GBA
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಇದರ ಆಡಳಿತವನ್ನು ಪುನರ್ ರಚಿಸಿ ಕರ್ನಾಟಕ ಸರ್ಕಾರ 2025ರ ಸೆಪ್ಟೆಂಬರ್ 2 ರಿಂದ ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ಆಡಳಿತ ಜಾರಿಗೊಳಿಸಿದೆ. ಗ್ರೇಟರ್ ಬೆಂಗಳೂರು ಅಥಾರಿಟಿ ಅಡಿ ಐದು ಹೊಸ ಪಾಲಿಕೆಗಳನ್ನು ರಚನೆ ಮಾಡಲಾಗಿದ್ದು, ಬಿಬಿಎಂಪಿಯ ಮುಖ್ಯ ಕಚೇರಿ ಗ್ರೇಟರ್ ಬೆಂಗಳೂರು ಅಥಾರಿಟಿ ಪ್ರಧಾನ ಕಚೇರಿಯಾಗಿ ಬದಲಾಗಿದೆ. ಉಳಿದಂತೆ ಐದು ಭಾಗಗಳಾಗಿ ಗುರುತಿಸಲಾಗಿದ್ದು ಕೇಂದ್ರ, ಬೆಂಗಳೂರು ಪೂರ್ವ, ಬೆಂಗಳೂರು ಪಶ್ಚಿಮ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ನಗರಗಳಾಗಿ ವಿಭಜಿಸಲಾಗಿದೆ. ಐಎಎಸ್, ಐಪಿಎಸ್ ಹುದ್ದೆಗಳನ್ನು ಗ್ರೇಟರ್ ಬೆಂಗಳೂರು ಅಥಾರಿಟಿಯ ಸ್ವರೂಪಕ್ಕೆ ತಕ್ಕಂತೆ ಹಂಚಿಕೆ ಮಾಡಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ರಚನೆ ಮಾಡಲಾಗಿದ್ದು ಇದಕ್ಕೆ ಮುಖ್ಯಮಂತ್ರಿಗಳು ಅಧ್ಯಕ್ಷರಾಗಿ, ಬೆಂಗಳೂರು ನಗರಾಭಿವೃದ್ಧಿ ಸಚಿವರು ಉಪಾಧ್ಯಕ್ಷರಾಗಿರುತ್ತಾರೆ. ಕೇಂದ್ರ ಹಣಕಾಸು ಸಚಿವರು ಸೇರಿ 73 ಮಂದಿಯನ್ನು ಪದನಿಮಿತ್ತ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಜಿಬಿಎ ಸದಸ್ಯರಾಗಿ ಬೆಂಗಳೂರಿನ ಮೂವರು ಸಂಸದರು, ಬೆಂಗಳೂರು ವ್ಯಾಪ್ತಿಯ ಶಾಸಕರನ್ನು ನೇಮಿಸಲಾಗಿದೆ.
ಕಸದ ರಾಶಿಗೆ ರಸ್ತೆ, ಫುಟ್ಪಾತ್ ಮಾಯ! ಜಿಬಿಎ ವಿರುದ್ಧ ರೊಚ್ಚಿಗೆದ್ದ ಜನ
ನಗರದ ಹಳೆ ಗುರಪ್ಪನಪಾಳ್ಯದ ವಾರ್ಡ್ ನಂಬರ್ 171 ರಲ್ಲಿ ಕಸ ನಿರ್ವಹಣೆಯು ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ. ತಿಂಗಳುಗಟ್ಟಲೆ ಕಸ ಸಂಗ್ರಹವಾಗಿದ್ದು ರಸ್ತೆಗಳು ಮತ್ತು ಪಾದಚಾರಿ ಮಾರ್ಗಗಳು ಸಂಪೂರ್ಣವಾಗಿ ಮುಚ್ಚಿಹೋಗಿವೆ. ಜಿಬಿಎ ಮತ್ತು ಬೆಂಗಳೂರು ದಕ್ಷಿಣ ನಗರಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಪರಿಸ್ಥಿತಿ ಉದ್ಭವಿಸಿದೆ ಎಂದು ಸ್ಥಳೀಯರು ದೂರಿದ್ದಾರೆ.
