GBA
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಇದರ ಆಡಳಿತವನ್ನು ಪುನರ್ ರಚಿಸಿ ಕರ್ನಾಟಕ ಸರ್ಕಾರ 2025ರ ಸೆಪ್ಟೆಂಬರ್ 2 ರಿಂದ ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ಆಡಳಿತ ಜಾರಿಗೊಳಿಸಿದೆ. ಗ್ರೇಟರ್ ಬೆಂಗಳೂರು ಅಥಾರಿಟಿ ಅಡಿ ಐದು ಹೊಸ ಪಾಲಿಕೆಗಳನ್ನು ರಚನೆ ಮಾಡಲಾಗಿದ್ದು, ಬಿಬಿಎಂಪಿಯ ಮುಖ್ಯ ಕಚೇರಿ ಗ್ರೇಟರ್ ಬೆಂಗಳೂರು ಅಥಾರಿಟಿ ಪ್ರಧಾನ ಕಚೇರಿಯಾಗಿ ಬದಲಾಗಿದೆ. ಉಳಿದಂತೆ ಐದು ಭಾಗಗಳಾಗಿ ಗುರುತಿಸಲಾಗಿದ್ದು ಕೇಂದ್ರ, ಬೆಂಗಳೂರು ಪೂರ್ವ, ಬೆಂಗಳೂರು ಪಶ್ಚಿಮ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ನಗರಗಳಾಗಿ ವಿಭಜಿಸಲಾಗಿದೆ. ಐಎಎಸ್, ಐಪಿಎಸ್ ಹುದ್ದೆಗಳನ್ನು ಗ್ರೇಟರ್ ಬೆಂಗಳೂರು ಅಥಾರಿಟಿಯ ಸ್ವರೂಪಕ್ಕೆ ತಕ್ಕಂತೆ ಹಂಚಿಕೆ ಮಾಡಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ರಚನೆ ಮಾಡಲಾಗಿದ್ದು ಇದಕ್ಕೆ ಮುಖ್ಯಮಂತ್ರಿಗಳು ಅಧ್ಯಕ್ಷರಾಗಿ, ಬೆಂಗಳೂರು ನಗರಾಭಿವೃದ್ಧಿ ಸಚಿವರು ಉಪಾಧ್ಯಕ್ಷರಾಗಿರುತ್ತಾರೆ. ಕೇಂದ್ರ ಹಣಕಾಸು ಸಚಿವರು ಸೇರಿ 73 ಮಂದಿಯನ್ನು ಪದನಿಮಿತ್ತ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಜಿಬಿಎ ಸದಸ್ಯರಾಗಿ ಬೆಂಗಳೂರಿನ ಮೂವರು ಸಂಸದರು, ಬೆಂಗಳೂರು ವ್ಯಾಪ್ತಿಯ ಶಾಸಕರನ್ನು ನೇಮಿಸಲಾಗಿದೆ.
ಬೆಂಗಳೂರಲ್ಲಿ ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ
ಬೆಂಗಳೂರಲ್ಲಿ ಎಲ್ಲೆಂದರಲ್ಲಿ ಹಳೇ ವಾಹನಗಳನ್ನ ನಿಲ್ಲಿಸಿದರೆ ಕಠಿಣ ಕ್ರಮಕೈಗೊಳ್ಳುವುದಾಗಿ ಡಿಸಿಎಂ ಡಿಕೆ ಶಿವಕುಮಾರ್ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ರಸ್ತೆಗಳಲ್ಲಿ ಎಲ್ಲೆಲ್ಲಿ ಹಳೇ ವಾಹನ ನಿಲ್ಲಿಸಿದ್ದಾರೋ ಅವುಗಳನ್ನು ತುಂಬಿಕೊಂಡು ಹೋಗಿ ಒಂದು ನಿರ್ದಿಷ್ಟ ಜಾಗದಲ್ಲಿ ಡಂಪ್ ಮಾಡುತ್ತೇವೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.
