HD Deve Gowda
HD Deve Gowda – ಹರದನಹಳ್ಳಿ ದೊಡ್ಡೇಗೌಡ ದೇವೇಗೌಡ (ಹೆಚ್ಡಿ ದೇವೇಗೌಡ) ದೇಶದ ರಾಜಕಾರಣದಲ್ಲಿ ಅತ್ಯಂತ ಪ್ರಭಾವಿ ಹಾಗೂ ಹಿರಿಯ ನಾಯಕ. 1933 ರ ಜೂನ್ 1 ರಂದು ಹಾಸನ ಜಿಲ್ಲೆಯ ಹರದನಹಳ್ಳಿಯಲ್ಲಿ ಜನಿಸಿದ ಇವರು, ಸಾರ್ವಜನಿಕ ಜೀವನದಲ್ಲಿ ಮಣ್ಣಿನ ಮಗ ಎಂದೇ ಖ್ಯಾತಿ ಪಡೆದಿದ್ದಾರೆ. ಜೆಡಿಎಸ್ (ಜನತಾದಳ ಸೆಕ್ಯುಲರ್) ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿರುವ ಇವರು, ಕರ್ನಾಟಕದ ಮುಖ್ಯಮಂತ್ರಿಯಾಗಿ (1994-1996) ರಾಜ್ಯದ ಅಭಿವೃದ್ಧಿಗೆ, ವಿಶೇಷವಾಗಿ ನೀರಾವರಿ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ತದನಂತರ, ದೇಶದ ಅತ್ಯುನ್ನತ ಹುದ್ದೆಯಾದ, ಭಾರತದ 11ನೇ ಪ್ರಧಾನಮಂತ್ರಿಯಾಗಿ (1996-1997) ಸೇವೆ ಸಲ್ಲಿಸಿದ್ದಾರೆ. ರೈತರು, ಶೋಷಿತರು ಹಾಗೂ ಗ್ರಾಮೀಣ ಭಾಗದ ಜನರ ಕಲ್ಯಾಣಕ್ಕಾಗಿ ನಿರಂತರವಾಗಿ ಶ್ರಮಿಸಿದ ಇವರು, ಇಂದಿಗೂ ಕರ್ನಾಟಕದ ರಾಜಕೀಯ ಶಕ್ತಿಯ ಕೇಂದ್ರಬಿಂದುವಾಗಿದ್ದಾರೆ. ವಿಶೇಷವಾಗಿ, ರೈತ ಪರ ಹೋರಾಟಗಳಿಂದಲೇ ಗುರುತಿಸಿಕೊಂಡಿರುವ ದೇವೇಗೌಡರ ಗೌರವಾರ್ಥ, ಪಂಜಾಬ್ನ ಪ್ರಗತಿಪರ ರೈತರು ಅತ್ಯುತ್ತಮ ಹಾಗೂ ಗುಣಮಟ್ಟದ ಭತ್ತದ ತಳಿಯೊಂದಕ್ಕೆ ‘ದೇವ್ ಗೌಡ’ ಎಂದು ಹೆಸರಿಟ್ಟಿರುವುದು ಗಮನಾರ್ಹ.
ಇನ್ನೂ ಹೆಚ್ಚು ಓದಿತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ದಿ.ಚೆನ್ನಮ್ಮ ಅವರ ಉತ್ತರ ಕ್ರಿಯಾದಿ ಕಾರ್ಯ ಇಂದು (ಜು.30) ನಡೆಯಿತು. ಬೆಳಗ್ಗೆಯಿಂದಲೇ ಸಮಾಧಿ ಸ್ಥಳ ಹಾಗೂ ಎಚ್ಡಿ ರೇವಣ್ಣನವರ ನಿವಾಸದಲ್ಲಿ ಪೂಜೆ ಪುನಸ್ಕಾರಗಳು ನಡೆದಿದ್ದು, ಲಕ್ಷಾಂತರ ಜನಕ್ಕೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಅಲ್ಲದೇ ಚೆನ್ನಮ್ಮನಿಗೆ ಇಷ್ಟವಾದ ಚಕ್ಕುಲಿ, ಮೈಸೂರ್ ಪಾಕ್ ಅನ್ನು ಇಟ್ಟು ಪೂಜೆ ಮಾಜೆ ಮಾಡಲಾಯ್ತು. ಇನ್ನೊಂದೆಡೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಅವರು ತಾಯಿ ನೆನಪಿಗಾಗಿ ಎಚ್ಎಂಟಿ ವಾಚ್ನಲ್ಲಿ ಚೆನ್ನಮ್ಮರ ಫೋಟೋ ರೆಡಿ ಮಾಡಿಸಿದ್ದಾರೆ.
