AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

GBA

GBA

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಇದರ ಆಡಳಿತವನ್ನು ಪುನರ್​ ರಚಿಸಿ ಕರ್ನಾಟಕ ಸರ್ಕಾರ 2025ರ ಸೆಪ್ಟೆಂಬರ್ 2 ರಿಂದ ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ಆಡಳಿತ ಜಾರಿಗೊಳಿಸಿದೆ. ಗ್ರೇಟರ್ ಬೆಂಗಳೂರು ಅಥಾರಿಟಿ ಅಡಿ ಐದು ಹೊಸ ಪಾಲಿಕೆಗಳನ್ನು ರಚನೆ ಮಾಡಲಾಗಿದ್ದು, ಬಿಬಿಎಂಪಿಯ ಮುಖ್ಯ ಕಚೇರಿ ಗ್ರೇಟರ್ ಬೆಂಗಳೂರು ಅಥಾರಿಟಿ ಪ್ರಧಾನ ಕಚೇರಿಯಾಗಿ ಬದಲಾಗಿದೆ. ಉಳಿದಂತೆ ಐದು ಭಾಗಗಳಾಗಿ ಗುರುತಿಸಲಾಗಿದ್ದು ಕೇಂದ್ರ, ಬೆಂಗಳೂರು ಪೂರ್ವ, ಬೆಂಗಳೂರು ಪಶ್ಚಿಮ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ನಗರಗಳಾಗಿ ವಿಭಜಿಸಲಾಗಿದೆ. ಐಎಎಸ್, ಐಪಿಎಸ್ ಹುದ್ದೆಗಳನ್ನು ಗ್ರೇಟರ್ ಬೆಂಗಳೂರು ಅಥಾರಿಟಿಯ ಸ್ವರೂಪಕ್ಕೆ ತಕ್ಕಂತೆ ಹಂಚಿಕೆ ಮಾಡಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ರಚನೆ ಮಾಡಲಾಗಿದ್ದು ಇದಕ್ಕೆ ಮುಖ್ಯಮಂತ್ರಿಗಳು ಅಧ್ಯಕ್ಷರಾಗಿ, ಬೆಂಗಳೂರು ನಗರಾಭಿವೃದ್ಧಿ ಸಚಿವರು ಉಪಾಧ್ಯಕ್ಷರಾಗಿರುತ್ತಾರೆ. ಕೇಂದ್ರ ಹಣಕಾಸು ಸಚಿವರು ಸೇರಿ 73 ಮಂದಿಯನ್ನು ಪದನಿಮಿತ್ತ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಜಿಬಿಎ ಸದಸ್ಯರಾಗಿ ಬೆಂಗಳೂರಿನ ಮೂವರು ಸಂಸದರು, ಬೆಂಗಳೂರು ವ್ಯಾಪ್ತಿಯ ಶಾಸಕರನ್ನು ನೇಮಿಸಲಾಗಿದೆ.

ಇನ್ನೂ ಹೆಚ್ಚು ಓದಿ

ಪ್ರಧಾನಿ ಮೋದಿ ಮೆಚ್ಚಿದ ಬೆಂಗಳೂರಿನ ನಿಂಗಮ್ಮನಿಗೆ ಒತ್ತುವರಿ ತೆರವು ಭಯ!

ಬೆಂಗಳೂರಿನಲ್ಲಿ ಫುಟ್​​​ಪಾತ್ ಒತ್ತುವರಿ ತೆರವು ಕಾರ್ಯಚರಣೆ ನಡೆಸಲಾಗುತ್ತಿದ್ದು, ಇದೀಗ ನಿಂಗಮ್ಮನಿಗೆ ಆತಂಕ ಶುರುವಾಗಿದೆ. ಜಿಬಿಎ ಅಧಿಕಾರಿಗಳು ಹೋಟೆಲ್ ತೆರವು ಮಾಡಿ ಎನ್ನುತ್ತಿದ್ದಾರೆ. ಇದರಿಂದ ಮೋದಿ ಮೆಚ್ಚಿದ ನಿಂಗಮ್ಮನಿಗೆ ಒತ್ತುವರಿ ತೆರವು ಭಯ ಶುರುವಾಗಿದೆ. ಯಾಕಂದ್ರೆ, ಕೇಂದ್ರದ ಯೋಜನೆಯ ಹಣ ಸಹಾಯದಿಂದ ಸ್ವಾವಲಂಬಿಯಾಗಿ ಪುಟ್ಟ ಹೋಟೆಲ್ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದಾರೆ. ಆದ್ರೆ, ಇದೀಗ ತೆರವು ಮಾಡಿದರೆ ಮುಂದಿನ ಜೀವನ ಹೇಗೆ ಎನ್ನುವ ಅಳಲು ನಿಂಗಮ್ಮನವರದ್ದಾಗಿದೆ.

