GBA
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಇದರ ಆಡಳಿತವನ್ನು ಪುನರ್ ರಚಿಸಿ ಕರ್ನಾಟಕ ಸರ್ಕಾರ 2025ರ ಸೆಪ್ಟೆಂಬರ್ 2 ರಿಂದ ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ಆಡಳಿತ ಜಾರಿಗೊಳಿಸಿದೆ. ಗ್ರೇಟರ್ ಬೆಂಗಳೂರು ಅಥಾರಿಟಿ ಅಡಿ ಐದು ಹೊಸ ಪಾಲಿಕೆಗಳನ್ನು ರಚನೆ ಮಾಡಲಾಗಿದ್ದು, ಬಿಬಿಎಂಪಿಯ ಮುಖ್ಯ ಕಚೇರಿ ಗ್ರೇಟರ್ ಬೆಂಗಳೂರು ಅಥಾರಿಟಿ ಪ್ರಧಾನ ಕಚೇರಿಯಾಗಿ ಬದಲಾಗಿದೆ. ಉಳಿದಂತೆ ಐದು ಭಾಗಗಳಾಗಿ ಗುರುತಿಸಲಾಗಿದ್ದು ಕೇಂದ್ರ, ಬೆಂಗಳೂರು ಪೂರ್ವ, ಬೆಂಗಳೂರು ಪಶ್ಚಿಮ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ನಗರಗಳಾಗಿ ವಿಭಜಿಸಲಾಗಿದೆ. ಐಎಎಸ್, ಐಪಿಎಸ್ ಹುದ್ದೆಗಳನ್ನು ಗ್ರೇಟರ್ ಬೆಂಗಳೂರು ಅಥಾರಿಟಿಯ ಸ್ವರೂಪಕ್ಕೆ ತಕ್ಕಂತೆ ಹಂಚಿಕೆ ಮಾಡಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ರಚನೆ ಮಾಡಲಾಗಿದ್ದು ಇದಕ್ಕೆ ಮುಖ್ಯಮಂತ್ರಿಗಳು ಅಧ್ಯಕ್ಷರಾಗಿ, ಬೆಂಗಳೂರು ನಗರಾಭಿವೃದ್ಧಿ ಸಚಿವರು ಉಪಾಧ್ಯಕ್ಷರಾಗಿರುತ್ತಾರೆ. ಕೇಂದ್ರ ಹಣಕಾಸು ಸಚಿವರು ಸೇರಿ 73 ಮಂದಿಯನ್ನು ಪದನಿಮಿತ್ತ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಜಿಬಿಎ ಸದಸ್ಯರಾಗಿ ಬೆಂಗಳೂರಿನ ಮೂವರು ಸಂಸದರು, ಬೆಂಗಳೂರು ವ್ಯಾಪ್ತಿಯ ಶಾಸಕರನ್ನು ನೇಮಿಸಲಾಗಿದೆ.
ವ್ಯಾಪಾರಿಗಳ ವಿರೋಧದ ನಡುವೆಯೂ ಫುಟ್ಪಾತ್ ಮಾಡುತ್ತಿರುವುದರ ಬಗ್ಗೆ ಕೃಷ್ಣಭೈರೇಗೌಡ ಖಡಕ್ ಮಾತು
ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ಸೂಚನೆ ಮೇರೆಗೆ ಜಿಬಿಎ ಅಧಿಕಾರಿಗಳು ಅಖಾಡಕ್ಕೆ ಇಳಿದಿದ್ದಾರೆ. ರಾಜಧಾನಿಯಲ್ಲಿ ಇಂದಿನಿಂದ ಒತ್ತುವರಿ ತೆರವು ಕಾರ್ಯಾಚರಣೆ ಶುರುವಾಗಿದೆ. ಜಿಬಿಎ ವ್ಯಾಪ್ತಿಯ ಎಲ್ಲಾ 5 ನಗರ ಪಾಲಿಕೆಗಳಲ್ಲಿ ಒತ್ತುವರಿ ತೆರವು ಕಾರ್ಯ ನಡೀತಿದೆ. ಫುಟ್ಪಾತ್ಗಳನ್ನು ಒತ್ತುವರಿ ಮಾಡಿಕೊಂಡು ವ್ಯಾಪಾರ ಮಾಡ್ತಿರುವವರು, ಹೋಟೆಲ್, ಕೆಫೆ, ಸಣ್ಣ ಪುಟ್ಟ ಅಂಗಡಿಗಳಿಗೆ ಅಧಿಕಾರಿಗಳು ಚುರುಕು ಮುಟ್ಟಿಸಿದ್ದಾರೆ. ಇನ್ನು ಕೆಲವವೆಡೆ ಹೈಡ್ರಾಮಾಗಳೇ ನಡೆದಿವೆ. ಫುಟ್ಪಾತ್ ತೆರವು ಮಾಡಲ್ಲ.ನೀವು ತೆಗೆದರೆ ಮತ್ತೆ ಇಲ್ಲೇ ವ್ಯಾಪಾರ ಮಾಡುತ್ತೇವೆ. ಈ ಜಾಗ ಬಿಟ್ಟು ಹೋಗಲ್ಲ ಎಂದು ಬೀದಿ ವ್ಯಾಪಾರಿಗಳು ಹಠಕ್ಕೆ ಬಿದ್ದಿದ್ದಾರೆ.