- Gangadhar Saboji
- Updated on: Mar 20, 2026
- 9:56 pm
ಲೋಪ ಆರೋಪ ಬೆನ್ನಲ್ಲೇ ಜಿಬಿಎ ಮತದಾರರ ಪಟ್ಟಿ ಆಕ್ಷೇಪಣೆಗೆ ನೀಡಿದ್ದ ಕಾಲಾವಕಾಶ ವಿಸ್ತರಣೆ
ಬೆಂಗಳೂರು ಚುನಾವಣೆಗೆ ಕೌಂಟ್ಡೌನ್ ಶುರುವಾಗಿದೆ. ರಾಜ್ಯ ಚುನಾವಣಾ ಆಯೋಗ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸಲು ಸಜ್ಜಾಗಿದೆ. ಬೆಂಗಳೂರು ಕಬ್ಜಕ್ಕೆ ತಂತ್ರ-ಪ್ರತಿತಂತ್ರಗಳು ಶುರುವಾಗಿವೆ. ಈ ಮಧ್ಯೆ ಜಿಬಿಎ ಮತದಾರರ ಪಟ್ಟಿ ಆಕ್ಷೇಪಣೆ ಸಲ್ಲಿಸಲು ನೀಡಿದ್ದ ಕಾಲಾವಕಾಶವನ್ನು ರಾಜ್ಯ ಚುನಾವಣಾ ಆಯೋಗ ಮಾರ್ಚ್ 30ರವರೆಗೆ ವಿಸ್ತರಿಸಿದೆ.
- Kiran Haniyadka
- Updated on: Mar 18, 2026
- 8:20 pm
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆ: ಕರಡು ಮತಪಟ್ಟಿ ಮತ್ತು ಮತಚೋರಿಯ ಸತ್ಯ ಅನಾವರಣ
ರಾಜ್ಯ ಚುನಾವಣೆ ಆಯೋಗ ಬಿಡುಗಡೆ ಮಾಡಿದ ಬೆಂಗಳೂರು ಕರಡು ಮತಪಟ್ಟಿ ಕಾಂಗ್ರೆಸ್ನ ಮತಚೋರಿ ಆರೋಪಗಳ ಸುಳ್ಳುತನವನ್ನು ಬಯಲುಮಾಡಿದೆ. ಹೆಸರುಗಳು ಮಾಯವಾಗಿರುವುದು ಹಾಗೂ ವೈಯಕ್ತಿಕ ಮಾಹಿತಿ ಬದಲಾಗಿರುವುದು ರಾಜ್ಯ ಆಯೋಗದ ಲೋಪಗಳನ್ನು ಎತ್ತಿ ತೋರಿಸುತ್ತದೆ.2023ರ ಪಟ್ಟಿಯ ಮರುಬಳಕೆ ಅನುಮಾನದ ಜೊತೆಗೆ ಮಾಹಿತಿ ಹುಡುಕಾಟಕ್ಕೆ ನಿರ್ಬಂಧವು ಮತದಾರರಲ್ಲಿ ಗೊಂದಲ ಮೂಡಿಸಿದ್ದು, ನಿದ್ದೆಯಲ್ಲಿರುವ ನಾಯಕರಿಗೆ ಇಂತಹ ಸೂಕ್ಷ್ಮಗಳು ಗೊತ್ತಾಗುವಷ್ಟರಲ್ಲಿ ಜಿಬಿಎ ಚುನಾವಣೆ ಮುಗಿಯದಿದ್ದರೆ ಸಾಕು ಎಂದು ಹಿರಿಯ ಪತ್ರಕರ್ತ ರಾಜೀವ್ ಹೆಗಡೆ ಅಭಿಪ್ರಾಯಪಟ್ಟಿದ್ದಾರೆ.
