HD Deve Gowda
HD Deve Gowda – ಹರದನಹಳ್ಳಿ ದೊಡ್ಡೇಗೌಡ ದೇವೇಗೌಡ (ಹೆಚ್ಡಿ ದೇವೇಗೌಡ) ದೇಶದ ರಾಜಕಾರಣದಲ್ಲಿ ಅತ್ಯಂತ ಪ್ರಭಾವಿ ಹಾಗೂ ಹಿರಿಯ ನಾಯಕ. 1933 ರ ಜೂನ್ 1 ರಂದು ಹಾಸನ ಜಿಲ್ಲೆಯ ಹರದನಹಳ್ಳಿಯಲ್ಲಿ ಜನಿಸಿದ ಇವರು, ಸಾರ್ವಜನಿಕ ಜೀವನದಲ್ಲಿ ಮಣ್ಣಿನ ಮಗ ಎಂದೇ ಖ್ಯಾತಿ ಪಡೆದಿದ್ದಾರೆ. ಜೆಡಿಎಸ್ (ಜನತಾದಳ ಸೆಕ್ಯುಲರ್) ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿರುವ ಇವರು, ಕರ್ನಾಟಕದ ಮುಖ್ಯಮಂತ್ರಿಯಾಗಿ (1994-1996) ರಾಜ್ಯದ ಅಭಿವೃದ್ಧಿಗೆ, ವಿಶೇಷವಾಗಿ ನೀರಾವರಿ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ತದನಂತರ, ದೇಶದ ಅತ್ಯುನ್ನತ ಹುದ್ದೆಯಾದ, ಭಾರತದ 11ನೇ ಪ್ರಧಾನಮಂತ್ರಿಯಾಗಿ (1996-1997) ಸೇವೆ ಸಲ್ಲಿಸಿದ್ದಾರೆ. ರೈತರು, ಶೋಷಿತರು ಹಾಗೂ ಗ್ರಾಮೀಣ ಭಾಗದ ಜನರ ಕಲ್ಯಾಣಕ್ಕಾಗಿ ನಿರಂತರವಾಗಿ ಶ್ರಮಿಸಿದ ಇವರು, ಇಂದಿಗೂ ಕರ್ನಾಟಕದ ರಾಜಕೀಯ ಶಕ್ತಿಯ ಕೇಂದ್ರಬಿಂದುವಾಗಿದ್ದಾರೆ. ವಿಶೇಷವಾಗಿ, ರೈತ ಪರ ಹೋರಾಟಗಳಿಂದಲೇ ಗುರುತಿಸಿಕೊಂಡಿರುವ ದೇವೇಗೌಡರ ಗೌರವಾರ್ಥ, ಪಂಜಾಬ್ನ ಪ್ರಗತಿಪರ ರೈತರು ಅತ್ಯುತ್ತಮ ಹಾಗೂ ಗುಣಮಟ್ಟದ ಭತ್ತದ ತಳಿಯೊಂದಕ್ಕೆ ‘ದೇವ್ ಗೌಡ’ ಎಂದು ಹೆಸರಿಟ್ಟಿರುವುದು ಗಮನಾರ್ಹ.
ವಾಸ್ತು ಪ್ರಕಾರವೇ ಚೆನ್ನಮ್ಮ ಅಂತ್ಯಕ್ರಿಯೆ: ಬೆಂಗಳೂರಿನಿಂದ ಸ್ಥಳಕ್ಕೆ ಬಂದ ವಾಸ್ತು ತಜ್ಞ ಹೇಳಿದ್ದಿಷ್ಟು
ಟಿವಿ9 ಜೊತೆ ಮಾತನಾಡಿರುವ ಖ್ಯಾತ ವಾಸ್ತು ತಜ್ಞ ಹರಿಪ್ರಸಾದ್, ದೇವೇಗೌಡರ ಕುಟುಂಬ ದೇವರು, ವಾಸ್ತು ಬಿಟ್ಟು ಏನನ್ನೂ ಮಾಡಲ್ಲ. ಇಂತಹ ದೈವ ಭಕ್ತರು ಎಲ್ಲೂ ಸಿಗಲ್ಲ. ಎಲ್ಲಿ ಅಂತಿಮ ಸಂಸ್ಕಾರ ಎಂದು ಸ್ಥಳ ನಿಗದಿ ಆಗಿದೆ. ಆದರೆ ಅಲ್ಲಿ ಯಾವ ಕಡೆ ಮಾಡಬೇಕು ಎಂದು ನೋಡಲು ಬಂದಿದ್ದೇನೆ. ಈ ಮೊದಲೇ ಚರ್ಚೆ ಮಾಡಿದ್ದರು. ಈಗ ಖುದ್ದು ನೋಡಲು ಬಂದಿದ್ದೇನೆ ಎಂದರು.
