Sign In

By signing in or creating an account, you agree with Associated Broadcasting Company's Terms & Conditions and Privacy Policy.

HD Kumaraswamy

HD Kumaraswamy

ಹೆಚ್​ಡಿ ಕುಮಾರಸ್ವಾಮಿ

ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಅವರ ಪುತ್ರ. ಹೆಚ್​ಡಿ ಕುಮಾರಸ್ವಾಮಿ ಅವರು ಮೂಲತಃ ಚಲನಚಿತ್ರ ನಿರ್ಮಾಪಕರಾಗಿದ್ದವರು. ಹಲವು ವರ್ಷಗಳ ಕಾಲ ಕನ್ನಡ ಸಿನಿಮಾ ರಂಗದಲ್ಲಿ ನಿರ್ಮಾಪಕರಾಗಿ ಕಾರ್ಯನಿರ್ವಹಿಸಿದರು. ಇವರು ನಿರ್ಮಾಣದ ಹಲವು ಚಿತ್ರಗಳು ಸೂಪರ್​ ಹಿಟ್​ ಆಗಿವೆ. ನಂತರ ಹೆಚ್​ಡಿ ಕುಮಾರಸ್ವಾಮಿ ಅವರು ತಂದೆಯ ನೆರಳಿನಲ್ಲಿ ರಾಜಕಾರಣಕ್ಕೆ ಧುಮುಕಿದರು. ಹೆಚ್​ಡಿ ಕುಮಾರಸ್ವಾಮಿ 1996ರಲ್ಲಿ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸಿದರು. ಅದೇ ವರ್ಷ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಕನಕಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ 11ನೇ ಲೋಕಸಭೆಯ ಸದಸ್ಯರಾಗಿ ಚುನಾಯಿತರಾದರು.
ಬಳಿಕ ರಾಜ್ಯ ರಾಜಕಾರಣದತ್ತ ಮುಖ ಮಾಡಿದ ಕುಮಾರಸ್ವಾಮಿ ಅವರು 2006ರಲ್ಲಿ ಬಿಜೆಪಿ-ಜೆಡಿಎಸ್​ ಸಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ನಂತರ ಹಲವು ರಾಜಕೀಯ ಕಾರಣದಿಂದಾಗಿ ಹೆಚ್​ಡಿ ಕುಮಾರಸ್ವಾಮಿ 2007ರ ಅಕ್ಟೋಬರ್ 8 ರಂದು ಮುಖ್ಯಮಂತ್ರಿ ಸ್ಥಾನದಿಂದ ಕೆಳೆಗೆ ಇಳಿಯಬೇಕಾಯಿತು. ನಂತರ 2018ರಲ್ಲಿ ಕಾಂಗ್ರೆಸ್​ ಮತ್ತು ಜೆಡಿಎಸ್​ ಸಮಿಶ್ರ ಸರ್ಕಾರದಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಿದರು. ಮತ್ತೆ ರಾಜಕೀಯ ಕಾರಣದಿಂದ 2019ರಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದರು. ಇದೀಗ ಕೇಂದ್ರ ಎನ್​ಡಿಎ ಸರ್ಕಾರದಲ್ಲಿ ಉಕ್ಕು ಹಾಗೂ ಬೃಹತ್​ ಕೈಗಾರಿಕಾ ಸಚಿವರಾಗಿ ಕಾರ್ಯರ್ನಿವಹಿಸುತ್ತಿದ್ದಾರೆ

ಇನ್ನೂ ಹೆಚ್ಚು ಓದಿ

ಆಕಾಶಕ್ಕೆ ಉಗಿದ್ರೆ ಮುಖದ ಮೇಲೆಯೇ ಬೀಳುತ್ತೆ ಮಂಕೆ: ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ಯಾರಿಗೆ?

