AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

GST

GST

ಜಿಎಸ್​ಟಿ ಎಂದರೆ ಗೂಡ್ಸ್ ಅಂಡ್ ಸರ್ವಿಸಸ್ ಟ್ಯಾಕ್ಸ್. ಅಂದರೆ ಸರಕು ಮತ್ತು ಸೇವಾ ತೆರಿಗೆ. ಪರೋಕ್ಷ ತೆರಿಗೆ ವಿಧಾನಕ್ಕೆ (Indirect tax system) ಇದು ಸೇರುತ್ತದೆ. ಭಾರತದಲ್ಲಿ ಹಿಂದೆ ಅಸ್ತಿತ್ವದಲ್ಲಿದ್ದ ವಿವಿಧ ರೀತಿಯ ತೆರಿಗೆಗಳ ಬದಲು ಏಕ ರೀತಿಯ ಸರಳ ತೆರಿಗೆ ತೆರಿಗೆ ಪದ್ಧತಿಯಾಗಿದೆ ಜಿಎಸ್​ಟಿ. ವಿಶ್ವಾದ್ಯಂತ ಭಾರತವೂ ಸೇರಿದಂತೆ 170ಕ್ಕೂ ಹೆಚ್ಚು ದೇಶಗಳು ಜಿಎಸ್​ಟಿ ಟ್ಯಾಕ್ಸ್ ಸಿಸ್ಟಂ ಹೊಂದಿವೆ. ಭಾರತದಲ್ಲಿ ವಿವಿಧ ರೀತಿಯ ತೆರಿಗೆಗಳು ಸೇರಿ ಸಂಕೀರ್ಣತೆ ಸೃಷ್ಟಿಯಾಗಿತ್ತು. ಇದರಿಂದ ಸುಧಾರಣೆಗಳಿಗೆ ಮತ್ತು ಆರ್ಥಿಕ ಪ್ರಗತಿಗೆ ತುಸು ಹಿನ್ನಡೆಯಾಗುತ್ತಿತ್ತು. ಈ ತೆರಿಗೆ ಸಂಕೀರ್ಣತೆಯನ್ನು ನೀಗಿಸಿ ಸರಳಗೊಳಿಸುವ ನಿಟ್ಟಿನಲ್ಲಿ 2000ರಲ್ಲಿ ಜಿಎಸ್​ಟಿ ಬಗ್ಗೆ ಮೂಲ ಆಲೋಚನೆ ಶುರುವಾಯಿತು. ಕೇಳ್ಕರ್ ಟ್ಯಾಸ್ಕ್ ಫೋರ್ಸ್ ಒಂದು ಸಮಗ್ರ ಪರೋಕ್ಷ ತೆರಿಗೆ ವ್ಯವಸ್ಥೆಗೆ ಶಿಫಾರಸು ಮಾಡಿತು. ಹಲವು ವರ್ಷಗಳ ಬಳಿಕ 2017ರ ಜುಲೈ 1ರಂದು ಜಿಎಸ್​ಟಿ ಜಾರಿಗೆ ತರಲಾಯಿತು. ಭಾರತದಲ್ಲಿ ಸದ್ಯ ಐದು ಸ್ಲ್ಯಾಬ್ ಜಿಎಸ್​ಟಿ ತೆರಿಗೆಗಳಿವೆ. 0%, 5%, 12%, 18% ಮತ್ತು 28%. ಇದರಲ್ಲಿ ಬಹಳ ಅಗತ್ಯವಾದ ಸರಕು ಮತ್ತು ಸೇವೆಗಳಿಗೆ ಕಡಿಮೆ ಜಿಎಸ್​ಟಿ ಇರುತ್ತದೆ. ಮಾರಾಟವಾಗುವ ಹೆಚ್ಚಿನ ಸರಕು ಮತ್ತು ಸೇವೆಗಳು 12% ಮತ್ತು 18% ಸ್ಲ್ಯಾಬ್​ಗಳಿಗೆ ಸೇರುತ್ತವೆ

