AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

GBA

GBA

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಇದರ ಆಡಳಿತವನ್ನು ಪುನರ್​ ರಚಿಸಿ ಕರ್ನಾಟಕ ಸರ್ಕಾರ 2025ರ ಸೆಪ್ಟೆಂಬರ್ 2 ರಿಂದ ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ಆಡಳಿತ ಜಾರಿಗೊಳಿಸಿದೆ. ಗ್ರೇಟರ್ ಬೆಂಗಳೂರು ಅಥಾರಿಟಿ ಅಡಿ ಐದು ಹೊಸ ಪಾಲಿಕೆಗಳನ್ನು ರಚನೆ ಮಾಡಲಾಗಿದ್ದು, ಬಿಬಿಎಂಪಿಯ ಮುಖ್ಯ ಕಚೇರಿ ಗ್ರೇಟರ್ ಬೆಂಗಳೂರು ಅಥಾರಿಟಿ ಪ್ರಧಾನ ಕಚೇರಿಯಾಗಿ ಬದಲಾಗಿದೆ. ಉಳಿದಂತೆ ಐದು ಭಾಗಗಳಾಗಿ ಗುರುತಿಸಲಾಗಿದ್ದು ಕೇಂದ್ರ, ಬೆಂಗಳೂರು ಪೂರ್ವ, ಬೆಂಗಳೂರು ಪಶ್ಚಿಮ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ನಗರಗಳಾಗಿ ವಿಭಜಿಸಲಾಗಿದೆ. ಐಎಎಸ್, ಐಪಿಎಸ್ ಹುದ್ದೆಗಳನ್ನು ಗ್ರೇಟರ್ ಬೆಂಗಳೂರು ಅಥಾರಿಟಿಯ ಸ್ವರೂಪಕ್ಕೆ ತಕ್ಕಂತೆ ಹಂಚಿಕೆ ಮಾಡಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ರಚನೆ ಮಾಡಲಾಗಿದ್ದು ಇದಕ್ಕೆ ಮುಖ್ಯಮಂತ್ರಿಗಳು ಅಧ್ಯಕ್ಷರಾಗಿ, ಬೆಂಗಳೂರು ನಗರಾಭಿವೃದ್ಧಿ ಸಚಿವರು ಉಪಾಧ್ಯಕ್ಷರಾಗಿರುತ್ತಾರೆ. ಕೇಂದ್ರ ಹಣಕಾಸು ಸಚಿವರು ಸೇರಿ 73 ಮಂದಿಯನ್ನು ಪದನಿಮಿತ್ತ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಜಿಬಿಎ ಸದಸ್ಯರಾಗಿ ಬೆಂಗಳೂರಿನ ಮೂವರು ಸಂಸದರು, ಬೆಂಗಳೂರು ವ್ಯಾಪ್ತಿಯ ಶಾಸಕರನ್ನು ನೇಮಿಸಲಾಗಿದೆ.

ಇನ್ನೂ ಹೆಚ್ಚು ಓದಿ

ಜಿಬಿಎ ಚುನಾವಣೆಗೆ ಸುಪ್ರೀಂಕೋರ್ಟ್​​ನಿಂದ ಹೊಸ ಡೆಡ್​​ಲೈನ್​​: ಈ ಹಿಂದೆ ನೀಡಿದ್ದ ಅವಧಿ ವಿಸ್ತರಣೆ

ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆಗೆ ಸುಪ್ರೀಂ ಕೋರ್ಟ್ ಆಗಸ್ಟ್ 31, 2026ರವರೆಗೆ ಹೊಸ ಗಡುವು ನೀಡಿದ್ದು, ರಾಜ್ಯ ಸರ್ಕಾರ ಮತ್ತು ಚುನಾವಣಾ ಆಯೋಗದ ಮನವಿ ಹಿನ್ನೆಲೆ ಈ ನಿರ್ಧಾರ ಕೈಗೊಂಡಿದೆ. ವಿಶೇಷ ಮತದಾರರ ಪರಿಶೀಲನೆ (SIR) ಕಾರ್ಯದ ಹಿನ್ನೆಲೆಯಲ್ಲಿ ಕಾಲಾವಕಾಶ ವಿಸ್ತರಣೆಗೆ ಸರ್ವೋಚ್ಚ ನ್ಯಾಯಾಲಯಕ್ಕೆ ಮನವಿ ಮಾಡಲಾಗಿತ್ತು.