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಭೂ ಒತ್ತುವರಿಯ ಗಂಭೀರ ಆರೋಪ ಕೇಳಿ ಬಂದಿತ್ತು. ಈ ವಿಚಾರವಾಗಿ ಇತ್ತೀಚೆಗೆ ಮಾತನಾಡಿದ್ದ ಡಿಸಿಎಂ ಡಿಕೆ ಶಿವಕುಮಾರ್​, ಕುಮಾರಸ್ವಾಮಿ ಅವರ ಡಿಎನ್ಎಯಲ್ಲಿಯೇ ದ್ವೇಷದ ರಾಜಕೀಯವಿದೆ ಎಂದಿದ್ದರು. ಇದೀಗ ತಿರುಗೇಟು ನೀಡಿರುವ ಹೆಚ್​ಡಿ ಕುಮಾರಸ್ವಾಮಿ, ಆಕಾಶಕ್ಕೆ ಉಗಿದರೆ ಮುಖದ ಮೇಲೆಯೇ ಬೀಳುತ್ತೆ ಮಂಕೆ ಎಂದು ಟಾಂಗ್​ ಕೊಟ್ಟಿದ್ದಾರೆ.

ಕುಮಾರಸ್ವಾಮಿ ಎಷ್ಟೇ ಅಡ್ಡಿಪಡಿಸಿದರೂ ರಾಮನಗರದ ಹೆಸರು ಬದಲಾಯಿಸುವುದು ಮಾತ್ರ ನಿಶ್ಚಿತ: ಶಿವಕುಮಾರ್

ರಾಮನಗರ ಜಿಲ್ಲೆಯ ಕನಕಪುರ, ಮಾಗಡಿ, ಚನ್ನಪಟ್ಟಣ ಮೊದಲಾದ ಊರುಗಳಲ್ಲಿ ವಾಸವಾಗಿರುವ ಜನ ಉದ್ಧಾರವಾಗೋದು ಕುಮಾರಸ್ವಾಮಿಯವರಿಗೆ ಬೇಕಿಲ್ಲವೇ? ಅವರು ತಮ್ಮ ಜಿಲ್ಲೆಯನ್ನು ಬಿಟ್ಟು ರಾಮನಗರಕ್ಕೆ ಬಂದಿದ್ದು ಯಾಕೆ? ತನ್ನ ಜಿಲ್ಲೆ, ತನ್ನ ಕ್ಷೇತ್ರದ ಅಭ್ಯುದಯಕ್ಕಾಗಿ ಶ್ರಮಿಸುವ ಹೊಣೆಗಾರಿಕೆ ತನ್ನ ಮೇಲಿದೆ ಎಂದು ಶಿವಕುಮಾರ್ ಹೇಳಿದರು.

ಸರ್ಕಾರೀ ಜಮೀನು ಒತ್ತುವರಿ ಆಗಿದ್ದರೆ ತೆರವು ಮಾಡಿಸಲು ಕೋರ್ಟ್ ಆದೇಶ ಬೇಕಿಲ್ಲ: ಎ ಮಂಜು, ಶಾಸಕ

ಕುಮಾರಸ್ವಾಮಿಯವರು ಬಿಡದಿಯ ಕೇತಗಾನಹಳ್ಳಿಯಲ್ಲಿ ಜಮೀನನ್ನು ಒತ್ತುವರಿ ಮಾಡಿಕೊಂಡಿಲ್ಲ ಮತ್ತು ಅಕ್ರಮವಾಗಿ ವಶಪಡಿಸಿಕೊಂಡಿರುವ ಜಮೀನಲ್ಲಿ ಸಾಗುವಳಿ ಮಾಡುತ್ತಿಲ್ಲ ಅಂತಾದರೆ ಭಯ ಯಾಕೆ ಎಂದು ಡಿಕೆ ಶಿವಕುಮಾರ್ ಕೇಳಿರುವುದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಎ ಮಂಜು ಯಾರು ಭಯಪಟ್ಟಿದ್ದಾರೆ, ಏನಾದರೂ ತಪ್ಪು ಮಾಡಿದ್ದರೆ ತಾನೇ ಭಯಪಡೋದು ಎಂದು ಹೇಳಿದರು.

