GBA
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಇದರ ಆಡಳಿತವನ್ನು ಪುನರ್ ರಚಿಸಿ ಕರ್ನಾಟಕ ಸರ್ಕಾರ 2025ರ ಸೆಪ್ಟೆಂಬರ್ 2 ರಿಂದ ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ಆಡಳಿತ ಜಾರಿಗೊಳಿಸಿದೆ. ಗ್ರೇಟರ್ ಬೆಂಗಳೂರು ಅಥಾರಿಟಿ ಅಡಿ ಐದು ಹೊಸ ಪಾಲಿಕೆಗಳನ್ನು ರಚನೆ ಮಾಡಲಾಗಿದ್ದು, ಬಿಬಿಎಂಪಿಯ ಮುಖ್ಯ ಕಚೇರಿ ಗ್ರೇಟರ್ ಬೆಂಗಳೂರು ಅಥಾರಿಟಿ ಪ್ರಧಾನ ಕಚೇರಿಯಾಗಿ ಬದಲಾಗಿದೆ. ಉಳಿದಂತೆ ಐದು ಭಾಗಗಳಾಗಿ ಗುರುತಿಸಲಾಗಿದ್ದು ಕೇಂದ್ರ, ಬೆಂಗಳೂರು ಪೂರ್ವ, ಬೆಂಗಳೂರು ಪಶ್ಚಿಮ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ನಗರಗಳಾಗಿ ವಿಭಜಿಸಲಾಗಿದೆ. ಐಎಎಸ್, ಐಪಿಎಸ್ ಹುದ್ದೆಗಳನ್ನು ಗ್ರೇಟರ್ ಬೆಂಗಳೂರು ಅಥಾರಿಟಿಯ ಸ್ವರೂಪಕ್ಕೆ ತಕ್ಕಂತೆ ಹಂಚಿಕೆ ಮಾಡಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ರಚನೆ ಮಾಡಲಾಗಿದ್ದು ಇದಕ್ಕೆ ಮುಖ್ಯಮಂತ್ರಿಗಳು ಅಧ್ಯಕ್ಷರಾಗಿ, ಬೆಂಗಳೂರು ನಗರಾಭಿವೃದ್ಧಿ ಸಚಿವರು ಉಪಾಧ್ಯಕ್ಷರಾಗಿರುತ್ತಾರೆ. ಕೇಂದ್ರ ಹಣಕಾಸು ಸಚಿವರು ಸೇರಿ 73 ಮಂದಿಯನ್ನು ಪದನಿಮಿತ್ತ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಜಿಬಿಎ ಸದಸ್ಯರಾಗಿ ಬೆಂಗಳೂರಿನ ಮೂವರು ಸಂಸದರು, ಬೆಂಗಳೂರು ವ್ಯಾಪ್ತಿಯ ಶಾಸಕರನ್ನು ನೇಮಿಸಲಾಗಿದೆ.
ಮೆಟ್ರೋ ಟಿಕೆಟ್ ಬೆನ್ನಲ್ಲೇ ಬೆಂಗಳೂರಿನಲ್ಲಿ ಏರಿಕೆಯಾಗುತ್ತಾ ಕಾವೇರಿ ನೀರಿನ ದರ? ಜಲಮಂಡಳಿ ಅಧ್ಯಕ್ಷರಿಂದ ಸ್ಪಷ್ಟನೆ
Bangalore Water Price: ಬೆಂಗಳೂರಿನಲ್ಲಿ ಮೆಟ್ರೋ ಟಿಕೆಟ್ ದರ ಏರಿಕೆ ಬೆನ್ನಲ್ಲೇ ಮತ್ತೆ ನೀರಿನ ದರವೂ ಹೆಚ್ಚಳವಾಗುತ್ತದೆ ಎಂಬ ವದಂತಿ ಹರಡಿದೆ. ಕಾವೇರಿ ನೀರಿದ ದರ ಏರಿಕೆ ಈ ಬಗ್ಗೆ ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಸ್ಪಷ್ಟನೆ ನೀಡಿದ್ದಾರೆ. ಅವರು ನೀಡಿದ ಮಾಹಿತಿ ಇಲ್ಲಿದೆ.
