GBA
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಇದರ ಆಡಳಿತವನ್ನು ಪುನರ್ ರಚಿಸಿ ಕರ್ನಾಟಕ ಸರ್ಕಾರ 2025ರ ಸೆಪ್ಟೆಂಬರ್ 2 ರಿಂದ ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ಆಡಳಿತ ಜಾರಿಗೊಳಿಸಿದೆ. ಗ್ರೇಟರ್ ಬೆಂಗಳೂರು ಅಥಾರಿಟಿ ಅಡಿ ಐದು ಹೊಸ ಪಾಲಿಕೆಗಳನ್ನು ರಚನೆ ಮಾಡಲಾಗಿದ್ದು, ಬಿಬಿಎಂಪಿಯ ಮುಖ್ಯ ಕಚೇರಿ ಗ್ರೇಟರ್ ಬೆಂಗಳೂರು ಅಥಾರಿಟಿ ಪ್ರಧಾನ ಕಚೇರಿಯಾಗಿ ಬದಲಾಗಿದೆ. ಉಳಿದಂತೆ ಐದು ಭಾಗಗಳಾಗಿ ಗುರುತಿಸಲಾಗಿದ್ದು ಕೇಂದ್ರ, ಬೆಂಗಳೂರು ಪೂರ್ವ, ಬೆಂಗಳೂರು ಪಶ್ಚಿಮ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ನಗರಗಳಾಗಿ ವಿಭಜಿಸಲಾಗಿದೆ. ಐಎಎಸ್, ಐಪಿಎಸ್ ಹುದ್ದೆಗಳನ್ನು ಗ್ರೇಟರ್ ಬೆಂಗಳೂರು ಅಥಾರಿಟಿಯ ಸ್ವರೂಪಕ್ಕೆ ತಕ್ಕಂತೆ ಹಂಚಿಕೆ ಮಾಡಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ರಚನೆ ಮಾಡಲಾಗಿದ್ದು ಇದಕ್ಕೆ ಮುಖ್ಯಮಂತ್ರಿಗಳು ಅಧ್ಯಕ್ಷರಾಗಿ, ಬೆಂಗಳೂರು ನಗರಾಭಿವೃದ್ಧಿ ಸಚಿವರು ಉಪಾಧ್ಯಕ್ಷರಾಗಿರುತ್ತಾರೆ. ಕೇಂದ್ರ ಹಣಕಾಸು ಸಚಿವರು ಸೇರಿ 73 ಮಂದಿಯನ್ನು ಪದನಿಮಿತ್ತ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಜಿಬಿಎ ಸದಸ್ಯರಾಗಿ ಬೆಂಗಳೂರಿನ ಮೂವರು ಸಂಸದರು, ಬೆಂಗಳೂರು ವ್ಯಾಪ್ತಿಯ ಶಾಸಕರನ್ನು ನೇಮಿಸಲಾಗಿದೆ.
ಇನ್ನೂ ಹೆಚ್ಚು ಓದಿತ್ಯಾಜ್ಯ ಮುಕ್ತ ಅಭಿಯಾನ: ಖಾಲಿ ನಿವೇಶನ ಸ್ವಚ್ಛಗೊಳಿಸದ ಮಾಲೀಕರಿಗೆ ವಿಧಿಸಲಾಗುವ ಶುಲ್ಕ ಎಷ್ಟು?
