GBA
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಇದರ ಆಡಳಿತವನ್ನು ಪುನರ್ ರಚಿಸಿ ಕರ್ನಾಟಕ ಸರ್ಕಾರ 2025ರ ಸೆಪ್ಟೆಂಬರ್ 2 ರಿಂದ ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ಆಡಳಿತ ಜಾರಿಗೊಳಿಸಿದೆ. ಗ್ರೇಟರ್ ಬೆಂಗಳೂರು ಅಥಾರಿಟಿ ಅಡಿ ಐದು ಹೊಸ ಪಾಲಿಕೆಗಳನ್ನು ರಚನೆ ಮಾಡಲಾಗಿದ್ದು, ಬಿಬಿಎಂಪಿಯ ಮುಖ್ಯ ಕಚೇರಿ ಗ್ರೇಟರ್ ಬೆಂಗಳೂರು ಅಥಾರಿಟಿ ಪ್ರಧಾನ ಕಚೇರಿಯಾಗಿ ಬದಲಾಗಿದೆ. ಉಳಿದಂತೆ ಐದು ಭಾಗಗಳಾಗಿ ಗುರುತಿಸಲಾಗಿದ್ದು ಕೇಂದ್ರ, ಬೆಂಗಳೂರು ಪೂರ್ವ, ಬೆಂಗಳೂರು ಪಶ್ಚಿಮ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ನಗರಗಳಾಗಿ ವಿಭಜಿಸಲಾಗಿದೆ. ಐಎಎಸ್, ಐಪಿಎಸ್ ಹುದ್ದೆಗಳನ್ನು ಗ್ರೇಟರ್ ಬೆಂಗಳೂರು ಅಥಾರಿಟಿಯ ಸ್ವರೂಪಕ್ಕೆ ತಕ್ಕಂತೆ ಹಂಚಿಕೆ ಮಾಡಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ರಚನೆ ಮಾಡಲಾಗಿದ್ದು ಇದಕ್ಕೆ ಮುಖ್ಯಮಂತ್ರಿಗಳು ಅಧ್ಯಕ್ಷರಾಗಿ, ಬೆಂಗಳೂರು ನಗರಾಭಿವೃದ್ಧಿ ಸಚಿವರು ಉಪಾಧ್ಯಕ್ಷರಾಗಿರುತ್ತಾರೆ. ಕೇಂದ್ರ ಹಣಕಾಸು ಸಚಿವರು ಸೇರಿ 73 ಮಂದಿಯನ್ನು ಪದನಿಮಿತ್ತ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಜಿಬಿಎ ಸದಸ್ಯರಾಗಿ ಬೆಂಗಳೂರಿನ ಮೂವರು ಸಂಸದರು, ಬೆಂಗಳೂರು ವ್ಯಾಪ್ತಿಯ ಶಾಸಕರನ್ನು ನೇಮಿಸಲಾಗಿದೆ.
ಶಿವಾಜಿನಗರದಲ್ಲಿ ಫುಟ್ಪಾತ್ ಒತ್ತುವರಿ ತೆರವು ವೇಳೆ ಹಲ್ಲೆ: 7 ಆರೋಪಿಗಳ ಬಂಧನ, ಕ್ಷಮೆಯಾಚನೆ ವೀಡಿಯೋ ಹಂಚಿಕೊಂಡ ಪೊಲೀಸ್!
ಬೆಂಗಳೂರಿನ ಶಿವಾಜಿನಗರದಲ್ಲಿ ಫುಟ್ಪಾತ್ ಒತ್ತುವರಿ ತೆರವು ವೇಳೆ ಜಿಬಿಎ ಹಾಗೂ ಪಾಲಿಕೆ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಘಟನೆ ಮಂಗಳವಾರ ನಡೆದಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ಸಚಿವ ಕೃಷ್ಣ ಭೈರೇಗೌಡ ಖಡಕ್ ಎಚ್ಚರಿಕೆಯನ್ನೂ ಸಹ ನೀಡಿದ್ದರು. ಈ ಬೆನ್ನಲ್ಲೇ ಏಳು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದು, ಆರೋಪಿಗಳು 'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಕ್ಷಮೆ ಕೇಳುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ.