- Shivaraj
- Updated on: Feb 5, 2026
- 1:11 pm
ಬೆಂಗಳೂರಿನ ಪಿಜಿಗಳಿಗೆ ಜಿಬಿಎ ಶಾಕ್! 500ಕ್ಕೂ ಹೆಚ್ಚು ಪಿಜಿಗಳಿಗೆ ನೋಟಿಸ್
ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಪಿಜಿಗಳ ಕಳಪೆ ಕಾರ್ಯನಿರ್ವಹಣೆಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಕಡಿವಾಣ ಹಾಕಿದೆ. ಮೂಲಭೂತ ನಿಯಮಗಳನ್ನು ಉಲ್ಲಂಘಿಸಿದ 8 ಅಸುರಕ್ಷಿತ ಪಿಜಿಗಳಿಗೆ ಬೀಗ ಜಡಿಯಲಾಗಿದ್ದು, 574 ಪಿಜಿಗಳಿಗೆ ನೋಟಿಸ್ ನೀಡಲಾಗಿದೆ. ಒಟ್ಟು 3.09 ಲಕ್ಷ ರೂ. ದಂಡ ವಿಧಿಸಲಾಗಿದೆ. ಪಿಜಿ ಮಾಲೀಕರು ನಿಯಮ ಪಾಲಿಸದಿದ್ದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.
- Bhavana Hegde
- Updated on: Feb 2, 2026
- 1:36 pm
ಬೆಂಗಳೂರಿನಲ್ಲಿ ಮತ್ತೆ ಶುರುವಾಗಲಿದೆ ಟೋಯಿಂಗ್: ಎಲ್ಲೆಂದರಲ್ಲಿ ವಾಹನ ಪಾರ್ಕ್ ಮಾಡೋ ಮುನ್ನ ಎಚ್ಚರ
ಬೆಂಗಳೂರಿನಲ್ಲಿ ಮಿತಿಮೀರಿದ ವಾಹನಗಳ ಸಂಖ್ಯೆಯಿಂದಾಗಿ ಟ್ರಾಫಿಕ್ ಕಿರಿಕಿರಿ ಹೆಚ್ಚಾಗಿದ್ದರೆ, ಅನಧಿಕೃತ ಪಾರ್ಕಿಂಗ್ ಕೂಡ ಹೆಚ್ಚಾಗಿರುವುದು ತಲೆನೋವಾಗಿ ಪರಿಣಮಿಸಿದೆ. ಇದರಿಂದಾಗಿ ನಗರದ ಹಲವೆಡೆ ಸುಗಮ ಸಂಚಾರಕ್ಕೆ ಅಡ್ಡಿಯಾಗಿದ್ದು, ಟ್ರಾಫಿಕ್ ಪೊಲೀಸರಿಗೂ ವಾಹನಗಳ ನಿಯಂತ್ರಣ ಕಷ್ಟವಾಗಿದೆ. ಹೀಗಾಗಿ ಮತ್ತೆ ಟೋಯಿಂಗ್ ಅಸ್ತ್ರ ಹೂಡಲು ಜಿಬಿಎ ಹಾಗೂ ಸಂಚಾರ ಪೊಲೀಸರು ಸಜ್ಜಾಗಿದ್ದಾರೆ.
- Ganapathi Sharma
- Updated on: Feb 2, 2026
- 6:57 am
ಜಿಬಿಎ ಚುನಾವಣೆ: ಬ್ಯಾಲೆಟ್ ಪೇಪರ್ ಬಳಕೆಗೆ ವಿರೋಧ, ಇವಿಎಂ ಬಳಸುವಂತೆ ಸಂಘ-ಸಂಸ್ಥೆಗಳ ಪಟ್ಟು
ಆರು ವರ್ಷಗಳ ಬಳಿಕ ಪಾಲಿಕೆ ಚುನಾವಣೆಗೆ ಭರದ ಸಿದ್ಧತೆ ನಡೆದಿದೆ. ರಾಜಕೀಯ ಪಕ್ಷಗಳಲ್ಲೂ ಅಬ್ಬರದ ಚಟುವಟಿಕೆ ಶುರುವಾಗಿದೆ. ಇದರ ನಡುವೆ ರಾಜ್ಯ ಚುನಾವಣಾ ಆಯೋಗ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಲು ಹೊರಟಿದ್ದಕ್ಕೆ ಸಾರ್ವಜನಿಕರು ಕಿಡಿ ಕಾರುತ್ತಿದ್ದಾರೆ. ಬ್ಯಾಲೆಟ್ ಪೇಪರ್ ಕೈ ಬಿಟ್ಟು ಇವಿಎಂನಲ್ಲೇ ಚುನಾವಣೆ ನಡೆಸುವಂತೆ ಆಂದೋಲನ ಶುರು ಮಾಡಿದ್ದಾರೆ.
