GBA
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಇದರ ಆಡಳಿತವನ್ನು ಪುನರ್ ರಚಿಸಿ ಕರ್ನಾಟಕ ಸರ್ಕಾರ 2025ರ ಸೆಪ್ಟೆಂಬರ್ 2 ರಿಂದ ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ಆಡಳಿತ ಜಾರಿಗೊಳಿಸಿದೆ. ಗ್ರೇಟರ್ ಬೆಂಗಳೂರು ಅಥಾರಿಟಿ ಅಡಿ ಐದು ಹೊಸ ಪಾಲಿಕೆಗಳನ್ನು ರಚನೆ ಮಾಡಲಾಗಿದ್ದು, ಬಿಬಿಎಂಪಿಯ ಮುಖ್ಯ ಕಚೇರಿ ಗ್ರೇಟರ್ ಬೆಂಗಳೂರು ಅಥಾರಿಟಿ ಪ್ರಧಾನ ಕಚೇರಿಯಾಗಿ ಬದಲಾಗಿದೆ. ಉಳಿದಂತೆ ಐದು ಭಾಗಗಳಾಗಿ ಗುರುತಿಸಲಾಗಿದ್ದು ಕೇಂದ್ರ, ಬೆಂಗಳೂರು ಪೂರ್ವ, ಬೆಂಗಳೂರು ಪಶ್ಚಿಮ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ನಗರಗಳಾಗಿ ವಿಭಜಿಸಲಾಗಿದೆ. ಐಎಎಸ್, ಐಪಿಎಸ್ ಹುದ್ದೆಗಳನ್ನು ಗ್ರೇಟರ್ ಬೆಂಗಳೂರು ಅಥಾರಿಟಿಯ ಸ್ವರೂಪಕ್ಕೆ ತಕ್ಕಂತೆ ಹಂಚಿಕೆ ಮಾಡಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ರಚನೆ ಮಾಡಲಾಗಿದ್ದು ಇದಕ್ಕೆ ಮುಖ್ಯಮಂತ್ರಿಗಳು ಅಧ್ಯಕ್ಷರಾಗಿ, ಬೆಂಗಳೂರು ನಗರಾಭಿವೃದ್ಧಿ ಸಚಿವರು ಉಪಾಧ್ಯಕ್ಷರಾಗಿರುತ್ತಾರೆ. ಕೇಂದ್ರ ಹಣಕಾಸು ಸಚಿವರು ಸೇರಿ 73 ಮಂದಿಯನ್ನು ಪದನಿಮಿತ್ತ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಜಿಬಿಎ ಸದಸ್ಯರಾಗಿ ಬೆಂಗಳೂರಿನ ಮೂವರು ಸಂಸದರು, ಬೆಂಗಳೂರು ವ್ಯಾಪ್ತಿಯ ಶಾಸಕರನ್ನು ನೇಮಿಸಲಾಗಿದೆ.
ಬಿಡಿಎಗೆ ಸೇರಿದ 160 ಕೋಟಿ ರೂ. ಮೌಲ್ಯದ ಜಾಗ ಕಬಳಿಕೆ ಯತ್ನ: ಐವರ ವಿರುದ್ಧ ಎಫ್ಐಆರ್ ದಾಖಲು
ಬೆಂಗಳೂರಿನ ಕೊತ್ತನೂರಿನಲ್ಲಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ 160 ಕೋಟಿ ರೂ. ಮೌಲ್ಯದ ಜಾಗವನ್ನು ನಕಲಿ ದಾಖಲೆಗಳ ಮೂಲಕ ಕಬಳಿಸಲು ಯತ್ನಿಸಿದ ಆರೋಪದಲ್ಲಿ ಐವರ ವಿರುದ್ಧ ಶೇಷಾದ್ರಿಪುರಂ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬಿಡಿಎ ಅಧಿಕಾರಿಗಳ ತನಿಖೆಯಿಂದ ಈ ಬೃಹತ್ ಹಗರಣ ಬಯಲಿಗೆ ಬಂದಿದೆ.
