AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

HD Deve Gowda

HD Deve Gowda

HD Deve Gowda – ಹರದನಹಳ್ಳಿ ದೊಡ್ಡೇಗೌಡ ದೇವೇಗೌಡ (ಹೆಚ್​ಡಿ ದೇವೇಗೌಡ) ದೇಶದ ರಾಜಕಾರಣದಲ್ಲಿ ಅತ್ಯಂತ ಪ್ರಭಾವಿ ಹಾಗೂ ಹಿರಿಯ ನಾಯಕ. 1933 ರ ಜೂನ್ 1 ರಂದು ಹಾಸನ ಜಿಲ್ಲೆಯ ಹರದನಹಳ್ಳಿಯಲ್ಲಿ ಜನಿಸಿದ ಇವರು, ಸಾರ್ವಜನಿಕ ಜೀವನದಲ್ಲಿ ಮಣ್ಣಿನ ಮಗ ಎಂದೇ ಖ್ಯಾತಿ ಪಡೆದಿದ್ದಾರೆ. ಜೆಡಿಎಸ್ (ಜನತಾದಳ ಸೆಕ್ಯುಲರ್) ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿರುವ ಇವರು, ಕರ್ನಾಟಕದ ಮುಖ್ಯಮಂತ್ರಿಯಾಗಿ (1994-1996) ರಾಜ್ಯದ ಅಭಿವೃದ್ಧಿಗೆ, ವಿಶೇಷವಾಗಿ ನೀರಾವರಿ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ತದನಂತರ, ದೇಶದ ಅತ್ಯುನ್ನತ ಹುದ್ದೆಯಾದ, ಭಾರತದ 11ನೇ ಪ್ರಧಾನಮಂತ್ರಿಯಾಗಿ (1996-1997) ಸೇವೆ ಸಲ್ಲಿಸಿದ್ದಾರೆ. ರೈತರು, ಶೋಷಿತರು ಹಾಗೂ ಗ್ರಾಮೀಣ ಭಾಗದ ಜನರ ಕಲ್ಯಾಣಕ್ಕಾಗಿ ನಿರಂತರವಾಗಿ ಶ್ರಮಿಸಿದ ಇವರು, ಇಂದಿಗೂ ಕರ್ನಾಟಕದ ರಾಜಕೀಯ ಶಕ್ತಿಯ ಕೇಂದ್ರಬಿಂದುವಾಗಿದ್ದಾರೆ. ವಿಶೇಷವಾಗಿ, ರೈತ ಪರ ಹೋರಾಟಗಳಿಂದಲೇ ಗುರುತಿಸಿಕೊಂಡಿರುವ ದೇವೇಗೌಡರ ಗೌರವಾರ್ಥ, ಪಂಜಾಬ್‌ನ ಪ್ರಗತಿಪರ ರೈತರು ಅತ್ಯುತ್ತಮ ಹಾಗೂ ಗುಣಮಟ್ಟದ ಭತ್ತದ ತಳಿಯೊಂದಕ್ಕೆ ‘ದೇವ್ ಗೌಡ’ ಎಂದು ಹೆಸರಿಟ್ಟಿರುವುದು ಗಮನಾರ್ಹ.

ಇನ್ನೂ ಹೆಚ್ಚು ಓದಿ

ಟೌನ್​ಶಿಪ್, ನೈಸ್ ರಸ್ತೆ ವಿವಾದ: ಬಹಿರಂಗ ಚರ್ಚೆಗೆ ನಾನು ಸಿದ್ಧ; ಸರ್ಕಾರಕ್ಕೆ ಸವಾಲೆಸೆದ ಹೆಚ್​​ಡಿ ಕುಮಾರಸ್ವಾಮಿ

HD Kumaraswamy Challenges Congress: ಬೆಂಗಳೂರಿನ ನೈಸ್ ರಸ್ತೆ ವಿವಾದ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಈ ವಿಚಾರವಾಗಿ ಪ್ರತಿಪಕ್ಷಗಳು ಸಿಡಿದೆದ್ದಿವೆ. ಬಿಡದಿ ಟೌನ್‌ಶಿಪ್ ಮತ್ತು ನೈಸ್ ಯೋಜನೆಗಳ ಕುರಿತು ಕಾಂಗ್ರೆಸ್ ಆರೋಪಗಳಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ ಬಹಿರಂಗ ಚರ್ಚೆಗೆ ಬರುವಂತೆ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.