ಬೆಂಗಳೂರು ನಗರವನ್ನು ಸ್ವಚ್ಛ ಹಾಗೂ ಸುಂದರವಾಗಿಡುವ 'ತ್ಯಾಜ್ಯ ಮುಕ್ತ ಅಭಿಯಾನ'ದ ಭಾಗವಾಗಿ, ತಮ್ಮ ಖಾಲಿ ನಿವೇಶನಗಳನ್ನು ಸ್ವಚ್ಛಗೊಳಿಸದ ಮಾಲೀಕರ ವಿರುದ್ಧ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಕಠಿಣ ಕ್ರಮಕ್ಕೆ ಮುಂದಾಗಿದೆ. ಆಗಸ್ಟ್ 15ರ ಗಡುವು ಮುಗಿದ ನಂತರವೂ ಕಸ, ಕಟ್ಟಡದ ಅವಶೇಷ ಅಥವಾ ಗಿಡಗಂಟಿಗಳನ್ನು ತೆರವುಗೊಳಿಸದಿದ್ದರೆ ಬಿಡುಗಡೆ ಮಾಡಲಾದ ದಂಡದ ಪಟ್ಟಿಯಂತೆ ಮಾಲೀಕರಿಗೆ ಭಾರಿ ದಂಡ ಹಾಗೂ ತೆರವು ವೆಚ್ಚವನ್ನು ವಿಧಿಸಲಾಗುತ್ತದೆ.
- Prasanna Hegde
- Updated on: Aug 10, 2026
- 7:14 pm
Ganesh Chaturthi 2026: ಪಿಓಪಿ ಗಣೇಶ ಮೂರ್ತಿಗಳ ಮಾರಾಟ, ಬಳಕೆಗೆ ಜಿಬಿಎ ನಿಷೇಧ
ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಜಿಬಿಎ ವ್ಯಾಪ್ತಿಯಲ್ಲಿ ಪಿಓಪಿ ಹಾಗೂ ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳ ತಯಾರಿಕೆ ಮತ್ತು ಮಾರಾಟವನ್ನು ಪರಿಸರ ಇಲಾಖೆ ಸಂಪೂರ್ಣವಾಗಿ ನಿಷೇಧಿಸಿದೆ. ಕೆರೆ ಹಾಗೂ ಜಲಮೂಲಗಳ ಮಾಲಿನ್ಯ ತಡೆಗಟ್ಟಲು ಸಾರ್ವಜನಿಕರು ಕಡ್ಡಾಯವಾಗಿ ನೈಸರ್ಗಿಕ ಜೇಡಿಮಣ್ಣಿನ ಪರಿಸರಸ್ನೇಹಿ ಗಣಪತಿ ಮೂರ್ತಿಗಳನ್ನು ಬಳಸುವಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ. ಉಲ್ಲಂಘಿಸಿದರೆ ಕಠಿಣ ಕ್ರಮ ಗ್ಯಾರಂಟಿ.
- Bhavana Hegde
- Updated on: Aug 10, 2026
- 11:06 am
ರಸ್ತೆ ಬದಿ ಅಡ್ಡಾದಿಡ್ಡಿ ನಿಲ್ಲಿಸಿದ್ದ ವಾಹನಗಳ ಹರಾಜಿಗೆ ಸಿದ್ಧತೆ: GBA ಮತ್ತು ಪೊಲೀಸರಿಂದ ಭರ್ಜರಿ ಜಂಟಿ ಕಾರ್ಯಾಚರಣೆ!
ರಸ್ತೆ ಬದಿಗಳಲ್ಲಿ ದೀರ್ಘಕಾಲದಿಂದ ಬಿದ್ದಿರುವ ಅನಾಥ ವಾಹನಗಳ ತೆರವು ಕಾರ್ಯಾಚರಣೆಯನ್ನು GBA ಮತ್ತು ಪೊಲೀಸ್ ಇಲಾಖೆ ಚುರುಕುಗೊಳಿಸಿದೆ. ಜುಲೈ 10 ರಿಂದ ಆರಂಭವಾದ ಈ ಕಾರ್ಯಾಚರಣೆಯಲ್ಲಿ ಇದುವರೆಗೆ 6,544 ವಾಹನಗಳು ಪತ್ತೆಯಾಗಿವೆ. ನೋಟಿಸ್ ಸ್ಟಿಕ್ಕರ್ ಹಾಕಿದ 7 ದಿನಗಳಲ್ಲಿ ವಾಹನ ತೆರವು ಮಾಡದಿದ್ದರೆ ಟೋಯಿಂಗ್ ಮಾಡಲಾಗುವುದು ಹಾಗೂ 15 ದಿನಗಳಲ್ಲಿ ದಂಡ ಕಟ್ಟಿ ವಾಹನ ಬಿಡಿಸಿಕೊಳ್ಳದಿದ್ದರೆ ಅಂತಹ ವಾಹನಗಳನ್ನು ಹರಾಜು ಮಾಡಲಾಗುತ್ತದೆ.
