
Hasanamba Temple
ಹಾಸನದ ಅಧಿದೇವತೆ, ನಾಡಿನ ಶಕ್ತಿ ದೇವತೆ ಎಂದೇ ಪ್ರಸಿದ್ಧಳಾದ ಹಾಸನಾಂಬೆ ಅಥವಾ ಹಾಸನಾಂಬಾ ದೇವಿ ವರ್ಷದಲ್ಲಿ ಒಮ್ಮೆ ಮಾತ್ರ ಭಕ್ತರಿಗೆ ದರ್ಶನ ನೀಡುತ್ತಾಳೆ. ಹಾಸನದಲ್ಲಿ ಹುತ್ತದ ರೂಪದಲ್ಲಿ ನೆಲೆಸಿರುವ ಶಕ್ತಿದೇವತೆಯ ದರ್ಶನ ಸಾಮಾನ್ಯವಾಗಿ ದೀಪಾವಳಿಯ ಸಂದರ್ಭದಲ್ಲಿ ಆರಂಭವಾಗುತ್ತದೆ. ಪ್ರತೀ ವರ್ಷ ಅಶ್ವಯುಜ ಮಾಸದ ಅಷ್ಟಮಿಯ ಗುರುವಾರ ದೇಗುಲದ ಬಾಗಿಲು ತೆರೆಯಲಾಗುತ್ತದೆ. ಹಾಸನಾಂಬ ದೇಗುಲ ಸುಮಾರು 12ನೇ ಶತಮಾನದಲ್ಲಿ ನಿರ್ಮಾಣವಾಗಿದ್ದು ಎನ್ನಲಾಗಿದೆ. ಹೊಯ್ಸಳ ರಾಜವಂಶದವರ ಕಾಲದಲ್ಲಿ ನಿರ್ಮಾಣವಾಗಿದ್ದು ಎನ್ನಲಾದ ಈ ದೇಗುಲಕ್ಕೆ ಲಕ್ಷಾಂತರ ಭಕ್ತರು ಭೇಟಿ ನೀಡಿ ದೇವಿಯ ದರ್ಶನ ಪಡೆಯುತ್ತಾರೆ. ಈ ವರ್ಷ (2024) ಅಕ್ಟೋಬರ್ 24ರ ಮದ್ಯಾಹ್ನ ದೇಗುಲದ ಬಾಗಿಲು ತೆರೆದರೆ ನವೆಂಬರ್ 3ಕ್ಕೆ ಮದ್ಯಾಹ್ನ 12ಕ್ಕೆ ಗರ್ಭಗುಡಿ ಬಾಗಿಲನ್ನು ಮುಚ್ಚಲಾಗುತ್ತದೆ. ನಂತರ ಮುಂದಿನ ವರ್ಷವೇ ದೇವಿ ಭಕ್ತರಿಗೆ ದರ್ಶನ ನೀಡುವುದು
ಹಾಸನಾಂಬೆ ಹುಂಡಿ ಎಣಿಕೆ: 9 ದಿನದಲ್ಲಿ 12.63 ಕೋಟಿ ರೂ. ಹಣ, 51 ಗ್ರಾಂ ಚಿನ್ನ
ಹಾಸನಾಂಬೆ.. ಹಾಸನದ ಶಕ್ತಿದೇವತೆ.. ವರ್ಷಕ್ಕೆ ಒಮ್ಮೆ ಮಾತ್ರವೇ ದರ್ಶನ ನೀಡೋ ಜಗನ್ಮಾತೆಯ ದರ್ಶನೋತ್ಸವ ನಿನ್ನೆ(ನವೆಂಬರ್ 03) ಸಂಪನ್ನಗೊಂಡಿದೆ. ಅಕ್ಟೋಬರ್ 24 ರಂದು ಶುರುವಾಗಿದ್ದ ಹಾಸನಾಂಬೆ ದರ್ಶನೋತ್ಸವಕ್ಕೆ ನಿನ್ನೆ ವಿದ್ಯುಕ್ತ ತೆರೆ ಬಿದ್ದಿದೆ. ಒಟ್ಟು 11 ದಿನ ನಡೆದ ಜಾತ್ರೋತ್ಸವದಲ್ಲಿ 9 ದಿನ ಮಾತ್ರ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದ್ದು, ದಾಖಲೆಯ ಒಟ್ಟು 20 ಲಕ್ಷದ 40 ಸಾವಿರ ಭಕ್ತರು ಹಾಸನಾಂಬೆ ದೇವಿ ದರ್ಶನ ಪಡೆದುಕೊಂಡು ಪುನೀತರಾಗಿದ್ದಾರೆ. ಇನ್ನು ದೇವಿಗೆ 51 ಗ್ರಾಂ ಚಿನ್ನ, 913 ಗ್ರಾಂ ಬೆಳ್ಳಿ ಕಾಣಿಕೆ ಬಂದಿದೆ. ಹಾಗಾದ್ರೆ, 2024ರ ಹಾಸನಾಂಬೆ ದರ್ಶನೋತ್ಸವದಿಂದ ಎಷ್ಟು ಆದಾಯ ಬಂದಿದೆ ಎನ್ನುವ ವಿವರ ಇಲ್ಲಿದೆ.