  • Sunil MH
  • Updated on: Aug 18, 2026
  • 4:13 pm

ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣದ ಸನ್ನಿವೇಶ ಹೇಳಿ ಗದ್ಗದಿತರಾದ ದೇವೇಗೌಡ್ರು

ಮಾಜಿ ಪ್ರಧಾನಿ ಹೆಚ್​​​​​ಡಿ ದೇವೇಗೌಡ ಅವರು ಪತ್ನಿ ಸಾವಿನ ನೋವಿನಿಂದ ಆಚೆ ಬಂದಂತಿಲ್ಲ. ಇಂದು (ಆಗಸ್ಟ್ 10) ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಮಾವಿನಕೆರೆ ಬೆಟ್ಟದ ತಪ್ಪಲಿನಲ್ಲಿರುವ ಪತ್ನಿ ಸಮಾಧಿಗೆ ಪೂಜೆ ನೆರವೇರಿಸಿದರು. ಹೂ, ಅರಿಸಿಣ ಕುಂಕುಮ ಸಮರ್ಪಣೆ ಮಾಡಿ ಭಾವುಕರಾದರು. ಪೂಜೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ದೇವೇಗೌಡ್ರು, ನನ್ನ ಜೀವನದ ಬೆನ್ನೆಲುಬು ಈಕೆ. ಈಗ ಭೂದೇವಿಯ ಗರ್ಭದಲ್ಲಿ ಚಿರನಿದ್ರೆಯಲ್ಲಿ ಇದ್ದಾಳೆ.

ಬಿಡದಿ ಟೌನ್​ಶಿಪ್​ ಯೋಜನೆಯ ಹಿಂದಿನ ಉದ್ದೇಶ ಏನು? ಸಿಎಂ ಡಿಕೆ ಶಿವಕುಮಾರ್​​ಗೆ ದೇವೇಗೌಡ ಪ್ರಶ್ನೆ

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಬಿಡದಿ ಟೌನ್‌ಶಿಪ್‌ ಯೋಜನೆ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಅವರ ಆತುರವನ್ನು ಪ್ರಶ್ನಿಸಿದ್ದಾರೆ. ಜೆಡಿಎಸ್ ಹಮ್ಮಿಕೊಂಡಿರುವ ರೈತರ ಪರ ಪಾದಯಾತ್ರೆಯಲ್ಲಿ ಮಾತನಾಡಿದ ದೇವೇಗೌಡರು, ಬೆಂಗಳೂರಿನಲ್ಲಿ 20,000ಕ್ಕೂ ಹೆಚ್ಚು ಬಿಡಿಎ ನಿವೇಶನಗಳು ಖಾಲಿಯಿದ್ದರೂ, 60 ದಿನಗಳಲ್ಲಿ ಟೌನ್‌ಶಿಪ್ ಮಾಡುವ ಅವಶ್ಯಕತೆ ಏನು ಎಂದು ಪ್ರಶ್ನಿಸಿದ್ದಾರೆ.

  • Sunil MH
  • Updated on: Aug 10, 2026
  • 3:54 pm

ಬಿಡದಿ ಟೌನ್​ಶಿಪ್ ವಿರೋಧಿಸಿ ಜೆಡಿಎಸ್ ಪಾದಯಾತ್ರೆ: ಪ್ರಾಯಶ್ಚಿತ್ತ ಯಾತ್ರೆ ಅನ್ನೋರಿಗೆ ದೇವೇಗೌಡರಿಂದ ತಿರುಗೇಟು!

ರಾಜ್ಯ ಸರ್ಕಾರದ ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಕೈಗೊಂಡಿರುವ ಪಾದಯಾತ್ರೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಭಾಗವಹಿಸಿದರು. 'ದೇಹಕ್ಕಷ್ಟೇ ವಯಸ್ಸಾಗಿದೆ, ಬುದ್ಧಿಗಲ್ಲ' ಎಂದ ಅವರು, ರೈತರ ಪರ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವೆ. ಪ್ರಾಯಶ್ಚಿತ್ತ ಯಾರಿಗೆ ಆಗಲಿದೆ ಎಂಬುದಾಗಿ ಕಾದು ನೋಡಿ ಎಂದು ಕಾಂಗ್ರೆಸ್‌ಗೆ ತಿರುಗೇಟು ನೀಡಿದರು.