ಮನೆ ಮೇಲೆ ಬಿದ್ದ ಬೃಹತ್​ ಮರದ ಕೊಂಬೆ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್

ಮನೆಯ ಮೇಲೆ  ಬೃಹತ್​ ಮರದ ಕೊಂಬೆ ಬಿದ್ದಿದ್ದು, ಆಚೆ ಬರಲಾಗದೇ ಮೂವರು ಮನೆಯೊಳಗೆ ಸಿಲುಕಿಕೊಂಡಿರುವ ಘಟನೆ ಬೆಂಗಳೂರಿನ ಪುಲಕೇಶಿ ನಗರ ಬಳಿಯ ಫ್ರೆಜರ್​​ಟೌನ್​​​ನಲ್ಲಿ ನಡೆದಿದೆ. ಬೃಹತ್ ಮರದ ಕೊಂಬೆಯೊಂದು ಇಂದು (ಮೇ 19) ಬೆಳಗ್ಗೆ ಮನೆ ಮೇಲೆ ಬಿದ್ದಿದ್ದು, ಕೊಂಬೆ ಪೂರ್ತಿ ಮನೆಯನ್ನು ಆವರಿಸಿಕೊಂಡಿದೆ. ಇದರಿಂದ ಮನೆಯಿಂದ ಹೊರಗೆ ಬರಲು ಆಗದೆ ನಿವಾಸಿಗಳು ಹೆಣಗಾಡಿದ್ದಾರೆ. ಇದನ್ನು ಸ್ಥಳೀಯರು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಗಮನಕ್ಕೂ ತಂದರೂ ಸಹ ಅಧಿಕಾರಿಗಳು ಕ್ಯಾರೇ ಎನ್ನುತ್ತಿಲ್ಲ. GBA ಅರಣ್ಯ ವಿಭಾಗದ ಸಿಬ್ಬಂದಿ ಮರದ ಕೊಂಬೆ ತೆರವು ಮಾಡದೆ ಮೀನಾಮೇಷ ಎಣಿಸುತ್ತಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು, ಎದುರಾದ ಆತಂಕವೇನು?

ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ಮಹಾನಗರ ಪಾಲಿಕೆಗಳ ಚುನಾವಣೆಗೆ ಮತ್ತಷ್ಟು ವಿಳಂಬ ಆಗುವ ಸಾಧ್ಯತೆ ದಟ್ಟವಾಗಿದೆ. ಚುನಾವಣೆ ಮುಂದೂಡಿಕೆಗೆ ಸಕಾರಣಗಳೊಂದಿಗೆ ಸುಪ್ರೀಂ ಕೋರ್ಟ್‌ ಮೊರೆ ಹೋಗಲು ರಾಜ್ಯ ಸರ್ಕಾರ ತಯಾರಿ ಮಾಡಿಕೊಂಡಿದೆ. ಇದರ ನಡುವೆ ಇದೀಗ ಕರ್ನಾಟಕದಲ್ಲೂ ಸಹ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆಗೆ ದಿನಾಂಕ ನಿಗದಿಯಾಗಿದೆ. ಹೀಗಾಗಿ ಜಿಬಿಎ ಚುನಾವಣೆಗೆ ಎಸ್​ಐಆರ್​ ಅಡ್ಡಿಯಾಗುವ ಆತಂಕ ಎದುರಾಗಿದೆ.

6ನೇ ಗ್ಯಾರಂಟಿ ಘೋಷಿಸಿದ ಡಿಕೆ ಶಿವಕುಮಾರ್, ಬೆಂಗಳೂರಿಗರಿಗೆ ಬಂಪರ್ ಗಿಫ್ಟ್!

ಇ-ಖಾತಾ, ನಂಬಿಕೆ ನಕ್ಷೆ ಸೇರಿ ಬೆಂಗಳೂರಿನ ಜನರಿಗಾಗಿ ಈಗಾಗಲೇ ಹಲವು ಯೋಜನೆಗಳನ್ನು ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿದೆ. ಅದರ ಜತೆಗೆ ಇದೀಗ ಬೆಂಗಳೂರಿಗೆ ಸೀಮಿತವಾಗಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಇಂದು (ಇಂದು 13) 6ನೇ ಗ್ಯಾರಂಟಿ ಘೋಷಣೆ ಮಾಡಿದ್ದಾರೆ. ಏನದು 6ನೇ ಗ್ಯಾರಂಟಿ ಎನ್ನುವ ಡಿಟೇಲ್ಸ್ ಇಲ್ಲಿದೆ.