- Prasanna Hegde
- Updated on: Mar 16, 2026
- 7:17 pm
ಜಿಬಿಎ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸುವುದು ಹೇಗೆ? ಹಂತ ಹಂತವಾದ ಮಾಹಿತಿ ಇಲ್ಲಿದೆ
ಹಲವು ವರ್ಷಗಳ ನಂತರ ಬೆಂಗಳೂರಿನಲ್ಲಿ ವಾರ್ಡ್ ಕಾರ್ಪೊರೇಟರ್ ಚುನಾವಣೆ ನಡೆಯಲು ಸಿದ್ಧತೆಗಳು ಆರಂಭವಾಗಿವೆ.ಈ ಚುನಾವಣೆಗಾಗಿ ಜಿಬಿಎ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸುವುದು ಹೇಗೆ ಎನ್ನುವುದನ್ನು ಇಲ್ಲಿ ಹಂತ ಹಂತವಾಗಿ ವಿವರಿಸಲಾಗಿದೆ. EPIC ಸಂಖ್ಯೆ, ಹೆಸರು ಅಥವಾ ಮತದಾನ ಕೇಂದ್ರದ ಮೂಲಕ ನಿಮ್ಮ ಹೆಸರನ್ನು ಹುಡುಕಬಹುದಾಗಿದೆ. ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ, NVSP ಅಥವಾ ಬೆಂಗಳೂರು ಒನ್ ಕೇಂದ್ರಗಳ ಮೂಲಕ ನೋಂದಾಯಿಸಿಕೊಳ್ಳಬಹುದು.
- Bhavana Hegde
- Updated on: Mar 16, 2026
- 12:44 pm
ಆಸ್ತಿ ತೆರಿಗೆ ಪಾವತಿಗೂ EMI?: ಜಿಬಿಎಯಿಂದ ಬೆಂಗಳೂರಿಗರಿಗೆ ಸಿಗುತ್ತಾ ಗುಡ್ ನ್ಯೂಸ್?
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಗೆ EMI ಸೌಲಭ್ಯ ಮತ್ತು ಸಕಾಲಿಕ ಪಾವತಿಗೆ ರಿಯಾಯಿತಿ ನೀಡುವಂತೆ ರಾಜ್ಯ ಹಣಕಾಸು ಆಯೋಗವು ಶಿಫಾರಸು ಮಾಡಿದೆ. ಇದು ತೆರಿಗೆದಾರರ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡುತ್ತದೆ ಮತ್ತು ತೆರಿಗೆ ಸಂಗ್ರಹವನ್ನು ಹೆಚ್ಚಿಸುತ್ತದೆ. ಸುಮಾರು 2.75 ಲಕ್ಷ ಡಿಫಾಲ್ಟರ್ಗಳಿಂದ 786 ಕೋಟಿ ಬಾಕಿ ಇರುವ ಹಿನ್ನೆಲೆಯಲ್ಲಿ, ಈ ಹೊಸ ಕ್ರಮಗಳು ಬಾಕಿ ವಸೂಲಿಗೂ ಸಹಾಯ ಮಾಡಲಿವೆ ಎಂದು ಅಭಿಪ್ರಾಯಪಟ್ಟಿದೆ.
- Prasanna Hegde
- Updated on: Mar 11, 2026
- 11:11 am
ಬೆಂಗಳೂರಿಗರಿಗೆ ಜಿಬಿಎಯಿಂದ ಭರ್ಜರಿ ಶಾಕ್: ಹೆಚ್ಚುವರಿ ತೆರಿಗೆಗೆ ಬಿಜೆಪಿಗರು ಕೆಂಡ; ವಿಧಾನ ಸಭೆಯಲ್ಲೂ ಬಿಸಿ ಬಿಸಿ ಚರ್ಚೆ
ಬೆಂಗಳೂರಿನಲ್ಲಿ ಜಿಬಿಎ (ಗ್ರೇಟರ್ ಬೆಂಗಳೂರು ಪ್ರಾಧಿಕಾರ) ನಡೆಸಿದ ಡ್ರೋನ್ ಸರ್ವೆ ಬಳಿಕ ಹೊಸ ಹೆಚ್ಚುವರಿ ಆಸ್ತಿ ತೆರಿಗೆ ವಿಧಿಸಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಬಾಲ್ಕನಿ, ಟ್ಯಾಂಕ್ ಸೇರಿ ಮನೆಗಳ ಪೂರಕ ಕಟ್ಟಡಗಳಿಗೂ ತೆರಿಗೆ ವಿಧಿಸಿ ನೋಟಿಸ್ ನೀಡಲಾಗಿದೆ. ಬಿಜೆಪಿ ಶಾಸಕರು ಇದನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ ಡಿಸಿಎಂ ಡಿಕೆ ಶಿವಕುಮಾರ್, ಸಮಸ್ಯೆಯಿರುವವರಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿರುವುದಾಗಿ ಹೇಳಿದ್ದಾರೆ.