- Manjunath KB
- Updated on: Jul 30, 2026
- 7:26 pm
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ: ವಿಡಿಯೋ ನೋಡಿ
ಹಾಸನ: ಭವಾನಿ ರೇವಣ್ಣ ಅವರು ಅತ್ತೆ ಚನ್ನಮ್ಮರ ಬಗ್ಗೆ ಭಾವುಕ ನೆನಪುಗಳನ್ನು ಹಂಚಿಕೊಂಡರು. ಚನ್ನಮ್ಮ ಅವರು ಅತಿಯಾದ ದೇವರ ಭಕ್ತಿ ಹೊಂದಿದ್ದರು, ಪ್ರತಿದಿನವೂ ದೀರ್ಘಕಾಲ ಪೂಜೆ ಸಲ್ಲಿಸುತ್ತಿದ್ದರು. ರೇವಣ್ಣ ಅವರಿಗೆ ತಂದೆ-ತಾಯಿ ದೇವರ ಸಮಾನವಾಗಿದ್ದರು. ಅಮ್ಮ ಹಾಸನಕ್ಕೆ ಬಂದಾಗ ತನ್ನೊಂದಿಗೇ ಇರುತ್ತಿದ್ದರು. ಚನ್ನಮ್ಮ ಎಲ್ಲರಿಗೂ ಮಾರ್ಗದರ್ಶಕರಾಗಿದ್ದರು. ರಾಜಕಾರಣಿಯೇ ಅಲ್ಲದಿದ್ದರೂ, ಅವರು ಗಳಿಸಿದ್ದ ಪ್ರೀತಿ ಅಪಾರ ಎಂದು ಭವಾನಿ ಹೇಳಿದರು.
- Manjunath KB
- Updated on: Jul 30, 2026
- 7:21 pm
ಚೆನ್ನಮ್ಮನವರ 11ನೇ ದಿನದ ಕಾರ್ಯ: ಪತ್ನಿ ಸಮಾಧಿಗೆ ಪೂಜೆ ಸಲ್ಲಿಸಿ ಮೌನಕ್ಕೆ ಜಾರಿದ ದೇವೇಗೌಡರು
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ತಮ್ಮ ದಿವಂಗತ ಪತ್ನಿ ಚೆನ್ನಮ್ಮನವರ ಪುಣ್ಯ ಸ್ಮರಣೆಯ ಅಂಗವಾಗಿ ಮಾವಿನಕೆರೆ ಸಮಾಧಿ ಬಳಿ ಮೊದಲ ಪೂಜೆ ಸಲ್ಲಿಸಿದರು. ಹೂವಿನ ಹಾರ ಮತ್ತು ಮಲ್ಲಿಗೆ ಹೂಗಳನ್ನು ಅರ್ಪಿಸಿ ಪತ್ನಿಯ ನೆನಪಲ್ಲಿ ಭಾವುಕರಾಗಿ ಮೌನವಾಗಿ ಕುಳಿತರು. ಕುಟುಂಬ ಸದಸ್ಯರು ಹಾಗೂ ಬಂಧುಗಳು ಈ ಸಂದರ್ಭದಲ್ಲಿ ಭಾಗವಹಿಸಿದ್ದರು.
- Manjunath KB
- Updated on: Jul 30, 2026
- 12:36 pm
ಇಂದು ಚೆನ್ನಮ್ಮ 11ನೇ ದಿನದ ಕಾರ್ಯ: ಸಮಾಧಿ ಮುಂದೆಯೇ ಕುಳಿತು ದೇವೇಗೌಡರ ಕಣ್ಣೀರು
ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರು ಪತ್ನಿ ಚೆನ್ನಮ್ಮ ಅಗಲಿಕೆಯ ನೋವಿನಿಂದ ಹೊರಬರಲಾಗದೆ ಕಣ್ಣೀರಿಡುತ್ತಿದ್ದಾರೆ. ಚೆನ್ನಮ್ಮ ಅವರ 11ನೇ ದಿನದ ಕಾರ್ಯಕ್ಕಾಗಿ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಸಕಲ ಸಿದ್ಧತೆ ನಡೆದಿದೆ. ಲಕ್ಷಾಂತರ ಭಕ್ತರು, ಕುಟುಂಬಸ್ಥರು ಭಾಗವಹಿಸುವ ನಿರೀಕ್ಷೆಯಿದ್ದು, ಅವರ ಪುತ್ರ, ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಅವರು ವ್ಯವಸ್ಥೆಗಳನ್ನು ಪರಿಶೀಲಿಸಿದ್ದಾರೆ.