ಕೇತಗಾನಹಳ್ಳಿ ಭೂ ಒತ್ತುವರಿ ತೆರವು ಕಾರ್ಯಾಚರಣೆ: ಹೆಚ್​ಡಿ ಕುಮಾರಸ್ವಾಮಿ ಮುಂದಿನ ಪ್ಲಾನ್ ಹೀಗಿದೆಯಂತೆ!

ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಹಾಗೂ ಕುಟುಂಬಸ್ಥರು ರಾಮನಗರ ತಾಲೂಕಿನ ಕೇತಗಾನಹಳ್ಳಿಯಲ್ಲಿ ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಆರೋಪ ಸಂಬಂಧ ಇದೀಗ ಜಿಲ್ಲಾಡಳಿತ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದೆ. ಹೈಕೋರ್ಟ್ ಎಚ್ಚರಿಕೆಯ ನಂತರ ಈ ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಆದರೆ, ಈ ವಿಚಾರವಾಗಿ ಕುಮಾರಸ್ವಾಮಿ ಹೇಳುವುದೇನು? ಕಾನೂನಾತ್ಮಕವಾಗಿ ಮತ್ತು ರಾಜಕೀಯವಾಗಿ ಅವರ ಮುಂದಿನ ನಡೆ ಏನಿರಲಿದೆ? ವಿವರ ಇಲ್ಲಿದೆ.

ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ಬಂದಾಗ ಅತಿಹೆಚ್ಚು ಫಲಾನುಭವಿ ಕುಮಾರಸ್ವಾಮಿ ಆಗಲಿದ್ದಾರೆ: ಶಿವಕುಮಾರ್

ಕುಮಾರಸ್ವಾಮಿ ಅವರ ಬಿಡದಿ ಬಳಿಯ ಜಮೀನಲ್ಲಿ ಕೋರ್ಟ್ ಆದೇಶದ ಮೇರೆಗೆ ತೆರವು ಕಾರ್ಯಾಚರಣೆ ಬಗ್ಗೆ ಕೇಂದ್ರ ಸಚಿವ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಶಿವಕುಮಾರ್, ಅವರು ರಾಜಕೀಯದ ಹೇಳಿಕೆಗಳನ್ನು ನೀಡುತ್ತಿರುತ್ತಾರೆ, ಕುಮಾರಸ್ವಾಮಿ ನನ್ನನ್ನು ಬಯ್ಯದೆ ಮತ್ಯಾರನ್ನು ಬಯ್ಯುತ್ತಾರೆ, ಅವರ ಜಮೀನು ಪಕ್ಕದಲ್ಲಿ ನನ್ನ ಜಮೀನು ಇಟ್ಕೊಂಡು ಚೇಷ್ಟೆ ಮಾಡಲು ಸಾಧ್ಯವಾಗುತ್ತಾ ಎಂದು ಪ್ರಶ್ನಿಸಿದರು.

ಒತ್ತುವರಿ ಮಾಡಿಕೊಂಡಿರುವ ಜಾಗದಲ್ಲಿ ಕುಮಾರಸ್ವಾಮಿ ಬೆಳೆ ಮತ್ತು ಗಿಡಮರಗಳನ್ನು ಬೆಳೆದಿದ್ದಾರೆ, ಇಲ್ಲಿದೆ ವರದಿ

ಕಂದಾಯ ಮತ್ತು ಸರ್ವೇ ಇಲಾಖೆಯ ಅಧಿಕಾರಿಗಳು ಹಿಂದೆ ನಡೆದ ಸರ್ವೇಯ ಅನುಗುಣವಾಗಿ ಬೇರೆ ಬೇರೆ ಸರ್ವೆ ನಂಬರ್​ಗಳಲ್ಲಿ ಕುಮಾರಸ್ವಾಮಿ ಮತ್ತು ಇತರರಿಂದ ಆಗಿರುವ ಒತ್ತುವರಿ ಜಾಗವನ್ನು ಮಾರ್ಕ್ ಮಾಡುತ್ತಾರೆ ಮತ್ತು ನಂತರ ಆ ಜಾಗದಲ್ಲಿ ಬೆಳೆ, ಕಟ್ಟಡ ಅಥವಾ ಬೇರೇನೇ ಇದ್ದರೂ ತೆರವುಗೊಳಿಸಿ ಜಮೀನನ್ನು ಸರ್ಕಾರದ ವಶಕ್ಕೆ ಪಡೆಯುತ್ತಾರೆ.