- Ganapathi Sharma
- Updated on: Feb 1, 2026
- 7:33 am
ಗಣರಾಜ್ಯೋತ್ಸವ: ಜಿಬಿಎ ಎಡವಟ್ಟು, ಸ್ವಾಗತ ಫಲಕಗಳಲ್ಲಿ ಇನ್ನೂ ಬಿಬಿಎಂಪಿ ಹೆಸರು!
77ನೇ ಗಣರಾಜ್ಯೋತ್ಸವ ಸಂಭ್ರಮದ ನಡುವೆ ಮಾಣೆಕ್ ಷಾ ಪೆರೇಡ್ ಮೈದಾನದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ದೊಡ್ಡ ಎಡವಟ್ಟು ಮಾಡಿದೆ. ಸ್ವಾಗತ ಫಲಕಗಳಲ್ಲಿ ಜಿಬಿಎ ಬದಲಿಗೆ ಹಳೆಯ ಬಿಬಿಎಂಪಿ ಹೆಸರನ್ನೇ ಬಳಸಲಾಗಿದೆ. ಮುಖ್ಯಮಂತ್ರಿಗಳು, ರಾಜ್ಯಪಾಲರು ಭಾಗವಹಿಸುವ ಈ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ.
- Vinay Kashappanavar
- Updated on: Jan 26, 2026
- 9:36 am
ಮಹಾನಗರ ಪಾಲಿಕೆಗಳಲ್ಲಿ ವೈದ್ಯಕೀಯ ಆರೋಗ್ಯಾಧಿಕಾರಿ ಹುದ್ದೆ ರದ್ದು! ಡೆಂಗ್ಯೂ–ಕಾಲರಾ ಎದುರಿಸಲು ಎಂಜಿನಿಯರ್ ಸಾಕೆ?
ಕರ್ನಾಟಕ ನಗರಾಭಿವೃದ್ಧಿ ಇಲಾಖೆಯು ಗ್ರೇಟರ್ ಬೆಂಗಳೂರು ಹೊರತುಪಡಿಸಿ, ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ವೈದ್ಯಕೀಯ ಆರೋಗ್ಯಾಧಿಕಾರಿ ಹುದ್ದೆ ರದ್ದುಪಡಿಸಿ, ಎಂಜಿನಿಯರ್ಗಳಿಗೆ ಜವಾಬ್ದಾರಿ ವಹಿಸಲು ನಿರ್ಧರಿಸಿದೆ. ಮೈಸೂರು ಸೇರಿದಂತೆ ಹಲವೆಡೆ ಈ ನಿರ್ಧಾರಕ್ಕೆ ವೈದ್ಯಕೀಯ ಹಾಗೂ ರಾಜಕೀಯ ವಲಯದಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಸಾರ್ವಜನಿಕ ಆರೋಗ್ಯದ ರಕ್ಷಣೆ, ಸಾಂಕ್ರಾಮಿಕ ರೋಗಗಳ ನಿಯಂತ್ರಣದಂತಹ ಪ್ರಮುಖ ಕಾರ್ಯಗಳಿಗೆ ವೈದ್ಯಕೀಯ ಅರ್ಹತೆ ಅಗತ್ಯ ಎಂದು ಆಕ್ಷೇಪಿಸಲಾಗಿದೆ.