- Prajwal Kumar NY
- Updated on: Aug 8, 2026
- 10:45 am
ಬೆಂಗಳೂರಿನಲ್ಲಿ ಐದು ದಿನಗಳಲ್ಲಿ 4000 ಟನ್ ಕಟ್ಟಡ ನಿರ್ಮಾಣ ತ್ಯಾಜ್ಯ ತೆರವು: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನಕ್ಕೆ ವೇಗ
Freedom From Waste: ಬೆಂಗಳೂರು ನಗರವನ್ನು ಕಟ್ಟಡ ನಿರ್ಮಾಣ ಮತ್ತು ತೆರವು ತ್ಯಾಜ್ಯ ಮುಕ್ತಗೊಳಿಸುವ ಉದ್ದೇಶದಿಂದ ನಗರ ಪಾಲಿಕೆಗಳು ಕೈಗೊಂಡಿರುವ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನಕ್ಕೆ ಉತ್ತಮ ಸ್ಪಂದನೆ ಸಿಕ್ಕಿದೆ. ಕಳೆದ ಐದು ದಿನಗಳಲ್ಲಿ ಸುಮಾರು 4,000 ಟನ್ ನಿರ್ಮಾಣ ತ್ಯಾಜ್ಯವನ್ನು ತೆರವುಗೊಳಿಸಿರುವುದು ಗಮನಾರ್ಹ ಬೆಳವಣಿಗೆಯಾಗಿದೆ.
- Ganapathi Sharma
- Updated on: Aug 7, 2026
- 8:27 am
ಬೆಂಗಳೂರಿನಲ್ಲಿ ಬಿ-ಖಾತೆಯಿಂದ ಎ-ಖಾತೆ ಮಾಡಿಸಲು ಲಂಚ ಕೇಳಿದ ಆರೋಪ; ಜಿಬಿಎ ಅಧಿಕಾರಿಗಳಿಗೆ ಸಾರ್ವಜನಿಕರಿಂದ ತರಾಟೆ
ಬೆಂಗಳೂರಿನ ಆರ್.ಆರ್.ನಗರ ವಲಯ ಕಚೇರಿಯಲ್ಲಿ ಬಿ-ಖಾತೆಯಿಂದ ಎ-ಖಾತೆಗೆ ಪರಿವರ್ತನೆ ಮಾಡಿಸಲು ಅರ್ಜಿದಾರರ ಬಳಿ ತಲಾ 40 ಸಾವಿರ ರೂ. ಲಂಚ ಕೇಳಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದರಿಂದ ಆಕ್ರೋಶಗೊಂಡ ಸಾರ್ವಜನಿಕರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕಚೇರಿಯಲ್ಲಿ ಗಲಾಟೆ ನಡೆದಿದೆ ಎನ್ನಲಾಗಿದ್ದು, ಅದರ ವಿಡಿಯೋಗಳು ಈಗ ವೈರಲ್ ಆಗಿವೆ.
- Vikas bm
- Updated on: Aug 7, 2026
- 7:43 am
ನಾಳೆಯಿಂದ ಸಸ್ಯಕಾಶಿ ಲಾಲ್ಬಾಗ್ನಲ್ಲಿ ಫ್ಲವರ್ ಶೋ: ಹೂವುಗಳಲ್ಲಿ ಅರಳಲಿದೆ ಗಂಗರ ಸಾಮ್ರಾಜ್ಯ!
