HD Deve Gowda
HD Deve Gowda – ಹರದನಹಳ್ಳಿ ದೊಡ್ಡೇಗೌಡ ದೇವೇಗೌಡ (ಹೆಚ್ಡಿ ದೇವೇಗೌಡ) ದೇಶದ ರಾಜಕಾರಣದಲ್ಲಿ ಅತ್ಯಂತ ಪ್ರಭಾವಿ ಹಾಗೂ ಹಿರಿಯ ನಾಯಕ. 1933 ರ ಜೂನ್ 1 ರಂದು ಹಾಸನ ಜಿಲ್ಲೆಯ ಹರದನಹಳ್ಳಿಯಲ್ಲಿ ಜನಿಸಿದ ಇವರು, ಸಾರ್ವಜನಿಕ ಜೀವನದಲ್ಲಿ ಮಣ್ಣಿನ ಮಗ ಎಂದೇ ಖ್ಯಾತಿ ಪಡೆದಿದ್ದಾರೆ. ಜೆಡಿಎಸ್ (ಜನತಾದಳ ಸೆಕ್ಯುಲರ್) ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿರುವ ಇವರು, ಕರ್ನಾಟಕದ ಮುಖ್ಯಮಂತ್ರಿಯಾಗಿ (1994-1996) ರಾಜ್ಯದ ಅಭಿವೃದ್ಧಿಗೆ, ವಿಶೇಷವಾಗಿ ನೀರಾವರಿ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ತದನಂತರ, ದೇಶದ ಅತ್ಯುನ್ನತ ಹುದ್ದೆಯಾದ, ಭಾರತದ 11ನೇ ಪ್ರಧಾನಮಂತ್ರಿಯಾಗಿ (1996-1997) ಸೇವೆ ಸಲ್ಲಿಸಿದ್ದಾರೆ. ರೈತರು, ಶೋಷಿತರು ಹಾಗೂ ಗ್ರಾಮೀಣ ಭಾಗದ ಜನರ ಕಲ್ಯಾಣಕ್ಕಾಗಿ ನಿರಂತರವಾಗಿ ಶ್ರಮಿಸಿದ ಇವರು, ಇಂದಿಗೂ ಕರ್ನಾಟಕದ ರಾಜಕೀಯ ಶಕ್ತಿಯ ಕೇಂದ್ರಬಿಂದುವಾಗಿದ್ದಾರೆ. ವಿಶೇಷವಾಗಿ, ರೈತ ಪರ ಹೋರಾಟಗಳಿಂದಲೇ ಗುರುತಿಸಿಕೊಂಡಿರುವ ದೇವೇಗೌಡರ ಗೌರವಾರ್ಥ, ಪಂಜಾಬ್ನ ಪ್ರಗತಿಪರ ರೈತರು ಅತ್ಯುತ್ತಮ ಹಾಗೂ ಗುಣಮಟ್ಟದ ಭತ್ತದ ತಳಿಯೊಂದಕ್ಕೆ ‘ದೇವ್ ಗೌಡ’ ಎಂದು ಹೆಸರಿಟ್ಟಿರುವುದು ಗಮನಾರ್ಹ.
ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ಕೈತಪ್ಪಿದ್ದೇಕೆ?: ಅಸಲಿ ಸತ್ಯ ಬಹಿರಂಗಪಡಿಸಿದ ಕುಮಾರಸ್ವಾಮಿ
ಮಾಜಿ ಪ್ರಧಾನಿ ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ಕೈತಪ್ಪಿದ ಕುರಿತು ಹೆಚ್.ಡಿ. ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ದೇವೇಗೌಡರು ಟಿಕೆಟ್ಗೆ ಅರ್ಜಿಯನ್ನೇ ಹಾಕಿರಲಿಲ್ಲ ಎಂದಿರುವ ಅವರು, ಈ ವಿಚಾರವನ್ನು ಇಟ್ಟುಕೊಂಡು ಬಿಜೆಪಿ-ಜೆಡಿಎಸ್ ಮೈತ್ರಿ ಒಡೆಯಲು ಕಾಂಗ್ರೆಸ್ ಯತ್ನಿಸುತ್ತಿದೆ ಎಂದು ಕಿಡಿಕಾರಿದ್ದಾರೆ. ಅಲ್ಲದೆ, ದೇವೇಗೌಡರ ಬಗ್ಗೆ ಕಾಂಗ್ರೆಸ್ಸಿಗರಿಗೆ ಈಗ ಅನುಕಂಪ ಬಂದಿದೆ ಎಂದು ವ್ಯಂಗ್ಯವಾಡಿದ್ದಾರೆ.
- Dileep CP
- Updated on: Jun 9, 2026
- 12:16 pm
ಸುದೀರ್ಘ ಪ್ರಧಾನಿ: ನೆಹರು ದಾಖಲೆ ಮುರಿದ ನರೇಂದ್ರ ಮೋದಿ ನಾಯಕತ್ವ ಕೊಂಡಾಡಿದ ಚಂದ್ರಬಾಬು ನಾಯ್ಡು, ಹೆಚ್.ಡಿ. ದೇವೇಗೌಡ
ಪ್ರಧಾನಿ ನರೇಂದ್ರ ಮೋದಿ ಅವರು ನೆಹರು ಅವರ ದಾಖಲೆಯನ್ನು ಮೀರಿ ಭಾರತದ ಸುದೀರ್ಘ ಅವಧಿಯ ಪ್ರಧಾನಿ ಎನಿಸಿಕೊಂಡಿದ್ದಾರೆ. ಅವರ ನಾಯಕತ್ವ, ಸುಧಾರಣಾವಾದಿ ಆಡಳಿತ ಮತ್ತು ವಿಕಸಿತ ಭಾರತ ದೃಷ್ಟಿಕೋನವನ್ನು ಚಂದ್ರಬಾಬು ನಾಯ್ಡು ಹಾಗೂ ಹೆಚ್.ಡಿ. ದೇವೇಗೌಡರು ಶ್ಲಾಘಿಸಿದ್ದಾರೆ. ಮೋದಿ ಅವರ ಸ್ಥಿರ ಆಡಳಿತ, ಜಾಗತಿಕವಾಗಿ ಭಾರತದ ಘನತೆ ಹೆಚ್ಚಿಸುವ ಕಾರ್ಯವೈಖರಿ ಮತ್ತು ಬಡವರ ಕಲ್ಯಾಣಕ್ಕೆ ನೀಡುವ ಆದ್ಯತೆಯನ್ನು ಉಭಯ ನಾಯಕರು ಕೊಂಡಾಡಿದ್ದಾರೆ.