ಬೀದಿ ದೀಪ ಲೋಪ: ಸಚಿವರ ಸೂಚನೆಗೂ ಡೋಂಟ್ ಕೇರ್; ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾದ ಕೃಷ್ಣಬೈರೇಗೌಡ

ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ವಿದ್ಯುತ್​ ಬೀದಿ ದೀಪಗಳು ಕಾರ್ಯನಿರ್ವಹಿಸದಿರುವುದು ಕಂಡುಬಂದಿದೆ. ಸಚಿವರು ಸೂಚನೆ ನೀಡಿದರೂ ಡೋಂಟ್ ಕೇರ್ ಎನ್ನಲಾಗಿದೆ. ಹೀಗಾಗಿ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ನಗರಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಮುಂದಾಗಿದ್ದಾರೆ. ಕಠಿಣ ಶಿಸ್ತು ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಬಿಎ ಆಡಳಿತಕ್ಕೆ ಚುರುಕು ಮುಟ್ಟಿಸಲು ಮುಂದಾದ ಸಚಿವ ಕೃಷ್ಣಬೈರೇಗೌಡ: ಮತ್ತೊಂದು ಪ್ಲ್ಯಾನ್​ ರೆಡಿ!

ಸಚಿವ ಕೃಷ್ಣ ಬೈರೇಗೌಡರು ಬೆಂಗಳೂರಿನ ನಗರಾಭಿವೃದ್ಧಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ಮೂರು ತಿಂಗಳಲ್ಲಿ ಬೃಹತ್ ಬೆಂಗಳೂರು ಪ್ರಾಧಿಕಾರ ಆಡಳಿತಕ್ಕೆ ಚುರುಕು ನೀಡಿದ್ದಾರೆ. ಪಾದಚಾರಿ ಮಾರ್ಗಗಳ ಒತ್ತುವರಿ ತೆರವು, ಕಸ ನಿರ್ವಹಣೆ, ರಸ್ತೆಗಳ ಡಾಂಬರೀಕರಣಕ್ಕೆ ಒತ್ತು ನೀಡಿದ್ದು, ಅಧಿಕಾರಿಗಳಿಗೆ ಕೆಲಸ ಮಾಡಿ, ಇಲ್ಲವೇ ನಿರ್ಗಮಿಸಿ ಎಂಬ ಸಂದೇಶ ರವಾನಿಸಿದ್ದಾರೆ. ಇದು ಸಾರ್ವಜನಿಕರಲ್ಲಿ ಹೊಸ ಭರವಸೆ ಮೂಡಿಸಿದೆ.

ಬೆಂಗಳೂರಿನ ಪ್ರತಿಷ್ಠಿತ ಮಾಲ್​​​​ ಮೇಲೆ ಜಿಬಿಎ ಅಧಿಕಾರಿಗಳು ದಾಳಿ: ಕಸದ ರಾಶಿ ಪತ್ತೆ; 85 ಸಾವಿರ ದಂಡ

ಬೆಂಗಳೂರಿನ ಕೋರಮಂಗಲದ ನೆಕ್ಸಸ್ ಮಾಲ್‌ನ ಫುಡ್ ಕೋರ್ಟ್ ಮೇಲೆ ಜಿಬಿಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಘನತ್ಯಾಜ್ಯ ನಿಯಮಗಳನ್ನು ಉಲ್ಲಂಘಿಸಿ, ತ್ಯಾಜ್ಯವನ್ನು ಸರಿಯಾಗಿ ವಿಂಗಡಿಸದೆ ಇರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಮಾಲ್‌ನ 10 ಮಳಿಗೆಗಳಿಗೆ ಒಟ್ಟು ₹85,000 ದಂಡ ವಿಧಿಸಲಾಗಿದೆ. ವಿಡಿಯೋ ನೋಡಿ.