ಈ ಬಾರಿ ಸಸ್ಯ ಕಾಶಿ ಲಾಲ್ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಂಪೂರ್ಣವಾಗಿ ಸಜ್ಜಾಗಿದೆ. ನಾಳೆಯಿಂದ ಪ್ರಾರಂಭವಾಗಲಿರುವ ಈ ಹೂಗಳ ಹಬ್ಬದಲ್ಲಿ 1,000 ವರ್ಷಗಳ ಗಂಗ ಸಾಮ್ರಾಜ್ಯದ ಗತವೈಭವ ಹೂಗಳ ಮೂಲಕ ಅನಾವರಣಗೊಳ್ಳಲಿದೆ. ಹಾಗಾದ್ರೆ ಈ ಬಾರಿ ಎಷ್ಟು ತಳಿಯ ಹೂವುಗಳಲ್ಲಿ ಗಂಗರ ಸಾಮ್ರಾಜ್ಯ ಅರಳಿಲಿದೆ. ಎಷ್ಟು ದಿನ ಇರಲಿದೆ ಎನ್ನುವ ವಿವರ ಇಲ್ಲಿದೆ.
- Ramesh B Jawalagera
- Updated on: Aug 5, 2026
- 8:59 pm
ಬೆಂಗಳೂರಿನಲ್ಲಿ ಮೊದಲ ಬಾರಿಗೆ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ: ಏನಿದರ ವಿಶೇಷತೆ?
ಸಿಲಿಕಾನ್ ಸಿಟಿ ಬೆಂಗಳೂರಿನ ಇಕ್ಕಟ್ಟಿನ ರಸ್ತೆಗಳಲ್ಲಿ ಅಗ್ನಿ ಅವಘಡ ಸಂಭವಿಸಿದರೆ ತಕ್ಷಣಕ್ಕೆ ಅಗ್ನಿಶಾಮಕ ಸಿಬ್ಬಂದಿಗೆ ಸ್ಥಳಕ್ಕೆ ತಲುಪುವುದೇ ದೊಡ್ಡ ಸವಾಲು. ಅದರಲ್ಲೂ ಪ್ರಮುಖ ಮಾರುಕಟ್ಟೆಗಳ ಇಕ್ಕಟ್ಟಿನ ಪ್ರದೇಶದಂತಹ ಕಿರಿದಾದ ರಸ್ತೆಗಳಲ್ಲಿ ಬೆಂಕಿ ನಂದಿಸಲು ನೀರಿನ ಕೊರತೆ ಸಮಸ್ಯೆಯಾಗುತ್ತಿತ್ತು. ಇದೀಗ ಈ ಸಮಸ್ಯೆಗೆ ಶಾಶ್ವತ ಪರಿಹಾರವಾಗಿ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಇಂಟಿಗ್ರೇಟೆಡ್ ಫೈರ್ ಹೈಡ್ರಂಟ್ ವ್ಯವಸ್ಥೆಯುಳ್ಳ ವೈಟ್ಟಾಪಿಂಗ್ ರಸ್ತೆ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ.
- Vinay Kashappanavar
- Updated on: Aug 5, 2026
- 8:21 pm
‘ಫ್ರೀಡಂ ಹಬ್ಬ’ ಘೋಷಣೆ: ವಿಧಾನಸೌಧದಲ್ಲಿ ಇದೇ ಮೊದಲ ಬಾರಿಗೆ ಸಾರ್ವಜನಿಕರ ಬೃಹತ್ ಸ್ವಾತಂತ್ರ್ಯೋತ್ಸವ ಸಂಭ್ರಮ
ದೇಶದ ಸ್ವಾತಂತ್ರ್ಯ ದಿನಾಚರಣೆಯನ್ನು ಬೆಂಗಳೂರು ನಗರವು ಇದುವರೆಗೆ ಎಂದೂ ಕಾಣದ ರೀತಿಯಲ್ಲಿ ಆಚರಿಸಲಿದೆ. ಸ್ವಾತಂತ್ರ್ಯ ದಿನವನ್ನು ಕೇವಲ ಸರ್ಕಾರಿ ಕಾರ್ಯಕ್ರಮ ಅಥವಾ ರಜಾ ದಿನವಾಗಿ ನೋಡದೆ, ಜನರೇ ಸ್ವಯಂಪ್ರೇರಿತವಾಗಿ ಆಚರಿಸುವ ಜನೋತ್ಸವವನ್ನಾಗಿ ರೂಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಈ ಬಾರಿ “ಫ್ರೀಡಂ ಹಬ್ಬ”ವನ್ನು ಆಯೋಜಿಸುತ್ತಿದ್ದು, ದಿನಪೂರ್ತಿ ವಿವಿಧ ಸಾಂಸ್ಕೃತಿಕ, ಐತಿಹಾಸಿಕ ಮತ್ತು ಮನರಂಜನಾ ಕಾರ್ಯಕ್ರಮಗಳು ನಡೆಯಲಿವೆ.
- Ramesh B Jawalagera
- Updated on: Aug 5, 2026
- 5:34 pm
ಬೀದಿ ದೀಪ ಅಳವಡಿಸದ ಹಿನ್ನೆಲೆ ಜಿಬಿಎ ಸಭೆಯಲ್ಲಿ ಅಧಿಕಾರಿಗಳಿಗೆ ಸಚಿವ ಕೃಷ್ಣ ಭೈರೇಗೌಡ ಕ್ಲಾಸ್
ಬೆಂಗಳೂರು ಮಹಾನಗರದಲ್ಲಿನ ಎಲ್ಇಡಿ ಬೀದಿ ದೀಪಗಳ ನಿರ್ವಹಣೆ ಮತ್ತು ವಿದ್ಯುತ್ ಬಿಲ್ ಸಂಬಂಧಿಸಿದಂತೆ ಮೂಲಭೂತ ಮಾಹಿತಿ ನೀಡುವಲ್ಲಿ ವಿಫಲರಾದ ಅಧಿಕಾರಿಗಳಿಗೆ ಸಚಿವ ಕೃಷ್ಣಬೈರೇಗೌಡರು ಜಿಬಿಎ ಸಭೆಯಲ್ಲಿ ತೀವ್ರ ತರಾಟೆ ತೆಗೆದುಕೊಂಡಿದ್ದಾರೆ. ಸಭೆಗೆ ಸಿದ್ಧತೆಯಿಲ್ಲದೆ ಬರುವ ಅಧಿಕಾರಿಗಳ ವರ್ತನೆಗೆ ಸಚಿವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
- Prasanna Hegde
- Updated on: Aug 4, 2026
- 5:55 pm
ಬೀದಿ ಬದಿ ವ್ಯಾಪಾರಿಗಳ ಎತ್ತಂಗಡಿಯಾದರೂ ಪಾದಚಾರಿಗಳಿಗೆ ಜಾಗವಿಲ್ಲ! ಗಾಂಧಿ ಬಜಾರ್ನಲ್ಲಿ ಅಕ್ರಮ ಪಾರ್ಕಿಂಗ್ ಕಾಟ