- Manjunath KB
- Updated on: Jul 19, 2026
- 4:07 pm
ದೇವೇಗೌಡ ಪತ್ನಿ ಚೆನ್ನಮ್ಮ ನಿಧನ: ಎರಡು ದಿನ ಮದ್ಯ ಮಾರಾಟ ನಿಷೇಧ
ಹಾಸನ ಜಿಲ್ಲಾಧಿಕಾರಿ ಕೆ.ಎಸ್ ಲತಾಕುಮಾರಿ ,ಸೋಮವಾರ ಮಧ್ಯಾಹ್ನ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ಗ್ರಾಮದ ಸಮೀಪವಿರುವ ಕ್ಯಾತನಹಳ್ಳಿ ಗ್ರಾಮದ ಜಮೀನಿನಲ್ಲಿ ಚೆನ್ನಮ್ಮ ಅಂತ್ಯಕ್ರಿಯೆ ನಡೆಯಲಿದ್ದು, ಜನ ಹೆಚ್ಚು ಸೇರುವ ನಿರೀಕ್ಷೆ ಇದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಇಂದು (ಜುಲೈ 19) ಹಾಗೂ ಸೋಮವಾರ (ಜುಲೈ 20) ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ. ಗಣ್ಯಾತಿ ಗಣ್ಯರು ಭಾಗಿ ಹಿನ್ನೆಲೆಯಲ್ಲಿ 5 ಹೆಲಿಪ್ಯಾಡ್ ನಿರ್ಮಿಸಲಾಗಿದೆ. ಹರದನಹಳ್ಳಿಯಲ್ಲಿ 2, ಹೊಳೆನರಸೀಪುರದಲ್ಲಿ 3 ಹೆಲಿಪ್ಯಾಡ್ ನಿರ್ಮಾಣ ಮಾಡಲಾಗಿದೆ. ಇನ್ನು ಸಿಎಂ ಡಿ.ಕೆ.ಶಿವಕುಮಾರ್ ನಾಳೆ ಮಧ್ಯಾಹ್ನ 3 ಗಂಟೆಗೆ ಆಗಮಿಸುತ್ತಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.
- Manjunath KB
- Updated on: Jul 19, 2026
- 3:33 pm
ಪತ್ನಿಯ ಪಾರ್ಥಿವ ಶರೀರವನ್ನ ಮನೆಯಿಂದ ಕೊಂಡೊಯ್ಯುವಾಗ ಬಿಕ್ಕಿ ಬಿಕ್ಕಿ ಅತ್ತ ದೇವೇಗೌಡ್ರು
ಚೆನ್ನಮ್ಮ ಅವರ ಪಾರ್ಥಿವ ಶರೀರವನ್ನು ಮನೆಯಿಂದ ಅಂತಿಮ ಯಾತ್ರೆಗೆ ಕೊಂಡೊಯ್ಯುವ ಸಂದರ್ಭದಲ್ಲಿ ಹೆಚ್.ಡಿ. ದೇವೇಗೌಡರು ತೀವ್ರವಾಗಿ ಭಾವುಕರಾದರು. ಪತ್ನಿ ಅಗಲಿಕೆಯ ನೋವು ತಾಳಲಾರದೆ ಅವರು ಬಿಕ್ಕಿ ಬಿಕ್ಕಿ ಅತ್ತ ದೃಶ್ಯಗಳು ಎಲ್ಲರ ಮನಸ್ಸನ್ನು ಕಲಕಿದವು. ಶೈತ್ಯಾಗಾರ ಪೆಟ್ಟಿಗೆಯ ಮೇಲೆ ಕೈಯಿಟ್ಟು ಕಣ್ಣೀರಿಟ್ಟ ದೇವೇಗೌಡರು, ತಮ್ಮ ಜೀವನ ಸಂಗಾತಿಯನ್ನು ಕಳೆದುಕೊಂಡ ದುಃಖವನ್ನು ವ್ಯಕ್ತಪಡಿಸಿದರು. ಅವರ ಪುತ್ರಿ ಹಾಗೂ ಇತರ ಕುಟುಂಬ ಸದಸ್ಯರು ಅವರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು.