- Ganapathi Sharma
- Updated on: May 2, 2026
- 12:35 pm
ಬೆಂಗಳೂರಿನ ಆಸ್ತಿ ಮಾಲೀಕರಿಗೆ ಬಿಗ್ ರಿಲೀಫ್: ಆಸ್ತಿ ತೆರಿಗೆ ಪಾವತಿಯ ಶೇ 5ರ ರಿಯಾಯಿತಿ ಮೇ 31ರವರೆಗೆ ವಿಸ್ತರಣೆ
ಬೆಂಗಳೂರಿನ ಆಸ್ತಿ ತೆರಿಗೆದಾರರಿಗೆ ಅನುಕೂಲ ಮಾಡಿಕೊಡಲು ರಾಜ್ಯ ಸರ್ಕಾರವು ಶೇ 5ರ ರಿಯಾಯಿತಿಯೊಂದಿಗೆ ತೆರಿಗೆ ಪಾವತಿಸುವ ಅವಧಿಯನ್ನು ಮೇ 31ರವರೆಗೆ ವಿಸ್ತರಿಸಿದೆ. ತೆರಿಗೆ ಪಾವತಿ ಪ್ರಕ್ರಿಯೆಯಲ್ಲಿದ್ದ ಗೊಂದಲ ಮತ್ತು ಸಾರ್ವಜನಿಕರ ಮನವಿ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಇದರಿಂದ ಸುಮಾರು 25 ಲಕ್ಷ ಆಸ್ತಿ ಮಾಲೀಕರಿಗೆ ಪ್ರಯೋಜನವಾಗಲಿದೆ.
- Ganapathi Sharma
- Updated on: May 1, 2026
- 8:17 am
ಬೆಂಗಳೂರಿನಲ್ಲಿ ಒಂದೇ ಮಳೆಗೆ ಸಂಕಷ್ಟಗಳ ಪ್ರವಾಹ: ಅಧ್ವಾನಗಳ ಅಸಲಿ ರಹಸ್ಯ ಜಿಬಿಎ ವರದಿಯಲ್ಲಿ ಬಯಲು
ಬೆಂಗಳೂರಿನಲ್ಲಿ ಏಪ್ರಿಲ್ 29 ರಂದು ಸುರಿದ ಮಹಾ ಮಳೆಗೆ ಒಟ್ಟು ಹತ್ತು ಜನರು ಬಲಿಯಾಗಿದ್ದು, ರಾಜಧಾನಿ ಅಕ್ಷರಶಃ ನಲುಗಿ ಹೋಗಿದೆ. ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ, ವಿದ್ಯುತ್ ಸ್ಪರ್ಶ ಮತ್ತು ಮರಗಳು ಉರುಳಿಬಿದ್ದ ಘಟನೆಗಳಿಂದ ನಗರದಾದ್ಯಂತ ಭಾರಿ ಸಾವು-ನೋವು ಸಂಭವಿಸಿದೆ. ಜಿಬಿಎ ವರದಿಯ ಪ್ರಕಾರ, ಕೋಟಿಗಟ್ಟಲೆ ಆಸ್ತಿಪಾಸ್ತಿ ನಷ್ಟವಾಗಿದ್ದು, ನೂರಾರು ಮನೆಗಳು ಜಲಾವೃತವಾಗಿವೆ.
- Ganapathi Sharma
- Updated on: May 1, 2026
- 6:39 am
ಬೆಂಗಳೂರು ಮಳೆ ಅಬ್ಬರ: ಅವಾಂತರಗಳ ಬೆನ್ನಲ್ಲೇ ಅಗತ್ಯ ಕ್ರಮಕ್ಕೆ ಮುಂದಾದ ಜಿಬಿಎ
ಜಿಬಿಎ ಬೆಂಗಳೂರಿನಲ್ಲಿ ಮುಂಬರುವ ಮಳೆಯನ್ನು ಎದುರಿಸಲು ವ್ಯಾಪಕ ಸಿದ್ಧತೆಗಳನ್ನು ನಡೆಸಿದೆ. ರಾಜಕಾಲುವೆಗಳ ಡೀಸಿಲ್ಟಿಂಗ್ ಮತ್ತು ಪುನಶ್ಚೇತನ ಕಾರ್ಯಗಳನ್ನು ಯುದ್ಧೋಪಾದಿಯಲ್ಲಿ ಕೈಗೊಳ್ಳಲಾಗುತ್ತಿದೆ. ಇನ್ನು ಜಿಬಿಎ ವ್ಯಾಪ್ತಿಯಲ್ಲಿ ನಿನ್ನೆ ಸಂಜೆ ಸುರಿದ ಗಾಳಿ ಸಮೇತ ಭಾರೀ ಮಳೆಯಿಂದಾದ ಹಾನಿ ಬಗ್ಗೆ ಕೂಡ ವಿವರವನ್ನು ನೀಡಲಾಗಿದೆ.