  • Shivaraj
  • Updated on: Aug 28, 2026
  • 4:42 pm

ಬೆಂಗಳೂರಿನ ರಸ್ತೆ ಗುಂಡಿಗೆ ಹೊಸ ಉಪಾಯ: 6 ತಿಂಗಳಲ್ಲಿ ದೊಡ್ಡ ಮಟ್ಟದಲ್ಲಿ ರಸ್ತೆಗಳ ಅಭಿವೃದ್ಧಿ ಎಂದ ಕೃಷ್ಣಬೈರೇಗೌಡ

ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಇಂದು ಹೈವೋಲ್ಟೇಜ್ ಜಿಬಿಎ ಪ್ರಗತಿ ಪರಿಶೀಲನಾ ಸಭೆ ಮಾಡಿದ್ದಾರೆ. ಅಧಿಕಾರಿಗಳ ಜೊತೆಗಿನ ಸುದೀರ್ಘ ಚರ್ಚೆ ಬಳಿಕ ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿ ಕುರಿತಾಗಿ ಮಹತ್ವದ ಯೋಜನೆಗಳನ್ನು ಪ್ರಕಟಿಸಿದರು. ಅದರಲ್ಲಿ ಪ್ರಮುಖವಾಗಿ ಆರು ತಿಂಗಳಲ್ಲಿ ದೊಡ್ಡ ಮಟ್ಟದಲ್ಲಿ ರಸ್ತೆಗಳ ಅಭಿವೃದ್ಧಿ ಮಾಡಲಾಗುವುದು ಎಂದಿದ್ದಾರೆ.

ಪರ-ವಿರೋಧ ನಡುವೆ ಬೆಂಗಳೂರಿನಲ್ಲಿ ಫುಟ್‌ಪಾತ್ ಒತ್ತುವರಿ ತೆರವು ಮುಂದುವರಿಕೆ: ಈವರೆಗೆ ಎಷ್ಟು ಕ್ಲಿಯರ್?

ಕೃಷ್ಣಬೈರೇಗೌಡ ಅವರು ಬೆಂಗಳೂರು ನಗರಾಭಿವೃದ್ಧಿ ಸಚಿವರಾಗುತ್ತಿದ್ದಂತೆಯೇ ಮೊದಲಿಗೆ ಅಕ್ರಮ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಕ್ಕೆ ಕೈಹಾಕಿದರು. ಸಾರ್ವಜನಿಕರ ಸುಗಮ ಓಡಾಟಕ್ಕೆ ಪಾದಚಾರಿ ಮಾರ್ಗಗಳನ್ನು ಮುಕ್ತಗೊಳಿಸುವ ಗುರಿಯೊಂದಿಗೆ ಆರಂಭವಾದ ಈ ಕಾರ್ಯಾಚರಣೆಗೆ ಪರ-ವಿರೋಧಗಳು ವ್ಯಕ್ತವಾಗಿದ್ದು, ಬೀದಿಬದಿ ವ್ಯಾಪಾರಿಗಳು ತೀವ್ರ ಆಕ್ರೋಶಗೊಂಡಿದ್ದಾರೆ. ಆದರೆ, ಈ ಎಲ್ಲಾ ವಿರೋಧಗಳ ನಡುವೆಯೂ ಕೃಷ್ಣಬೈರೇಗೌಡ ಅವರು ಹಲವೆಡೆ ಫುಟ್‌ಪಾತ್ ತೆರವು ಕಾರ್ಯಾಚರಣೆ ನಡೆಸಿ ಕೊಂಚ ಯಶಸ್ಸು ಕಂಡಿದ್ದಾರೆ.