- Bhavana Hegde
- Updated on: Jul 22, 2026
- 11:17 am
ಶಿವಾಜಿನಗರ ಹಲ್ಲೆ ಪ್ರಕರಣ: ‘ನಾವು ಮಾಡಿದ್ದು ತಪ್ಪು’ ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
ವಾಜಿನಗರದಲ್ಲಿ ಜಿಬಿಎ ವತಿಯಿಂದ ಮಂಗಳವಾರ ನಡೆದ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಸಿಬ್ಬಂದಿ ಮೇಲೆ ಸ್ಥಳೀಯ ಸಂಘಟನೆಗಳ ಕಾರ್ಯಕರ್ತರು ಹಲ್ಲೆ ನಡೆಸಲಾಗಿತ್ತು. ಈ ಬಗ್ಗೆ ನಗರಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ ಮಾತನಾಡಿ, ಇವರು ಜೀವನೋಪಾಯಕ್ಕಾಗಿ ಕಷ್ಟಪಟ್ಟು ದುಡಿಯುವ ಬಡಜನರಲ್ಲ. ಇವರು ಸಮಾಜಘಾತುಕ ಶಕ್ತಿಗಳು ಎಂದು ಕಿಡಿಕಾರಿದ್ದರು. ಇದೀಗ ಬೆಂಗಳೂರು ಪೊಲೀಸರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಹಂಚಿಕೊಂಡಿದ್ದು, ಈ ವೀಡಿಯೋದಲ್ಲಿ ಕಾನೂನನ್ನು ಯಾರೂ ಕೈಗೆ ತೆಗೆದುಕೊಳ್ಳಬಾರದು. ನಾವು ಮಾಡಿದ್ದು ತಪ್ಪು ಎಂದು ಆರೋಪಿಗಳು ಕೈ ಮುಗಿದು ಬೇಡಿಕೊಂಡಿದ್ದಾರೆ.
- Bhavana Hegde
- Updated on: Jul 22, 2026
- 11:23 am
ಶಿವಾಜಿನಗರದಲ್ಲಿ ಫುಟ್ಪಾತ್ ತೆರವು: ಪೂರ್ವ ಮಾಹಿತಿ ಇಲ್ಲದೆ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
Footpath Encroachment Drive: ಶಿವಾಜಿನಗರದಲ್ಲಿ ನಡೆದ ಫುಟ್ಪಾತ್ ತೆರವು ಕಾರ್ಯಾಚರಣೆ ವೇಳೆ ವ್ಯಾಪಾರಿಗಳಿಗೆ ಯಾವುದೇ ಮುನ್ಸೂಚನೆ ನೀಡಿಲ್ಲ. ಏಕಾಏಕಿ ಅಂಗಡಿಗಳನ್ನು ತೆರವುಗೊಳಿಸಿದ್ದರಿಂದ ವ್ಯಾಪಾರದ ವಸ್ತುಗಳು ಹಾಳಾಗಿವೆ. ದಶಕಗಳಿಂದ ವ್ಯಾಪಾರ ನಡೆಸುತ್ತಿದ್ದವರಿಗೆ ನ್ಯಾಯ ಸಿಗದೇ, ಜೀವನೋಪಾಯಕ್ಕೆ ಸಂಕಷ್ಟ ಎದುರಾಗಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
- Lakshmi Narasimha Swamy L
- Updated on: Jul 21, 2026
- 3:35 pm
ಶಿವಾಜಿನಗರ ಹಲ್ಲೆ ಪ್ರಕರಣ: ಇವರು ಜೀವನೋಪಾಯಕ್ಕಾಗಿ ಕಷ್ಟಪಟ್ಟು ದುಡಿಯುವ ಬಡಜನರಲ್ಲ, ಸಮಾಜಘಾತುಕರು; ಸಚಿವ ಕೃಷ್ಣಭೈರೇಗೌಡ ಕಿಡಿ
Bengaluru News: ಶಿವಾಜಿನಗರದಲ್ಲಿ ಫುಟ್ಪಾತ್ ಒತ್ತುವರಿ ತೆರವುಗೊಳಿಸುತ್ತಿದ್ದ ಜಿಬಿಎ ಸಿಬ್ಬಂದಿ ಮೇಲಿನ ಹಲ್ಲೆಯನ್ನು ಸಚಿವ ಕೃಷ್ಣಬೈರೇಗೌಡ ತೀವ್ರವಾಗಿ ಖಂಡಿಸಿದ್ದು, ದಾಳಿ ನಡೆಸಿದವರು ಬಡವರಲ್ಲ, ಸಮಾಜಘಾತುಕರು ಎಂದು ಕಿಡಿಕಾರಿದ್ದಾರೆ. ಘಟನೆ ಸಂಬಂಧ ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು 7 ಮಂದಿಯನ್ನು ವಶಕ್ಕೆ ಪಡೆದಿದ್ದು,ಯಾರೇ ತಪ್ಪು ಮಾಡಿದರೂ ಅವರನ್ನು ಯಾವುದೇ ಕಾರಣಕ್ಕೂ ಬಿಡಲ್ಲ ಎಂದು ಬೆಂಗಳೂರು ಪೂರ್ವ ವಿಭಾಗದ ಡಿಸಿಪಿ ವಿಕ್ರಮ್ ಆಮ್ಟೆ ತಿಳಿಸಿದ್ದಾರೆ.