ಇನ್ನೂ ಹೆಚ್ಚು ಓದಿ

ಟ್ಯಾಕ್ಸ್ ಪಾಲು ಕರ್ನಾಟಕಕ್ಕೆ ಅತಿಹೆಚ್ಚು ಏರಿಕೆ ಆಗಿದ್ದು ಯಾಕೆ? ಇಲ್ಲಿದೆ ಕಾರಣ, ಮತ್ತು ವಿವಿಧ ರಾಜ್ಯಗಳ ತೆರಿಗೆ ಪಟ್ಟಿ

Tax devolution formula of 16th Finance Commission: 15ನೇ ಹಣಕಾಸು ಆಯೋಗದಲ್ಲಿ ಶೇ. 3.647 ತೆರಿಗೆ ಪಾಲು ಪಡೆದಿದ್ದ ಕರ್ನಾಟಕ್ಕೆ 16ನೇ ಹಣಕಾಸು ಆಯೋಗ ಶೇ. 4.13 ಪಾಲು ಕೊಟ್ಟಿದೆ. ಅತಿಹೆಚ್ಚು ಟ್ಯಾಕ್ಸ್ ಪಾಲು ಪಡೆಯುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ 13ನೇ ಸ್ಥಾನದಿಂದ 9ನೇ ಸ್ಥಾನಕ್ಕೆ ಏರಿದೆ. 16ನೇ ಹಣಕಾಸು ಆಯೋಗದ ಟ್ಯಾಕ್ಸ್ ಡೆವಲ್ಯೂಶನ್ ಫಾರ್ಮುಲಾ 15ನೇ ಆಯೋಗದಕ್ಕಿಂತ ಹೇಗೆ ಭಿನ್ನ ಎಂಬುದು ಸೇರಿದಂತೆ ವಿವಿಧ ಮಾಹಿತಿ ಇಲ್ಲಿದೆ.

ಜನವರಿಯಲ್ಲಿ 1.93 ಲಕ್ಷ ಕೋಟಿ ರೂ ಜಿಎಸ್​ಟಿ ಸಂಗ್ರಹ; ಈ ವರ್ಷ 18 ಲಕ್ಷ ಕೋಟಿ ರೂ ಟ್ಯಾಕ್ಸ್ ಕಲೆಕ್ಷನ್

GST collections rises by 6.2pc to Rs 1,93,384 in 2026 January: ಜನವರಿಯಲ್ಲಿ 1.93 ಲಕ್ಷ ಕೋಟಿ ರೂನಷ್ಟು ಜಿಎಸ್​ಟಿ ಸಂಗ್ರಹ ಆಗಿದೆ. ರೀಫಂಡ್ ಕಳೆದು ಉಳಿಯುವ ನಿವ್ವಳ ಜಿಎಸ್​ಟಿ ಸಂಗ್ರಹ 1.70 ಲಕ್ಷ ಕೋಟಿ ರೂ ಇದೆ. ಒಟ್ಟೂ ಜಿಎಸ್​ಟಿಯಲ್ಲಿ ಶೇ. 6.2 ಏರಿಕೆ ಆಗಿದ್ದರೆ, ನಿವ್ವಳ ಜಿಎಸ್​ಟಿ ಸಂಗ್ರಹದಲ್ಲಿ ಶೇ 7.6ರಷ್ಟು ಹೆಚ್ಚಳವಾಗಿದೆ. ರೀಫಂಡ್ ಪ್ರಮಾಣ ಕಡಿಮೆ ಆದ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಹೆಚ್ಚು ತೆರಿಗೆ ಉಳಿತಾಯವಾಗಿದೆ.