- Bhavana Hegde
- Updated on: Jul 19, 2026
- 3:27 pm
Chennamma Passed Away: ಸಾವಿಗೂ ಮುನ್ನ ಚೆನ್ನಮ್ಮರ ಕೊನೆ ಕ್ಷಣಗಳ ವೀಡಿಯೋ ನೋಡಿ!
ಮಾಜಿ ಪ್ರಧಾನ ಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ಶನಿವಾರ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ವೇಳೆ ಅವರು ತಮ್ಮ ಪತಿ ದೇವೇಗೌಡ ಅವರೊಂದಿಗೆ ಕಳೆದ ಕೊನೆ ಕ್ಷಣಗಳ ವೀಡಿಯೋ ಇಲ್ಲಿದೆ. ಜೀವನದ ಕೊನೆ ಕ್ಷಣಗಳನ್ನು ಪತಿಯೊಂದಿಗೆ ಕಳೆದ ಚೆನ್ನಮ್ಮ, ಸಾವಿಗೂ ಮುನ್ನ ಗೌಡರ ಆಶೀರ್ವಾದವನ್ನು ಪಡೆದಿದ್ದಾರೆ. 72 ವರ್ಷಗಳ ಕಾಲ ಬೆನ್ನೆಲುಬಾಗಿದ್ದ ಪತ್ನಿಯನ್ನು ಕಳೆದುಕೊಂಡು ಹೆಚ್ಡಿಡಿ ಇದೀಗ ದುಃಖದಲ್ಲಿ ಮುಳುಗಿದ್ದಾರೆ.
- Bhavana Hegde
- Updated on: Jul 19, 2026
- 2:37 pm
ಐಸಿಯುನಲ್ಲಿ ಚೆನ್ನಮ್ಮರ ಕೊನೆಕ್ಷಣಗಳು ಹೇಗಿತ್ತು? ಪುತ್ರಿ ಅನುಸೂಯ ಭಾವುಕ ಮಾತು
ಚನ್ನಮ್ಮನವರ ಅಂತಿಮ ಕ್ಷಣಗಳನ್ನು ಅವರ ಪುತ್ರಿ ಅನುಸೂಯಾ ಅವರು ಭಾವುಕವಾಗಿ ವಿವರಿಸಿದ್ದಾರೆ. ಮುತ್ತೈದೆಯಾಗಿ ತಮ್ಮ ತಾಯಿ ಅಗಲಿದ್ದು, ತಂದೆ ದೇವೇಗೌಡರು ಶಿವನ ರುದ್ರಾಭಿಷೇಕದ ತೀರ್ಥ, ಮಲ್ಲಿಗೆ ಹೂವು ಮತ್ತು ಗಂಧವನ್ನು ಇಟ್ಟು ಬೀಳ್ಕೊಟ್ಟ ಕ್ಷಣ ಸ್ಮರಣೀಯ ಎಂದಿದ್ದಾರೆ. ಚನ್ನಮ್ಮನವರು ನಿಸ್ವಾರ್ಥ ಸೇವೆ ಹಾಗೂ ಪೂಜೆಗಳಿಂದ ಪುಣ್ಯದ ಸಾವು ಪಡೆದಿದ್ದಾರೆ ಎಂದವರು ಅಭಿಪ್ರಾಯಪಟ್ಟಿದ್ದಾರೆ.