- Manjunath KB
- Updated on: Nov 4, 2024
- 5:14 pm
ಹಾಸನಾಂಬೆ ದೇಗುಲ ಕ್ಲೋಸ್: 18 ಲಕ್ಷಕ್ಕೂ ಅಧಿಕ ಭಕ್ತರಿಂದ ದರ್ಶನ, ಕೋಟ್ಯಾಂತರ ರೂ. ಆದಾಯ
ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನದ ಪ್ರಸಿದ್ಧ ಹಾಸನಾಂಬ ದೇವಾಲಯದ ಬಾಗಿಲನ್ನು ಇಂದು ಶಾಸ್ತ್ರೋಸ್ತವಾಗಿ ಮುಚ್ಚಲಾಗಿದೆ. ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆಎನ್ ರಾಜಣ್ಣ ಅವರ ಅನುಮಪಸ್ಥಿತಿಯಲ್ಲಿ ಜಿಲ್ಲಾಧಿಕಾರಿ ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಸಮ್ಮುಖದಲ್ಲಿ ಬಾಗಿಲು ಮುಚ್ಚಲಾಗಿದ್ದು, ಮುಂದಿನ ವರ್ಷ ಅಕ್ಟೋಬರ್ 9 ಕ್ಕೆ ಬಾಗಿಲು ತೆರೆಯಲಾಗುತ್ತದೆ. ಹಾಗಾದ್ರೆ, ಈ ವರ್ಷ ಎಷ್ಟು ಜನ ಭಕ್ತರು ದರ್ಶನ ಪಡೆದುಕೊಂಡಿದ್ದಾರೆ. ದೇವಸ್ಥಾನಕ್ಕೆ ಎಷ್ಟು ಆದಾಯ ಹರಿದುಬಂದಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
- Manjunath KB
- Updated on: Nov 3, 2024
- 12:52 pm
ಹಾಸನಾಂಬ ದೇವಿ ದರ್ಶನ ಅಂತ್ಯ: ದಾಖಲೆಯ 20 ಲಕ್ಷ ಭಕ್ತರಿಂದ ದರ್ಶನ
ಹಾಸನದ ಹಾಸನಾಂಬ ದೇವಿಯ ದರ್ಶನವು ನವೆಂಬರ್ 3 ರಂದು ಅಂತ್ಯಗೊಂಡಿತು. ಒಂಬತ್ತು ದಿನಗಳಲ್ಲಿ 20 ಲಕ್ಷಕ್ಕೂ ಅಧಿಕ ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ. ಗರ್ಭಗುಡಿ ಬಾಗಿಲು ಮುಚ್ಚುವ ಮುನ್ನ ವಿಶ್ವರೂಪ ದರ್ಶನ ನಡೆಯುತ್ತದೆ. ಈ ವರ್ಷ ದಾಖಲೆಯ ಸಂಖ್ಯೆಯ ಭಕ್ತರು ಆಗಮಿಸಿ ದೇವಿಯ ಆಶೀರ್ವಾದ ಪಡೆದರು.
- Manjunath KB
- Updated on: Nov 3, 2024
- 8:04 am
Hasanamba Darshan Live: ಹಾಸನಾಂಬೆ ದರ್ಶನಕ್ಕೆ ಇಂದು ಕೊನೆ ದಿನ
ಗುರುವಾರ (ಅಕ್ಟೋಬರ್ 24) ರಂದು ಹಾಸನಾಂಬ ದೇಗುಲದ ಬಾಗಿಲು ತೆರೆಯಲಾಯಿತು. ಹಾಸನಾಂಬೆ ದರ್ಶನಕ್ಕೆ ಕೊನೆಯ ದಿನಾವಾದ ಇಂದು (ನ.02) ದೇವಿಯ ದರ್ಶನಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಬರುತ್ತಿದ್ದಾರೆ. ಭಕ್ತರು ನಸುಕಿನ ಜಾವ 4 ಗಂಟೆಯಿಂದ ದರ್ಶನಕ್ಕೆ ಪಡೆಯುತ್ತಿದ್ದಾರೆ. ಹಾಸನಂಬ ದೇಗುಲದ ಬಾಗಿಲು ರವಿವಾರ (ನ.03) ರಂದು ಮುಚ್ಚಲಿದೆ.