ರಾಜ್ಯಗಳಿಗೆ ಶೇ. 41 ತೆರಿಗೆ ಹಂಚಿಕೆ ಸೂತ್ರ; 16ನೇ ಹಣಕಾಸು ಆಯೋಗದ ಶಿಫಾರಸು ಒಪ್ಪಿದ ಕೇಂದ್ರ

Accepted 41pc tax devolution to states, says Nirmala Sitharaman in her budget speech: 16ನೇ ಹಣಕಾಸು ಆಯೋಗ ಶಿಫಾರಸು ಮಾಡಿದಂತೆ ರಾಜ್ಯಗಳಿಗೆ ಶೇ. 41 ಟ್ಯಾಕ್ಸ್ ಹಂಚಿಕೆ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಆಯೋಗದ ಶಿಫಾರಸಿನಂತೆ ರಾಜ್ಯಗಳಿಗೆ 2026-27ರ ವರ್ಷಕ್ಕೆ 1.4 ಲಕ್ಷ ಕೋಟಿ ರೂ ಕೊಡುತ್ತಿರುವುದಾಗಿ ತಿಳಿಸಿದ್ದಾರೆ. ಜಿಎಸ್​ಟಿ, ಕಾರ್ಪೊರೇಶನ್ ಟ್ಯಾಕ್ಸ್, ಇನ್ಕಮ್ ಟ್ಯಾಕ್ಸ್ ಇತ್ಯಾದಿಗಳಿಂದ ಬರುವ ತೆರಿಗೆ ಆದಾಯವನ್ನು ಕೇಂದ್ರವು ರಾಜ್ಯಗಳೊಂದಿಗೆ ಹಂಚಿಕೊಳ್ಳುತ್ತದೆ.

ಕೇಂದ್ರ ಬಜೆಟ್ 2026: ಬಜೆಟ್​ನಲ್ಲಿ ಜಿಎಸ್​ಟಿ ದರ ಇಳಿಕೆಗೆ ಕ್ರಮ: ಎಂಎಸ್​ಎಂಇಗಳಿಂದ ನಿರೀಕ್ಷೆ

Union Budget 2026, Income Tax Expectations: ಸರಕು ಮತ್ತು ಸೇವಾ ತೆರಿಗೆ ದರಗಳನ್ನು ಮತ್ತಷ್ಟು ಇಳಿಸಬೇಕು ಎನ್ನುವ ಅಭಿಪ್ರಾಯ ಕೇಳಿಬರುತ್ತಿದೆ. ಬಜೆಟ್​ನಲ್ಲಿ ಸರ್ಕಾರವು ಅಗತ್ಯ ವಸ್ತುಗಳ ಮೇಲಿನ ಜಿಎಸ್​ಟಿ ದರಗಳನ್ನು ತೆಗೆದುಹಾಕಬೇಕು ಅಥವಾ ಕಡಿಮೆ ಮಾಡಬೇಕು ಎಂದು ಸಣ್ಣ ವ್ಯಾಪಾರಿಗಳು ಹೇಳುತ್ತಿದ್ದಾರೆ. ಅಧಿಕ ತೆರಿಗೆಯಿಂದಾಗಿ ಗ್ರಾಹಕರ ಮೇಲೆ ಹೊರೆಯಾಗುತ್ತಿದೆ. ತಮ್ಮ ವ್ಯಾಪಾರವೂ ಕುಂಠಿತವಾಗುತ್ತಿದೆ ಎಂಬುದು ಇವರ ಅಳಲು.

ಬಿಲ್​ನಲ್ಲಿ ನಕಲಿ ಜಿಎಸ್​ಟಿ ನಂಬರ್ ಕೊಟ್ಟು ಸರ್ಕಾರಕ್ಕೂ, ಗ್ರಾಹಕರಿಗೂ ಯಾಮಾರಿಸುತ್ತಾರೆ; ಅಸಲಿ ಪತ್ತೆ ಹಚ್ಚೋದು ಹೇಗೆ?

Know how to check authenticity of GST number: ಬಿಲ್​ನಲ್ಲಿ ಜಿಎಸ್​ಟಿ ಹೆಸರಿನಲ್ಲಿ ಹೆಚ್ಚುವರಿ ಹಣ ಪಡೆಯಲಾಗುತ್ತದೆ. ಆದರೆ, ಅಸಲಿಗೆ ಜಿಎಸ್​ಟಿ ನೊಂದಾವಣಿಯೇ ಆಗಿರುವುದಿಲ್ಲ. ಇಂಥ ಹಲವು ಬ್ಯುಸಿನೆಸ್​ಗಳು ಕಾಣದ ಕಣ್ಮರೆಯಲ್ಲಿ ವ್ಯಾಪಾರ ಮಾಡುತ್ತಿರುತ್ತವೆ. ಗ್ರಾಹಕ ಮತ್ತು ಸರ್ಕಾರ ಇಬ್ಬರಿಗೂ ಆಗುತ್ತಿರುವ ವಂಚನೆ ಇದು. ಒಂದು ಬ್ಯುಸಿನೆಸ್​ನ ಜಿಎಸ್​ಟಿ ನಂಬರ್ ಅಸಲಿಯಾ ಅಥವಾ ನಕಲಿಯಾ ಎಂದು ಪತ್ತೆ ಮಾಡುವುದು ಹೇಗೆ, ದೂರು ಕೊಡುವುದು ಹೇಗೆ ಎನ್ನುವ ವಿವರ ಇಲ್ಲಿದೆ.

