Gutkha Ban
ಕರ್ನಾಟಕ ಸರ್ಕಾರವು ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ರಾಜ್ಯಾದ್ಯಂತ ಗುಟ್ಕಾ ಮತ್ತು ಪಾನ್ ಮಸಾಲಾ ಸೇರಿದಂತೆ ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಉತ್ಪನ್ನಗಳ ಮಾರಾಟ ಹಾಗೂ ಬಳಕೆಯನ್ನು ಒಂದು ವರ್ಷದ ಅವಧಿಗೆ ಸಂಪೂರ್ಣವಾಗಿ ನಿಷೇಧಿಸಿದೆ. ಗುಟ್ಕಾ ಸೇವನೆಯು ಜೀವಕ್ಕೆ ಅಪಾಯಕಾರಿ. ಹೀಗಾಗಿ ತಂಬಾಕು ಮತ್ತು ನಿಕೋಟಿನ್ ಮಿಶ್ರಿತ ಗುಟ್ಕಾ ಹಾಗೂ ಪಾನ್ ಮಸಾಲಾಗಳ ತಯಾರಿಕೆ, ಸಂಗ್ರಹಣೆ, ಸಾಗಾಟ ಮತ್ತು ಮಾರಾಟವನ್ನು ಸಂಪೂರ್ಣವಾಗಿ ತಡೆಹಿಡಿಯಲಾಗಿದೆ. ಗುಟ್ಕಾ ನಿಷೇಧವಾದರೆ ಅಡಿಕೆ ಬೆಳೆಗಾರರಿಗೆ ಬಹಳ ದೊಡ್ಡ ಪೆಟ್ಟು ಬೀಳಲಿದೆ.
ಕರ್ನಾಟಕದ ಹತ್ತಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅಡಿಕೆ ಬೆಳೆಯಲಾಗುತ್ತದೆ. ಮುಖ್ಯವಾಗಿ ಶಿವಮೊಗ್ಗ, ಉತ್ತರ ಕನ್ನಡ,ದಾವಣಗೆರೆ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ತುಮಕೂರು ಜಿಲ್ಲೆಗಳಲ್ಲಿ ಹೆಚ್ಚು ಅಡಿಕೆ ಬೆಳೆಯಲಾಗುತ್ತದೆ.
ಇನ್ನೂ ಹೆಚ್ಚು ಓದಿಕರ್ನಾಟಕದಲ್ಲಿ ಗುಟ್ಕಾ-ತಂಬಾಕು ಬ್ಯಾನ್ ಗೆ ವಿರೋಧ: ಸಿಎಂ ಭೇಟಿಯಾದ ಆರಗ ಜ್ಞಾನೇಂದ್ರ ನೇತೃತ್ವದ ನಿಯೋಗ
Araga Jnanendra on Gutkha Ban: ಕರ್ನಾಟಕದಲ್ಲಿ ತಂಬಾಕು ಹೊಂದಿರುವ ಗುಟ್ಕಾ ಮತ್ತು ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ, ಮಾರಾಟಕ್ಕೆ ನಿಷೇಧ (Gutkha, Pan masala Ban) ಹೇರಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಸಾರ್ವಜನಿಕರು ಸೇರಿ ಹಲವು ರಾಜಕಾರಣಿಗಳು ಸ್ವಾಗತಿಸಿದ್ದಾರೆ. ಆದರೆ, ಮತ್ತೊಂದೆಡೆ ಇದಕ್ಕೆ ಅಡಿಕೆ ಬೆಳೆಗಾರರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಸಂಬಂಧ ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ (Araga jnanendra) ನೇತೃತ್ವದ ನಿಯೋಗ ಇಂದು (ಆಗಸ್ಟ್ 13) ಸಿಎಂ ಡಿಕೆ ಶಿವಕುಮಾರ್ ಅವರನ್ನ ಭೇಟಿ ಮಾಡಿ ಬ್ಯಾನ್ ಆದೇಶ ವಾಪಸ್ ಪಡೆಯುವಂತೆ ಮನವಿ ಮಾಡಿದೆ.
- Ramesh B Jawalagera
- Updated on: Aug 13, 2026
- 5:52 pm
Gutkha and Pan Masala Ban: ಕರ್ನಾಟಕದಲ್ಲಿ ತಂಬಾಕು, ನಿಕೋಟಿನ್ ಉತ್ಪನ್ನಗಳ ವಿರುದ್ಧ ಸಮರ: ಗುಟ್ಕಾ, ಪಾನ್ ಮಸಾಲಾ ಒಂದು ವರ್ಷ ನಿಷೇಧ
ಸಾರ್ವಜನಿಕ ಆರೋಗ್ಯ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಯುಕ್ತ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳನ್ನು ಒಂದು ವರ್ಷದ ಅವಧಿಗೆ ರಾಜ್ಯಾದ್ಯಂತ ನಿಷೇಧಿಸಿದೆ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯು ಆಗಸ್ಟ್ 10ರಂದು ಹೊರಡಿಸಿದ ಅಧಿಸೂಚನೆಯನ್ವಯ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದ್ದು, ವ್ಯಸನಮುಕ್ತ ಕರ್ನಾಟಕಕ್ಕೆ ಸಹಕರಿಸಲು ಮನವಿ ಮಾಡಿದೆ.
- Vinay Kashappanavar
- Updated on: Aug 13, 2026
- 5:51 pm