GBA
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಇದರ ಆಡಳಿತವನ್ನು ಪುನರ್ ರಚಿಸಿ ಕರ್ನಾಟಕ ಸರ್ಕಾರ 2025ರ ಸೆಪ್ಟೆಂಬರ್ 2 ರಿಂದ ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ಆಡಳಿತ ಜಾರಿಗೊಳಿಸಿದೆ. ಗ್ರೇಟರ್ ಬೆಂಗಳೂರು ಅಥಾರಿಟಿ ಅಡಿ ಐದು ಹೊಸ ಪಾಲಿಕೆಗಳನ್ನು ರಚನೆ ಮಾಡಲಾಗಿದ್ದು, ಬಿಬಿಎಂಪಿಯ ಮುಖ್ಯ ಕಚೇರಿ ಗ್ರೇಟರ್ ಬೆಂಗಳೂರು ಅಥಾರಿಟಿ ಪ್ರಧಾನ ಕಚೇರಿಯಾಗಿ ಬದಲಾಗಿದೆ. ಉಳಿದಂತೆ ಐದು ಭಾಗಗಳಾಗಿ ಗುರುತಿಸಲಾಗಿದ್ದು ಕೇಂದ್ರ, ಬೆಂಗಳೂರು ಪೂರ್ವ, ಬೆಂಗಳೂರು ಪಶ್ಚಿಮ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ನಗರಗಳಾಗಿ ವಿಭಜಿಸಲಾಗಿದೆ. ಐಎಎಸ್, ಐಪಿಎಸ್ ಹುದ್ದೆಗಳನ್ನು ಗ್ರೇಟರ್ ಬೆಂಗಳೂರು ಅಥಾರಿಟಿಯ ಸ್ವರೂಪಕ್ಕೆ ತಕ್ಕಂತೆ ಹಂಚಿಕೆ ಮಾಡಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ರಚನೆ ಮಾಡಲಾಗಿದ್ದು ಇದಕ್ಕೆ ಮುಖ್ಯಮಂತ್ರಿಗಳು ಅಧ್ಯಕ್ಷರಾಗಿ, ಬೆಂಗಳೂರು ನಗರಾಭಿವೃದ್ಧಿ ಸಚಿವರು ಉಪಾಧ್ಯಕ್ಷರಾಗಿರುತ್ತಾರೆ. ಕೇಂದ್ರ ಹಣಕಾಸು ಸಚಿವರು ಸೇರಿ 73 ಮಂದಿಯನ್ನು ಪದನಿಮಿತ್ತ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಜಿಬಿಎ ಸದಸ್ಯರಾಗಿ ಬೆಂಗಳೂರಿನ ಮೂವರು ಸಂಸದರು, ಬೆಂಗಳೂರು ವ್ಯಾಪ್ತಿಯ ಶಾಸಕರನ್ನು ನೇಮಿಸಲಾಗಿದೆ.
ಗ್ರೇಟರ್ ಬೆಂಗಳೂರು ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
ಗ್ರೇಟರ್ ಬೆಂಗಳೂರು ಪ್ರಾಧಿಕಾರದ (Greater Bengaluru Authority) ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ (Munish Moudgil) ವಿರುದ್ಧ ನೌಕರರು ಹಾಗೂ ಅಧಿಕಾರಿಗಳ ಪಿತ್ತ ನೆತ್ತಿಗೇರಿದ್ದು, ಕಿರುಕುಳ ಹಾಗೂ ದುರುದ್ದೇಶಪೂರ್ವಕವಾಗಿ ಅಧಿಕಾರಿಗಳನ್ನು ಅಮಾನತು ಮಾಡುವ ಕೆಲಸಕ್ಕೆ ಹಿರಿಯ ಅಧಿಕಾರಿಗಳು ಮುಂದಾಗಿದ್ದಾರೆ ಎಂದು GBA ನೌಕರರು ಪ್ರತಿಭಟನೆಯ ಹಾದಿ ತುಳಿದಿದ್ದಾರೆ.