- Sunil MH
- Updated on: Jul 19, 2026
- 1:54 pm
ಚೆನ್ನಮ್ಮ ದೇವೇಗೌಡರ ಮನೆಯ ಮಹಾಲಕ್ಷ್ಮೀ, ಅವರ ದಾಂಪತ್ಯ ಆದರ್ಶ: ಬ್ರಹ್ಮಾಂಡ ಗುರೂಜಿ
ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ನಿಧನಕ್ಕೆ ಬ್ರಹ್ಮಾಂಡ ಗುರೂಜಿ ಸಂತಾಪ ವ್ಯಕ್ತಪಡಿಸಿದ್ದು, ದೇವೇಗೌಡರ ಯಶಸ್ಸಿನ ಹಿಂದಿದ್ದ ಮನೆಯ ಮಹಾಲಕ್ಷ್ಮಿ ಹಾಗೂ ಪರಮ ದೈವಭಕ್ತೆ ಚೆನ್ನಮ್ಮನವರ ಆದರ್ಶ ದಾಂಪತ್ಯವನ್ನು ಇಂದಿನ ಪೀಳಿಗೆ ಕಲಿಯಬೇಕೆಂದು ಹೇಳಿದ್ದಾರೆ. ಮನೆಯ ಮಕ್ಕಳು, ಮೊಮ್ಮಕ್ಕಳ ಯಶಸ್ಸು ಕೀರ್ತಿ ಪಡೆಯಲು ಮತ್ತು ದೇವೇಗೌಡರನ್ನು ಮೂರು ಬಾರಿ ಬದುಕಿಸಿದ್ದು ಕೂಡ ಇದೇ ಚೆನ್ನಮ್ಮನವರು ಎಂಬುದನ್ನು ನೆನಪಿಸಿಕೊಂಡಿದ್ದಾರೆ.
- Vinay Kashappanavar
- Updated on: Jul 19, 2026
- 12:14 pm
ಸ್ವಗ್ರಾಮದಲ್ಲಿ ಮೂರು ದೇವಸ್ಥಾನ ಕಟ್ಟಿಸಿರುವ ಹೆಚ್ಡಿಡಿ ಧರ್ಮಪತ್ನಿ: ಚೆನ್ನಮ್ಮರ ದೈವಭಕ್ತಿಗೆ ಹುಟ್ಟೂರೇ ಸಾಕ್ಷಿ!
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಧರ್ಮಪತ್ನಿ, ಪರಮ ದೈವಭಕ್ತೆ ಚೆನ್ನಮ್ಮನವರು ನಿಧನರಾಗಿದ್ದು, ಅವರ ತವರು ಗ್ರಾಮ ಮುತ್ತಿಗೆಹಿರೇಹಳ್ಳಿಯಲ್ಲಿ ಶೋಕ ವಾತಾವರಣ ನಿರ್ಮಾಣವಾಗಿದೆ. ರಾಜಮನೆತನದ ಹಿನ್ನೆಲೆ ಇದ್ದರೂ ಸದಾ ದೈವಾರಾಧನೆಯಲ್ಲೇ ಮುಳುಗಿದ್ದ ಅವರು ಹುಟ್ಟೂರಲ್ಲಿ ಮೂರು ದೇವಸ್ಥಾನಗಳನ್ನು ಕಟ್ಟಿಸಿದ್ದರು. ಜಾತ್ರೆಯಲ್ಲಿ ಮೊದಲ ಪೂಜೆ ಸ್ವೀಕರಿಸುತ್ತಿದ್ದ ತಾಯಿಯ ಅಂತಿಮ ದರ್ಶನಕ್ಕಾಗಿ ಪಾರ್ಥಿವ ಶರೀರವನ್ನು ಊರಿಗೆ ತರಲು ಗ್ರಾಮಸ್ಥರು ವಿನಂತಿಸಿದ್ದಾರೆ.