Year of Reforms: 2025ರಲ್ಲಿ ಸರ್ಕಾರ ತೆಗೆದುಕೊಂಡ ಪ್ರಮುಖ ಸುಧಾರಣೆಗಳಿವು…

2025, Year of Reforms: 2025ನ್ನು ಒಮ್ಮೆ ತಿರುಗಿ ನೋಡಿದರೆ ಸಾಕು, ಸುಧಾರಣೆಗಳ ಪರ್ವವೇ ಕಣ್ಣಮುಂದೆ ಬರುತ್ತದೆ. ದೇಶದ ಆರ್ಥಿಕತೆ, ಆಡಳಿತ ಹಾಗೂ ಸಾಮಾಜಿಕ ಭದ್ರತೆ ಬಲಪಡಿಸುವ ಉದ್ದೇಶದಿಂದ ದೊಡ್ಡ ಬದಲಾವಣೆಗಳನ್ನು ಕಂಡ ವರ್ಷ. ಪ್ರಧಾನಿ ನರೇಂದ್ರ ಮೋದಿ ಅವರ ದೃಷ್ಟಿಕೋನ, ಅಭಿವೃದ್ಧಿಗಾಗಿ ಇರುವ ತುಡಿತದಿಂದ ದೇಶದಲ್ಲಿ ಸಾಕಷ್ಟು ಬದಲಾವಣೆಗಳು ಆದವು.

ಮೋದಿ 2025ರ ಸುಧಾರಣೆಗಳು: GST, ಉದ್ಯೋಗ, ಶಿಕ್ಷಣ ಕ್ಷೇತ್ರದ ಪ್ರಮುಖ ಬದಲಾವಣೆಗಳು

India's 2025 Reforms: ಪ್ರಧಾನಿ ಮೋದಿ 2025ರಲ್ಲಿ ಭಾರತದಲ್ಲಿ ಜಾರಿಗೆ ತಂದ ವ್ಯಾಪಕ ಸುಧಾರಣೆಗಳನ್ನು ಲಿಂಕ್ಡ್‌ಇನ್‌ನಲ್ಲಿ ವಿವರಿಸಿದ್ದಾರೆ. GST ಸರಳೀಕರಣ, ಆದಾಯ ತೆರಿಗೆ ಇಳಿಕೆ, ಸಣ್ಣ ಉದ್ದಿಮೆಗಳಿಗೆ ನೆರವು, ಸಮುದ್ರ ಆರ್ಥಿಕತೆ, ಸುಲಭ ವ್ಯಾಪಾರ ವಾತಾವರಣ, ಗ್ರಾಮೀಣ ಉದ್ಯೋಗ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ಘೋಷಿಸಲಾಗಿದೆ. ಭಾರತವು ಸುಧಾರಣಾ ಎಕ್ಸ್‌ಪ್ರೆಸ್ ಹತ್ತಿದ್ದು, ಪ್ರಗತಿಯತ್ತ ಸಾಗುತ್ತಿದೆ.