- Ramesh B Jawalagera
- Updated on: Dec 23, 2025
- 3:39 pm
ಬೆಂಗಳೂರು ಟನಲ್ ರಸ್ತೆಗೆ ಹೆಚ್ಚಿನ ಮೊತ್ತಕ್ಕೆ ಅದಾನಿ ಗ್ರೂಪ್ ಬಿಡ್, ಧರ್ಮ ಸಂಕಟಕ್ಕೆ ಸಿಲುಕಿದ ಸಿದ್ದರಾಮಯ್ಯ ಸರ್ಕಾರ
ರಾಹುಲ್ ಗಾಂಧಿಯಿಂದ ಹಿಡಿದು ಕಾಂಗ್ರೆಸ್ ನಾಯಕರು ಸದಾ ಅದಾನಿ ಕುರಿತು ಟೀಕೆ ಮಾಡುತ್ತಲೇ ಇದ್ದಾರೆ. ಇದೀಗ ಅದೇ ಅದಾನಿ ಕಂಪನಿ ಬೆಂಗಳೂರು ಸುರಂಗ ಮಾರ್ಗ ಟೆಂಡರ್ ನಲ್ಲಿ ಮೇಲುಗೈ ಸಾಧಿಸಿ, ಇತರೆ ಎಲ್ಲಾ ಕಂಪನಿಗಳು ಕೋಟ್ ಮಾಡಿದ್ದಕ್ಕಿಂತ ಕಡಿಮೆ ಮೊತ್ತ ಬಿಡ್ ಮಾಡಿ ಟೆಂಡರ್ ಪಡೆಯುವ ಮುಂಚೂಣಿಯಲ್ಲಿದೆ. ಹೀಗಾಗಿ ರಾಷ್ಟ್ರಮಟ್ಟದಲ್ಲಿ ಅದಾನಿ ವಿರುದ್ಧ ವಾಗ್ದಾಳಿ ನಡೆಸುವ ಕಾಂಗ್ರೆಸ್, ಇದೀಗ ಅದೇ ಅದಾನಿ ಸಮೂಹಕ್ಕೆ ಟೆಂಡರ್ ನೀಡುತ್ತಾ ಎನ್ನುವ ಚರ್ಚೆ ಶುರುವಾಗಿದೆ.
- Kiran Surya
- Updated on: Dec 22, 2025
- 9:51 pm
ಬೆಂಗಳೂರಲ್ಲಿ ಅನಧಿಕೃತ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಬೆಂಗಳೂರಿನ ಕೋಗಿಲು ಕ್ರಾಸ್ ಬಳಿಯ ಫಕೀರ್ ಲೇಔಟ್ನಲ್ಲಿ ಅಕ್ರಮವಾಗಿ ನಿರ್ಮಿಸಿದ್ದ 200ಕ್ಕೂ ಹೆಚ್ಚು ಮನೆಗಳನ್ನು ನೆಲಸಮ ಮಾಡಲಾಗಿದೆ. ಜಿಬಿಎಗೆ ಮಂಜೂರಾಗಿದ್ದ 14 ಎಕರೆ ಜಾಗದಲ್ಲಿ ಒತ್ತುವರಿ ನಡೆದಿತ್ತು. ಯಾವುದೇ ಮಾಹಿತಿ ನೀಡದೆ ಮನೆಗಳನ್ನು ತೆರವುಗೊಳಿಸಲಾಗಿದೆ ಎಂದು ನಿವಾಸಿಗಳು ಆರೋಪಿಸಿದ್ದಾರೆ. ವಿಡಿಯೋ ನೋಡಿ.
- Gangadhar Saboji
- Updated on: Dec 20, 2025
- 3:46 pm
ಸುಧಾಮೂರ್ತಿ, ಸುಧಾಕರ್ ಸೇರಿ ಇತರ ಜನಪ್ರತಿನಿಧಿಗಳನ್ನು ಜಿಬಿಎ ಸದಸ್ಯರ ಪಟ್ಟಿಗೆ ಸೇರಿಸುವ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ
ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕದ ಎರಡನೇ ತಿದ್ದುಪಡಿಗೆ ವಿಧಾನಸಭೆ ಅಂಗೀಕಾರ ನೀಡಿದ್ದು, ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ ಹಾಗೂ ಚಿಕ್ಕಬಳ್ಳಾಪುರ ಸಂಸದ ಡಾ. ಕೆ ಸುಧಾಕರ್ ಸೇರಿದಂತೆ ಜಿಬಿಎ ವ್ಯಾಪ್ತಿಯ ಜನಪ್ರತಿನಿಧಿಗಳನ್ನು ಸದಸ್ಯರ ಪಟ್ಟಿಗೆ ಸೇರಿಸಲು ಅನುಮೋದನೆ ನೀಡಿದೆ. ಡಿಸಿಎಂ ಡಿಕೆ ಶಿವಕುಮಾರ್ ವಿಧೇಯಕ ಮಂಡನೆ ಮಾಡಿ ಮಾಹಿತಿ ನೀಡಿದರು.