- Gangadhar Saboji
- Updated on: Apr 30, 2026
- 7:57 pm
ಜಿಬಿಎ ಲ್ಯಾಬ್ಗೆ ಅಂಟಿದ ಗ್ರಹಣ: ಬೆಂಕಿ ಅವಘಡದ ಬಳಿಕವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು!
ಬೆಂಗಳೂರು ಬಿಬಿಎಂಪಿ (GBA) ಕೇಂದ್ರ ಕಚೇರಿಯ ಬೆಂಕಿ ಅವಘಡದ ನಂತರವೂ ಗುಣನಿಯಂತ್ರಣ ಪ್ರಯೋಗಾಲಯದ ಪುನಶ್ಚೇತನ ಕಾರ್ಯದಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಯಂತ್ರೋಪಕರಣಗಳು ಇಂದಿಗೂ ಧೂಳು ಹಿಡಿಯುತ್ತಿದ್ದು, ಕಾಮಗಾರಿಗಳ ಗುಣಮಟ್ಟದ ಬಗ್ಗೆ ಈಗ ಸಂಶಯ ಮೂಡಿದೆ.
- Bhavana Hegde
- Updated on: Apr 29, 2026
- 8:37 am
ಬೆಂಗಳೂರಿನ 5 ನಗರ ಪಾಲಿಕೆಗಳ ಪೈಕಿ ಕೆಲವು ವಿಲೀನ? ಆರ್ಥಿಕ ಸಂಕಷ್ಟದಲ್ಲಿ ಗ್ರೇಟರ್ ಬೆಂಗಳೂರು!
ಬೆಂಗಳೂರಿನ ಐದು ನಗರ ಪಾಲಿಕೆಗಳ ಪೈಕಿ ಕೆಲವಲ್ಲಿ ತೀವ್ರ ಆರ್ಥಿಕ ಮುಗ್ಗಟ್ಟು ಕಾಣಿಸಿಕೊಂಡಿದ್ದು, ಸಿಬ್ಬಂದಿ ವೇತನಕ್ಕೂ ಹಣವಿಲ್ಲದ ಸ್ಥಿತಿ ನಿರ್ಮಾಣವಾಗಿದೆ. ಅನುದಾನಕ್ಕೆ ಸರ್ಕಾರವನ್ನೇ ಅವಲಂಬಿಸಬೇಕಾದ ಸ್ಥಿತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ವೆಚ್ಚ ಕಡಿತಗೊಳಿಸಲು ಪಾಲಿಕೆಗಳ ವಿಲೀನ ಅಥವಾ ಸಂಖ್ಯೆ ಇಳಿಕೆ ಮಾಡಲು ಸರ್ಕಾರ ತೆರೆಮರೆಯಲ್ಲಿ ಗಂಭೀರ ಚಿಂತನೆ ನಡೆಸುತ್ತಿದೆ.
- Ganapathi Sharma
- Updated on: Apr 29, 2026
- 7:09 am
ಬೆಸ್ಕಾಂ ಗ್ರಾಹಕರಿಗೆ ಬಂಪರ್ ಆಫರ್! ಇನ್ನು ‘ಇ-ಖಾತಾ’ ಇದ್ದರೆ ಸಾಕು, ಕೆಲವೇ ನಿಮಿಷಗಳಲ್ಲಿ ವಿದ್ಯುತ್ ಸಂಪರ್ಕ ನಿಮ್ಮ ಹೆಸರಿಗೆ
ಬೆಂಗಳೂರುನಲ್ಲಿ ವಿದ್ಯುತ್ ಸಂಪರ್ಕ ಹೆಸರಿನ ಬದಲಾವಣೆ ಈಗ ಸುಲಭವಾಗಿದೆ. ಇ-ಖಾತಾ ಡೇಟಾಬೇಸ್ ಜೋಡಣೆ ಮೂಲಕ ಗ್ರಾಹಕರು ಕೇವಲ ಕೆಲವೇ ನಿಮಿಷಗಳಲ್ಲಿ ಆನ್ಲೈನ್ನಲ್ಲಿ ಸಂಪರ್ಕ ವರ್ಗಾಯಿಸಬಹುದು ಎಂದು ಬೆಸ್ಕಾಂ ತಿಳಿಸಿದೆ. ಇದರಿಂದ ಮಧ್ಯವರ್ತಿಗಳ ಕಾಟ ತಪ್ಪಲಿದ್ದು, ಕಡಿಮೆ ಶುಲ್ಕದಲ್ಲಿ ಪಾರದರ್ಶಕ ಸೇವೆ ಲಭ್ಯವಾಗಲಿದೆ.