ಜಮೀನು ಒತ್ತುವರಿ; ಕುಮಾರಸ್ವಾಮಿ ಮಟ್ಟಕ್ಕಿಳಿದು ರಾಜೀನಾಮೆ ಕೇಳಲ್ಲ, ಉತ್ತರ ನಿರೀಕ್ಷಿಸುತ್ತೇವೆ: ಚಲುವರಾಯಸ್ವಾಮಿ

ಕುಮಾರಸ್ವಾಮಿ ಜಮೀನು ಒತ್ತುವರಿ ಮಾಡಿಕೊಂಡಿದ್ದಾರೆಂದು ರಾಜ್ಯ ಸರ್ಕಾರವಾಗಲೀ, ಕಾಂಗ್ರೆಸ್ ನಾಯಕರಾಗಲೀ ದೂರಿದ್ದಲ್ಲ, ಯಾರೋ ಸಾರ್ವಜನಿಕ ಹಿತಾಸಕ್ತಿಯ ಪ್ರಕರಣ ದಾಖಲಿಸಿದ ಬಳಿಕ ಬೆಳಕಿಗೆ ಬಂದಿರುವ ಸಂಗತಿ ಇದು, ಕಾಂಗ್ರೆಸ್ ಯಾವತ್ತೂ ದ್ವೇಷದ ರಾಜಕಾರಣ ಮಾಡಲ್ಲ, ಅವರು ಜಮೀನು ಒತ್ತುವರಿ ಮಾಡಿಕೊಂಡಿದ್ದು ಪ್ರೂವ್ ಆಗಿದೆ, ರಾಜೀನಾಮೆ ನೀಡಬೇಕು ಅಂತ ಹೇಳಿದರೆ ದ್ವೇಷದ ರಾಜಕಾರಣ ಅನಿಸಿಕೊಳ್ಳುತ್ತದೆ ಎಂದು ಚಲುವರಾಯಸ್ವಾಮಿ ಹೇಳಿದರು.