- Web contact
- Updated on: Nov 2, 2024
- 12:01 pm
ಹಾಸನ: ಹಾಸನಾಂಬ ದರ್ಶನ ಮುಗಿಸಿ ಹೋಗುತ್ತಿದ್ದವರಿಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು, ಮಹಿಳೆ ಸ್ಥಿತಿ ಗಂಭೀರ
ಆ ದಂಪತಿ ಮಗಳ ಸಮೇತ ಶಕ್ತಿ ದೇವತೆ ಹಾಸನಾಂಬೆಯ ದರ್ಶನ ಮುಗಿಸಿಕೊಂಡು ವಾಪಸಾಗುತ್ತಿದ್ದರು. ಆದರೆ, ಜವರಾಯ ಆ ಕಾರಿನ ರೂಪದಲ್ಲಿ ಅವರ ಬಳಿ ಬಂದಿದ್ದ. ನಡೆದುಕೊಂಡು ಹೋಗುತ್ತಿದ್ದ ಅಪ್ಪ ಮಗಳು ಕಾರು ಗುದ್ದಿಕೊಂಡು ಹೋದ ರಭಸಕ್ಕೆ ಸ್ಥಳದಲ್ಲೇ ಸಾವನ್ನಪ್ಪಿದರೆ ಮಹಿಳೆಯ ಸ್ಥಿತಿ ಗಂಭೀರವಾಗಿದೆ. ಘಟನೆಯ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
- Manjunath KB
- Updated on: Nov 1, 2024
- 10:08 am
ಹಾಸನಾಂಬೆ ದರ್ಶನದ ಅವ್ಯವಸ್ಥೆ: ರೇವಣ್ಣ ಕೆಂಡಾಮಂಡಲ, ಡಿಸಿ ವಿರುದ್ಧ ತನಿಖೆಗೆ ಆಗ್ರಹ
ಶಕ್ತಿದೇವತೆ ಹಾಸನದ ಹಾಸನಾಂಬೆ ದೇವಿಯ ದರ್ಶನಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸದ ಹಾಸನ ಜಿಲ್ಲಾಡಳಿತದ ವಿರುದ್ಧ ಭಕ್ತರು ಆಕ್ರೋಶ ಹೊರಹಾಕುತ್ತಿದ್ದಾರೆ. ಭಕ್ತರು 1000 ರೂ., 300 ರೂ. ಕೊಟ್ಟು ಪಾಸ್ ಗಳನ್ನು ಖರೀದಿಸಿದ್ದರೂ ಸಹ ದರ್ಶನಕ್ಕೆ ಗಂಟೆ ಗಟ್ಟಲೇ ಕಾಯಬೇಕಿದೆ. ಇದರಿಂದ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ದರ್ಶನ ವಿಚಾರಕ್ಕೆ ಸರ್ಕಾರಿ ಇಲಾಖೆಯ ಸಿಬ್ಬಂದಿಗಳ ನಡುವೆ ಮಾರಾಮಾರಿಯಾಗಿದೆ. ಇನ್ನು ಈ ಬಗ್ಗೆ ಜೆಡಿಎಸ್ ಶಾಸಕ ಎಚ್ಡಿ ರೇವಣ್ಣ ಸಹ ಕೆಂಡಾಮಂಡಲರಾಗಿದ್ದು, ಹಾಸನ ಜಿಲ್ಲಾಧಿಕಾರಿ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
- Manjunath KB
- Updated on: Oct 31, 2024
- 5:40 pm
ಹಾಸನಾಂಬೆ ದೇಗುಲದಲ್ಲಿ ದರ್ಶನ ವ್ಯವಸ್ಥೆ ಸರಿಯಿಲ್ಲವೆಂದು ಮಹಿಳಾ ಭಕ್ತರ ಆಕ್ರೋಶ
ದೇವಸ್ಥಾನದ ಆವರಣದಲ್ಲಿ ಸೌಲಭ್ಯಗಳ ಕೊರತೆ ಎಂದು ಮಹಿಳೆಯರು ಹೇಳುತ್ತಾರೆ. ಕುಡಿಯಲು ನೀರಿಲ್ಲ, ಊಟ -ತಿಂಡಿಯ ವ್ಯವಸ್ಥೆ ಇಲ್ಲ ಮತ್ತು ಮಹಿಳೆಯರಿಗಾಗಿ ಶೌಚಾಲಯದ ವ್ಯವಸ್ಥೆ ಕೂಡ ಮಾಡಿಲ್ಲ ಎಂದು ಅವರು ಹೇಳುತ್ತಾರೆ. ದೇವಿಯ ದರ್ಶನಕ್ಕೆ ವಿಐಪಿ, ವಿವಿಐಪಿ ಪದ್ಧತಿಯನ್ನು ರದ್ದು ಮಾಡಬೇಕು, ದೇವಿಯ ಮುಂದೆ ಎಲ್ಲರೂ ಸಮಾನರು ಅಂತ ಭಕ್ತರೊಬ್ಬರು ಹೇಳುತ್ತಾರೆ.