- Bhavana Hegde
- Updated on: Jan 24, 2026
- 9:13 am
ಜಿಬಿಎ ಕಚೇರಿಯಲ್ಲಿ 800 ವರ್ಷದ ಹಳೆ ದೇವಾಲಯ ಜೀರ್ಣೋದ್ಧಾರ: ನೌಕರರಿಂದ ದೇಣಿಗೆ
ಬೆಂಗಳೂರಿನ ಜಿಬಿಎ ಕೇಂದ್ರ ಕಚೇರಿಯಲ್ಲಿರುವ 800 ವರ್ಷಗಳ ಇತಿಹಾಸವಿರುವ ಶ್ರೀ ಆದಿಶಕ್ತಿ ದೇವಾಲಯವು ನೌಕರರ ಕ್ಷೇಮಾಭಿವೃದ್ಧಿ ಸಂಘದ ಸಹಕಾರದೊಂದಿಗೆ 1.6 ಕೋಟಿ ರೂ. ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿದೆ. ನೌಕರರ ದೇಣಿಗೆಯಿಂದ ಪುನರುಜ್ಜೀವನಗೊಂಡ ಈ ದೇವಾಲಯದಲ್ಲಿ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಉದ್ಘಾಟನೆ ಮಾಡಲಾಗಿದೆ.
- Gangadhar Saboji
- Updated on: Jan 23, 2026
- 9:48 pm
ಬ್ಯಾನರ್ ಗಲಾಟೆಗಳ ಬೆನ್ನಲ್ಲೇ ಎಚ್ಚೆತ್ತ ಜಿಬಿಎ: ಬೆಂಗಳೂರಿನಾದ್ಯಂತ ಅನಧಿಕೃತ ಬ್ಯಾನರ್ ತೆರೆವು ಕಾರ್ಯ ಚುರುಕು
ಡಿಸಿಎಂ ಡಿಕೆ ಶಿವಕುಮಾರ್ ಸೂಚನೆಯಂತೆ ಬೆಂಗಳೂರಿನಲ್ಲಿ ಅನಧಿಕೃತ ಬ್ಯಾನರ್, ಫ್ಲೆಕ್ಸ್ಗಳನ್ನು ತೆರವುಗೊಳಿಸುವ ಪ್ರಕ್ರಿಯೆ ಚುರುಕುಗೊಂಡಿದೆ. ಸ್ಕೈವಾಕ್ ಮತ್ತು ಬಸ್ ಶೆಲ್ಟರ್ ಸಮೀಪದ ವಿವಿಧ ವಿಭಾಗಗಳಲ್ಲಿ ಅನಧಿಕೃತ ಬ್ಯಾನರ್ಗಳನ್ನು ತೆಗೆದುಹಾಕಲಾಗುತ್ತಿದೆ. ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ 473 ಬ್ಯಾನರ್ಗಳನ್ನು ತೆರವುಗೊಳಿಸಿ 15,000 ರೂಪಾಯಿ ದಂಡ ವಸೂಲಿ ಮಾಡಲಾಗಿದೆ.
- Ganapathi Sharma
- Updated on: Jan 21, 2026
- 7:05 am
ಬೆಂಗಳೂರು: ಜಿಬಿಎ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಕಾಂಗ್ರೆಸ್ನಲ್ಲೇ ಅಪಸ್ವರ!
GBA Election: ಗ್ರೇಟರ್ ಬೆಂಗಳೂರು ಅಥಾರಿಟಿ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ಬ್ಯಾಲೆಟ್ ಪೇಪರ್ ಬಳಸಲು ನಿರ್ಧರಿಸಿದೆ. ಆದರೆ, ಆಡಳಿತಾರೂಢ ಕಾಂಗ್ರೆಸ್ನಲ್ಲೇ ಇವಿಎಂ ಪರ ಹಾಗೂ ಬ್ಯಾಲೆಟ್ ಪೇಪರ್ ಪರ ಅಭಿಪ್ರಾಯಗಳು ವ್ಯಕ್ತವಾಗಿವೆ. ಬಿಜೆಪಿ ನಾಯಕರು ಬ್ಯಾಲೆಟ್ ಪೇಪರ್ ಬಳಸಿದರೂ ತಮ್ಮ ಗೆಲುವು ಖಚಿತ ಎಂದಿದ್ದಾರೆ.