ತೋಟದ ಮನೆ ಸುತ್ತ ಸರ್ಕಾರಿ ಭೂಮಿ ಒತ್ತುವರಿ ತೆರವು: ಕುಮಾರಸ್ವಾಮಿ ಮೊದಲ ಪ್ರತಿಕ್ರಿಯೆ ಹೀಗಿದೆ

ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಒಡೆತನದ ಬಿಡದಿ ಬಳಿಯ ಕೇತಗಾನಹಳ್ಳಿ ತೋಟದ ಮನೆ ಸುತ್ತ ಇಂದು ಜೆಸಿಬಿ ಸದ್ದು ಕೇಳಿ ಬಂದಿದೆ. ಭೂ ಒತ್ತುವರಿ ಆರೋಪದ ಹಿನ್ನೆಲೆಯಲ್ಲಿ ಹೈಕೋರ್ಟ್ ಆದೇಶದ ಮೇರೆಗೆ ಕಂದಾಯ ಇಲಾಖೆ ಅಧಿಕಾರಿಗಳು ಪೊಲೀಸ್ ಭದ್ರತೆಯಲ್ಲಿ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಇನ್ನು ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿರುವ ಕುಮಾರಸ್ವಾಮಿ, ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಎಚ್​ಡಿಕೆ ತೋಟದ ಮನೆ ಸುತ್ತ ಎಷ್ಟು ಎಕರೆ ಒತ್ತುವರಿ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಸಿ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್​​.ಡಿ.ಕುಮಾರಸ್ವಾಮಿ ವಿರುದ್ಧ ಈ ಹಿಂದೆ ರಾಮನಗರದ ಬಿಡದಿಯಲ್ಲಿ ಭೂ ಒತ್ತುವರಿ ಮಾಡಿಕೊಂಡ ಆರೋಪ ಕೇಳಿ ಬಂದಿತ್ತು. ಒತ್ತುವರಿ ತೆರವು ಮಾಡುವಂತೆ ಹೈಕೋರ್ಟ್​ನಿಂದ ಖಡಕ್ ಸೂಚನೆಯೂ ಕೂಡ ಬಂದಿತ್ತು. ಹೈಕೋರ್ಟ್ ಆದೇಶದ ಪ್ರಕಾರ ಕಂದಾಯ ಇಲಾಖೆ ಈಗ ಒತ್ತುವರಿ ಕಾರ್ಯಾಚರಣೆ ನಡೆಸಿದೆ. ಇನ್ನು ಎಷ್ಟು ಎಕರೆ ಒತ್ತುವರಿಯಾಗಿದೆ ಎನ್ನುವ ಬಗ್ಗೆ ರಾಮನಗರ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ಕುಮಾರಸ್ವಾಮಿ ಜಮೀನು ಒತ್ತುವರಿ ಪ್ರಕರಣ, ಕೋರ್ಟ್ ಆದೇಶವನ್ನು ಪಾಲಿಸುತ್ತಿದ್ದೇವೆ ಎಂದ ರಾಮನಗರ ಜಿಲ್ಲಾಧಿಕಾರಿ

ಕೇಂದ್ರ ಸಚಿವರೊಬ್ಬ ವಿರುದ್ಧ ಜಮೀನು ಒತ್ತುವರಿ ಕಾರ್ಯಾಚರಣೆ ನಡೆದ ನಿದರ್ಶನಗಳು ಬಹಳ ಅಪರೂಪ. ಕಂದಾಯ ಇಲಾಖೆ ನಡೆಸಿರುವ ಸರ್ವೇಗಳ ಪ್ರಕಾರ ಕೇತಗಾನಹಳ್ಳಿಯ ಸರ್ವೆ ನಂಬರ್ 7, 8, 9, 10, 16, 17 ಮತ್ತು 79ರಲ್ಲಿ ಒತ್ತುವರಿ ಮಾಡಿಕೊಳ್ಳುವ ಕೆಲಸ ನಡೆದಿದೆ ಮತ್ತು ವಿಷಯ ಗೊತ್ತಿದ್ದರೂ ರಾಜ್ಯ ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳದೆ ಸುಮ್ಮನಿದ್ದ ಕಾರಣ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ
ಕರ್ನಾಟಕ ಬಂದ್: ನಾಳೆ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಸಂಚಾರ ಇರುತ್ತಾ?
ಕರ್ನಾಟಕ ಬಂದ್: ನಾಳೆ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಸಂಚಾರ ಇರುತ್ತಾ?
ಸ್ಪೀಕರ್ ರಕ್ಷಣೆಗೆ ಮಾರ್ಷಲ್ ಮತ್ತು ಸಿಎಂ ರಕ್ಷಣೆಗೆ ಕಾಂಗ್ರೆಸ್ ಶಾಸಕರು!
ಸ್ಪೀಕರ್ ರಕ್ಷಣೆಗೆ ಮಾರ್ಷಲ್ ಮತ್ತು ಸಿಎಂ ರಕ್ಷಣೆಗೆ ಕಾಂಗ್ರೆಸ್ ಶಾಸಕರು!
ಹನಿಟ್ರ್ಯಾಪ್​ಗಾಗಿ ಎಷ್ಟು ಹಣ ಮೀಸಲಿಟ್ಟಿದ್ದೀರಿ? ಪ್ರಶ್ನಿಸಿದ ಬಿಜೆಪಿ ಶಾಸಕ
ಹನಿಟ್ರ್ಯಾಪ್​ಗಾಗಿ ಎಷ್ಟು ಹಣ ಮೀಸಲಿಟ್ಟಿದ್ದೀರಿ? ಪ್ರಶ್ನಿಸಿದ ಬಿಜೆಪಿ ಶಾಸಕ