ಬೆಂಗಳೂರಲ್ಲಿ ಬಲಿಗಾಗಿ ಕಾದಿವೆ ಅಪಾಯಕಾರಿ ಗೋಡೆಗಳು? ಜೋರು ಮಳೆ ಬಂದ್ರೆ ಕುಸಿಯುವುದು ಗ್ಯಾರಂಟಿ

ಬೆಂಗಳೂರಿನಲ್ಲಿ ಇತ್ತೀಚೆಗೆ ಭಾರೀ ಮಳೆಗೆ ಬೋರಿಂಗ್ ಆಸ್ಪತ್ರೆಯ ಗೋಡೆ ಕುಸಿದು ಎಂಟು ಜನರು ಸಾವನ್ನಪ್ಪಿದ್ದರು. ಈ ಬೆನ್ನಲ್ಲೇ ಅಲರ್ಟ್ ಆಗಿದ್ದ ಸರ್ಕಾರ ನಗರದಲ್ಲಿರುವ ಅಪಾಯಕಾರಿ ಗೋಡೆಗಳ ಪತ್ತೆಗೆ ಸೂಚಿಸಿತ್ತು. ಆದರೆ, ಈ ಸಮೀಕ್ಷೆಯೂ ಕಾಟಾಚಾರಕ್ಕೆ ಸೀಮಿತವಾಗಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಏಕೆಂದ್ರೆ ಗೋಡೆಗಳು ಕುಸಿಯುವ ಹಂತದಲ್ಲಿದ್ದರೂ ಅಧಿಕಾರಿಗಳು ಗಮನಹರಿಸುತ್ತಿಲ್ಲ ಎನ್ನಲಾಗುತ್ತಿದೆ.

ಗ್ರೇಟರ್​​ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?

ಬಹು ನಿರೀಕ್ಷಿತ ಗ್ರೇಟರ್​​ ಬೆಂಗಲೂರು ಪ್ರಾಧಿಕಾರದ ಪಾಲಿಕೆಗಳ ಚುನಾವಣೆಗೆ ಕೊನೆಗೂ ಮುಹೂರ್ತ ನಿಗದಿಯಾಗುವ ಲಕ್ಷಣಗಳು ಗೋಚರಿಸಿವೆ. ಈ ಸಂಬಂಧ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಸಂಗ್ರೇಶಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದ್ದು, ಚುನಾವಣೆ ಸಂಬಂಧ ದಿನಾಂಕ ನಿಗದಿ ಮಾತ್ರ ಬಾಕಿ ಉಳಿದಿದೆ. ಉಳಿದೆಲ್ಲಾ ಪ್ರಕ್ರಿಯೆ ಮುಗಿಸಿದ್ದೇವೆ ಎಂದು ಆಯುಕ್ತರು ಸಭೆ ಬಳಿಕ ತಿಳಿಸಿದ್ದಾರೆ. ಜೂನ್ 14 ರಿಂದ ಜೂನ್ 24ರ ಒಳಗಾಗಿ ಚುನಾವಣೆ ನಡೆಯಲಿದೆ ಎನ್ನಲಾಗಿದೆ.

ಬಿಡಿಎಗೆ ಸೇರಿದ 160 ಕೋಟಿ ರೂ. ಮೌಲ್ಯದ ಜಾಗ ಕಬಳಿಕೆ ಯತ್ನ: ಐವರ ವಿರುದ್ಧ ಎಫ್‌ಐಆರ್ ದಾಖಲು

ಬೆಂಗಳೂರಿನ ಕೊತ್ತನೂರಿನಲ್ಲಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ 160 ಕೋಟಿ ರೂ. ಮೌಲ್ಯದ ಜಾಗವನ್ನು ನಕಲಿ ದಾಖಲೆಗಳ ಮೂಲಕ ಕಬಳಿಸಲು ಯತ್ನಿಸಿದ ಆರೋಪದಲ್ಲಿ ಐವರ ವಿರುದ್ಧ ಶೇಷಾದ್ರಿಪುರಂ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಬಿಡಿಎ ಅಧಿಕಾರಿಗಳ ತನಿಖೆಯಿಂದ ಈ ಬೃಹತ್ ಹಗರಣ ಬಯಲಿಗೆ ಬಂದಿದೆ.