Bidadi Township: ಬಿಡದಿ ಟೌನ್‌ಶಿಪ್ ವಿರುದ್ಧ ಜೆಡಿಎಸ್ ಪಾದಯಾತ್ರೆ: ಎರಡನೇ ದಿನಕ್ಕೆ ದೇವೇಗೌಡರ ಸಾಥ್

ಬಿಡದಿ ಟೌನ್‌ಶಿಪ್ ಯೋಜನೆಯನ್ನು ವಿರೋಧಿಸಿ ಜನತಾ ದಳ (ಸೆಕ್ಯುಲರ್) ಹಮ್ಮಿಕೊಂಡಿರುವ ಬೃಹತ್ ಪಾದಯಾತ್ರೆಯು ಇಂದು ಎರಡನೇ ದಿನಕ್ಕೆ ಕಾಲಿಟ್ಟಿದೆ. ಈ ಮಹತ್ವದ ಹೋರಾಟಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಬೆಂಬಲವೂ ದೊರೆತಿದೆ. ನಿಖಿಲ್ ಕುಮಾರಸ್ವಾಮಿ ಅವರ ನಾಯಕತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಮತ್ತು ನಾಯಕರು ಇಂದು 16 ಕಿಲೋಮೀಟರ್ ದೂರ ಹೆಜ್ಜೆ ಹಾಕಲಿದ್ದಾರೆ.

ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಪತ್ನಿ ದಿ.ಚೆನ್ನಮ್ಮ ಅವರ ಉತ್ತರ ಕ್ರಿಯಾದಿ ಕಾರ್ಯ ಇಂದು (ಜು.30) ನಡೆಯಿತು. ಬೆಳಗ್ಗೆಯಿಂದಲೇ ಸಮಾಧಿ ಸ್ಥಳ ಹಾಗೂ ಎಚ್​​​ಡಿ ರೇವಣ್ಣನವರ ನಿವಾಸದಲ್ಲಿ ಪೂಜೆ ಪುನಸ್ಕಾರಗಳು ನಡೆದಿದ್ದು, ಲಕ್ಷಾಂತರ ಜನಕ್ಕೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಅಲ್ಲದೇ ಚೆನ್ನಮ್ಮನಿಗೆ ಇಷ್ಟವಾದ ಚಕ್ಕುಲಿ, ಮೈಸೂರ್ ಪಾಕ್​ ಅನ್ನು ಇಟ್ಟು ಪೂಜೆ ಮಾಜೆ ಮಾಡಲಾಯ್ತು. ಇನ್ನೊಂದೆಡೆ ಕೇಂದ್ರ ಸಚಿವ ಹೆಚ್​​​ಡಿ ಕುಮಾರಸ್ವಾಮಿ ಅವರು ತಾಯಿ ನೆನಪಿಗಾಗಿ ಎಚ್​​​​ಎಂಟಿ ವಾಚ್​​​ನಲ್ಲಿ ಚೆನ್ನಮ್ಮರ ಫೋಟೋ ರೆಡಿ ಮಾಡಿಸಿದ್ದಾರೆ.

ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ: ವಿಡಿಯೋ ನೋಡಿ

ಹಾಸನ: ಭವಾನಿ ರೇವಣ್ಣ ಅವರು ಅತ್ತೆ ಚನ್ನಮ್ಮರ ಬಗ್ಗೆ ಭಾವುಕ ನೆನಪುಗಳನ್ನು ಹಂಚಿಕೊಂಡರು. ಚನ್ನಮ್ಮ ಅವರು ಅತಿಯಾದ ದೇವರ ಭಕ್ತಿ ಹೊಂದಿದ್ದರು, ಪ್ರತಿದಿನವೂ ದೀರ್ಘಕಾಲ ಪೂಜೆ ಸಲ್ಲಿಸುತ್ತಿದ್ದರು. ರೇವಣ್ಣ ಅವರಿಗೆ ತಂದೆ-ತಾಯಿ ದೇವರ ಸಮಾನವಾಗಿದ್ದರು. ಅಮ್ಮ ಹಾಸನಕ್ಕೆ ಬಂದಾಗ ತನ್ನೊಂದಿಗೇ ಇರುತ್ತಿದ್ದರು. ಚನ್ನಮ್ಮ ಎಲ್ಲರಿಗೂ ಮಾರ್ಗದರ್ಶಕರಾಗಿದ್ದರು. ರಾಜಕಾರಣಿಯೇ ಅಲ್ಲದಿದ್ದರೂ, ಅವರು ಗಳಿಸಿದ್ದ ಪ್ರೀತಿ ಅಪಾರ ಎಂದು ಭವಾನಿ ಹೇಳಿದರು.

