GBA
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಇದರ ಆಡಳಿತವನ್ನು ಪುನರ್ ರಚಿಸಿ ಕರ್ನಾಟಕ ಸರ್ಕಾರ 2025ರ ಸೆಪ್ಟೆಂಬರ್ 2 ರಿಂದ ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ಆಡಳಿತ ಜಾರಿಗೊಳಿಸಿದೆ. ಗ್ರೇಟರ್ ಬೆಂಗಳೂರು ಅಥಾರಿಟಿ ಅಡಿ ಐದು ಹೊಸ ಪಾಲಿಕೆಗಳನ್ನು ರಚನೆ ಮಾಡಲಾಗಿದ್ದು, ಬಿಬಿಎಂಪಿಯ ಮುಖ್ಯ ಕಚೇರಿ ಗ್ರೇಟರ್ ಬೆಂಗಳೂರು ಅಥಾರಿಟಿ ಪ್ರಧಾನ ಕಚೇರಿಯಾಗಿ ಬದಲಾಗಿದೆ. ಉಳಿದಂತೆ ಐದು ಭಾಗಗಳಾಗಿ ಗುರುತಿಸಲಾಗಿದ್ದು ಕೇಂದ್ರ, ಬೆಂಗಳೂರು ಪೂರ್ವ, ಬೆಂಗಳೂರು ಪಶ್ಚಿಮ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ನಗರಗಳಾಗಿ ವಿಭಜಿಸಲಾಗಿದೆ. ಐಎಎಸ್, ಐಪಿಎಸ್ ಹುದ್ದೆಗಳನ್ನು ಗ್ರೇಟರ್ ಬೆಂಗಳೂರು ಅಥಾರಿಟಿಯ ಸ್ವರೂಪಕ್ಕೆ ತಕ್ಕಂತೆ ಹಂಚಿಕೆ ಮಾಡಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ರಚನೆ ಮಾಡಲಾಗಿದ್ದು ಇದಕ್ಕೆ ಮುಖ್ಯಮಂತ್ರಿಗಳು ಅಧ್ಯಕ್ಷರಾಗಿ, ಬೆಂಗಳೂರು ನಗರಾಭಿವೃದ್ಧಿ ಸಚಿವರು ಉಪಾಧ್ಯಕ್ಷರಾಗಿರುತ್ತಾರೆ. ಕೇಂದ್ರ ಹಣಕಾಸು ಸಚಿವರು ಸೇರಿ 73 ಮಂದಿಯನ್ನು ಪದನಿಮಿತ್ತ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಜಿಬಿಎ ಸದಸ್ಯರಾಗಿ ಬೆಂಗಳೂರಿನ ಮೂವರು ಸಂಸದರು, ಬೆಂಗಳೂರು ವ್ಯಾಪ್ತಿಯ ಶಾಸಕರನ್ನು ನೇಮಿಸಲಾಗಿದೆ.
ಜಿಬಿಎ ಚುನಾವಣೆಗೆ ಬಿಜೆಪಿ-ಜೆಡಿಎಸ್ ತಂತ್ರಗಾರಿಕೆ ಏನು? ಹೆಚ್ಡಿ ಕುಮಾರಸ್ವಾಮಿ ಮಹತ್ವದ ಘೋಷಣೆ
ಜೂನ್ 30ರೊಳಗೆ ಜಿಬಿಎ ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್ ಆದೇಶಿಸಿದ ಹಿನ್ನೆಲೆಯಲ್ಲಿ, ಜೆಡಿಎಸ್ ಬಿಜೆಪಿ ಜೊತೆ ಮೈತ್ರಿ ಸಂಬಂಧ ಸಭೆ ನಡೆಸಿದೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮೈತ್ರಿಯನ್ನು ಬೆಂಬಲಿಸಿದ್ದಾರೆ. ಮಹಾರಾಷ್ಟ್ರ ಫಲಿತಾಂಶದ ಪ್ರಭಾವದಿಂದ ಕರ್ನಾಟಕದಲ್ಲೂ ಸ್ಥಳೀಯ ಸಂಸ್ಥೆಗಳ ಚುನಾವಣೆ ಕಾವು ಪಡೆದಿದ್ದು, ಮೈತ್ರಿಯ ಲಾಭ ನಷ್ಟಗಳ ಬಗ್ಗೆ ಚರ್ಚೆ ನಡೆದಿದೆ.