- Prasanna Gaonkar
- Updated on: Jul 21, 2026
- 3:06 pm
ಶಿವಾಜಿನಗರದಲ್ಲಿ ಫುಟ್ಪಾತ್ ತೆರವು ಕಾರ್ಯಾಚರಣೆ ವೇಳೆ ಜಿಬಿಎ ಸಿಬ್ಬಂದಿ ಮೇಲೆ ಪೆಪ್ಪರ್ ಸ್ಪ್ರೇ, ಹಲ್ಲೆ ಆರೋಪ
ಬೆಂಗಳೂರಿನ ಶಿವಾಜಿನಗರದಲ್ಲಿ ಜಿಬಿಎ ವತಿಯಿಂದ ನಡೆದ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಸ್ಥಳೀಯ ಸಂಘಟನೆಗಳು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದ್ದು, ಪಾಲಿಕೆ ಸಿಬ್ಬಂದಿ ಹಾಗೂ ಜೆಸಿಬಿ ಚಾಲಕನ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪ ಕೇಳಿಬಂದಿದೆ. ಪೊಲೀಸರು ಓರ್ವನನ್ನು ವಶಕ್ಕೆ ಪಡೆದಿದ್ದು, ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.
- Lakshmi Narasimha Swamy L
- Updated on: Jul 21, 2026
- 2:02 pm
ಫುಟ್ಪಾತ್, ಬಿಡಾಡಿ ವಾಹನಗಳ ತೆರವಿನ ಬಳಿಕ ರಾಜಕಾಲುವೆ ಒತ್ತುವರಿದಾರರಿಗೂ ಶಾಕ್ ಕೊಡಲು ಮುಂದಾದ ಜಿಬಿಎ
Bengaluru News: ಫುಟ್ಪಾತ್ ಮತ್ತು ಬಿಡಾಡಿ ವಾಹನಗಳ ತೆರವಿನ ಬೆನ್ನಲ್ಲೇ, ವಿಶ್ವ ಬ್ಯಾಂಕ್ ನೆರವಿನೊಂದಿಗೆ ಬಾಕಿ ಉಳಿದಿರುವ 260 ಕಿ.ಮೀ. ರಾಜಕಾಲುವೆ ಅಭಿವೃದ್ಧಿಪಡಿಸಲು ಹಾಗೂ ಒತ್ತುವರಿ ತೆರವುಗೊಳಿಸಲು ನಿರ್ಧರಿಸಿರೋದಾಗಿ ಬೆಂಗಳೂರು ನಗರಾಭಿವೃದ್ದಿ ಸಚಿವ ಕೃಷ್ಣ ಭೈರೇಗೌಡ ಮಾಹಿತಿ ನೀಡಿದ್ದಾರೆ. ಹೀಗಾಗಿ ರಾಜಕಾಲುವೆ ಒತ್ತುವರಿದಾರರಿಗೆ ಜಿಬಿಎಯಿಂದ ಬಿಗ್ ಶಾಕ್ ಸಗೋದು ಕನ್ಫರ್ಮ್ ಆಗಿದೆ.