ಖುದ್ದು ಖಾಲಿ ನಿವೇಶನದ ಗಿಡಗಂಟೆ ಸ್ವಚ್ಛಗೊಳಿಸಿದ ಸಚಿವ ಕೃಷ್ಣಭೈರೇಗೌಡ: ಖಾಲಿ ಸೈಟ್ ಸ್ವಚ್ಛಗೊಳಿಸುವ ಗಡುವು ಇಂದಿಗೆ ಮುಕ್ತಾಯ

ಬೆಂಗಳೂರಿನ ಖಾಲಿ ನಿವೇಶನಗಳಲ್ಲಿ ಬೆಳೆದಿರುವ ಗಿಡಗಂಟೆ ಹಾಗೂ ತ್ಯಾಜ್ಯ ತೆರವುಗೊಳಿಸಲು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಜಿಬಿಎ) ಸ್ವಚ್ಛತಾ ಅಭಿಯಾನ ಆರಂಭಿಸಿದೆ. ದೊಮ್ಮಲೂರು ಲೇಔಟ್‌ನಲ್ಲಿ ಸಚಿವ ಕೃಷ್ಣಭೈರೇಗೌಡ ಅವರ ನೇತೃತ್ವದಲ್ಲಿ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು, ಮಾಲೀಕರು ಸ್ವಚ್ಛಗೊಳಿಸದ ನಿವೇಶನಗಳನ್ನು ಜಿಬಿಎ ಸಿಬ್ಬಂದಿಯೇ ಸ್ವಚ್ಛಗೊಳಿಸಿ ವೆಚ್ಚವನ್ನು ಮಾಲೀಕರಿಂದಲೇ ವಸೂಲಿ ಮಾಡಲಿದೆ.

B Khata to A Khata Conversion: ಬಿ ಖಾತೆ ಟು ಎ ಖಾತೆ ಗಡುವು ಅಂತ್ಯ: ಲಕ್ಷಾಂತರ ಆಸ್ತಿ ಮಾಲೀಕರು ‘ಎ-ಖಾತೆ’ ಭಾಗ್ಯದಿಂದ ವಂಚಿತ!

ಬೆಂಗಳೂರಿನಲ್ಲಿ ಬಿ-ಖಾತೆಯಿಂದ ಎ-ಖಾತೆಗೆ ಪರಿವರ್ತಿಸಲು ನೀಡಿದ್ದ ಗಡುವು ಮುಕ್ತಾಯಗೊಂಡಿದೆ. ಜಿಬಿಎ ವೆಬ್‌ಸೈಟ್‌ ಸರ್ವರ್ ಸಮಸ್ಯೆ ಹಾಗೂ ಅಧಿಕಾರಿಗಳ ವಿಳಂಬ ನೀತಿಯಿಂದ 7.50 ಲಕ್ಷ ಆಸ್ತಿಗಳ ಪೈಕಿ ಕೇವಲ 20,000 ಮನೆಗಳಿಗೆ ಮಾತ್ರ ಎ-ಖಾತೆ ಲಭಿಸಿದೆ. ಇನ್ನು ಮುಂದೆ ಎ-ಖಾತೆ ಪಡೆಯಲು ಪೂರ್ಣ ಶುಲ್ಕ ಪಾವತಿಸಬೇಕಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿ ಗಡುವು ವಿಸ್ತರಣೆಗೆ ಆಗ್ರಹಿಸಿದ್ದಾರೆ.

SIR: ಬೆಂಗಳೂರಿನ ಅರ್ಧದಷ್ಟು ಮತದಾರರು ASDDO ಪಟ್ಟಿಗೆ; 24 ಲಕ್ಷದಷ್ಟು ಮತದಾರರಿಗೆ ನೋಟಿಸ್​

Bengaluru voter list: ಬೆಂಗಳೂರಿನ ಮತದಾರರ ಪಟ್ಟಿಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಿಂದ ಭಾರೀ ಬದಲಾವಣೆಗಳಾಗಿವೆ. 48% ಮತದಾರರು ASDDO ಪಟ್ಟಿಗೆ ಸೇರಿದ್ದು, 24 ಲಕ್ಷಕ್ಕೂ ಹೆಚ್ಚು ಮತದಾರರಿಗೆ ನೋಟಿಸ್ ನೀಡಲಾಗುತ್ತಿದೆ. ಬೊಮ್ಮನಹಳ್ಳಿ ಸೇರಿ ಐದು ಕ್ಷೇತ್ರಗಳಲ್ಲಿ ಶೇ. 50ಕ್ಕೂ ಹೆಚ್ಚು ಮತದಾರರು ಡೇಂಜರ್ ಝೋನ್‌ನಲ್ಲಿದ್ದಾರೆ.