- Manjunath KB
- Updated on: Jul 30, 2026
- 9:15 am
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: ಹೆಚ್ಡಿ ಕುಮಾರಸ್ವಾಮಿ ಭಾವುಕ ಮಾತು
ತಾಯಿ ಚೆನ್ನಮ್ಮನವರ ಅಗಲಿಕೆಯ ನಂತರ, ಹೆಚ್.ಡಿ. ಕುಮಾರಸ್ವಾಮಿ ಅವರು ಅವರ ನೆನಪಿನಲ್ಲಿ ಸಮಾಜ ಸೇವೆಯ ವಿನೂತನ ಯೋಜನೆಗಳನ್ನು ಪ್ರಕಟಿಸಿದ್ದಾರೆ. ವೃದ್ಧರು, ಅನಾಥರು, ರೈತರು ಮತ್ತು ಸಂಸ್ಕೃತ ಪಾಠಶಾಲೆಗಳಿಗಾಗಿ ಈ ಸ್ಥಳವನ್ನು ಸಮರ್ಪಿಸಲಾಗುವುದು. ತಮ್ಮ ಗಳಿಕೆಯನ್ನು ನಾಡಿನ ಜನತೆಗೆ ಅರ್ಪಿಸುವ ಹಾಗೂ ಕಷ್ಟದಲ್ಲಿರುವವರಿಗೆ ಸದಾ ನೆರವಾಗುವ ಬದ್ಧತೆಯನ್ನು ಅವರು ಪುನರುಚ್ಚರಿಸಿದ್ದಾರೆ.
- Manjunath KB
- Updated on: Jul 29, 2026
- 5:47 pm
ನಮ್ಮ ತಂದೆ ತಾಯಿ ಸಂಸಾರು ಶುರು ಮಾಡಿದ್ದೇ ಬಾಡಿಗೆ ಮನೆಯಿಂದ, ನಾನು ಹುಟ್ಟುವಾಗಲೇ ಅಪ್ಪ ಶಾಸಕ
: ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅವರ ಪುತ್ರಿಯರಾದ ಅನುಸೂಯಾ ಹಾಗೂ ಶೈಲಾಜಾ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ ತಾಯಿ ಚೆನ್ನಮ್ಮರ ಬಗ್ಗೆ ಕೆಲವೊಂದಿರಷ್ಟು ಸಂಗತಿಳಗನ್ನು ಬಿಚ್ಚಿಟ್ಟಿದ್ದಾರೆ. ಪುತ್ರ ಶೈಲಜಾ ಮಾತನಾಡಿ, ನಮ್ಮ ತಂದೆ ತಾಯಿ ಸಂಸಾರು ಶುರು ಮಾಡಿದ್ದೇ ಬಾಡಿಗೆ ಮನೆಯಿಂದ. ನಾನು ಹುಟ್ಟುವಾಗಲೇ ಅಪ್ಪ ಶಾಸಕರಾಗಿದ್ದರು. ಲೋಕೋಪಯೋಗಿ ಸಚಿವರಾಗಿದ್ದಾಗ ಸರ್ಕಾರಿ ನಿವಾಸ ಕೊಟ್ಟಿದ್ರು. ಬಾಡಿಗೆ ಮನೆಗೆ ಹೋಗ್ತೀವಿ ಅಂತ ಅಮ್ಮ ಅಪ್ಪ ಹೇಳಿದ್ರು. ಆಗ ಸಮೀಪದಲ್ಲೇ ಬಾಡಿಗೆ ಮನೆ ಹುಡುಕಲು ಹೋದ್ವಿ. ನಮ್ಮನ್ನ ನೋಡೋಕೆ ಹೋದಾಗ ಪ್ರಧಾನಮಂತ್ರಿ ಹೆಂಡ್ತಿ ಬಾಡಿಗೆಗೆ ಬರ್ತಾರಾ ಅಂತ ಪ್ರಶ್ನೆ ಮಾಡಿದ್ರು. ಮನೆ ಕೊಡೋಕೆ ಹಿಂದೆಮುಂದೆ ನೋಡಿದ್ರು. ರಾಜಕೀಯವಾಗಿ ಏನಾದ್ರೂ ಹೇಳ್ತಿದ್ದಾರಾ ಅಂತ ಅನುಮಾನದಿಂದ ನೋಡಿದ್ರು. ಅಗ್ರಿಮೆಂಟ್ ಹಾಕಿಸಿಕೊಳ್ತೀರಾ? ಅದು ಇದು ಅಂತ ಸಾಕಷ್ಟು ಪ್ರಶ್ನೆ ಮಾಡಿದ್ರು ಎಂದು ಹಿಂದಿನ ನೆನಪುಗಳನ್ನ ಮೆಲುಕು ಹಾಕಿದ್ದಾರೆ.