ಬೆಂಗಳೂರಿನ ಗಾಂಧಿ ಬಜಾರ್ನಲ್ಲಿ ಫುಟ್ಪಾತ್ಗಳು ವಾಹನಗಳ ಪಾರ್ಕಿಂಗ್ ಹಾಗೂ ಅತಿಕ್ರಮಣಕ್ಕೆ ಸಿಲುಕಿವೆ. ಬೀದಿಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ ನಡೆದ ನಂತರವಂತೂ ಆ ಜಾಗಗಳೆಲ್ಲ ಪಾರ್ಕಿಂಗ್ಗೆ ಅತಿಕ್ರಮಿಸಲ್ಪಟ್ಟಿವೆ. ಪಾದಚಾರಿಗಳು ರಸ್ತೆಯಲ್ಲೇ ನಡೆದುಕೊಂಡು ಹೋಗುವ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದ್ದು, ಶಾಶ್ವತ ಪರಿಹಾರಕ್ಕೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
- Ganapathi Sharma
- Updated on: Aug 4, 2026
- 9:24 am
SIR ಎಫೆಕ್ಟ್: ಬೆಂಗಳೂರಿನಲ್ಲಿ ಮತದಾರರ ಸಂಖ್ಯೆ ಕಡಿತ; ಪಾಲಿಕೆಗಳ ಸಂಖ್ಯೆ ಇಳಿಕೆಗೆ ಹೆಚ್ಚಿದ ಒತ್ತಡ
Greater Bengaluru Authority: ಗ್ರೇಟರ್ ಬೆಂಗಳೂರು ಪ್ರಾಧಿಕಾರ ಜಾರಿಗೆ ಬಂದು ವರ್ಷವೇ ಕಳೆದಿದೆ. ಇದರ ಅಡಿಯಲ್ಲಿ ನಗರದ ಆಡಳಿತಕ್ಕಾಗಿ 5 ಪ್ರತ್ಯೇಕ ನಗರ ಪಾಲಿಕೆಗಳನ್ನು ಅಸ್ತಿತ್ವಕ್ಕೆ ತರಲಾಗಿತ್ತು. ಆದರೆ, ಪ್ರಸ್ತುತ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆಯು ಈ ಪಾಲಿಕೆಗಳ ಅಸ್ತಿತ್ವಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ.
- Lakshmi Narasimha Swamy L
- Updated on: Aug 2, 2026
- 10:30 pm
ಬೆಂಗಳೂರಿನ ಖಾಲಿ ಸೈಟ್ಗಳಲ್ಲಿ 5 ವರ್ಷದ ಒಳಗೆ ಕಟ್ಟಡ ಕಟ್ಟಲೇಬೇಕು, ಇಲ್ಲಾಂದ್ರೆ ಡಬ್ಬಲ್ ಆಸ್ತಿ ತೆರಿಗೆ: ಸಿಎಂ ಖಡಕ್ ಸೂಚನೆ
ಬೆಂಗಳೂರಿನಲ್ಲಿ ತ್ಯಾಜ್ಯದಿಂದ ಸ್ವಾತಂತ್ರ್ಯ ಅಭಿಯಾನಕ್ಕೆ ಸಿಎಂ ಡಿಕೆ ಶಿವಕುಮಾರ್ ಚಾಲನೆ ನೀಡಿದ್ದಾರೆ. ಖಾಲಿ ನಿವೇಶನಗಳಲ್ಲಿ ಕಸ ಸುರಿಯುವುದನ್ನು ತಡೆಯಲು ಮಹತ್ವದ ಆದೇಶ ಹೊರಡಿಸಿದ್ದಾರೆ. ಐದು ವರ್ಷದೊಳಗೆ ನಿವೇಶನಗಳಲ್ಲಿ ಕಟ್ಟಡ ನಿರ್ಮಿಸದಿದ್ದರೆ ದುಪ್ಪಟ್ಟು ಆಸ್ತಿ ತೆರಿಗೆ ವಿಧಿಸಲಾಗುವುದು ಅಥವಾ ನಿವೇಶನವನ್ನು ವಾಪಸ್ ಪಡೆಯಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಇದು ತ್ಯಾಜ್ಯ ಮುಕ್ತ ಬೆಂಗಳೂರು ನಿರ್ಮಾಣಕ್ಕೆ ಪೂರಕವಾಗಿದೆ.
- Lakshmi Narasimha Swamy L
- Updated on: Aug 1, 2026
- 1:58 pm