- Nayana Rajeev
- Updated on: Jun 9, 2026
- 11:48 am
‘ಅಧಿಕಾರವೊಂದೇ ಜೆಡಿಎಸ್ ಮಂತ್ರ’: ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ತಪ್ಪಿದ ಬೆನ್ನಲ್ಲೇ ಹೆಚ್ಡಿಕೆ ವಿರುದ್ಧ ಸುರ್ಜೇವಾಲ ವ್ಯಂಗ್ಯ
ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರಿಗೆ ಎನ್ಡಿಎ ರಾಜ್ಯಸಭಾ ಟಿಕೆಟ್ ನಿರಾಕರಿಸಿದ್ದನ್ನು ಅಸ್ತ್ರವಾಗಿಸಿಕೊಂಡಿರುವ ಕಾಂಗ್ರೆಸ್ ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೇವಾಲ, ಕೇಂದ್ರ ಸಚಿವ ಸ್ಥಾನದ ಆಸೆಗೆ ಹೆಚ್ಡಿ ಕುಮಾರಸ್ವಾಮಿ ತಂದೆಗೆ ಆದ ಅಪಮಾನವನ್ನು ಸಹಿಸಿಕೊಳ್ಳುತ್ತಿದ್ದಾರೆ ಎಂದು ಕಟುವಾಗಿ ಟೀಕಿಸಿದ್ದಾರೆ. ಎನ್ಡಿಎ ಅಭ್ಯರ್ಥಿಯಾಗಿ ಪ್ರೊ. ಎಂ ನಾಗರಾಜ ಅವರನ್ನು ಬಿಜೆಪಿ ಭಾನುವಾರ ತಡರಾತ್ರಿ ಘೋಷಣೆ ಮಾಡಿದೆ.
- Ganapathi Sharma
- Updated on: Jun 9, 2026
- 9:03 am
ಹೆಚ್ಡಿ ದೇವೇಗೌಡಗೆ ತಪ್ಪಿದ ಎನ್ಡಿಎ ರಾಜ್ಯಸಭೆ ಟಿಕೆಟ್: ಪ್ರೊ ಎಂ ನಾಗರಾಜಗೆ ಬಿಜೆಪಿ ಮಣೆ
ಕರ್ನಾಟಕದಿಂದ ರಾಜ್ಯಸಭಾ ಚುನಾವಣೆಗೆ ಬಿಜೆಪಿಯು ಪ್ರೊ. ಎಂ. ನಾಗರಾಜ ಹಾಗೂ ವಿಧಾನ ಪರಿಷತ್ಗೆ ಲಿಂಗರಾಜ್ ಪಾಟೀಲ್, ರಘು ಕೌಟಿಲ್ಯ ಅವರಿಗೆ ಟಿಕೆಟ್ ಘೋಷಿಸಿದೆ. ಆದರೆ, ಮರುಆಯ್ಕೆ ಬಯಸಿದ್ದ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರಿಗೆ ವಯಸ್ಸಿನ ಕಾರಣದಿಂದ ಟಿಕೆಟ್ ಕೈತಪ್ಪಿದ್ದು ಜೆಡಿಎಸ್ಗೆ ಭಾರಿ ಆಘಾತ ನೀಡಿದೆ.
- Ganapathi Sharma
- Updated on: Jun 9, 2026
- 9:03 am
“ಈ ದೇವೇಗೌಡ ಇನ್ನೂ ಬದುಕಿದ್ದಾನೆ”: ಅಕ್ಟೋಬರ್ 24ದಂದು ಸರ್ಕಾರಕ್ಕೆ ಸೂಕ್ತ ಉತ್ತರ ನೀಡುತ್ತೇನೆ
ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಹಣವಿಲ್ಲ ಎಂದು ದೇವೇಗೌಡರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಹಾಸನದಲ್ಲಿ ಸಮಾವೇಶ ಮಾಡಿ ಉತ್ತರ ನೀಡಲು ಸಜ್ಜಾಗಿದ್ದಾರೆ. ರಾಜ್ಯದಲ್ಲಿ ಅನಧಿಕೃತ ಕೊಳಚೆ ಪ್ರದೇಶಗಳ ಸಂಖ್ಯೆ ಅಧಿಕವಾಗಿದೆ ಎಂದು ಹೇಳಿರುವ ದೇವೇಗೌಡರು, ವ್ಹೀಲ್ ಚೇರ್ನಲ್ಲಿ ಕುಳಿತುಕೊಂಡು ಅಂತಹ ಸ್ಥಳಗಳಿಗೆ ಭೇಟಿ ನೀಡುವುದಾಗಿ ತಿಳಿಸಿದರು.
- Akshay Pallamajalu
- Updated on: Jun 9, 2026
- 8:18 am