ಚೆನ್ನಮ್ಮನವರ 11ನೇ ದಿನದ ಕಾರ್ಯ: ಪತ್ನಿ ಸಮಾಧಿಗೆ ಪೂಜೆ ಸಲ್ಲಿಸಿ ಮೌನಕ್ಕೆ ಜಾರಿದ ದೇವೇಗೌಡರು

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ತಮ್ಮ ದಿವಂಗತ ಪತ್ನಿ ಚೆನ್ನಮ್ಮನವರ ಪುಣ್ಯ ಸ್ಮರಣೆಯ ಅಂಗವಾಗಿ ಮಾವಿನಕೆರೆ ಸಮಾಧಿ ಬಳಿ ಮೊದಲ ಪೂಜೆ ಸಲ್ಲಿಸಿದರು. ಹೂವಿನ ಹಾರ ಮತ್ತು ಮಲ್ಲಿಗೆ ಹೂಗಳನ್ನು ಅರ್ಪಿಸಿ ಪತ್ನಿಯ ನೆನಪಲ್ಲಿ ಭಾವುಕರಾಗಿ ಮೌನವಾಗಿ ಕುಳಿತರು. ಕುಟುಂಬ ಸದಸ್ಯರು ಹಾಗೂ ಬಂಧುಗಳು ಈ ಸಂದರ್ಭದಲ್ಲಿ ಭಾಗವಹಿಸಿದ್ದರು.

ಇಂದು ಚೆನ್ನಮ್ಮ 11ನೇ ದಿನದ ಕಾರ್ಯ: ಸಮಾಧಿ ಮುಂದೆಯೇ ಕುಳಿತು ದೇವೇಗೌಡರ ಕಣ್ಣೀರು

ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರು ಪತ್ನಿ ಚೆನ್ನಮ್ಮ ಅಗಲಿಕೆಯ ನೋವಿನಿಂದ ಹೊರಬರಲಾಗದೆ ಕಣ್ಣೀರಿಡುತ್ತಿದ್ದಾರೆ. ಚೆನ್ನಮ್ಮ ಅವರ 11ನೇ ದಿನದ ಕಾರ್ಯಕ್ಕಾಗಿ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಸಕಲ ಸಿದ್ಧತೆ ನಡೆದಿದೆ. ಲಕ್ಷಾಂತರ ಭಕ್ತರು, ಕುಟುಂಬಸ್ಥರು ಭಾಗವಹಿಸುವ ನಿರೀಕ್ಷೆಯಿದ್ದು, ಅವರ ಪುತ್ರ, ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರು ವ್ಯವಸ್ಥೆಗಳನ್ನು ಪರಿಶೀಲಿಸಿದ್ದಾರೆ.

ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: ಹೆಚ್​ಡಿ ಕುಮಾರಸ್ವಾಮಿ ಭಾವುಕ ಮಾತು

ತಾಯಿ ಚೆನ್ನಮ್ಮನವರ ಅಗಲಿಕೆಯ ನಂತರ, ಹೆಚ್.ಡಿ. ಕುಮಾರಸ್ವಾಮಿ ಅವರು ಅವರ ನೆನಪಿನಲ್ಲಿ ಸಮಾಜ ಸೇವೆಯ ವಿನೂತನ ಯೋಜನೆಗಳನ್ನು ಪ್ರಕಟಿಸಿದ್ದಾರೆ. ವೃದ್ಧರು, ಅನಾಥರು, ರೈತರು ಮತ್ತು ಸಂಸ್ಕೃತ ಪಾಠಶಾಲೆಗಳಿಗಾಗಿ ಈ ಸ್ಥಳವನ್ನು ಸಮರ್ಪಿಸಲಾಗುವುದು. ತಮ್ಮ ಗಳಿಕೆಯನ್ನು ನಾಡಿನ ಜನತೆಗೆ ಅರ್ಪಿಸುವ ಹಾಗೂ ಕಷ್ಟದಲ್ಲಿರುವವರಿಗೆ ಸದಾ ನೆರವಾಗುವ ಬದ್ಧತೆಯನ್ನು ಅವರು ಪುನರುಚ್ಚರಿಸಿದ್ದಾರೆ.