- Ramesh B Jawalagera
- Updated on: Jul 1, 2026
- 3:07 pm
ಬೆಂಗಳೂರಿನಲ್ಲಿ ಫುಟ್ಪಾತ್ ತೆರವು ಕಾರ್ಯಾಚರಣೆ: ಬೀದಿ ಬದಿ ವ್ಯಾಪಾರಿಗಳಿಂದ ತೀವ್ರ ಆಕ್ರೋಶ
ಬೆಂಗಳೂರಿನಲ್ಲಿ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ತೀವ್ರಗೊಂಡಿದೆ. ಆದರೆ, ಇದಕ್ಕೆ ಬೀದಿ ಬದಿ ವ್ಯಾಪಾರಿಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಿಬಿಎಂಪಿ ನೀಡಿದ್ದ ಗುರುತಿನ ಚೀಟಿಗಳಿದ್ದರೂ ತಮ್ಮನ್ನು ತೆರವು ಮಾಡಲಾಗುತ್ತಿದೆ. ಹಲವು ವರ್ಷಗಳಿಂದ ವ್ಯಾಪಾರ ನಡೆಸಿಕೊಂಡು ಜೀವನ ಸಾಗಿಸುತ್ತಿದ್ದವರು ಈಗ ನಿರ್ಗತಿಕರಾಗಿದ್ದಾರೆ. ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿದ್ದಾರೆ.
- Ganapathi Sharma
- Updated on: Jul 1, 2026
- 12:18 pm
ಬೆಂಗಳೂರಿನಲ್ಲಿ ಫುಟ್ಪಾತ್ ತೆರವು ಶುರು: ಜಯನಗರದ ಅಶೋಕ ಪಿಲ್ಲರ್ನಿಂದ ಫುಟ್ಪಾತ್ ತೆರವು ಕಾರ್ಯಾಚರಣೆ ಆರಂಭ
ಬೃಹತ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಬೆಂಗಳೂರಿನಲ್ಲಿ ವ್ಯಾಪಕ ಫುಟ್ಪಾತ್ ತೆರವು ಕಾರ್ಯಾಚರಣೆ ಆರಂಭಿಸಿದೆ. ಜಯನಗರದ ಅಶೋಕ ಪಿಲ್ಲರ್ನಿಂದ ಕಾರ್ಯಾಚರಣೆ ಪ್ರಾರಂಭವಾಗಿದ್ದು, ಪಾದಚಾರಿಗಳ ಅನುಕೂಲಕ್ಕಾಗಿ ಅಂಗಡಿಗಳು ಮತ್ತು ಕಟ್ಟಡ ಸಾಮಗ್ರಿಗಳ ಒತ್ತುವರಿಯನ್ನು ತೆರವುಗೊಳಿಸಲಾಗುತ್ತಿದೆ. ಈಗಿನ ಕಾರ್ಯಾಚರಣೆ ಬಗ್ಗೆ ಮುಂಚಿತವಾಗಿಯೇ ನೋಟಿಸ್ ನೀಡಲಾಗಿದ್ದು, ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲಾಗುತ್ತಿದೆ.
