AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

GBA

GBA

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಇದರ ಆಡಳಿತವನ್ನು ಪುನರ್​ ರಚಿಸಿ ಕರ್ನಾಟಕ ಸರ್ಕಾರ 2025ರ ಸೆಪ್ಟೆಂಬರ್ 2 ರಿಂದ ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ಆಡಳಿತ ಜಾರಿಗೊಳಿಸಿದೆ. ಗ್ರೇಟರ್ ಬೆಂಗಳೂರು ಅಥಾರಿಟಿ ಅಡಿ ಐದು ಹೊಸ ಪಾಲಿಕೆಗಳನ್ನು ರಚನೆ ಮಾಡಲಾಗಿದ್ದು, ಬಿಬಿಎಂಪಿಯ ಮುಖ್ಯ ಕಚೇರಿ ಗ್ರೇಟರ್ ಬೆಂಗಳೂರು ಅಥಾರಿಟಿ ಪ್ರಧಾನ ಕಚೇರಿಯಾಗಿ ಬದಲಾಗಿದೆ. ಉಳಿದಂತೆ ಐದು ಭಾಗಗಳಾಗಿ ಗುರುತಿಸಲಾಗಿದ್ದು ಕೇಂದ್ರ, ಬೆಂಗಳೂರು ಪೂರ್ವ, ಬೆಂಗಳೂರು ಪಶ್ಚಿಮ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ನಗರಗಳಾಗಿ ವಿಭಜಿಸಲಾಗಿದೆ. ಐಎಎಸ್, ಐಪಿಎಸ್ ಹುದ್ದೆಗಳನ್ನು ಗ್ರೇಟರ್ ಬೆಂಗಳೂರು ಅಥಾರಿಟಿಯ ಸ್ವರೂಪಕ್ಕೆ ತಕ್ಕಂತೆ ಹಂಚಿಕೆ ಮಾಡಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ರಚನೆ ಮಾಡಲಾಗಿದ್ದು ಇದಕ್ಕೆ ಮುಖ್ಯಮಂತ್ರಿಗಳು ಅಧ್ಯಕ್ಷರಾಗಿ, ಬೆಂಗಳೂರು ನಗರಾಭಿವೃದ್ಧಿ ಸಚಿವರು ಉಪಾಧ್ಯಕ್ಷರಾಗಿರುತ್ತಾರೆ. ಕೇಂದ್ರ ಹಣಕಾಸು ಸಚಿವರು ಸೇರಿ 73 ಮಂದಿಯನ್ನು ಪದನಿಮಿತ್ತ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಜಿಬಿಎ ಸದಸ್ಯರಾಗಿ ಬೆಂಗಳೂರಿನ ಮೂವರು ಸಂಸದರು, ಬೆಂಗಳೂರು ವ್ಯಾಪ್ತಿಯ ಶಾಸಕರನ್ನು ನೇಮಿಸಲಾಗಿದೆ.

ಇನ್ನೂ ಹೆಚ್ಚು ಓದಿ

ಬೆಂಗಳೂರಿನ ಈ ಭಾಗದ ಜನರಿಗೆ ಸಿಹಿಸುದ್ದಿ: ಟ್ರಾಫಿಕ್ ದಟ್ಟಣೆಗೆ ಸಿಗಲಿದೆ ಶೀಘ್ರ ಮುಕ್ತಿ

ಬೆಂಗಳೂರಿನಲ್ಲಿ ಜಿಗುಪ್ಸೆ ಹುಟ್ಟಿಸುವ ಭಯಾನಕ ಟ್ರಾಫಿಕ್ ಜಾಮ್​ಗೆ ಸಾಕ್ಷಿಯಾಗುವ ಮತ್ತೊಂದು ಪ್ರದೇಶ ಅಂದರೆ ಅದು ಮಾರುತಿ ಸೇವಾನಗರ. ಬಾಣಸವಾಡಿ ಹಾಗೂ ಔಟರ್​ ರಿಂಗ್ ರೋಡ್​​ಗೆ ಸಂಪರ್ಕ ಕಲ್ಪಿಸುವ ಈ ಮಾರ್ಗದಲ್ಲಿನ ಓಡಾಟ ದುಸ್ತರವಾಗಿದೆ. ಹೀಗಾಗಿ ರೋಸಿಹೋಗಿದ್ದ ವಾಹನ ಸವಾರರಿಗೆ ಜಿಬಿಎ ಗುಡ್ ನ್ಯೂಸ್ ನೀಡಿದೆ. ಈ ಭಾಗದ ಟ್ರಾಫಿಕ್ ಸಮಸ್ಯೆಗೆ ಮುಕ್ತಿ ನೀಡಲು ಪ್ಲ್ಯಾನ್ ಮಾಡಲಾಗಿದೆ. ಏನದು? ಎನ್ನುವ ವಿವರ ಇಲ್ಲಿದೆ.

ಆದಾಯ ಕೊರತೆ ನೀಗಿಸಲು ಫ್ರೀಡಂ ಪಾರ್ಕ್ ಆವರಣ ಬಾಡಿಗೆಗೆ ನೀಡಲು ಮುಂದಾದ ಜಿಬಿಎ

ಬೆಂಗಳೂರಿನ ಐತಿಹಾಸಿಕ ಫ್ರೀಡಂ ಪಾರ್ಕ್ ಅನ್ನು ವಾಣಿಜ್ಯ ಉದ್ದೇಶಗಳಿಗಾಗಿ ಬಾಡಿಗೆಗೆ ನೀಡಲು ಜಿಬಿಎ (GBA) ಮುಂದಾಗಿದೆ. ನಗರ ಪಾಲಿಕೆಗಳ ಆದಾಯ ಕೊರತೆ ನೀಗಿಸಲು ಈ ನಿರ್ಧಾರ ಕೈಗೊಂಡಿದ್ದು, ಪ್ರತಿಭಟನೆಗಳಿಗೆ ಮೀಸಲಾದ ಈ ಜಾಗವನ್ನು ವಾಣಿಜ್ಯೀಕರಣಗೊಳಿಸುವುದು ವ್ಯಾಪಕ ವಿರೋಧಕ್ಕೆ ಕಾರಣವಾಗಿದೆ. ಪ್ರತಿಭಟನಾಕಾರರಿಗೆ ಮೂಲ ಸೌಕರ್ಯಗಳ ಕೊರತೆ ಆರೋಪದ ನಡುವೆಯೇ ಜಿಬಿಎ ಈ ನಡೆ ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ.

ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ

ಜಿಬಿಎ ನಿರ್ಲಕ್ಷ್ಯದಿಂದ ಕಾಂಗ್ರೆಸ್‌ನ ಕನಸಿನ ಯೋಜನೆಯಾದ ಇಂದಿರಾ ಕ್ಯಾಂಟೀನ್‌ಗಳ ಅವ್ಯವಸ್ಥೆ ಟಿವಿ9 ರಿಯಾಲಿಟಿ ಚೆಕ್‌ನಲ್ಲಿ ಬಹಿರಂಗಗೊಂಡಿದೆ. ಬಡವರ ಹಸಿವು ನೀಗಿಸುವ ಉದ್ದೇಶದಿಂದ ಆರಂಭವಾದ ಇಂದಿರಾ ಕ್ಯಾಂಟೀನ್‌ಗಳು ನಿರ್ಲಕ್ಷ್ಯಕ್ಕೆ ಒಳಗಾಗಿವೆ. ಬೆಂಗಳೂರಿನ ಸಂಪಂಗಿರಾಮನಗರದ ಇಂದಿರಾ ಕ್ಯಾಂಟೀನ್‌ನಲ್ಲಿ ಮೆನು ಪ್ರಕಾರ ತಿಂಡಿ ನೀಡಲಾಗುತ್ತಿಲ್ಲ. ಶನಿವಾರ ವಾಂಗೀಬಾತ್ ಮತ್ತು ಇಡ್ಲಿ ನೀಡಬೇಕಿದ್ದರೂ, ಕೇವಲ ಇಡ್ಲಿ ಮತ್ತು ಸಾಂಬಾರ್ ಮಾತ್ರ ಒದಗಿಸಲಾಗುತ್ತಿದೆ. ಚಟ್ನಿ ನೀಡದೆ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬೆಲ್ಲಾ ಆರೋಪಗಳು ಕೇಳಿಬಂದಿದ್ದು, ಗ್ರಾಹಕರು ಈ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ. ಹಿಂದಿನ ಉತ್ತಮ ಆಹಾರ ಆಯ್ಕೆಗಳು ಈಗ ಲಭ್ಯವಿಲ್ಲ ಎಂದು ಗ್ರಾಹಕರು ಅಸಮಾಧಾನ ವ್ಯಕ್ತಪಡಿಸಿದ್ದು, ಇದು ಗ್ರಾಹಕರ ಸಂಖ್ಯೆ ಇಳಿಕೆಗೆ ಕಾರಣವಾಗಿದೆ.

ದೋಸ್ತಿ ನಾಯಕರ ನಡುವೆ ದಂಗಲ್​: ಜಿಬಿಎ ಎಲೆಕ್ಷನ್​​ಗೆ ಜೆಡಿಎಸ್ ಪ್ರತ್ಯೇಕ ಸ್ಪರ್ಧೆ?; ಕುತೂಹಲ ಮೂಡಿಸಿದ ಹೆಚ್​​ಡಿಕೆ ನಡೆ

ಸ್ಥಳೀಯ ಸಂಸ್ಥೆ ಚುನಾವಣೆ ಹೊತ್ತಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಬಿರುಕು ಮೂಡಿದೆ. ಜಿಬಿಎ ಚುನಾವಣೆಯಲ್ಲಿ ಸೀಟು ಹಂಚಿಕೆ ಬಗ್ಗೆ ಸಮನ್ವಯದ ಕೊರತೆಯಿಂದ 85-100 ವಾರ್ಡ್‌ಗಳಲ್ಲಿ JDS ಪ್ರತ್ಯೇಕವಾಗಿ ಸ್ಪರ್ಧಿಸಲು ಹೆಚ್​.ಡಿ. ಕುಮಾರಸ್ವಾಮಿ ಚಿಂತನೆ ನಡೆಸಿದ್ದಾರೆ. ಮತ್ತೊಂದೆಡೆ, 2028ರ ಸಿಎಂ ಸ್ಥಾನಕ್ಕೆ ಮೈತ್ರಿ ನಾಯಕರ ನಡುವೆ ಈಗಲೇ ಆಂತರಿಕ ಪೈಪೋಟಿ ತೀವ್ರಗೊಂಡಿದ್ದು, ಮೈತ್ರಿ ಭವಿಷ್ಯ ಕುರಿತು ಕುತೂಹಲ ಹೆಚ್ಚಿಸಿದೆ.

  • Sunil MH
  • Updated on: Feb 15, 2026
  • 9:27 am

ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ

ಮಹಾಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಫೆಬ್ರವರಿ 15 ರಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ಮತ್ತು ಪ್ರಾಣಿ ವಧೆಯನ್ನು ನಿಷೇಧಿಸಿ ಜಿಬಿಎ ಆದೇಶ ಹೊರಡಿಸಿದೆ. ಜಿಬಿಎ ಪಶುಪಾಲನೆ ವಿಭಾಗದ ಉಪ ನಿರ್ದೇಶಕರು ಈ ಕುರಿತು ಅಧಿಕೃತ ಸೂಚನೆ ನೀಡಿದ್ದು, ಹಬ್ಬದ ದಿನದಂದು ಯಾವುದೇ ಮಾಂಸ ಉತ್ಪನ್ನಗಳ ಮಾರಾಟಕ್ಕೆ ಅವಕಾಶವಿಲ್ಲ ಎಂದು ತಿಳಿಸಲಾಗಿದೆ.

ಬೆಂಗಳೂರಿನ ಈ ಕೆರೆಗಳಲ್ಲಿ ಇನ್ನು ಬೋಟಿಂಗ್ ಮಾಡಬಹುದು! ಕೆರೆಗಳ ನಿರ್ವಹಣೆಗೆ ಜಿಬಿಎ ಹೊಸ ಪ್ಲ್ಯಾನ್

ಬೆಂಗಳೂರಿನ ಕೆರೆಗಳ ನಿರ್ವಹಣೆಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹೊಸ ಯೋಜನೆಯನ್ನು ಪ್ರಸ್ತಾಪಿಸಿದೆ. ನಗರದ 183 ಕೆರೆಗಳ ಪೈಕಿ 10 ಕೆರೆಗಳಲ್ಲಿ ಬೋಟಿಂಗ್ ವ್ಯವಸ್ಥೆ ಜಾರಿಗೆ ತರಲು ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದೊಂದಿಗೆ ಜಿಬಿಎ ಜಿಬಿಎ ಕೈಜೋಡಿಸಿದೆ.

  • Shivaraj
  • Updated on: Feb 13, 2026
  • 2:02 pm

ಸಾಕು ನಾಯಿಗಳಿಗೆ ಹೊಸ ರೂಲ್ಸ್ : ಇದನ್ನು ಮೀರಿದ್ರೆ ಮಾಲೀಕರ ಮೇಲೆ ಬೀಳುತ್ತೆ ಕೇಸ್

ದಿನದಿಂದ ದಿನಕ್ಕೆ ಬೀದಿ ನಾಯಿಗಳ ಕಾಟ ಹೆಚ್ಚಾಗುತ್ತಿದ್ದು, ಇದಕ್ಕೆ ಕಾಡಿವಾಣ ಹಾಕಲು ಜಿಬಿಎಯಿಂದ ಅನೇಕ ಕಸರತ್ತು ಮಾಡಲಾಗಿದೆ. ಇದರ ಬೆನ್ನಲೇ ಶ್ವಾನ ಪ್ರಿಯರಿಗೆ ಮತ್ತೆ ಜಿಬಿಎ ಬಿಗ್ ಶಾಕ್ ಕೊಟ್ಟಿದೆ. ಸಾಕು ನಾಯಿಗಳಿಗಾಗಿ ಇನ್ಮುಂದೆ ಹೊಸ ರೂಲ್ಸ್ ಜೊತೆಗೆ ಲೈಸೆನ್ಸ್ ಪಡೆಯೋಕೆ ಸೂಚನೆ ನೀಡಿದ್ದು, ಪಾಲಿಕೆಯ ಬೈಲಾ ಉಲ್ಲಂಘಿಸಿ ನಾಯಿ ಸಾಕಿದ್ರೆ ಜೈಲೇ ಗತಿ.

ಮೆಟ್ರೋ ಟಿಕೆಟ್ ಬೆನ್ನಲ್ಲೇ ಬೆಂಗಳೂರಿನಲ್ಲಿ ಏರಿಕೆಯಾಗುತ್ತಾ ಕಾವೇರಿ ನೀರಿನ ದರ? ಜಲಮಂಡಳಿ ಅಧ್ಯಕ್ಷರಿಂದ ಸ್ಪಷ್ಟನೆ

Bangalore Water Price: ಬೆಂಗಳೂರಿನಲ್ಲಿ ಮೆಟ್ರೋ ಟಿಕೆಟ್ ದರ ಏರಿಕೆ ಬೆನ್ನಲ್ಲೇ ಮತ್ತೆ ನೀರಿನ ದರವೂ ಹೆಚ್ಚಳವಾಗುತ್ತದೆ ಎಂಬ ವದಂತಿ ಹರಡಿದೆ. ಕಾವೇರಿ ನೀರಿದ ದರ ಏರಿಕೆ ಈ ಬಗ್ಗೆ ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಸ್ಪಷ್ಟನೆ ನೀಡಿದ್ದಾರೆ. ಅವರು ನೀಡಿದ ಮಾಹಿತಿ ಇಲ್ಲಿದೆ.

  • Shivaraj
  • Updated on: Feb 5, 2026
  • 1:11 pm

ಬೆಂಗಳೂರಿನ ಪಿಜಿಗಳಿಗೆ ಜಿಬಿಎ ಶಾಕ್! 500ಕ್ಕೂ ಹೆಚ್ಚು ಪಿಜಿಗಳಿಗೆ ನೋಟಿಸ್

ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಪಿಜಿಗಳ ಕಳಪೆ ಕಾರ್ಯನಿರ್ವಹಣೆಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಕಡಿವಾಣ ಹಾಕಿದೆ. ಮೂಲಭೂತ ನಿಯಮಗಳನ್ನು ಉಲ್ಲಂಘಿಸಿದ 8 ಅಸುರಕ್ಷಿತ ಪಿಜಿಗಳಿಗೆ ಬೀಗ ಜಡಿಯಲಾಗಿದ್ದು, 574 ಪಿಜಿಗಳಿಗೆ ನೋಟಿಸ್ ನೀಡಲಾಗಿದೆ. ಒಟ್ಟು 3.09 ಲಕ್ಷ ರೂ. ದಂಡ ವಿಧಿಸಲಾಗಿದೆ. ಪಿಜಿ ಮಾಲೀಕರು ನಿಯಮ ಪಾಲಿಸದಿದ್ದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.

ಬೆಂಗಳೂರಿನಲ್ಲಿ ಮತ್ತೆ ಶುರುವಾಗಲಿದೆ ಟೋಯಿಂಗ್: ಎಲ್ಲೆಂದರಲ್ಲಿ ವಾಹನ ಪಾರ್ಕ್ ಮಾಡೋ ಮುನ್ನ ಎಚ್ಚರ

ಬೆಂಗಳೂರಿನಲ್ಲಿ ಮಿತಿಮೀರಿದ ವಾಹನಗಳ ಸಂಖ್ಯೆಯಿಂದಾಗಿ ಟ್ರಾಫಿಕ್ ಕಿರಿಕಿರಿ ಹೆಚ್ಚಾಗಿದ್ದರೆ, ಅನಧಿಕೃತ ಪಾರ್ಕಿಂಗ್ ಕೂಡ ಹೆಚ್ಚಾಗಿರುವುದು ತಲೆನೋವಾಗಿ ಪರಿಣಮಿಸಿದೆ. ಇದರಿಂದಾಗಿ ನಗರದ ಹಲವೆಡೆ ಸುಗಮ ಸಂಚಾರಕ್ಕೆ ಅಡ್ಡಿಯಾಗಿದ್ದು, ಟ್ರಾಫಿಕ್ ಪೊಲೀಸರಿಗೂ ವಾಹನಗಳ ನಿಯಂತ್ರಣ ಕಷ್ಟವಾಗಿದೆ. ಹೀಗಾಗಿ ಮತ್ತೆ ಟೋಯಿಂಗ್ ಅಸ್ತ್ರ ಹೂಡಲು ಜಿಬಿಎ ಹಾಗೂ ಸಂಚಾರ ಪೊಲೀಸರು ಸಜ್ಜಾಗಿದ್ದಾರೆ.

ಜಿಬಿಎ ಚುನಾವಣೆ: ಬ್ಯಾಲೆಟ್ ಪೇಪರ್ ಬಳಕೆಗೆ ವಿರೋಧ, ಇವಿಎಂ ಬಳಸುವಂತೆ ಸಂಘ-ಸಂಸ್ಥೆಗಳ ಪಟ್ಟು

ಆರು ವರ್ಷಗಳ‌ ಬಳಿಕ ಪಾಲಿಕೆ ಚುನಾವಣೆಗೆ ಭರದ ಸಿದ್ಧತೆ ನಡೆದಿದೆ. ರಾಜಕೀಯ ಪಕ್ಷಗಳಲ್ಲೂ ಅಬ್ಬರದ ಚಟುವಟಿಕೆ ಶುರುವಾಗಿದೆ. ಇದರ ನಡುವೆ ರಾಜ್ಯ ಚುನಾವಣಾ ಆಯೋಗ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಲು ಹೊರಟಿದ್ದಕ್ಕೆ ಸಾರ್ವಜನಿಕರು ಕಿಡಿ ಕಾರುತ್ತಿದ್ದಾರೆ. ಬ್ಯಾಲೆಟ್ ಪೇಪರ್ ಕೈ ಬಿಟ್ಟು ಇವಿಎಂನಲ್ಲೇ ಚುನಾವಣೆ ನಡೆಸುವಂತೆ ಆಂದೋಲನ ಶುರು ಮಾಡಿದ್ದಾರೆ.

ಗಣರಾಜ್ಯೋತ್ಸವ: ಜಿಬಿಎ ಎಡವಟ್ಟು, ಸ್ವಾಗತ ಫಲಕಗಳಲ್ಲಿ ಇನ್ನೂ ಬಿಬಿಎಂಪಿ ಹೆಸರು!

77ನೇ ಗಣರಾಜ್ಯೋತ್ಸವ ಸಂಭ್ರಮದ ನಡುವೆ ಮಾಣೆಕ್ ಷಾ ಪೆರೇಡ್ ಮೈದಾನದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ದೊಡ್ಡ ಎಡವಟ್ಟು ಮಾಡಿದೆ. ಸ್ವಾಗತ ಫಲಕಗಳಲ್ಲಿ ಜಿಬಿಎ ಬದಲಿಗೆ ಹಳೆಯ ಬಿಬಿಎಂಪಿ ಹೆಸರನ್ನೇ ಬಳಸಲಾಗಿದೆ. ಮುಖ್ಯಮಂತ್ರಿಗಳು, ರಾಜ್ಯಪಾಲರು ಭಾಗವಹಿಸುವ ಈ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ.

ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