- Bhavana Hegde
- Updated on: Apr 12, 2026
- 11:38 am
ಜೆಡಿಎಸ್ ಅಸ್ಥಿತ್ವಕ್ಕೆ ಬಂದು 25 ವರ್ಷ: ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನ; ಬೆಳ್ಳಿಹಬ್ಬದ ಮೂಲಕ ಜಿಬಿಎ ಚುನಾವಣೆಗೆ ರಣಕಹಳೆ
ಪ್ರಾದೇಶಿಕ ಪಕ್ಷ ಜೆಡಿಎಸ್ ಅಸ್ಥಿತ್ವಕ್ಕೆ ಬಂದು 25 ವರ್ಷವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಕೊಮ್ಮಗಟದಲ್ಲಿ ಬೃಹತ್ ಸಮಾವೇಶ ಮಾಡಲಾಗಿದ್ದು, ಆ ಮೂಲಕ ದಳಪತಿಗಳು ಭರ್ಜರಿ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ, ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರನ್ನ ಸೇರಿಸಿ ಜಿಬಿಎ ಚುನಾವಣೆಗೆ ದಳಪತಿಗಳು ರಾಷ್ಟ್ರೀಯ ಪಕ್ಷಗಳಿಗಿಂತ ಮುಂಚಿತವಾಗಿ ರಣ ಕಹಳೆ ಊದಿದ್ದಾರೆ.
- Sunil MH
- Updated on: Apr 11, 2026
- 8:06 pm
ಬೆಂಗಳೂರಿನಲ್ಲಿ ಮನೆ ಕಟ್ಟೋರು, ಕಟ್ಟಿದವರು ಈ ವಿಚಾರ ತಿಳಿದಿರಲೇಬೇಕು!
ಕಟ್ಟಡ ಉಪವಿಧಿಗಳನ್ನು ತಿದ್ದುಪಡಿ ಮಾಡಿ ಮನೆ ಕಟ್ಟುವವರಿಗೆ ನೆರವಾಗಲು ಗ್ರೇಟರ್ ಬೆಂಗಳೂರು ಪ್ರಾಧಿಕಾರವು (ಜಿಬಿಎ) ಮುಂದಾಗಿದೆ. ಈ ಬಗ್ಗೆ ಇತ್ತೀಚೆಗೆ ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಸೆಟ್ ಬ್ಯಾಕ್ ಉಲ್ಲಂಘನೆ ವಿನಾಯಿತಿ ಮಿತಿ ಹೆಚ್ಚಿಸಲು ತೀರ್ಮಾನಿಸಲಾಗಿದೆ. ಅದು ಜಾರಿಗೆ ಬಂದರೆ ಮನೆ ಕಟ್ಟುವರರಿಗೆ ದೊಡ್ಡ ಮಟ್ಟದ ಪ್ರಯೋಜನವಾಗಲಿದೆ. ಈ ಕುರಿತ ವಿವರ ಇಲ್ಲಿದೆ.
- Ganapathi Sharma
- Updated on: Apr 8, 2026
- 2:46 pm
ಜಿಬಿಎ ಚುನಾವಣೆ: ಹೈಕಮಾಂಡ್ ಅಂಗಳದಲ್ಲಿದ್ಯಾ BJP, JDS ಮೈತ್ರಿ ಭವಿಷ್ಯ?
ಉಪ ಚುನಾವಣೆ ಅಬ್ಬರದ ನಡುವೆ ಜಿಬಿಎ ಚುನಾವಣೆಗೂ ಪಕ್ಷಗಳು ತಯಾರಿ ನಡೆಸಿವೆ. ಆದರೆ ಮೈತ್ರಿಯಾಗಿಯೇ ಉಪ ಚುನಾವಣೆ ಎದುರಿಸುತ್ತಿರುವ ಬಿಜೆಪಿ ಮತ್ತು ಜೆಡಿಎಸ್ ಈ ಹೊಂದಾಣಿಕೆಯನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆಗೂ ಮುಂದುವರಿಸುತ್ತವಾ ಎಂಬ ಪ್ರಶ್ನೆ ಸದ್ಯಕ್ಕಿದೆ. ಈ ವಿಚಾರವಾಗಿ ಈ ಹಿಂದೆಯೂ ಕೆಲ ನಾಯಕರಿಂದ ಪರ-ವಿರೋಧ ಅಬಿಪ್ರಾಯಗಳು ವ್ಯಕ್ತವಾಗಿದ್ದವು. ಈ ಹಿನ್ನೆಲೆ ಮೈತ್ರಿ ನಿರ್ಧಾರದ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್ ಸ್ಪಷ್ಟನೆ ನೀಡಿದ್ದಾರೆ.