- Ganapathi Sharma
- Updated on: Dec 18, 2025
- 8:50 am
ಹೆಸರಿಗೆ ಬ್ರ್ಯಾಂಡ್ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!: ಉತ್ತರಹಳ್ಳಿಯಲ್ಲಿ ಇದೆಂಥಾ ಸ್ಥಿತಿ?
ಬೆಂಗಳೂರಿನ ಉತ್ತರಹಳ್ಳಿ ವಾರ್ಡ್ನ ಸಿಂಹಾದ್ರಿ ಲೇಔಟ್ನಲ್ಲಿ ಕುಡಿಯುವ ಹಾಗೂ ಮನೆ ಬಳಕೆಯ ನೀರು ತೀವ್ರವಾಗಿ ಕಲುಷಿತಗೊಂಡಿದೆ. ಮಲಮೂತ್ರ ಹಾಗೂ ಕೊಳಚೆ ಮಿಶ್ರಿತ ಕಪ್ಪು ಬಣ್ಣದ ನೀರನ್ನು ಬಳಸಲು ನಿವಾಸಿಗಳು ಪರದಾಡುತ್ತಿದ್ದಾರೆ. ದೂರುಗಳ ನಂತರ ಟಿವಿ9 ವರದಿ ಪ್ರಸಾರವಾಗುತ್ತಿದ್ದಂತೆ ಪಾಲಿಕೆ ಸಿಬ್ಬಂದಿ ದುರಸ್ತಿ ಕಾರ್ಯಕ್ಕೆ ಮುಂದಾಗಿದ್ದಾರೆ.
- Prasanna Hegde
- Updated on: Dec 12, 2025
- 1:07 pm
ದಂಡಾಸ್ತ್ರಕ್ಕೂ ಬಗ್ಗದ ಬೆಂಗಳೂರು ಮಂದಿ: ಕಾರಲ್ಲಿ ಬಂದ್ರು, ರಸ್ತೆ ಬದಿ ಕಸ ಸುರಿದ್ರು!
ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವ ಪ್ರವೃತ್ತಿ ಮುಂದುವರಿದಿದ್ದು, ದಂಡಾಸ್ತ್ರಕ್ಕೂ ಜನ ಜಗ್ಗುತ್ತಿಲ್ಲ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ದಂಡ ವಿಧಿಸಿ, ಮನೆ ಮುಂದೆ ಕಸ ಸುರಿದು ನಾಚಿಕೆಪಡಿಸುವ ಕ್ರಮ ಕೈಗೊಂಡರೂ ಅಕ್ರಮ ಕಸ ವಿಲೇವಾರಿಗೆ ಬ್ರೇಕ್ ಬಿದ್ದಿಲ್ಲ. ಇತ್ತೀಚೆಗೆ ಎಸ್ಯುವಿ ಕಾರಿನಲ್ಲಿ ಬಂದು ಕಸ ಹಾಕಿದವರಿಗೆ 5,000 ರೂ. ದಂಡ ವಿಧಿಸಲಾಗಿದ್ದು, ಈ ದಂಡ ಸಾರ್ವಜನಿಕರ ಮೇಲೆ ಪರಿಣಾಮ ಬೀರುತ್ತಿಲ್ಲ ಎಂದು ಕಿರಣ್ ಮಜುಂದಾರ್ ಶಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
- Prasanna Hegde
- Updated on: Dec 12, 2025
- 11:44 am
Nandini Products: ಇನ್ಮುಂದೆ ಇಂದಿರಾ ಕ್ಯಾಂಟೀನ್ಗಳಲ್ಲೂ ಸಿಗಲಿದೆ ನಂದಿನಿ ಉತ್ಪನ್ನ! ಜಿಬಿಎ ಹೊಸ ಪ್ಲಾನ್
ಬೆಂಗಳೂರಿನಲ್ಲಿ ಕಡಿಮೆ ದುಡ್ಡಿನಲ್ಲಿ ಬಡವರ ಹೊಟ್ಟೆ ತುಂಬಿಸುವ ತಾಣ ಎಂದರೆ ಅದು ಇಂದಿರಾ ಕ್ಯಾಂಟೀನ್. ತಿಂಡಿ, ಊಟ ಕೊಡುವ ಸಮಯ ಬಿಟ್ಟರೆ ಉಳಿದ ಸಂದರ್ಭಗಳಲ್ಲಿ ಇಂದಿರಾ ಕ್ಯಾಂಟೀನ್ ಖಾಲಿ ಹೊಡೆಯುತ್ತಿರುತ್ತದೆ. ಹೀಗಾಗಿ ಮುಂದಿನ ದಿನಗಳಲ್ಲಿ ಇಂದಿರಾ ಕ್ಯಾಂಟೀನ್ಗಳಲ್ಲಿ ನಂದಿನಿ ಉತ್ಪನ್ನಗಳನ್ನು ಮಾರಾಟ ಮಾಡಲು ಅವಕಾಶ ಕೊಡೋಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚಿಂತನೆ ನಡೆಸಿದೆ.