- Lakshmi Narasimha Swamy L
- Updated on: Jul 21, 2026
- 12:45 pm
ಬೆಂಗಳೂರಿಗೂ ಲಗ್ಗೆ ಇಟ್ಟ ಚಿರತೆ: ಬೀದಿ ನಾಯಿ ಮೇಲೆ ಅಟ್ಯಾಕ್, ಬೆಚ್ಚಿಬಿದ್ದ ಸ್ಥಳೀಯರು
ಕಾಡಂಚಿನಲ್ಲಿರುವ ಹಳ್ಳಿಗಳಲ್ಲಿ ಚಿರತೆ ಕಾಟ ಇರುವುದು ಸಾಮಾನ್ಯ ಆದ್ರೆ, ಇದೀಗ ಸಿಲಿಕಾನ್ ಸಿಟಿ ಬೆಂಗಳೂರಿಗೂ ಚಿರತೆ ಲಗ್ಗೆ ಇಟ್ಟಿದ್ದು, ಬೀದಿ ನಾಯಿ ಮೇಲೆ ದಾಳಿ ಮಾಡಿದೆ. ಹನ್ನೊಂದು ದಿನದಲ್ಲಿ 4 ಬಾರಿ ಚಿರತೆ ಪ್ರತ್ಯಕ್ಷವಾಗಿದೆ. ಇದರಿಂದ ಬೆಂಗಳೂರಿಗರಿಗೂ ಚಿರತೆ ಭಯ ಶುರುವಾಗಿದೆ. ಹಾಗಾದ್ರೆ, ಬೆಂಗಳೂರಿನ ಯಾವ ಏರಿಯಾದಲ್ಲಿ ಚಿರತೆ ಕಾಣಿಸಿಕೊಂಡಿದೆ ಎನ್ನುವ ಡಿಟೇಲ್ಸ್ ಇಲ್ಲಿದೆ.
- Kiran Surya
- Updated on: Jul 20, 2026
- 10:42 pm
ಬೆಂಗಳೂರಿನ ಪೌರ ಕಾರ್ಮಿಕರಿಗೆ ಪ್ರವಾಸ ಭಾಗ್ಯ! ಕರ್ನಾಟಕದ 6 ನಗರಗಳಿಗೆ ಸ್ಟಡಿ ಟೂರ್
Bangalore News: ಬೆಂಗಳೂರಿನ 18 ಸಾವಿರ ಪೌರಕಾರ್ಮಿಕರನ್ನು ರಾಜ್ಯದ ವಿವಿಧ ನಗರಗಳಿಗೆ ಅಧ್ಯಯನ ಪ್ರವಾಸಕ್ಕೆ ಕರೆದೊಯ್ಯಲು ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆ (ಬಿಎಸ್ಡಬ್ಲ್ಯುಎಂಎಲ್) ಯೋಜನೆ ರೂಪಿಸಿದೆ. ತ್ಯಾಜ್ಯ ನಿರ್ವಹಣೆಯ ಉತ್ತಮ ಮಾದರಿಗಳನ್ನು ಕಲಿತು ಅಳವಡಿಸಿಕೊಳ್ಳುವ ಉದ್ದೇಶದಿಂದ ಈ ಯೋಜನೆ ರೂಪಿಸಲಾಗಿದ್ದರೂ, ಆಕ್ಷೇಪವೂ ವ್ಯಕ್ತವಾಗಿದೆ.
- Ganapathi Sharma
- Updated on: Jul 20, 2026
- 9:14 am
ದೇಸಿ ಶ್ವಾನ ದತ್ತು ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ: ಅನಾಥ ನಾಯಿಗಳನ್ನು ಎತ್ತಿ ಮುದ್ದಾಡಿದ ಸಾರ್ವಜನಿಕರು
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಪೂರ್ವ ನಗರ ಪಾಲಿಕೆ ವತಿಯಿಂದ ವೈಟ್ಫೀಲ್ಡ್ನ ನೆಕ್ಸಸ್ ಶಾಂತಿನಿಕೇತನ ಮಾಲ್ನಲ್ಲಿ "ಅಡಾಪ್ಟ್ ಮೀ ಸೆಕೆಂಡ್ ಇನ್ನಿಂಗ್ಸ್" ದೇಸಿ ಶ್ವಾನ ದತ್ತು ಅಭಿಯಾನ ಆಯೋಜಿಸಲಾಗಿತ್ತು. ಇದಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಸಾರ್ವಜನಿಕರು ಕೂಡ ದೇಸಿ ಶ್ವಾನಗಳನ್ನು ತಮ್ಮ ಕುಟುಂಬದ ಸದಸ್ಯರನ್ನಾಗಿ ದತ್ತು ಪಡೆಯುವ ಅವಕಾಶವನ್ನು ಬಳಸಿಕೊಂಡರು.