ನಮ್ಮ ತಂದೆ ತಾಯಿ ಸಂಸಾರು ಶುರು ಮಾಡಿದ್ದೇ ಬಾಡಿಗೆ ಮನೆಯಿಂದ, ನಾನು ಹುಟ್ಟುವಾಗಲೇ ಅಪ್ಪ ಶಾಸಕ

: ಮಾಜಿ ಪ್ರಧಾನಿ ಹೆಚ್​​​ಡಿ ದೇವೇಗೌಡ ಅವರ ಪುತ್ರಿಯರಾದ ಅನುಸೂಯಾ ಹಾಗೂ ಶೈಲಾಜಾ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ ತಾಯಿ ಚೆನ್ನಮ್ಮರ ಬಗ್ಗೆ ಕೆಲವೊಂದಿರಷ್ಟು ಸಂಗತಿಳಗನ್ನು ಬಿಚ್ಚಿಟ್ಟಿದ್ದಾರೆ. ಪುತ್ರ ಶೈಲಜಾ ಮಾತನಾಡಿ, ನಮ್ಮ ತಂದೆ ತಾಯಿ ಸಂಸಾರು ಶುರು ಮಾಡಿದ್ದೇ ಬಾಡಿಗೆ ಮನೆಯಿಂದ. ನಾನು ಹುಟ್ಟುವಾಗಲೇ ಅಪ್ಪ ಶಾಸಕರಾಗಿದ್ದರು. ಲೋಕೋಪಯೋಗಿ ಸಚಿವರಾಗಿದ್ದಾಗ ಸರ್ಕಾರಿ ನಿವಾಸ ಕೊಟ್ಟಿದ್ರು. ಬಾಡಿಗೆ ಮನೆಗೆ ಹೋಗ್ತೀವಿ ಅಂತ ಅಮ್ಮ ಅಪ್ಪ ಹೇಳಿದ್ರು. ಆಗ ಸಮೀಪದಲ್ಲೇ ಬಾಡಿಗೆ ಮನೆ ಹುಡುಕಲು ಹೋದ್ವಿ. ನಮ್ಮನ್ನ ನೋಡೋಕೆ ಹೋದಾಗ ಪ್ರಧಾನಮಂತ್ರಿ ಹೆಂಡ್ತಿ ಬಾಡಿಗೆಗೆ ಬರ್ತಾರಾ ಅಂತ ಪ್ರಶ್ನೆ ಮಾಡಿದ್ರು. ಮನೆ ಕೊಡೋಕೆ ಹಿಂದೆಮುಂದೆ ನೋಡಿದ್ರು. ರಾಜಕೀಯವಾಗಿ ಏನಾದ್ರೂ ಹೇಳ್ತಿದ್ದಾರಾ ಅಂತ ಅನುಮಾನದಿಂದ ನೋಡಿದ್ರು. ಅಗ್ರಿಮೆಂಟ್ ಹಾಕಿಸಿಕೊಳ್ತೀರಾ? ಅದು ಇದು ಅಂತ ಸಾಕಷ್ಟು ಪ್ರಶ್ನೆ ಮಾಡಿದ್ರು ಎಂದು ಹಿಂದಿನ ನೆನಪುಗಳನ್ನ ಮೆಲುಕು ಹಾಕಿದ್ದಾರೆ.

ಹೆಚ್​​​ಡಿ ದೇವೇಗೌಡರ ನಿವಾಸಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ

ಮಾಜಿ ಪ್ರಧಾನಿ ಹೆಚ್​​​​ಡಿ ದೇವೇಗೌಡ ಅವರ ನಿವಾಸಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಭೇಟಿ ನೀಡಿದ್ದಾರೆ. ಬೆಂಗಳೂರಿನ ಪದ್ಮನಾಭನಗರದಲ್ಲಿರುವ ನಿವಾಸಕ್ಕೆ ಭೇಟಿ ನೀಡಿದ್ದು, ಚೆನ್ನಮ್ಮ ನಿಧನ ಹಿನ್ನೆಲೆಯಲ್ಲಿ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ಜೊತೆಗೆ ದೇವೇಗೌಡ ಅವರಿಗೆ ಆತ್ಮಸ್ಥೈರ್ಯ ತುಂಬಿದ್ದಾರೆ.