- Ganapathi Sharma
- Updated on: Jan 17, 2026
- 8:39 am
ದುಡ್ಡಿನ ಆಸೆಗೆ ಕಳ್ಳಾಟ ಆಡುತ್ತಿದ್ದ ಬೆಂಗಳೂರಿನ ಪಿಜಿ ಮಾಲೀಕರಿಗೆ ಶಾಕ್ ಕೊಟ್ಟ ಅಧಿಕಾರಿಗಳು
ಬೆಂಗಳೂರಿನಲ್ಲಿ ಬದುಕು ಕಟ್ಟಿಕೊಂಡಿರುವ ಹೊರರಾಜ್ಯದವರಿಗೆ ಪೇಯಿಂಗ್ ಗೆಸ್ಟ್(ಪಿ.ಜಿ)ಗಳೇ ಆಶ್ರಯ ತಾಣ. ಆದರೆ ಪಿಜಿಗಳಲ್ಲಿ ದುಡ್ಡಿನ ಆಸೆಗೆ ಶುಚಿತ್ವ ಸೇರಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನ ಅನುಸರಿಸದೇ ಕಳ್ಳಾಟ ನಡೆಸುವವರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಇಂತಹ ಪಿಜಿಗಳ ವಿರುದ್ಧ ಜಿಬಿಎ ಅಧಿಕಾರಿಗಳ ಬೇಟೆ ತೀವ್ರವಾಗಿದ್ದು, ಮೊದಲ ದಿನವೇ 204 ಪಿಜಿಗಳನ್ನು ಪರಿಶೀಲನೆ ನಡೆಸಿದ್ದಾರೆ.
- Ramesh B Jawalagera
- Updated on: Jan 16, 2026
- 9:00 pm
ಬಿ-ಖಾತಾದಿಂದ ಎ-ಖಾತಾಗೆ ಕನ್ವರ್ಟ್ ಆಗಲು ನಿಯಮವನ್ನು ಕಠಿಣಗೊಳಿಸಿದ ಜಿಬಿಎ; ಯಾವೆಲ್ಲಾ ದಾಖಲೆಗಳು ಬೇಕು?
ಬೆಂಗಳೂರಿನಲ್ಲಿ ಬಿ-ಖಾತಾ ಆಸ್ತಿಗಳನ್ನು ಎ-ಖಾತಾಗೆ ಪರಿವರ್ತಿಸಲು ಸರ್ಕಾರ ಹೊಸ ನಿಯಮ ಜಾರಿ ಮಾಡಿದೆ. ಪಾರದರ್ಶಕತೆ ಹೆಚ್ಚಿಸಲು, ಇ-ಖಾತಾ ಹೊಂದಿರುವುದು ಕಡ್ಡಾಯ. ನಂತರವೇ ಎ-ಖಾತಾಗೆ ಅರ್ಜಿ ಸಲ್ಲಿಸಬಹುದು. ಅನುಮೋದಿತ ಅಪಾರ್ಟ್ಮೆಂಟ್ಗಳಿಗೆ ಇದು ಅನ್ವಯವಾಗಿತ್ತದೆ. ಹಾಗಿದ್ದರೆ ಬಿ-ಖಾತಾ ಹೊಂದಿರುವ ಅಪಾರ್ಟ್ಮೆಂಟ್ ಮಾಲೀಕರು ಹೇಗೆ ಎ-ಖಾತಾಗೆ ಕನ್ವರ್ಟ್ ಆಗಬಹುದೆಂಬ ಮಾಹಿತಿ ಇಲ್ಲಿದೆ.
- Bhavana Hegde
- Updated on: Jan 12, 2026
- 3:01 pm
ಬೆಂಗಳೂರಿನ ಐದು ಪಾಲಿಕೆಗಳಿಗೆ ಜೂನ್ 30ರೊಳಗೆ ಚುನಾವಣೆ ನಡೆಸಿ: ಸುಪ್ರೀಂಕೋರ್ಟ್ ನಿರ್ದೇಶನ
ಜಿಬಿಎ ಚುನಾವಣೆಯಲ್ಲಿ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಡಿ ಇರುವ 5 ನಗರ ಪಾಲಿಕೆಗಳಿಗೆ ಜೂನ್ 30ರೊಳಗೆ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ನಿರ್ದೇಶಿಸಿದೆ. ಮತದಾರರ ಪಟ್ಟಿ ಮಾರ್ಚ್ 16ರೊಳಗೆ ಅಂತಿಮವಾಗಲಿದ್ದು, ಮೀಸಲಾತಿ ಅಧಿಸೂಚನೆ ಫೆಬ್ರವರಿ 20ರೊಳಗೆ ಹೊರಬೀಳಲಿದೆ. ಹಲವು ವರ್ಷಗಳಿಂದ ಮುಂದೂಡಲ್ಪಟ್ಟಿದ್ದ ಚುನಾವಣೆಗೀಗ ಮುಹೂರ್ತ ಕೂಡಿಬಂದಂತಿದೆ.