- Ashwith Mavinaguni
- Updated on: Jul 19, 2026
- 11:07 am
‘ನನ್ನ ದೇವರನ್ನೇ ಕಳೆದುಕೊಂಡೆ’: ತಾಯಿ ಚೆನ್ನಮ್ಮ ನೆನೆದು ಗಳ ಗಳತೆ ಅತ್ತ ಹೆಚ್.ಡಿ. ರೇವಣ್ಣ
ಹಾಸನದ ಮಾವಿನಕೆರೆ ಬೆಟ್ಟದ ತಪ್ಪಲಿನಲ್ಲಿ ತಾಯಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ಸ್ಥಳ ಪರಿಶೀಲಿಸಿದ ಶಾಸಕ ಹೆಚ್.ಡಿ. ರೇವಣ್ಣ ಭಾವುಕರಾಗಿದ್ದಾರೆ. "ನನ್ನ ದೇವತೆಯನ್ನೇ ಕಳೆದುಕೊಂಡೆ" ಎಂದು ಮಾಧ್ಯಮಗಳ ಮುಂದೆ ಗಳಗಳನೆ ಕಣ್ಣೀರು ಹಾಕಿದ್ದಾರೆ. ವೈದ್ಯರು ನಿನ್ನೆ ಬೆಳಗ್ಗೆ ಚೆನ್ನಮ್ಮ ಗುಣಮುಖ ಆಗ್ತಾರೆ ಎಂದಿದ್ದರು. ಆದರೆ ಅವರು ಬದುಕಿಬರಲಿಲ್ಲ ಎಂದು ಹೇಳುತ್ತಲೇ ಉಮ್ಮಳಿಸಿ ಬಂದ ದುಃಖ ತಡೆಯಲಾರದೆ ರೇವಣ್ಣ ಗದ್ಗರಿತರಾಗಿದ್ದಾರೆ.
- Manjunath KB
- Updated on: Jul 19, 2026
- 10:29 am
ತಾಯಿ ಹೇಳಿಕೊಟ್ಟ ಬದುಕಿನ ಪಾಠ ಮರೆಯಲಾಗಲ್ಲ: ಅಮ್ಮನ ಅಗಲುವಿಕೆ ನೆನೆದು ಹೆಚ್.ಡಿ. ಕುಮಾರಸ್ವಾಮಿ ಭಾವುಕ
ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಮತ್ತು ತಮ್ಮ ತಾಯಿಯೂ ಆಗಿರುವ ಚೆನ್ನಮ್ಮ ಅವರ ನಿಧನಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ತಾಯಿ ತಮಗೆ ಕಲಿಸಿದ ಬದುಕಿನ ಪಾಠಗಳು ಮತ್ತು ಅವರ ಸರಳ ದಾಂಪತ್ಯ ಜೀವನವನ್ನು ನೆನೆದು ಅವರು ಭಾವುಕರಾದ ಪ್ರಸಂಗ ನಡೆದಿದೆ. ಇವತ್ತಿನ ಸಮಾಜಕ್ಕೆ ನಮ್ಮ ತಂದೆ ತಾಯಿಯ ದಾಂಪತ್ಯ ಮಾದರಿ ಎಂದೂ ಅವರು ಈ ವೇಳೆ ಅಭಿಪ್ರಾಯಪಟ್ಟಿದ್ದಾರೆ.