- Ganapathi Sharma
- Updated on: Dec 12, 2025
- 7:37 am
5 ಪಾಲಿಕೆಗಳಿಂದ ಜಿಬಿಎ ಆರ್ಥಿಕ ದಿವಾಳಿ! ಅಂಕಿಅಂಶ ಸಹಿತ ಕಾರಣ ಬಿಚ್ಚಿಟ್ಟ ಬಿಜೆಪಿ ಮುಖಂಡ, ಸಿಎಂಗೆ ಪತ್ರ
5 ಹೊಸ ಬೆಂಗಳೂರು ಮಹಾನಗರ ಪಾಲಿಕೆಗಳ ರಚನೆಯಿಂದ ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಭಾರಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ದಿವಾಳಿಯಾಗುವ ಸಾಧ್ಯತೆಯಿದೆ ಎಂದು ಬಿಜೆಪಿ ಮುಖಂಡ ಎನ್.ಆರ್. ರಮೇಶ್ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದು ಎಚ್ಚರಿಕೆ ನೀಡಿದ್ದಾರೆ. ಹೆಚ್ಚಿದ ಸಿಬ್ಬಂದಿ ವೇತನ ಮತ್ತು ನಿರ್ವಹಣಾ ವೆಚ್ಚಗಳು ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲದಂತೆ ಮಾಡಿ, ಬೆಂಗಳೂರಿನ ಭವಿಷ್ಯಕ್ಕೆ ದೊಡ್ಡ ಸವಾಲಾಗಲಿದೆ ಎಂದು ಅವರು ಹೇಳಿದ್ದಾರೆ.
- Shivaraj
- Updated on: Dec 1, 2025
- 12:01 pm
ಮಹಾನಗರ ಪಾಲಿಕೆಗಳಲ್ಲಿ ಇನ್ನು ಇರಲ್ಲ ಆರೋಗ್ಯಾಧಿಕಾರಿ ಹುದ್ದೆ: ಕಾರಣ ಇಲ್ಲಿದೆ
ರಾಜ್ಯ ಸರ್ಕಾರವು ಗ್ರೇಟರ್ ಬೆಂಗಳೂರು ಹೊರತುಪಡಿಸಿ, ರಾಜ್ಯದ 18 ಮಹಾನಗರ ಪಾಲಿಕೆಗಳಲ್ಲಿನ ಆರೋಗ್ಯಾಧಿಕಾರಿ ಹುದ್ದೆಗಳನ್ನು ರದ್ದುಪಡಿಸಿದೆ. ಹುಬ್ಬಳ್ಳಿ-ಧಾರವಾಡ ಪಾಲಿಕೆಯೂ ಇದರಲ್ಲಿ ಸೇರಿದ್ದು, ಈ ಹುದ್ದೆಗಳನ್ನು ಕಾರ್ಯಪಾಲಕ ಇಂಜಿನಿಯರ್, ಸಹಾಯಕ ಕಾರ್ಯಪಾಲಕ ಇಂಜಿನಿಯರ್, ಸೀನಿಯರ್ ಪ್ರೋಗ್ರಾಮರ್ ಮತ್ತು ಆಡಳಿತಾಧಿಕಾರಿ ಹುದ್ದೆಗಳಾಗಿ ಮರುನಾಮಕರಣ ಮಾಡಲಾಗಿದೆ. ಆರೋಗ್ಯ ವಿಭಾಗದ ಕಾರ್ಯಗಳು ಇಂಜಿನಿಯರ್ಗಳ ಅಧೀನದಲ್ಲಿ ಮುಂದುವರಿಯಲಿದೆ ಎಂದು ಹೇಳಲಾಗಿದೆ.