ನೆರೆಯಿಂದ ಸುತ್ತುವರೆದ ಮನೆಯಲ್ಲಿ ಸಹಾಯಕ್ಕೆ ಕಾದಿರುವ ನೇಪಾಳದ ಜನರು
ನೆರೆಯಿಂದ ಸುತ್ತುವರೆದ ಮನೆಯಲ್ಲಿ ಸಹಾಯಕ್ಕೆ ಕಾದಿರುವ ನೇಪಾಳದ ಜನರು
ಕರ್ನಾಟಕ ಪೊಲೀಸರ ಭದ್ರತಾ ಸಾಮರ್ಥ್ಯ ಹೆಚ್ಚಿಸಲು ಬಿಗ್ ಪ್ಲಾನ್
ಕರ್ನಾಟಕ ಪೊಲೀಸರ ಭದ್ರತಾ ಸಾಮರ್ಥ್ಯ ಹೆಚ್ಚಿಸಲು ಬಿಗ್ ಪ್ಲಾನ್
ಸಿಎಂಗೆ ರಾಜೀನಾಮೆ ಪತ್ರ ಸಲ್ಲಿಸಿದ ನಾಗೇಂದ್ರ: ಮನಸಿಗೆ ನೋವಾಗಿದೆ; ಡಿಕೆಶಿ
ಸಿಎಂಗೆ ರಾಜೀನಾಮೆ ಪತ್ರ ಸಲ್ಲಿಸಿದ ನಾಗೇಂದ್ರ: ಮನಸಿಗೆ ನೋವಾಗಿದೆ; ಡಿಕೆಶಿ
ಸೈನಿಕರಿಗೆ ರಾಖಿ ಕಟ್ಟಿದ ಕಾಶ್ಮೀರಿ ಮುಸ್ಲಿಂ ಯುವತಿಯರು; ವಿಡಿಯೋ ವೈರಲ್
ಸೈನಿಕರಿಗೆ ರಾಖಿ ಕಟ್ಟಿದ ಕಾಶ್ಮೀರಿ ಮುಸ್ಲಿಂ ಯುವತಿಯರು; ವಿಡಿಯೋ ವೈರಲ್
ನೇಪಾಳದಿಂದ ರಕ್ಷಿಸಲ್ಪಟ್ಟ 21 ಯಾತ್ರಿಕರನ್ನು ಸ್ವಾಗತಿಸಿದ ಸಚಿವ ಜೈಶಂಕರ್
ನೇಪಾಳದಿಂದ ರಕ್ಷಿಸಲ್ಪಟ್ಟ 21 ಯಾತ್ರಿಕರನ್ನು ಸ್ವಾಗತಿಸಿದ ಸಚಿವ ಜೈಶಂಕರ್
ಮಂಡ್ಯದಲ್ಲಿ ಭಿಕ್ಷುಕರ ಬಳಿ ಕಂತೆ ಕಂತೆ ಹಣ ಪತ್ತೆ
ಮಂಡ್ಯದಲ್ಲಿ ಭಿಕ್ಷುಕರ ಬಳಿ ಕಂತೆ ಕಂತೆ ಹಣ ಪತ್ತೆ
ಅರಮನೆ ಪ್ರವೇಶಿಸುತ್ತಿದ್ದಂತೆ ಜನರನ್ನ ಕಂಡು ಗಾಬರಿಗೊಂಡ ಶ್ರೀರಾಮ ಆನೆ
ಅರಮನೆ ಪ್ರವೇಶಿಸುತ್ತಿದ್ದಂತೆ ಜನರನ್ನ ಕಂಡು ಗಾಬರಿಗೊಂಡ ಶ್ರೀರಾಮ ಆನೆ
ಬಿಗ್​​ಬಾಸ್ ಅಗ್ನಿಪರೀಕ್ಷೆ: ಗೋಲ್ಡಲ್ ಟಿಕೆಟ್ ಪಡೆಯಲು ಸ್ಪರ್ಧಿಗಳ ಹರಸಾಹಸ
ಬಿಗ್​​ಬಾಸ್ ಅಗ್ನಿಪರೀಕ್ಷೆ: ಗೋಲ್ಡಲ್ ಟಿಕೆಟ್ ಪಡೆಯಲು ಸ್ಪರ್ಧಿಗಳ ಹರಸಾಹಸ
Live: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ
Live: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ
ಬೆಂಗಳೂರಿನ ಮಾಲ್​​​​ ಮೇಲೆ ಜಿಬಿಎ ಅಧಿಕಾರಿಗಳು ದಾಳಿ: 85 ಸಾವಿರ ದಂಡ
ಬೆಂಗಳೂರಿನ ಮಾಲ್​​​​ ಮೇಲೆ ಜಿಬಿಎ ಅಧಿಕಾರಿಗಳು ದಾಳಿ: 85 ಸಾವಿರ ದಂಡ