- Sunil MH
- Updated on: Jul 19, 2026
- 9:20 am
ಅಜ್ಜಿ ಚೆನ್ನಮ್ಮ ನಿಧನದ ಸುದ್ದಿ ಕೇಳಿ ಜೈಲಲ್ಲೇ ಕಣ್ಣೀರಿಟ್ಟ ಮಾಜಿ ಸಂಸದ ಪ್ರಜ್ವಲ್ ರೇವಣ್ಣ
ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಜ್ಜಿಯ ಅಗಲಿಕೆಯ ಸುದ್ದಿ ಕೇಳಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಕಣ್ಣೀರು ಹಾಕಿದ್ದಾರೆ. ಅಜ್ಜಿಯನ್ನು ನೆನೆದು ಪ್ರಜ್ವಲ್ ಬಿಕ್ಕಿ ಬಿಕ್ಕಿ ಅತ್ತಿದ್ದು, ರಾತ್ರಿಯಿಡೀ ನಿದ್ದೆ ಮಾಡದೆ ಮೌನಕ್ಕೆ ಶರಣಾಗಿದ್ದಾರೆ ಎನ್ನಲಾಗಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯ ಸಮೀಪದ ಕ್ಯಾತನಹಳ್ಳಿ ಬಳಿ ಇರುವ ದೇವೇಗೌಡರ ಕುಟುಂಬಕ್ಕೆ ಸೇರಿದ ಜಮೀನಿನಲ್ಲಿ ಚೆನ್ನಮ್ಮನವರ ಅಂತ್ಯಕ್ರಿಯೆ ನಾಳೆ ಮಧ್ಯಾಹ್ನದ ವೇಳೆಗೆ ನಡೆಯಲಿದ್ದು, ಅಗತ್ಯ ಸಿದ್ಧತೆ ಆರಂಭವಾಗಿದೆ.
- Ramu Ram
- Updated on: Jul 19, 2026
- 8:55 am
ಸಕಲ ಸರ್ಕಾರಿ ಗೌರವದೊಂದಿಗೆ ನಾಳೆ ಚೆನ್ನಮ್ಮ ಅಂತ್ಯಕ್ರಿಯೆ: ಮಾವಿನಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಅಂತಿಮ ವಿಧಿ ವಿಧಾನ
ಅನಾರೋಗ್ಯದಿಂದಾಗಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶರಾಗಿದ್ದು, ಹಾಸನದ ಮಾವಿನಕೆರೆ ಬೆಟ್ಟದ ತಪ್ಪಲಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಾಳೆ ಅವರ ಅಂತ್ಯಕ್ರಿಯೆ ನಡೆಯಲಿದೆ. ಇಂದು ಬೆಂಗಳೂರಿನ ಪದ್ಮನಾಭನಗರದ ದೇವೇಗೌಡರ ನಿವಾಸದ ಸಮೀಪದ ಮೈದಾನದಲ್ಲಿ ಮತ್ತು ನಾಳೆ ರೇವಣ್ಣ ಅವರ ಹೊಳೆನರಸೀಪುರದ ಮನೆಯಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
- Shivaprasad B
- Updated on: Jul 19, 2026
- 7:07 am
ಚೆನ್ನಮ್ಮನ ಅಂತಿಮ ದರ್ಶನ ಪಡೆದು ದೇವೇಗೌಡ, ಕುಮಾರಸ್ವಾಮಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ
ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಇಂದು (ಜುಲೈ 18) ವಿಧಿವಶರಾಗಿದ್ದಾರೆ. ಪದ್ಮನಾಭನಗರದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಹಲವು ರಾಜಕೀಯ ನಾಯಕರು, ಸ್ವಾಮೀಜಿಗಳು ಅಂತಿಮ ದರ್ಶನಕ್ಕೆ ಆಗಮಿಸುತ್ತಿದ್ದಾರೆ. ಇನ್ನು ದೇವೇಗೌಡ ಅವರ ಶಿಷ್ಯ ಮಾಜಿ ಸಿಎಂ ಸಿದ್ದರಾಂಯ್ಯನವರು ಸಹ ಚೆನ್ನಮ್ಮನ ಅಂತಿಮ ದರ್ಶನ ಪಡೆದುಕೊಂಡರು. ಬಳಿಕ ದೇವೇಗೌಡರ ಪಕ್ಕದಲ್ಲೇ ಕುಳಿತು ಕೈಹಿಡಿದು ಸಾಂತ್ವನ ಹೇಳಿದರು. ಹಾಗೇ ಹೆಚ್.ಡಿ.ರೇವಣ್ಣ, ಕುಮಾರಸ್ವಾಮಿಗೆ ಸಾಂತ್ವನ ಹೇಳಿ ತೆರಳಿದರು.
- Ramesh B Jawalagera
- Updated on: Jul 18, 2026
- 10:28 pm