- Anil Kalkere
- Updated on: Jul 24, 2026
- 7:33 pm
ಹೆಚ್ಡಿ ದೇವೇಗೌಡರ ನಿವಾಸಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ
ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅವರ ನಿವಾಸಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಭೇಟಿ ನೀಡಿದ್ದಾರೆ. ಬೆಂಗಳೂರಿನ ಪದ್ಮನಾಭನಗರದಲ್ಲಿರುವ ನಿವಾಸಕ್ಕೆ ಭೇಟಿ ನೀಡಿದ್ದು, ಚೆನ್ನಮ್ಮ ನಿಧನ ಹಿನ್ನೆಲೆಯಲ್ಲಿ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ಜೊತೆಗೆ ದೇವೇಗೌಡ ಅವರಿಗೆ ಆತ್ಮಸ್ಥೈರ್ಯ ತುಂಬಿದ್ದಾರೆ.
- Ramesh B Jawalagera
- Updated on: Jul 24, 2026
- 5:53 pm
‘ಅನ್ನಪೂರ್ಣೆ, ಚೈತನ್ಯ ಶಕ್ತಿ…’, ಪತ್ನಿ ಚೆನ್ನಮ್ಮ ಕುರಿತು ಭಾವುಕ ಸಂದೇಶ ಹಂಚಿಕೊಂಡ ದೇವೇಗೌಡರು
ಪತ್ನಿ ನಿಧನದ ಬಗ್ಗೆ ಭಾವನಾತ್ಮಕ ಸಂದೇಶವನ್ನು ಮಾಜಿ ಪ್ರಧಾನಿ ದೇವೇಗೌಡರು ಹಂಚಿಕೊಂಡಿದ್ದು, ಚೆನ್ನಮ್ಮ ತಮ್ಮ ಏಳು ದಶಕಗಳ ರಾಜಕೀಯ ಪಯಣದ ಹಿಂದಿನ ಚೈತನ್ಯ ಶಕ್ತಿ ಹಾಗೂ ಮನೆಯ ಅನ್ನಪೂರ್ಣೆಯಾಗಿದ್ದರು ಎಂದಿದ್ದಾರೆ. ಕಷ್ಟಕರ ಸಂದರ್ಭದಲ್ಲಿ ನಮ್ಮ ದುಃಖದಲ್ಲಿ ಭಾಗಿಯಾದ ಸಮಸ್ತರಿಗೂ ಧನ್ಯವಾದ ತಿಳಿಸೋದಾಗಿಯೂ ಅವರು ಹೇಳಿದ್ದಾರೆ.
- Prasanna Hegde
- Updated on: Jul 24, 2026
- 4:02 pm
ಮರಿ ಮೊಮ್ಮಗಳ ಜೊತೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮನವರ ಅಗಲಿಕೆಯ ಬೆನ್ನಲ್ಲೇ, ಈ ಹಿರಿಯ ದಂಪತಿ ತಮ್ಮ ಮರಿ ಮೊಮ್ಮಗಳೊಂದಿಗೆ ಕಾಲ ಕಳೆದಿದ್ದ ಹಳೆಯ ಮುದ್ದಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ನೆಟ್ಟಿಗರ ಗಮನ ಸೆಳೆಯುತ್ತಿದೆ. ಅನಾರೋಗ್ಯದ ನಡುವೇ ಚೆನ್ನಮ್ಮನವರು ಮರಿ ಮೊಮ್ಮಗಳ ಜೊತೆ ಕಾಲ ಕಳೆಯುತ್ತಿರುವ ಮುದ್ದಾದ ದೃಶ್ಯಗಳು ಇದರಲ್ಲಿವೆ.