- Ganapathi Sharma
- Updated on: Jul 1, 2026
- 11:03 am
ಕಿವಿಯಲ್ಲಿ ದಾಸವಾಳ ಇಟ್ಟುಕೊಂಡು ಕೂತಿದ್ದೀನಾ?: ಜಿಬಿಎ ಸಭೆಯಲ್ಲಿ ಅಧಿಕಾರಿಗಳ ಮೇಲೆ ಸಚಿವ ಕೃಷ್ಣಭೈರೇಗೌಡ ಗರಂ
GBA Meeting: ಬೆಂಗಳೂರಿನಲ್ಲಿ ಬೀದಿ ನಾಯಿಗಳ ಸಂತಾನಹರಣ ಹಾಗೂ ಗಿಡ ನೆಡುವ ಯೋಜನೆ ಸಂಬಂಧ ಸಚಿವ ಕೃಷ್ಣಭೈರೇಗೌಡ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಂಕಿ-ಅಂಶಗಳಿಲ್ಲದೆ ಬಂದ ಅಧಿಕಾರಿಗಳ ವಿರುದ್ಧ ಸಚಿವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ನಾನೇನು ಕಿವಿಯಲ್ಲಿ ದಾಸವಾಳ ಇಟ್ಟುಕೊಂಡು ಕೂತಿದ್ದೀನಾ? ಎಂದು ಆಫೀಸರ್ಗಳ ಅಸಂಬದ್ಧ ಉತ್ತರಕ್ಕೆ ಕಿಡಿ ಕಾರಿರುವ ಪ್ರಸಂಗ ನಡೆದಿದೆ.
- Lakshmi Narasimha Swamy L
- Updated on: Jun 30, 2026
- 2:33 pm
ಬೆಂಗಳೂರಿಗರ ಬಗ್ಗೆ ಸಚಿವ ಕೃಷ್ಣಭೈರೇಗೌಡರ ಅಂತರಾಳದ ನುಡಿಗಳು
ಕೃಷ್ಣಭೈರೇಗೌಡರು ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇಲಾಖೆಯ ಕಾರ್ಯಗಳಿಗೆ ಚುರುಕು ಮುಟ್ಟಿಸಿದ್ದು, ಮೇಲಿಂದ ಮೇಲೆ ಅಧಿಕಾರಿಗಳ ಸಭೆ ನಡೆಸುತ್ತಿದ್ದಾರೆ. ಅಲ್ಲದೇ ಕಸ, ರಸ್ತೆ ಗುಂಡಿ ಹಾಗೂ ಬೆಂಗಳೂರಿನಲ್ಲಿ ನಡೆಯುತ್ತಿರುವ ಕಾಮಗಾರಿಗಳ ಕುರಿತು ಅಧಿಕಾರಿಗಳಿಗೆ ಕೆಲ ಕಟ್ಟು ನಿಟ್ಟಿನ ಸಲಹೆ ಸೂಚನೆಗಳನ್ನು ನೀಡುತ್ತಲೇ ಇದ್ದು, ಕೃಷ್ಣಭೈರೇಗೌಡ ಅವರ ಈ ಕಾರ್ಯಕ್ಕೆ ಜನ ಸಹ ಫಿದಾ ಆಗಿದ್ದಾರೆ. ಅಲ್ಲದೇ ಅವರ ಕಾರ್ಯವೈಖರಿಗಳ ಬಗ್ಗೆಯೂ ಸಾಮಾಜಿಕ ಜಾಲತಾಣಗಳಲ್ಲೂ ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ. ಇದಕ್ಕೆ ಸ್ವತಃ ಕೃಷ್ಣಭೈರೇಗೌಡ ಅವರು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
- Ramesh B Jawalagera
- Updated on: Jun 29, 2026
- 8:49 pm
ಜಿಬಿಎ ವ್ಯಾಪ್ತಿಯಲ್ಲಿ ಶೇ 76.32ರಷ್ಟು ಮ್ಯಾಪಿಂಗ್: ಬೆಂಗಳೂರಿನಲ್ಲಿ SIR ಪ್ರಕ್ರಿಯೆ ಬಗ್ಗೆ ಮಾಹಿತಿ ನೀಡಿದ ಆಯುಕ್ತರು
ರಾಜ್ಯಾದ್ಯಂತ ಜೂನ್ 30ರಿಂದ ಜುಲೈ 29ರವರೆಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ನಡೆಯಲಿದೆ. ಹೀಗಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲೂ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. 1.03 ಕೋಟಿ ಮತದಾರರನ್ನು ಮ್ಯಾಪಿಂಗ್ ಮಾಡಲಾಗಿದ್ದು, 76.32% ಪೂರ್ಣಗೊಂಡಿದೆ ಎಂದು ಮುಖ್ಯ ಆಯುಕ್ತ ಮಹೇಶ್ವರ ರಾವ್ ತಿಳಿಸಿದ್ದಾರೆ.