ಬದಲಾಗುತ್ತಿದೆ ಭಾರತ; 2025ರಲ್ಲಿ ಮಹಾಪರಿವರ್ತನೆ; ಜಿಎಸ್​ಟಿಯಿಂದ ಹಿಡಿದು ಜಿ ರಾಮ್ ಜಿವರೆಗೆ ಹಲವು ಆರ್ಥಿಕ ಸುಧಾರಣೆಗಳು

India's 2025 Economic Reforms: 2025ರಲ್ಲಿ ಭಾರತದಲ್ಲಿ ಮೋದಿ ಸರ್ಕಾರ ಹಲವು ಮಹತ್ವದ ಆರ್ಥಿಕ ಸುಧಾರಣೆಗಳನ್ನು ಜಾರಿಗೆ ತಂದಿದೆ. ಜಿಎಸ್‌ಟಿ 2.0 ಮೂಲಕ ತೆರಿಗೆ ಸ್ಲ್ಯಾಬ್‌ಗಳ ಕಡಿತ, 12 ಲಕ್ಷ ರೂ. ಆದಾಯ ತೆರಿಗೆ ವಿನಾಯಿತಿ, ಆಧುನಿಕ ಕಾರ್ಮಿಕ ಕಾನೂನುಗಳು, ಮತ್ತು ಪರಮಾಣು-ವಿಮಾ ವಲಯಗಳಲ್ಲಿ ಖಾಸಗಿ/ವಿದೇಶಿ ಹೂಡಿಕೆಗೆ ಅವಕಾಶ ನೀಡಲಾಗಿದೆ. ಈ ಸುಧಾರಣೆಗಳು ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸಿ, ನಿಯಮಗಳನ್ನು ಸರಳೀಕರಿಸಿ, ನಾಗರಿಕರ ಆರ್ಥಿಕ ಸ್ಥಿತಿಯನ್ನು ಸುಧಾರಿಸುವ ಗುರಿ ಹೊಂದಿವೆ.

ಕೇಂದ್ರೀಯ ಅಬಕಾರಿ ತಿದ್ದುಪಡಿ ಮಸೂದೆಗೆ ಸಂಸತ್ ಅಸ್ತು; ರಾಜ್ಯಗಳಿಗೂ ಲಾಭ ಹಂಚಿಕೆ ಎಂದ ನಿರ್ಮಲಾ ಸೀತಾರಾಮನ್

Parliament approves Central Excise Amendment Bill: ಅಬಕಾರಿ ತಿದ್ದುಪಡಿ ಮಸೂದೆಗೆ ಲೋಕಸಭೆ ಬಳಿಕ ರಾಜ್ಯಸಭೆಯೂ ಅನುಮೋದನೆ ನೀಡಿದೆ. ಇದರೊಂದಿಗೆ ಈ ಮಸೂದೆಗೆ ಸಂಸತ್​ನ ಅಂಗೀಕಾರ ಸಿಕ್ಕಂತಾಗಿದೆ. ಆರೋಗ್ಯ ಮತ್ತು ರಾಷ್ಟ್ರೀಯ ಭದ್ರತಾ ಸೆಸ್ ಮಸೂದೆಯನ್ನೂ ಇದೇ ವೇಳೆ ಲೋಕಸಭೆಯಲ್ಲಿ ಮಂಡಿಸಲಾಗಿದೆ. ಸದ್ಯ ಇರುವ ಕಾಂಪೆನ್ಸೇಶನ್ ಸೆಸ್ ಅವಧಿ ಮುಗಿಯುತ್ತಾ ಬಂದಿದ್ದು ಇದರಿಂದ ಬರಲಿರುವ ಆದಾಯ ಕೊರತೆ ನೀಗಿಸಲು ಅಬಕಾರಿ ಸುಂಕ ನೆರವಿಗೆ ಬರಲಿದೆ.