- Bhavana Hegde
- Updated on: Apr 27, 2026
- 3:10 pm
ಬೆಂಗಳೂರು: ಅಕ್ರಮದ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದ ಮಹಿಳೆ ವಿರುದ್ಧವೇ ಅವಹೇಳನ!
ಲೋಕಾಯುಕ್ತಕ್ಕೆ ರಾಜಕಾಲುವೆ ಒತ್ತುವರಿ ಮತ್ತು ಅಕ್ರಮ ಬ್ಯಾನರ್ಗಳ ಕುರಿತು ದೂರು ನೀಡಿದ್ದ ಮಹಿಳೆ ಸತ್ಯವತಿ ಅವರಿಗೆ ತೀವ್ರ ಆಘಾತ ಎದುರಾಗಿದೆ. ದೂರು ನೀಡಿದ ಮಹಿಳೆ ವಿರುದ್ಧವೇ ತಲಕಾವೇರಿ ಲೇಔಟ್ನ ಗಲ್ಲಿಗಲ್ಲಿಯಲ್ಲಿ ಅವಹೇಳನಕಾರಿ ಬ್ಯಾನರ್ಗಳನ್ನು ಅಳವಡಿಸಲಾಗಿದೆ. ಅಧಿಕಾರಿಗಳಿಗೆ ಹೆದರಿಸಿ ಹಣ ವಸೂಲಿ ಮಾಡುತ್ತಿದ್ದಾರೆಂದು ಈ ಬ್ಯಾನರ್ಗಳಲ್ಲಿ ಆರೋಪಿಸಲಾಗಿದೆ.
- Rachappaji Naik S
- Updated on: Apr 27, 2026
- 12:46 pm
GBA Election: ಚುನಾವಣೆ ನಡೆಸಲು ಹಣವಿಲ್ಲ, ಸಿಬ್ಬಂದಿಯೂ ಇಲ್ಲ! ಸೆಪ್ಟೆಂಬರ್ವರೆಗೆ ಗಡುವು ಕೋರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ಚುನಾವಣಾ ಆಯೋಗ!
ಕರ್ನಾಟಕ ರಾಜ್ಯ ಚುನಾವಣಾ ಆಯೋಗ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆಯನ್ನು ಜೂನ್ 30ರ ಬದಲು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಲು ಸುಪ್ರೀಂ ಕೋರ್ಟ್ಗೆ ಮನವಿ ಮಾಡಿದೆ. ಜಾತಿಗಣತಿ ಮತ್ತು ಮತದಾರರ ಪಟ್ಟಿಯ ತಿದ್ದುಪಡಿ ಕಾರ್ಯಗಳಲ್ಲಿ ಸಿಬ್ಬಂದಿ ನಿರತರಾಗಿರುವುದು ಹಾಗೂ ಹಣಕಾಸಿನ ಕೊರತೆ ಇದಕ್ಕೆ ಕಾರಣವಾಗಿದ್ದು, ಆಯೋಗವು ರಾಜ್ಯ ಸರ್ಕಾರದಿಂದ ಹಣ ಬಿಡುಗಡೆಗೆ ಒತ್ತಾಯಿಸಿದೆ.
