ಕಬಳಿಕೆ ಯತ್ನ: ಐವರ ವಿರುದ್ಧ ಎಫ್ಐಆರ್ ದಾಖಲು
ಬೆಂಗಳೂರಿನ ಕೊತ್ತನೂರಿನಲ್ಲಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ 160 ಕೋಟಿ ರೂ. ಮೌಲ್ಯದ ಜಾಗವನ್ನು ನಕಲಿ ದಾಖಲೆಗಳ ಮೂಲಕ ಕಬಳಿಸಲು ಯತ್ನಿಸಿದ ಆರೋಪದಲ್ಲಿ ಐವರ ವಿರುದ್ಧ ಶೇಷಾದ್ರಿಪುರಂ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬಿಡಿಎ ಅಧಿಕಾರಿಗಳ ತನಿಖೆಯಿಂದ ಈ ಬೃಹತ್ ಹಗರಣ ಬಯಲಿಗೆ ಬಂದಿದೆ.
- Ganapathi Sharma
- Updated on: May 2, 2026
- 12:35 pm