GST collections: ಜಿಎಸ್​ಟಿ ದರ ಕಡಿತದ ಪರಿಣಾಮ, ನವೆಂಬರ್​ನಲ್ಲಿ ತೆರಿಗೆ ಸಂಗ್ರಹ ಕುಂಠಿತ

GST collection of Rs 1,70,276 crore in 2025 November: 2025ರ ನವೆಂಬರ್ ತಿಂಗಳಲ್ಲಿ ಸರಕು ಮತ್ತು ಸೇವಾ ತೆರಿಗೆ ಸಂಗ್ರಹ 1,70,276 ಕೋಟಿ ರೂ ದಾಖಲಾಗಿರುವುದು ಸರ್ಕಾರ ಬಿಡುಗಡೆ ಮಾಡಿದ ಅಂಕಿ ಅಂಶದಿಂದ ತಿಳಿದುಬಂದಿದೆ. ಹಿಂದಿನ ವರ್ಷದ ನವೆಂಬರ್​ಗೆ ಹೋಲಿಸಿದರೆ ಜಿಎಸ್​ಟಿ ಸಂಗ್ರಹದಲ್ಲಿ ಏರಿಕೆ ಆಗಿರುವುದು ಶೇ. 0.7 ಮಾತ್ರವೇ. ಅಕ್ಟೋಬರ್​ನಲ್ಲಿ 1.95 ಲಕ್ಷ ಕೋಟಿ ರೂ ಜಿಎಸ್​ಟಿ ಸಿಕ್ಕಿತ್ತು. ಈ ಬಾರಿ ದೇಶೀಯವಾಗಿ ಜಿಎಸ್​ಟಿ ಸಂಗ್ರಹ ಕಡಿಮೆ ಆಗಿದೆ. ಆಮದುಗಳಿಂದ ಬಂದ ತೆರಿಗೆ ಸಕಾರಾತ್ಮಕವಾಗಿದೆ.

Bangalore IT Raid: ಬೆಂಗಳೂರಿನಲ್ಲಿ ಐಟಿ ದಾಳಿ, 100 ಕೋಟಿ ರೂ. ಮೌಲ್ಯದ ಮರೆಮಾಚಿದ್ದ ವಹಿವಾಟು ಪತ್ತೆ

ಬೆಂಗಳೂರು ಐಟಿ ದಾಳಿ: ಆದಾಯ ತೆರಿಗೆ ಇಲಾಖೆ ಹಾಗೂ ಸರಕು ಮತ್ತು ಸೇವಾ ತೆರಿಗೆ ಇಲಾಖೆ ಅಧಿಕಾರಿಗಳು ಬೆಂಗಳೂರು ನಗರದಲ್ಲಿ ಕಳೆದ 15 ದಿನಗಳಿಂದ ಮಿಂಚಿನ ಕಾರ್ಯಾಚರಣೆ ನಡೆಸಿ 100 ಕೋಟಿ ರೂ. ಮೌಲ್ಯದ ಅಕ್ರಮವನ್ನು ಬಯಲಿಗೆಳೆದಿದ್ದಾರೆ. ಜೆಸಿ ರಸ್ತೆ, ಚಿಕ್ಕಪೇಟೆ, ಅವೆನ್ಯೂ ರಸ್ತೆ ಸೇರಿದಂತೆ ನಗರದ ವಿವಿಧ ಕಡೆಗಳಲ್ಲಿ ದಾಳಿ ನಡೆಸಲಾಗಿದೆ.

ಜಿಎಸ್​ಟಿ ಇಳಿಕೆಯಾಗಿದ್ದೇ ವಾಹನ ಖರೀದಿ ಏಕಾಏಕಿ ಹೆಚ್ಚಳ: ಬೆಂಗಳೂರಿನಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಟ್ರಾಫಿಕ್ ಸಮಸ್ಯೆ!

ಕೇಂದ್ರ ಸರ್ಕಾರ ದ್ವಿಚಕ್ರ, ನಾಲ್ಕು ಚಕ್ರದ ವಾಹನಗಳ ಮೇಲೆ ಜಿಎಸ್​ಟಿ ದರ ಕಡಿಮೆ ಮಾಡಿದ್ದೇ ತಡ ಜನರು ನಾ ಮುಂದು ತಾ ಮುಂದು ಎಂದು ಹೊಸ ವಾಹನಗಳನ್ನು ಖರೀದಿಸಲು ಮುಂದಾಗಿದ್ದಾರೆ. ಇದರ ಪರಿಣಾಮ ಮುಂದಿನ ದಿನಗಳಲ್ಲಿ ಬೆಂಗಳೂರಿನ ಟ್ರಾಫಿಕ್ ಮೇಲೆ ಬೀಳಲಿದ್ದು, ವಾಹನ ಸವಾರರು ಗಂಟೆಗಟ್ಟಲೆ ಟ್ರಾಫಿಕ್​ ಜಾಮ್​ನಲ್ಲಿ ಸಿಲುಕಿ ಪರದಾಡಬೇಕಾಗಲಿದೆ.