- Sanjayya Chikkamath
- Updated on: Dec 1, 2025
- 9:45 am
ಬೆಂಗಳೂರಿನಲ್ಲಿ ಕಸಕ್ಕೆ ಬೆಂಕಿ ಹಚ್ಚಿದರೆ ಕ್ರಿಮಿನಲ್ ಕೇಸ್, ಒಂದು ವರ್ಷ ಜೈಲು: BSWML ಅಧಿಕಾರಿಗಳಿಂದ ಖಡಕ್ ಎಚ್ಚರಿಕೆ
ಮನೆಯ ಕಸವನ್ನು ರಸ್ತೆಗೆ ತಂದು ಸುರಿಯುತ್ತಿದ್ದವರ ಮನೆ ಬಾಗಿಲಿಗೆ ಹೋಗಿ ಕಸವನ್ನು ಸುರಿದು ದಂಡ ಹಾಕುತ್ತಿದ್ದ ಅಧಿಕಾರಿಗಳು, ಇದೀಗ ಕಸಕ್ಕೆ ಬೆಂಕಿ ಹಾಕುವವರ ಮೇಲೆ ಎಫ್ಐಆರ್ ಫೈಲ್ ಮಾಡಿ ಜೈಲಿಗೆ ಕಳಿಸಲು ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಬೆಂಗಳೂರು ಘನ ತ್ಯಾಜ್ಯ ನಿರ್ವಹಣೆ ನಿಗಮದ (BSWML) ಅಧಿಕಾರಿಗಳು ಖಡಕ್ ಎಚ್ಚರಿಕೆ ನೀಡಿದ್ದಾರೆ.
- Kiran Surya
- Updated on: Nov 28, 2025
- 7:54 am
ಬೆಂಗಳೂರಿನಲ್ಲಿ ನೀರಿನ ಬಿಲ್ ಬಾಕಿದಾರರಿಗೆ ಗುಡ್ ನ್ಯೂಸ್, ಸಚಿವ ಸಂಪುಟ ಮಹತ್ವದ ತೀರ್ಮಾನ
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಗ್ರಾಹಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಗುಡ್ನ್ಯೂಸ್ವೊಂದು ಸಿಕ್ಕಿದೆ. ನೀರಿನ ಬಾಕಿ ಮೊತ್ತವನ್ನು ಒಂದೇ ಬಾರಿಗೆ ಪಾವತಿಸಿದರೆ ದಂಡ , ಬಡ್ಡಿ ಮತ್ತು ಇತರ ಶುಲ್ಕಗಳಲ್ಲಿ ಶೇ.100ರಷ್ಟು ರಿಯಾಯಿತಿ ನೀಡಲು ಸರ್ಕಾರ ನಿರ್ಧರಿಸಿದೆ. ಹಾಗಾದ್ರೆ, ಇದು ಯಾರಿಗೆಲ್ಲಾ ಅನ್ವಯಿಸಲಿದೆ ಎನ್ನುವ ವಿವರ ಇಲ್ಲಿದೆ.
- Ramesh B Jawalagera
- Updated on: Nov 27, 2025
- 7:35 pm
ಇದು ರಸ್ತೆಯೋ ಅಥವಾ ಡಂಪಿಂಗ್ ಯಾರ್ಡೋ?: ಜನರ ಸಮಸ್ಯೆ ಕೇಳೋರ್ಯಾರು?
ಸರ್ವಜ್ಞನಗರ ಮತ್ತು ಪುಲಕೇಶಿನಗರಗಳಲ್ಲಿ ಕಸದ ರಾಶಿಗಳು ತುಂಬಿವೆ. ಒಂದು ತಿಂಗಳಿಂದ ಕಸ ಸಂಗ್ರಹಿಸದ ಜಿಬಿಎ ವಿರುದ್ಧ ನಾಗರಿಕರು ಆಕ್ರೋಶಗೊಂಡಿದ್ದಾರೆ. ಶಾಸಕರಾದ ಕೆ.ಜೆ. ಜಾರ್ಜ್ ಮತ್ತು ಎ.ಸಿ. ಶ್ರೀನಿವಾಸ್ ನಡುವಿನ ಕ್ಷೇತ್ರದ ವ್ಯಾಪ್ತಿ ಗೊಂದಲದಿಂದ ಸಮಸ್ಯೆ ಉಲ್ಬಣಿಸಿದ್ದು, ಜನರ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ. ರಾತ್ರಿ ವೇಳೆಯಲ್ಲಿ ಕಸಕ್ಕೆ ಬೆಂಕಿ ಹಚ್ಚುವುದರಿಂದ ಉಸಿರಾಟದ ಸಮಸ್ಯೆಗಳು ಉಂಟಾಗುತ್ತಿವೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
- Prasanna Hegde
- Updated on: Nov 25, 2025
- 7:47 pm