- Bhavana Hegde
- Updated on: Apr 25, 2026
- 12:27 pm
ಜಿಬಿಎ ಘನ ತ್ಯಾಜ್ಯ ಟೆಂಡರ್: IAS ಅಧಿಕಾರಿಗಳ ವಿರುದ್ಧ ಲಂಚ ಆರೋಪ, ಹೈಕೋರ್ಟ್ ಮೊರೆಹೋದ ಗುತ್ತಿಗೆದಾರ
ಜಿಬಿಎ ಘನ ತ್ಯಾಜ್ಯ ಟೆಂಡರ್ನಲ್ಲಿ ಐಎಎಸ್ ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಟ್ಟಿರುವ ಆರೋಪ ಕೇಳಿಬಂದಿದೆ. ಈ ಕುರಿತಾಗಿ ಗುತ್ತಿಗೆದಾರ ಎಸ್.ಎನ್. ಬಾಲಸುಬ್ರಮಣಿಯನ್ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ಮಾಡಿದ ಹೈಕೋರ್ಟ್ ಏಕಸದಸ್ಯ ಪೀಠ ವಾದ ಪ್ರತಿವಾದವನ್ನು ಆಲಿಸಿ ವಿಚಾರಣೆಯನ್ನು ನಾಳೆಗೆ ಅಂದರೆ ಏಪ್ರಿಲ್ 24ಕ್ಕೆ ಮುಂದೂಡಿದೆ.
- Ramesha M
- Updated on: Apr 23, 2026
- 3:31 pm
ಬೆಂಗಳೂರಿನಲ್ಲಿ ಜನಗಣತಿಗೆ 6 ಸಾವಿರ ಸರ್ಕಾರಿ ನೌಕಕರು ಗೈರು: ಕೋಲಾರದಲ್ಲೂ 6 ತಹಶೀಲ್ದಾರ್ಗೆ ನೋಟಿಸ್
ಬೆಂಗಳೂರಿನಲ್ಲಿ 2026ರ ರಾಷ್ಟ್ರೀಯ ಜನಗಣತಿ ಕುಂಟುತ್ತಾ ಸಾಗಿದ್ದು, 6 ಸಾವಿರ ಸರ್ಕಾರಿ ನೌಕರರು ಗೈರಾಗಿದ್ದಾರೆ. ಸಿಬ್ಬಂದಿ ಕೊರತೆ ನೀಗಿಸಲು, ಗ್ರೇಟರ್ ಬೆಂಗಳೂರು ಪ್ರಾಧಿಕಾರ ಖಾಸಗಿ ವ್ಯಕ್ತಿಗಳಿಂದ ಮನೆ ಮನೆ ಗಣತಿ ಕಾರ್ಯ ನಡೆಸಲು ಮುಂದಾಗಿದೆ. ಇತ್ತ ಕೋಲಾರದಲ್ಲಿ ಜನಗಣತಿ ಕಾರ್ಯದಲ್ಲಿ ನಿರ್ಲಕ್ಷ್ಯ ತೋರಿದ ಜಿಲ್ಲೆಯ ಆರು ತಹಶೀಲ್ದಾರ್ಗಳಿಗೆ ಕೋಲಾರ ಡಿಸಿ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ.
- Gangadhar Saboji
- Updated on: Apr 22, 2026
- 7:13 pm
ಬೆಂಗಳೂರಿಗರೇ ಎಚ್ಚರ! ಕಸ ವಿಂಗಡಣೆ ಮಾಡದಿದ್ರೆ ದಂಡ ಗ್ಯಾರಂಟಿ: ನಿಯಮ ಬಿಗಿಗೊಳಿಸಲು ಮುಂದಾದ ಜಿಬಿಎ
ಬೆಂಗಳೂರಿನಲ್ಲಿ ಕಸ ವಿಂಗಡಣೆ ನಿಯಮವನ್ನು ಏಪ್ರಿಲ್ 1ರಿಂದಲೇ ಕಡ್ಡಾಯಗೊಳಿಸಲಾಗಿದೆ. ಆದರೆ ಜನರು ಮಾತ್ರ ಹಸಿ, ಒಣ ಕಸವನ್ನು ಪ್ರತ್ಯೇಕಿಸುತ್ತಿಲ್ಲ. ಈ ನಿಟ್ಟಿನಲ್ಲಿ ಘನತ್ಯಾಜ್ಯ ನಿರ್ವಹಣೆಯನ್ನು ಸುಧಾರಿಸುವ ಸಲುವಾಗಿ ಜಿಬಿಎ ನಿಯಮ ಬಿಗಿಗೊಳಿಸಲು ಮುಂದಾಗಿದೆ. ಇನ್ಮುಂದೆ ಕಸ ವಿಂಗಡಣೆ ಮಾಡದಿದ್ರೆ ದಂಡ ಬೀಳುವುದು ಗ್ಯಾರಂಟಿ.
- Gangadhar Saboji
- Updated on: Apr 18, 2026
- 9:31 pm