- Ramesha M
- Updated on: Jan 12, 2026
- 1:17 pm
Bengaluru Pay and Park: ಬೆಂಗಳೂರಿನಲ್ಲಿ ಅಲ್ಲಲ್ಲಿ ವಾಹನ ಪಾರ್ಕ್ ಮಾಡುವವರಿಗೆ ಜಿಬಿಎ ಶಾಕ್!
ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಬೆಂಗಳೂರಿನಾದ್ಯಂತ ಪೇ-ಅಂಡ್-ಪಾರ್ಕ್ ಯೋಜನೆಯನ್ನು ವಿಸ್ತರಿಸುತ್ತಿದೆ. ನಗರದ ಕೇಂದ್ರ ಭಾಗದಲ್ಲಿ ರಸ್ತೆಬದಿ ಪಾರ್ಕಿಂಗ್ ಸುಗಮಗೊಳಿಸುವುದು ಇದರ ಮುಖ್ಯ ಉದ್ದೇಶ. 23 CBD ರಸ್ತೆಗಳಲ್ಲಿ ಖಾಸಗಿ ನಿರ್ವಾಹಕರ ಮೂಲಕ ಪಾರ್ಕಿಂಗ್ ಶುಲ್ಕ ಸಂಗ್ರಹಿಸಲಿದ್ದು, ನಿಗಮಗಳಿಗೆ ಆದಾಯ ಹೆಚ್ಚಲಿದೆ. ಮೊಬೈಲ್ ಅಪ್ಲಿಕೇಶನ್ ಮೂಲಕ ಆನ್ಲೈನ್ ಪಾರ್ಕಿಂಗ್ ಬುಕಿಂಗ್ ಸೌಲಭ್ಯವೂ ಲಭ್ಯವಾಗಲಿದೆ.
- Bhavana Hegde
- Updated on: Jan 10, 2026
- 10:16 am
Bengaluru: ರಸ್ತೆ ಬದಿ ಕಸ ಎಸೆದ ಯುವತಿಗೆ ಸ್ಥಳೀಯರಿಂದ ಸಖತ್ ಕ್ಲಾಸ್
ಎಲ್ಲೆಂದರಲ್ಲಿ ಕಸ ಎಸೆಯುವವರ ವಿರುದ್ಧ ಜಿಬಿಎ ಕಠಿಣ ಕ್ರಮಗಳ ಹೊರತಾಗಿಯೂ ಘಟನೆಗಳು ಮರುಕಳಿಸುತ್ತಲೇ ಇವೆ. ಬೆಂಗಳೂರಿನ ಜಯನಗರದಲ್ಲಿ ರಸ್ತೆ ಬದಿ ಕಸ ಎಸೆದ ಯುವತಿಗೆ ಸ್ಥಳೀಯರು ತರಾಟೆ ತೆಗೆದುಕೊಂಡ ಘಟನೆ ವೈರಲ್ ಆಗಿದ್ದು, ಯುವತಿ ನಡೆದುಕೊಂಡ ರೀತಿ ಬಗ್ಗೆ ಭಾರಿ ಆಕ್ರೋಶ ವ್ಯಕ್ತವಾಗಿದೆ. ರೆಸೆಡೆನ್ಸಿ ಏರಿಯಾದಲ್ಲಿ ತ್ಯಾಜ್ಯ ಸುರಿಬೇಡ ಎಂದು ಸ್ಥಳೀಯರು ಹೇಳಿದ್ರೂ ಆಕೆ ಮಾತ್ರ ತಲೆಕೆಡಿಸಿಕೊಂಡಿಲ್ಲ.
- Prasanna Hegde
- Updated on: Jan 5, 2026
- 4:57 pm
ಗ್ರೇಟರ್ ಬೆಂಗಳೂರು ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
ಗ್ರೇಟರ್ ಬೆಂಗಳೂರು ಪ್ರಾಧಿಕಾರದ (Greater Bengaluru Authority) ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ (Munish Moudgil) ವಿರುದ್ಧ ನೌಕರರು ಹಾಗೂ ಅಧಿಕಾರಿಗಳ ಪಿತ್ತ ನೆತ್ತಿಗೇರಿದ್ದು, ಕಿರುಕುಳ ಹಾಗೂ ದುರುದ್ದೇಶಪೂರ್ವಕವಾಗಿ ಅಧಿಕಾರಿಗಳನ್ನು ಅಮಾನತು ಮಾಡುವ ಕೆಲಸಕ್ಕೆ ಹಿರಿಯ ಅಧಿಕಾರಿಗಳು ಮುಂದಾಗಿದ್ದಾರೆ ಎಂದು GBA ನೌಕರರು ಪ್ರತಿಭಟನೆಯ ಹಾದಿ ತುಳಿದಿದ್ದಾರೆ.
- Ramesh B Jawalagera
- Updated on: Dec 23, 2025
- 3:39 pm
ಬೆಂಗಳೂರು ಟನಲ್ ರಸ್ತೆಗೆ ಹೆಚ್ಚಿನ ಮೊತ್ತಕ್ಕೆ ಅದಾನಿ ಗ್ರೂಪ್ ಬಿಡ್, ಧರ್ಮ ಸಂಕಟಕ್ಕೆ ಸಿಲುಕಿದ ಸಿದ್ದರಾಮಯ್ಯ ಸರ್ಕಾರ
ರಾಹುಲ್ ಗಾಂಧಿಯಿಂದ ಹಿಡಿದು ಕಾಂಗ್ರೆಸ್ ನಾಯಕರು ಸದಾ ಅದಾನಿ ಕುರಿತು ಟೀಕೆ ಮಾಡುತ್ತಲೇ ಇದ್ದಾರೆ. ಇದೀಗ ಅದೇ ಅದಾನಿ ಕಂಪನಿ ಬೆಂಗಳೂರು ಸುರಂಗ ಮಾರ್ಗ ಟೆಂಡರ್ ನಲ್ಲಿ ಮೇಲುಗೈ ಸಾಧಿಸಿ, ಇತರೆ ಎಲ್ಲಾ ಕಂಪನಿಗಳು ಕೋಟ್ ಮಾಡಿದ್ದಕ್ಕಿಂತ ಕಡಿಮೆ ಮೊತ್ತ ಬಿಡ್ ಮಾಡಿ ಟೆಂಡರ್ ಪಡೆಯುವ ಮುಂಚೂಣಿಯಲ್ಲಿದೆ. ಹೀಗಾಗಿ ರಾಷ್ಟ್ರಮಟ್ಟದಲ್ಲಿ ಅದಾನಿ ವಿರುದ್ಧ ವಾಗ್ದಾಳಿ ನಡೆಸುವ ಕಾಂಗ್ರೆಸ್, ಇದೀಗ ಅದೇ ಅದಾನಿ ಸಮೂಹಕ್ಕೆ ಟೆಂಡರ್ ನೀಡುತ್ತಾ ಎನ್ನುವ ಚರ್ಚೆ ಶುರುವಾಗಿದೆ.
- Kiran Surya
- Updated on: Dec 22, 2025
- 9:51 pm
ಬೆಂಗಳೂರಲ್ಲಿ ಅನಧಿಕೃತ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಬೆಂಗಳೂರಿನ ಕೋಗಿಲು ಕ್ರಾಸ್ ಬಳಿಯ ಫಕೀರ್ ಲೇಔಟ್ನಲ್ಲಿ ಅಕ್ರಮವಾಗಿ ನಿರ್ಮಿಸಿದ್ದ 200ಕ್ಕೂ ಹೆಚ್ಚು ಮನೆಗಳನ್ನು ನೆಲಸಮ ಮಾಡಲಾಗಿದೆ. ಜಿಬಿಎಗೆ ಮಂಜೂರಾಗಿದ್ದ 14 ಎಕರೆ ಜಾಗದಲ್ಲಿ ಒತ್ತುವರಿ ನಡೆದಿತ್ತು. ಯಾವುದೇ ಮಾಹಿತಿ ನೀಡದೆ ಮನೆಗಳನ್ನು ತೆರವುಗೊಳಿಸಲಾಗಿದೆ ಎಂದು ನಿವಾಸಿಗಳು ಆರೋಪಿಸಿದ್ದಾರೆ. ವಿಡಿಯೋ ನೋಡಿ.
- Gangadhar Saboji
- Updated on: Dec 20, 2025
- 3:46 pm
ಸುಧಾಮೂರ್ತಿ, ಸುಧಾಕರ್ ಸೇರಿ ಇತರ ಜನಪ್ರತಿನಿಧಿಗಳನ್ನು ಜಿಬಿಎ ಸದಸ್ಯರ ಪಟ್ಟಿಗೆ ಸೇರಿಸುವ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ
ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕದ ಎರಡನೇ ತಿದ್ದುಪಡಿಗೆ ವಿಧಾನಸಭೆ ಅಂಗೀಕಾರ ನೀಡಿದ್ದು, ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ ಹಾಗೂ ಚಿಕ್ಕಬಳ್ಳಾಪುರ ಸಂಸದ ಡಾ. ಕೆ ಸುಧಾಕರ್ ಸೇರಿದಂತೆ ಜಿಬಿಎ ವ್ಯಾಪ್ತಿಯ ಜನಪ್ರತಿನಿಧಿಗಳನ್ನು ಸದಸ್ಯರ ಪಟ್ಟಿಗೆ ಸೇರಿಸಲು ಅನುಮೋದನೆ ನೀಡಿದೆ. ಡಿಸಿಎಂ ಡಿಕೆ ಶಿವಕುಮಾರ್ ವಿಧೇಯಕ ಮಂಡನೆ ಮಾಡಿ ಮಾಹಿತಿ ನೀಡಿದರು.
- Ganapathi Sharma
- Updated on: Dec 18, 2025
- 8:50 am
ಹೆಸರಿಗೆ ಬ್ರ್ಯಾಂಡ್ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!: ಉತ್ತರಹಳ್ಳಿಯಲ್ಲಿ ಇದೆಂಥಾ ಸ್ಥಿತಿ?
ಬೆಂಗಳೂರಿನ ಉತ್ತರಹಳ್ಳಿ ವಾರ್ಡ್ನ ಸಿಂಹಾದ್ರಿ ಲೇಔಟ್ನಲ್ಲಿ ಕುಡಿಯುವ ಹಾಗೂ ಮನೆ ಬಳಕೆಯ ನೀರು ತೀವ್ರವಾಗಿ ಕಲುಷಿತಗೊಂಡಿದೆ. ಮಲಮೂತ್ರ ಹಾಗೂ ಕೊಳಚೆ ಮಿಶ್ರಿತ ಕಪ್ಪು ಬಣ್ಣದ ನೀರನ್ನು ಬಳಸಲು ನಿವಾಸಿಗಳು ಪರದಾಡುತ್ತಿದ್ದಾರೆ. ದೂರುಗಳ ನಂತರ ಟಿವಿ9 ವರದಿ ಪ್ರಸಾರವಾಗುತ್ತಿದ್ದಂತೆ ಪಾಲಿಕೆ ಸಿಬ್ಬಂದಿ ದುರಸ್ತಿ ಕಾರ್ಯಕ್ಕೆ ಮುಂದಾಗಿದ್ದಾರೆ.
- Prasanna Hegde
- Updated on: Dec 12, 2025
- 1:07 pm
ದಂಡಾಸ್ತ್ರಕ್ಕೂ ಬಗ್ಗದ ಬೆಂಗಳೂರು ಮಂದಿ: ಕಾರಲ್ಲಿ ಬಂದ್ರು, ರಸ್ತೆ ಬದಿ ಕಸ ಸುರಿದ್ರು!
ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವ ಪ್ರವೃತ್ತಿ ಮುಂದುವರಿದಿದ್ದು, ದಂಡಾಸ್ತ್ರಕ್ಕೂ ಜನ ಜಗ್ಗುತ್ತಿಲ್ಲ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ದಂಡ ವಿಧಿಸಿ, ಮನೆ ಮುಂದೆ ಕಸ ಸುರಿದು ನಾಚಿಕೆಪಡಿಸುವ ಕ್ರಮ ಕೈಗೊಂಡರೂ ಅಕ್ರಮ ಕಸ ವಿಲೇವಾರಿಗೆ ಬ್ರೇಕ್ ಬಿದ್ದಿಲ್ಲ. ಇತ್ತೀಚೆಗೆ ಎಸ್ಯುವಿ ಕಾರಿನಲ್ಲಿ ಬಂದು ಕಸ ಹಾಕಿದವರಿಗೆ 5,000 ರೂ. ದಂಡ ವಿಧಿಸಲಾಗಿದ್ದು, ಈ ದಂಡ ಸಾರ್ವಜನಿಕರ ಮೇಲೆ ಪರಿಣಾಮ ಬೀರುತ್ತಿಲ್ಲ ಎಂದು ಕಿರಣ್ ಮಜುಂದಾರ್ ಶಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
- Prasanna Hegde
- Updated on: Dec 12, 2025
- 11:44 am