- Web contact
- Updated on: Apr 7, 2026
- 5:58 pm
ಬೆಂಗಳೂರು: ಮನೆ ಕಟ್ಟುವವರಿಗೆ ಜಿಬಿಎ ಬಂಪರ್ ಗಿಫ್ಟ್! ಸೆಟ್ ಬ್ಯಾಕ್ ಉಲ್ಲಂಘನೆ ಮಿತಿ ವಿಸ್ತರಣೆ
ಗ್ರೇಟರ್ ಬೆಂಗಳೂರು ಪ್ರಾಧಿಕಾರವು (ಜಿಬಿಎ) ಕಟ್ಟಡ ಉಪವಿಧಿಗಳನ್ನು ತಿದ್ದುಪಡಿ ಮಾಡಿದೆ. ಸೆಟ್ ಬ್ಯಾಕ್ ಉಲ್ಲಂಘನೆ ವಿನಾಯಿತಿ ಮಿತಿಯನ್ನು ಶೇಕಡ 5ರಿಂದ ಶೇಕಡ 15ಕ್ಕೆ ಏರಿಸಲಾಗಿದೆ. ಇದು ಬೆಂಗಳೂರಿನಲ್ಲಿ ಮನೆ ಕಟ್ಟುವವರಿಗೆ ದೊಡ್ಡ ಪರಿಹಾರ ನೀಡಲಿದೆ. ಹಾಗಾದರೆ ಸೆಟ್ ಬ್ಯಾಕ್ ಉಲ್ಲಂಘನೆ ಎಂದರೇನು? ಇದರ ವಿನಾಯಿತಿ ಮಿತಿ ವಿಸ್ತರಣೆಯಿಂದ ಮನೆ ಕಟ್ಟುವವರಿಗೆ, ಕಟ್ಟಿದವರಿಗೆ ಪ್ರಯೋಜನವೇನು? ಇಲ್ಲಿದೆ ಮಾಹಿತಿ.
- Ganapathi Sharma
- Updated on: Apr 4, 2026
- 7:57 am
ಬೆಂಗಳೂರಿನ ಐದೂ ಪಾಲಿಕೆಗಳಿಗೆ ಲೋಗೋ ಭಾಗ್ಯ: ಲಾಂಛನಗಳ ವಿಶೇಷತೆ ತಿಳಿಯಿರಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮತ್ತು 5 ನಗರ ಪಾಲಿಕೆಗಳಿಗೆ ನೂತನ ಲೋಗೋ ಅನಾವರಣಗೊಂಡಿದೆ. ಖಡ್ಗ ಹಿಡಿದಿರುವ ಕೆಂಪೇಗೌಡರ ಚಿತ್ರಣ ಹಾಗೂ ಹಳೆಯ ಬಿಬಿಎಂಪಿ ಚಿಹ್ನೆಯಲ್ಲಿದ್ದ ಗೋಪುರವನ್ನು ಹೊಸ ಸ್ಪರ್ಶದೊಂದಿಗೆ ಸಂಯೋಜಿಸಿ ಬೆಂಗಳೂರಿನ ಪರಂಪರೆ ಮತ್ತು ವೈಭವವನ್ನು ಬಿಂಬಿಸುವಂತೆ ರೂಪಿಸಲಾಗಿದೆ. ಪ್ರತಿಯೊಂದು ಪಾಲಿಕೆಗೂ ಪ್ರತ್ಯೇಕ ಬಣ್ಣಗಳಿವೆ.