ಬೆಂಗಳೂರಿನ ಆಸ್ತಿ ಮಾಲೀಕರಿಗೆ ಬಿಗ್ ರಿಲೀಫ್: ಆಸ್ತಿ ತೆರಿಗೆ ಪಾವತಿಯ ಶೇ 5ರ ರಿಯಾಯಿತಿ ಮೇ 31ರವರೆಗೆ ವಿಸ್ತರಣೆ

ಬೆಂಗಳೂರಿನ ಆಸ್ತಿ ತೆರಿಗೆದಾರರಿಗೆ ಅನುಕೂಲ ಮಾಡಿಕೊಡಲು ರಾಜ್ಯ ಸರ್ಕಾರವು ಶೇ 5ರ ರಿಯಾಯಿತಿಯೊಂದಿಗೆ ತೆರಿಗೆ ಪಾವತಿಸುವ ಅವಧಿಯನ್ನು ಮೇ 31ರವರೆಗೆ ವಿಸ್ತರಿಸಿದೆ. ತೆರಿಗೆ ಪಾವತಿ ಪ್ರಕ್ರಿಯೆಯಲ್ಲಿದ್ದ ಗೊಂದಲ ಮತ್ತು ಸಾರ್ವಜನಿಕರ ಮನವಿ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಇದರಿಂದ ಸುಮಾರು 25 ಲಕ್ಷ ಆಸ್ತಿ ಮಾಲೀಕರಿಗೆ ಪ್ರಯೋಜನವಾಗಲಿದೆ.

ಬೆಂಗಳೂರಿನಲ್ಲಿ ಒಂದೇ ಮಳೆಗೆ ಸಂಕಷ್ಟಗಳ ಪ್ರವಾಹ: ಅಧ್ವಾನಗಳ ಅಸಲಿ ರಹಸ್ಯ ಜಿಬಿಎ ವರದಿಯಲ್ಲಿ ಬಯಲು

ಬೆಂಗಳೂರಿನಲ್ಲಿ ಏಪ್ರಿಲ್ 29 ರಂದು ಸುರಿದ ಮಹಾ ಮಳೆಗೆ ಒಟ್ಟು ಹತ್ತು ಜನರು ಬಲಿಯಾಗಿದ್ದು, ರಾಜಧಾನಿ ಅಕ್ಷರಶಃ ನಲುಗಿ ಹೋಗಿದೆ. ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ, ವಿದ್ಯುತ್ ಸ್ಪರ್ಶ ಮತ್ತು ಮರಗಳು ಉರುಳಿಬಿದ್ದ ಘಟನೆಗಳಿಂದ ನಗರದಾದ್ಯಂತ ಭಾರಿ ಸಾವು-ನೋವು ಸಂಭವಿಸಿದೆ. ಜಿಬಿಎ ವರದಿಯ ಪ್ರಕಾರ, ಕೋಟಿಗಟ್ಟಲೆ ಆಸ್ತಿಪಾಸ್ತಿ ನಷ್ಟವಾಗಿದ್ದು, ನೂರಾರು ಮನೆಗಳು ಜಲಾವೃತವಾಗಿವೆ.

ಬೆಂಗಳೂರು ಮಳೆ ಅಬ್ಬರ: ಅವಾಂತರಗಳ ಬೆನ್ನಲ್ಲೇ ಅಗತ್ಯ ಕ್ರಮಕ್ಕೆ ಮುಂದಾದ ಜಿಬಿಎ

ಜಿಬಿಎ ಬೆಂಗಳೂರಿನಲ್ಲಿ ಮುಂಬರುವ ಮಳೆಯನ್ನು ಎದುರಿಸಲು ವ್ಯಾಪಕ ಸಿದ್ಧತೆಗಳನ್ನು ನಡೆಸಿದೆ. ರಾಜಕಾಲುವೆಗಳ ಡೀಸಿಲ್ಟಿಂಗ್ ಮತ್ತು ಪುನಶ್ಚೇತನ ಕಾರ್ಯಗಳನ್ನು ಯುದ್ಧೋಪಾದಿಯಲ್ಲಿ ಕೈಗೊಳ್ಳಲಾಗುತ್ತಿದೆ. ಇನ್ನು ಜಿಬಿಎ ವ್ಯಾಪ್ತಿಯಲ್ಲಿ ನಿನ್ನೆ ಸಂಜೆ ಸುರಿದ ಗಾಳಿ ಸಮೇತ ಭಾರೀ ಮಳೆಯಿಂದಾದ ಹಾನಿ ಬಗ್ಗೆ ಕೂಡ ವಿವರವನ್ನು ನೀಡಲಾಗಿದೆ.

ಜಿಬಿಎ ಲ್ಯಾಬ್‌ಗೆ ಅಂಟಿದ ಗ್ರಹಣ: ಬೆಂಕಿ ಅವಘಡದ ಬಳಿಕವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು!