- Pramod Shastri G
- Updated on: Mar 10, 2026
- 12:56 pm
ಜಿಬಿಎಯ 5 ಪಾಲಿಕೆಗಳ ಚುನಾವಣೆ: ವಾರ್ಡ್ ವಾರು ಅಂತಿಮ ಮೀಸಲಾತಿ ಪ್ರಕಟ
ಗ್ರೇಟರ್ ಬೆಂಗಳೂರು 5 ಪಾಲಿಕೆ ಚುನಾವಣೆಗಾಗಿ 369 ವಾರ್ಡ್ಗಳ ಅಂತಿಮ ಮೀಸಲಾತಿ ಪಟ್ಟಿ ಪ್ರಕಟಗೊಂಡಿದೆ. ನಗರಾಭಿವೃದ್ದಿ ಇಲಾಖೆಯು ಸಾರ್ವಜನಿಕರ ಸಲಹೆಗಳ ನಂತರ ಈ ಪಟ್ಟಿಯನ್ನು ಅಂತಿಮಗೊಳಿಸಿದ್ದು, 176 ವಾರ್ಡ್ಗಳನ್ನು ಮಹಿಳೆಯರಿಗೆ ಮೀಸಲಿರಿಸಿದೆ. ಬೆಂಗಳೂರು ಕೇಂದ್ರ, ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ಪಾಲಿಕೆಗಳ ವಾರ್ಡ್ವಾರು ವಿವರಗಳು ಇಲ್ಲಿವೆ.
- Prasanna Hegde
- Updated on: Mar 8, 2026
- 10:40 am
ಕೊಟ್ಟ ಭರವಸೆ ಈಡೇರಿಸಿದ ಡಿಕೆಶಿ: ರಾಮನಗರ ಜನರ ಬಹುದಿನಗಳ ಕನಸು ನನಸು
ಬಿಎಂಟಿಸಿ ಬಸ್ ಎಂಬುದು ಬೆಂಗಳೂರಿಗರ ಅಚ್ಚುಮೆಚ್ಚಿನ ಸಂಚಾರ ಜೀವನಾಡಿ. ನಗರದ 40 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಸಂಚಾರ ಮಾಡುತ್ತಿದ್ದ ಬಿಎಂಟಿಸಿ ಬಸ್ಗಳು, ಇನ್ಮುಂದೆ ಬೆಂಗಳೂರು ನಗರದಿಂದ 80 ಕಿಮೀ ವ್ಯಾಪ್ತಿಯಲ್ಲಿ ಸಂಚಾರಿಸಲಿವೆ. ಇದರಿಂದ ಗ್ರಾಮಾಂತರ ಭಾಗದ ಪ್ರಯಾಣಿಕರಿಗೆ ತುಂಬಾ ಸಹಾಯ ಆಗಲಿದ್ದು, ಬಿಎಂಟಿಸಿಯ ಈ ನಿರ್ಧಾರದಿಂದ ಪ್ರಯಾಣಿಕರು ಕೂಡ ಸಂತಸಗೊಂಡಿದ್ದಾರೆ. ಇನ್ನು ಮೊದಲ ಹಂತದಲ್ಲೇ ರಾಮನಗರ ಜನರ ಬಹುದಿನಗಳ ಕನಸು ನನಸಾಗಿದೆ.
- Prashantha B
- Updated on: Mar 4, 2026
- 5:32 pm
ಬೆಂಗಳೂರಿನ ಈ ಭಾಗದ ಜನರಿಗೆ ಸಿಹಿಸುದ್ದಿ: ಟ್ರಾಫಿಕ್ ದಟ್ಟಣೆಗೆ ಸಿಗಲಿದೆ ಶೀಘ್ರ ಮುಕ್ತಿ
ಬೆಂಗಳೂರಿನಲ್ಲಿ ಜಿಗುಪ್ಸೆ ಹುಟ್ಟಿಸುವ ಭಯಾನಕ ಟ್ರಾಫಿಕ್ ಜಾಮ್ಗೆ ಸಾಕ್ಷಿಯಾಗುವ ಮತ್ತೊಂದು ಪ್ರದೇಶ ಅಂದರೆ ಅದು ಮಾರುತಿ ಸೇವಾನಗರ. ಬಾಣಸವಾಡಿ ಹಾಗೂ ಔಟರ್ ರಿಂಗ್ ರೋಡ್ಗೆ ಸಂಪರ್ಕ ಕಲ್ಪಿಸುವ ಈ ಮಾರ್ಗದಲ್ಲಿನ ಓಡಾಟ ದುಸ್ತರವಾಗಿದೆ. ಹೀಗಾಗಿ ರೋಸಿಹೋಗಿದ್ದ ವಾಹನ ಸವಾರರಿಗೆ ಜಿಬಿಎ ಗುಡ್ ನ್ಯೂಸ್ ನೀಡಿದೆ. ಈ ಭಾಗದ ಟ್ರಾಫಿಕ್ ಸಮಸ್ಯೆಗೆ ಮುಕ್ತಿ ನೀಡಲು ಪ್ಲ್ಯಾನ್ ಮಾಡಲಾಗಿದೆ. ಏನದು? ಎನ್ನುವ ವಿವರ ಇಲ್ಲಿದೆ.
- Ramesh B Jawalagera
- Updated on: Feb 26, 2026
- 6:07 pm
ಆದಾಯ ಕೊರತೆ ನೀಗಿಸಲು ಫ್ರೀಡಂ ಪಾರ್ಕ್ ಆವರಣ ಬಾಡಿಗೆಗೆ ನೀಡಲು ಮುಂದಾದ ಜಿಬಿಎ
ಬೆಂಗಳೂರಿನ ಐತಿಹಾಸಿಕ ಫ್ರೀಡಂ ಪಾರ್ಕ್ ಅನ್ನು ವಾಣಿಜ್ಯ ಉದ್ದೇಶಗಳಿಗಾಗಿ ಬಾಡಿಗೆಗೆ ನೀಡಲು ಜಿಬಿಎ (GBA) ಮುಂದಾಗಿದೆ. ನಗರ ಪಾಲಿಕೆಗಳ ಆದಾಯ ಕೊರತೆ ನೀಗಿಸಲು ಈ ನಿರ್ಧಾರ ಕೈಗೊಂಡಿದ್ದು, ಪ್ರತಿಭಟನೆಗಳಿಗೆ ಮೀಸಲಾದ ಈ ಜಾಗವನ್ನು ವಾಣಿಜ್ಯೀಕರಣಗೊಳಿಸುವುದು ವ್ಯಾಪಕ ವಿರೋಧಕ್ಕೆ ಕಾರಣವಾಗಿದೆ. ಪ್ರತಿಭಟನಾಕಾರರಿಗೆ ಮೂಲ ಸೌಕರ್ಯಗಳ ಕೊರತೆ ಆರೋಪದ ನಡುವೆಯೇ ಜಿಬಿಎ ಈ ನಡೆ ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ.