ಮನೆ ಮುಂದೆ ನಿಲ್ಲಿಸುವ ವಾಹನಗಳಿಗೂ ಪಾರ್ಕಿಂಗ್​​ ಶುಲ್ಕ ವಿವಾದ: ಸಿಎಂಗೆ ಪತ್ರ ಬರೆದ ಸಚಿವ ರಾಮಲಿಂಗಾರೆಡ್ಡಿ

ಮನೆ ಮುಂದೆ ನಿಲ್ಲಿಸುವ ವಾಹನಗಳಿಗೂ ಪಾರ್ಕಿಂಗ್ ಶುಲ್ಕ ವಿಧಿಸುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಹೊಸ ನಿಯಮಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಈ ನಿಯಮ ಹಿಂಪಡೆಯುವಂತೆ ಸಚಿವ ರಾಮಲಿಂಗಾರೆಡ್ಡಿ ಅವರು ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ಬೆಂಗಳೂರಿನ ಶಾಸಕರು ಮತ್ತು ಅಧಿಕಾರಿಗಳ ಜೊತೆಗೆ ಸಭೆ ನಡೆಸಿ ಮುಂದಿನ ತೀರ್ಮಾನ ‌ಮಾಡುವಂತೆಯೂ ಮನವಿ ಮಾಡಿದ್ದಾರೆ.

ಕಾಮಗಾರಿಗಾಗಿ ವರ್ಕ್ ಫ್ರಮ್ ಹೋಮ್ ಸಾಧ್ಯವಿಲ್ಲ: ಜಿಬಿಎ ಮನವಿಗೆ ನೋ ಎಂದ ಐಟಿ ಕಂಪನಿಗಳು

ಬೆಂಗಳೂರು ಹೊರ ವರ್ತುಲ ರಸ್ತೆ ವೈಟ್‌ಟಾಪಿಂಗ್ ಕಾಮಗಾರಿಗಾಗಿ GBA 50% ವರ್ಕ್ ಫ್ರಮ್ ಹೋಮ್​​ಗೆ ಮನವಿ ಮಾಡಿತ್ತು. ಆದರೆ, ಐಟಿ ಕಂಪನಿಗಳ ಅಸೋಸಿಯೇಷನ್ ಇದನ್ನು ತಿರಸ್ಕರಿಸಿದೆ. GBA ಯೋಜನೆಗಳನ್ನು ಸಮಯಕ್ಕೆ ಪೂರ್ಣಗೊಳಿಸುವುದಿಲ್ಲ ಎಂಬ ಭೀತಿ, ಹಾಗೂ ವರ್ಕ್ ಫ್ರಮ್ ಹೋಮ್​ನಿಂದ ಕೆಲಸದ ವೇಗ ತಗ್ಗುವ ಆತಂಕ ಇದಕ್ಕೆ ಕಾರಣ ಎನ್ನಲಾಗುತ್ತಿದೆ.

ಬಿಡದಿ ಟೌನ್​ಶಿಪ್​ ವಿಚಾರದಲ್ಲಿ ಸರ್ಕಾರ ಮಹತ್ವದ ಹೆಜ್ಜೆ: ಸಮಿತಿ ರಚನೆ

Greater Bengaluru Suburban Project: ಗ್ರೇಟರ್ ಬೆಂಗಳೂರು ಉಪನಗರ ಯೋಜನೆ ಕುರಿತು ಸರ್ಕಾರವು ನಿವೃತ್ತ ಮುಖ್ಯ ನ್ಯಾಯಮೂರ್ತಿ ನರೇಂದ್ರ ಅಧ್ಯಕ್ಷತೆಯಲ್ಲಿ ನಾಲ್ವರು ಸದಸ್ಯರ ಸಮಿತಿ ರಚಿಸಿದೆ. 18,133 ಕೋಟಿ ರೂ ಅಂದಾಜು ವೆಚ್ಚದ ಈ ಯೋಜನೆಯನ್ನು ಎಲ್ಲಾ ಆಯಾಮಗಳಲ್ಲಿ ಸಮಿತಿ ಪರಿಶೀಲಿಸಲಿದೆ. ಸಾರ್ವಜನಿಕರ ಆಕ್ಷೇಪಗಳನ್ನು ಸಹ ಪರಿಗಣಿಸಿ 30 ದಿನಗಳಲ್ಲಿ ಸಮಗ್ರ ವರದಿ ಸಲ್ಲಿಸಲು ಸೂಚಿಸಲಾಗಿದೆ.