- Lakshmi Narasimha Swamy L
- Updated on: Jul 19, 2026
- 2:46 pm
2700 ಅನಾಥ ವಾಹನಗಳನ್ನು ಪಟ್ಟಿ ಮಾಡಿದ್ದೇವೆ, ಟೋಯಿಂಗ್ ಬಳಿಕವೂ ಬರದಿದ್ರೆ ಹರಾಜು ಹಾಕ್ತೇವೆ: ಸಚಿವ ಕೃಷ್ಣಭೈರೇಗೌಡ
ಬೆಂಗಳೂರು ರಸ್ತೆಗಳು ಮತ್ತು ಪಾದಚಾರಿ ಮಾರ್ಗಗಳಲ್ಲಿನ ಬೀಡಾಡಿ ವಾಹನಗಳನ್ನು ತೆರವುಗೊಳಿಸಲು ಬೃಹತ್ ಕಾರ್ಯಾಚರಣೆ ಆರಂಭವಾಗಿದೆ. ಸಚಿವ ಕೃಷ್ಣಭೈರೇಗೌಡ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಈ ಕ್ರಮವು ಸಂಚಾರ ದಟ್ಟಣೆ, ಪಾದಚಾರಿಗಳ ತೊಂದರೆ ತಪ್ಪಿಸುವ ಹಾಗೂ ನಗರದ ಸೌಂದರ್ಯ ಹೆಚ್ಚಿಸುವ ಗುರಿ ಹೊಂದಿದೆ. ನೋಟಿಸ್ ನೀಡಿದ ವಾಹನಗಳನ್ನು ಟೋಯಿಂಗ್ ಮಾಡಿ, ಮಾಲೀಕರು ಕ್ಲೈಮ್ ಮಾಡದಿದ್ದರೆ ಹರಾಜು ಮಾಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.
- Ganapathi Sharma
- Updated on: Jul 18, 2026
- 12:04 pm
ರಾಜಕೀಯವಾಗಿ ನಾವು ಸಿದ್ಧರಿದ್ದೇವೆ: SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
ಡಿಸೆಂಬರ್ 31ರೊಳಗೆ ಚುನಾವಣೆ ನಡೆಸಲು ಸುಪ್ರೀಂಕೋರ್ಟ್ ಗಡುವು ನೀಡಿದ್ದರೂ, ಸರ್ಕಾರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಿಂದಾಗಿ ವಿಳಂಬವನ್ನು ಎದುರಿಸುತ್ತಿದೆ. ಹೊಸ ಮತದಾರರ ಪಟ್ಟಿ ಸಿದ್ಧಗೊಳ್ಳುವವರೆಗೆ ಚುನಾವಣೆ ನಡೆಸುವುದು ಮತದಾರರಿಗೆ ಗೊಂದಲ ಸೃಷ್ಟಿಸಬಹುದು. ಇದೊಂದು ರಾಜಕೀಯ ಉದ್ದೇಶವಿಲ್ಲದ ಕಾನೂನಾತ್ಮಕ ಸಮಸ್ಯೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
- Mahesha E
- Updated on: Jul 17, 2026
- 4:30 pm
ಸದ್ಯಕ್ಕಿಲ್ಲ ಜಿಬಿಎ ಚುನಾವಣೆ: ಡಿಸೆಂಬರ್ 31ರ ಡೆಡ್ಲೈನ್ ನಿಗದಿಪಡಿಸಿದ ಸುಪ್ರೀಂ ಕೋರ್ಟ್
GBA Elections; ಕರ್ನಾಟಕದಲ್ಲಿ SIR ಪ್ರಕ್ರಿಯೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಗ್ರೇಟರ್ ಬೆಂಗಳೂರು ಅಥಾರಿಟಿ (GBA) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಯನ್ನು ನಡೆಸಲು ಸುಪ್ರೀಂ ಕೋರ್ಟ್ ಡಿಸೆಂಬರ್ 31ರ ಗಡುವು ವಿಧಿಸಿದೆ. ಎಸ್ಐಆರ್ ಪ್ರಕ್ರಿಯೆ ಕಾರಣ ಚುನಾವಣೆ ಮುಂದೂಡಲು ಸರ್ಕಾರ ಮಾಡಿದ್ದ ಮನವಿಗೆ ಕೋರ್ಟ್ ಅನುಮತಿ ನೀಡಿದೆ. ಆದರೆ, ಡಿಸೆಂಬರ್ 31ರೊಳಗೆ ಚುನಾವಣೆ ಪೂರ್ಣಗೊಳಿಸುವಂತೆ ನ್ಯಾಯಪೀಠ ನಿರ್ದೇಶನ ನೀಡಿದೆ.
- Prasanna Gaonkar
- Updated on: Jul 17, 2026
- 2:29 pm