- Lakshmi Narasimha Swamy L
- Updated on: Jun 29, 2026
- 3:22 pm
ಬೆಂಗಳೂರು ಅಭಿವೃದ್ಧಿ ಪ್ಯಾಕೇಜ್ನಲ್ಲಿ ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೇ ಸಿಂಹಪಾಲು: ತಾರತಮ್ಯದ ಆರೋಪ ಮಾಡಿದ ಪ್ರತಿಪಕ್ಷ ಬಿಜೆಪಿ
ಬೆಂಗಳೂರು ಅಭಿವೃದ್ಧಿಗಾಗಿ ಬಿಡುಗಡೆಯಾಗಿರುವ ಒಟ್ಟು 2,000 ಕೋಟಿ ರೂ. ವಿಶೇಷ ಪ್ಯಾಕೇಜ್ನಲ್ಲಿ ಆಡಳಿತಾರೂಢ ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಸಿಂಹಪಾಲು ದೊರೆತಿದೆ. ಅತಿ ಹೆಚ್ಚು ಅನುದಾನ ಪಡೆದ ಮೊದಲ ನಾಲ್ಕು ಕ್ಷೇತ್ರಗಳು ‘ಕೈ’ ಪಾಳಯದ ಪಾಲಾಗಿದ್ದು, ಹಂಚಿಕೆಯಲ್ಲಿ ತಾರತಮ್ಯ ಎಸಗಲಾಗಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.
- Anil Kalkere
- Updated on: Jun 29, 2026
- 12:17 pm
Pulse Polio 2026: ಬೆಂಗಳೂರಿನಲ್ಲಿ ಪಲ್ಸ್ ಪೋಲಿಯೋ ಅಭಿಯಾನದ ಮೊದಲ ದಿನವೇ 11 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಲಸಿಕೆ!
ಬೆಂಗಳೂರಿನಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನದ ಮೊದಲ ದಿನವೇ ಐದು ವರ್ಷದೊಳಗಿನ 11 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಪೋಲಿಯೋ ಹನಿ ಹಾಕಲಾಗಿದ್ದು, ಶೇ 96.4 ರಷ್ಟು ಪ್ರಗತಿ ಸಾಧಿಸಲಾಗಿದೆ. ನಮ್ಮ ಕ್ಲಿನಿಕ್, ಅಂಗನವಾಡಿ ಹಾಗೂ ಸಾರಿಗೆ ಕೇಂದ್ರಗಳಲ್ಲಿ ಜೂನ್ 28 ರಂದು ನಡೆದ ಈ ಬೃಹತ್ ಲಸಿಕಾ ಕಾರ್ಯಕ್ರಮದ ವಲಯವಾರು ಸಂಪೂರ್ಣ ಮಾಹಿತಿ ಇಲ್ಲಿದೆ.
- Bhavana Hegde
- Updated on: Jun 29, 2026
- 8:54 am
ಆ್ಯಪ್ ಮೂಲಕ ಕಸ ಸಂಗ್ರಹಣೆ ವಾಹನಗಳ ಮೇಲೆ ನಿಗಾಕ್ಕೆ ಮುಂದಾದ ಜಿಬಿಎ: ಕಾರ್ಯನಿರ್ವಹಣೆ ಹೇಗೆ?
Waste Collection Vehicle Tracking: ಬೆಂಗಳೂರಿನಲ್ಲಿ ಕಸದ ಸಮಸ್ಯೆಗೆ ಬ್ರೇಕ್ ಹಾಕಲು ಜಿಬಿಎ ಮುಂದಾಗಿದ್ದು, ಕೋರಮಂಗಲದಲ್ಲಿ ಪ್ರಾಯೋಗಿಕವಾಗಿ ‘ಮಾತ್ರ’ (MATRA) ಆ್ಯಪ್ ಮೂಲಕ ಕಸ ಸಂಗ್ರಹಣೆ ವಾಹನಗಳ ಲೈವ್ ಟ್ರ್ಯಾಕಿಂಗ್ ಆರಂಭಿಸಿದೆ. ಕಸದ ವಾಹನಗಳ ಚಾಲಕರು ನಿಗದಿತ ಮಾರ್ಗ ತಪ್ಪಿಸಿದರೆ ಈ ಆ್ಯಪ್ ಮೂಲಕ ಅಧಿಕಾರಿಗಳು ತಿಳಿದುಕೊಳ್ಳಬಹುದಾಗಿದ್ದು, ಇನ್ನುಮುಂದೆ ಮನೆ ಮನೆಗಳಿಂದ ಕಸ ಸಂಗ್ರಹ ಸರಿಯಾಗಿ ನಡೆಯಬಹುದೆಂಬ ಹೊಸ ಆಶಾಭಾವನೆ ಮೂಡಿದೆ.
- Lakshmi Narasimha Swamy L
- Updated on: Jun 26, 2026
- 7:20 pm
ಸಿಗ್ನಲ್ ನಲ್ಲಿ ಯಾರಾದ್ರೂ ಹಂಪ್ ಮಾಡ್ತಾರೇನ್ರಿ? ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ (krishna byre gowda) ಅವರು ಪ್ರತಿದಿನ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದು, ಬೆಂಗಳೂರು ರಸ್ತೆಗಳ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾಯ್ತು. ಇದೀಗ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಜೊತೆಗೆ ಟ್ರಾಫಿಕ್ ಸಮಸ್ಯೆ ಬಗ್ಗೆ ಅಧಿಕಾರಿಗಳ ಜೊತೆ ಸಭೆ ಮಾಡಿದ್ದು, ಅವೈಜ್ಞಾನಿಕ ಕ್ರಮಗಳ ಮೂಲಕ ಟ್ರಾಫಿಕ್ ಸಮಸ್ಯೆ ಬಗ್ಗೆ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಇದೇ ವೇಳೆ ಸಿಗ್ನಲ್ ನಲ್ಲಿ ಯಾರಾದ್ರೂ ಹಂಪ್ ಮಾಡ್ತಾರೇನ್ರಿ? ಅಧಿಕಾರಿಗಳ ಮೇಲೆ ಗರಂ ಆಗಿದ್ದಾರೆ.
- Lakshmi Narasimha Swamy L
- Updated on: Jun 24, 2026
- 7:30 pm
ಫುಟ್ ಪಾತ್ ತೆರವಿಗೆ ದಿಟ್ಟ ಹೆಜ್ಜೆ: ತೊಂದ್ರೆ ಬಂದ್ರೆ ನಿಮ್ಮ ಬೆನ್ನಿಗೆ ನಾನಿದ್ದೇನೆ ಎಂದ ಕೃಷ್ಣ ಬೈರೇಗೌಡ
ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ಅವರು ಪ್ರತಿದಿನ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದು, ಬೆಂಗಳೂರು ರಸ್ತೆಗಳ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾಯ್ತು. ಇದೀಗ ಪಾದಚಾರಿ ಮಾರ್ಗಗಳ ಒತ್ತುವರಿ ತೆರವಿಗೆ ಮುಂದಾಗಿದ್ದು, ಈ ಸಂಬಂಧಅದರಂತೆ ಇಂದು (ಜೂನ್ 24) GBA ಮುಖ್ಯ ಆಯುಕ್ತರು, ನಗರ ಪಾಲಿಕೆಗಳ ಆಯುಕ್ತರು, ಜಂಟಿ ಆಯುಕ್ತರ ಸಭೆ ನಡೆಸಿದ್ದಾರೆ.
- Lakshmi Narasimha Swamy L
- Updated on: Jun 24, 2026
- 6:11 pm
ಇದಪ್ಪ ಕಠಿಣ ಕ್ರಮ ಅಂದ್ರೆ: ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಮೊದಲ ವಿಕೆಟ್ ಪತನ
ಡಿಕೆ ಶಿವಕುಮಾರ್ ಅವರು ಸಿಎಂ ಆಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆಯೇ ಅಧಿಕಾರಗಳ ಸಭೆ ನಡೆಸಿ ಭ್ರಷ್ಟಾಚಾರ ಮುಕ್ತ, ಪಾದರ್ಶಕ ಕಾರ್ಯ ಕೆಲಸದ ಬಗ್ಗೆ ಪಾಠ ಮಾಡಿದ್ದರು.ಇದರ ಮಧ್ಯೆ ರಾಜಧಾನಿ ಬೆಂಗಳೂರಿನಲ್ಲಿ ಅಧಿಕಾರಿಯೊಬ್ಬರ ಡಾಂಬರೀಕರಣ ಕಳ್ಳಾಟ ಬಯಲಿಗೆ ಬಂದಿದೆ. ಹಲವು ಗೊಂದಲಗಳ ನಡುವೆಯೇ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಿರುವ ಕೃಷ್ಣಬೈರೇಗೌಡ ಅವರು ಅಧಿಕಾರಿಯನ್ನು ಅಮಾನತು ಮಾಡಿದ್ದಾರೆ.
- Ramesh B Jawalagera
- Updated on: Jun 20, 2026
- 8:17 pm