- Prasanna Hegde
- Updated on: Jul 23, 2026
- 12:12 pm
ಚೆನ್ನಮ್ಮ ಸಮಾಧಿ ಬಳಿ ವಿಷ್ಣು ಸಹಸ್ರನಾಮ ಪಠಿಸುತ್ತಿದ್ದಂತೆಯೇ ಪ್ರತ್ಯಕ್ಷವಾದ ಗರುಡ!
ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ಬೆಟ್ಟದ ತಪ್ಪಲಿನಲ್ಲಿ, ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಸಮಾಧಿ ಬಳಿ ಅಚ್ಚರಿಯೊಂದು ನಡೆದಿದೆ. ಸಮಾಧಿ ಬಳಿ ಅರ್ಚಕರು ವಿಷ್ಣು ಸಹಸ್ರನಾಮ ಹಾಗೂ ಇತರ ಮಂತ್ರ ಪಠಣ ಮಾಡುತ್ತಿದ್ದಾಗ ಗರುಡವೊಂದು ಹಾರಿ ಬಂದು ಸಮಾಧಿಗೆ ಪ್ರದಕ್ಷಿಣೆ ಹಾಕಿ ಹೋಗಿದೆ.
- Manjunath KB
- Updated on: Jul 21, 2026
- 1:46 pm
ಶಾಸ್ತ್ರದ ಪ್ರಕಾರ ಪತ್ನಿ ಚೆನ್ನಮ್ಮನನ್ನು ಕಳಿಸಿಕೊಟ್ಟ ದೇವೇಗೌಡ್ರು, ಕೊನೆ ಕ್ಷಣ ಹೇಗಿತ್ತು ನೋಡಿ
ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಮಣ್ಣಲ್ಲಿ ಮಣ್ಣಾಗಿದ್ದಾರೆ. ಗೌಡರ ಹುಟ್ಟೂರು ಹರದನಹಳ್ಳಿ ಮಾವಿನಕೆರೆಯ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಇಂದು (ಜುಲೈ 20) ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿತು. ಹಿರಿಯ ಪುತ್ರ ಹೆಚ್ಡಿ ರಮೇಶ್ ಅವರು ಅಂತಿಮ ವಿಧಿವಿಧಾನ ಪೂರೈಸಿದ್ದು, ಇನ್ನು ದೇವೇಗೌಡ್ರು ಪತ್ನಿಯ ಕೊನೆ ಮುಖ ನೋಡಿ ಮಣ್ಣು ಹಾಕಿ ವಿದಾಯ ಹೇಳಿದರು.
- Manjunath KB
- Updated on: Jul 20, 2026
- 7:43 pm
Chennamma Funeral: ಮಣ್ಣಲ್ಲಿ ಮಣ್ಣಾದ ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ‘ಚೆನ್ನಮ್ಮ‘
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ನೆರವೇರಿದೆ. ಮಾವಿನಕೆರೆ ಬೆಟ್ಟದ ತಪ್ಪಲಿನ ಜಮೀನಿನಲ್ಲಿ ಕುಟುಂಬ ಸದಸ್ಯರು ಮತ್ತು ಸಾರ್ವಜನಿಕರ ಸಮ್ಮುಖದಲ್ಲಿ ಪಾರ್ಥಿವ ಶರೀರಕ್ಕೆ ಅಂತಿಮ ಸಂಸ್ಕಾರ ನೆರವೇರಿಸಲಾಯಿತು. ಧಾರ್ಮಿಕ ವಿಧಿವಿಧಾನಗಳೊಂದಿಗೆ ಚೆನ್ನಮ್ಮ ಅವರಿಗೆ ಅಂತಿಮ ನಮನ ಸಲ್ಲಿಸಲಾಯಿತು.
- Manjunath KB
- Updated on: Jul 20, 2026
- 7:00 pm