- Gangadhar Saboji
- Updated on: Apr 3, 2026
- 3:26 pm
ಹಾವು ರಕ್ಷಣೆ ಕುರಿತ ಕರೆಗಳ ಏರಿಕೆಗೆ GBA ಹೈರಾಣ: ಇತ್ತ ಅಗತ್ಯ ಸೌಲಭ್ಯ, ವೇತನ ಇಲ್ಲದೆ ಸಂಕಷ್ಟದಲ್ಲಿ ಉರಗ ರಕ್ಷಕರು
ಬೆಂಗಳೂರಿನಲ್ಲಿ ಹಾವು ರಕ್ಷಣೆ ಸಂಬಂಧ ಕರೆಗಳು ಏರಿಕೆ ಕಂಡಿದ್ದು, GBA ಸೀಮಿತ ತಂಡದಿಂದ ಸ್ಪಂದಿಸಲು ಸಾಧ್ಯವಾಗುತ್ತಿಲ್ಲ. ಮತ್ತೊಂದೆಡೆ ಲಭ್ಯವಿರುವ ಹಾವು ರಕ್ಷಕರು ಕೂಡ ವಾಹನ, ಅಗತ್ಯ ಸಾಧನ, ಸಕಾಲಿಕ ವೇತನದ ಕೊರತೆಯಿಂದ ಸಂಕಷ್ಟದಲ್ಲಿದ್ದಾರೆ. ಕೆಲವೊಮ್ಮೆ ಸ್ವಂತ ಖರ್ಚಿನಲ್ಲಿ ಕಾರ್ಯನಿರ್ವಹಿಸಬೇಕಾದ ಅನಿವಾರ್ಯ ಸ್ಥಿತಿಯಲ್ಲಿದ್ದಾರೆ. ಮಳೆಗಾಲದಲ್ಲಿ ಕರೆಗಳು ಮತ್ತಷ್ಟು ಹೆಚ್ಚುವ ನಿರೀಕ್ಷೆಯಿದ್ದು, ಹೀಗಾಗಿ ರಕ್ಷಕರ ಸಂಖ್ಯೆ ದ್ವಿಗುಣಗೊಳಿಸುವ ಅಗತ್ಯವಿದೆ ಎಂಬ ಆಗ್ರಹ ವ್ಯಕ್ತವಾಗಿದೆ.
- Prasanna Hegde
- Updated on: Apr 1, 2026
- 12:04 pm
GBA Budget: ಜಿಬಿಎ ಅಡಿಯಲ್ಲಿನ ಐದು ಪಾಲಿಕೆಗಳ ಬಜೆಟ್ ಮಂಡನೆ; ಬೆಂಗಳೂರಿನ ಅಭಿವೃದ್ಧಿಗೆ 20,213 ಕೋಟಿ ರೂ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಡಿಯಲ್ಲಿನ 5 ನಗರ ಪಾಲಿಕೆಗಳ 2026-27ರ ಸಾಲಿನ ಚೊಚ್ಚಲ ಬಜೆಟ್ ಮಂಡಿಸಲಾಗಿದೆ. ಒಟ್ಟು 20,213 ಕೋಟಿ ರೂ ಅನುದಾನವನ್ನು ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಮೀಸಲಿಡಲಾಗಿದೆ. ಸಾರ್ವಜನಿಕ ಕಾಮಗಾರಿಗಳು, ಘನತ್ಯಾಜ್ಯ ನಿರ್ವಹಣೆ, ಶಿಕ್ಷಣ, ಆರೋಗ್ಯ, ಮತ್ತು ಮೂಲಸೌಕರ್ಯಗಳಿಗೆ ಆದ್ಯತೆ ನೀಡಲಾಗಿದೆ.
- Gangadhar Saboji
- Updated on: Mar 28, 2026
- 6:02 pm
ಶುಕ್ರವಾರ ಮಾಂಸ ಮಾರಾಟಕ್ಕೆ ಬ್ರೇಕ್! ಜಿಬಿಎಯಿಂದ ಬಂತು ಆರ್ಡರ್
ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಶ್ರೀರಾಮನವಮಿ ಅಂಗವಾಗಿ ಮಾರ್ಚ್ 27 ರಂದು ಬೆಂಗಳೂರಿನಾದ್ಯಂತ ಮಾಂಸ ಮಾರಾಟವನ್ನು ನಿಷೇಧಿಸಿದೆ. ಹಬ್ಬದ ದಿನದಂದು ಎಲ್ಲಾ ಕಸಾಯಿಖಾನೆಗಳು ಮತ್ತು ಮಾಂಸದ ಅಂಗಡಿಗಳು ಮುಚ್ಚಿರಲಿವೆ. ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದೂ ಹೇಳಲಾಗಿದೆ. ಶಾಂತಿ ಮತ್ತು ಧಾರ್ಮಿಕ ಭಾವನೆಗಳನ್ನು ಕಾಪಾಡಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು GBA ತಿಳಿಸಿದೆ.