- Arun Belly
- Updated on: Oct 31, 2024
- 5:24 pm
ಹಾಸನಾಂಬೆ ದರ್ಶನ: ಭಕ್ತ ಸಾಗರ ನಿಯತ್ರಿಸಲು ಪರದಾಟ, ನೇರ ದರ್ಶನ ಟಿಕೆಟ್, ವಿಐಪಿ ಪಾಸ್, 500 ವಿಶೇಷ ಬಸ್ ರದ್ದು
ಹಾಸನದ ಹಾಸನಾಂಬ ದೇಗುಲದಲ್ಲಿ ಭಕ್ತರ ದಟ್ಟಣೆಯಿಂದಾಗಿ 1000 ರೂಪಾಯಿ ನೇರ ದರ್ಶನ ಟಿಕೆಟ್ ಹಾಗೂ ವಿಐಪಿ ಪಾಸ್ ರದ್ದುಗೊಳಿಸಲಾಗಿದೆ. ಬೇಕಾಬಿಟ್ಟಿ ವಿವಿಐಪಿ ಪಾಸ್ ಹಂಚಿಕೆಯಿಂದಾಗಿ ಜನರನ್ನು ನಿಯಂತ್ರಿಸಲಾಗದ ಪರಿಸ್ಥಿತಿ ಉದ್ಭವಿಸಿದೆ. ಮತ್ತೊಂದೆಡೆ, ಪರಿಸ್ಥಿತಿ ನಿಯಂತ್ರಿಸುವುದಕ್ಕಾಗಿ ಹಾಸನಾಂಬೆ ದರ್ಶನಕ್ಕೆಂದು ನಿಗದಿಪಡಿಸಿದ್ದ 500 ವಿಶೇಷ ಬಸ್ಗಳ ಸಂಚಾರ ರದ್ದುಗೊಳಿಸಲಾಗಿದೆ.
- Manjunath KB
- Updated on: Oct 31, 2024
- 2:43 pm
ಹಾಸನಾಂಬ ಸನ್ನಿಧಿಯಲ್ಲಿ ಕಂದಾಯ ಇಲಾಖೆ ಸಿಬ್ಬಂದಿ ಮಧ್ಯೆ ಮಾರಾಮಾರಿ: ವಿಡಿಯೋ ಇಲ್ಲಿದೆ
ಹಾಸನದ ಶಕ್ತಿ ದೇವತೆ ಹಾಸನಾಂಬೆಯ ದರ್ಶನ ವಿಚಾರವಾಗಿ ಡಿಸಿ ಕಚೇರಿ ಹಾಗೂ ಪೊಲೀಸ್ ಅಧಿಕಾರಿಗಳ ನಡುವೆ ಮಾರಾಮಾರಿ ನಡೆದಿರುವುದು ಎರಡು ದಿನಗಳ ಹಿಂದೆ ವರದಿಯಾಗಿತ್ತು. ಇದೀಗ ಕಂದಾಯ ಇಲಾಖೆ ಸಿಬ್ಬಂದಿಯ ನಡುವೆ ಮಾರಾಮಾರಿ ನಡೆದಿದೆ. ಹೊಡೆದಾಟದ ವಿಡಿಯೋ ಇಲ್ಲಿದೆ.
- Manjunath KB
- Updated on: Oct 31, 2024
- 12:44 pm
ಹಾಸನಾಂಬ ದೇಗುಲದ ಇತಿಹಾಸ ಮತ್ತು ಸಪ್ತ ಮಾತೃಕೆಯರು ಇಲ್ಲಿ ನೆಲೆಸಿದ್ದು ಹೇಗೆ? ಇಲ್ಲಿದೆ ಮಾಹಿತಿ
ಹಾಸನದ ಹಾಸನಾಂಬೆ ದೇವಿಯ ಉತ್ಸವ ಆರಂಭವಾಗಿದೆ. ಅಕ್ಟೋಬರ್ 24 ರಂದು ದೇಗುಲದ ಬಾಗಿಲು ತೆರೆಯಲಾಗಿದೆ. ನವೆಂಬರ್ 3ರವರೆಗೆ ಉತ್ಸವ ನಡೆಯುತ್ತದೆ. ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆಯುತ್ತಿದ್ದಾರೆ. ವರ್ಷಕ್ಕೊಮ್ಮೆ ಮಾತ್ರ ಬಾಗಿಲು ತೆರೆಯುವ ಹಾಸನಾಂಬ ದೇಗುಲದ ಇತಿಹಾಸ ಮತ್ತು ದೇವಿ ಪವಾಡದ ಬಗ್ಗೆ ಮಾಹಿತಿ ಇಲ್ಲಿದೆ.
- Manjunath KB
- Updated on: Oct 31, 2024
- 10:03 am