- Prasanna Hegde
- Updated on: Feb 24, 2026
- 7:08 pm
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯದಿಂದ ಕಾಂಗ್ರೆಸ್ನ ಕನಸಿನ ಯೋಜನೆಯಾದ ಇಂದಿರಾ ಕ್ಯಾಂಟೀನ್ಗಳ ಅವ್ಯವಸ್ಥೆ ಟಿವಿ9 ರಿಯಾಲಿಟಿ ಚೆಕ್ನಲ್ಲಿ ಬಹಿರಂಗಗೊಂಡಿದೆ. ಬಡವರ ಹಸಿವು ನೀಗಿಸುವ ಉದ್ದೇಶದಿಂದ ಆರಂಭವಾದ ಇಂದಿರಾ ಕ್ಯಾಂಟೀನ್ಗಳು ನಿರ್ಲಕ್ಷ್ಯಕ್ಕೆ ಒಳಗಾಗಿವೆ. ಬೆಂಗಳೂರಿನ ಸಂಪಂಗಿರಾಮನಗರದ ಇಂದಿರಾ ಕ್ಯಾಂಟೀನ್ನಲ್ಲಿ ಮೆನು ಪ್ರಕಾರ ತಿಂಡಿ ನೀಡಲಾಗುತ್ತಿಲ್ಲ. ಶನಿವಾರ ವಾಂಗೀಬಾತ್ ಮತ್ತು ಇಡ್ಲಿ ನೀಡಬೇಕಿದ್ದರೂ, ಕೇವಲ ಇಡ್ಲಿ ಮತ್ತು ಸಾಂಬಾರ್ ಮಾತ್ರ ಒದಗಿಸಲಾಗುತ್ತಿದೆ. ಚಟ್ನಿ ನೀಡದೆ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬೆಲ್ಲಾ ಆರೋಪಗಳು ಕೇಳಿಬಂದಿದ್ದು, ಗ್ರಾಹಕರು ಈ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ. ಹಿಂದಿನ ಉತ್ತಮ ಆಹಾರ ಆಯ್ಕೆಗಳು ಈಗ ಲಭ್ಯವಿಲ್ಲ ಎಂದು ಗ್ರಾಹಕರು ಅಸಮಾಧಾನ ವ್ಯಕ್ತಪಡಿಸಿದ್ದು, ಇದು ಗ್ರಾಹಕರ ಸಂಖ್ಯೆ ಇಳಿಕೆಗೆ ಕಾರಣವಾಗಿದೆ.
- Bhavana Hegde
- Updated on: Feb 22, 2026
- 12:32 pm
ದೋಸ್ತಿ ನಾಯಕರ ನಡುವೆ ದಂಗಲ್: ಜಿಬಿಎ ಎಲೆಕ್ಷನ್ಗೆ ಜೆಡಿಎಸ್ ಪ್ರತ್ಯೇಕ ಸ್ಪರ್ಧೆ?; ಕುತೂಹಲ ಮೂಡಿಸಿದ ಹೆಚ್ಡಿಕೆ ನಡೆ
ಸ್ಥಳೀಯ ಸಂಸ್ಥೆ ಚುನಾವಣೆ ಹೊತ್ತಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಬಿರುಕು ಮೂಡಿದೆ. ಜಿಬಿಎ ಚುನಾವಣೆಯಲ್ಲಿ ಸೀಟು ಹಂಚಿಕೆ ಬಗ್ಗೆ ಸಮನ್ವಯದ ಕೊರತೆಯಿಂದ 85-100 ವಾರ್ಡ್ಗಳಲ್ಲಿ JDS ಪ್ರತ್ಯೇಕವಾಗಿ ಸ್ಪರ್ಧಿಸಲು ಹೆಚ್.ಡಿ. ಕುಮಾರಸ್ವಾಮಿ ಚಿಂತನೆ ನಡೆಸಿದ್ದಾರೆ. ಮತ್ತೊಂದೆಡೆ, 2028ರ ಸಿಎಂ ಸ್ಥಾನಕ್ಕೆ ಮೈತ್ರಿ ನಾಯಕರ ನಡುವೆ ಈಗಲೇ ಆಂತರಿಕ ಪೈಪೋಟಿ ತೀವ್ರಗೊಂಡಿದ್ದು, ಮೈತ್ರಿ ಭವಿಷ್ಯ ಕುರಿತು ಕುತೂಹಲ ಹೆಚ್ಚಿಸಿದೆ.
- Sunil MH
- Updated on: Feb 15, 2026
- 9:27 am