- Bhavana Hegde
- Updated on: Mar 25, 2026
- 1:46 pm
ಬೆಂಗಳೂರಲ್ಲಿ ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ
ಬೆಂಗಳೂರಲ್ಲಿ ಎಲ್ಲೆಂದರಲ್ಲಿ ಹಳೇ ವಾಹನಗಳನ್ನ ನಿಲ್ಲಿಸಿದರೆ ಕಠಿಣ ಕ್ರಮಕೈಗೊಳ್ಳುವುದಾಗಿ ಡಿಸಿಎಂ ಡಿಕೆ ಶಿವಕುಮಾರ್ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ರಸ್ತೆಗಳಲ್ಲಿ ಎಲ್ಲೆಲ್ಲಿ ಹಳೇ ವಾಹನ ನಿಲ್ಲಿಸಿದ್ದಾರೋ ಅವುಗಳನ್ನು ತುಂಬಿಕೊಂಡು ಹೋಗಿ ಒಂದು ನಿರ್ದಿಷ್ಟ ಜಾಗದಲ್ಲಿ ಡಂಪ್ ಮಾಡುತ್ತೇವೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.
- Gangadhar Saboji
- Updated on: Mar 20, 2026
- 9:56 pm
ಲೋಪ ಆರೋಪ ಬೆನ್ನಲ್ಲೇ ಜಿಬಿಎ ಮತದಾರರ ಪಟ್ಟಿ ಆಕ್ಷೇಪಣೆಗೆ ನೀಡಿದ್ದ ಕಾಲಾವಕಾಶ ವಿಸ್ತರಣೆ
ಬೆಂಗಳೂರು ಚುನಾವಣೆಗೆ ಕೌಂಟ್ಡೌನ್ ಶುರುವಾಗಿದೆ. ರಾಜ್ಯ ಚುನಾವಣಾ ಆಯೋಗ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸಲು ಸಜ್ಜಾಗಿದೆ. ಬೆಂಗಳೂರು ಕಬ್ಜಕ್ಕೆ ತಂತ್ರ-ಪ್ರತಿತಂತ್ರಗಳು ಶುರುವಾಗಿವೆ. ಈ ಮಧ್ಯೆ ಜಿಬಿಎ ಮತದಾರರ ಪಟ್ಟಿ ಆಕ್ಷೇಪಣೆ ಸಲ್ಲಿಸಲು ನೀಡಿದ್ದ ಕಾಲಾವಕಾಶವನ್ನು ರಾಜ್ಯ ಚುನಾವಣಾ ಆಯೋಗ ಮಾರ್ಚ್ 30ರವರೆಗೆ ವಿಸ್ತರಿಸಿದೆ.
- Kiran Haniyadka
- Updated on: Mar 18, 2026
- 8:20 pm
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆ: ಕರಡು ಮತಪಟ್ಟಿ ಮತ್ತು ಮತಚೋರಿಯ ಸತ್ಯ ಅನಾವರಣ
ರಾಜ್ಯ ಚುನಾವಣೆ ಆಯೋಗ ಬಿಡುಗಡೆ ಮಾಡಿದ ಬೆಂಗಳೂರು ಕರಡು ಮತಪಟ್ಟಿ ಕಾಂಗ್ರೆಸ್ನ ಮತಚೋರಿ ಆರೋಪಗಳ ಸುಳ್ಳುತನವನ್ನು ಬಯಲುಮಾಡಿದೆ. ಹೆಸರುಗಳು ಮಾಯವಾಗಿರುವುದು ಹಾಗೂ ವೈಯಕ್ತಿಕ ಮಾಹಿತಿ ಬದಲಾಗಿರುವುದು ರಾಜ್ಯ ಆಯೋಗದ ಲೋಪಗಳನ್ನು ಎತ್ತಿ ತೋರಿಸುತ್ತದೆ.2023ರ ಪಟ್ಟಿಯ ಮರುಬಳಕೆ ಅನುಮಾನದ ಜೊತೆಗೆ ಮಾಹಿತಿ ಹುಡುಕಾಟಕ್ಕೆ ನಿರ್ಬಂಧವು ಮತದಾರರಲ್ಲಿ ಗೊಂದಲ ಮೂಡಿಸಿದ್ದು, ನಿದ್ದೆಯಲ್ಲಿರುವ ನಾಯಕರಿಗೆ ಇಂತಹ ಸೂಕ್ಷ್ಮಗಳು ಗೊತ್ತಾಗುವಷ್ಟರಲ್ಲಿ ಜಿಬಿಎ ಚುನಾವಣೆ ಮುಗಿಯದಿದ್ದರೆ ಸಾಕು ಎಂದು ಹಿರಿಯ ಪತ್ರಕರ್ತ ರಾಜೀವ್ ಹೆಗಡೆ ಅಭಿಪ್ರಾಯಪಟ್ಟಿದ್ದಾರೆ.
- Prasanna Hegde
- Updated on: Mar 16, 2026
- 7:17 pm