- Ganapathi Sharma
- Updated on: Jan 21, 2026
- 7:58 am
ಅಧಿಕಾರ ಸ್ವೀಕರಿಸುತ್ತಿದ್ದಂತೆಯೇ ಗ್ರೇಟರ್ ಬೆಂಗಳೂರು ಚುನಾವಣೆಗೆ ಉಸ್ತುವಾರಿಗಳನ್ನ ನೇಮಿಸಿದ ಬಿಜೆಪಿ ನೂತನ ಅಧ್ಯಕ್ಷ
ಮೊದಲೇ ನಿರೀಕ್ಷಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಬಿಹಾರ ಮೂಲದ ನಿತಿನ್ ನಬಿನ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದು, ಇಂದು(ಜನವರಿ 20) ಅಧಿಕೃತಾಗಿ ಅಧಿಕಾರ ಸ್ವೀಕಾರ ಮಾಡಿದರು. ಇನ್ನು ಅಧಿಕಾರ ಸ್ವೀಕರಿಸಿದ ದಿನವೇ ಗ್ರೇಟರ್ ಬೆಂಗಳೂರು ಎಲೆಕ್ಷನ್ಗೆ ತಮ್ಮ ಪಕ್ಷದಿಂದ ಉಸ್ತುವಾರಿ ಹಾಗೂ ಸಹ ಉಸ್ತವಾರಿಗಳನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ.
- Ramesh B Jawalagera
- Updated on: Jan 20, 2026
- 11:25 pm
ಜಿಬಿಎ ಕರಡು ಮತದಾರರ ಪಟ್ಟಿ ಪ್ರಕಟ; ತಿದ್ದುಪಡಿಗೆ ಲಾಸ್ಟ್ ಡೇ ಯಾವಾಗ ಗೊತ್ತಾ?
ಮೇ 25ಕ್ಕೆ ನಿಗದಿಯಾಗಿರುವ ಜಿಬಿಎ ವ್ಯಾಪ್ತಿಯ ನಗರ ಪಾಲಿಕೆಗಳ ಚುನಾವಣೆಗೆ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಮತದಾರರು ಫೆಬ್ರವರಿ 6ರವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದು. ಬೂತ್ ಲೆವೆಲ್ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದು, ಪಟ್ಟಿಯಲ್ಲಿ ತಿದ್ದುಪಡಿ ಅಥವಾ ಸೇರ್ಪಡೆ ಬಯಸುವವರು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.
- Bhavana Hegde
- Updated on: Jan 19, 2026
- 2:18 pm
ಜಿಬಿಎ ಚುನಾವಣೆಗೆ ಬಿಜೆಪಿ-ಜೆಡಿಎಸ್ ತಂತ್ರಗಾರಿಕೆ ಏನು? ಹೆಚ್ಡಿ ಕುಮಾರಸ್ವಾಮಿ ಮಹತ್ವದ ಘೋಷಣೆ
ಜೂನ್ 30ರೊಳಗೆ ಜಿಬಿಎ ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್ ಆದೇಶಿಸಿದ ಹಿನ್ನೆಲೆಯಲ್ಲಿ, ಜೆಡಿಎಸ್ ಬಿಜೆಪಿ ಜೊತೆ ಮೈತ್ರಿ ಸಂಬಂಧ ಸಭೆ ನಡೆಸಿದೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮೈತ್ರಿಯನ್ನು ಬೆಂಬಲಿಸಿದ್ದಾರೆ. ಮಹಾರಾಷ್ಟ್ರ ಫಲಿತಾಂಶದ ಪ್ರಭಾವದಿಂದ ಕರ್ನಾಟಕದಲ್ಲೂ ಸ್ಥಳೀಯ ಸಂಸ್ಥೆಗಳ ಚುನಾವಣೆ ಕಾವು ಪಡೆದಿದ್ದು, ಮೈತ್ರಿಯ ಲಾಭ ನಷ್ಟಗಳ ಬಗ್ಗೆ ಚರ್ಚೆ ನಡೆದಿದೆ.
- Ganapathi Sharma
- Updated on: Jan 17, 2026
- 8:39 am