ಬೆಂಗಳೂರು ಬಿಬಿಎಂಪಿ (GBA) ಕೇಂದ್ರ ಕಚೇರಿಯ ಬೆಂಕಿ ಅವಘಡದ ನಂತರವೂ ಗುಣನಿಯಂತ್ರಣ ಪ್ರಯೋಗಾಲಯದ ಪುನಶ್ಚೇತನ ಕಾರ್ಯದಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಯಂತ್ರೋಪಕರಣಗಳು ಇಂದಿಗೂ ಧೂಳು ಹಿಡಿಯುತ್ತಿದ್ದು, ಕಾಮಗಾರಿಗಳ ಗುಣಮಟ್ಟದ ಬಗ್ಗೆ ಈಗ ಸಂಶಯ ಮೂಡಿದೆ.

ಬೆಂಗಳೂರಿನ 5 ನಗರ ಪಾಲಿಕೆಗಳ ಪೈಕಿ ಕೆಲವು ವಿಲೀನ? ಆರ್ಥಿಕ ಸಂಕಷ್ಟದಲ್ಲಿ ಗ್ರೇಟರ್ ಬೆಂಗಳೂರು!

ಬೆಂಗಳೂರಿನ ಐದು ನಗರ ಪಾಲಿಕೆಗಳ ಪೈಕಿ ಕೆಲವಲ್ಲಿ ತೀವ್ರ ಆರ್ಥಿಕ ಮುಗ್ಗಟ್ಟು ಕಾಣಿಸಿಕೊಂಡಿದ್ದು, ಸಿಬ್ಬಂದಿ ವೇತನಕ್ಕೂ ಹಣವಿಲ್ಲದ ಸ್ಥಿತಿ ನಿರ್ಮಾಣವಾಗಿದೆ. ಅನುದಾನಕ್ಕೆ ಸರ್ಕಾರವನ್ನೇ ಅವಲಂಬಿಸಬೇಕಾದ ಸ್ಥಿತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ವೆಚ್ಚ ಕಡಿತಗೊಳಿಸಲು ಪಾಲಿಕೆಗಳ ವಿಲೀನ ಅಥವಾ ಸಂಖ್ಯೆ ಇಳಿಕೆ ಮಾಡಲು ಸರ್ಕಾರ ತೆರೆಮರೆಯಲ್ಲಿ ಗಂಭೀರ ಚಿಂತನೆ ನಡೆಸುತ್ತಿದೆ.

ಬಳ್ಳಾರಿ: ಪಾಲಿಕೆ ಸದಸ್ಯೆ ಪತಿಯಿಂದ ಬಡವರಿಗೆ ಮಹಾವಂಚನೆ!
ಬಳ್ಳಾರಿ: ಪಾಲಿಕೆ ಸದಸ್ಯೆ ಪತಿಯಿಂದ ಬಡವರಿಗೆ ಮಹಾವಂಚನೆ!
ಕಾನ್​ ಸಿನಿಮೋತ್ಸವದಲ್ಲಿ ಫ್ಲೈಯಿಂಗ್ ಕಿಸ್ ಕೊಟ್ಟ ಐಶ್ವರ್ಯಾ ರೈ
ಕಾನ್​ ಸಿನಿಮೋತ್ಸವದಲ್ಲಿ ಫ್ಲೈಯಿಂಗ್ ಕಿಸ್ ಕೊಟ್ಟ ಐಶ್ವರ್ಯಾ ರೈ
ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 80ಕ್ಕೂ ಅಧಿಕ ಮಂದಿ ಸಾವು
ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 80ಕ್ಕೂ ಅಧಿಕ ಮಂದಿ ಸಾವು
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ
ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ
ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ
ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ
ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ
ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ
ರಾಯರ ಬಗ್ಗೆ ಆಲ್ಬಂ ಸಾಂಗ್ ಮಾಡಲು ಕಾರಣ ಏನು? ವಿವರಿಸಿದ ಅಜನೀಶ್
ರಾಯರ ಬಗ್ಗೆ ಆಲ್ಬಂ ಸಾಂಗ್ ಮಾಡಲು ಕಾರಣ ಏನು? ವಿವರಿಸಿದ ಅಜನೀಶ್
Video: ಕೋಲ್ಕತ್ತಾಗೆ ಆಗಮಿಸಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರುಬಿಯೋ
Video: ಕೋಲ್ಕತ್ತಾಗೆ ಆಗಮಿಸಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರುಬಿಯೋ